ಮೈಸೂರು ಮಹಾರಾಜರು ಮೆಚ್ಚಿದ ಶಿವಾಜಿ ಸುರತ್ಕಲ್

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಮೈಸೂರು ಮಹಾರಾಜರಾದ ಶ್ರೀಯದುವೀರ ಒಡೆಯರ್ ಅವರು ವೀಕ್ಷೀಸಿ ಮೆಚ್ಚಿದ್ದಾರೆ. ನಾಯಕ ರಮೇಶ್ ಅರವಿಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ಶಿವಾಜಿ ಸುರತ್ಕಲ್ 2 ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ ಎಂದು ಮಹಾರಾಜರು ಮನತುಂಬಿ ಹಾರೈಸಿದರು.

ಈಗಾಗಲೇ ಜನಮನಸೂರೆಗೊಂಡಿರುವ ಈಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿ 41 ದಿನಗಳನ್ನು ಪೂರೈಸಿ, 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

Related Posts

error: Content is protected !!