Categories
ಸಿನಿ ಸುದ್ದಿ

ಆರ್ಕೇಸ್ಟ್ರಾ ಮೈಸೂರು! ಇದು ಡಾಲಿ ಗೆಳೆಯರ ಬಳಗದ ಮನರಂಜನೆ: ಸಂಕ್ರಾಂತಿಗೆ ಹಾಡುವ ಸಂಭ್ರಮ…

ಗಣೇಶನ ಹಬ್ಬ, ರಾಜ್ಯೋತ್ಸವ ಮುಂತಾದ ಸಂದರ್ಭಗಳಲ್ಲಿ ಎಲ್ಲಾ ಕಡೆ “ಆರ್ಕೇಸ್ಟ್ರಾ” ಕಾರುಬಾರು. ಇಂತಹ “ಆರ್ಕೇಸ್ಟ್ರಾ” ಆರಂಭವಾಗಿದ್ದು ಮೈಸೂರಿನಲ್ಲೇ ಎನ್ನುತ್ತಾರೆ. “ಆರ್ಕೇಸ್ಟ್ರಾ” ಕಥೆ ಆಧರಿಸಿರುವ “ಆರ್ಕೇಸ್ಟ್ರಾ ಮೈಸೂರು” ಎಂಬ ಚಿತ್ರ ಜನವರಿ 12 ರಂದು ತೆರೆಗೆ ಬರುತ್ತಿದೆ‌. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಮೂಲತಃ ಮೈಸೂರಿನವರಾದ ಡಾಲಿ ಧನಂಜಯ್ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾವಿದು. ಅದರಲ್ಲೂ ಡಾಲಿ ಅವರೆ ಈ ಚಿತ್ರದ ಎಲ್ಲಾ ಹಾಡುಗಳನ್ನು ಬರೆದಿರುವುದು ವಿಶೇಷ.

ಟ್ರೇಲರ್ ಬಿಡುಗಡೆ ಮಾಡಿದ ಡಾಲಿ ಧನಂಜಯ್ ಈ ಚಿತ್ರದ ಕುರಿತು ಭಾವನಾತ್ಮಕವಾಗಿ ಮಾತನಾಡಿದರು. ನಮ್ಮ ಮೈಸೂರಿನ ಅನೇಕ ಸ್ನೇಹಿತರು ಸೇರಿ ಮಾಡಿರುವ ಚಿತ್ರವಿದು. ಸುನೀಲ್ ಮೈಸೂರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಪೂರ್ಣಚಂದ್ರ ನಾಯಕನಾಗಿ ನಟಿಸಿದ್ದಾರೆ‌. ನಾನು ಈ ಚಿತ್ರದ ಎಲ್ಲಾ ಹಾಡುಗಳನ್ನು ಬರೆದಿದ್ದೇನೆ.‌ ನಾನು ಡಾಲಿ ಆಗುವುದಕ್ಕೆ ಮುಂಚಿತವಾಗಿ ಈ ಚಿತ್ರದ ಹಾಡುಗಳನ್ನು ಬರೆದಿದ್ದೇನೆ.‌
ಈ ಚಿತ್ರದಲ್ಲಿ ನಾಯಕ ಗೆಲುವನ್ನು ಸಂಭ್ರಮಿಸುವ ಹಾಡೊಂದನ್ನು ಬರೆಯಬೇಕಿತ್ತು. ನನಗೆ ಆಗ ಆ ಗೆಲುವನ್ನು ಸಂಭ್ರಮಿಸಿ ಗೊತ್ತಿರಲಿಲ್ಲ.‌ ಆನಂತರ “ಟಗರು” ಚಿತ್ರದ ಯಶಸ್ಸಿನ ನಂತರ ಈ ಹಾಡನ್ನು ಪೂರ್ಣ ಮಾಡಿದ್ದೆ.

ಸಂಕ್ರಾಂತಿ ಸಮಯದಲ್ಲಿ ಸಾಮಾನ್ಯವಾಗಿ ಕನ್ನಡ ಸಿನಿಮಾಗಳು ಬಿಡುಗಡೆಯಾಗುವುದಿಲ್ಲ. ಆದರೆ ನಮ್ಮ ಚಿತ್ರ ಇದೇ ಸಂದರ್ಭದಲ್ಲಿ (ಜನವರಿ 12) ಬಿಡುಗಡೆಯಾಗುತ್ತಿದೆ. ಡಾಲಿ ಪಿಕ್ಚರ್ಸ್ ಹಾಗೂ ಕೆ.ಆರ್.ಜಿ ಸ್ಟುಡಿಯೋಸ್ ಈ ಚಿತ್ರವನ್ನು ಅರ್ಪಿಸುತ್ತಿದೆ. ಅಶ್ವಿನ್ ವಿಜಯ್ ಕುಮಾರ್ ಹಾಗೂ ರಘು ದೀಕ್ಷಿತ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕನ್ನಡ ಕಲಾರಸಿಕರು ನೋಡಿ ಹಾರೈಸಿ ಎಂದರು ಡಾಲಿ ಧನಂಜಯ.

2015 ರಲ್ಲಿ “ಬಾರಿಸು ಕನ್ನಡ ಡಿಂಡಿಮವ” ಎಂಬ ಹಾಡನ್ನು ನಾವೆಲ್ಲಾ ಗೆಳೆಯರು ಸೇರಿ ಮಾಡಿದ್ದೆವು. ಮೈಸೂರಿನಲ್ಲೇ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಈ ಹಾಡಿಗೆ ಸಿಕ್ಕ ಜನ ಬೆಂಬಲ ನಾವು ಚಿತ್ರ ನಿರ್ಮಾಣ ಮಾಡಲು ಸ್ಪೂರ್ತಿಯಾಯಿತು. ಆನಂತರ ನಮ್ಮ “ಆರ್ಕೇಸ್ಟ್ರಾ ಮೈಸೂರು” ಚಿತ್ರ ಆರಂಭವಾಯಿತು. “ಆರ್ಕೇಸ್ಟ್ರಾ”ದಲ್ಲಿ ಹಾಡಬೇಕೆಂದು ಆಸೆ ಹೊತ್ತ ಹುಡುಗನ ಕನಸು ನನಸಾಗುವುದಾ? ಎಂಬುದೆ ಚಿತ್ರದ ಮೂಲ ಕಥೆ. ಬೆಂಗಳೂರಿನ ಹಾಗೆ ಮೈಸೂರಿನಲ್ಲೂ ಒಂದು ಗಾಂಧಿನಗರವಿದೆ. ಅಲ್ಲಿ ಸಾಕಷ್ಟು ಆರ್ಕೇಸ್ಟ್ರಾ ಕಂಪನಿಗಳೂ ಇದೆ. ಈ ರೀತಿ “ಆರ್ಕೇಸ್ಟ್ರಾ” ದೊಂದಿಗೆ ನಮ್ಮ ಚಿತ್ರದ ಕಥೆ ಸಾಗುತ್ತದೆ.

ರಘುದೀಕ್ಷಿತ್ ಸಂಗೀತ ನೀಡಿರುವ ಎಂಟು ಹಾಡುಗಳು ನಮ್ಮ ಚಿತ್ರದಲ್ಲಿದೆ. ಅಷ್ಟು ಹಾಡುಗಳನ್ನು ಡಾಲಿ ಅವರೆ ಬರೆದಿದ್ದಾರೆ. ಒಂದು ಹಾಡಿನಲ್ಲಿ ಇಡೀ ಮೈಸೂರೇ ಭಾಗಿಯಾಗಿದೆ ಎನ್ನಬಹುದು.
ಏಕೆಂದರೆ ಹದಿನೈದು ಸಾವಿರಕ್ಕೂ ಹೆಚ್ಚಿನ ಜನರು ಈ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮಹದೇವ್ ನನ್ನ ಜೊತೆ ಸಹ ನಿರ್ದೇಶನ ಮಾಡಿದ್ದಾರೆ. ಒಟ್ಟಿನಲ್ಲಿ ನನ್ನ ತಂಡದ ಸಹಕಾರದಿಂದ ಉತ್ತಮ ಚಿತ್ರವೊಂದು ಇದೇ ಜನವರಿ 12 ಬಿಡುಗಡೆಯಾಗುತ್ತಿದೆ. ನೋಡಿ ಹರಸಿ ಎಂದರು ನಿರ್ದೇಶಕ ಸುನೀಲ್ ಮೈಸೂರು.

ನಮ್ಮ ಸಿನಿಮಾ ಕನಸಿನ ಜರ್ನಿ ಶುರುವಾಗಿದ್ದು ಹದಿನೈದು ವರ್ಷದ ಹಿಂದೆ. ನಾಟಕ ಮಾಡಬೇಕಾದರೆ, ನಾವೆಲ್ಲಾ ಬೆಂಗಳೂರಿಗೆ ಹೋಗಿ ಸಿನಿಮಾ ಮಾಡಲು ಆಗುವುದಾ? ಎಂದು ಯೋಚಿಸುತ್ತಿದ್ದೆವು. ಆ ಪೈಕಿ ನಮ್ಮ ಚಿತ್ರದಲ್ಲಿ ನಟಿಸಲು ಮೊದಲು ಬೆಂಗಳೂರಿಗೆ ಬಂದಿದ್ದು ಸ್ನೇಹಿತ ಧನಂಜಯ್ ‌. ಆನಂತರ “ಆರ್ಕೇಸ್ಟ್ರಾ ಮೈಸೂರು” ಚಿತ್ರ ಆರಂಭವಾಯಿತು. ಇಡೀ ಮೈಸೂರಿನಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಕಥೆ ಕೇಳಿದ ರಘು ದೀಕ್ಷಿತ್ ನಮ್ಮ ಬೆಂಬಲಕ್ಕೆ ನಿಂತರು. ಡಾಲಿ ಪಿಕ್ಚರ್ಸ್ ಹಾಗೂ ಕೆ.ಆರ್.ಜಿ ಸ್ಟುಡಿಯೋಸ್ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ ಎಂದರು ನಾಯಕ ಪೂರ್ಣಚಂದ್ರ ಮೈಸೂರು.

