ಹೊಂಬಾಳೆ ಫಿಲಂಸ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಹಾಗು ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿ, ನಾಯಕಿ ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್ ಫಾಸಿಲ್, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿದ್ಣದಾರೆ.
![](https://cinilahari.in/wp-content/uploads/2022/11/IMG_20221125_092429-1-1024x1017.jpg)
‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಫಹಾದ್ ಫಾಸಿಲ್ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್ ಕುಮಾರ್, ಜಾಯ್ ಮ್ಯಾಥ್ಯೂ, ದೇವ್ ಮೋಹನ್, ಅನು ಮೋಹನ್ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣವಿದೆ.