Categories
ಸಿನಿ ಸುದ್ದಿ

ಸೆಪ್ಟೆಂಬರ್ 9 ಕ್ಕೆ ದೇವರ ದರ್ಶನ! ಅಪ್ಪು ನಟನೆಯ ಲಕ್ಕಿಮ್ಯಾನ್ ಬಿಡುಗಡೆಗೆ ರೆಡಿ…

ಕನ್ನಡ ಚಿತ್ರರಂಗದಲ್ಲೀಗ ಹೊಸ ಬಗೆಯ ಸಿನಿಮಾ ಬಿಡುಗಡೆಯ ಪರ್ವ. ಹೌದು, ಸ್ಯಾಂಡಲ್ ವುಡ್ ಈಗ ಭಾರತೀಯ ಚಿತ್ರರಂಗದಲ್ಲೇ ನ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರಿಲೀಸ್ ಆದ ಒಂದಷ್ಟು ಸಿನಿಮಾಗಳು ದೊಡ್ಡ ಮಟ್ಟದ ಯಸಸ್ಸು ಕಾಣಿಸಿಕೊಂಡಿವೆ. ಈಗಲೂ ಬಿಡುಗಡೆಗೆ ನಿರೀಕ್ಷೆ ಸಿನಿಮಾಗಳು ಸೇರಿವೆ. ಅ ಸಾಲಿಗೆ “ಲಕ್ಕಿ ಮ್ಯಾನ್” ಕೂಡ ಸೇರಿದೆ. ಈ ನಿರೀಕ್ಷೆಗೆ ಕಾರಣ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿರುವುದು. ಇಡೀ ಚಿತ್ರದ ಹೈಲೆಟ್ ಅವರ ಪಾತ್ರ ಈ ಚಿತ್ರದಲ್ಲಿ ಅವರದು ವಿಶೇಷ ಪಾತ್ರ. ಅದನ್ನು ತೆರೆಯ ಮೇಲೆ ನೋಡಬೇಕು. ಈಗಾಗಲೇ “ಲಕ್ಕಿ ಮ್ಯಾನ್” ಚಿತ್ರವನ್ನ ಅದ್ದೂರಿಯಾಗಿ ತೆರೆಮೇಲೆ ತರಲು ಚಿತ್ರತಂಡ ಜೋರು ತಯಾರಿ ನಡೆಸಿದೆ.

ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳುವಂತೆ, ನಾನು ನನ್ನ ಮಾತೃಭಾಷೆಯಲ್ಲಿ ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರವಿದು. ಈ ಚಿತ್ರದ ಕಥೆಯೇ ನಾನು ಸಿನಿಮಾ ಮಾಡಲು ಕಾರಣ. ಚಿತ್ರದಲ್ಲಿ ಸೆಂಟಿಮೆಂಟ್ , ಲವ್ ಮತ್ತು ಎಮೋಷನಲ್ ಇದೆ. ಭರಪೂರ ಮನೋರಂಜನೆಯೂ ಇದೆ. ಈ ಚಿತ್ರಕ್ಕೆ ಭಗವಂತ, ಭಾಗ್ಯವಂತ ಹಾಗೂ ಲಕ್ಕಿ ಮ್ಯಾನ್ ಎಂಬ ಶೀರ್ಷಿಕೆ ಆಯ್ಕೆ ಮಾಡಿದ್ದೆವು. ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸಬೇಕು ಎಂಬ ಉದ್ದೇಶದಿಂದ ಅವರನ್ನು ಭೇಟಿ ಮಾಡಲು ಹೋದಾಗ ಅವರೇ ಕಥೆ ಕೇಳಿ ತ ಲಕ್ಕಿ ಮ್ಯಾನ್ ಟೈಟಲ್ ತುಂಬಾ ಸೂಕ್ತ ಎಂದು ಸೂಚಿಸಿದರು. ಈಗ ನಾನೊಬ್ಬ ನಿರ್ದೇಶಕನಾಗಿ ಇಲ್ಲಿ ಮಾತನಾಡಲು ಅಪ್ಪು ಅವರೇ ಕಾರಣ. ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದು, ಅದರಲ್ಲಿ ಅಪ್ಪು ಅವರ ಜೊತೆ ಕೆಲಸ ಮಾಡಿದ್ದು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ.

ಅವರು ತೋರಿಸಿದ ಪ್ರೀತಿ, ಕಾನ್ಫಿಡೆಂಟ್, ಸ್ಟ್ರೆಂಥ್ ಇವತ್ತು ನಾನಿಲ್ಲಿ ನಿಲ್ಲಲು ಕಾರಣ. ಅಪ್ಪು ಅವರು ತುಂಬಾ ಅರ್ಥಗರ್ಭಿತವಾದ ಪಾತ್ರವನ್ನು ಮಾಡಿದ್ದು, ಅವರು ಚಿತ್ರದಲ್ಲಿ 45 ನಿಮಿಷಕ್ಕೂ ಹೆಚ್ಚು ಇರಲಿದ್ದಾರೆ. ಅಲ್ಲದೆ ವರನಟ ಡಾ.ರಾಜ್‌ಕುಮಾರ್ ಅವರ ಮೇಲೆ ರಚಿಸಲಾಗಿರುವ ಹಾಡೊಂದರಲ್ಲಿ ಪುನೀತ್ ಜೊತೆ ನಮ್ಮ ಸೋದರ ಪ್ರಭುದೇವಾ ಕೂಡ ಹೆಜ್ಜೆ ಹಾಕಿದ್ದಾರೆ. ಒಂದು ಫ್ಯಾಂಟಸಿ ಡ್ರಾಮಾವನ್ನು ಲಕ್ಕಿಮ್ಯಾನ್ ಚಿತ್ರದಲ್ಲಿ ತರುತ್ತಿದೇವೆ. ಲಕ್ಕಿ ಮ್ಯಾನ್ ಚಿತ್ರವನ್ನ ಎಲ್ಲರೂ ಬೆಂಬಲಿಸಿ ಎಂದರು.