ಚಿತ್ರದ ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಮತ್ತೊಬ್ಬ ನಿರ್ಮಾಪಕ ಅಶ್ವಿನ್ ವಿಜಯ್ ಕುಮಾರ್, ನಾಯಕಿ ರಾಜಲಕ್ಷ್ಮೀ, ಸಹ ನಿರ್ದೇಶಕ ಮಹದೇವ್, ಛಾಯಾಗ್ರಾಹಕ ಹಾಗೂ ಸಂಕಲನಕಾರ ಜೋಸೆಫ್ ಕೆ ರಾಜ, ನಟ ನಾಗಭೂಷಣ ಹಾಗೂ ಕೆ.ಆರ್.ಜಿ ಸ್ಟುಡಿಯೋಸ್ ನ ಯೋಗಿ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಸಿಂಪಲ್ ಸುನಿ ಸಿನಿಮಾಗೆ ವಿನಯ್ ರಾಜಕುಮಾರ್ ಹೀರೋ: ಸುನಿಯ ಸರಳ ಪ್ರೇಮಕಥೆಯಲ್ಲಿ ದೊಡ್ಮನೆ ಹುಡುಗ…

ನಿರ್ದೇಶಕ ಸುನಿ ಸಿನಿಮಾ ಮಾಡ್ತಾರೆ ಅಂದರೆ, ಅಲ್ಲೊಂದು ವಿಶೇಷತೆ ಇರುತ್ತೆ. ಸದಾ ಹೊಸ ವಿಷಯವನ್ನೇ ಆಯ್ಕೆ ಮಾಡಿಕೊಂಡು ತಮ್ಮದೇ ಶೈಲಿಯ ಸಿನಿಮಾ ಮಾಡುತ್ತ ಬಂದಿರುವ ಸುನಿ, ಈಗಾಗಲೇ ಸಕ್ಸಸ್ ಫುಲ್ ನಿರ್ದೇಶಕ. ಸ್ಟಾರ್ ನಟರಿಗೂ ಸೈ ಹೊಸಬರಿಗೂ ಸೈ ಸಿನಿಮಾ ಮೂಲಕ ಹೊಸತನ ಕಟ್ಟಿಕೊಡಲು ಸದಾ ಹಪಹಪಿಸುವ ನಿರ್ದೇಶಕ. ಈ ಬಾರಿಯೂ ಅವರು ಮತ್ತೊಂದು ಸರಳ ಪ್ರೇಮಕಥೆ ಜೊತೆ ಬರುತ್ತಿದ್ದಾರೆ. ಅವರ ಸಿನಿಮಾ ನಾಯಕರಾಗಿ ವಿನಯ್ ರಾಜಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕುರಿತು ಒಂದು ವರದಿ

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

ಅಂದ್ಹಾಗೆ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಮೊದಲ ಚಿತ್ರಕ್ಕೆ ಮೈಸೂರು ರಮೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಎಂದಿನಂತೆ ಸುನಿ ಈ ಸಿನಿಮಾದಲ್ಲೂ ನುರಿತ ತಂತ್ರಜ್ಞರ ಜೊತೆ ಕೆಲಸ ಮಾಡುತ್ತಿದ್ದಾರೆ. ವೀರ್ ಸಮರ್ಥ್ ಅವರ ಸಂಗೀತ ನಿರ್ದೇಶನವಿದೆ. ಇಲ್ಲಿ ವಿಶೇಷ ಹಾಡುಗಳು ಸಿನಿಮಾದ ಭಾಗ. ಇನ್ನು ಸಭಾ ಛಾಯಾಗ್ರಾಹಣವಿರಲಿದೆ.

Categories
ಸಿನಿ ಸುದ್ದಿ

ಗೆಳೆಯರ ಮಧುಪಾನದ ಹೊಸಪಾಠ! ಹೊಸ ವರ್ಷಕ್ಕೊಂದು ಪಾರ್ಟಿ ಸಾಂಗ್…

ಅವರೆಲ್ಲಾ ಸುಮಾರು ಇಪ್ಪತ್ತಕ್ಕೂ ಅಧಿಕ ವರ್ಷಗಳ ಸ್ನೇಹಿತರು. ಅಂತಹ ಸ್ನೇಹವೃಂದದಿಂದ “ಮಧುಪಾನದ ಹೊಸಪಾಠ” ಎಂಬ ಪಾರ್ಟಿ ಸಾಂಗ್ ಹೊಸವರ್ಷದ ಹೊಸ್ತಿಲಿನಲ್ಲಿ ಬಿಡುಗಡೆಯಾಗಿದೆ.

ನನಗೆ ಕೆಲವು ವರ್ಷಗಳಿಂದ rap singer ಆಗಬೇಕೆಂದು ಕನಸು. ಎಷ್ಟೋ ಜನ ಖ್ಯಾತ rap singers ನನಗೆ ಸ್ಪೂರ್ತಿ. ಇಪ್ಪತ್ತು ವರ್ಷಗಳಾದರೂ ನಾನು ಒಂದು ಆಲ್ಬಂ ಸಾಂಗ್ ಬಿಡುಗಡೆ ಮಾಡಲು ಆಗಿರಲಿಲ್ಲ. ಆನಂತರ ನನ್ನ ಗೆಳೆಯ ದಕ್ಷಿಣಮೂರ್ತಿ ಸಿಗುತ್ತಾರೆ. ಈ ಆಲ್ಬಂ ಸಾಂಗ್ ಮಾಡುವ ವಿಚಾರ ತಿಳಿಸುತ್ತಾರೆ. ಆಗ ” ಮಧುಪಾನದ ಹೊಸಪಾಠ” ಆಲ್ಬಂ ಸಾಂಗ್ ನಿರ್ಮಾಣವಾಗುತ್ತದೆ ಎಂದರು ಹಾಡನ್ನು ಬರೆದು‌ ಹಾಡಿರುವ, ಜೊತೆಗೆ ಅಭಿನಯವನ್ನೂ ಮಾಡಿರುವ ಕಂಗ್ಲೀಷ್ ಡ್ಯಾಡಿ ಚಿಕ್ಕು.(ಚಿಕ್ಕ ವೆಂಕಟ ರಾಮು).

