ಜೂನ್ 23ಕ್ಕೆ ಮೊದಲ ಮಳೆ!

ಯಾವುದೇ ಹುಡುಗಿಯೂ ಇಷ್ಟಪಡದಂಥ (ವಿ)ರೂಪವಂತ ಹುಡುಗನೊಬ್ಬ ಮದುವೆಯಾಗಲು ಹೊರಟಾಗ ಏನೇನಾಯಿತು ಎಂಬುದನ್ನು ಹಾಸ್ಯಮಯ ವಾಗಿ ಹೇಳುವಂಥ ಕಥಾಹಂದರ ಹೊಂದಿರುವ ಚಿತ್ರ ಮೊದಲಮಳೆ ಜೂನ್ 23ರಂದು ಬಿಡುಗಡೆಯಾಗಲಿದೆ. ಮರ್ಡರ್ ಮಿಸ್ಟ್ರಿ, ಕಾಮಿಡಿ, ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಾಜಾನರಸಿಂಹ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಚಿತ್ರಕ್ಕೆ ಬಂಡವಾಳವನ್ನೂ ಹಾಕಿದ್ದಾರೆ.

ಮಮತಾಗೌಡ, ಸಾಹಿತ್ಯ, ಉಷಾ, ಪ್ರಿಯಾಶೆಟ್ಟಿ, ಸೇರಿದಂತೆ ಒಂಭತ್ತು ಜನ ನಾಯಕಿಯರಾಗಿ ಅಭಿನಸಿರುವ ಈ ಚಿತ್ರಕ್ಕೆ ರಾಜಶರಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಸನ್ನ ಭೋಜಶೆಟ್ಟರ್ ಅವರ ಸಂಗೀತ ಸಂಯೋಜನೆ, ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಚಿತ್ರದ ಕುರಿತಂತೆ ಮಾತನಾಡಿದ ನಾಯಕ ರಾಜಾನರಸಿಂಹ ನಾನು ರೈತನ ಮಗ, ಕಲಾವಿದನಾಗಬೇಕು ಎನ್ನುವುದು ನನ್ನ ಬಹುದಿನಗಳ ಕನಸು. ಈ ಚಿತ್ರವನ್ನು ನಾನೇ ನಿರ್ಮಾಣ ಮಾಡಿದ್ದು, ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ.

ಜೀವನದಲ್ಲಿ ಏನಾದರೂ ಸಾಧನೆ ಮಾಡಲೆಂದು ಹಳ್ಳಿಯಿಂದ ಸಿಟಿಗೆ ಬಂದ ನಾಯಕ ಜವರಾಯ ಕೊನೆಗೆ ಏನಾಗುತ್ತಾನೆ ಎನ್ನುವುದೇ ಈ ಚಿತ್ರದ ಕಥೆ ಎಂದು ಹೇಳಿದರು. ನಿರ್ದೇಶಕ ರಾಜಶರಣ್ ಈ ಹಿಂದೆ ಎಮ್ಮೆತಮ್ಮ ಎಂಬ ಚಿತ್ರ ನಿರ್ದೇಶಿಸಿದ್ದರು. ರಾಜಾನರಸಿಂಹ ಅವರ ಸ್ನೇಹಿತರು, ಆತನಿಗಾಗಿಯೇ ಒಂದು ಕಥೆ ಮಾಡಿದೆ, ಆ ಚಿತ್ರ ಆಗಲಿಲ್ಲ, ಇವರುಗೇನು ೧೦ ಜನ ಹೀರೋಯಿನ್ ಇಟ್ಕೊಂಡು ಸಿನ್ಮಾ ಮಾಡಕ್ಕಾಗುತ್ತಾ ಎನ್ನುವ ಮಾತು ಬಂತು. ಯಾಕಾಗಲ್ಲ ಅಂತ ಚಾಲೆಂಜ್ ತಗೊಂಡು ಈ ಚಿತ್ರ ಮಾಡಿದ್ದೇನೆ, ವ್ಯಕ್ತಿಯ ಜೀವನದಲ್ಲಿ ಮದುವೆ ಎನ್ನುವುದು ಮೊದಲಮಳೆ ಇದ್ದಹಾಗೆ, ನಾಯಕನ ಲೈಫ್ ನಲ್ಲೂ ಮೊದಲಮಳೆ ಆಗುತ್ತಾ ಇಲ್ವಾ ಅನ್ನೋದೇ ಈ ಚಿತ್ರ.

ಮಡಿಕೇರಿ, ಸಕಲೇಶಪುರ, ಮೈಸೂರು, ಬೆಂಗಳೂರು ಸುತ್ತಮುತ್ತ ೪೦ ದಿನ ಚಿತ್ರೀಕರಣ ನಡೆಸಿದ್ದೇವೆ. ಹಾರರ್ ಕಂಟೆಂಟ್ ಇರುವ ಕಾರಣ ಚಿತ್ರಕ್ಕೆ ಯು/ಎ ಸಿಕ್ಕಿದೆ ಎಂದರು. ಗಣೇಶರಾವ್, ಜೋತಿ ಮರೂರು ಉಳಿದ ಪಾತ್ರಗಳಲ್ಲಿದ್ದಾರೆ.

Related Posts

error: Content is protected !!