Categories
ಸಿನಿ ಸುದ್ದಿ

ಇದು ಕನ್ನಡದ ಆಶಿಕಿ! ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…

ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಅಜಯ್ ರಾವ್, ಪ್ರಯತ್ನ ಅನ್ನುವುದು ಒಂದು ಯಶಸ್ಸು. ಪ್ರಯತ್ನ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದು ಯಾವುದಕ್ಕೂ ಸಾರ್ಥಕತೆ ಇರುವುದಿಲ್ಲ. ಮಹಿಳಾ ನಿರ್ದೇಶಕಿಯ ಪ್ರಯತ್ನ..ಸಂದೀಪ್ ತೆರೆಮೇಲೆ ಹೇಗೆ ಕಾಣಿಸುತ್ತಾರೆ. ನಾಯಕನಾಗಿ ಪಾತ್ರ ಹೇಗೆ ಪಾತ್ರ ನಿರ್ವಹಿಸುತ್ತಾರೆ ಅನ್ನೋದನ್ನು ನೋಡೋದಿಕ್ಕೆ ನಾನು ಕಾತುರನಾಗಿದ್ದೆ. ಸಂದೀಪ್ ಅವರ ದೊಡ್ಡ ಜರ್ನಿ ಇಲ್ಲಿಂದ ಸಾಗಲಿ. ನಿರ್ಮಾಪಕರಿಗೆ ದುಡ್ಡು ಬರಲಿ. ನನ್ನ ಸಿನಿಮಾ ಜರ್ನಿಯಲ್ಲಿ ದುಡ್ಡು ಮಾಡಿದ್ದನ್ನು ನೋಡಿದ್ದೇನೆ. ಕಳೆದುಕೊಂಡಿದ್ದನ್ನು ನೋಡಿದ್ದೇನೆ. ನಿರ್ಮಾಪಕರಿಗೆ ಒಳ್ಳೆ ದುಡ್ಡು ಬಂದರೆ ಇಡೀ ಸಿನಿಮಾ ಗೆದ್ದಂತೆ ಎಂದು ತಿಳಿಸಿದರು.

ನಿರ್ದೇಶಕಿ ಜೆ.ಚಂದ್ರಕಲಾ, ಮಹಿಳಾ ನಿರ್ದೇಶಕಿರು ಬಳಹ ಅಪರೂಪ ಅಂತಾ ಎಲ್ಲರೂ ಹೇಳುತ್ತಿದ್ದರು. ಯಾಕೆ ವಿರಳ ಅಂದರೆ. ಮಹಿಳಾ ನಿರ್ದೇಶಕಿಯರನ್ನು ನಂಬಿಕೊಂಡು ಯಾವ ನಿರ್ಮಾಪಕರು ದುಡ್ಡ ಹಾಕುತ್ತಾರೆ. ನಾನು ಇಂಡಸ್ಟ್ರೀಗೆ ಬಂದು ಹದಿನಾರರಿಂದ ಹದಿನೇಳು ವರ್ಷವಾಯ್ತು. ಏನೂ ದಬಾಕೋಕೆ ಆಗಿಲ್ಲ. ನಾನು ಏನಾದರೂ ಪ್ರೋವ್ ಮಾಡಬೇಕು. ನಾವುಗಳು ಅದೇ ಪ್ರಯತ್ನದಲ್ಲಿ ಇದ್ದೇವೆ. ಆಶಿಕಿ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ. ಲಿಯೋ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಸಿನಿಮಾಗೆ ಸಪೋರ್ಟ್ ಮಾಡಿ ಎಂದರು.

ನಿರ್ಮಾಪಕ ಜಿ ಚಂದ್ರಶೇಖರ್ ಮಾತನಾಡಿ, ಸಿನಿಮಾಗೆ ಪ್ರೋತ್ಸಾಹ ಕೊಟ್ಟ ಎಲ್ಲಾ ಟೆಕ್ನಿಷಿಯನ್ಸ್. ನನ್ನ ಸ್ನೇಹಿತರಿಗೆ ಎಲ್ಲರಿಗೂ ಧನ್ಯವಾದ. ನನ್ನ ಚಿತ್ರದ ಬಗ್ಗೆ ನಾನು ಮಾತಾಡಿದರೆ ಚೆನ್ನಾಗಿರುವುದಿಲ್ಲ. ಜನರು ನೋಡಿ ಮಾತನಾಡಬೇಕು ಎಂದು ತಿಳಿಸಿದರು.

ಜೆ ಚಂದ್ರಕಲಾ(JCK) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್, ಪ್ರದೀಪ್ ರಾಜ್ ನಾಯಕರಾಗಿ ಅಭಿನಯಿಸಿದ್ದು, ನಾಯಕಿಯಾಗಿ ಐಶ್ವರ್ಯ ಸಿಂಧೋಗಿ ಬಣ್ಣ ಹಚ್ಚಿದ್ದಾರೆ. ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಹಿರಿಯ ತಾರಾಬಳಗ ಚಿತ್ರದಲ್ಲಿದೆ.

ಮ್ಯೂಸಿಕಲ್ ಲವ್ ಸ್ಟೋರಿ ಜೊತೆಗೆ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಪ್ರತಿ ಹಾಡುಗಳು ಡಿಫ್ರೆಂಟ್ ಆಗಿ ಮೂಡಿಬಂದಿವೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀಸ್ ಬ್ಯಾನರ್ ನಡಿ ಜಿ ಚಂದ್ರಶೇಖರ್ ಬಂಡವಾಳ ಹೂಡಿದ್ದು, ರಾಜರತ್ನ, ನಿತಿನ್ ಅಪ್ಪಿ ಛಾಯಾಗ್ರಾಹಣ, ಲಿಯೋ ಸಂಗೀತ ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ. ಇತ್ತೀಚೆಗಷ್ಟೇ ಸೆನ್ಸಾರ್ ಪಾಸಾಗಿರುವ ಆಶಿಕಿ ಸಿನಿಮಾ ದಸರಾಗೆ ತೆರೆಗೆ ಬರಲಿದೆ.

Categories
ಸಿನಿ ಸುದ್ದಿ

ನಮ್​ ಕನಸ ಕನ್ನಡ: ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಹಾಡು ಬಂತು…

ಸತೀಶ್​ ಬತ್ತುಲ ನಿರ್ದೇಶನದ ‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಂದಿದೆ. ‘ನಮ್​ ಕನಸ ಕನ್ನಡ …’ ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ ಕೇಳುಗರಿಂದ ಮೆಚ್ಚುಗೆ ಪಡೆಯುತ್ತಿದೆ.


‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರವನ್ನು ‘ಜಬರ್ದಸ್ತ್’ ಖ್ಯಾತಿಯ ಸತೀಶ್ ಬತ್ತುಲ ನಿರ್ದೇಶಿಸಿದ್ದಾರೆ. ಶಿವಕುಮಾರ್, ಅಕ್ಷತಾ ಶ್ರೀಧರ್ ಮತ್ತು ಅರ್ಚನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವನ್ನು ಮಿಥುನಾ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈನ್ಸ್ ಸ್ಟುಡಿಯೋಸ್​ನಡಿ ಎಂ.ಎಂ. ಅರ್ಜುನ್ ಮತ್ತು ಕಮಲ್ ಮೇಡಗೋಣಿ ನಿರ್ಮಿಸುತ್ತಿದ್ದಾರೆ. ಇದೊಂದು ರೊಮ್ಯಾಂಟಿಕ್​ ಥ್ರಿಲ್ಲರ್​ ಚಿತ್ರವಾಗಿದ್ದು, ಏಕಕಾಲದಲ್ಲಿ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲನಲ್ಲಿ ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ.


ಈ ಪ್ಯಾನ್​ ಇಂಡಿಯಾ ಚಿತ್ರದ ಬಗ್ಗೆ ಕುರಿತು ಮಾತನಾಡುವ ನಿರ್ಮಾಪಕರಾದ ಎಂ.ಎಂ.ಅರ್ಜುನ್ ಮತ್ತು ಕಮಲ್ ಮೇಡಗೋಣಿ, ‘ನಿರ್ದೇಶಕ ಸತೀಶ್ ಅವರ ನಿರೂಪಣೆ ನಮಗೆ ಇಷ್ಟವಾಯಿತು. ಚಿತ್ರವನ್ನು ಬಹಳ ಚೆನ್ನಾಗಿ ರೂಪಿಸಿದ್ದಾರೆ ಅವರು. ನಿರ್ಮಾಪಕನಾಗಿ ನಾನು ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ಇದೆ. ಇದೊಂದು ಯೂನಿವರ್ಸಲ್ ಕಥೆಯಾದ್ದರಿಂದ ಪ್ಯಾನ್​-ಇಂಡಿಯಾ ಚಿತ್ರವನ್ನಾಗಿ ಬಿಡುಗಡೆ ಮಾಡುತ್ತಿದ್ದೇವೆ. ಇದು ಚಿತ್ರದ ಎರಡನೇ ಹಾಡಾಗಿದ್ದು, ಇದಕ್ಕೂ ಮುನ್ನ ‘ನಿನ್ನ ನೋಡಿದ …’ ಎಂಬ ಹಾಡು ಬಿಡುಗಡೆಯಾಗಿದೆ. ಶೀಘ್ರದಲ್ಲೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ’ ಎನ್ನುತ್ತಾರೆ.


ಇದೊಂದು ವಿಭಿನ್ನ ಲವ್ ಎಂಟರ್‌ಟೈನರ್ ಎನ್ನುವ ನಿರ್ದೇಶಕ ಸತೀಶ್ ಬತ್ತುಲ, ‘ಇದೊಂದು ವಿಭಿನ್ನ ಕಥೆ ಇರುವ ಚಿತ್ರ. ನಿರ್ಮಾಪಕರ ಬೆಂಬಲವು ನಮ್ಮನ್ನು ಇಲ್ಲಿಯವರೆಗೆ ಕರೆದೊಯ್ದಿದೆ. ಈ ಪ್ಯಾನ್ ಇಂಡಿಯಾ ಚಿತ್ರವನ್ನು ಎಲ್ಲೂ ರಾಜಿ ಮಾಡಿಕೊಳ್ಳದೆ ನಿರ್ಮಿಸಲಾಗಿದೆ. ನಮ್ಮ ಸಿನಿಮಾದಲ್ಲಿ ಅನುಭವಿ ತಂತ್ರಜ್ಞರು ಕೆಲಸ ಮಾಡಿದ್ದು, ಸಂಗೀತ, ಹಿನ್ನೆಲೆ ಸಂಗೀತ ಮತ್ತು ಛಾಯಾಗ್ರಹಣ ಅದ್ಭುವಾಗಿ ಮೂಡಿಬಂದಿದೆ’ ಎನ್ನುತ್ತಾರೆ.


‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರದಲ್ಲಿ ಶಿವಕುಮಾರ್, ಹುಮೇ ಚಂದ್, ಅಕ್ಷತಾ ಶ್ರೀಧರ್, ಅರ್ಚನಾ, ಮಾಧವಿ ಲತಾ ಮುಂತಾದವರು ನಟಿಸಿದ್ದು, ಆರೀಫ್​​ ಲಲಾನಿ ಅವರ ಛಾಯಾಗ್ರಹಣ ಮತ್ತು ಕಾರ್ತಿಕ್ ಕೊಡಕಂಡ್ಲ ಅವರ ಸಂಗೀತ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಈ ವಾರ ಅಪ್ಪಳಿಸಲಿದೆ ಮಾನ್ಸೂನ್ ರಾಗ: ನೋಡೋರಿಗೆ ಖುಷಿ ಯೋಗ…

ನಟ ಡಾಲಿ ಧನಂಜಯ್, ರಚಿತಾರಾಮ್ ಅಭಿನಯದ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಸೆ.16 ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ತನ್ನ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ‌ ಹುಟ್ಟಿಸಿರುವ ಚಿತ್ರ ಇದಾಗಿದ್ದು, ಬಡವ ರಾಸ್ಕಲ್, ರತ್ನನ್ ಪ್ರಪಂಚ ಚಿತ್ರಗಳ ನಂತರ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರವಿದು.