ಹೀರೋ ಕೃಷ್ಣ, ಪುನೀತ್ ಅವರ ಜೊತೆಗಿನ ಅನುಭವ ಹಂಚಿಕಕೊಂಡು, ನಾನು ಅಪ್ಪು ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಅವರೊಟ್ಟಿಗೆ ಅಭಿನಯಿಸಿದ್ದೀನಿ ಕೂಡ. ಈ ಚಿತ್ರ ನನಗೆ ಬಹಳ ವಿಶೇಷ. ನಾನು ಹಾಗೂ ನನ್ನ ನಾಯಕ ನಟಿಯರು ಅಪ್ಪು ಸರ್ ಹಾಗೂ ಪ್ರಭುದೇವ ಸಾರ್ ಜೊತೆ ಡ್ಯಾನ್ಸ್ ನಲ್ಲಿ ಕುಣಿಯಬೇಕಿತ್ತು. ನನಗೆ ಡ್ಯಾನ್ಸ್ ಅಷ್ಟಾಗಿ ಬರದ ಕಾರಣ ನಾನು ನಿರ್ದೇಶಕರ ಬಳಿ ರಿಕ್ವೆಸ್ಟ್ ಮಾಡಿ ಹೊರ ಉಳಿದೆ. ಒಟ್ಟಾರೆ ಈ ಚಿತ್ರ ಬಹಳ ಉತ್ತಮವಾಗಿ ಮೂಡಿಬಂದೆ ಎಂದರು.

ನಾಯಕಿ ಸಂಗೀತಾ ಶೃಂಗೇರಿ, ಚಿತ್ರದಲ್ಲಿ ಅನು ಎಂಬ ಬೋಲ್ಡ್ ಹುಡುಗಿಯ ಪಾತ್ರ ಮಾಡಿದ್ದಾರಂತೆ. ಮಿಡಲ್‌ಕ್ಲಾಸ್ ಹುಡುಗಿ, ಮ್ಯಾರೇಜ್ ಬಗ್ಗೆ ಕನ್‌ಪ್ಯೂಸ್ ಇರುವ ಪಾತ್ರವಂತೆ.
ಮತ್ತೊಬ್ಬ ನಾಯಕಿ ರೋಷನಿ ಪ್ರಕಾಶ್ ಅವರಿಲ್ಲಿ ಮೀರಾ ಎನ್ನುವ ಪಾತ್ರದಲ್ಲಿ ನಟಿಸಿದ್ದೇನೆ. ಕವಲುದಾರಿ ಚಿತ್ರದ ನಂತರ ಇಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ರಂಗಾಯಣ ರಘ, ಸಾಧುಕೋಕಿಲ ಮುಂತಾದವರು ಅಭಿನಯಿಸಿದ್ದಾರೆ. ಧನಂಜಯ ಅವರು ಈ ಚಿತ್ರದಲ್ಲಿ ಅಪ್ಪು, ಪ್ರಭುದೇವಾ ಅಭಿನಯದ ಬಾರೋ ರಾಜಾ ಹಾಡೋಣ ಬಾರೋ ಎನ್ನುವ ಹಾಡೂ ಸೇರಿದಂತೆ 6 ಹಾಡುಗಳನ್ನೂ ರಚಿಸಿದ್ದಾರೆ. ಜೀವಾಶಂಕರ್ ಛಾಯಾಗ್ರಹಣವಿದೆ. ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ ಪಿ.ಆರ್. ಮೀನಾಕ್ಷಿ ಸುಂದರಂ ಹಾಗೂ ಸುಂದರ ಕಾಮರಾಜ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಹಾಡುಗಳಿಗೆ ವಿ2 ವಿಜಯ್ ಮತ್ತು ವಿಕ್ಕಿ ಅವರ ಸಂಗೀತವಿದೆ

.

Categories
ಸಿನಿ ಸುದ್ದಿ

ಡಾಲಿ ಧನಂಜಯ ಹೊಸ ಸಿನಿಮಾ: ಉತ್ತರ ಕಾಂಡ ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಚಿತ್ರ…

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ಹೊಸ ಚಿತ್ರಕ್ಕೆ ಡಾಲಿ ಧನಂಜಯ ಹೀರೋ ಆಗಿದ್ದಾರೆ. ಹೌದು, ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.

ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.

“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.

ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಸೆಪ್ಟೆಂಬರ್ 13: ಶೂಟಿಂಗ್ ಕಂಪ್ಲೀಟ್…

ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ನಿರ್ಮಾಣ ಮಾಡಿರುವ ‘ಸೆಪ್ಟಂಬರ್ 13 ಸಿನಿಮಾ’ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಹೆಸರಾಂತ ನಿರ್ಮಾಪಕ ಡಾ.ರಾಜಾ ಬಾಲಕೃಷ್ಣನ್ ಈ ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನೂ ನಿಭಾಯಿಸಿ ಸಿನಿಮಾದಲ್ಲಿ ಖಳನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳು ಚಿತ್ರತಂಡ ಮಾಧ್ಯಮದವರ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದೆ.

