ರಾಜ್ ಮೊಮ್ಮಗ ಷಣ್ಮುಖನ ಸಿನಿ ಜರ್ನಿ ಶುರು: ಚಿನ್ನದ ಮಲ್ಲಿಗೆ ಹೂವೇ ಸಿನಿಮಾಗೆ ಆರ್ನಾ ಸಾಧ್ಯ ನಿರ್ಮಾಪಕಿ

ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ.
ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಬರೆದುಕೊಟ್ಟರೆ, ನಟ ಡಾ.ರಾಘವೇಂದ್ರ ರಾಜಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ ನವೀನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ.
ಡಾ. ರಾಜಕುಮಾರ್ ಮೊಮ್ಮಗ (ಲಕ್ಷ್ಮೀ ಹಾಗೂ ಗೋವಿಂದರಾಜ್ ಅವರ ಪುತ್ರ) ಷಣ್ಮುಖ ಗೋವಿಂದರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

ನಾಗೇಂದ್ರ ಪ್ರಸಾದ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ಪಾತ್ರಗಳ ಆಡಿಷನ್ ನಡೆಯುತ್ತಿದೆ. ಪ್ರಣವ್ ಸತೀಶ್ “ಚಿನ್ನದ ಮಲ್ಲಿಗೆ ಹೂವೇ”ಗೆ ಸಂಗೀತ ನೀಡುತ್ತಿದ್ದು, ಮಧು ತುಂಬಕೆರೆ ಅವರ ಸಂಕಲನವಿರಲಿದೆ.

Related Posts

error: Content is protected !!