ಮಾನ್ಸೂನ್ ರಾಗ ಪಕ್ಕಾ ರೊಮ್ಯಾಂಟಿಕ್ ಲವ್‌ಸ್ಟೋರಿ ಇರುವ ಚಿತ್ರವಾಗಿದ್ದು,
ತನ್ನ ವಿಭಿನ್ನ ಟೀಸರ್ ಹಾಗೂ ಹಾಡಿನ ಮೂಲಕವೇ ಸಿನಿಪ್ರಿಯರ ಗಮನ ಸೆಳೆದಿದೆ. ಧನಂಜಯ್ ಅವರ ಜೊತೆಗೆ ಬೆಡಗಿ ರಚಿತಾರಾಮ್ ನಾಯಕಿಯಾಗಿ
ಅಭಿನಯಿಸಿದ್ದಾರೆ. ಪುಷ್ಪಕವಿಮಾನ ಖ್ಯಾತಿಯ ರವೀಂದ್ರನಾಥ್ ಅವರ ನಿರ್ದೇಶನದಲ್ಲಿ
ಮೂಡಿಬಂದಿರುವ ಈ ಚಿತ್ರಕ್ಕೆ ವಿಖ್ಯಾತ್ ಎ.ಆರ್. ಅವರು ಬಂಡವಾಳ ಹಾಕಿ ನಿರ್ಮಿಸಿದ್ದಾರೆ.

ಇಡೀ ಚಿತ್ರದ ಕಥೆ ಮುಂಗಾರು ಮಳೆಯೊಳಗೇ ನಡೆಯುತ್ತದೆ ಎನ್ನಲಾಗಿದ್ದು, ಟೀಸರ್‌ನಲ್ಲಿ ಮಳೆಯ ಜೊತೆಗೆ ನೆರಳು ಬೆಳಕಿನ ಹಿನ್ನೆಲೆಯ ಚಿತ್ರೀಕರಣವೂ ಸೊಗಸಾಗಿ ಮೂಡಿಬಂದದೆ. ಎಸ್.ಕೆ. ರಾವ್
ಅವರ ಸಿನಿಮಾಟೋಗ್ರಫಿ ಈ ಚಿತ್ರಕ್ಕಿದ್ದು, ಚಿತ್ರದ ಸುಂದರ ಹಾಡುಗಳಿಗೆ ಅನೂಪ್ ಸೀಳಿನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

Categories
ಸಿನಿ ಸುದ್ದಿ

ಯಶ್ ಶೆಟ್ಟಿ ಈಗ ಹೀರೋ! ರಾಘಣ್ಣನ ಸ್ಪೆಷಲ್ ಆಪರೇಷನ್: ಕಲಿವೀರ ನಿರ್ದೇಶಕರ ಸಿನಿಮಾಗೆ ಚಾಲನೆ…

ಕನ್ನಡ ದೇಶದೋಳ್, ಕಲಿವೀರ ಸಿನಿಮಾಗಳ ಸಾರಥಿ ಅವಿರಾಮ್ ಹೊಸ ಸಿನಿಮಾ ಸೆಟ್ಟೇರಿದೆ. ರಾಘವೇಂದ್ರ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಅಪರೇಷನ್ ಯು ಚಿತ್ರದಲ್ಲಿ ಉತ್ತಮ್ ಪಾಲಿ, ಯಶ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿದ್ದು, ಸೋನಲ್ ಮೊಂಥೆರೋ-ಲಾಸ್ಯ ನಾಗರಾಜ್ ನಾಯಕಿಯರಾಗಿ ಬಣ್ಣ ಹಚ್ಚಲಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದ್ದು, ರಾಘವೇಂದ್ರ ರಾಜ್ ಕುಮಾರ್ ಪತ್ನಿ ಮಂಗಳ ಪತಿಗೆ ಸಿನಿಮಾಗೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಅವಿರಾಮ್ ಮಾತನಾಡಿ, ಅಪರೇಷನ್ ಯು ಟೈಟಲ್ ತುಂಬಾ ವಿಶೇಷವಾಗಿದೆ. ಸೈಕಾಲಾಜಿಕಲ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು. ಸಾಮಾನ್ಯ ಮನುಷ್ಯನನ್ನು ತಟ್ಟುವ, ಬಡಿದೆಬ್ಬಿಸುವ, ಎಚ್ಚರಿಕೆ ನೀಡುವ ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ಮಂಜುನಾಥ್ ಅವರಂತಹ ಫ್ಯಾಷನೇಟೇಡ್ ನಿರ್ಮಾಪಕರು ಈ ಚಿತ್ರ ನಿರ್ಮಾಣ ಮಾಡುತ್ತಿರುವುದು ಹೆಗ್ಗಳಿಕೆ. ಕಲಿವೀರ ಬಳಿಕ ಇದು ಒಳ್ಳೆ ಪ್ರಾಜೆಕ್ಟ್. ಇದು ಬೇರೆ ತರ ರೀತಿ ಸಿನಿಮಾ. ಚಿತ್ರದಲ್ಲಿ ರಾಘಣ್ಣ ಪಾತ್ರ ವಿಶೇಷವಾಗಿರುತ್ತದೆ. ಕಂಪ್ಲೀಟ್ ಆಗಿ ಇಲ್ಲಿ ರಿವೀಲ್ ಮಾಡಲು ಆಗುವುದಿಲ್ಲ. ಫಸ್ಟ್ ಲುಕ್ ಪ್ರೆಸೆಂಟ್ ಮಾಡಿದಾಗ ರಿವೀಲ್ ಮಾಡುತ್ತೇವೆ. ಸಮಾಜಕ್ಕೆ ಬೇಕಾದ ಮೋಟಿವೇಷನ್ ರೀಚ್ ಮಾಡುವ ಪಾತ್ರ ಇದಾಗಿದ್ದು, ರಾಘಣ್ಣ ನಮ್ಮ ಸಿನಿಮಾದಲ್ಲಿ ಆಕ್ಟ್ ಮಾಡುತ್ತಿರುವುದು ನಮಗೆ ಖುಷಿ ಇದೆ ಎಂದರು.

ನಿರ್ಮಾಪಕರಾದ ಮಂಜುನಾಥ್, ನಾನು ನನ್ನ ಮಗಳಿಗೋಸ್ಕರ್ ಮಾಡುತ್ತಿರುವ ಸಿನಿಮಾವಿದು. ಶ್ರೀಲಂಕಾ ಹೋದಾಗ ಕೇಳಿದ ಸ್ಟೋರಿ ನಾನು. ಈ ಸ್ಟೋರಿ ಮಾಡಬೇಕು ಅಂತಾ ನನ್ನ ತಲೆಯಲ್ಲಿ ಬಂದಿದ್ದು. ಆ ಬಳಿಕ ನಿರ್ದೇಶಕರ ಜೊತೆ ಚರ್ಚೆ ನಡೆಸಿದ್ದೇವೆ. ನಿರ್ದೇಶಕರು ಈ ಸಿನಿಮಾಗೆ ತುಂಬಾ ಚೆನ್ನಾಗಿ ಜೀವ ತುಂಬಿದ್ದಾರೆ. ಸಿನಿಮಾದ ಕಥೆಗೆ ಬೇಕಾದ ಎಲ್ಲಾ ನಟರನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಸಿನಿಮಾನೇ ಹೀರೋ ಆಗಿದೆ ಎಂದು ತಿಳಿಸಿದರು.

