‘ಕರಿ ಹೈದ ಕೊರಗಜ್ಜ” ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.
![](https://cinilahari.in/wp-content/uploads/2023/05/IMG_20230506_155739-958x1024.jpg)
ಆದರೆ ಮತ್ತೊಂದು ಕುತೂಹಲದ ವಿಚಾರ ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ.
![](https://cinilahari.in/wp-content/uploads/2023/05/IMG_20230505_202922-1024x609.jpg)
ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗ ತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು.
![](https://cinilahari.in/wp-content/uploads/2023/05/IMG_20230506_160138.jpg)
ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ “ಗುಳಿಗ”ನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು.
![](https://cinilahari.in/wp-content/uploads/2023/05/IMG_20230506_155808-1024x626.jpg)
ದೈವದ ಮೇಲಿನ ಗೌರವ-ಭಕ್ತಿಯಿಂದ ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು ಸ್ಥಳಾಂತರ ಗೊಳಿಸಲಾಯಿತು.
![](https://cinilahari.in/wp-content/uploads/2023/05/IMG_20230506_155642.jpg)
ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.
![](https://cinilahari.in/wp-content/uploads/2023/05/IMG_20230505_202856-1024x629.jpg)
ಈ ಬಗ್ಗೆತಿಳಿದವರ ಜೊತೆ ಮಾತುಕತೆ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು , ಹಲವಾರು ವರ್ಷಗಳಿಂದ ಆ ಮನೆಯಲ್ಲಿ ಯಾರೂ ವಾಸವಿರದೆ,
![](https://cinilahari.in/wp-content/uploads/2023/05/IMG_20230506_160855.jpg)
ಪಾಳು ಬಿದ್ದ ಕಾರಣ ದೈವಕ್ಕೆ ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು.
ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾದರು.
![](https://cinilahari.in/wp-content/uploads/2023/05/IMG_20230506_155703.jpg)
ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಫಲ್ಯ ಮುಖ್ಕ ಆಕರ್ಷಣೆ.
![](https://cinilahari.in/wp-content/uploads/2023/05/IMG_20230506_160554.jpg)
ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು.
![](https://cinilahari.in/wp-content/uploads/2023/05/IMG_20230505_202842.jpg)
ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.
![](https://cinilahari.in/wp-content/uploads/2023/05/IMG_20230506_155721.jpg)
“ಕೊರಗಜ್ಜ”ನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.