Categories
ಸಿನಿ ಸುದ್ದಿ

ಜುಲೈ 8ಕ್ಕೆ ವೆಡ್ಡಿಂಗ್ ಗಿಫ್ಟ್!

ಗಂಡ-ಹೆಂಡತಿ ಸಂಬಂಧ ಜನುಮ ಜನುಮಗಳ ಅನುಬಂಧ ಎಂಬ ನಂಬಿಕೆ ನಮ್ಮ ದೇಶದಲ್ಲಿದೆ. ಮದುವೆಯಾದ ಹೊಸತರಲ್ಲೇ ಈ ಸಂಬಂಧದಲ್ಲಿ ಬಿರುಕು ಬಂದರೆ ಏನಾಗುತ್ತದೆ? ಎಂಬ ಕಥಾವಸ್ತುವಿನೊಂದಿಗೆ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ನಿರ್ದೇಶಕ ವಿಕ್ರಂಪ್ರಭು.‌

ನಿಶಾಂತ್ – ಸೋನುಗೌಡ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ಪ್ರೇಮ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ನಾನು ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರದಲ್ಲಿ ಕೆಲಸ ಮಾಡಿದ್ದೆ. ನಂತರ ಪುಣೆಯಲ್ಲಿ ವಾಸ. ಕೆಲವು ವರ್ಷಗಳ ನಂತರ “ವೆಡ್ಡಿಂಗ್ ಗಿಫ್ಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಕೂಡ ಮಾಡಿದ್ದೇನೆ. ಕಳೆದ ವರ್ಷ ಜುಲೈನಲ್ಲಿ ನಮ್ಮ ಸಿನಿಮಾ ಮುಹೂರ್ತ ನೆರವೇರಿತ್ತು. ಈ ಜುಲೈನಲ್ಲಿ ತೆರೆ ಕಾಣುತ್ತಿದೆ. ನಿಗದಿಯಂತೆ ನಡೆಯಲು ಚಿತ್ರತಂಡದ ಸಹಕಾರ ಅಪಾರ. ಸಮಾಜಕ್ಕೆ ಉತ್ತಮ ಸಂದೇಶವುಳ್ಳ ಚಿತ್ರ ನೀಡುತ್ತಿದ್ದೇನೆ. ನೋಡಿ ಹಾರೈಸಿ ಎಂದರು ವಿಕ್ರಂಪ್ರಭು.

ನಾನು ಸಾಮಾನ್ಯವಾಗಿ ಎಲ್ಲಾ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ ವಿಕ್ರಂಪ್ರಭು ಅವರು ಕಥೆ ಹೇಳಿದ ತಕ್ಷಣ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಅಂತಹ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು. ನಾನು ಈ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಟಿ ಪ್ರೇಮ.

ಇದೊಂದು ಭಾವನಾತ್ಮಕ ಚಿತ್ರ. ಯಾರು ಈ ಕಷ್ಟಗಳನೆಲ್ಲಾ ಅನುಭವಿಸಿರುತ್ತಾರೊ, ಅವರಿಗೆ ಈ ಚಿತ್ರ ಹತ್ತಿರವಾಗಲಿದೆ. ಈ ಪಾತ್ರ ಮಾಡುವಾಗ ನನಗಂತು‌ ನಿಜವಾಗಲೂ ಕಷ್ಟವಾಯಿತು. ಇಂತಹವರು ಇರುತ್ತಾರಾ? ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಒಬ್ಬ ನಟಿಯಾಗಿ ಎಲ್ಲಾ ಪಾತ್ರಗಳನ್ನು ಮಾಡಬೇಕು. ಪಾಸಿಟಿವ್ ಹಾಗೂ ನೆಗಟಿವ್ ಎರಡು ಪಾತ್ರಗಳಲ್ಲೂ ಅಭಿನಯಿಸಿದ್ದೇನೆ. ಹಾಗೊಂದು ವೇಳೆ ನೆಗಟಿವ್ ಪಾತ್ರ ನೋಡುಗರಿಗೆ ಹಿಡಿಸಿತೆಂದರೆ, ಅದು ನನ್ನ ನಿಜವಾದ ಗೆಲುವು ಎನ್ನುತ್ತಾರೆ ನಟಿ ಸೋನು ಗೌಡ.