ವಿದ್ಮಯಿ ಪ್ರೊಡಕ್ಷನ್ ನಡಿ ಉದ್ಯಮಿ ಮಂಜುನಾಥ್ ಎಂಬುವವರು ಚಿತ್ರ ನಿರ್ಮಾಣ ಮಾಡುತ್ತಿದ್ದು, ಆರ್ಮುಖ ರವಿಶಂಕರ್, ಧರ್ಮ, ಅವಿನಾಶ್, ಮಾಳವಿಕ ಅವಿನಾಶ್, ಸ್ಪರ್ಶ ರೇಖಾ, ಗೋವಿಂದೇ ಗೌಡ ಸೇರಿದಂತೆ ಹಲವು ನಟಿಸುತ್ತಿದ್ದು, ರಾಘವೇಂದ್ರ ವಿ ಸಂಗೀತ, ಹಾಲೇಶ್ ಎಸ್ ಸಂಕಲನ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಆಪರೇಷನ್ ಯು ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ಅಕ್ಟೋಬರ್ ಮೊದಲ ವಾರದಿಂದ ಶುರುವಾಗಲಿದೆ.

Categories
ಸಿನಿ ಸುದ್ದಿ

ರಾಜ್ಯೋತ್ಸವಕ್ಕೆ ರಾಣನ ಆಗಮನ: ನಂದಕಿಶೋರ್ ನಿರ್ದೇಶನದಲ್ಲಿ ಶ್ರೇಯಸ್ ಹೀರೋ…

ಕೆ.ಮಂಜು ಅರ್ಪಿಸುವ,
ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ನಂದಕಿಶೋರ್ ನಿರ್ದೇಶನದಲ್ಲಿ
ಶ್ರೇಯಸ್ ಕೆ ಮಂಜು ನಾಯಕನಾಗಿ ‌ಅಭಿನಯಿಸಿರುವ “ರಾಣ” ಚಿತ್ರ ನವೆಂಬರ್ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‌ರೀಷ್ಮಾ ನಾಣಯ್ಯ ಈ ಚಿತ್ರದ ನಾಯಕಿ. ರಜನಿ ಭಾರದ್ವಾಜ್, ಅಶೋಕ್, ಗಿರಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಕುಮಾರ್, ನಯನ, ರಘು, ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ರವಿವರ್ಮ, ಚೇತನ್,ಡಿಸೋಜ ಡಿಫರೆಂಟ್ ಡ್ಯಾನಿ ಹಾಗೂ ಗಣೇಶ್ ಸಾಹಸ ಸಂಯೋಜನೆ ಮಾಡಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಇಮ್ರಾನ್ ಸರ್ದಾರಿಯಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

Categories
ಸಿನಿ ಸುದ್ದಿ

ಗಾಳಿಪಟ ಬೆಡಗಿ ವೈಭವಿ ಶಾಂಡಿಲ್ಯ ಎಂಥ ಪಾತ್ರ ಹುಡುಕುತ್ತಿದ್ದಾರೆ ಗೊತ್ತಾ?

‘ಗಾಳಿಪಟ 2’ ಚಿತ್ರದಲ್ಲಿ ಅನಂತ್ ನಾಗ್, ಗಣೇಶ್, ದಿಗಂತ್, ರಂಗಾಯಣ ರಘು ಮುಂತಾದ ಪ್ರತಿಭಾವಂತ ಕಲಾವಿದರ ನಡುವೆ ಗಮನ ಸೆಳಯುವ ಇನ್ನೊಬ್ಬರೆಂದರೆ, ಅದು ಶ್ವೇತಾ ಪಾತ್ರಧಾರಿ ವೈಭವಿ ಶಾಂಡಿಲ್ಯ. ಗಣೇಶ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿರುವ ವೈಭವಿ ಮೂಲತಃ ಮರಾಠಿಯವರು. ಈಗಾಗಲೇ ಕೆಲವು ಮರಾಠಿ ಮತ್ತು ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ವೈಭವಿ, ಕೆಲವು ವರ್ಷಗಳ ಹಿಂದೆ ‘ರಾಜ್-ವಿಷ್ಣು’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದರು. ಈಗ ಗಾಳಿಪಟ 2 ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಅಭಿನಯ ಮತ್ತು ಚೆಲುವಿನಿಂದ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚೊತ್ತಿದ್ದಾರೆ.


ಶ್ವೇತಾ ಪಾತ್ರ ತಮ್ಮ ವೃತ್ತಿಜೀವನದಲ್ಲಿ ಬಹಳ ವಿಭಿನ್ನವಾದ ಪಾತ್ರ ಎನ್ನುವ ವೈಭವಿ, ‘ನಾನು ನಿಜಜೀವನದಲ್ಲಿ ಬಹಳ ಮಾತನಾಡುತ್ತೇನೆ. ಆದರೆ, ಈ ಚಿತ್ರದಲ್ಲಿ ನನಗೆ ಅದಕ್ಕೆ ವಿರುದ್ಧವಾದ ಪಾತ್ರ. ಇಲ್ಲಿ ಮಾತು ಕಡಿಮೆ. ಅಷ್ಟೇ ಅಲ್ಲ, ಪ್ರಬುದ್ಧವಾಗಿರುವ ಜೊತೆಗೆ ಎಮೋಷನಲ್ ಆಗಿ ಇರುವಂತಹ ಪಾತ್ರ ನನ್ನದು. ಹಾಗಾಗಿ, ಶ್ವೇತಾ ಪಾತ್ರ ನನಗೆ ಬಹಳ ಕಷ್ಟವಾಯಿತು. ಆದರೆ, ಇಡೀ ಚಿತ್ರತಂಡದ ಸಹಾಯದೊಂದಿಗೆ ಆ ಪಾತ್ರ ನಿರ್ವಹಿಸಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಿಜಕ್ಕೂ ಸವಾಲಿನದ್ದಾಗಿತ್ತು. ಅಷ್ಟು ದೊಡ್ಡ ರಿಸ್ಕ್ ತೆಗೆದುಕೊಂಡು ನಟಿಸಿದ್ದು ಫಲ ನೀಡಿದೆ.