ಚಿತ್ರದ ನಿರ್ಮಾಪಕ ಇವಾನ್ ನಿಗ್ಲಿ ಮಾತನಾಡಿ, ಈ ಕಥೆ ಬರೆಯೋದಿಕ್ಕೆ ಕಾರಣ ಇದೆ. ನನಗೆ ಮೊದಲು ಕೊರೋನಾ ಬಂತು. ಆ ನಂತ್ರ ನನ್ನ ಪತ್ನಿ.. ಆ ಬಳಿಕ ನನ್ನ ಮಗನಿಗೆ ಬಂತು. ತುಂಬಾ ಸೀರೀಯಸ್ ಆಗಿಬಿಡ್ತು. ಈ‌ ಸ್ಫೂರ್ತಿಯಿಂದ ಕಥೆ ಬರೆದಿದ್ದೇನೆ. ನಾನು ಕಿರುಚಿತ್ರಗಳು, ಧಾರಾವಾಹಿ ಮಾಡಿದ್ದೇನೆ. ನಾನು ಈ ಮೊದಲ ಮಲಯಾಳಂ, ತಮಿಳು ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೂರನೇ ಚಿತ್ರ. ಈ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿರುವುದರ ಜೊತೆಗೆ ನಟನೆ ಕೂಡ ಮಾಡಿದ್ದೇನೆ ಎಂದು ತಿಳಿಸಿದರು.

ವಿನಯ ಪ್ರಸಾದ್ ಮಾತನಾಡಿ, ನರ್ಸ್ ಜೀವನ ಬಹಳ ಚಾಲೆಂಜಿಂಗ್. ಪ್ರತಿಯೊಬ್ಬರು ನರ್ಸ್ ಗಳನ್ನು ನಾವು ಭೇಟಿ ಮಾಡೇ ಇರ್ತಿವಿ. ಎಂತಹ ಚಾಲೆಂಜಿಂಗ್ ಅಂದ್ರೆ ಅವರು. ಪ್ರತಿ ನಿಮಿಷ, ರೋಗ ರುಜಿನ ಕೋಪ ಆತಂಕ ಇದರ ಜೊತೆಯಲಿ ಜೀವನ ಮಾಡ್ತಾರೆ. ಇದರ ಪ್ರಮುಖ ಭಾಗವೇ ರೋಗ ರುಜಿನ. ಅಂತಹವರು ತಮ್ಮ ಮನೆಗೆ ಹೋಗಿ ಹೇಗೆ ಜೀವನ ಮಾಡ್ತಾರೆ? ಹೇಗೆಲ್ಲಾ ಸಮಸ್ಯೆಗಳನ್ನು ಎದುರಿಸ್ತಾರೆ? ಅನ್ನೋದು ಚಿತ್ರದ ತಿರುಳು ಅಂತಾ ಹೇಳಿದರು.

ನಿರ್ದೇಶಕ ಡಾ.ರಾಜಾ ಬಾಲಕೃಷ್ಣನ್ ಮಾತನಾಡಿ, ಒಂದಷ್ಟು ಹಿರಿಯರು ಜೊತೆಗೆ ಒಂದಷ್ಟು ಹೊಸಬರು ಸೇರಿ ಸಿನಿಮಾ ಮಾಡಿದ್ದೇವೆ. ನಾನು ಕನ್ನಡ ಇಂಡಸ್ಟ್ರೀಗೆ ಹೊಸಬ. ಹೊಸಬರು ನನಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತರು, ಇಡೀ ತಂಡಕ್ಕೆ ಧನ್ಯವಾದ ಎಂದರು.

ಕೋವಿಡ್ ಸಮಯದಲ್ಲಿ ಜಗತ್ತು ನಲುಗಿ ಹೋಗಿತ್ತು. ಈ ಸಮಯದಲ್ಲಿ ಸಮರ್ಪಣಾ ಭಾವದಿಂದ ದುಡಿದವರು ವೈದ್ಯರು. ಅದ್ರಲ್ಲಿಯೂ ನರ್ಸಿಂಗ್ ಸಮುದಾಯದ ಸೇವೆ ಗಣನೀಯ. ಇಂತಹ ನರ್ಸಿಂಗ್ ಜೀವನದ ಕಥೆಯನ್ನೊಳಗೊಂಡ ‘ಸೆಪ್ಟಂಬರ್ 13 ಸಿನಿಮಾ’ ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದು, ಶ್ರೀಯಾರಿಧಿಬನ್ ನಾಯಕಿಯಾಗಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಉಳಿದಂತೆ ಒಂದಷ್ಟು ಯುವ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಶೀರ್ಘದಲ್ಲಿ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಬಿರಾದಾರ್ ಈಗ ಹೀರೋ!90 ಬಿಡಿ ಮನೀಗ್ ನಡಿ ಇದು ಅವರ 500 ನೇ ಚಿತ್ರ…

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌

ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ನಿರ್ಮಾಪಕರು.

ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. 80 ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು.‌ ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.

500ಚಿತ್ರಗಳಲ್ಲಿ ಅಭಿನಯಿಸಿದ್ದಿನೆಂದರೆ ಅದಕ್ಕೆ ರಂಗಭೂಮಿ ಹಾಗೂ ಚಿತ್ರರಂಗದವರ ಪ್ರೋತ್ಸಾಹವೇ ಕಾರಣ. ಈ ಚಿತ್ರದಲ್ಲಿ
ಊದಿನ ಕಡ್ಡಿ ಮಾರುವವನ ಪಾತ್ರ ನನ್ನದು. ನನಗೆ ಕುಡಿತದ ಚಟ ಇರುತ್ತದೆ. ಒಬ್ಬ ಹೆಂಗಸಿನ ಪರಿಚಯವಾಗುತ್ತದೆ. ಆನಂತರ ಸಾಕಷ್ಟು ತಿರುವುಗಳಿರುತ್ತದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ನಾಟಕದಲ್ಲಿ ಹಾಗೋಹೀಗೋ ಕುಣಿಯುತ್ತಿದ್ದೆ. ಈ ಚಿತ್ರದಲ್ಲಿ ಹಾಡೊಂದಕ್ಕೆ ಪೂರ್ಣಪ್ರಮಾಣದಲ್ಲಿ ನೃತ್ಯ ಮಾಡಿದ್ದೇನೆ. ಭೂಷಣ್ ಮಾಸ್ಟರ್ ಮಾಡಿಸಿದ್ದಾರೆ. ಈ ಹಾಡನ್ನು ನಟ ಶರಣ್ ಮೆಚ್ಚಿಕೊಂಡಿದ್ದಾರೆ ಎಂದು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ವೈಜನಾಥ್ ಬಿರಾದಾರ್ ವಿವರಿಸಿದರು.

