ಭಜರಂಗಿ 2 ಖ್ಯಾತಿಯ ಚೆಲುವರಾಜು ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾವಿಜಯ್ ಅಭಿನಯಿಸಿರುವ “ಮನಸು ಜಾರಿದೆ” ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ.
![](https://cinilahari.in/wp-content/uploads/2023/07/IMG_20230703_111823-1.jpg)
ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
![](https://cinilahari.in/wp-content/uploads/2023/07/IMG_20230703_111823.jpg)
ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್.
ವಿದ್ಯಾವಿಜಯ್ ಅವರು ಸಹ “ಮನಸು ಜಾರಿದೆ” ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
![](https://cinilahari.in/wp-content/uploads/2023/07/IMG_20230703_111807.jpg)
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ ದೇಸಿಶೈಲಿಯ “ದೇಸಿ ನಡಿಗೆ” ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು.