ಮತ್ತೆ ರಾಮಾಯಣ ಶುರು: ಉದಯ ಟಿವಿಯಲ್ಲಿ ಮೇ 20ರಿಂದ ಶ್ರೀಮದ್ ರಾಮಾಯಣ ದರ್ಶನ

ಕಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ ಉದಯ ವಾಹಿನಿಯು ಈಗ ’ಶ್ರೀಮದ್ ರಾಮಾಯಣ’ ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಬುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.

ರಾಮಾಯಣ ಭಾರತೀಯ ಸಂಸ್ಕ್ರತಿ, ಪರಂಪರೆ ಪ್ರತಿಬಿಂಬಿಸಲಿರುವುದು ವಿಶೇಷ. ರಾಮನ ಜೀವನ ಬಹುತೇಕ ಭಾರತೀಯರಿಗೆ ಮಾದರಿಯಾಗಿದೆ. ಆತನ ರಾಜ್ಯ ಪರಿಪಾಲನೆಯು ಇಂದಿಗೂ ರಾಮರಾಜ್ಯ ಅನ್ನುವ ಪದ ಈಗಲೂ ಬಳಸಲಾಗುತ್ತಿದೆ.

ರಾಮ ಮತ್ತು ಸೀತೆಯ ಪವಿತ್ರ ಪ್ರೇಮ, ಕಥೆಯಲ್ಲಿ ಧರ್ಮದ ಪಾಲನೆಯ ಮಾರ್ಗದಲ್ಲಿ ಎದುರಿಸಿದ ಅನೇಕ ಸವಾಲುಗಳು ಕುತೂಹಲಕಾರಿಯಾಗಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು, ವೈವಿಧ್ಯಮಯ ನಟರ ತಂಡವು ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಲಿದೆ.

ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಿದವರಿಗೆ

ತಲಾ ಒಂದು ಸಾವಿರ ಬಹುಮಾನವನ್ನು ಅಂದೇ ಸಂದಾಯವಾಗುವಂತೆ ಯೋಜನೆ ರೂಪಿಸಲಾಗಿದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.

Related Posts

error: Content is protected !!