ಜುಲೈ 8 ರಂದು ಸುಮಾರು 50ರಿಂದ 75ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಮಾಡಲಿದ್ದೇವೆ. ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರ ತೆರೆ ಕಾಣಲಿದೆ ಎಂದರು ವಿತರಕ ಶ್ರೀಧರ್.

ಛಾಯಾಗ್ರಾಹಕ ಉದಯಲೀಲ ಹಾಗೂ ಸಂಕಲನಕಾರ ವಿಜೇತ್ ಚಂದ್ರ ಸಹ “ವೆಡ್ಡಿಂಗ್ ಗಿಫ್ಟ್” ಮಾತನಾಡಿದರು.

ನಿಶಾಂತ್, ಸೋನು ಗೌಡ, ಪ್ರೇಮ, ಅಚ್ಯುತಕುಮಾರ್, ಪವಿತ್ರಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಜುಲೈನಲ್ಲಿ ಡೊಳ್ಳು ಕುಣಿತ!

ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಸಿನಿಮಾಗಳು ಪ್ರೇಕ್ಷಕರನ್ನು ಗಮನ ಸೆಳೆಯುತ್ತಿದೆ. ಇದರ ಮುಂದುವರೆದ ಭಾಗವಾಗಿ ತಯಾರಾಗಿರವ ಸಿನಿಮಾ ಡೊಳ್ಳು. ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾ ಹೂರಣ ಡೊಳ್ಳು ಚಿತ್ರದ ಮೊದಲ ಝಲಕ್ ಚಿತ್ರ ಪ್ರೇಮಿಗಳ ಮಡಿಲು ಸೇರಿದೆ.

ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನ ಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಮಂದಿ ಸುತ್ತಾ, ಜನಪದ ಕಲೆ ಡೊಳ್ಳಿನ ಸುತ್ತಾ ಟೀಸರ್ ನ್ನು ಕಟ್ಟಿಕೊಡಲಾಗಿದೆ.

ಡೊಳ್ಳು ಕುಣಿತ ಕಂಟೆಂಟ್ ಹೊಂದಿರುವ ಈ ಸಿನ್ಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಡೊಳ್ಳು ಚಿತ್ರ ನಿರ್ಮಾಣ ಮಾಡಿದ್ದಾರೆ.

ಮಹಾನ್ ಹುತಾತ್ಮ ಕಿರುಚಿತ್ರದ ಸಾರಥಿ ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಡೊಳ್ಳು ಸಿನಿಮಾದಲ್ಲಿ . ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ. ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ. ಅಭಿಲಾಸ್ ಕಲಾಥಿ ಛಾಯಾಗ್ರಹಣ, ಬಿಎಸ್ ಕೆಂಪರಾಜು ಸಂಕಲನವಿರುವ ಡೊಳ್ಳು ಸಿನಿಮಾ ಜುಲೈನಲ್ಲಿ ಥಿಯೇಟರ್ ಗೆ ಆಗಮನವಾಗಲಿದೆ.

Categories
ಸಿನಿ ಸುದ್ದಿ

ಧರಣಿಯಲ್ಲೊಂದು ರೋಚಕ ಟೀಸರ್: ಹಲವು ತಿರುವುಗಳ ಮಧ್ಯೆ ಕೆಂಡ ಮಂಡಲ ಕಥೆ…!

ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಹಾಗೂ ಮುದ್ದು ಮುಖದ ಚೆಲುವೆ ಐಶಾನಿ ಶೆಟ್ಟಿ ಜೋಡಿಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟೀಸರ್ ಸ್ಯಾಂಡಲ್ ವುಡ್ ದಶ ದಿಕ್ಕುಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ತನ್ನೊಳಗೆ ಬಚ್ಚಿಟ್ಟುಗೊಂಡಿರುವ ಹರಿತವಾದ ಹಾಗೂ ವಿಭಿನ್ನ ಕಥಾನಕ ಸುಳಿವು ಟೀಸರ್ ಮೂಲಕ ಅನಾವರಣಗೊಂಡಿದೆ.

