ತೋತಾಪುರಿ 2 ಆಗಸ್ಟ್ 11ಕ್ಕೆ ರಿಲೀಸ್: ಜೈಲರ್ ಜೊತೆ ಜಗ್ಗೇಶ್ ಚಿತ್ರ


ಸೂಪರ್‌ಸ್ಟಾಾರ್ ರಜನಿಕಾಂತ್ ನಟನೆಯ ಬಹು ನಿರೀಕ್ಷಿತ ‘ಜೈಲರ್’ ಚಿತ್ರ ಆಗಸ್ಟ್‌ 10 ರಂದು ತೆರೆ ಕಾಣುತ್ತಿದೆ. ಈ ಕಾರಣದಿಂದಲೇ ಆಗಸ್ಟ್‌ 11ರಂದು ಯಾವುದೇ ಕನ್ನಡ ಸಿನಿಮಾಗಳು ಬಿಡುಗಡೆಯ ಅನೌನ್ಸ್ ಮಾಡಿರಲಿಲ್ಲ. ಆದರೆ, ಈಗ ಕನ್ನಡ ಚಿತ್ರವೊಂದು ಜೈಲರ್ ಮುಂದೆ ಬರಲು ರೆಡಿಯಾಗಿದೆ. ಅದು ‘ತೋತಾಪುರಿ-2’ ಚಿತ್ರ. ಹೌದು ಜಗ್ಗೇಶ್-ಧನಂಜಯ್ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಈ ಚಿತ್ರ ಆಗಸ್ಟ್‌‌ನಲ್ಲಿ ತೆರೆಕಾಣುವುದಾಗಿ ಹೇಳಿಕೊಂಡಿತ್ತು. ಆದರೆ, ಈಗ ಆಗಸ್ಟ್‌ 11ರಂದು ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆೆ ಮಾತನಾಡುವ ನಿರ್ಮಾಪಕ ಸುರೇಶ್, ‘ನಾವು ಆಗಸ್ಟ್‌ ಎರಡನೇ ವಾರ ಬರಲು ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎನ್ನುತ್ತಾರೆ.


‘ತೋತಾಪುರಿ-2’ನಲ್ಲಿ ಜಗ್ಗೇಶ್ ಜೊತೆಗೆ ಧನಂಜಯ್ ಅವರಿಗೂ ಪ್ರಮುಖ ಪಾತ್ರವಿದೆ. ಇಲ್ಲಿ ಸುಮನ್ ರಂಗನಾಥ್ ಕೂಡಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾಾರೆ.
ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್ ಹಾಡು ಸೂಪರ್ ಹಿಟ್ ಆಗಿತ್ತು. ರೊಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್‌ ದಾಖಲಾಗಿತ್ತು. ಇದೀಗ ‘ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆೆಡೆ ಸದ್ದು ಮಾಡುತ್ತಿಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿಿರೋದು ವಿಶೇಷ.


ಹೃದಯಶಿವ ಸಾಹಿತ್ಯ ರಚಿಸಿರುವ ‘ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡು ಮಾಡುತ್ತಿದೆ. ಡಾಲಿ ಧನಂಜಯ್ ಹಾಗೂ ಸುಮನ್ ರಂಗನಾಥ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಸಂಜಿತ್ ಹೆಗ್ಡೆೆ ಕಂಠಸಿರಿಯಲ್ಲಿ ‘ಮಳೆ ಹಾಡು ಮೂಡಿಬಂದಿದೆ.ಈ ಮೆಲೋಡಿ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Related Posts

error: Content is protected !!