ಜನರ ಪ್ರೀತಿ ನೋಡಿದಾಗ ಬಹಳ ಖುಷಿಯಾಗುತ್ತದೆ’ ಎನ್ನುತ್ತಾರೆ ವೈಭವಿ.
ಚಿತ್ರದಲ್ಲಿ ತಮ್ಮ ಪಾತ್ರ ಮತ್ತು ಅಭಿನಯವನ್ನು ಜನ ಗುರುತಿಸಿ ಮಾತನಾಡುವಾಗ ಹೃದಯ ತುಂಬಿ ಬರುತ್ತದೆ ಎನ್ನುವ ವೈಭವಿ, ‘ನಾನು ನನ್ನ ಕುಟುಂಬದವರೊಡನೆ ಮುಂಬೈನಲ್ಲಿ ಗಾಳಿಪಟ 2 ನೋಡುವುದಕ್ಕೆ ಹೋಗಿದ್ದೆ. ಚಿತ್ರ ನೋಡುವುದಕ್ಕೆ ಜನ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು ಮತ್ತು ಅವರೆಲ್ಲರೂ ನನ್ನನ್ನು ಗುರುತಿಸಿ ಪ್ರೀತಿಯಿಂದ ಮಾತನಾಡಿದರು. ಇತ್ತೀಚೆಗೆ ಉಡುಪಿ, ಮಂಗಳೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಸಂದರ್ಭದಲ್ಲೂ, ನನ್ನನ್ನು ಗಾಳಿಪಟ 2 ಹುಡುಗಿ ಎಂದು ಗುರುತಿಸಿ ಸೆಲ್ಫಿ ತೆಗೆಸಿಕೊಂಡಿದ್ದನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ’ ಎನ್ನುತ್ತಾರೆ.


ಸದ್ಯ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ನಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ವೈಭವಿ, ಆ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ‘’ಮಾರ್ಟಿನ್’ ನನ್ನ ಮೊದಲ ಪ್ಯಾನ್ ಇಂಡಿಯಾ ಚಿತ್ರ. ಅದು ಇನ್ನೊಂದು ಅದ್ಭುತವಾದ ಅನುಭವ. ಈ ಪಾತ್ರ ನನ್ನ ನಿಜಜೀವನಕ್ಕೆ ಬಹಳ ಹತ್ತಿರವಾದ ಪಾತ್ರ. ಬಬ್ಲಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಯಾರಿಗೂ ಹೆದರದ, ಜೀವನದಲ್ಲಿ ಏನಾದರೂ ಸಾಧಿಸುವ ಆಸೆ ಹೊತ್ತಿರುವ ಗಟ್ಟಿ ಹುಡುಗಿಯಾಗಿ ಕಾನಿಸಿಕೊಂಡಿದ್ದೇನೆ’ ಎನ್ನುತ್ತಾರೆ ವೈಭವಿ.


ಒಬ್ಬ ನಟಿಯಾಗಿ ವಿಭಿನ್ನ ಪ್ರಯೋಗಗಳನ್ನು ಮಾಡುವುದಕ್ಕೆ ಇಷ್ಟ ಎನ್ನುವ ವೈಭವಿ, ‘ಯಾವುದೋ ಒಂದು ತರಹದ ಪಾತ್ರಕ್ಕೆ ನನಗೆ ಸೀಮಿತವಾಗುವುದಕ್ಕೆ ಇಷ್ಟವಿಲ್ಲ. ನನಗೆ ಡ್ರಗ್ ಅಡಿಕ್ಟ್ ಆಗಿ ನಟಿಸುವಾಸೆ. ಹಾರರ್ ಚಿತ್ರದಲ್ಲಿ ನಟಿಸುವಾಸೆ. ಮಹಿಳಾ ಪ್ರಧಾನ ಚಿತ್ರಗಳನ್ನು ಮಾಡುವಾಸೆ. ಸೂಕ್ಷ್ಮಸಂವೇದನೆಯ ಚಿತ್ರಗಳ ಜೊತೆಗೆ ರಾಜಮೌಳಿ ಅವರ ಶೈಲಿಯ ಲಾರ್ಜರ್ ದ್ಯಾನ್ ಲೈಫ್ ಚಿತ್ರಗಳಲ್ಲೂ ನಟಿಸುವುದಕ್ಕೆ ಆಸೆ ಇದೆ. ಎಲ್ಲ ತರಹದ ಪಾತ್ರಗಳನ್ನು, ಎಲ್ಲ ಶೈಲಿಯ ನಿರ್ದೇಶಕರ ಜೊತೆಗೆ ಕೆಲಸ ಮಾಡುವುದಕ್ಕೆ ನಾನು ಎದುರು ನೋಡುತ್ತಿದ್ದೇನೆ’ ಎನ್ನುವ ವೈಭವಿ, ಸದ್ಯಕ್ಕೆ ಯಾವುದೇ ಹೊಸ ಚಿತ್ರವನ್ನೂ ಒಪ್ಪಿಕೊಂಡಿಲ್ಲವಂತೆ.


‘ಸದ್ಯ ಹಲವು ಆಫರ್ ಇದೆ. ಕಥೆಗಳನ್ನು ಕೇಳುತ್ತಿದ್ದೇನೆ. ಆದರೆ, ಯಾವುದನ್ನೂ ಓಕೆ ಮಾಡಿಲ್ಲ. ಎಂತಹ ಪಾತ್ರಗಳನ್ನು ಬೇಕಾದರೂ ಮಾಡಬಲ್ಲೆ ಎಂದು ತೋರಿಸಬೇಕು. ನಾನೊಬ್ಬ ವರ್ಸಟೈಲ್ ನಟಿ ಎಂದು ನಿರೂಪಿಸಬೇಕು. ಹಾಗಾಗಿ, ಅಂತಹ ಪಾತ್ರಗಳ ಆಯ್ಕೆ ಮತ್ತು ಹುಡುಕಾಟದಲ್ಲಿದ್ದೇನೆ. ಸದ್ಯದಲ್ಲೇ ಒಂದೊಳ್ಳೆಯ ಸುದ್ದಿ ಕೊಡುತ್ತೇನೆ’ ಎನ್ನುತ್ತಾರೆ ವೈಭವಿ.

