Categories
ಸಿನಿ ಸುದ್ದಿ

ಅಂತು ಇಂತು ದಿಗಂತ್ ಸಿನಿಮಾ ಶುರುವಾಯ್ತು

ದಿಗಂತ್ ಹೊಸ ಸಿನಿಮಾ ಶುರುವಾಗಿದೆ. ಆ ಚಿತ್ರಕ್ಕೆ ಅಂತು ಇಂತು ಎಂದು ಹೆಸರಿಡಲಾಗಿದೆ. ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಚಿತ್ರವಿದು…

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ಕೆನಡಾ ನಿವಾಸಿ ಬೃಂದಾ ಮುರಳೀಧರ್ “ಅಂತು ಇಂತು” ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ ರಾಜ್, ಬೃಂದಾ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಲಿದ್ದಾರೆ. ದಿಗಂತ್ ಈ ಚಿತ್ರದ ನಾಯಕ.

ನಾನು ಮೂಲತಃ ಮೈಸೂರಿವಳು. ರಂಗ ಕಲಾವಿದೆ. ಇಪ್ಪತ್ತೈದು ವರ್ಷಗಳಿಂದ ಕೆನಡಾದಲ್ಲಿದ್ದೀನಿ. ಅಲ್ಲೇ ನಾನು ಹಾಗೂ ನನ್ನ ಪತಿ ಮುರಳಿಧರ್ ನಾಟಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ನಾನು ಈ ಹಿಂದೆ ನಾಟ್ ನಾಟ್ ಎಂಬ ಇಂಗ್ಲಿಷ್ ಚಿತ್ರ ನಿರ್ದೇಶಿಸಿದ್ದೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇದು ಸ್ವದೇಶದಿಂದ ವಿದೇಶಕ್ಕೆ ಹೋಗಿ ನೆಲೆಸಿರುವವರ ಕಥೆ‌. ನಾವು ಎಲ್ಲೇ ಇದ್ದರೂ ನಮ್ಮ ಹುಟ್ಟಿದ ಊರಿನ ಮಮತೆ ಸದಾ ಸೆಳೆಯುತ್ತಿರುತ್ತದೆ. ಈ ರೀತಿ ಭಾವನಾತ್ಮಕ ಕಥೆಯುಳ್ಳ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ದಿಗಂತ್ ನಾಯಕನಾಗಿ ನಟಿಸುತ್ತಿದ್ದಾರೆ ‌. ಗಿರಿಜಾ ಲೋಕೇಶ್, ರವಿಶಂಕರ್ ಗೌಡ ಪ್ರಮುಖಪಾತ್ರದಲ್ಲಿರಲಿದ್ದಾರೆ‌. ಕೆನಡಾದ ಸ್ಥಳೀಯ ತಂತ್ರಜ್ಞರು ಇದರಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ‌. ಜಯಶ್ರೀ ರಾಜ್ ನನ್ನೊಂದಿಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ ಎಂದು ಬೃಂದಾ ಮುರಳಿಧರ್ ಮಾಹಿತಿ ನೀಡಿದರು.

ನಾನು 25 ವರ್ಷಗಳಿಂದ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ಮಾಣ ಕೂಡ ಮಾಡಿದ್ದೇನೆ. ಇದೇ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದೇನೆ. ನಿರ್ದೇಶಕಿ ಬೃಂದಾ ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು ಎಂದರು ನಿರ್ಮಾಪಕಿ ಜಯಶ್ರೀ ರಾಜ್.

ನಾನು‌ ಭಾರತದಿಂದ ಕೆನಡಾಕ್ಕೆ ಬಂದ ಹುಡುಗನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಕಥೆ ತುಂಬಾ ಚೆನ್ನಾಗಿದೆ. ‌ಜಾಸ್ತಿ ಹೇಳುವ ಹಾಗಿಲ್ಲ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ದಿಗಂತ್.

ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿರುವ ಗಿರಿಜಾ ಲೋಕೇಶ್ ಹಾಗೂ ರವಿಶಂಕರ್ ಗೌಡ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‌

ಕರ್ನಾಟಕ ರಾಜ್ಯದ ಮಂತ್ರಿಗಳಾದ ಶ್ರೀ ಶಂಕರ್ ಪಾಟೀಲ್ ಅವರು ಪತ್ರಿಕಾಗೋಷ್ಠಿಗೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

Categories
ಸಿನಿ ಸುದ್ದಿ

ಮೇ 13ಕ್ಕೆ ಕಸ್ತೂರಿ ಮಹಲ್‌ ಪ್ರವೇಶ! ಶಾನ್ವಿ ಶ್ರೀವಾತ್ಸವ್‌ ಎಂಟ್ರಿಗೆ ದಿನಗಣನೆ…

ನಿರ್ದೇಶಕ ದಿನೇಶ್ ಬಾಬು ಕಸ್ತೂರಿ ಮಹಲ್‌ ಸಿನಿಮಾ ನಿರ್ದೇಶಿಸಿದ್ದು, ಆ ಸಿನಿಮಾ ಈಗ ತೆರೆಗೆ ಬರಲು ಸಜ್ಜಾಗಿದೆ. ಈ ಸಿನಿಮಾ ದಿನೇಶ್‌ ಬಾಬು ಅವರ ನಿರ್ದೇಶನದ 50ನೇ ಚಿತ್ರ ಅನ್ನೋದು ವಿಶೇಷ. ಇಲ್ಲಿ ಸಾಕಷ್ಟು ಅಂಶಗಳನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗಲಿದೆ…

ಕನ್ನಡದಲ್ಲಿ ಸಾಕಷ್ಟು ಹಾರರ್ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ. ಚಿತ್ರೀಕರಣವಾದ ಕೊಟ್ಟಿಗೆ ಹಾರದ ಪರಿಸರವಂತೂ ಅದ್ಭುತ. ಉತ್ತಮ ಪಾತ್ರ ನೀಡಿರುವ ದಿನೇಶ್ ಬಾಬು ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಎರಡೂವರೆ ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರುತ್ತಿದೆ. ನೋಡಿ ಹರಸಿ ಎಂದು ಹೇಳಿಕೊಂಡರು ಶಾನ್ವಿ ಶ್ರೀವಾತ್ಸವ್.

ರಂಗಾಯಣ ರಘು ಅವರಿಗೆ ಇಲ್ಲೊಂದು ವಿಶೇಷ ಪಾತ್ರವಿದೆಯಂತೆ. ಆ ಕುರಿತು ಹೇಳಿಕೊಂಡ ಅವರು, ನಿರ್ದೇಶನದಲ್ಲಿ ಐವತ್ತು ಚಿತ್ರಗಳನ್ನು ಪೂರೈಸಿರುವ ದಿನೇಶ್ ಬಾಬು ಅವರನ್ನು ಅಭಿನಂದಿಸುತ್ತೇನೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾರರ್ ಚಿತ್ರಗಳು ಬಂದಿವೆ. ಪ್ರೇಕ್ಷಕರ ಮನ ಗೆದ್ದಿದೆ. ಆದರೆ ಇದು ವಿಭಿನ್ನ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ರಂಗಾಯಣ ರಘು.