ಡ್ರಗ್ಸ್, ಕೊಲೆ, ಪ್ರೀತಿ, ಪ್ರೇಮ, ಕುಟುಂಬದ ಸುತ್ತ ಹೆಣೆದಿರುವ ಟೀಸರ್ ನೋಡುಗರ ನಿರೀಕ್ಷೆ ಹೆಚ್ಚಿಸಿದೆ. ಇದೊಂದು ಡಿಫರೆಂಟ್ ಕಥೆ ಎಂಬುದನ್ನು ನಿರ್ದೇಶಕರು ಅಚ್ಚುಕಟ್ಟಾಗಿ ರೂಪಿಸಿದ್ದಾರೆ. ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಟೀಸರ್ ಯೂಟ್ಯೂಬ್ ಲೋಕದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಬೋಲ್ಡ್ ಲುಕ್ ನಲ್ಲಿ ಐಶಾನಿ ಶೆಟ್ಟಿ ಗಮನ ಸೆಳೆದರೆ, ನವೀನ್ ಹೀರೋ. ಇವರೊಂದಿಗೆ ಯಶ್ ಶೆಟ್ಟಿ , ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್ ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭಾವಿ ತಮ್ಮ ಪಾತ್ರಗಳ ಮೂಲಕ ಜೀವಿಸಿದ್ದಾರೆ.

ಟಾಲಿವುಡ್ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರೊಂದಿಗೆ ಕೆಲಸ ಮಾಡಿರುವ ಅನುಭವ ಶ್ರೀಧರ್ ಶಿಕಾರಿಪುರ ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ.

ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಈ ಚಿತ್ರವನ್ನು ಓಂಕಾರ್‌ ನಿರ್ಮಿಸಿದ್ದಾರೆ. ವೀರೇಂದ್ರ ಕಾಂಚನ್‌, ಕೆ ಗೌತಮಿ ರೆಡ್ಡಿ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ಕೀರ್ತನ್‌ ಪೂಜಾರಿ ಕ್ಯಾಮೆರಾ, ರೋಣದ ಬಕ್ಕೇಶ್‌, ಕಾರ್ತಿಕ್‌ ಚೆನ್ನೋಜಿರಾವ್‌ ಅವರ ಸಂಗೀತ ಉಜ್ವಲ್ ಚಂದ್ರ ಸಂಕಲನವಿದೆ.

Categories
ಸಿನಿ ಸುದ್ದಿ

ಚಾಂದಿನಿ ಬಾರ್ ನಲ್ಲೇ ಇವರ ಬದುಕು-ಬವಣೆ…

ಬಾರ್ ನಲ್ಲಿ ಸಂತಸಕ್ಕೂ ಬಂದು ಕುಡಿತಾರೆ. ದು:ಖ ಮರೆಯಬೇಕೆನ್ನುವವರೂ ಬರುತ್ತಾರೆ ಎನ್ನುವುದಷ್ಟೇ ನಮಗೆ ಗೊತ್ತು. ಆದರೆ ಅಲ್ಲಿಯೇ ತಮ್ಮ ಜೀವನ ಕಟ್ಟಿಕೊಂಡವರೂ ಇರುತ್ತಾರೆ ಎನ್ನುವುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಹಾಗೆ ಬಾರ್‌ನಲ್ಲಿ ತಮ್ಮ ಬದುಕು ಕಟ್ಟಿಕೊಂಡವರ ಕಥೆಯನ್ನು ಚಾಂದಿನಿ ಬಾರ್ ಎನ್ನುವ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ರಾಘವೇಂದ್ರಕುಮಾರ್.


ಮೂಲತ: ಮೈಸೂರಿನವರಾದ ಇವರು ಬರಗೂರು ರಾಮಚಂದ್ರಪ್ಪ, ಮಂಜು ಸ್ವರಾಜ್
ಅವರ ಬಳಿ ಕೆಲಸ ಕಲಿತು ನಂತರ ಈ ಸಿನಿಮಾ ರೆಡಿ ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಚಾಂದಿನಿಬಾರ್ ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ರಾಘವೇಂದ್ರಕುಮಾರ್ ಅವರೇ ನಾಯಕನಾಗಿ ನಟಿಸಿದ್ದು, ಸುಕೃತಿ ನಾಯಕಿಪಾತ್ರ ನಿರ್ವಹಿಸಿದ್ದಾರೆ.


ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ರಾಘವೇಂದ್ರ ನಾನು ಮೂಲತ: ಹುಣಸೂರು ಬಳಿಯ ಹಳ್ಳಿಯವನು. ಸಿನಿಮಾ ಮಾಡಲೆಂದು ಕಥೆ ರೆಡಿ ಮಾಡಿಕೊಂಡೆ. ನಮ್ಮಂಥ ಹೊಸಬರನ್ನು ನಂಬಿ ಹಣ ಹೂಡಲು ಯಾರೂ
ಮುಂದೆ ಬರಲಿಲ್ಲ, ಕೊನೆಗೆ ನಾವೇ ಸ್ನೇಹಿತರೆಲ್ಲ ಸೇರಿ ಈ ಚಿತ್ರ ನಿರ್ಮಿಸಿದ್ದೇವೆ. ಚಾಂದಿನಿ ಬಾರ್‌ನಲ್ಲಿ ಒಂದಷ್ಟು ವ್ಯಕ್ತಿಗಳ ಲೈಫ್‌ ಜರ್ನಿಯನ್ನು ಹೇಳಿದ್ದೇವೆ. ಬಾರ್‌ನಲ್ಲಿ ಕೆಲಸ
ಮಾಡುವ ಸಪ್ಲೈಯರ್ ಆಗಿ ನಾನು ನಟಿಸಿದ್ದೇನೆ.

ಬಾರ್‌ನಲ್ಲಿ ಕೆಲಸ ಮಾಡೋ ಹುಡುಗನಲ್ಲಿ ಪ್ರೀತಿ ಹೇಗೆ ಹುಟ್ಟುತ್ತೆ, ಹೇಗೆ ಬ್ರೇಕ್ ಆಗುತ್ತೆ, ನಂತರ ಆತನ
ಜೀವನ ಹೇಗೆ ಸಾಗುತ್ತೆ ಎಂಬುದನ್ನು ಒಂದಷ್ಟು ತಿರುವುಗಳ ಮೂಲಕ ಹೇಳಿದ್ದೇವೆ. ಒಬ್ಬ ವೇಶ್ಯೆಯೂ ಇದರಲ್ಲಿ ಬರುತ್ತಾಳೆ. ಚಿಂಟು ಎಂಬ ಹುಡುಗನ ಕಥೆಯೂ ಇಲ್ಲಿದೆ. ಮೈಸೂರು ಸುತ್ತಮುತ್ತ ೪೩ ದಿನಗಳ ಕಾಲ ಶೂಟಿಂಗ್ ನಡೆಸಿದ್ದೇವೆ, ಮೈಸೂರಲ್ಲೇ ಚಾಂದಿನಿ ಬಾರ್‌ನ ಸೆಟ್ ಹಾಕಿದ್ದೆವು.ಸೆನ್ಸಾರ್ ನಿಂದ ನಮ್ಮ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ, ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡೋ ಯೋಜನೆಯಿದೆ ಎಂದರು.

ಈ ಚಿತ್ರದ 5 ಹಾಡುಗಳಿಗೆ ಸಹೋದರರಾದ ವಿಶಾಖ ನಾಗಲಾಪುರ ಹಾಗೂ ಕಾರ್ತೀಕ್ ನಾಗಲಾಪುರ ಸಂಗೀತ ಸಂಯೋಜನೆ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತವಿದ್ದು, ಚೇತನ್ ಶರ್ಮ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.

Categories
ಸಿನಿ ಸುದ್ದಿ

ಬಹುಭಾಷಾ ಚಿತ್ರ ಸರೋಜಿನಿಯಲ್ಲಿ ನಿಸರ್ಗ ಗೌಡ ನಟನೆ…

ವಿಸಿಕಾ ಫಿಲ್ಮ್ಸ್ ಪ್ರೈವೆಟ್ ಲಿ. ​​​​ನ ಚರಣ್ ಸುವರ್ಣ, ಹನಿ ಚೌಧರಿ ನಿರ್ಮಾಣದಲ್ಲಿ ನಿರ್ಮಿಸುತ್ತಿರುವ, ವಿಶ್ವ ವಿಖ್ಯಾತ ಶ್ರೀ ಸರೋಜಿನಿ ನಾಯ್ಡು ಅವರ ಜೀವನ ಕಥೆ ಆಧಾರಿತ ಚಿತ್ರ ಸರೋಜಿನಿ ಚಿತ್ರದಲ್ಲಿ ಭಾರತದ ಚಿತ್ರರಂಗದ ದೊಡ್ಡ ಕಲಾವಿದರ ದಂಡೆ ಕೆಲಸ ಮಾಡುತ್ತಿದೆ.


