ಗೌರಿಯ ಮುದ್ದಾದ” ಹಾಡಿಗೆ ಸಖತ್ ರೆಸ್ಪಾನ್ಸ್ : ಇಂದ್ರಜಿತ್ ಲಂಕೇಶ್ ಪುತ್ರನ ಭರ್ಜರಿ ತಯಾರಿ

ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಆಗಸ್ಟ್ 15ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಅಷ್ಟೇ ಅಲ್ಲ, ಸಿನಿಮಾದ ಹಾಡುಗಳ ಮೂಲಕ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತೀಚೆಗೆ “ಗೌರಿ” ಚಿತ್ರದ “ಮುದ್ದಾದ” ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾಗಿದ್ದು ಎಲ್ಲೆಡೆ ಜೋರು ಸದ್ದು ಮಾಡಿದೆ. ಅಂದಹಾಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ “ಗೌರಿ” ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ್ದು ಎಲ್ಲರಿಗೂ ಗೊತ್ತೆ ಇದೆ. ಈ ವೇಳೆ ಮೊನಾಲಿಸ ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ”ಗೌರಿ” ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಇದ್ದರು.

ಆ ಹಾಡಿಗೆ ಸಿಕ್ಕಾ ಪಟ್ಟೆ ಕಾಮೆಂಟ್ಸ್ ಬರುತ್ತಿದೆ. ಅಷ್ಟೇ ಅಲ್ಲ, ಮುದ್ದಾದ ಹಾಡಿನ ರೀಲ್ಸ್ ಕೂಡ ಶುರುವಾಗಿದೆ. ಈಗಾಗಲೇ ಟೈಮ್ ಬರುತ್ತೆ ಎಂಬ ಸಾಂಗ್ ವೈರಲ್ ಆಗಿದ್ದು, ಪಡ್ಡೆ ಹುಡುಗರ ಹಾಟ್ ಫೇವರ್ ಎನಿಸಿಕೊಂಡಿದೆ.

“ಗೌರಿ” ಹಾಡಿಗೆ ಕೆ.ಕಲ್ಯಾಣ್ ಹಾಗೂ “ಮುದ್ದಾದ” ಹಾಡಿಗೆ ಕವಿರಾಜ್ ಸಾಹಿತ್ಯವಿದೆ.

ಇನ್ನು “ಗೌರಿ” ಚಿತ್ರದಲ್ಲಿ ಏಳು ಹಾಡುಗಳಿದ್ದು,. ಸಂಗೀತ ಪ್ರಧಾನ ಸಿನಿಮಾ ಇದು. ಕವಿರಾಜ್ ಅವರ ಮುದ್ದಾದ ಹಾಡಿಗೆ, ನಿಹಾಲ್ ತವ್ರು ಧ್ವನಿ ಇದೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ.
ಕೆ.ಕಲ್ಯಾಣ್ ಅವರು ಬರೆದ ಹಾಡನ್ನು, ಇಂದ್ರಜಿತ್ ಅವರ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ. ಚಿತ್ರಕ್ಕೆ “ಯು” ಸರ್ಟಿಫಿಕೇಟ್ ಸಿಕ್ಕಿದೆ.

Related Posts

error: Content is protected !!