ಇದೊಂದು ಉತ್ತಮ ಚಿತ್ರ. ನನ್ನದು ಒಳ್ಳೆಯ ಪಾತ್ರ. ಕೊಟ್ಟಿಗೆ ಹಾರದ ನಮ್ಮ ಪೂರ್ವಜರ ಮನೆಯಲ್ಲಿ(200 ವರ್ಷ ಹಳೆಯದು) ಚಿತ್ರೀಕರಣವಾಗಿದ್ದು ನಿಜಕ್ಕೂ ಸಂತೋಷ. ಅವಕಾಶ ನೀಡಿದ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಅಭಿನಂದನೆ ಎಂದರು ನಾಯಕ ಸ್ಕಂದ.

ದಿನೇಶ್ ಬಾಬು ಅವರ ಹತ್ತಿರ ಹಾರರ್ ಸಿನಿಮಾ ಮಾಡೋಣ ಅಂತ ಹೇಳಿದ್ದೆ. ಉತ್ತಮ ಕಥೆ ಸಿದ್ದ ಮಾಡಿಕೊಂಡು ಸಿನಿಮಾ ಶುರು ಮಾಡಿದರು. ಇದೇ ಮೇ 13 ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ರವೀಶ್.

ಶೃತಿ ಪ್ರಕಾಶ್, ವತ್ಸಲಾ ಮೋಹನ್, ಕಾಶಿಮಾ, ನೀನಾಸಂ ಅಶ್ವಥ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಿನ್ನೆಲೆ ಸಂಗೀತ ನೀಡಿರುವ ರಮೇಶ್ ಕೃಷ್ಣ ಸಂಗೀತ ಬಗ್ಗೆ ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ನನ್ನ ಸಿನಿ ಜರ್ನಿಯಲ್ಲಿ ಕೆಜಿಎಫ್ 2 ವಿಶೇಷ ಚಿತ್ರ; ಸಂಜಯ್ ದತ್ ಮನದಾಳದ ಮಾತು…

ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಮತ್ತು ವಿಜಯ್ ಕಿರಗಂದೂರು ನಿರ್ಮಾಣದ ಕೆಜಿಎಪ್ 2 ಚಿತ್ರ ಏಪ್ರಿಲ್ 14ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ಐದು ಭಾಷೆಯಲ್ಲಿ ತಯಾರಾಗಿದೆ. ಐದು ಭಾಷೆಯಲ್ಲಿ ಟ್ರೇಲರ್ ಕೂಡ ರಿಲೀಸ್ ಆಗಿದ್ದು ಆ ಬಗ್ಗೆ ನಟ ಯಶ್, ಸಂಜಯ್ ದತ್, ರವೀನಾ ತಂಡನ್, ಶ್ರೀನಿಧಿ ಶೆಟ್ಟಿ, ಪ್ರಶಾಂತ್ ನೀಲ್ ಹೇಳಿದ್ದು ಹೀಗೆ

ಅಧೀರನಾಗಿ ಕಾಣಿಸಿಕೊಂಡಿರುವ ಸಂಜಯ್ ದತ್ ಮಾತನಾಡಿ, ಚಾಪ್ಟರ್ 2 ಒಂದೊಳ್ಳೆಯ ಅನುಭವ ಕೊಟ್ಟಿದೆ. ನನ್ನ ಈ 45 ವರ್ಷದ ಜರ್ನಿಯಲ್ಲಿ ಒಳ್ಳೆಯ ಸಿನಿಮಾ ಇದು. ಪ್ರಶಾಂತ್ ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ಯಶ್ ಯಂಗ್ ಬ್ರದರ್ ಇದ್ದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಪ್ರಶಾಂತ್ ನೀಲ್ ಮಾತನಾಡಿ, ಇದು ತುಂಬಾ ಮುಖ್ಯವಾದ ದಿನ. ನನ್ನ ಕನಸು ಕೂಡ ಕೆಜಿಎಫ್ ಏಪ್ರಿಲ್ 14 ರಿಲೀಸ್ ಆಗಲಿದೆ. ನಿಮ್ಮೆಲ್ಲರಿಗೂ ಇಷ್ಟವಾಗಲಿದೆ. ಕೆಜಿಎಫ್ ಇಡೀ ಇಂಡಿಯಾದಲ್ಲೇ ಜಾಗ ಮಾಡಿಕೊಂಡಿದೆ. ಅದಕ್ಕೆ ಮಾಧ್ಯಮ ಕಾರಣವೆಂದ ಅವರು, ಭುವನ್, ರವಿ ಬಸ್ರೂರು ಹಾಗು ಅವರ ತಂಡವನ್ನು ಪರಿಚಯಿಸಿ ಅವರ ಕೆಲಸ ಹೊಗಳಿದರು.
ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಅವರ ಬಗ್ಗೆ ಗುಣಗಾನ ಮಾಡಿದರು.

ಯಶ್ ಬಗ್ಗೆ ಹೇಳಿದ ಅವರು ಅವರನ್ನು ಯಾಕೆ ರಾಕಿಂಗ್ ಅಂತೀವಿ ಅಂತ ಈ ಚಿತ್ರ ನೋಡಬೇಕು. ಸಾಕಷ್ಟು ಸಂಭಾಷಣೆಯಲ್ಲಿ ಅವರು ತೊಡಗಿದ್ದರು ಅಂದರು.
ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಎಂದು ಹೇಳಿದರು.

ನಿರ್ಮಾಪಕ ವಿಜಯ್ ಕಿರಗಂದೂರು ಮಾತನಾಡಿ, ಕೆಜಿಎಫ್ ಫ್ಯಾಮಿಲಿಗೆ ಥ್ಯಾಂಕ್ಸ್ ಹೇಳಿದ ಅವರು, ಎಲ್ಲರಿಗೂ ಧನ್ಯವಾದ ಹೇಳಿದರು. ಎಂಟು ವರ್ಷದ ಹಿಂದೆ ಶುರುವಾದ ಜರ್ನಿ ಇದು. ಇಷ್ಟು ವರ್ಷದಲ್ಲಿ ಯಶ್ ಮದುವೆಯಾಗಿ, ಇಬ್ಬರು ಮಕ್ಕಳಾದವು. ಈಗ ಸಿನಿಮಾ ರಿಲೀಸ್ ಆಗೋಕೆ ರೆಡಿಯಾಗಿದೆ ನೋಡಿ ಹರಸಿ ಅಂದರು.

ಯಶ್ ಮಾತನಾಡಿ, ನಾನು ನರ್ವಸ್ ಆಗಲ್ಲ. ಆದರೆ ಗೊತ್ತಿಲ್ಲ. ವೀ ಮಿಸ್ ಯು ಅಪ್ಪು ಸರ್. ನಿನ್ನಿಂದಲೇ ಸಿನಿಮಾ ಮೂಲಕ ಹೊಂಬಾಳೆ ಫಿಲಂಸ್ ಬಂದಿದೆ. ಅಪ್ಪು ಸರ್ ಜೀವಂತ. ಶಿವಣ್ಣ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೀತೀವಿ.
ನನ್ನ ಇಂಡಸ್ಟ್ರಿ ಮೇಲೆ ನನಗೆ ಗೌರವ. ವಿಜಯ್ ಕಿರಗಂದೂರು ಇರದಿದ್ದರೆ ಆಗುತ್ತಿರಲಿಲ್ಲ. ಪ್ರಶಾಂತ್ ನೀಲ್ ಅವರಿಗೆ ಕ್ರೆಡಿಟ್ ಹೋಗಬೇಕು. ಹೊಸಬರಿದ್ದರೂ ಇಲ್ಲಿ ಕೆಲಸ ತಗೊಂಡಿದ್ದಾರೆ. ನಿರ್ದೇಶಕರು ಸಿನಿಮಾ ಪ್ರೀತಿಸುತ್ತಾರೆ. ಹೆಮ್ಮೆಯಿಂದ ಹೇಳ್ತೀನಿ ಇಲ್ಲಿದ್ದ ತಾಂತ್ರಿಕ ವರ್ಗದವರು ಬೇರೆಲ್ಲೂ ಇಲ್ಲ. ಎಲ್ಲ ಕಲಾವಿದರಿಗೂ ಥ್ಯಾಂಕ್ಸ್ ಹೇಳಿದರು.

