ಕಾವೇರಿ ಹೋರಾಟಕ್ಕೆ ನಮ್ಮ ಬೆಂಬಲ: ಫಿಲ್ಮ್ ಚೇಂಬರ್, ಚಿತ್ರರಂಗ ಸದಾ ರೈತರ ಪರ; ನೂತನ ಅಧ್ಯಕ್ಷ ಎನ್.ಎಂ.ಸುರೇಶ್

ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಗೆದ್ದು ಆಯ್ಕೆಯಾದ ಎನ್.ಎಂ.ಸುರೇಶ್ ಅವರು, ಇದು ಚರಿತ್ರೆಯಲ್ಲಿ ಬರೆಯೋ ಚುನಾವಣೆ ಎಂದಿದ್ದಾರೆ. ನನ್ನ ಗೆಲುವಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಈ ಗೆಲುವು ಬಳಿಕ ಮಾತನಾಡಿ, ಕಾವೇರಿ ವಿಚಾರದಲ್ಲಿ ಸದಾ ಚಿತ್ರರಂಗ ಹಾಗು ವಾಣಿಜ್ಯ ಮಂಡಳಿ ರೈತರ ಪರ ಇರಲಿದೆ ಎಂದಿದ್ದಾರೆ.

ನಾನು ನಾಲ್ಕು ಅಭ್ಯರ್ಥಿಗಳ ಮಧ್ಯೆ ಹೆಚ್ಚು ಮತ ಪಡೆಯೋಕೆ ಕಾರಣ ನನ್ನ ಗುರುಗಳಾದ ಸಾರಾ ಗೋವಿಂದು ಅವರು. ಅವರ ಮಾರ್ಗದರ್ಶನದಲ್ಲಿ ಗೆದ್ದಿದ್ದೀನಿ ಅವರಿಗೆ ಈ ಗೆಲುವು ಸಂತೋಷ ತಂದಿದೆ.
ಈಗಷ್ಟೇ ಗೆದ್ದು ಆಯ್ಕೆ ಆಗಿದ್ದೇನೆ. ನಿಜಕ್ಕೂ ಇದು ಸಂತೋಷದ ವಿಚಾರ. ವಾಣಿಜ್ಯ ಮಂಡಳಿ ಹಾಗೂ ಚಿತ್ರರಂಗ ಎಂದಿಗೂ ರೈತರ ಪರ. ಅವರಿಗೆ ಸಪೋರ್ಟ್ ಮಾಡಿಲ್ಲ ಅಂದರೆ ನಮ್ಮ ಜನ್ಮ ಸಾರ್ಥಕವಾಗಲ್ಲ. ಮೊದಲ ಮೀಟಿಂಗ್ ಕಾವೇರಿ ವಿಚಾರವಾಗಿ ಮಾಜಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತಿನಿ ಎಂದಿದ್ದಾರೆ.

ನನ್ನ ಗೆಲುವಿಗೆ ಕಾರಣವಾದ ಎಲ್ಲಾ ನಿರ್ಮಾಪಕರಿಗೆ ವಿತರಿಕರಿಗೆ ಹಾಗೂ ಪ್ರದರ್ಶಕರಿಗೆ ಧನ್ಯವಾದಗಳು ತಿಳಿಸಿದ್ದಾರೆ.

Related Posts

error: Content is protected !!