ಜನವರಿ 26ಕ್ಕೆ ಆರ್ ಸಿ ಬಿ ರೋಚಕ ಆಟ ಶುರು: ಇದು ತಬಲಾನಾಣಿಯ 125 ನೇ ಸಿನಿಮಾ…

ಸಹೋದರರಿಬ್ಬರ ನಡುವಿನ ಬಾಂಧವ್ಯದ ಕಥೆಯನ್ನು ಹಾಸ್ಯಮಯ ಸನ್ನಿವೇಶಗಳೊಂದಿಗೆ ಮೂಡಿ ಬಂದಿರುವ ಆರ್‌ಸಿ ಬ್ರದರ್ಸ್ ಸಿನಿಮಾ ಜನವರಿ 26ಕ್ಕೆ ರಿಲೀಸ್ ಆಗಲಿದೆ. ಸಿನಿಮಾದ ಹೈಲೆಟ್ ತಬಲಾನಾಣಿ ಹಾಗು ಕುರಿಪ್ರತಾಪ್. ಅವರಿಲ್ಲಿ ಬ್ರದರ್ಸ್ ಆಗಿ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಪ್ರಕಾಶ್‌ ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಸಂಭ್ರಮಶ್ರೀ, ನಯನ (ಕಾಮಿಡಿ ಕಿಲಾಡಿಗಳು) ಹಾಗೂ ನೀತುರಾಯ್ ಚಿತ್ರದ ನಾಯಕಿಯರು. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.
ಮಣಿ ಶಶಾಂಕ್ ಈ ಚಿತ್ರದ ನಿರ್ಮಾಪಕರಾಗಿದ್ದು, ಸಹನಾ ಗಿರೀಶ್ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.

ನಿರ್ದೇಶಕ ಪ್ರಕಾಶ್‌ಕುಮಾರ್ ಮಾತನಾಡಿ, ಜನವರಿ 26ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ, ಟ್ರೇಲರ್ ಗಿಂತ ಹೆಚ್ಚು ಕ್ವಾಲಿಟಿ ಚಿತ್ರದಲ್ಲಿದೆ. ಇಬ್ಬರು ಸಹೋದರರ ನಡುವೆ ನಡೆಯುವ ಹಾಸ್ಯಮಯ ಕಥೆಯಿದು. ತಬಲಾನಾಣಿ ಅವರು ಅದ್ಭುತ ಡೈಲಾಗ್‌ ಬರೆದಿದ್ದಾರೆ. ಸೋದರರ ನಡುವಿನ ಬಾಂಧವ್ಯ, ಕೆಲ ವಿಚಾರಕ್ಕೆ ಆಗುವ ಜಗಳ, ಮತ್ತೆ ಅದನ್ನು ನಿಭಾಯಿಸಿಕೊಂಡು ಅವರು ಹೇಗೆ ಜೊತೆಗಿರುತ್ತಾರೆ ಎಂಬುದನ್ನು ಹೇಳಿದ್ದೇವೆ. ಅಣ್ಣನಿಗೆ ಮದುವೆ ಆಗಿರಲ್ಲ, ತಮ್ಮನಿಗೆ ಮದುವೆ ಮಾಡಿಸುತ್ತಾರೆ. ನಂತರ ಅಣ್ಣ ಮದುವೆಯಾಗಬೇಕೆಂದು ಹೋದಾಗ ಏನೆಲ್ಲ ಪಶ್ಚಾತ್ತಾಪ ಪಡಬೇಕಾಗುತ್ತದೆ, ತನ್ನ ಫೀಲ್ ಹೇಳಿಕೊಳ್ಳಲು ಆತನಿಗೆ ಯಾರೂ ಇರಲ್ಲ. ಬೆಂಗಳೂರು ಸುತ್ತ ಮುತ್ತ 35 ದಿನ‌ಗಳ‌ ಕಾಲ ಚಿತ್ರೀಕರಿಸಿದ್ದೇವೆ ಎಂದರು.

