ಕ್ಲಾಂತ ಎಂಬ ಸಸ್ಪೆನ್ಸ್ ಥ್ರಿಲ್ಲರ್! ಸಂಗೀತ ಭಟ್ ಕಂಬ್ಯಾಕ್ ಸಿನಿಮಾ ಇದು

ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಕ್ಲಾಂತ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿತು.

ನಿರ್ದೇಶಕ ವೈಭವ್ ಪ್ರಶಾಂತ್ ಮಾತನಾಡಿ, ಇದು ನನ್ನ ನಾಲ್ಕನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ಚಿತ್ರವಾಗಿದ್ದು, ಅಪ್ಪ ಅಮ್ಮನಿಗೆ ಸುಳ್ಳು ಹೇಳಿ ತಪ್ಪು ದಾರಿ ಇಡಬೇಡಿ ಎಂಬ ಕಂಟೆಂಟ್ ಸುತ್ತ ಸಿನಿಮಾ ಮಾಡಲಾಗುತ್ತಿದೆ. ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದೆ ಎಂದು ತಿಳಿಸಿದರು.

ಸಂಗೀತ ಭಟ್, ನನಗೆ ಈ ಸಿನಿಮಾ ತುಂಬಾ ಸ್ಪೆಷಲ್. ತುಂಬಾ ವರ್ಷದಿಂದ ಸಿನಿಮಾದಿಂದ ದೂರ ಇದ್ದೆ. ನಾನು ಕಂಬ್ಯಾಕ್ ಮಾಡಿದಾಗ ಸೈನ್ ಮಾಡಿದ ಮೊದಲ ಚಿತ್ರವಿದು. ಟೀನೇಜ್ ಹುಡುಗಿ ದಾಟಿ ಈಗ ತಾನೇ ಕೆಲಸ ಮಾಡುವ ಪಾತ್ರ ನನ್ನದು. ಹೆಚ್ಚಾಗಿ ಕಾಡಿನಲ್ಲಿ ಶೂಟ್ ಮಾಡಲಾಗಿದ್ದು, ಒಂದೊಳ್ಳೆ ಅನುಭವ. ಇಲ್ಲಿ ನನ್ನ ಪಾತ್ರಕ್ಕೆ ಬೇಕಾದ ಫಿಟ್ನೆಸ್, ಎಕ್ಸ್ ಪ್ರೆಸ್ ಬದಲಾಯಿಸಿದ್ದೇನೆ. ಫೈಟ್ ಸೀಕ್ವೆನ್ಸ್ ಮಾಡಿದ್ದು, ಖುಷಿಕೊಟ್ಟಿದೆ ಎಂದರು.


ನಾಯಕ ವಿಘ್ನೇಶ್ ಮಾತನಾಡಿ
ತುಂಬಾ ಖುಷಿಯಾಗುತ್ತಿದೆ. ಕನ್ನಡದಲ್ಲಿ ಇದು ಮೊದಲ ಸಿನೆಮಾ . ತುಳುವಿನಲ್ಲಿ ಪ್ರಶಾಂತ್ ಸರ್ ಜೊತೆ ಸಿನಿಮಾ ಮಾಡಿದ್ದೇನೆ. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರಕ್ಕೂ ನಿಮ್ಮ ಬೆಂಬಲ ಇರಲಿ ಎಂದರು.

ಕ್ಲಾಂತ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಚಿತ್ರವಾಗಿದ್ದು, ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭ್ ರಾಜ್, ವೀಣಾ ಸಂಗೀತ , ಕಾಮಿಡಿ‌ ಕಿಲಾಡಿಯ ದೀಪಿಕಾ, ಪ್ರವೀಣ್ ಜೈನ್, ಯುವ ಹಾಗೂ ಸ್ವಪ್ನ, ತಿಮ್ಮಪ್ಪ ಕುಲಾಲ್ ನಟಿಸುತ್ತಿದ್ದಾರೆ. ಎಸ್ ಪಿ ಚಂದ್ರಕಾಂತ್ ಸಂಗೀತ, ಪಿಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಚಿತ್ರಕ್ಕಿದೆ.

ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದ್ದು, ವಿನೋದ್ ಸ್ಟಂಟ್, ಮಹೇಶ್ ದೇವ್ ಸಂಭಾಷಣೆ ಸಿನಿಮಾಕ್ಕಿದೆ. ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ . ಅನುಗ್ರಹ ಪವರ್ ಮೀಡಿಯಾ ಬ್ಯಾನರ್ ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಸಹ ನಿರ್ಮಾಪಕರಾಗಿ ಆಗಿ ಕೆಲಸ ನಿರ್ವಹಿಸಿದ್ದಾರೆ.

Related Posts

error: Content is protected !!