ನನಗೆ ಮೊದಲಿನಿಂದಲೂ ಕಲಾವಿದನಾಗಬೇಕೆಂಬ ಕನಸು. ಅದು ಆಗಿರಲಿಲ್ಲ.‌ ಚಿಕ್ಕು ಅವರು ಈ ಹಾಡಿನ ಬಗ್ಗೆ ಹೇಳಿದಾಗ, ಹಾಡು ಇಷ್ಟವಾಯಿತು ನಿರ್ಮಾಣ ಮಾಡಿದ್ದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ಆರವ್ ರಿಶಿಕ್ ಸಂಗೀತ ನೀಡಿದ್ದಾರೆ.

ಈ ಆಲ್ಬಂ ಹಾಡಿಗೆ ಆರ್ಟಿಸ್ಟಿಕ್ ಡೈರೆಕ್ಟರ್ ಆಗಿ ಶಕ್ತಿ ಆರ್, ನೃತ್ಯ ನಿರ್ದೇಶಕ ಹಾಗೂ ಸಂಕಲನಕಾರರಾಗಿ ಶಿವಾಸ್ ಕೆ ಫಣಿ ಹಾಗೂ ಛಾಯಾಗ್ರಾಹಕರಾಗಿ ನಿರಂಜನ್ ಬೋಪ್ಪಣ್ಣ ಕಾರ್ಯ ನಿರ್ವಹಿಸಿದ್ದಾರೆ. ಸ್ನೇಹಿತರೆ ಸೇರಿ ಮಾಡಿರುವ ಈ ಹಾಡಿಗೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ಹಾಗೂ ನಟ ದಕ್ಷಿಣಮೂರ್ತಿ.

ಖ್ಯಾತ ಗಾಯಕ ಅವಿನಾಶ್ ಚೆಬ್ಬಿ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಕೋರಿದರು.

ಸಂಗೀತ ನಿರ್ದೇಶಕ ಆರವ್ ರಿಶಿಕ್, ಆರ್ಟಿಸ್ಟಿಕ್ ಡೈರೆಕ್ಟರ್ ಶಕ್ತಿ ಹಾಗೂ ಸಂಕಲನಕಾರ – ನೃತ್ಯ ನಿರ್ದೇಶಕ ಶಿವಾಸ್ ಕೆ ಫಣಿ “ಮಧುಪಾನದ ಹೊಸಪಾಠ” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಛೂ ಮಂತರ್! ಇದು ಶರಣ ಚಿತ್ರ!! ಮೋಷನ್ ಪೋಸ್ಟರ್ ರಿಲೀಸ್…

ತಮ್ಮ ಸಹಜ ನಟನೆಯ ಮೂಲಕ ಮನೆ ಮಾತಾಗಿರುವ ಶರಣ್ ನಾಯಕರಾಗಿ ನಟಿಸಿರುವ ” ಛೂ ಮಂತರ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕುತೂಹಲ ಮೂಡಿಸಿರುವ ಈ ಚಿತ್ರದ ಮೋಷನ್ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ.

ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಸಿನಿಮಾ. ನಾನು ಹಾಗೂ ಮಾನಸ ತರುಣ್ ಈ ಚಿತ್ರದ ನಿರ್ಮಾಪಕರು. ನಿರ್ದೇಶಕ ನವನೀತ್ ಹಾಗೂ ನಾನು, ಉಪೇಂದ್ರ ಅವರ ಸಿನಿಮಾ ಮಾಡಬೇಕಿತ್ತು. ಕಾರಣಾಂತರದಿಂದ ಆ ಚಿತ್ರ ಸ್ವಲ್ಪ ಮುಂದೆ ಹೋಯಿತು. ಅಷ್ಟರಲ್ಲಿ ನವನೀತ್ ಹಾರರ್ ಜಾನರ್ ನ ಈ ಚಿತ್ರದ ಕಥೆ ಸಿದ್ದಮಾಡಿಕೊಂಡಿದ್ದರು. ಶರಣ್ ಹಾಗೂ ತರುಣ್ ಸುಧೀರ್ ಅವರ ಬಳಿ ಕಥೆ ಹೇಳಿದ್ದರು. ಇಬ್ಬರಿಗೂ ಕಥೆ ಹಿಡಿಸಿತು. ಚಿತ್ರ ಆರಂಭವಾಯಿತು. ಬೆಂಗಳೂರು, ಮೈಸೂರು, ಉತ್ತರಕಾಂಡದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಶರಣ್ ಅವರೊಟ್ಟಿಗೆ ಚಿಕ್ಕಣ್ಣ, ಅದಿತಿ, ಪ್ರಭುದೇವ, ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ಧರ್ಮ, ರಜನಿ ಭಾರದ್ವಾಜ್ ಮುಂತಾದವರು ಅಭಿನಯಿಸಿದ್ದಾರೆ. ಅವಿನಾಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು‌.

