ಧೂಮಂ ಸಿನಿಮಾ ಸೆಟ್ ಗೆ ಕೆಜಿಎಫ್ ನಿರ್ಮಾಪಕ ಜೊತೆ ರಿಷಭ್ ಶೆಟ್ಟಿ ಭೇಟಿ


ಹೊಂಬಾಳೆ ಫಿಲಂಸ್​ನಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ನಿರ್ಮಾಪಕ ವಿಜಯ್ ಕುಮಾರ್​ ಕಿರಗಂದೂರು ಹಾಗು ಕಾಂತಾರ ನಿರ್ದೇಶಕ ರಿಷಭ್​ ಶೆಟ್ಟಿ, ನಾಯಕಿ ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್​ ಫಾಸಿಲ್​, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿದ್ಣದಾರೆ.


‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ.

Related Posts

error: Content is protected !!