Categories
ಸಿನಿ ಸುದ್ದಿ

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಕಬ್ಜ ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್…

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆ ಮಾತಾಗಿದೆ.
ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಕನ್ನಡಿಗರ ಹೆಮ್ಮೆಯ “ಕೆ.ಜಿ.ಎಫ್ 2” ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌. ಕನ್ನಡಿಗರ ಮತ್ತೊಂದು ಹೆಮ್ಮೆಯ “ಕಬ್ಜ” ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ “ಕಬ್ಜ” ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ.

ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, “ಕಬ್ಜ” ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.

ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. .

ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ
ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

Categories
ಸಿನಿ ಸುದ್ದಿ

ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಜೊತೆ ಯಶ್ ಮುಂದಿನ ಸಿನಿಮಾ? ಐತಿಹಾಸಿಕ ಚಿತ್ರಕ್ಕೆ ಸಜ್ಜಾದ ರಾಕಿಭಾಯ್- ವೇಲ್ ಪಾರಿ ಎಂಬ ರಾಜನ ಕಥೆಗೆ ಯಶ್ ಗ್ರೀನ್ ಸಿಗ್ನಲ್?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮುಂದಿನ ಚಿತ್ರವನ್ನು ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೊಂದು ಐತಿಹಾಸಿಕ ಕಥೆ ಅಗಿದ್ದು, ವೇಲ್ ಪಾರಿ ಎಂಬ ರಾಜನ ಕಥೆ ಎನ್ನಲಾಗಿದೆ. ನೆಟ್ ಫ್ಲಿಕ್ಸ್ ಹಾಗು ಕರಣ್ ಜೋಹರ್ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದೆ ಎನ್ನಲಾಗಿದ್ದು, ಇದು ಅಂದಾಜು ಒಂದು ಸಾವಿರ ಕೋಟಿ ಬಜೆಟ್ ನಲ್ಲಿ ತಯಾರಾಗುತ್ತಿದ್ದು ಪ್ಯಾನ್ ವರ್ಲ್ಡ್ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿವೆ

ರಾಕಿಂಗ್ ಸ್ಟಾರ್ ಯಶ್..
ಕನ್ಮ
ಡ ಚಿತ್ರರಂಗ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗವೇ ಒಪ್ಪಿ, ಅಪ್ಪಿಕೊಂಡ ನಟ. ಕನ್ನಡದ ಕೆಜಿಎಫ್ ಮೂಲಕ ಸಾಗರದಾಚೆಗೂ ಕನ್ನಡದ ಕಹಳೆಯನ್ನು ಜೋರಾಗಿಯೇ ಊದಿದ ಅಪರೂಪದ ಹೀರೋ.
ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ತಿರುಗಿ ನೋಡುವಂತೆ ಮಾಡಿದ್ದು ಸುಳ್ಳಲ್ಲ.

ಕೆಜಿಎಫ್ ಬಳಿಕ ಯಶ್ ಆ ಕಥೆ ಕೇಳುತ್ತಿದ್ದಾರೆ. ಈ ಸಿನಿಮಾ ಮಾಡುತ್ತಿದ್ದಾರೆ ಎಂಬೆಲ್ಲ ಮಾತುಗಳು ಕೇಳಿ ಬರುತ್ತಿದ್ದವು. ನಿಜ ಹೇಳೋದಾದರೆ, ಯಶ್ ಯಾವ ಕಥೆ ಕೇಳಿದರು ಅನ್ನುವುದು ಯಾರಿಗೂ ಗೊತ್ತಿಲ್ಲ. ಅಷ್ಟಕ್ಕೂ ಬಾಲಿವುಡ್ ನ ಅನೇಕ ಮಂದಿ ಅವರ ಬಳಿ ಬಂದು ಕಥೆ ಹೇಳಿದರೂ ಯಶ್ ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ. ಈಗ ಹೊಸ ಸುದ್ದಿ ಏನೆಂದರೆ, ಯಶ್ ಹೊಸ ಕಥೆ ಒಪ್ಪಿಕೊಂಡಿದ್ದು, ಮತ್ತೊಂದು ದಾಖಲೆ ಬರೆಯುವಂತಹ ಸಿನಿಮಾ ಮಾಡಲು ಸಜ್ಜಾಗಿದ್ದರೆ ಎಂಬುದು ಈ ಹೊತ್ತಿನ ವಿಶೇಷ.

ಹೌದು, ಯಶ್ ಕೆಜಿಎಫ್ ಬಳಿಕ ಯಾವ ಸಿನಿಮಾ, ಯಾರ ಜೊತೆ ಮಾಡುತ್ತಾರೆ ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.
ಬಲ್ಲ ಮೂಲಗಳ ಪ್ರಕಾರ, ಯಶ್ ಈಗ ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಜೊತೆ ಐತಿಹಾಸಿಕ ಹಿನ್ನೆಲೆ ಇರುವ ಸಿನಿಮಾ‌ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿ ಪಕ್ಕದ ತಮಿಳುನಾಡಿನಿಂದ ನಿಮ್ಮ ‘ಸಿನಿಲಹರಿ’ ಕಿವಿಗೆ ಅಪ್ಪಳಿಸಿದೆ.

ಶಂಕರ್ ಮತ್ತು ಯಶ್ ಕಾಂಬಿನೇಶನ್ ಸಿನಿಮಾ ಅಂದರೆ ನಿಜಕ್ಕೂ ಅದೊಂದು ಬಹು ನಿರೀಕ್ಷೆಯ ಸಿನಿಮಾ ಆಗಲಿದೆ ಎಂಬುದು ದಿಟ. ಅಂದಹಾಗೆ, ಆ ಚಿತ್ರ ನೆಟ್ ಫ್ಲಿಕ್ಸ್ ಮತ್ತು ಕರಣ್ ಜೋಹರ್ ಸೇರಿ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅದು ಸುಮಾರು ಒಂದು ಸಾವಿರ ಕೋಟಿ ಬಜೆಟ್ ಸಿನಿಮಾ ಅನ್ನುವ ಮಾತುಗಳೂ ಕೇಳಿಬರುತ್ತಿವೆ.