ಶ್ರೀನಿಧಿ ಶೆಟ್ಟಿ ಮಾತನಾಡಿ, ಶಿವಣ್ಣ ಟ್ರೇಲರ್ ಲಾಂಚ್ ಮಾಡಿದ್ದು ಖುಷಿ ಕೊಟ್ಟಿದೆ 2015 ರಲ್ಲಿ ಈ ಚಿತ್ರಕ್ಕೆಚಸಹಿ ಮಾಡಿದ್ದೆ. ಇಂತಹ ಟೀಮ್ ಇದ್ದರೆ ಸಕ್ಸಸ್ ಗ್ಯಾರಂಟಿ. ದೊಡ್ಡ ಕಲಾವಿದರ ಜೊತೆ ನಾನಿದ್ದೇನೆ ಅನ್ನೋದೇ ಹೆಮ್ಮೆ ಎಂದರು.

ರವೀನಾ ಟಂಡನ್ ಸಿನಿಮಾ ಕುರಿತು ಮಾತಾಡಿದರು. ಪ್ರಶಾಂತ್ ಸ್ವೀಟೆಸ್ಟ್ ಟಫೆಸ್ಟ್ ಡೈರೆಕ್ಟರ್. ಯಶ್ ರಾಕಿಂಗ್ ಸುಪರ್ ಸೆಟ್ಸ್ ನಲ್ಲಿ ಕಂಫರ್ಟ್ ಆಗಿತ್ತು. ವಿಜಯ್ ಕಿರಗಂದೂರು ಒಳ್ಳೆಯ ಅವಕಾಶ ಕೊಟ್ಟಿದ್ದಾರೆ . ನಾನು ಸಿನಿಮಾ ನೋಡೋಕೆ ಕಾದಿದ್ದೇನೆ ಎಂದರು.

ಶಿವಣ್ಣ ಯಶ್ ಬ್ಯೂಟಿಫುಲ್ ಅಂದ್ರು. ಸಂಜಯ್ ದತ್ ಅವರ ಲುಕ್ ಬಗ್ಗೆಯೂ ಹೇಳಿದರು. ಯಶ್ ನನ್ನ ಜೊತೆ ತಮಸ್ಸು ಮಾಡಿದ್ದರು. ಈ ಚಿತ್ರವನ್ನು ನಾನು ಏಪ್ರಿಲ್ 14ರಂದು ನೋಡಲು ಕಾತುರನಾಗಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭವಾಗಲಿ ಅಂದರು.

ಸಚಿವ ಅಶ್ವತ್ಥ್ ನಾರಾಯಣ್ ಕೂಡ ಮಾತನಾಡಿ, ಕೆಜಿಎಫ್ 2 ಟ್ರೇಲರ್ ನೋಡಿದವರಿಗೆ ಸಿನಿಮಾ ನೋಡುವ ಆತುರ ಹೆಚ್ಚಿಸುತ್ತೆ. ಹಾಲಿವುಡ್ ರೇಂಜ್ ಗೆ ಸಿನಿಮಾ ಇದೆ ಅನ್ನೋದು ಈ ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತೆ. ಎಲ್ಲರಿಗೂ ಒಳ್ಳೆಯದಾಗಲಿ. ನಾನು ಸಚಿವನಾಗಿ ಇಲ್ಲಿ ಬಂದಿಲ್ಲ. ಒಬ್ಬ ಅಭಿಮಾನಿಯಾಗಿ ಬಂದಿದ್ದೇನೆ ಎಂದರು.

ಪೃಥ್ವಿ ರಾಜ್ ಸುಕುಮಾರ್ ಕೇರಳ ಭಾಷೆಯ ವಿತರಣೆ ಜವಾಬ್ದಾರಿ ಹೊತ್ತಿದ್ದಾರೆ. ಈ ಬಗ್ಗೆ ಅವರು ಹೇಳಿದ್ದು, ಕೆಜಿಎಫ್ ಮತ್ತು ಬಾಹುಬಲಿ ಸಿನಿಮಾ ಇಂಡಸ್ಟ್ರಿಯಲ್ಲಿ ಭರವಸೆ ಮೂಡಿಸಿದ್ದಷ್ಟೇ ಅಲ್ಲ. ರಾಜಮೌಳಿ ಮತ್ತು ಪ್ರಶಾಂತ್ ನೀಲ್ ಗುಡ್ ಮೇಕರ್. ಯಶ್ ಒಳ್ಳೇ ನಟ. ಎಕ್ಸೈಟ್ವಾಗಿದ್ದೇನೆ.
ಪೃಥ್ವಿರಾಜ್ ಪ್ರೊಡಕ್ಷನ್ ಈ ಸಿನಿಮಾಗೆ ಕೈ ಜೋಡಿಸಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

ತೆಲುಗಿನಲ್ಲಿ ಈ ಚಿತ್ರವನ್ನು ಸಾಯಿ ಪ್ರೆಸೆಂಟ್ ಮಾಡಿದರೆ, ಹಿಂದಿಯಲ್ಲಿ ಫರಾನ್ ಅಖ್ತರ್ ಪ್ರೆಸೆಂಟ್ ಮಾಡುತ್ತಿದ್ದಾರೆ.

Categories
ಸಿನಿ ಸುದ್ದಿ

ಕೆಜಿಎಫ್ 2 ಟ್ರೇಲರ್ ರಿಲೀಸ್ ಮಾಡಿದ ಶಿವಣ್ಣ : ಐ ಲವ್ ಯು ಯು ಶುಡ್ ಲವ್ ಅಂದ್ರು ಸೆಂಚುರಿ ಸ್ಟಾರ್…

ಕೆಜಿಎಫ್ 2 ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷೆಯ ಚಿತ್ರ. ಚಿತ್ರದ ಮೊದಲ ಚಾಪ್ಟರ್ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದು ಗೊತ್ತೇ ಇದೆ. ಈಗ ಚಾಪ್ಟರ್ 2 ಸಮಯ. ಏಪ್ರಿಲ್ 14ರಂದು ವಿಶ್ವಾದ್ಯಂತ ಸಿನಿಮಾ ತೆರೆಗೆ ಅಪ್ಪಳಿಸಲಿದೆ.

ಈಗಾಗಲೇ ಚಿತ್ರದ ಪೋಸ್ಟರ್ ಗಳು ರಿಲೀಸ್ ಆಗಿದ್ದು, ಕುತೂಹಲ ಮೂಡಿಸಿವೆ. ಚಿತ್ರದ ಟೀಸರ್ವಮತ್ತು ಸಾಂಗ್ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿದ್ದು,ಗೊತ್ತು. ಈಗ ಟ್ರೇಲರ್ ರಿಲೀಸ್ ಆಗಿದೆ. ಎಲ್ಲೆಡೆ ದೊಡ್ಡ ಹವಾ ಎಬ್ಬಿಸಿದೆ.