ವೃತ್ತಿ ರಂಗಭೂಮಿಯಲ್ಲಿ ಚಿಕ್ಕ ವಯಸ್ಸಿನಿಂದ ನಾಟಕ ಮಾಡಿಕೊಂಡು ಬಂದಿದ್ದೀನಿ. ಮೊದಲ ಬಾರಿಗೆ ಬಿರಾದಾರ್‌ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದೀನಿ. ಈ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿದ್ದೇನೆ. ನಾಯಕನನ್ನು ದುಶ್ಚಟಗಳಿಂದ ದೂರ ಮಾಡುತ್ತೇನೆ ಎಂದು ನಾಯಕಿ ನೀತಾ ಪಾತ್ರದ ಬಗ್ಗೆ
ಹೇಳಿದರು.

ಬಿರಾದಾರ್ ಅವರಲ್ಲಿ ವಿಶೇಷ ಶಕ್ತಿ ಇದೆ.ಈ ವಯಸ್ಸಿನಲ್ಲಿ ಅವರು ಈ ರೀತಿ ನೃತ್ಯ ಮಾಡಿದ್ದು ನೋಡಿ ಕಣ್ಣೀರು ಬಂತು. ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಎಂದರು ನಟ ಧರ್ಮ.

500ನೇ ಸಿನಿಮಾ ಆದರೂ ಮೊದಲ ಚಿತ್ರದ ಹುಮ್ಮಸಿನಲ್ಲಿ ಬಿರಾದಾರ್ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಸೊಗಡಿನ ಚಿತ್ರ. ನಾನು ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ ಎಂದು ಕರಿಸುಬ್ಬು ತಿಳಿಸಿದರು.

ಹಾಡನ್ನು ಬರೆದು ಸಂಗೀತ ನೀಡಿರುವ ಶಿವು ಭೇರಗಿ, ಗಾಯಕ ರವೀಂದ್ರ ಸೊರಗಾವಿ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ವೀರ ಸಮರ್ಥ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಸೂಪರ್ ಸ್ಟಾರ್ : ಇದು ರಮಾಸ್ ಮೀಡಿಯಾ ಕ್ರಿಯೇಷನ್ಸ್ ಸಿನಿಮಾ- ನಿರಂಜನ್ ಸುಧೀಂದ್ರ ಹೀರೋ…

ಕನ್ನಡ ಚಿತ್ರಗಳು ಈಗ ವಿಶ್ವದಾದ್ಯಂತ ಜನಪ್ರಿಯ. ಕನ್ನಡ ಚಿತ್ರಗಳ ಮೇಲೆ ಅಪಾರ ಅಭಿಮಾನವಿರುವ ನೆರೆ ರಾಜ್ಯಗಳ ನಿರ್ಮಾಣ ಸಂಸ್ಥೆಗಳು ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿದೆ. ಆಂದ್ರಪ್ರದೇಶದಲ್ಲಿ ಕೆಲವು ತೆಲುಗು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮಾ ಅವರು ತಮ್ಮ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು ಕರ್ನಾಟಕದಲ್ಲೂ ಆರಂಭಿಸಿದ್ದಾರೆ. ಸಂಸ್ಥೆಯ ಲೋಗೊ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಬಿಡುಗಡೆಯಾಯಿತು. ಈ ಸಂಸ್ಥೆಯ ಮೊದಲ ಚಿತ್ರವಾಗಿ ನಿರಂಜನ್ ಸುಧೀಂದ್ರ ಅಭಿನಯದ “ಸೂಪರ್ ಸ್ಟಾರ್” ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ.
ನಿವೃತ್ತ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಹಾಗೂ ಅವರ ಮಗಳು ರಮಾ ಈ ಸಂಸ್ಥೆಯ ರುವಾರಿಗಳು.

ನಾವು ತೆಲುಗಿನಲ್ಲಿ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಮೂಲಕ ಕೆಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. “ಸೂಪರ್ ಸ್ಟಾರ್” ಚಿತ್ರದ ಮೂಲಕ ನಾನು ಕನ್ನಡ ಚಿತ್ರರಂಗ ಪ್ರವೇಶಿಸಿದ್ದೇನೆ. ನಮ್ಮದು ಸಿನಿಮಾ ನಿರ್ಮಾಣವಲ್ಲದೆ ಸಾಕಷ್ಟು ಬೇರೆಬೇರೆ ಉದ್ಯಮಗಳು ಇವೆ. ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಈ ಚಿತ್ರದ ಬಗ್ಗೆ ಹೇಳಿದರು. ಕೆಲವು ಸಮಯ ತೆಗೆದುಕೊಂಡು ನಂತರ ನಿರ್ಮಾಣ ಮಾಡೋಣ ಅಂದೆ. ನಿರ್ದೇಶಕರು ಹೆಣೆದಿರುವ ಕಥೆ ನನ್ನನ್ನು ಆಕರ್ಷಿಸಿತ್ತು. ‌ ನಿರಂಜನ್ ಸುರದ್ರೂಪಿ ನಟ. ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಹಾಗೂ ನಾಯಕ, ಇವರಿಬ್ಬರ ಕಾಂಬಿನೇಷನ್ ನಲ್ಲಿ ಉತ್ತಮ ಚಿತ್ರ ಬರುವುದಂತೂ ಖಚಿತ. ಈ ಚಿತ್ರದ ನಂತರ ಇವರಿಬ್ಬರ ಜೋಡಿಯಲ್ಲೇ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತೇನೆ. ನಮ್ಮ ಸಂಸ್ಥೆಗೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕಿ ರಮಾ. ನಿರ್ಮಾಪಕ ಸತ್ಯನಾರಾಯಣ ಅವರು ಸಹ ಚಿತ್ರ ನಿರ್ಮಾಣ ಆರಂಭವಾದ ಬಗ್ಗೆ ಮಾಹಿತಿ ನೀಡಿದರು.