ಶರಣ್ ಸರ್ ಜೊತೆ ಕೆಲಸ ಮಾಡಿದ್ದು ಖುಷಿಯಿದೆ‌. “ಛೂ ಮಂತರ್” ಎಂದರೆ ಫ್ಯಾನ್ಸಿ ವರ್ಡ್. ಈ ಪದ ತುಂಬಾ ಕಡೆ ಬಳಸುತ್ತಾರೆ. ಚಿತ್ರದಲ್ಲಿ ಮೂರು ಕಥೆಗಳಿರುತ್ತದೆ. ಎಲ್ಲಾ ಕಥೆಗಳಿಗೂ ಮೂಲ ನಾಯಕ ಆಗಿರುತ್ತಾರೆ. ನನ್ನ ಕಥೆ ಕೇಳಿ ಶರಣ್ ಹಾಗೂ ತರುಣ್ ಸುಧೀರ್ ಇಷ್ಟಪಟ್ಟರು. ಕಂಪ್ಲೀಟ್ ಹಾರರ್ ಸಿನಿಮಾದಲ್ಲಿ ಶರಣ್ ಅವರು ಅಭಿನಯಿಸಿರಲಿಲ್ಲ. ಇದೇ ಮೊದಲು ಎನ್ನಬಹುದು. ‌ನಮ್ಮ ಚಿತ್ರದಲ್ಲಿ ಹಾರಾರ್ ಜೊತೆ ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ ಎಂದರು “ಕರ್ವ” ಖ್ಯಾತಿಯ ನಿರ್ದೇಶಕ ನವನೀತ್.

ನಾನು ಚಿಕ್ಕವಯಸ್ಸಿನಿಂದಲೂ ಹಾರಾರ್ ಚಿತ್ರಗಳ ಅಭಿಮಾನಿ. ಸಾಕಷ್ಟು ಹಾರಾರ್ ಚಿತ್ರ ನೋಡಿದ್ದೇನೆ. ಈ ಚಿತ್ರದ ಕಥೆಯನ್ನು ನವನೀತ್ ಅದ್ಭುತವಾಗಿ ಮಾಡಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿರುವುದು ಸಂತೋಷವಾಗಿದೆ. ನನ್ನ ಮಿತ್ರ ತರುಣ್ ಸುಧೀರ್ ಈ ಚಿತ್ರದ ಕಥೆ ಕೇಳಿ ಮೆಚ್ಚುಗೆ ಸೂಚಿಸಿದ್ದಾರೆ. ನನ್ನ ಹಾಗೂ ಚಿಕ್ಕಣ್ಣ ಅವರ ಕಾಂಬಿನೇಶನ್ ಎಂದರೆ‌ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ‌. ಈ ಚಿತ್ರದಲ್ಲೂ ನಮ್ಮ ಜೋಡಿ ಮೋಡಿ ಮಾಡಲಿದೆ. ಈ ಚಿತ್ರದ ಮತ್ತೊಂದು ಹೈಲೆಟ್ ಎಂದರೆ ಅನೂಪ್ ಅವರ ಛಾಯಾಗ್ರಹಣ ಎನ್ನುತ್ತಾರೆ ಶರಣ್.

ತರುಣ್ ಶಿವಪ್ಪ ನಿರ್ಮಾಣದ ಹಿಂದಿನ ಚಿತ್ರದಲ್ಲೇ ಅಭಿನಯಿಸಬೇಕಿತ್ತು ಆಗಿರಲಿಲ್ಲ. ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪಾತ್ರ ಚೆನ್ನಾಗಿದೆ ಎಂದರು ಮೇಘನಾ ಗಾಂವ್ಕರ್.

ನನಗೂ ಹಾರಾರ್ ಚಿತ್ರಗಳೆಂದರೆ ಪ್ರಾಣ. ನವನೀತ್ ಅವರ “ಕರ್ವ” ಚಿತ್ರವನ್ನು ಸಾಕಷ್ಟು ಸಲ ನೋಡಿದ್ದೇನೆ. ಶರಣ್ ಸರ್ ಜೊತೆ ನಟಿಸಿರುವ ಸಂತಸವಿದೆ‌. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ಅದಿತಿ ಪ್ರಭುದೇವ.

ಫಾರಿನ್ ರಿಟರ್ನ್ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಪ್ರಭು ಮುಂಡ್ಕರ್, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಧರ್ಮ ಹೇಳಿದರು. ರಜನಿ ಭಾರದ್ವಾಜ್ ಸಹ “ಛೂ ಮಂತರ್” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಷಡಕ್ಷರಿ ಸನ್ ಆಫ್ ಪಂಚಾಕ್ಷರಿ ಟೈಟಲ್ ಅನಾವರಣ: ಶಿವರಾಜ್ ಸಕ್ರೆ ಸಿನಿಮಾಗೆ ಡಾರ್ಲಿಂಗ್ ಸಾಥ್…

