ಕೊಲೆ ಪ್ರಕರಣ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೊಲೀಸರ ವಶಕ್ಕೆ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾ ಸ್ವಾಮಿ ಎಂಬುವರ ಕೊಲೆ ಕೇಸ್‌ನಲ್ಲಿ ದರ್ಶನ್ ಅವರ ಹೆಸರು ಕೇಳಿ ಬಮದಿದ್ದು, ಇದಕ್ಕೆ‌ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದೆ.
ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಕೊಲೆ ಮಾಡಿ ಎಸೆಯಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆವರು ದರ್ಶನ್ ಹೆಸರು ಪ್ರಸ್ತಾಪಿಸಿದ್ದರು ಎನ್ನಲಾಗಿದೆ.

ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು ನಟ ದರ್ಶನ್‌ರನ್ನು ವಶಕ್ಕೆ ಪಡೆದಿದ್ದಾರೆ.

ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮೈಸೂರಿನ ತೋಟದ ಮನೆಯಿಂದ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ರೇಣುಕಾಸ್ವಾಮಿ ಎಂಬುವವರ ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ಹೆಸರು ತಳಕು ಹಾಕಿಕೊಂಡಿದೆ. ದರ್ಶನ್ ಅವರಿಗೆ ಪರಿಚಯಸ್ಥರೊಬ್ಬರಿಗೆ ಕೆಟ್ಟದಾಗಿ ಮೆಸೇಜ್ ಹಾಗೂ ಸಂದೇಶವನ್ನು ರೇಣುಕಾಸ್ವಾಮಿ ಕಳುಹಿಸಿದ್ದ. ಹೀಗಾಗಿ, ರೇಣುಕಾಸ್ವಾಮಿಯ ಕೊಲೆಯಾಗಿತ್ತು. ಕೊಲೆ ಆರೋಪಿ ಜೊತೆ ದರ್ಶನ್ ಸಂಪರ್ಕದಲ್ಲಿದ್ದರು. ಹೀಗಾಗಿ, ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ.

Related Posts

error: Content is protected !!