ನಾನು ಹಾಗೂ ನಿರಂಜನ್ ಈ ಚಿತ್ರದ ಕುರಿತು ಮಾತನಾಡುತ್ತಿದ್ದಾಗ, ನಮಗೆ ರಮಾ ಮೇಡಮ್ ಅವರ ಪರಿಚಯವಾಯಿತು. ಅವರಿಗೆ ಕಥೆ ಹೇಳಿದಾಗ, ಕಥೆಯನ್ನು ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಯಾವುದೇ ಕೊರೆತೆ ಇಲ್ಲದಂತೆ ಚಿತ್ರವನ್ನು ‌ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಅವರಿಗೆ, ನನ್ನ ತಂಡಕ್ಕೆ ಹಾಗೂ ಚಿತ್ರ ಆರಂಭದಿಂದ ಪ್ರೋತ್ಸಾಹ ನೀಡುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಧನ್ಯವಾದ . ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಚಿತ್ರ ಅಂತಿಮಹಂತದಲ್ಲಿದೆ ಎಂದು ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಮಾಹಿತಿ ನೀಡಿದರು.

ನಾನು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮವಹಿಸುತ್ತಿದ್ದೇನೆ. ಏಕೆಂದರೆ “ಸೂಪರ್ ಸ್ಟಾರ್” ನನ್ನ ಚಿಕ್ಕಪ್ಪನ ಟೈಟಲ್. ಅವರಿಂದ ಅನುಮತಿ ಪಡೆದು ಶೀರ್ಷಿಕೆಯಿಟ್ಟಿದ್ದೇನೆ. ಆ ಹೆಸರಿಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳುವುದೇ ನನ್ನ ಮೊದಲ ಆದ್ಯತೆ. ನಮ್ಮ ಮೇಲೆ ನಂಬಿಕೆಯಿಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಅವರಿಗೆ, ನಿರ್ದೇಶಕರಿಗೆ ,ಆಗಮಿಸಿರುವ ಗಣ್ಯರಿಗೆ ಹಾಗೂ ಕುಟುಂಬದವರಿಗೆ ನಿರಂಜನ್ ಸುಧೀಂದ್ರ ಧನ್ಯವಾದಗಳನ್ನು ತಿಳಿಸಿದರು.

ಪಕ್ಕದ ರಾಜ್ಯದಿಂದ ಕನ್ನಡ ಚಿತ್ರವೊಂದರ ನಿರ್ಮಾಣಕ್ಕೆ ಆಗಮಿಸಿರುವ ಒಳ್ಳೆಯದಾಗಲಿ. ಇನ್ನೂ ನಮ್ಮ ನಿರಂಜನ್ ಸುಧೀಂದ್ರ ಬಹಳ ಶ್ರಮ ಜೀವಿ. ಇತ್ತೀಚೆಗೆ “ಸೂಪರ್ ಸ್ಟಾರ್” ಚಿತ್ರದ ಸಾಹಸ ಸನ್ನಿವೇಶವೊಂದನ್ನು ನಾನು ಹಾಗೂ ಸುದೀಪ್ ನೋಡಿ ಸಂತೋಷಪಟ್ಟೆವು. ಸುದೀಪ್ ಅಂತೂ ನಿರಂಜನ್ ಅಭಿನಯದ ಬಗ್ಗೆ ಉತ್ತಮ ಮಾತುಗಳಾಡಿದರು. ಇವತ್ತು ನಮ್ಮ ನಿರಂಜನ್ ಹುಟ್ಟುಹಬ್ಬ . ಅವನಿಗೆ ಹಾಗೂ ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹಾರೈಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಅಧ್ಯಕ್ಷರಾದ ಭಾ.ಮ.ಹರೀಶ್, ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ನಿರಂಜನ್ ಸುಧೀಂದ್ರ ಅವರ ಹುಟ್ಟುಹಬ್ಬ ಆಚರಣೆ ಸಹ ನಡೆಯಿತು .

Categories
ಸಿನಿ ಸುದ್ದಿ

ಕಾಲಕ್ಕೆ ತಕ್ಕಂತೆ ಬದಲಾಗದೇ ಹೋದ್ರೆ ಕಲೆ ಸಾಯುತ್ತೆ! ಡೊಳ್ಳು ಟ್ರೇಲರ್ ರಿಲೀಸ್ ಮಾಡಿ ಮಾತಾಡಿದ ನಟ‌ ಗಣೇಶ್…

ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಆಗಸ್ಟ್ 26ರಿಂದ ಮಾಯಾನಗರಿಯಲ್ಲಿ ಡೊಳ್ಳಿನ ನಾದ ಶುರುವಾಗಲಿದೆ. ಅದರ ಮೊದಲ ಭಾಗವಾಗಿ ಇತ್ತೀಚೆಗಷ್ಟೇ ಮಯಾನಗರಿ ಎಂಬ ಹಾಡು ಬಿಡುಗಡೆ ಮಾಡಿ ಗಮನಸೆಳೆದಿದ್ದ ಚಿತ್ರತಂಡ ಈಗ ಡೊಳ್ಳು ಸಿನಿಮಾದ ಟ್ರೇಲರ್ ನ್ನು ಪ್ರೇಕ್ಷಕರಿಗೆ ಉಣಬಡಿಸಿದೆ.