ಹೌದು, ಕೆಜಿಎಫ್ 2 ಈಗ ಬಿಡುಗಡೆಯ ದಿನಗಳನ್ನು ಎಣಿಸುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಈ ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಮಾರ್ಚ್ 27 ರಂದು ಚಿತ್ರದ ಟ್ರೇಲರ್ ಜೊತೆ ಈವೆಂಟ್ ಕೂಡ ನಡೆಯಿತು. ಇದರ ವಿಶೇಷ ಅಂದರೆ, ಈವೆಂಟ್ ನ ಹೋಸ್ಟ್ ಆಗಿ, ಬಾಲಿವುಡ್ ನ ನಿರ್ದೇಶಕ , ನಿರೂಪಕ ಕರಣ್ ಜೋಹರ್ ಕಾರ್ಯ ನಿರ್ವಹಿಸಿದ್ದು. ಅವರೊಂದಿಗೆ ಕನ್ನಡದ ನಿರೂಪಕಿ ಅನುಶ್ರೀ ಸಾಥ್ ನೀಡಿದರು.

ಕೆಜಿಎಫ್ 2 ಚಿತ್ರದಲ್ಲಿ ಕಾಣಿಸಿಕೊಂಡಿರುವ ಬಹುತೇಕ ತಾರಾಬಳಗ ಒರಾಯನ್ ಮಾಲ್ ನಲ್ಲಿ ಜಮಾಯಿಸಿತ್ತು. ವಿಶೇಷವೆಂದರೆ, ಟ್ರೇಲರ್ ಮತ್ತು ಈವೆಂಟ್ ಗೆ ಬಾಲಿವುಡ್‌, ಟಾಲಿವುಡ್, ಕಾಲಿವುಡ್ ಸಿನಿಮಾ ಪತ್ರಕರ್ತರು ಆಗಮಿಸಿದ್ದರು.

ಚಿವರಾದ ಅಶ್ವತ್ಥನಾರಾಯಣ, ಶಿವರಾಜಕುಮಾರ್ ಆಕರ್ಷಣೆಯಾಗಿದ್ದರು. ನಾಗಾಭರಣ, ಮಾಳವಿಕ, ಅಯ್ಯಪ್ಪ, ವಸಿಷ್ಠ ಸಿಂಹ, ಗರುಡ ಖ್ಯಾತಿಯ ರಾಮ್ ಸೇರಿದಂತೆ ಹಲವರು ಟ್ರೇಲರ್ ಬಿಡುಗಡೆಗೆ ಸಾಕ್ಷಿಯಾದರು.

ಶಿವಣ್ಣ ಟ್ರೇಲರ್ ರಿಲೀಸ್ ಮಾಡಿ ಶುಭ ಕೋರಿದರು. ಐ ಲವ್ ಯೂವಯು ಯು ಶುಡ್ ಲವ್ ಯು… ಎಂದು ಸಿನಿಮಾಗೆ ಹಾರೈಸಿದರು.

Categories
ಸಿನಿ ಸುದ್ದಿ

ಚಂದನವನ ಕ್ರಿಟಿಕ್ಸ್ ಅವಾರ್ಡ್ಸ್ ಬಾಚಿಕೊಂಡ ರಾಜ್ ಬಿ ಶೆಟ್ಟಿ; ಮೊದಲ ಚಿತ್ರಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಗಾನವಿ

ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು 3ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2022 ರಲ್ಲಿ ತಮ್ಮ “ಗರುಡ ಗಮನ ವೃಷಭ ವಾಹನ ” ಚಿತ್ರಕ್ಕಾಗಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಚಿತ್ರಕಥೆಗಾಗಿ ಮೂರು ವೈಯಕ್ತಿಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಹೀರೋ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿಸಿದ ಮೊದಲ ಚಿತ್ರಕ್ಕೆ ನಟಿ ಗಾನವಿ ಲಕ್ಷ್ಮಣ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆಯುವುದರ ಮೂಲಕ ಸಂಭ್ರಮಿಸಿದ್ದಾರೆ. ಮೂರು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದ “ಪುಗ್ಸಟ್ಟೆ ಲೈಫ್” ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದ್ದು, ಮೊದಲ ಸಿನಿಮಾದ ನಿರ್ದೇಶನಕ್ಕಾಗಿ ನಿರ್ದೇಶಕ ಅರವಿಂದ್ ಕುಪ್ಲಿಕರ್ ಅವರು ಪುಕ್ಸಟ್ಟೆ ಲೈಫು ಚಿತ್ರಕ್ಕಾಗಿ ಪ್ರಶಸ್ತಿ ಪಡೆದದ್ದು ವಿಶೇಷ.
ಪ್ರವೀಣ್ ಶ್ರೀಯಾನ್ ಅತ್ಯುತ್ತಮ ಸಂಕಲನ ಪ್ರಶಸ್ತಿಯನ್ನು ಗೆಲ್ಲುವ ಮೂಲಕ GGVV ಗಾಗಿ ನಾಲ್ಕನೇ ಪ್ರಶಸ್ತಿ ಗಳಿಸಿದರು. ತರುಣ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದೆ. (ಅತ್ಯುತ್ತಮ ಸಂಗೀತ ಸಂಯೋಜಕ – ಅರ್ಜುನ್ ಜನ್ಯ, ಅತ್ಯುತ್ತಮ ಗೀತರಚನೆಕಾರ – ಕಣ್ಣು ಹೊಡೆಯಾಕೆ ಹಾಡಿಗೆ ಯೋಗರಾಜ್ ಭಟ್, ಸುಧಾಕರ್ ಎಸ್ ರಾಜ್ ಅತ್ಯುತ್ತಮ ಛಾಯಾಗ್ರಹಣ ಮತ್ತು ಭೂಷಣ್ ಅತ್ಯುತ್ತಮ ನೃತ್ಯ ಸಂಯೋಜನೆ)ಈ ನಾಲ್ಕು ಪ್ರಶಸ್ತಿಗಳು ರಾಬರ್ಟ್ ಚಿತ್ರಕ್ಕಾಗಿ ಬಂದಿದ್ದು ಮತ್ತೊಂದು ವಿಶೇಷ.

ಎ.ಹರ್ಷ ನಿರ್ದೇಶನದ ಭಜರಂಗಿ 2 ಮತ್ತು ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲು ಸಿನಿಮಾ ಸಲಗ ಮತ್ತು ಧನಂಜಯ್ ನಟನೆಯ ಬಡವ ರಾಸ್ಕಲ್ ತಲಾ ಮೂರು ಪ್ರಶಸ್ತಿ ಗಳಿಸಿವೆ. ಭಜರಂಗಿ 2 ಸಿನಿಮಾ ತಾಂತ್ರಿಕ ವಿಭಾಗಗಳಲ್ಲಿ ಅತ್ಯುತ್ತಮ VFX (ಶಿಬೀಶ್ ಮತ್ತು ಇಳಂಗೋವ್), ಅತ್ಯುತ್ತಮ ಸಾಹಸ ನಿರ್ದೇಶಕ (ರವಿ ವರ್ಮ) ಮತ್ತು ಅತ್ಯುತ್ತಮ ಕಲಾ ನಿರ್ದೇಶನ (ರವಿ ಸಂತೆಹೈಕ್ಲು) ಪ್ರಶಸ್ತಿ ಪಡೆದಿದೆ.
ಬಡವ ರಾಸ್ಕಲ್ ಚಿತ್ರವು ಅತ್ಯುತ್ತಮ ಪೋಷಕ ನಟಿ ಸ್ಪರ್ಶ ರೇಖಾ ಮತ್ತು ಅತ್ಯತ್ತಮ ಪೋಷಕ ನಟ ರಂಗಾಯಣ ರಘು ಹಾಗೂ ಇದೇ ಚಿತ್ರಕ್ಕಾಗಿ ವಾಸುಕಿ ವೈಭವ್ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನೂ ಪಡೆದರು.