ನಿರ್ದೇಶಕ ವಿನಯ ಚಂದ್ರ ಹೇಳುವಂತೆ ಚಿತ್ರದಲ್ಲಿ ಒಂದು ಮುಖ್ಯ ಪಾತ್ರದಲ್ಲಿ ನಿಸರ್ಗಾ ಗೌಡ ಅವರು ನಟಿಸುತ್ತಿದ್ದಾರೆ.. ನಿಸರ್ಗಗೌಡ ಅವರು ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಿಸರ್ಗ ಗೌಡ ಸರೋಜಿನಿ ಚಿತ್ರದಲ್ಲಿ ಅವರ ಪಾತ್ರಕ್ಕೆ ತುಂಬಾನೆ ಖುಷಿಯಾಗಿದ್ದು ಪಾತ್ರ ಹಳೆ ಕಾಲ ಘಟ್ಟದ್ದು ಆಗಿರುವುದರಿಂದ ನಿಸರ್ಗ ಗೌಡ ಅವರು ಈ ಪಾತ್ರ ಚಾಲೆಂಜಿಂಗ್ ಆಗಿದೆ ಎಂದಿದ್ದಾರೆ. ಇನ್ನೂ ಇಂತಹ ಹಲವು ಅವಕಾಶಗಳು ಈ ಸಿನಿಮಾದ ಮೂಲಕ ದೊರಕಲಿವೆ ಎಂಬ ಭರವಸೆಯಲ್ಲಿದ್ದಾರೆ ಅವರು.

Categories
ಸಿನಿ ಸುದ್ದಿ

ತುರ್ತು ನಿರ್ಗಮನ ಟ್ರೇಲರ್ ಸದ್ದು ಜೋರು: ಜೂನ್ 24ಕ್ಕೆ ಸಿನಿಮಾ ರಿಲೀಸ್

“ಎಕ್ಸ್ ಕ್ಯೂಸ್ ಮಿ” ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. “ಓಲ್ಡ್ ಮಾಂಕ್” ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್ ಹೀರೋ ಆಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ.

ನಮ್ಮ ಚಿತ್ರದ ಟ್ರೇಲರ್ ಗೆ ಬರುತ್ತಿರುವ ಮೆಚ್ಚುಗೆ ನೋಡಿ ಮನ ತುಂಬಿ ಬಂದಿದೆ. ಇದೇ ಇಪ್ಪತ್ತನಾಲ್ಕು ಬಿಡುಗಡೆಯಾಗುತ್ತಿದೆ. ಒಳ್ಳೆಯ ಪ್ರಯತ್ನ ಮಾಡಿದ್ದೇವೆ. ನೋಡಿ ಹಾರೈಸಿ ಎಂದರು ಚಿತ್ರದ ನಿರ್ಮಾಪಕರು ಆಗಿರುವ ನಿರ್ದೇಶಕ‌ ಹೇಮಂತ್ ಕುಮಾರ್.

