ಮಾರ್ಚ್ 17 ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಜಗ್ಗೇಶ್ ಅವರು ರಾಷ್ಟ್ರದ ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು.
![](https://cinilahari.in/wp-content/uploads/2023/03/IMG_20230314_175426-1024x890.jpg)
ಜಗ್ಗೇಶ್ ಅವರಿಗೆ ದೇವರು ಆರೋಗ್ಯ, ಆಯಸ್ಸು ನೀಡಲಿ ಎಂದು ಪ್ರಧಾನ ಮಂತ್ರಿಗಳು ಮನತುಂಬಿ ಆಶೀರ್ವದಿಸಿದರು.
ಜಗ್ಗೇಶ್ ಅವರ ಜೊತೆಗೆ ಪತ್ನಿ ಪರಿಮಳಾ ಜಗ್ಗೇಶ್ ಹಾಗೂ ಪುತ್ರ ಯತಿರಾಜ್ ಕೂಡ ಇದ್ದರು.
![](https://cinilahari.in/wp-content/uploads/2023/03/IMG_20230314_175003-1024x882.jpg)
ಪರಿಮಳಾ ಜಗ್ಗೇಶ್ ಅವರು ಸಿರಿಧಾನ್ಯಗಳನ್ನು ಬಳಸಿ ಮಧುಮೇಹವನ್ನು ಹತೋಟಿಗೆ ತರುವುದರ ಕುರಿತು ವಿಶೇಷ ಅಧ್ಯಯನ ಮಾಡಿದ್ದಾರೆ. ಇದರ ಉಪಯೋಗವನ್ನು ಸಾಕಷ್ಟು ಜನರು ಪಡೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ತಿಳಿದ ಪ್ರಧಾನಿಗಳು ಬಹಳ ಖುಷಿಪಟ್ಟರು.
![](https://cinilahari.in/wp-content/uploads/2023/03/IMG_20230314_174925-1024x613.jpg)
ಮಧುಮೇಹಕ್ಕೆ ಸಂಬಂಧಿಸಿದ ಹಾಗೆ ಸರ್ಕಾರದಿಂದ ನಡೆಯುತ್ತಿರುವ ಕಾರ್ಯಗಳಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಳ್ಳಲು ಸೂಚಿಸಿದರು. ಅಲ್ಲಿಂದಲೇ ಕೇಂದ್ರ ಸಚಿವರಿಗೂ ಈ ವಿಷಯವನ್ನು ತಿಳಿಸಿದರು. ಜಗ್ಗೇಶ್ ಅವರ ಕಿರಿಯ
ಪುತ್ರ ಯತಿರಾಜ್ ಅವರಿಗೂ ಪ್ರಧಾನ ಮಂತ್ರಿಗಳು ವಿಶೇಷವಾಗಿ ಆಶೀರ್ವದಿಸಿದರು.
![](https://cinilahari.in/wp-content/uploads/2023/03/IMG_20230314_174915-1024x890.jpg)
ನನಗೆ ಮಾರ್ಚ್ 17ಕ್ಕೆ ಅರವತ್ತು ವರ್ಷ ತುಂಬುತ್ತಿದೆ. ಇಂತಹ ಸಂದರ್ಭದಲ್ಲಿ ರಾಷ್ಟ್ರನಾಯಕ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಅವರ ಆಶೀರ್ವಾದ ಪಡೆದುಕೊಂಡಿದ್ದು ತುಂಬಾ ಸಂತೋಷವಾಗಿದೆ. ಇದು ನನ್ನ ಬಾಳಿನಲ್ಲೇ ಮರೆಯಲಾಗದ ದಿನ ಎಂದು ಜಗ್ಗೇಶ್ ತಿಳಿಸಿದ್ದಾರೆ.