ನಟ ದುನಿಯಾ ವಿಜಯ್ ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕಾಗಿ ಅತ್ಯುತ್ತಮ ಸಂಭಾಷಣೆ (ಮಾಸ್ತಿ), ಅತ್ಯುತ್ತಮ ಬಿಜಿಎಂ (ಚರಣ್ ರಾಜ್) ಮತ್ತು ಅತ್ಯುತ್ತಮ ಗಾಯಕಿಯಾಗಿ ಗಿರಿಜಾ ಅವರಿಗೆ ಪ್ರಶಸ್ತಿ ಬಂದಿವೆ.
ಡಾ.ರಾಘವೇಂದ್ರ ಬಿಎಸ್ ಅವರು ಪ್ರೇಮಂ ಪೂಜ್ಯಂ ಚಿತ್ರಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿ ಪಡೆದರೆ, ಅರ್ಜುನ್ ಗೌಡ ಚಿತ್ರದ ಹಾಡಿಗೆ ರಾಘವೇಂದ್ರ ಕಾಮತ್ ಅವರು ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಯನ್ನು ಯೋಗರಾಜ್ ಭಟ್ ಜತೆ ಹಂಚಿಕೊಂಡಿದ್ದಾರೆ. ಅತ್ಯುತ್ತಮ ಬಾಲ ನಟ ಪ್ರಶಸ್ತಿ ಅಕ್ಷಿ ಸಿನಿಮಾ ನಟನೆಗಾಗಿ ಮಾಸ್ಟರ್ ಮಿಥುನ್ ಪಡೆದುಕೊಂಡಿದ್ದಾರೆ.

ಶನಿವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 2021 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗಾಗಿ ಒಟ್ಟು 23 ಸಿನಿಮಾ ತಾರೆಯರು 21 ವಿಭಾಗಗಳಲ್ಲಿದ್ದ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಜನನಕನ್ನಡ ಚಲನಚಿತ್ರ ವಿಮರ್ಶಕರು ಮತ್ತು ಪತ್ರಕರ್ತರು ನಾಮ ನಿರ್ದೇಶನ ಮೂಲಕ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದರೆ, ಬಿಬಿಎಂಪಿಯ ಸ್ವಚ್ಛ ಬೆಂಗಳೂರು ಅಭಿಯಾನವನ್ನು ಪ್ರಶಸ್ತಿ ಸಮಾರಂಭದ ವಿಷಯವಾಗಿ ಅಳವಡಿಸಿಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಸಿನಿಮಾ ರಂಗದ ಸಾಕಷ್ಟು ತಾರೆಯರು, ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

3ನೇ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡಮಿ ಪ್ರಶಸ್ತಿ ವಿಜೇತರು ಪಟ್ಟಿ – 2022

  1. ಅತ್ಯುತ್ತಮ ಚಿತ್ರ
    ಪುಗ್ಸಟ್ಟೆ ಲೈಫ್
  2. ಅತ್ಯುತ್ತಮ ನಿರ್ದೇಶಕ
    ರಾಜ್ .ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)
  3. ಅತ್ಯುತ್ತಮ ನಟ
    ರಾಜ್. ಬಿ ಶೆಟ್ಟಿ (ಗರುಡ ಗಮನ ವೃಷಭ ವಾಹನ)
  4. ಅತ್ಯುತ್ತಮ ನಟಿ
    ಗಾನವಿ ಲಕ್ಷ್ಮಣ್ (ಹೀರೋ)
  5. ಅತ್ಯುತ್ತಮ ಚಿತ್ರಕಥೆ
    ಗರುಡ ಗಮನ ವೃಷಭ ವಾಹನ
  6. ಅತ್ಯುತ್ತಮ ಪೋಷಕ ನಟ
    ರಂಗಾಯಣ ರಘು (ಬಡವ ರಾಸ್ಕಲ್)
  7. ಅತ್ಯುತ್ತಮ ಪೋಷಕ ನಟಿ
    ಸ್ಪರ್ಷ ರೇಖಾ (ಬಡವ ರಾಸ್ಕಲ್)
  8. ಅತ್ಯುತ್ತಮ ಬಾಲ ಕಲಾವಿದ
    ಮಾಸ್ಟರ್ ಮಿಥುನ್ (ಅಕ್ಷಿ)
  9. ಅತ್ಯುತ್ತಮ ಸಂಗೀತ ನಿರ್ದೇಶಕ
    ಅರ್ಜುನ್ ಜನ್ಯ (ರಾಬರ್ಟ್)
  10. ಅತ್ಯುತ್ತಮ ಹಿನ್ನೆಲೆ ಸಂಗೀತ
    ಚರಣ್ ರಾಜ್ (ಸಲಗ)
  11. ಅತ್ಯುತ್ತಮ ಗೀತ ಸಾಹಿತ್ಯ
    ಯೋಗರಾಜ್ ಭಟ್ (ಕಣ್ಣು ಹೊಡಿಯಾಕೆ, ರಾಬರ್ಟ್) and ರಾಘವೇಂದ್ರ ಕಾಮತ್ (ಕನವರಿಕೆ.. ಅರ್ಜುನ್ ಗೌಡ)
  12. ಅತ್ಯುತ್ತಮ ಗಾಯಕ
    ವಾಸುಕಿ ವೈಭವ್ (ಆಗಾಗ ನೆನಪಾಗುತ್ತಿದೆ, ಬಡವ ರಾಸ್ಕಲ್)
  13. ಅತ್ಯುತ್ತಮ ಗಾಯಕಿ
    ಗಿರಿಜಾ ಸಿದ್ದಿ (ಟಿನಿಂಗ್ ಮಿನಿಂಗ್, ಸಲಗ)
  14. ಅತ್ಯುತ್ತಮ ಛಾಯಾಗ್ರಹಣ
    ಸುಧಾಕರ್ ರಾಜ್ (ರಾಬರ್ಟ್)
  15. ಅತ್ಯುತ್ತಮ ಸಂಭಾಷಣೆ
    ಮಾಸ್ತಿ (ಸಲಗ)
  16. ಅತ್ಯುತ್ತಮ ಸಂಕಲನ
    ಪ್ರವೀಣ್ ಶ್ರೀಯಾನ್ (ಗರುಡ ಗಮನ ವೃಷಭ ವಾಹನ)
  17. ಅತ್ಯುತ್ತಮ ಕಲಾ ನಿರ್ದೇಶನ
    ರವಿ ಸಂತೆಹೈಕ್ಳು (ಭಜರಂಗಿ 2)
  18. ಅತ್ಯುತ್ತಮ ನೃತ್ಯ ನಿರ್ದೇಶಕ
    ಭೂಷಣ್ (ರಾಬರ್ಟ್)
  19. ಅತ್ಯುತ್ತಮ ಸಾಹಸ ನಿರ್ದೇಶಕ
    ರವಿ ವರ್ಮಾ (ಭಜರಂಗಿ 2)
  20. ಅತ್ಯುತ್ತಮ ವಿಎಫ್ಎಕ್ಸ್
    ಶಿಬೀಶ್ and ಏಲಂಗೋ
    ಭಜರಂಗಿ 2
  21. ಅತ್ಯುತ್ತಮ ಚೊಚ್ಚಲ ಚಿತ್ರ
    ಪ್ರೇಮಮ್ ಪೂಜ್ಯಮ್
Categories
ಸಿನಿ ಸುದ್ದಿ