ಡೊಳ್ಳು ಕಲೆಯನ್ನು ಯಾರು ಬೇಕಾದರೂ ಕಲಿಯಬಹುದು. ಆದರೆ ಮನಸ್ಸಿನಲ್ಲಿ ಇಳಿಸಿಕೊಳ್ಳಲು ಆಗುವುದಿಲ್ಲ ಎಂಬ ಅರ್ಥಪೂರ್ಣವಾದ ಮಾತಿನಿಂದ ಶುರುವಾಗುವ ಟ್ರೇಲರ್ ನಲ್ಲಿ ಜನಪದ ಕಲೆ ಡೊಳ್ಳು ಪ್ರಾಮುಖ್ಯತೆ ಜೊತೆಗೆ ಪ್ರೀತಿ, ಕಣ್ಣೀರು, ಕೋಪ ಎಲ್ಲವನ್ನೂ ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ನೋಡುಗರ ಹೃದಯಕ್ಕೆ ಹಾಗೇ ಇಳಿದು ಬಿಡುವ ಈ ಟ್ರೇಲರ್ ಬಿಡುಗಡೆ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ನಮ್ ಸಿನಿಮಾ. ತಮ್ಮ ತನದ ಸಿನಿಮಾ..ನಮ್ಮ ಮಣ್ಣಿನ ಸೊಗಡಿನ ಸಿನಿಮಾ. ಕಲೆ ಮತ್ತು ಕಮರ್ಷಿಯಲ್ ನಡುವಿನ ಮಧ್ಯೆ ತೆಗೆದಿರುವ ಸಿನಿಮಾ. ಟ್ರೇಲರ್ ಬಹಳ ಚೆನ್ನಾಗಿದೆ. ಇದೇ 26ರಂದು ಚಿತ್ರ ಬಿಡುಗಡೆಯಾಗ್ತಿದೆ ಪ್ರತಿಯೊಂದು ನೋಡಿ ಎಂದರು.

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾದಲ್ಲಿ ಜನಪದ ಕಲೆ ಡೊಳ್ಳಿನ ಮಹತ್ವವನ್ನು ಕಟ್ಟಿಕೊಡಲಾಗಿದ್ದು, ಕಾರ್ತಿಕ್ ಮಹೇಶ್ ನಾಯಕನಾಗಿ ಅಮೋಘವಾಗಿ ನಟಿಸಿದ್ದು. ಇವರಿಗೆ ಜೋಡಿಯಾಗಿ ನಿಧಿ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಬಾಬು ಹಿರಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾ ಬಳಗ ಚಿತ್ರದಲ್ಲಿದ್ದು, ಶ್ರೀನಿಧಿ ಸಂಭಾಷಣೆ-ಚಿತ್ರಕಥೆ, ಅನಂತ್ ಸಂಗೀತ, ಅಭಿಲಾಸ್ ಕಲಾಥಿ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿದೆ.

ಹಲವು ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಡೊಳ್ಳು ಸಿನಿಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಜನವಾಗಿದೆ. ಪವನ್ ಒಡೆಯರ್ ಮೂವೀವ್ ಬ್ಯಾನರ್ ನಡಿ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದು, ಇದೇ 26ಕ್ಕೆ ಚಿತ್ರ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ.

Categories
ಸಿನಿ ಸುದ್ದಿ

ಪರಂವಃ ಸ್ಟುಡಿಯೋಸ್​ನ ಹೊಸ ಚಿತ್ರಕ್ಕೆ ಹೆಸರು ಸಿಕ್ತು: ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾಗೆ ವಿಹಾನ್ -ಅಂಕಿತಾ ಜೋಡಿ…


ಪರಂವಃ ಸ್ಟುಡಿಯೋಸ್​ನಡಿ ರಕ್ಷಿತ್​ ಶೆಟ್ಟಿ ನಿರ್ಮಿಸುತ್ತಿರುವ ಹೊಸ ಚಿತ್ರವು ಕಳೆದ ತಿಂಗಳಷ್ಟೇ ಘೋಷಣೆಯಾಗಿತ್ತು.

ವಿಹಾನ್​ ಗೌಡ ಮತ್ತು ಅಂಕಿತಾ ಅಮರ್​ ಅಭಿನಯದ ಈ ಚಿತ್ರದ ಹೆಸರನ್ನು ಚಿತ್ರತಂಡ ಹೇಳಿರಲಿಲ್ಲ. ಶನಿವಾರ ಸಂಜೆ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಿದ್ದು, ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಹೆಸರನ್ನು ಇಡಲಾಗಿದೆ.

ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜತೆಯಾಗಿರಬೇಕು ಎಂಬ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇದೆಲ್ಲದರ ಸಂಗಮವೇ ‘ಇಬ್ಬನಿ ತಬ್ಬಿದ ಇಳೆಯಲಿ’.

ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಚಿತ್ರ. ನಿನ್ನೆ, ಇಂದು ಮತ್ತು ನಾಳೆಯ ಪ್ರೀತಿಯನ್ನು ತೋರಿಸುವ ಚಿತ್ರ. ಪ್ರೇಕ್ಷಕರು ಚಿತ್ರವನ್ನು ನೋಡುತ್ತಾ, ಹಾಡುತ್ತಾ, ನಲಿಯುತ್ತಾ, ತಮ್ಮನ್ನೇ ತಾವು ಮರೆಯುವಂತಹ ಚಿತ್ರ.


ಕಾಲೇಜಿನಿಂದ ಪ್ರಾರಂಭವಾಗುವ ಈ ಕಥೆಯು ಪ್ರೌಡಾವಸ್ಥೆಯವಸ್ಥೆಯಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ.