ಇನ್ನು ಆ ಚಿತ್ರಕ್ಕೆ ‘ವೇಲ್ ಪಾರಿ’ ಎಂದು ಹೆಸರನ್ನಿಡಲಾಗಿದೆ ಎಂಬ ಮಾತೂ ಹರಿದಾಡಿದೆ. ಅದೊಂದು ಐತಿಹಾಸಿಕ ಸಿನಿಮಾ ಆಗಿದ್ದು, ಒಂದು ನಾವೆಲ್ ಬೇಸ್ಡ್ ಸಿನಿಮಾ ಎನ್ನಲಾಗುತ್ತಿದೆ. ಒಬ್ಬ ರಾಜನ ಕಥೆ ಅದಾಗಿದ್ದು, ಪಾರಿ ಎಂಬ ರಾಜನ ಹೋರಾಟ, ಆವೇಶ ಹೇಗಿತ್ತು ಎಂಬುದನ್ನು ಚಿತ್ರದಲ್ಲಿ ಹೇಳಲಾಗುತ್ತಿದೆಯಂತೆ.

ಇನ್ನು ಸು. ವೆಂಕಟೇಸನ್ ಎಂಬ ಲೇಖಕರ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎಂಬುದು ಸುದ್ದಿ.
ಇಲ್ಲಿ ಯಶ್ ಅವರು ಪಾರಿ ಎಂಬ ರಾಜನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ರಾಮ್ ಚರಣ್ ಸಿನಿಮಾ ಆಗುತ್ತಿದ್ದು, ಆ ಸಿನಿಮಾ ನಂತರ ಯಶ್ ಭಿನಯದ ವೇಲ್‌ಪಾರಿ ಸಿನಿಮಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ.

ಅದೇನೆ ಇರಲಿ, ಈ ಸಿನಿಮಾ ಮಾಹಿತಿ ಎಷ್ಟರಮಟ್ಟಿಗೆ ಸರಿ ಅನ್ನುವುದಕ್ಕೆ ಇಷ್ಟರಲ್ಲೇ ಉತ್ತರ ಸಿಗಲಿದೆ. ಸದ್ಯಕ್ಕೆ ಈ ಸುದ್ದಿ ಪಕ್ಕಾ ಎನ್ನುವುದಕ್ಕೆ ಇನ್ನೂ ಸಮಯವಿದೆ. ಸಿನಿಲಹರಿ ಇಂಥದ್ದೊಂದು ಸುದ್ದಿ ನೀಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಸಿನಿಮಾ ಅನೌನ್ಸ್ ಬೇಗನೇ ಆಗಲಿದೆ.

Categories
ಸಿನಿ ಸುದ್ದಿ

ಛೀ ಕಳ್ಳ ಎಂಬ ಗ್ರಾಮೀಣ ಸೊಗಡಿನ ಹಾಡು: ಬೆಂ.ಕೋ.ಶ್ರೀ ಪುತ್ರನ ಕುಣಿತ- ಇದು ನವೀನ ಗೀತೆ…

ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಬೆಂ.ಕೋ.ಶ್ರೀ ಅವರ ಪುತ್ರ ಅಕ್ಷರ್ ಹಾಗೂ “ಏಕ್ ಲವ್ ಯಾ” ಬೆಡಗಿ ರೀಷ್ಮಾ ನಾಣಯ್ಯ ಅಭಿನಯಿಸಿರುವ “ಛೀ ಕಳ್ಳ” ಆಲ್ಬಂ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗಾಯಕ ನವೀನ್ ಸಜ್ಜು ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಆಲ್ಬಂ(ವಿಡಿಯೋ ಸಾಂಗ್) ಪ್ರತಿಷ್ಠಿತ A2 music ಸಂಸ್ಥೆ ಮೂಲಕ ಬಿಡುಗಡೆಯಾಗಿದೆ. ಈವರೆಗೂ ಸಾಕಷ್ಟು ಜನಪ್ರಿಯ ಸಿನಿಮಾಗಳ ಹಾಡುಗಳನ್ನು ಹಾಗೂ ಆಲ್ಬಮ್ ಗಳನ್ನು A2 music ಸಂಸ್ಥೆ ಬಿಡುಗಡೆ ಮಾಡಿದೆ.

ಪನರ್ವ್ ಆಕರ್ಷ್ ನಿರ್ದೇಶಿಸಿರುವ ಈ ಅದ್ಭುತ ಗೀತೆ (ವಿಡಿಯೋ ಸಾಂಗ್)ಯನ್ನು ವಿಸ್ಮಯ ಜಗ ಬರೆದಿದ್ದಾರೆ. ವಿಸ್ಮಯ ಜಗ ಅವರೆ ರಾಗ ಸಂಯೋಜನೆ ಕೂಡ ಮಾಡಿದ್ದಾರೆ.

ಇತ್ತೀಚೆಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಿರ್ಮಾಪಕ ಬೆಂ.ಕೋ.ಶ್ರೀ “ಛೀ ಕಳ್ಳ” ಆಲ್ಬಂ ಬಿಡುಗಡೆ ಮಾಡಿ ಶುಭ ಹಾರೈಸಿದರು.

“ಛೀ ಕಳ್ಳ” ಆಲ್ಭಂ ಬಹಳ ಚೆನ್ನಾಗಿದೆ.
ನಾನು ಏಳು ಚಿತ್ರಗಳನ್ನು ನಿರ್ಮಿಸಿದ್ದೇನೆ. ಆ ಪೈಕಿ ಕೆಲವು ಚಿತ್ರಗಳಿಗೆ ರಾಜ್ಯ ಪ್ರಶಸ್ತಿ ಸಹ ಬಂದಿದೆ. ನನಗೆ ಮೊದಲಿನಿಂದಲೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ. ಅದೇ ಪ್ರೋತ್ಸಾಹವನ್ನು ನನ್ನ ಮಗನಿಗೂ ನೀಡಿ ಎಂದರು ಬೆಂ.ಕೋ.ಶ್ರೀ.