ನಾಳೆ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿಯ ಪ್ರಶಸ್ತಿ ಪ್ರದಾನ ಸಮಾರಂಭ; ಕಲರ್ ಫುಲ್ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ತಾರೆಯರ ಆಗಮನ

ಕನ್ನಡ ಚಲನಚಿತ್ರ ಪತ್ರಕರ್ತರು ಹೆಮ್ಮೆಯಿಂದ ಕೊಡ ಮಾಡುವ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿಯ 3ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ ಅಂದರೆ ಮಾರ್ಚ್ 26 ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಲರ್ ಫುಲ್ ಆಗಿ ನಡೆಯಲಿದೆ.

ಅಂದು ಸಂಜೆ 5.30ಕ್ಕೆ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಸಿನಿಮಾ ರಂಗದ ಅನೇಕ ನಟ, ನಟಿಯರು ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ ಸೇರಿದಂತೆ ಚಿತ್ರರಂಗದ ಗಣ್ಯರು, ಹಿರಿಯ ಕಲಾವಿದರು, ತಂತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ದಿಗ್ಗಜರು ಆಗಮಿಸಲಿದ್ದಾರೆ.

ಕಳೆದ ಎರಡು ವರ್ಷಗಳಲ್ಲೂ
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿಯ ಈ ಪ್ರಶಸ್ತಿ ಪ್ರದಾನ ಸಮಾರಂಭ ಯಶಸ್ವಿಯಾಗಿದ್ದು, ಇದು ಮೂರನೇ ವರ್ಷದ ಸಮಾರಂಭ. ಈ ಕಾರ್ಯ ಕ್ರಮಕ್ಕೆ ಸಿನಿಮಾ ಕುಟುಂಬ ಸಾಕ್ಷಿಯಾಗಲಿದೆ.

Categories
ಸಿನಿ ಸುದ್ದಿ

ಅಪ್ಪನಿಲ್ಲದ ಆ 21 ವರ್ಷಗಳು… ಟೈಗರ್‌ ನೆನೆದು ಪುತ್ರ ವಿನೋದ್‌ ಪ್ರಭಾಕರ್‌ ಭಾವುಕ ಪೋಸ್ಟ್

ಟೈಗರ್‌ ಪ್ರಭಾಕರ್‌ ಕನ್ನಡ ಚಿತ್ರರಂಗ ಕಂಡ ಹೆಮ್ಮೆಯ ನಟ. ಈ ಹೆಸರು ಕೇಳಿದೊಡನೆ ಕಣ್ಮುಂದೆ ಬರೋದೇ ಅಜಾನುಬಾಹುವಿನಂತಹ ವ್ಯಕ್ತಿ. ಟೈಗರ್‌ ಪ್ರಭಾಕರ್‌ ಎಷ್ಟು ಎತ್ತರದ ಗಟ್ಟಿತನದ ವ್ಯಕ್ತಿಯಾಗಿದ್ದರೋ, ಅವರ ವ್ಯಕ್ತಿತ್ವವೂ ಕೂಡ ಹಾಗೆ ಇತ್ತು. ಅವರ ಬಗ್ಗೆ ಈಗ ವಿಷಯ ಪ್ರಸ್ತಾಪವೇಕೆ ಎಂಬ ಪ್ರಶ್ನೆ ಎದುರಾಗಬಹುದು. ವಿಷಯವಿಷ್ಟೇ. ಪ್ರಭಾಕರ್‌ ಅವರಿಲ್ಲದೆ ಇಂದಿಗೆ ಇಪ್ಪತ್ತೊಂದು (ಮಾರ್ಚ್‌ 30 1950- 25 ಮಾರ್ಚ್ 2001)‌ ವರ್ಷಗಳು ಗತಿಸಿವೆ. ಕನ್ನಡ ಸೇರಿದಂತೆ ಪರಭಾಷೆಯ ಚಿತ್ರಗಳೂ ಸೇರಿದಂತೆ ಸುಮಾರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಟೈಗರ್‌ ಪ್ರಭಾಕರ್‌ ಸದಾ ನೆನಪಲ್ಲುಳಿಯೋ ನಟ.

ಅವರು ಇಲ್ಲದ ಈ ಇಪ್ಪತ್ತೊಂದು ವರ್ಷಗಳನ್ನು ನೆನಪಿಸಿಕೊಂಡು ಅವರ ಪುತ್ರ ನಟ ಮತ್ತು ನಿರ್ಮಾಪಕ ವಿನೋದ್‌ ಪ್ರಭಾಕರ್‌ ಅವರು ಅಪ್ಪನಿಗೊಂದು ಭಾವುಕ ಪೋಸ್ಟ್‌ ಮಾಡಿದ್ದಾರೆ. ಅದರ ಸಾರ ಹೀಗಿದೆ…

“ಅಭಿಮಾನಿಗಳಿಂದಲೇ ಟೈಗರ್‌ ಎಂಬ ಬಿರುದು ಪಡೆದು ಅದೇ ರೀತಿಯಲ್ಲೇ ಬದುಕಿ ಅಪ್ಪ ನಮ್ಮನ್ನಗಲಿದ ದಿನಕ್ಕೆ ಇಂದಿಗೆ 21 ವರ್ಷಗಳು. ಅಪ್ಪ ಉಳಿಸಿ ಹೋದ ನೆನಪುಗಳು ಒಂದಡೆಯಾದರೆ, ಪಡೆದ ಅಭಿಮಾನಿಗಳ ಆಶೀರ್ವಾದ ಇನ್ನೂ ನಮ್ಮ ಕುಟುಂಬದ ಮೇಲಿ ಉಳಿದಿರುವ ಖುಷಿ ಇನ್ನೊಂದೆಡೆ. ಇದ್ದಷ್ಟು ಕಾಲ ಸಿನಿರಸಿಕರನ್ನು ಆಲ್‌ ರೌಂಡರ್‌ ರೀತಿಯಲ್ಲಿ ರಂಜಿಸುತ್ತಲೇ ನಮ್ಮನ್ನಗಲಿದರೂ ಕೂಡ ಈಗಲೂ ನಮ್ಮ ನಿಮ್ಮ ನಡುವೆ ತಮ್ಮ ಸುಮಾರು 450 ಪ್ಲಸ್‌ ಚಿತ್ರಗಳ ಮೂಲಕ ಅಜರಾಮರ. ಅಪ್ಪ ದೈಹಿಕವಾಗಿ ನಮ್ಮನ್ನಗಲಿದ ನೋವು ಇದ್ದೇ ಇದೆ. ಆದರೆ, ನಿಮ್ಮೆಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿರುವ ತನ ನಮ್ಮೊಂದಿಗಿದ್ದಾರೆ ಎಂಬ ನಂಬಿಕೆ ನಮ್ಮದು.
ಪ್ರಚಂಡ ನಟರಾಗಿ, ಸಾಹಸ ಚಕ್ರವರ್ತಿಯಾಗಿ ಬದುಕಿದ್ದ ಟೈಗರ್‌ ಪ್ರಭಾಕರ್‌ ಅವರ ಮಗನಾಗಿ, ಒಬ್ಬ ಅಭಿಮಾನಿಯಾಗಿ ನನಗೆ ಹೆಮ್ಮೆ ಇದೆ. ನಿಮ್ಮ ನೆನಪು ನಿತ್ಯ ಹರಿದ್ವರ್ಣದ ಕಾಡಿನಂತೆ ಸದಾ ಹಸಿರಾಗಿರುತ್ತದೆ… ಮಿಸ್‌ ಯೂ ಅಪ್ಪ
ಎಂದು ವಿನೋದ್‌ ಪ್ರಭಾಕರ್‌ ಬರೆದುಕೊಂಡಿದ್ದಾರೆ.