‘ಉಡುಂಬಾ’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಸಕ್ರೆ ಹೊಸದೊಂದು ಸಬ್ಜೆಕ್ಟ್ ಹೊತ್ತು ನಿರ್ದೇಶನಕ್ಕೆ ರೆಡಿಯಾಗಿದ್ದಾರೆ. ಥ್ರಿಲ್ಲರ್ ಜಾನರ್ ಒಳಗೊಂಡ ಈ ಚಿತ್ರದ ಟೈಟಲ್ ಹೊಸ ವರ್ಷದಂದು ರಿವೀಲ್ ಆಗಿದೆ. ನಟ ಡಾರ್ಲಿಂಗ್ ಕೃಷ್ಣ ಟೈಟಲ್ ರಿವೀಲ್ ಮಾಡುವ ಮೂಲಕ ಶಿವರಾಜ್ ಸಕ್ರೆ ಸೆಕೆಂಡ್ ವೆಂಚರ್ ಗೆ ಶುಭ ಹಾರೈಸಿದ್ದಾರೆ. ‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಚಿತ್ರ ಥ್ರಿಲ್ಲರ್ ಜಾನರ್ ಒಳಗೊಂಡಿದ್ದು, ಪಕ್ಕಾ ಕಮರ್ಶಿಯಲ್ ಹಾದಿಯಲ್ಲಿ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಉಡುಂಬಾ ಸಿನಿಮಾ ನಂತರ ಥ್ರಿಲ್ಲರ್ ಜಾನರ್ ಕಥೆ ಹೆಣೆದು ಒಂದಿಷ್ಟು ಹೊಸತನದೊಂದಿಗೆ ನಿರ್ದೇಶಕ ಶಿವರಾಜ್ ಸಕ್ರೆ ಕಂ ಬ್ಯಾಕ್ ಮಾಡ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯನ್ನು ನಿಭಾಯಿಸಿ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಜನವರಿ 28ಕ್ಕೆ ಸಿನಿಮಾ ಸೆಟ್ಟೇರಲಿದೆ.

ಚಿತ್ರದಲ್ಲಿ ಕಿಶೋರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ‘ಐ1’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟ ಕಿಶೋರ್ ಗಿದು ಎರಡನೇ ಸಿನಿಮಾ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಸದ್ಯದಲ್ಲೇ ಚಿತ್ರತಂಡ ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ. ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಝೀ ವಾಹಿನಿಯ ಸರಿಗಮಪ ಮೆಂಟರ್ ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಎಸ್. ಪಿ ಪಿಕ್ಚರ್ಸ್ ಬ್ಯಾನರ್ ನಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ‘ಐ 1’, ‘ಮೃತ್ಯುಂಜಯ’ ಸಿನಿಮಾ ನಂತರ ಎಸ್ ಪಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಐದನೇ ಸಿನಿಮಾ ಇದಾಗಿದೆ.

Categories
ಸಿನಿ ಸುದ್ದಿ

ಹೊಂಬಾಳೆ ಫಿಲಂಸ್ ಬಿಗ್ ಅನೌನ್ಸ್! ಐದು ವರ್ಷದಲ್ಲಿ 3 ಸಾವಿರ ಕೋಟಿ ಹೂಡಿಕೆ: ವಿಜಯ್ ಕಿರಗಂದೂರು ಮಹತ್ವದ ಘೋಷಣೆ…

ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ ಎಂದು ಹೊಂಬಾಳೆ ಫಿಲಮ್ಸ್ ನ ವಿಜಯ್ ಕಿರಗಂದೂರು ಘೋಷಿಸಿದ್ದಾರೆ..
ಈ ಬಗ್ಗೆ ಅವರು ತಮ್ಮ ಟ್ವೀಟರ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.


ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿರುವ ವಿಜಯ್ ಕಿರಗಂದೂರು, ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.


ಚಿತ್ರ ಪ್ರೇಮಿಗಳ ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲಮ್ಸ್ ಅತ್ಯಂತ ಯಶಸ್ವಿ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಯಶಸ್ವೀ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.

ಅದರ ಭಾಗವಾಗಿ ಮುಂದಿನ 5 ವರ್ಷದಲ್ಲಿ ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಯೋಜನೆ ಸಿದ್ದವಾಗಿದೆ ಎಂದು ಘೋಷಿಸಿದ್ದಾರೆ.


ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ ಎಂದು ವಿಜಯ್ ಸ್ಮರಿಸಿದ್ದಾರೆ.
ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ , ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ ಎಂದು ವಿಜಯ್ ಕಿರಗಂದೂರು ತಿಳಿಸಿದ್ದಾರೆ.
ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವ ಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.


ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು , ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ ಎಂದು ವಿಜಯ್ ಹೇಳಿದ್ದಾರೆ.


ಹೊಸವರ್ಷ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸುತ್ತಾ , ನಾಡಿನ ಜನತೆಯ ಪ್ರೀತಿ-ವಿಶ್ವಾಸ, ಬೆಂಬಲ ಪ್ರೋತ್ಸಾಹ ಹೀಗೆ ಇರಲಿ ಎಂದು ವಿಜಯ್ ಕಿರಗಂದೂರು ಹಾರೈಸಿದ್ದಾರೆ..

Categories
ಸಿನಿ ಸುದ್ದಿ

ಶ್ರೇಯಸ್ ಚಿಂಗ ಈಗ ಕಿಂಗ್! ಕಿಂಗ್ ಅಂಡ್ ಕ್ವೀನ್ ಸಿನಿಮಾಗೆ ಇತಿ ಆಚಾರ್ಯ ನಾಯಕಿ…

ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಯುಗ ಎಂದರೆ ತಪ್ಪಾಗಲಾರದು. ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ.

ಈ ಹಿಂದೆ ಡೇವಿಡ್ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಶ್ರೇಯಸ್ ಚಿಂಗ ನಾಯಕನಾಗಿ ಹಾಗೂ ಇತಿ ಆಚಾರ್ಯ ನಾಯಕಿಯಾಗಿ ಅಭಿನಯಿಸುತ್ತಿರುವ “ಕಿಂಗ್ & ಕ್ವೀನ್” ಚಿತ್ರದ ಪೋಸ್ಟರ್ದೆ‌‌ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಪುತ್ರ ಯತಿರಾಜ್ ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಹೊಸ ವರ್ಷದ ಆರಂಭದ ದಿನ ಈ ಹೊಸ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅರ್ಜುನ್ ಸುಬ್ರಹ್ಮಣ್ಯ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.

