ಕಿರುತೆರೆಯಿಂದ ಸಿನಿಮಾ ಅಂಗಳಕ್ಕೆ ಬಂದ ರಾಧಾ ಭಗವತಿ

ಜನಪ್ರಿಯ “ರಾಮಾಚಾರಿ” ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು, ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಚಿತ್ರದ ಹೆಸರೇ ನನಗೆ ಆಪ್ತವೆನಿಸಿತು. ಇನ್ನು ಕಥೆ ಕೇಳಿದಾಗಲಂತೂ ಮೂರ್ನಾಲ್ಕು ದಿನಗಳ ಕಾಲ ಆ ಗುಂಗಿನಲ್ಲೇ ಇದ್ದೆ. ಖಂಡಿತ ಚಿತ್ರ ನೋಡಿದವರಿಗೆಲ್ಲ ತಮ್ಮ ಕಾಲೇಜು ದಿನಗಳ ನೆನಪು ಮರುಕಳಿಸದೇ ಇರದು.

ನಟನೆಗೆ ಹೆಚ್ಚು ಅವಕಾಶ ಇರುವಂತ ಪಾತ್ರ ಸಿಕ್ಕಿದ್ದಕ್ಕೆ ಖುಷಿಯಿದೆ. ಸಿನಿಪ್ರಿಯರ ಪ್ರತಿಕ್ರಿಯೆಗೆ ಕಾತರದಿಂದ ಎದುರು ನೋಡುತ್ತಿದ್ದೇನೆ’ ಎನ್ನುತ್ತಾರೆ ರಾಧಾ ಭಗವತಿ .

Related Posts

error: Content is protected !!