ಈ ಹಿಂದೆ ರಕ್ಷಿತ್​ ಶೆಟ್ಟಿ ಅವರ ಸೆವೆನ್​ ಆಡ್ಸ್​ ಚಿತ್ರಕಥಾ ವಿಭಾಗದಲ್ಲಿ ಸಕ್ರಿಯವಾಗಿ ‘ಕಿರಿಕ್​ ಪಾರ್ಟಿ’ ಮತ್ತು ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು ‘ಕಥಾಸಂಗಮ’ ಚಿತ್ರದ ‘ರೇನ್​ಬೋ ಲ್ಯಾಂಡ್​’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ಕಥೆ ಹೊಸತನ ಕೇಳುವುದರಿಂದ, ಹೊಸ ಕಲಾವಿದರು ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ನಾಯಕ-ನಾಯಕಿಯಾಗಿ ವಿಹಾನ್​ ಮತ್ತು ಅಂಕಿತಾ ಅಮರ್​ ಆಯ್ಕೆಯಾಗಿದ್ದು, ಸದ್ಯದಲ್ಲೇ ಎರಡನೆಯ ನಾಯಕಿಯ ಅಧಿಕೃತ ಘೋಷಣೆಯಾಗಲಿದೆ.

ಇದೊಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಗಗನ್​ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್​ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್​ ಸೆಲ್ವರಾಜನ್​, ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ ‘ಕಥಾಸಂಗಮ’ ಚಿತ್ರದ ‘ಗಿರ್​ಗಿಟ್ಲೆ’ ಕಥೆಯನ್ನು ನಿರ್ದೇಶಿಸದ್ದ ಶಶಿಕುಮಾರ್​, ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಈ ಬಾರಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ಸ್-2022: ಅಪ್ಪು ನೆನಪಲ್ಲಿ ಪ್ರಶಸ್ತಿ ಪ್ರದಾನ…

ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು
ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

“SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ‌. ಮತ್ತೊಂದು ಕನ್ನಡ ಚಿತ್ರಗಳು ಈಗ ಪ್ಯಾನ್ ಇಂಡಿಯಾ ದಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿದೆ ಹಾಗಾಗಿ ಈ ಬಾರಿ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಇಲ್ಲಿ ಬಂದಿರುವ ಗಣ್ಯರಿಗೆ ಹಾಗೂ ಪ್ರಾಯೋಜಕರಿಗೆ ಧನ್ಯವಾದ ಎಂದರು “ಸೈಮಾ” ಅವಾರ್ಡ್ಸ್ ನ ಮುಖ್ಯಸ್ಥೆ ಬೃಂದಾ ಪ್ರಸಾದ್.

ಒಂದು ಪ್ರಶಸ್ತಿ ಸಮಾರಂಭವನ್ನು ಹತ್ತುವರ್ಷಗಳ ಕಾಲ ನಡೆಸುವುದು ಸುಲಭವಲ್ಲ. ಆ ನಿಟ್ಟಿನಲ್ಲಿ ನಾನು ಮೊದಲು ಇದರ ಉಸ್ತುವಾರಿ ಬೃಂದಾ ಪ್ರಸಾದ್ ಮತ್ತು ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಈ ಬಾರಿ ಹತ್ತನೇ ವರ್ಷದ “ಸೈಮಾ” ಅವಾರ್ಡ್ಸ್ ನನಗೆ ಪ್ರಿಯವಾದ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಖಷಿ ಎನ್ನುತ್ತಾರೆ ಖ್ಯಾತ ನಟ ರಾಣಾ ದಗ್ಗುಬಾಟಿ.

ನನಗೆ “ಸೈಮಾ” ಬರೀ ಪ್ರಶಸ್ತಿ ಅಲ್ಲ. ಅದೊಂದು ನೆನಪು. ನಾನು ಮೊದಲ ಬಾರಿ ಈ ಪ್ರಶಸ್ತಿ ಸ್ವೀಕರಿಸಲು ಮಲೇಷಿಯಾ ಗೆ ಹೋಗಿದ್ದು ನನ್ನ ಹೃದಯದಲ್ಲಿ ಇನ್ನೂ ಹಸಿರಾಗಿದೆ. ಈ ಬಾರಿ ನಮ್ಮ ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿರುವುದು ಹೆಚ್ಚು ಖುಷಿ ತಂದಿದೆ. ನಿಮ್ಮೆಲ್ಲರಿಗೂ ನಮ್ಮೂರಿಗೆ ಆತ್ಮೀಯ ಸ್ವಾಗತ. ಪದೇಪದೇ ಬೆಂಗಳೂರಿನಲ್ಲೇ ಈ ಸಮಾರಂಭ ಮಾಡಬೇಕು ಅನಿಸಬೇಕು. ಆ ಮಟ್ಟದಲ್ಲಿ ಈ ಸಮಾರಂಭ ಯಶಸ್ವಿಯಾಗಲಿ‌ ಎಂದು ನಟ ಡಾಲಿ ಧನಂಜಯ ಹಾರೈಸಿದರು.

ನನಗೆ ಬೆಂಗಳೂರು ತುಂಬಾ ಇಷ್ಟ. ಸಾಕಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿದ್ದೇನೆ.. ಚಿತ್ರೀಕರಣ ಸಮಯದಲ್ಲಿ ಹಲವು ದಿನಗಳನ್ನು ಇಲ್ಲೇ ಕಳೆದಿದ್ದೇನೆ. ಈ ಬಾರಿ ಅಪ್ಪು ಅವರ ಸ್ಮರಣೆಯೊಂದಿಗೆ ಈ ಸಮಾರಂಭ ನಡೆಯುತ್ತಿದೆ ಎಂದು ನಟಿ ಶಾನ್ವಿ ಶ್ರೀವಾಸ್ತವ್ ತಿಳಿಸಿದರು.