ನಿರ್ಮಾಪಕ ಮಣಿ ಶಶಾಂಕ್ ಮಾತನಾಡಿ, ನಾನೊಬ್ಬ ಅಡ್ವೋಕೇಟ್. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಇಡೀ ಸಿನಿಮಾ ನಗಿಸುತ್ತಲೇ ಮೆಸೇಜ್ ಹೇಳುತ್ತದೆ. 50ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ಮತ್ತೊಬ್ಬ ನಿರ್ಮಾಪಕ ಗಿರೀಶ್ ಮಾತನಾಡಿ, ನನ್ನದು ಕ್ರೀಡಾಕ್ಷೇತ್ರ. ನಾನು ಒಲಿಂಪಿಕ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದೇನೆ. ಮಣಿ ಶಶಾಂಕ್ ನನ್ನ ಗೆಳೆಯ. ಹಾಗಾಗಿ ಅವರು ನಾನು ಸೇರಿ ಈ ಚಿತ್ರವನ್ನು ನನ್ನ ಪತ್ನಿ ಸಹನಾ ಹೆಸರಿನಲ್ಲಿ ನಿರ್ಮಿಸಿದ್ದೇನೆ. ಇದು ಕಂಪ್ಲೀಟ್ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಚಿತ್ರ. ತಬಲಾನಾಣಿ, ಕುರಿಪ್ರತಾಪ್ ಕಾಂಬಿನೇಶನ್ ಅದ್ಭುತವಾಗಿ ಬಂದಿದೆ ಎಂದರು.

ನಾಯಕ ತಬಲಾನಾಣಿ ಮಾತನಾಡಿ, ಅಣ್ಣ ತಮ್ಮಂದಿರ ಕಥೆ. ನನ್ನ ತಮ್ಮ ಪೋಲೀಸ್ ಆಗಿದ್ದರೆ, ನಾನು ಕೆಲಸವಿಲ್ಲದವನು, ಹೆಣ್ಣು ಕೊಡೋಕೆ ಬಂದವರು ಮಗಳ ಸೇಫ್ಟಿ ನೋಡುತ್ತಾರೆ. ನನಗೆ ಹೆಣ್ಣು ಕೊಡಲು ಬಂದವರು ತಮ್ಮನನ್ನು ಕೇಳುತ್ತಾರೆ. ಆತನಿಗೆ ಮದುವೆಯಾದರೂ ಅಣ್ಣನ ಮದುವೆಯಾಗೋವರೆಗೆ ಪ್ರಸ್ತ ಮಾಡಿಕೊಳ್ಳಲ್ಲ ಎಂದಾಗ ಆತನ ಹೆಂಡತಿ ನನ್ನಮೇಲೆ ಕೋಪಿಸಿಕೊಳ್ಳುವುದು, ಜಗಳ ವಿರಸಗಳು ನಡೆಯುತ್ತದೆ.
ಕೊನೆಯಲ್ಲಿ ಒಬ್ಬ ಮಹಿಳಾ ಪೋಲೀಸ್ ನನ್ನನ್ನು ಮದುವೆಯಾಗಲು ಒಪ್ಪಿ ಜೀವನ ಕೊಡುತ್ತಾಳೆ. ಆಮೇಲೆ ಏನಾಗುತ್ತೆ ಎಂಬುದನ್ನು ಸಿನಿಮಾದಲ್ಲಿ ನೋಡಿ ಎಂದ ಅವರು, ಈ ಸಿನಿಮಾ ನನ್ನ 125ನೇ ಚಿತ್ರ ಎಂದರು.

ನಾಯಕಿ ಸಂಭ್ರಮಶ್ರೀ ಮಾತನಾಡಿ, ಮೊದಲ ಸಲ ಪೋಲೀಸ್ ಪಾತ್ರ ಮಾಡಿದ್ದೇನೆ. ಕಂಪ್ಲೀಟ್ ಕಾಮಿಡಿ ಜೊತೆಗೆ ಎಮೋಷನ್ ಇರುವ ಚಿತ್ರವಿದು ಎಂದರು.
ಸಂಗೀತ ನಿರ್ದೇಶಕ ಪ್ರದೀಪ್‌ವರ್ಮ ಮಾತನಾಡಿ ಸಿನಿಮಾದಲ್ಲಿ ಎಲ್ಲಾ ರೀತಿಯ ಎಲಿಮೆಂಟ್ಸ್ ಇದೆ. ಒಂದು ಮೆಲೋಡಿ ಹಾಗೂ ಪ್ರೊಮೋಷನಲ್ ಸಾಂಗ್ ಇದೆ ಎಂದರು.

ಸಾಮಾಜಿಕ ಹೋರಾಟಗಾರ್ತಿ ರೇವತಿ ರಾಜ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು. ಕಿರಣ್‌ಕುಮಾರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.

Related Posts

error: Content is protected !!