ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ! ನೋಡ ನೋಡ ಎಷ್ಟು ಚೆಂದ ಉಂಟು ಸಿನಿಮಾ ಟೈಟಲ್ಲು!!

ಕೆಲ ಸಿನಿಮಾಗಳು ತಮ್ಮ ಶೀರ್ಷಿಕೆಯ ಮೂಲಕವೇ ಒಂದಷ್ಟು ಸುದ್ದಿಯಾಗುತ್ತವೆ. ಅಷ್ಟೇ ಯಾಕೆ ಕುತೂಹಲವನ್ನೂ ಹೆಚ್ಚಿಸುತ್ತವೆ. ಬಹುತೇಕ ಹೊಸಬರ ಸಿನಿಮಾಗಳೇ ಸದ್ದು ಮಾಡುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ‘ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಕೂಡ ಸೇರಿದೆ. ಹೌದು, ಇದು ಹೊಸಬರ ಸಿನಿಮಾ. ಸದ್ಯ ಟೈಟಲ್ಲು ಕ್ರೇಜ್ ಹೆಚ್ಚಿಸಿದೆ. ಆ ಸಿನಿಮಾ ಕುರಿತು ಒಂದಷ್ಟು ಮಾತುಕತೆ…

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಮಂಡ್ಯ, ಮಂಗಳೂರು, ಕುಂದಾಪುರ ಹೀಗೆ ಅದರ ಪಟ್ಟಿಗೆ ಈಗ ಹೊಸ ಜಾಗ ಸೇರ್ಪಡೆ ಆಗಿದೆ ಅದೇ ಉತ್ತರ ಕನ್ನಡ ಜಿಲ್ಲೆ, ಅದು “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರದ ಮೂಲಕ.

ಹೌದು, ಈ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರ ದಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಅಲ್ಲಿಯ ಸ್ಥಳೀಯ ಪ್ರತಿಭೆಗಳನ್ನೇ ಬಳಸಿಕೊಂಡಿರೋದು ವಿಶೇಷ.

ಈ ಚಿತ್ರದ ವಿಶೇಷತೆ ಚಿತ್ರಕ್ಕೆ ಬಳಸಿರುವ ಉತ್ತರಕನ್ನಡ ಭಾಷೆ ಹಾಗೂ ರಮಣೀಯ ಸ್ಥಳಗಳು ನೋಡುಗನ ಕಣ್ಮನ ಸೆಳೆದರೆ, ಚಿತ್ರಕಥೆಯ ಹೊಸತನ ಸ್ಪೆಷಲ್ ಆಗಿದೆ. ಇನ್ನು ಚಿತ್ರರಂಗದಲ್ಲಿ ಇಲ್ಲಿಯವರೆಗೆ ಕೇಳದ ಮತ್ತು ನೋಡದ ಹೊಸ ಕಥೆ ಇಲ್ಲಿದೆ ಎಂಬುದು ತಂಡದ ಮಾತು.

ಕಥೆ ಇದು…

ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನೆಯ ಹೋರಾಟ ಈ ಚಿತ್ರದ ಹೈಲೈಟ್,
ಜೊತೆಗೆ, ಮುದ್ದಾದ ಪ್ರೇಮಿಗಳ ಕಥೆ, ಒಬ್ಬ ಇನ್ಶೂರೆನ್ಸ್ ಮಾಡಿಸುವವ ಹಾಗೂ ಅವನ ವೈಯಕ್ತಿಕ ಜೀವನದ ಬಗ್ಗೆ, ಒಬ್ಬ ಜಮೀನ್ದಾರ ಅವನ ಮತ್ತು ಫೋಟೋಗ್ರಾಫರ್ ನಡುವಿನ ನಡೆಯೋ ಸಂಘರ್ಷ ನೋಡುಗರಿಗೆ ಹೊಸ ಅನುಭವ ನೀಡಲಿದೆ ಎಂಬುದು ತಂಡದ ಹೇಳಿಕೆ.

ನಿರ್ಮಾಪರಾಗಿ ವೆಂಕಟೇಶ್ವರ ರಾವ್, ಬಳ್ಳಾರಿ ರವರು ಮೊದಲಬಾರಿಗೆ ಸೃಜನ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮೊದಲ ಸಿನೆಮಾವಿದು.

ಕಿರುತೆರೆಯಲ್ಲಿ 6 ವರ್ಷಗಳ ಕಾಲ “ಅಗ್ನಿಸಾಕ್ಷಿ”ದಾರಾವಾಹಿಯಲ್ಲಿದ್ದ ನಟ ರಾಜೇಶ್ ಧ್ರುವ ನಿರ್ದೇಶಕರು. ಉಳಿದಂತೆ ರವಿ ಸಾಲಿಯಾನ್, ರಾಧಿಕಾ, ಅಚ್ಯುತ್ ರಾವ್, ಸಂಪತ್ ಜೆ ರಾಮ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಶುಭಲಕ್ಷ್ಮಿ, ಕನ್ಯಾಕುಮಾರಿ ಧಾರವಾಹಿ ಖ್ಯಾತಿಯ ನಕುಲ್ ಶರ್ಮ, ರಕ್ಷಿತ್, ರವಿ ಮೂರೂರು ಹಾಗೂ ವಿಶೇಷ ಪಾತ್ರದಲ್ಲಿ ಕಿರುತೆರೆ ನಟ ಶಿಶಿರ್ ಹಾಗೂ ಹಲವು ಹೊಸ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

ಕಥೆ – ಚಿತ್ರಕಥೆಯನ್ನು ಅಭಿಷೇಕ್ ಶಿರಸಿ, ಹಾಗೂ ಪೃಥ್ವಿಕಾಂತ ಬರೆದರೆ, ಸಂಭಾಷಣೆಯನ್ನು ಅಜಿತ್ ಬೊಪ್ಪನಳ್ಳಿ ಬರೆದಿದ್ದಾರೆ.

ಮನೋಜ್ ಸಿನಿ ಸ್ಟುಡಿಯೋ ಛಾಯಾಗ್ರಹಣ, ಗಣಪತಿ ಭಟ್ ಸಂಕಲನವಿದೆ. ,ಚಿತ್ರದ ಹಾಡುಗಳಿಗೆ
ಶ್ರೀರಾಮ್ ಗಂಧರ್ವ ರವರ ಸಂಗೀತ ಮತ್ತು ಪ್ರಮೋದ್ ಮರವಂತೆ ಅವರ ಸಾಹಿತ್ಯ ಇದೆ. ಸ್ವಸ್ತಿಕ್ ಕಾರೆಕಾಡ್ ಹಿನ್ನೆಲೆ ಸಂಗೀತವಿದೆ.

Related Posts

error: Content is protected !!