ಹಿರಿಯ ನಿರ್ದೇಶಕ ಭಗವಾನ್ ನಿಧನ: ರಾಜಕುಮಾರ್ ಗೆ ಹೆಚ್ಚು ಚಿತ್ರ ನಿರ್ದೇಶಿಸಿದ್ದ ಹೆಗ್ಗಳಿಕೆ…

ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (95) ಅವರು ಸೋಮವಾರ ಮುಂಜಾನೆ 6.15ಕ್ಕೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ‌ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ.

ಇಬ್ಬರು ಗಂಡು ಮಕ್ಕಳು ಮತ್ತು ಒಂದು ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು ಬಳಗ ಹಾಗು ಅಭಿಮಾನಿಗಳನ್ನು ಬಿಟ್ಟು ಭಗವಾನ್ ಅಗಲಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ದೊರೈ – ಭಗವಾನ್‌ ಕನ್ನಡದ ಮಹತ್ವದ ಚಿತ್ರನಿರ್ದೇಶಕ ಜೋಡಿ. ದೊರೈ ಜೊತೆಗೂಡಿ ಭಗವಾನ್‌ ಅವರು ಎರಡು ತಮಿಳು ಚಿತ್ರಗಳು ಸೇರಿದಂತೆ 32 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ‘ಮಾಂಗಲ್ಯ ಬಂಧನ’ ಮತ್ತು ‘ಆಡುವ ಗೊಂಬೆ’ ಭಗವಾನ್‌ ಒಬ್ಬರೇ ನಿರ್ದೇಶಿಸಿದ ಸಿನಿಮಾಗಳು.

ಟೀವಿ ಧಾರಾವಾಹಿ ಹಾಗೂ ಸಾಕ್ಷ್ಯ ಚಿತ್ರಗಳ ನಿರ್ದೇಶನವನ್ನೂ ಮಾಡಿದ್ದಾರೆ. ‘ಮಂಗಳ ಸೂತ್ರ’ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದ ಭಗವಾನ್‌ ‘ಬೆಂಗಳೂರು ಮೈಲ್‌’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದರು.

Related Posts

error: Content is protected !!