ನಾನು ನಾಯಕನಾಗಿ ನಟಿಸಿ ಬಹಳ ವರ್ಷಗಳೇ ಆಗಿತ್ತು. ಈ ಚಿತ್ರದ ‌ಮೂಲಕ ನಾಯಕನಾಗಿ‌ ಮರುಪ್ರವೇಶ ಮಾಡುತ್ತಿದ್ದೇನೆ. ಟ್ರೇಲರ್ ನೋಡಿದ್ದ ಅನೇಕ ಗೆಳೆಯರು ಅಭಿನಂದಿಸುತ್ತಿದ್ದಾರೆ. ಈ ಪ್ರಶಂಸೆಗೆ ಮನತುಂಬಿ ಬಂದಿದೆ. ನಿರ್ದೇಶಕ ಹೇಮಂತ್ ಕುಮಾರ್‌ ಪ್ರತಿಭಾವಂತ ನಿರ್ದೇಶಕ ಅವರು ಕಥೆ ಹೇಳಿ, ಅರ್ಧ ಗಂಟೆಗೆ ನಾನು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಉತ್ತಮ ತಂತ್ರಜ್ಞರು ಹಾಗೂ ಕಲಾವಿದರಿಂದ ಕೂಡಿದ ತಂಡವಿದು. ಟ್ರೇಲರ್ ಗೆ ಸಿಕ್ಕಿರುವ ಪ್ರಶಂಸೆ ಸಿನಿಮಾಗೂ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು ಸುನೀಲ್ ರಾವ್.

ನಾನು ಕ್ಯಾಬ್ ಡ್ರೈವರ್ ಪಾತ್ರ ಮಾಡಿದ್ದೀನಿ. ಕಾರ್ ಡ್ರೈವಿಂಗ್ ಬರುತ್ತಿರಲಿಲ್ಲ. ನನಗೆ ಡ್ರೈವಿಂಗ್ ಹೇಳಿಕೊಟ್ಟ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಈಗ ಮಂಗಳೂರಿನಿಂದ ನಾನೇ ಕಾರ್ ಓಡಿಸಿಕೊಂಡು ಬರುತ್ತೇನೆ ಎಂದರು ರಾಜ್ ಬಿ ಶೆಟ್ಟಿ.

ನಾನು ಇಷ್ಟು ವರ್ಷಗಳಿಂದ ಅನೇಕ ಚಿತ್ರಗಳಲ್ಲಿ ಅನೇಕ ಪಾತ್ರಗಳನ್ನು ಮಾಡಿದ್ದೀನಿ. ಆದರೆ ಇಂತಹ ಪಾತ್ರ ಮಾಡಿಲ್ಲ. ಅವಕಾಶ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ತಿಳಿಸಿದರು ನಟಿ ಸುಧಾರಾಣಿ.

ಈ ಚಿತ್ರವನ್ನು ಓಟಿಟಿಯಲ್ಲಿ ನೋಡುವುದಕ್ಕಿಂತ ಚಿತ್ರಮಂದಿರದಲ್ಲಿ ನೋಡಬೇಕು. ಅಂತಹ ಅದ್ಭುತ‌ ಗ್ರಾಫಿಕ್ ನಮ್ಮ ಚಿತ್ರದಲ್ಲಿದೆ. ನಾನು ಕ್ರಿಕೆಟ್ ಕೋಚ್ ಪಾತ್ರ ನಿರ್ವಹಣೆ ಮಾಡಿದ್ದೇನೆ ಎಂದರು ಸಂಯುಕ್ತ ಹೆಗಡೆ.

ಉತ್ತಮ ಚಿತ್ರದಲ್ಲಿ ನಟಿಸಿರುವ ಖುಷಿ ಯಿದೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ ಎಂದರು ಹಿತ ಚಂದ್ರಶೇಖರ್.

ಸಂಗೀತ ನಿರ್ದೇಶಕ ಧೀರೇಂದ್ರ ದಾಸ್ ಮೂಡ್ ಹಾಗೂ ಛಾಯಾಗ್ರಾಹಕ ಪ್ರಯಾಗ್ ಕೂಡ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಕಾಶ್ಮೀರಿ ಹಿಂದೂಗಳಿಗೆ ಕನ್ನಡಿಗರು ಅರ್ಪಿಸಿದ ಹಾಡು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿದ್ರಿ, ಈಗ ದಿ ಕಾಶ್ಮೀರ್ ಸಾಂಗ್ ಕೇಳಿ…