ಶ್ರೇಯಸ್ ಚಿಂಗ ಅಭಿನಯದ “ಡೇವಿಡ್” ಚಿತ್ರವನ್ನು ನಿರ್ಮಿಸಿರುವ ಪ್ರಸಾದ್ ರುದ್ರಮುನಿ ನಿರಗಂಟಿ, ಪ್ರದೀಪ್ ಅಬ್ಬಯ್ಯ ಹಾಗೂ ವರುಣ್ ರಾಘವೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದಲ್ಲಿ ನಾಲ್ಕು ಸುಮಧುರ ಹಾಡುಗಳಿದೆ. ಅದ್ಭುತ ಗಾಯನದ ಮೂಲಕ ಜನಮನಸೂರೆಗೊಂಡಿರುವ ALL OK ಸಂಗೀತ ನೀಡಲಿದ್ದಾರೆ.

ಚಿತ್ರದಲ್ಲಿ ಮೈನವಿರೇಳಿಸುವ ಆರು ಸಾಹಸ ಸನ್ನಿವೇಶಗಳಿದೆ‌. ಚೇತನ್ ಡಿಸೋಜ, ಚಾಮರಾಜ್, ರವಿ ಜಮಖಂಡಿ, ರೋಹಿತ್ ಅರುಣ್ ಸಾಹಸ ಸಂಯೋಜಿಸಲಿದ್ದಾರೆ.

ಶ್ರೇಯಸ್ ಚಿಂಗ, ಇತಿ ಆಚಾರ್ಯ, ಶೋಭ್ ರಾಜ್, ಯತಿರಾಜ್ ಜಗ್ಗೇಶ್, ಲಲಿತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Categories
ಸಿನಿ ಸುದ್ದಿ

ಹೊಸ ಅವತಾರ ತಾಳಿದ ವಿನಯ್ ರಾಜಕುಮಾರ್: ಪೆಪೆ ಲುಕ್ ಕಂಡು ದೊಡ್ಮನೆ ಫ್ಯಾನ್ಸ್ ಫಿದಾ…

ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ರಗಡ್ ಟೀಸರ್ ಝಲಕ್ ಸಿನಿ ರಸಿಕರಲ್ಲಿ ಒಂದಷ್ಟು ಕುತೂಹಲವನ್ನು ಹುಟ್ಟು ಹಾಕಿದೆ. ಇದೀಗ ಚಿತ್ರತಂಡ ಹೊಸ ವರ್ಷಕ್ಕೆ ಮಾಸ್ ಫೀಲ್ ಇರೋ ರಗಡ್ ಪೋಸ್ಟರ್ ಬಿಡುಗಡೆ ಮಾಡಿದೆ. ವಿನಯ್ ರಾಜ್ ಕುಮಾರ್ ನಯಾ ಅವತಾರ, ಮಾಸ್ ಲುಕ್ ಚಿತ್ರ ಪ್ರೇಮಿಗಳ ಗಮನ ಸೆಳೆಯುತ್ತಿದೆ.

ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಪೆಪೆ’ ಚಿತ್ರತಂಡ ನಿರತವಾಗಿದೆ. ಟೈಟಲ್ ಮೂಲಕವೇ ಕುತೂಹಲವನ್ನು ಹುಟ್ಟುಹಾಕಿರುವ ಈ ಚಿತ್ರ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ. ಗ್ಯಾಂಗ್ ಸ್ಟಾರ್ ಸಿನಿಮಾ ಇದಾಗಿದ್ದು, ವಿನಯ್ ರಾಜ್ ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಒಂದೇ ಜಾನರ್ ಸಿನಿಮಾಗೆ ಒಗ್ಗಿ ಕೊಳ್ಳದೇ, ಪ್ರತಿ ಬಾರಿ ವಿಭಿನ್ನ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುವ ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ಕಂಪ್ಲೀಟ್ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಗ್ಯಾಂಗ್ ಲೀಡರ್ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದು, ಟೀಸರ್ ಹಾಗೂ ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಇದಕ್ಕೆ ಸಾಕ್ಷಿಯಾಗಿವೆ. ದೊಡ್ಮನೆ ಅಭಿಮಾನಿ ಬಳಗ ವಿನಯ್ ಲುಕ್ ಕಂಡು ಥ್ರಿಲ್ ಆಗಿದ್ದು ಸಿನಿಮಾ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್ ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ. ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆ ಹಿಡಿಯಾಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಮತ್ತು ಶ್ರೀರಾಮ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಹೊಸ ವರ್ಷಕ್ಕೆ ಹೊಸ ಲುಕ್: ಬ್ರಹ್ಮ ಕಮಲ ಫಸ್ಟ್ ಲುಕ್ ರಿಲೀಸ್-ಇದು ಅದ್ವಿತೀಯ ಚಿತ್ರ…

ಸಾಕಷ್ಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ಅವರು ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ “ಬ್ರಹ್ಮಕಮಲ”. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.

ಹೊಸ ವರ್ಷಕ್ಕೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ.

ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ.

ಈಗಾಗಲೇ ಚಿತ್ರೀಕರಣ ಮುಗಿಸಿ ಸೆನ್ಸಾರ್ ಮಂಡಳಿಯಿಂದ “ಯು” ಸರ್ಟಿಫಿಕೇಟ್ ಪಡೆದುಕೊಂಡಿದೆ.