ನಟಿಯರಾದ ಫರಿಯಾ ಅಬ್ದುಲ್ಲಾ, ಶ್ರೀಲೀಲ ಹಾಗೂ ಕೆಲವು ಪ್ರಾಯೋಜಕರು ಸಹ “ಸೈಮಾ” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ರಿಪ್ಪರ್ ಸಿನಿಮಾಗೆ ವೀರೇಂದ್ರ ಹೆಗ್ಗಡೆ ಸಾಥ್: ಪೋಸ್ಟರ್ ರಿಲೀಸ್ ಮಾಡಿ ಹಾರೈಕೆ…

ಕೃಷ್ಣ ಬೆಳ್ತಂಗಡಿ ನಿರ್ದೇಶನದ ಎರಡನೇ ಚಿತ್ರ ರಿಪ್ಪರ್. ಇದರ ಮೊದಲು ಪೋಸ್ಟರ್ ಅನ್ನು ನೂತನ ರಾಜ್ಯಸಭಾ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದ್ದಾರೆ.
ಸಿನಿಮಾ, ನಿರ್ಮಾಣ, ಚಿತ್ರೀಕರಣ, ಸ್ಥಳಗಳು, ಕಲಾವಿದರು ಹೀಗೆ ಅನೇಕ ವಿಚಾರಗಳನ್ನು ನಿರ್ದೇಶಕ ಕೃಷ್ಣ ಬೆಳ್ತಂಗಡಿ ಇವರಿಂದ ಪಡೆದ ಹೆಗ್ಗಡೆಯವರು ಸಿನಿಮಾದ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಸಿನಿಮಾದ ದಕ್ಷಿಣ ಕನ್ನಡ ವಿಭಾಗ ನಿರ್ವಹಕರದ ಬಿ.ಹೆಚ್. ರಾಜು ಈ ವೇಳೆ ಉಪಸ್ಥಿತರಿದ್ದರು.
ರಿಪ್ಪರ್ ಚಲನಚಿತ್ರವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನೈಜ ಘಟನೆಯೊಂದರಿಂದ ಪ್ರೇರಿತವಾದ ಸಿನಿಮಾವಾಗಿದ್ದು, ಜಿಕೆ ರಿಯಲ್ ಇಮೇಜಸ್ ಮತ್ತು ಶ್ರೀ ಗುರುರಾಯ ಪ್ರೊಡಕ್ಷನ್ಸ್ ಇವರಿಂದ ನಿರ್ಮಾಣವಾಗಿದೆ.


ಕೌಸ್ತುಬ್ ಜಯರಾಮ್, ಅಮುಲ್ ಗೌಡ, ಶ್ರೀರಾಮ್, ಸಾನ್ವಿ, ಅರ್ಪಿತಾ ಬಿ.ಜಿ, ಶಿವಕುಮಾರ್ ಆರಾಧ್ಯ, ಗಜಾನನ ಹೆಗ್ಡೆ ಇವರುಗಳು ಪ್ರಮುಖ ತಾರಾಗಣದಲ್ಲಿ ಇದ್ದಾರೆ.

Categories
ಸಿನಿ ಸುದ್ದಿ

ಕಿರಣ್ ರಾಜ್ ಈಗ ಶೇರ್! ಕಂಠೀರವ ಸ್ಟುಡಿಯೋದಲ್ಲಿ ಪ್ರಸಿದ್ಧ ಸಿನಿಮಾಗೆ ಚಾಲನೆ

“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ. ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್ ಮಾಡಿದರು. ಗಣ್ಯರು ಮುಹೂರ್ತ ಸಮರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಶೇರ್” ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾನೆ. ಎರಡು ಗುಂಪುಗಳೂ ಇರುತ್ತದೆ. ಒಂದು ಗುಂಪಿನವರು ಅನಾಥಾಶ್ರಮವನ್ನೇ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲಿ ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ.

“ಕಿರಣ್ ರಾಜ್ ಚಾಕೊಲೇಟ್ ಹೀರೋ ಅಂತ ಪ್ರಸಿದ್ದ್. ಅವರಿಗೆ ರಗಡ್ ಲುಕ್ ಸರಿ ಹೊಂದುವುದೆ?” ಅಂತ ಅನೇಕರು ಕೇಳಿದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಭರ್ಜರಿ ಗಂಡು” ಚಿತ್ರ ಸಹ ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಚಿತ್ರದಲ್ಲಿ ಮುಂದುವರೆಯಲಿದೆ. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆಗಸ್ಟ್ 22 ರಿಂದ‌ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರಸಿದ್ಧ್ “ಶೇರ್” ಬಗ್ಗೆ ಮಾಹಿತಿ ನೀಡಿದರು.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ‌ ಚಿತ್ರದಲ್ಲಿ ನಟಿಸಲು ಖುಷಿಯಾಗಿದೆ. ಇದಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿದ್ದೀನಿ. “ಭರ್ಜರಿ ಗಂಡು” ಚಿತ್ರದಲ್ಲೂ ಸಾಹಸ ಸನ್ನಿವೇಶಗಳು ಭರ್ಜರಿಯಾಗಿ ಮೂಡಿಬಂದಿದೆ ಎಂದು ನಾಯಕ ಕಿರಣ್ ರಾಜ್ ತಿಳಿಸಿದರು.

ನಾನು‌ ಮೂಲತಃ ಬೀದರ್ ನವನು. ಅಲ್ಲೇ ವಕೀಲನಾಗಿ ಕಾರ್ಯ ನಿರ್ವಿಸುತ್ತಿದ್ದೇನೆ. ರಾಜಕೀಯದಲ್ಲೂ ಇದ್ದೀನಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಸುದರ್ಶನ್ ಸುಂದರರಾಜ್.

ಚಿತ್ರದ ನಾಯಕಿ ಸುರೇಖ ಹಾಗೂ ಪೊಲೀಸ್ ಅಧಿಕಾರಿಯಾಗಿಕಾಣಿಸಿಕೊಳ್ಳುತ್ತಿರುವ ತನೀಶಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಿಟ್ಟಿ ಕೌಶಿಕ್ ಛಾಯಾಗ್ರಹಣದ ಬಗ್ಗೆ ಹಾಗೂ ಗುಮ್ಮಿನೇನಿ‌ ವಿಜಯ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

error: Content is protected !!