ಕೋರ್ಟ್ ಮೊರೆ ಹೋಗುವ ಕುರಿತು ಚಿತ್ರರಂಗ ಸಂಸ್ಥೆಗಳಿಗೆ ಕಿಚ್ಚ ಸುದೀಪ್ ಬರೆದ ಪತ್ರ ವಿವರಣೆ

ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ಕಿಚ್ಚ ಸುದೀಪ್ ಅವರು ಗೌರವ ಪೂರ್ವಕವಾಗಿ ತಾವು ನ್ಯಾಯಾಲಯಕ್ಕೆ ಹೋಗುತ್ತಿರುವುದರ ಬಗ್ಗೆ ಒಂದು ಆಪ್ತ ವಿವರಣೆ ಸಲ್ಲಿಸಿದ್ದಾರೆ. ಅದರ ಸಂಕ್ಷಿಪ್ತ ವಿವರ ಇಲ್ಲಿದೆ.

ಸುದೀಪ್ ಇತ್ತೀಚೆಗೆ ಚಿತ್ರರಂಗದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು.

ನಿರ್ಮಾಪಕ ಎನ್.ಕುಮಾರ್ ಅವರು ಸುದೀಪ್ ಅವರಿಗೆ ಮುಂಗಡ ಹಣ ಕೊಟ್ಟರೂ ಅವರು ಡೇಟ್ ಕೊಟ್ಟಿಲ್ಲ ಅಂತ ಸಾರ್ವಜನಿಕವಾಗಿ ಆರೋಪಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ, ಸುದೀಪ್ ಮಾತ್ರ ಕುಮಾರ್ ಅವರು ಮಾಡಿದ ಆರೋಪಕ್ಕೆ ಉತ್ತರ ನೀಡಿರಲಿಲ್ಲ. ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ.

ಎಲ್ಲೆಡೆಯಿಂದಲೂ ಒಂದಷ್ಟು ಜೋರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸುದೀಪ್ ಅವರ ಆಪ್ತರಾದ ಜಾಕ್ ಮಂಜು ಮತ್ತು ಚಕ್ರವರ್ತಿ ಚಂದ್ರಚೂಡ್ ಅವರು ಪ್ರೆಸ್ ಮೀಟ್ ಮಾಡಿ, ಕುಮಾರ್ ಮಾಡಿದ ಆರೋಪ ಸುಳ್ಳು, ಸುದೀಪ್ ಏನೆಲ್ಲಾ ಒಳಿತು ಮಾಡಿದ್ದಾರೆ ಎಂಬ ಕುರಿತು ಮಾಹಿತಿ ನೀಡಿದ್ದರು.

ಇದರ ಬೆನ್ನಲ್ಲೇ ಈಗ ಸುದೀಪ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ಕಲಾವಿದರ ಸಂಘಗಳಿಗೆ ಸುಧೀರ್ಘ ಪತ್ರ ಬರೆದು, ನಾನು ಕೋರ್ಟ್ ಮೊರೆ ಹೋಗುತ್ತಿರುವುದಾಗಿ ವಿವರಿಸಿದ್ದಾರೆ.

Related Posts

error: Content is protected !!