ಬ್ಲಿಂಕ್ ಚಿತ್ರದ ಹಾಡು ಬಂತು: ಸಖಿಯೇ ಅಂದ್ರು ದೀಕ್ಷಿತ್

ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಆಗಂತುಕ ಸಾಂಗ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬ್ಲಿಂಕ್ ಅಂಗಳದಿಂದ ಸಖಿಯೆ ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಎಂ.ಎಸ್ ಸಾಹಿತ್ಯ ಒದಗಿಸಿದ್ದಾರೆ.

ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, ರಂಗಭೂಮಿ ಜೊತೆ ಜೊತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲ ಮಾಡಿದೆ ಎಂದರು.

ನಾಯಕ ದೀಕ್ಷಿತ್ ಮಾತನಾಡಿ, ಬ್ಲಿಂಕ್ ಸಿನಿಮಾ ಯಾವುದೇ ಪರ್ಟಿಕ್ಯೂಲರ್ ಜಾನರ್ ಗೆ ಬೀಳಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ ಎಂದರು.

ನಾಯಕಿ ಮಂದಾರ ಮಾತನಾಡಿ, ನಾನು ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ಅಂದಿನಿಂದ ಅವರು ನನಗೆ ಸ್ನೇಹಿತರು. ಬ್ಲಿಂಕ್ ಸಿನಿಮಾದ ಸ್ಕ್ರೀಪ್ಟ್ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲಿಗಲ್ಲಾಗಲಿದೆ ಎಂಬ ಭರವಸೆ ಇದೆ ಎಂದರು.

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ , ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ.

Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

Related Posts

error: Content is protected !!