ಇದು ಆರಂಭದ ಟ್ರೇಲರ್! ಅತ್ಯಾಚಾರ- ಕೊಲೆ ಸುತ್ತ ಹೋರಾಟದ ಚಿತ್ರ

ಇದೇ ಮೊದಲ ಸಲ ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಕಾಣಿಸಿಕೊಂಡಿರುವ ಮಂಜುನಾಥ್ ಬಡಿಗೇರ್ ಚಿತ್ರವಿದು. ಶ್ರೀ ಕಾಳಿಕಾ ದೇವಿ ಪ್ರೊಡಕ್ಷನ್ಸ ಬ್ಯಾನರ್ ಅಡಿಯಲ್ಲಿ ಸಾಂಭಯ್ಯ ಆಚಾರ್ಯ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ತಮ್ಮ ಸಿನಿಮಾ ಕುರಿತು ನಿರ್ತದೇಶಕರು ಹೇಳುವುದಿಷ್ಟು. ಕೆಲವು ಸಿನಿಮಾಗಳಲ್ಲಿ ನಿರ್ದೇಶನ ಹಾಗು ಛಾಯಾಗ್ರಾಹಣ ವಿಭಾಗದಲ್ಲಿ ಕೆಲಸ ಮಾಡಿ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ, ಪಕ್ಷಿಗಳ ರಕ್ಷಣೆಗಾಗಿ ಹೋರಾಡುತಿದ್ದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಕೊಲೆಯಾಗುತ್ತದೆ. ಆ ಕೊಲೆಯ ಪ್ರತಿಕಾರಕ್ಕೆ ಇಬ್ಬರು ಯುವಕರು ಮುಂದಾಗುತ್ತಾರೆ. ಅವರ ಹೋರಾಟಕ್ಕೆ ಜಯ ಸಿಗುತ್ತಾ ಎಂಬುದರ ಸುತ್ತ ಚಿತ್ರದ ಕಥೆ ಸಾಗುತ್ತದೆ.

ಈ ಚಿತ್ರದಲ್ಲಿ ನಾಯಕಿಯಾಗಿ ನಿಶ್ಚಿತಾ ಶೆಟ್ಟಿ ನಟಿಸಿದ್ದು, ಅವರಿಗೆ ಜಗನ್ನಾಥ ದಾಸರು ಬಳಿಕ ನಟಿಸುತ್ತಿರುವ ಎರಡನೇ ಚಿತ್ರವಿದು. ಎರಡನೇ ನಾಯಕನಾಗಿ ಪೃಥ್ವಿರಾಜ್ ಅಭಿನಯಿಸಿದ್ದಾರೆ ಎಂಬುದು ನಿರ್ದೇಶಕರ ಮಾತು.

ಇನ್ನು ಇಲ್ಲಿ ಗಣೇಶ್ ರಾವ್ ಮಾತನಾಡಿ, ಇದುವರೆಗೆ 310 ಸಿನಿಮಾಗಳಲ್ಲಿ ನಟಿಸಿದ್ದೇನೆ ಅವುಗಳಲ್ಲಿ 150ಕ್ಕೂ ಅಧಿಕ ಚಿತ್ರಗಳಲ್ಲಿ ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದೇನೆ, ಈ ಚಿತ್ರದಲ್ಲಿ ಮೊದಲು ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದು, ನಂತರ ನಾಯಕರಿಗೆ ಸಹಾಯ ಮಾಡುವ ಪಾತ್ರ ನನ್ನದು ಎಂದರು.

ಕುಮಾರ್ ಬೋರಕನವರ್, ರಜತಾದ್ರಿ ಪ್ರಶಾಂತಂ, ಪ್ರಿಯಾಂಕಾ, ಕಾಳಚಾರಿ, ಪ್ರಭು ಹಿರೇಮಠ್ ಪ್ರಮುಖ ತಾರಾಗಣದಲ್ಲಿದ್ದಾರೆ.

ಈ ಚಿತ್ರದಲ್ಲಿ ಛಾಯಾಗ್ರಾಹಣ ಮುಂಜಾನೆ ಮಂಜು ಮಾಡಿದರೆ, ಅಲೆಕ್ಸ್ ಸಂಗೀತ ನೀಡಿದ್ದಾರೆ. ಸಂಕಲನ ಆಚಾರ್ಯ ಗುರು ಮಾಡಿದ್ದು ಚಿತ್ರವನ್ನು ಜುಲೈ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ಮಾಡಿಕೊಳ್ಳುತ್ತಿದೆ.

Related Posts

error: Content is protected !!