ನಮ್ಮ ದೇಶದ ಮುಕುಟ ಪ್ರಾಯವಾಗಿರುವ ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ನಡೆದಿದ್ದ ಲಕ್ಷಾಂತರ ಕಾಶ್ಮೀರ ಪಂಡಿತರ ಹತ್ಯೆ, ಮಾನವ ಕ್ರೌರ್ಯದ ಪರಮಾವಧಿ, ಭೀಭತ್ಸ ಹಾಗೂ ಅಸಹ್ಯವನ್ನು‌ ಬಿಚ್ಚಿಟ್ಟಿದ ಸಿನಿಮಾ ದಿ ಕಾಶ್ಮೀರ್ ಫೈಲ್ಸ್. ಅಂದಿನ ಘನಘೋರ ಪರಿಸ್ಥಿತಿಯನ್ನು ಮನಮುಟ್ಟುವಂತೆ ಮಾತ್ರವಲ್ಲ, ಮನಸು ಘಾಸಿಗೊಳ್ಳುವಂತೆ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ಇದೀಗ ಅದೇ ಕಾಶ್ಮೀರದ ಕರಾಳತೆ ಬಿಚ್ಚಿಡುವ ದಿ ಕಾಶ್ಮೀರ ಸಾಂಗ್ ಬಿಡುಗಡೆಗೆ ಸಜ್ಜಾಗಿದೆ. ಇದೇ ಶನಿವಾರ ಹಾಡು ಸಂಗೀತ ಪ್ರಿಯರ ಮಡಿಲು ಸೇರಲಿದೆ

ಕಾಶ್ಮೀರ್ ಫೈಲ್ಸ್ ದೇಶ ಮಾತ್ರವಲ್ಲ, ವಿದೇಶದಲ್ಲೂ ಸುದ್ದಿ ಮಾಡಿದ ಸಿನಿಮಾ. ಇದು ಪರ- ವಿರೋಧಗಳ ಚರ್ಚೆಗೂ ಕಾರಣವಾದ ಚಿತ್ರ. ಬಹುತೇಕ ಮಂದಿ ಸಿನಿಮಾ ಪರ ಮಾತಾಡಿದ್ದೇ ಹೆಚ್ಚು. ಈಗ ಅಂಥದ್ದೇ ಮಾತುಗಳಿಗೆ ಕಾರಣವಾಗಿದೆ ದಿ ಕಾಶ್ಮೀರ್ ಸಾಂಗ್. ಇದರ ವಿಶೇಷತೆ ಅಂದರೆ, ಇದೊಂದು ಹಿಂದಿ ವಿಡಿಯೋ ಆಲ್ಬಂ. ನಿರ್ದೇಶಕ ಕ್ರಿಶ್ ಜೋಶಿ ಅವರ ಪರಿಪೂರ್ಣ ಕಲ್ಪನೆಯಲ್ಲಿ ಮೂಡಿ ಬಂದ ಚಿತ್ರ. ಖ್ಯಾತ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರ ರಾಗ ಸಂಯೋಜನೆಯಲ್ಲಿ ತಯಾರಾದ ಗೀತೆ. ಈ ಕುರಿತು ದಿ ಕಾಶ್ಮೀರ್ ಸಾಂಗ್ ತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಈ ಅಪರೂಪದ ವಿಡಿಯೋ ಆಲ್ಬಂ ಸಾಂಗ್ ನಲ್ಲಿ ಕಾಣಿಸಿಕೊಂಡಿರೋದು ನಟ ಕೋವಿದ್ ಮಿತ್ತಲ್. ಅವರು ಹೇಳಿದ್ದಿಷ್ಟು. ಪ್ರತಿಯೊಬ್ಬರಿಗೂ ಈ ಹಾಡು ಇಷ್ಟವಾಗುತ್ತದೆ. ಕಾಶ್ಮೀರ ಹಿಂದೂಗಳಿಗೆ ಸಮರ್ಪಣೆ ಸಲ್ಲಿಸುವ ಹಾಡು ಇದಾಗಿದೆ. ಈ ಹಾಡಲ್ಲಿ ಅಲ್ಲಿ ನಡೆದ ಸನ್ನಿವೇಶಗಳನ್ನು ಕಟ್ಟಿಕೊಡುವ ಪ್ರಯತ್ನವಾಗಿದೆ. ನಾನು ಈ ಹಾಡು ನಿರ್ಮಿಸಿ, ನಟಿಸೋಕೆ ಕಾರಣ ವೀರ್ ಸಮರ್ಥ್ ಅವರು ಸಂಯೋಜಿಸಿದ ರಾಗ. ಅದರಲ್ಲೂ ಶೇಖರ್ ಅಸ್ತಿತ್ವ ಅವರ ಸಾಹಿತ್ಯ. ಹಾಡು ಕೇಳಿದ ಮೇಲೆ ವಿಡಿಯೋ ಆಲ್ಬಂ ಮಾಡಬೇಕೆನಿಸಿ ಚಿತ್ರೀಕರಿಸಿದ್ದೇವೆ. ಈ ಹಾಡು ಕಾಶ್ಮೀರದ ಹಿಂದೂಗಳಿಗೆ ಅರ್ಪಣೆ ಎಂದರು.