ಮರಿ ಟೈಗರ್ ಹೊಸ ಹೆಜ್ಜೆ! ಟೈಗರ್ ಟಾಕೀಸ್ ನಿರ್ಮಾಣ ಶುರು

ಅದೇನೆ ಇರಲಿ, ವಿನೋದ್‌ ಪ್ರಭಾಕರ್‌ ಅವರು
ಕಳೆದ ವರ್ಷ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ರಾಬರ್ಟ್” ಚಿತ್ರದಲ್ಲಿ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ‌ ಆಗಿದ್ದರು. ತಮ್ಮ ನಟನೆ ಮೂಲಕ ಜನಮನಸೂರೆಗೊಂಡಿರುವ ವಿನೋದ್ ಪ್ರಭಾಕರ್ ಈಗ ನಿರ್ಮಾಪಕರಾಗಿದ್ದಾರೆ. ತಮ್ಮ ನಿರ್ಮಾಣದ ಮೊದಲ ಹೆಜ್ಜೆಯಾಗಿ‌ “ಲಂಕಾಸುರ” ಚಿತ್ರ ನಿರ್ಮಿಸುತ್ತಿದ್ದಾರೆ.‌ ವಿನೋದ್ ಪ್ರಭಾಕರ್ ಅವರ ಪತ್ನಿ ವಿನೋದ್ ಪ್ರಭಾಕರ್ ನಿರ್ಮಾಪಕರು.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಭಯಂಕರ ನಟನಿಗೆ ಮದಗಜ ಸಾಥ್!‌ ಪ್ರಥಮ್‌ ಸಿನಿಮಾ ಹಾಡು ರಿಲೀಸ್‌ ಮಾಡಿ ಶುಭ ಹಾರೈಸಿದ ಶ್ರೀಮುರಳಿ

ನಟ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಅವರೇ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಬಿಡುಗಡೆಯಾದವು. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ. ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು.

ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ, ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಹಾರೈಸಿದರು.

ಜಿಲ್ಲಾಧಿಕಾರಿ ದಯಾನಂದ್, ಲಹರಿ ವೇಲು ಹಾಗೂ ವಿ.ನಾಗೇಂದ್ರಪ್ರಸಾದ್ ಸಹ ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತನಾಡಿ ಚಿತ್ರಕ್ಕೆ ಶುಭ ಕೋರಿದರು.

ಮಾತಿಗಿಳಿದ ಪ್ರಥಮ್‌, ಇದು ನನ್ನ ಮೊದಲ ನಿರ್ದೇಶನದ ಚಿತ್ರ.
ಬಾರಿ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು.

ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ. ಮೇ ಹದಿಮೂರರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು. ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಬಘೀರನ ವಿಶ್ರಾಂತಿಗೆ ವೈದ್ಯರ ಸಲಹೆ; ಜಿಮ್ ವೇಳೆ ನಟ ಶ್ರೀಮುರಳಿಗೆ ಲೋವರ್ ಬ್ಯಾಕ್ ಪೇನ್‌- ಭಯ ಪಡುವ ಅಗತ್ಯವಿಲ್ಲ ಅಂದ ರೋರಿಂಗ್‌ ಸ್ಟಾರ್

ಕನ್ನಡದ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ಜಿಮ್ ಮಾಡುವ ವೇಳೆ ಲೋವರ್ ಬ್ಯಾಕ್ ಪೇನ್ ಆಗಿದ್ದು, ಸದ್ಯ ಅವರ ಫ್ಯಾಮಿಲಿ ಡಾಕ್ಟರ್ ಕೆಲವು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ.‌ ಹೌದು, ಶ್ರೀ ಮುರಳಿ ಅವರು ನಿತ್ಯವೂ ಗಂಟೆಗಳ ಕಾಲ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾರೆ. ಇದು ಈಗಿನಿಂದಲ್ಲ, ಹಲವು ವರ್ಷಗಳಿಂದಲೂ ಅವರು ಜಿಮ್‌ಗೆ ಹೋಗಿ ಬಾಡಿ ಫಿಟ್‌ ಆಗಿಟ್ಟುಕೊಂಡವರು. ಈಗ ಸದ್ಯ ಅವರು ಹೊಂಬಾಳೆ ಪ್ರೊಡಕ್ಷನ್ಸ್ ನಲ್ಲಿ “ಬಘೀರ” ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಪಾತ್ರಕ್ಕಾಗಿ ಶ್ರೀಮುರಳಿ ಅವರು ಜೋರಾಗಿಯೇ ತಯಾರಿ ನಡೆಸುತ್ತಿದ್ದರು. ಇತ್ತೀಚೆಗೆ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಲೋವರ್‌ ಬ್ಯಾಕ್ ಪೇನ್ ಮಾಡಿಕೊಂಡಿದ್ದರು. ಇದರಿಂದ ಶ್ರೀಮುರಳಿ ಅವರು ನಡೆದಾಡಲೂ ಸಹ ತೊಂದರೆ ಪಟ್ಟಿದ್ದರು. ಅದರಲ್ಲೂ ಅವರು ನಟ ಪ್ರಥಮ್ ಅಭಿನಯದ “ನಟ ಭಯಂಕರ” ಚಿತ್ರದ ಪತ್ರಿಕಾಗೋಷ್ಠಿಗೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ಆಗಲೂ ಅವರು ನಿಂತು ಮಾತನಾಡದಷ್ಟು ನೋವಿತ್ತು. ಅದರಲ್ಲೂ ಶ್ರೀಮುರಳಿ ಅವರು ಬಂದು ಸಿನಿಮಾ ತಂಡವನ್ನು ಬೆಂಬಲಿಸಿ ಪ್ರೋತ್ಸಾಹಿಸಿದ್ದರು.

