ಜುಲೈ 24 ಹಾಸ್ಯ ಚಕ್ರವರ್ತಿ ಹುಟ್ದಬ್ಬ: ವರ್ಷವಿಡೀ ನರಸಿಂಹರಾಜು ಜನ್ಮ ಶತಮಾನೋತ್ಸವ

ಜುಲೈ 24, ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಈ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ.


. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ). ಆಯೋಜಿಸಲಾಗುವುದು.

ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ತಿಳಿಸುತ್ತಿದ್ದಾರೆ

Related Posts

error: Content is protected !!