ನನಗೆ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ. ಅದರ ಪೂರ್ವಭಾವಿಯಾಗಿ ಈ ಆಲ್ಬಂ ನಲ್ಲಿ ಅಭಿನಯಿಸಿದ್ದೇನೆ. ರೀಷ್ಮಾ ನಾಣಯ್ಯ ಅವರ ಆಭಿನಯ ಈ ಹಾಡನ್ನು ಮತ್ತಷ್ಟು ಸುಂದರವಾಗಿಸಿದೆ. ವಿಸ್ಮಯ ಜಗ ಅದ್ಭುತವಾದ ಹಾಡನ್ನು ಬರೆದು, ರಾಗ ಸಂಯೋಜನೆ ಕೂಡ ಮಾಡಿದ್ದಾರೆ. ಅಷ್ಟೇ ಅದ್ಭುತವಾಗಿ ಪುನರ್ವ್ ಆಕರ್ಶ್ ನಿರ್ದೇಶಿಸಿದ್ದಾರೆ. ನವೀನ್ ಸಜ್ಜು ಸುಮಧುರವಾಗಿ ಹಾಡಿದ್ದಾರೆ. ನವೀನ್ ಕುಮಾರ್ ಹಾಗೂ ಎ.ಜೆ.ಶೆಟ್ಟಿ ಅವರ ಛಾಯಾಗ್ರಹಣದಲ್ಲಿ ಈ ಹಾಡನ್ನು ನೋಡುವುದೆ ಸೊಗಸು. ನಾಗೇಂದ್ರ ಈ ಹಾಡಿನ ನೃತ್ಯ ನಿರ್ದೇಶಕರು. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ “ಛೀ ಕಳ್ಳ” ಆಲ್ಬಂ ಬಿಡುಗಡೆ ಮಾಡಿರುವ A2 music ಅವರಿಗೆ ಧನ್ಯವಾದ ಎಂದರು ಅಕ್ಷರ್.‌

“ಛೀ ಕಳ್ಳ” ಆಲ್ಬಂ ತುಂಬಾ ಚೆನ್ನಾಗಿದೆ. ಇದು ನಾನು ನಟಿಸಿರುವ ಮೊದಲ ಆಲ್ಬಂ ಎಂದು ರೀಷ್ಮಾ ನಾಣಯ್ಯ ತಿಳಿಸಿದರು.

ನಿರ್ದೇಶಕ ಪುನರ್ವ್ ಆಕರ್ಶ್, ಹಾಡು ಬರೆದು, ರಾಗ ಸಂಯೋಜಿಸಿರುವ ವಿಸ್ಮಯ ಜಗ, ಛಾಯಾಗ್ರಾಹಕ ನವೀನ್ ಕುಮಾರ್ ಹಾಗೂ ನೃತ್ಯ ನಿರ್ದೇಶಕ ನಾಗೇಂದ್ರ “ಛೀ ಕಳ್ಳ” ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಇದು ರುಪಾಯಿ ಕಥೆ! ಚಿಲ್ರೆ ಕಥೆಯಂತೂ ಅಲ್ಲ ಸ್ವಾಮಿ…

ವಿಜಯ್ ಜಗದಾಲ್ ನಿರ್ದೇಶಿಸಿ, ನಾಯಕನಾಗಿಯೂ ನಟಿಸಿರುವ “ರುಪಾಯಿ” ಚಿತ್ರಕ್ಕಾಗಿ ಉತ್ಸವ್ ಗೊನ್ವಾರ್ ಬರೆದಿರುವ “ಕರೆಯದೆ” ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಆನಂದ್ ರಾಜ ವಿಕ್ರಮ್ ಸಂಗೀತ ನೀಡಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಸಂಸ್ಥೆಯ ಆನಂದ್ ಅವರು ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅನನ್ಯ ಭಟ್ ಹಾಡಿರುವ ಈ ಇಂಪಾದ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ನಾನು ಮೂಲತಃ ರಂಗಭೂಮಿಯವನು. ನಟನಾಗಬೇಕೆಂಬ ಕನಸು ಹೊತ್ತು ಬಂದವನು. ನಿರ್ಮಾಪಕರಿಗೆ ನನ್ನ ಕನಸನ್ನು ತಿಳಿಸುವ ಸಲುವಾಗಿ ಮೂರು ಲಕ್ಷ ವೆಚ್ಚದಲ್ಲಿ ಒಂದು ಪ್ರಮೋಷನಲ್ ವಿಡಿಯೋ ಮಾಡಿ ತೋರಿಸಿದೆ. ಈ ವಿಡಿಯೋ ಇಷ್ಟಪಟ್ಟ ಮಂಜುನಾಥ್ ಹಾಗೂ ಹರೀಶ್ ಹಣ ಹೂಡಲು ಮುಂದಾದರು. ಆನಂತರ ಚಿತ್ರ ಆರಂಭವಾಯಿತು. ಹೆಸರೇ ಹೇಳುವಂತೆ ಹಣದ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್ ಎಲ್ಲವೂ ಇದೆ. ಐದು ಪ್ರಮುಖ ಪಾತ್ರಗಳ ಸುತ್ತ ಈ ಕಥೆ ಸಾಗುತ್ತದೆ. ನಾನು, ಕೃಷಿ ತಾಪಂಡ, ಯಶ್ವಿಕ್, ಚಂದನ ರಾಘವೇಂದ್ರ ಹಾಗೂ ರಾಮ ಚಂದನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದೇವೆ. ನಾನೇ ನಿರ್ದೇಶನ ಮಾಡಿದ್ದೀನಿ. ಹಾಡು ಬಿಡುಗಡೆ‌ಯಾಗಿದೆ. ನವೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಉತ್ತಮ ಚಿತ್ರ ಮಾಡಿದ್ದೀವಿ ಎಂಬ ಭರವಸೆಯಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ನಾಯಕ – ನಿರ್ದೇಶಕ ವಿಜಯ್ ಜಗದಾಲ್.

ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಿರ್ದೇಶಕರಿಗೆ ಧನ್ಯವಾದ ಎಂದರು ಕೃಷಿ ತಾಪಂಡ. ಪ್ರಮುಖ ಪಾತ್ರಧಾರಿಗಳಾದ ಯಶ್ವಿಕ್, ರಾಮ್ ಚಂದನ್ ಹಾಗೂ ಚಂದನ ರಾಘವೇಂದ್ರ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಿರ್ಮಾಣದ ಬಗ್ಗೆ ಮಂಜುನಾಥ್ ಅವರು ಮಾತನಾಡಿದರು.

ಸಂಗೀತದ‌ ಬಗ್ಗೆ ಆನಂದ್ ರಾಜ್ ವಿಕ್ರಮ್, ಛಾಯಾಗ್ರಹಣದ ಬಗ್ಗೆ ಆರ್ ಡಿ ನಾಗಾರ್ಜುನ ಹಾಗೂ ಸಂಕಲನದ ಕುರಿತು ಶಿವರಾಜ್ ಮೇಹು ಮಾಹಿತಿ ನೀಡಿದರು. ಸಹ ನಿರ್ಮಾಪಕರಾದ ಯಶವಂತ ಶೆಟ್ಟಿ, ಗಿರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ಸುನಿದಿನಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

error: Content is protected !!