ಇದು ಹೊಸಬರ ವರ್ಣಚಿತ್ರ! ವಿಭಿನ್ನ ಕಥೆಯ ವರ್ಣಂ ಸಿನಿಮಾಗೆ ಚಾಲನೆ

ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ಹೊಸ ಚಿತ್ರಗಳು ಆರಂಭವಾಗುತ್ತಿವೆ. ಆ ಸಾಲಿಗೆ ಈಗ ಹೊಸಬರ ವರ್ಣಂ ಸಿನಿಮಾವೂ ಸೇರಿದೆ.

ವರ್ಣಂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇತ್ತೀಚೆಗೆ ಮುಹೂರ್ತ ಸಮಾರಂಭ ತುಮಕೂರಿನ ಶೆಟ್ಟಿಹಳ್ಳಿ ಶ್ತೀಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ, ಶುಭ ಕೋರಿದರು.

ಏಂಜಲ್ ಫಿಲಂಸ್ ಬ್ಯಾನರ್ ನಲ್ಲಿ ಆರ್. ಜಗದೀಶ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಅರುಣ್ ರಾಜ ನಿರ್ದೇಶಿಸುತ್ತಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರ ಇರುವ ಚಿತ್ರ. ಚೈತ್ರಾ ಅನಂತಾಡಿ ಕಥೆ ಬರೆದರೆ, ಮಂಜುನಾಥ್ಚಿ ಕೋಟಿಕೆರೆ ಚಿತ್ರಕಥೆ ಬರೆದಿದ್ದಾರೆ.


ಪ್ರದೀಪ್ ವಿ ಬಂಗಾರಪೇಟೆ ಛಾಯಾಗ್ರಹಣವಿದೆ. ಕೀರ್ತಿರಾಜ್ ಹಿನ್ನೆಲೆ ಸಂಗೀತ ಹಾಗೂ ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ‌. ಪವನ್ ಎನ್. ಈ ಚಿತ್ರದ ಸಹ ನಿರ್ಮಾಪಕರು.

ಮನು ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಮೇಘನ “ವರ್ಣಂ” ಚಿತ್ರದ ನಾಯಕಿ. ಎಂ.ಕೆ.ಮಠ, ರಿತಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಎರಡು ಭರ್ಜರಿ ಸಾಹಸ ಸನ್ನಿವೇಶಗಳು ಹಾಗೂ ಎರಡು ಹಾಡುಗಳು “ವರ್ಣಂ” ಚಿತ್ರದಲ್ಲಿದೆ. ಡಿಸೆಂಬರ್ 8 ರಿಂದ ತುಮಕೂರು, ಹೊನ್ನಾವರ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Related Posts

error: Content is protected !!