ಡಿ ಜೆ ಸೌಂಡು ಶುರು ಗುರು! ಮತ್ತೆ ಬಂದ ಚಕ್ರವರ್ತಿ ಚಂದ್ರಚೂಡ: ನಿರ್ದೇಶನದ ಸಿನಿಮಾಗೆ ಮಿಲಿಂದ್ ಗೌತಮ್ ಹೀರೋ

ಪತ್ರಕರ್ತ, ಉತ್ತಮ ಮಾತುಗಾರ, ನಟ ಮತ್ತು ನಿರ್ದೇಶಕ ಬಿಗ್ ಬಾಸ್ ಖ್ಯಾತಿಯ ಡಿ.ಜೆ. ಚಕ್ರವರ್ತಿ ಚಂದ್ರಚೂಡ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಪತ್ರಕರ್ತರಾಗಿ ಗುರುತಿಸಿಕೊಂಡು, ಸಾಹಿತ್ಯ ಲೋಕದಲ್ಲೂ ಮಿಂದೆದ್ದು, ಬಣ್ಣದ ಲೋಕವನ್ನೂ ಸ್ಪರ್ಶಿಸಿ ಸದ್ದು ಮಾಡಿದವರು. ಈಗ ಮತ್ತೊಂದು ಹೊಸ ಇನ್ನಿಂಗ್ಸ್ ಶುರುವಿಗೆ ಸಜ್ಜಾಗುತ್ತಿದ್ದಾರೆ.

ಹೌದು, ಚಕ್ರವರ್ತಿ ಚಂದ್ರಚೂಡ್ ನಿರ್ದೇಶನಕ್ಕಿಳಿಯುತ್ತಿದ್ದಾರೆ. ನಿರ್ದೇಶನ ಅವರಿಗೆ ಹೊಸದಲ್ಲ. ಈ ಬಾರಿ ಹೊಸತನದ ಕಥೆಯೊಂದಿಗೆ ಎಂಟ್ರಿಕೊಡುತ್ತಿದ್ದಾರೆ. ಮಯೂರ ಮೋಷನ್ ಪಿಕ್ಚರ್ಸ್‌ ನಿರ್ಮಾಣದ ನೂತನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ .ಜೆ.ಚಕ್ರವರ್ತಿ ಸಿನಿಮಾಗೆ ಮಂಜುನಾಥ್ ಡಿ ನಿರ್ಮಾಪಕರು. ಅವರು ಅನ್ ಲಾಕ್ ರಾಘವ ನಂತರ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ.

ಇನ್ನು ಮಿಲಿಂದ್ ಗೌತಮ್ ನಾಯಕ. ಡಿ.ಜೆ. ಚಕ್ರವರ್ತಿ ಚಂದ್ರಚೂಡ್ ಏಳು ವರ್ಷಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

“ಅನ್ ಲಾಕ್ ರಾಘವ” ನಂತರ ಮಿಲಿಂದ್ ಗೌತಮ್ ಅವರು ಸತತ ಮೂರು ತಿಂಗಳುಗಳಿಂದ ಈ ಹೊಸ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

ಈಗಾಗಲೇ ಕದ್ರಿ ಮಣಿಕಾಂತ್ ಹಾಡುಗಳು ಸಂಯೋಜನೆಯಲ್ಲಿದು, ಚಿತ್ರೀಕರಣಕ್ಕೆ ಪೂರ್ವ ತಯಾರಿ ಭರದಿಂದ ಸಾಗಿದೆ.

ಆಗಸ್ಟ್ 18ರಂದು ಟೀಸರ್ ಚಿತ್ರೀಕರಣ ನಡೆಯಲಿದ್ದು, ಸೆಪ್ಟೆಂಬರ್ 2 , ಅಭಿನಯ ಚಕ್ರವರ್ತಿ ಸುದೀಪ್ ರವರ ಹುಟ್ಟಿದ ದಿನದಂದು ಟೀಸರ್ ಬಿಡುಗಡೆ ಮಾಡಲಿದ್ದಾರೆ.

ನಿರ್ದೇಶಕರ ಹುಟ್ಟುಹಬ್ಬದಂದು(ಆಗಸ್ಟ್ 15) ಟೀಮ್ ಅನೌನ್ಸ್ ಆಗಲಿದೆ. ಈ ಪೋಸ್ಟರ್ ನಲ್ಲಿರುವ ಸ್ಕ್ಯಾನ್ ಮಾಡಿ ಮ್ಯಾಜಿಕ್ ನೋಡಿ! ನಿಮಗೊಂದು ಅಪರೂಪದ ವಿಷಯ ಸಿಗಲಿದೆ.

Related Posts

error: Content is protected !!