ಅದಾದ ಎರಡು ದಿನಗಳ ಬಳಿಕವೂ ಅವರಿಗೆ ಲೋವರ್‌ ಬ್ಯಾಕ್ ಪೇನ್ ಕಡಿಮೆಯಾಗಿಲ್ಲ. ಅವರಿಗೆ ಆ ನೋವು ತೀವ್ರಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬ ವೈದ್ಯರ ಬಳಿ ಹೋಗಿದ್ದಾರೆ. ನಂತರ ವೈದ್ಯರು ಪರಿಶೀಲಿಸಿ ಅವರಿಗೆ ಒಂದು ವಾರದ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಶ್ರೀಮುರಳಿ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಸಿನಿಲಹರಿ ಜೊತೆ ಮಾತನಾಡಿದ ನಟ ಶ್ರೀಮುರಳಿ, ಜಿಮ್ ವೇಳೆ ತೊಂದರೆ ಆಗಿರೋದು ನಿಜ. ಒಂದಷ್ಟು ವರ್ಕೌಟ್‌ ಮಾಡುವಾಗ ಇದೆಲ್ಲಾ ಕಾಮನ್‌ ಅಂದುಕೊಂಡೆ. ಅದು ನನಗೆ ಲೋವರ್ ಬ್ಯಾಕ್ ಪೇನ್ ಕಾಣಿಸಿಕೊಂಡಿದ್ದು, ಓಡಾಡಲು ಸ್ವಲ್ಪ ತೊಂದರೆ ಆಗುತ್ತಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಫ್ಯಾನ್ಸ್ ಗಾಬರಿ ಪಡುವ ಅಗತ್ಯವಿಲ್ಲ. ಸ್ವಲ್ಪ ದಿನ ರೆಸ್ಟ್‌ ಮಾಡಿದರೆ ಎಲ್ಲವೂ ಸರಿ ಹೋಗುತ್ತೆ ಎಂದಿದ್ದಾರೆ ಶ್ರೀಮುರಳಿ.

ಶ್ರೀಮುರಳಿ ಅವರು, ಸದ್ಯ ಬಘೀರ ಸಿನಿಮಾ ತಯಾರಿಯಲ್ಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟೊತ್ತಿಗೆ ಬಘೀರ ಸಿನಿಮಾಗೆ ಚಾಲನೆ ಸಿಗಬೇಕಿತ್ತು. ಈಗ ನೋಡಿದರೆ ಶ್ರೀಮುರಳಿ ಅವರು ನೋವು ಮಾಡಿಕೊಂಡಿದ್ದಾರೆ. ಅವರು ವಿಶ್ರಾಂತಿ ಪಡೆದು,ಎಲ್ಲವೂ ಓಕೆ ಅಂದ ಬಳಿಕ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಬಘೀರ ತುಂಬಾ ನಿರೀಕ್ಷೆ ಹುಟ್ಟಿಸಿದೆ. ಕಾರಣ, ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾ. ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸಿನಿಅದ ಟೈಟಲ್‌ ನೋಡಿದವರಿಗೆ ಕುತೂಹಲ ಮೂಡಿಸಿದ್ದು ಸುಳ್ಳಲ್ಲ. ಅದರಲ್ಲೂ ಫಸ್ಟ್‌ ಲುಕ್‌ ಪೋಸ್ಟರ್‌ ಕೂಡ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಆದಷ್ಟು ಬೇಗ ಶ್ರೀಮುರಳಿ ಅವರು ನೋವಿನಿಂದ ಚೇತರಿಸಿಕೊಳ್ಳಲಿ ಅನ್ನೋದು ಸಿನಿಲಹರಿ ಆಶಯ.

Categories
ಸಿನಿ ಸುದ್ದಿ

​All ok ಹೊಸ ಹೌಸ್ ಪಾರ್ಟಿ​ ! ಹೀಗೊಂದು ಬೊಂಬಾಟ್ ಸಾಂಗು…

ಹೊಸ ಪ್ರಯೋಗಗಳ ಮೂಲಕ
ಯೂಟ್ಯೂಬ್​ನಲ್ಲಿ ಸದಾ ಸುದ್ದಿಯಲ್ಲಿರುವ ರ‍್ಯಾಪರ್,
ಸಿಂಗರ್​, ಕಂಪೋಸರ್​ ALL OK ಅಲಿಯಾಸ್​ ಅಲೋಕ್​. ಇದೀಗ ಸದ್ದಿಲ್ಲದೆ ಮತ್ತೊಂದು ವಿಡಿಯೋ ಹಾಡನ್ನು ಹೊರತಂದಿದ್ದಾರೆ. ಅದರ ಹೆಸರು “ಹೌಸ್​ ಪಾರ್ಟಿ’.

ಹಾಡಿಗೆ ಸಂಗೀತ ನೀಡಿ, ಸಾಹಿತ್ಯ, ಪರಿಕಲ್ಪನೆ, ನಿರ್ದೇಶನ, ನಿರ್ಮಾಣವನ್ನೂ ಮಾಡಿರುವ ಅಲೋಕ್​, ಇದು “ಕೋವಿಡ್​ ಸಮಯದಲ್ಲಿನ ಕಾನ್ಸೆಪ್ಟ್​ವೊಂದರಿಂದ ಪ್ರೇರಣೆ ಪಡೆದು “ಹೌಸ್​ ಪಾರ್ಟಿ’ ಹಾಡನ್ನು ಹೊರತಂದಿದ್ದೇನೆ. ಮನೆಯಲ್ಲಿಯೇ ಇರಿ, ಅಲ್ಲಿಯೇ ಪಾರ್ಟಿ ಮಾಡಿ ಎಂಬುದನ್ನು ಕಲರ್ ಫುಲ್ ಆಗಿ ತೋರಿಸಿದ್ದೇವೆ. ಗೋಕರ್ಣದ ಕಹಾನಿ ಪ್ಯಾರಡೈಸ್​ ರೆಸಾರ್ಟ್​ನಲ್ಲಿ ಇಡೀ ಹಾಡಿನ ಚಿತ್ರೀಕರಣ ಮಾಡಿದ್ದೇವೆ’ ಎನ್ನುತ್ತಾರೆ .

“ಬೇರೆ ಭಾಷೆಗಳ ಆಲ್ಬಂಗಳಿಗೆ ಸಿಗುವ ರೆಸ್ಪಾನ್ಸ್​ ಕನ್ನಡದ ಆಲ್ಬಂ ಹಾಡುಗಳಿಗೆ ಸಿಗುತ್ತಿಲ್ಲ. ಆದರೆ, ನಮ್ಮ ಹಾಡುಗಳು ಬೇರಾವ ಭಾಷೆಗಿಂತಲೂ ಕಡಿಮೆಯಿಲ್ಲ. ಅದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ’ ಎಂದು ಅಲೋಕ್​ ಕಳವಳ ವ್ಯಕ್ತಪಡಿಸಿದರು.

ಈಗಾಗಲೇ ಕಿರಿಕ್​ ಶಂಕರ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಅದ್ವಿಕಾ ಈ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. “ಇದು ನನ್ನ ಮೊದಲ ಆಲ್ಬಂ. ತುಂಬ ಖುಷಿ ಎನಿಸುತ್ತದೆ. ಆರಂಭದಲ್ಲಿಯೇ ಈ ರೀತಿಯ ಅವಕಾಶಗಳು ಸಿಗುತ್ತಿವೆ. ಎಲ್ಲಿಯೂ ನಮಗೆ ಶೂಟಿಂಗ್​ ಅನಿಸಲೇ ಇಲ್ಲ. ಪಾರ್ಟಿ ಮಾಡಿದ ಖುಷಿ ಆಯಿತು’ ಎನ್ನುತ್ತಾರೆ ಅದ್ವಿಕಾ.

ಈ ಆಲ್ಬಂ ಗೆ ಆಕಾಶ್​ ಜೋಷಿ ಛಾಯಾಗ್ರಹಣದ ಜತೆಗೆ ಸಂಕಲನವನ್ನೂ ಮಾಡಿದ್ದಾರೆ.

error: Content is protected !!