” ಬ್ರಹ್ಮಕಮಲ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಧ್ವಿತಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್,ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಚಿತ್ರದಲ್ಲಿದ್ದಾರೆ.

ಛಾಯಾಗ್ರಹಣ ಲೋಕೇಂದ್ರ ಸೂರ್ಯನಾರಾಯಣ, ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಹೊಣೆ ಹೊತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಎ.ಕೆ. ಪುಟ್ಟರಾಜು ಮತ್ತು ಪ್ರಮಿಳಾ ಸುಬ್ರಹ್ಮಣ್ಯಂ. ನಿರ್ಮಾಣ ನಿರ್ವಹಣೆ ನಾಗರತ್ನ ಕೆ ಹೆಚ್, ವಸ್ತ್ರ ವಿನ್ಯಾಸ ಋತು ಚೈತ್ರ, ಕಲೆ ಬಸವರಾಜ್ ಆಚಾರ್ ಕೆ ಆರ್.

Categories
ಸಿನಿ ಸುದ್ದಿ

ಹೊಂದಿಸಿ ಬರೆದ ಭಟ್ರು! ‘ನೀ ಇರದ ನಾಳೆ’ ಲಿರಿಕಲ್ ವಿಡಿಯೋ ರಿಲೀಸ್…

ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ಆರಂಭದಿಂದಲೂ ಎಲ್ಲರ ಗಮನ ಸೆಳೆಯುತ್ತಿದೆ. ಬಿಡುಗಡೆ ಸನಿಹದಲ್ಲಿರುವ ಚಿತ್ರತಂಡ, ಸಿನಿಮಾ ಪ್ರಚಾರ ಕಾರ್ಯವನ್ನು ಬಿಡುವಿಲ್ಲದೇ ನಡೆಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟೀಸರ್, ಹಾಡುಗಳು ಸಿನಿ ಪ್ರೇಕ್ಷಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ. ಇದೀಗ ಚಿತ್ರದ ಮತ್ತೊಂದು ಬಹು ನಿರೀಕ್ಷಿತ ‘ನೀ ಇರದ ನಾಳೆ’ ಹಾಡಿನ ಲಿರಿಕಲ್ ವೀಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿದೆ. ನಿರ್ದೇಶಕ ಯೋಗರಾಜ್ ಭಟ್ ಈ ಹಾಡನ್ನು ಮೆಚ್ಚಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಹೊಂದಿಸಿ ಬರೆಯಿರಿ’ ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿದ್ದು, ಪ್ರತಿ ಹಾಡುಗಳು ಸಿನಿಮಾದಲ್ಲಿ ಬಹು ಮುಖ್ಯ ಪಾತ್ರ ವಹಿಸಲಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಪ್ರೇಕ್ಷಕರ ಮನಗೆದ್ದಿದ್ದು, ಇದೀಗ ಚಿತ್ರದ ಮತ್ತೊಂದು ಬಹು ನಿರೀಕ್ಷಿತ ಹಾಡು ‘ನೀ ಇರದ ನಾಳೆ ಬೇಕಿಲ್ಲ ನನಗೆ’ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ. ಈ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದ್ದು, ಸಂಬಂಧಗಳಲ್ಲಿರುವ ಗೊಂದಲವನ್ನು ವ್ಯಕ್ತಪಡಿಸುವ ಹಾಡು ಇದಾಗಿದೆ. ಪ್ರವೀಣ್ ತೇಜ್, ಭಾವನ ರಾವ್ ಈ ಹಾಡಿನ ಭಾಗವಾಗಿದ್ದು, ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಹಾಡು ಇದಾಗಿದೆ. ಕೀರ್ತನ್ ಹೊಳ್ಳ, ಐಶ್ವರ್ಯ ರಂಗರಾಜನ್ ಹಾಡಿಗೆ ದನಿಯಾಗಿದ್ದು ಜೋ ಕೋಸ್ಟ ಸಂಗೀತ ನಿರ್ದೇಶನ ಹಾಡಿಗಿದೆ. ಸಂಡೆ ಸಿನಿಮಾಸ್ ಯೂಟ್ಯೂಬ್ ಚಾನೆಲ್ ನಲ್ಲಿ ಹಾಡು ಬಿಡುಗಡೆಯಾಗಿದೆ.

ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲರ್ ಫುಲ್ ಕಲಾವಿದರ ಮುಖ್ಯ ಭೂಮಿಕೆ ಚಿತ್ರದಲ್ಲಿದೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ಬಹು ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಒನ್ ಲೈನ್ ಕಹಾನಿ ಸುತ್ತ ಹೆಣೆಯಲಾದ ಚಿತ್ರವೇ ‘ಹೊಂದಿಸಿ ಬರೆಯಿರಿ’. ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಚಿತ್ರಣ ಹಾಗೂ ಭಾವನಾತ್ಮಕ ಪಯಣ ಇದೆ.

ಜೋ ಕೋಸ್ಟ ಸಂಗೀತ ನಿರ್ದೇಶನ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ, ಶಾಂತಿ ಸಾಗರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದು. ಫೆಬ್ರವರಿಯಲ್ಲಿ ಸಿನಿಮಾ ತೆರೆಗೆ ಬರೋ ಸಾಧ್ಯತೆ ಇದೆ.

error: Content is protected !!