ನಿರ್ದೇಶಕ ಕ್ರಿಷ್ ಜೋಷಿ, ಅವರಿಗೆ ವೀರ್ ಮಾಡಿದ ಟ್ಯೂನ್ ಇಷ್ಟವಾಗಿ ಇದನ್ನು ಯಾಕೆ ಸಾಂಗ್ ಮಾಡಬಾರದು ಅಂತ ನಿರ್ಧರಿಸಿ, ಹಿಂದಿ ಗೀತೆಗೆ ಯಾರಿಂದ ಸಾಹಿತ್ಯ ಬರೆಸುವುದು ಅಂತ ಯೋಚಿಸುತ್ತಿದ್ದಾಗ, ಬಾಲಿವುಡ್ ನ ಖ್ಯಾತ ಗೀತರಚನೆಕಾರ ಶೇಖರ್ ಅಸ್ತಿತ್ವ ಅವರ ನೆನಪಾಯಿತು. ತಕ್ಷಣ ಸಂಪರ್ಕಿಸಿದೆವು. ಅವರು ಕೇವಲ ಎರಡು ದಿನದಲ್ಲಿ ಅದ್ಭುತ ಸಾಹಿತ್ಯ ಬರೆದುಕೊಟ್ಟರು. ಸಾಂಗ್ ಕೈಗೆ ಸಿಕ್ಕಮೇಲೆ ಜೋಶ್ ಹೆಚ್ಚಾಯ್ತು. ಮನಾಲಿಯಲ್ಲಿ ಶೂಟ್ ಮಾಡಬೇಕು ಎಂಬ ಯೋಚನೆ ಇತ್ತು. ಆದ್ರೆ ಆಗಲಿಲ್ಲ. ಕಂಪ್ಲೀಟ್ ಎಮೋಷನ್ ಕಥೆ ಬಿಲ್ಡ್ ಮಾಡುವುದು ಕಷ್ಟವಾಯ್ತು. ಲೇಟ್ ಆಗಿ ಕಾಸ್ಟ್ಯೂಮ್ ಸಿಕ್ತು. ಫೈನಲಿ ಎಲ್ಲಾ ಕಷ್ಟ ಇಷ್ಟದೊಂದಿಗೆ ಸಾಂಗ್ ಕಂಪ್ಲೀಟ್ ಆಗಿದೆ ಎಂದರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರಿಗೆ ಇಂಥದ್ದೊಂದು ಹಾಡು ಹುಟ್ಟೋಕೆ ಕಾರಣ ಒಂದೊಳ್ಳೆಯ ರಾಗವಂತೆ. ಅದು ಕೊನೆಗೆ ಕಾಶ್ಮೀರ್ ಸಾಂಗ್ ಆಗಿದೆ. ಇನ್ನು ಮೊದಲ ಸಲ ನಾನೂ ಕೂಡ ತೆರೆಯ ಮೇಲೆ ಕಾಣಿಸಿಕೊಂಡಿದ್ದೇನೆ. ಒಂದೊಳ್ಳೆಯ ಹಾಡು ಕಟ್ಟಲು ಒಳ್ಳೆಯ ತಂಡ ಕಾರಣವಾಗಿದೆ. ಹಾಡಿಗೆ ತಕ್ಕಂತೆ ಚಿತ್ರೀಕರಣ ಮಾಡಲಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ಈ ಹಾಡು ತಲುಪಿಸಲು ಮಾಧ್ಯಮ ಮುಖ್ಯ ಪಾತ್ರವಹಿಸಬೇಕು ಎಂದರು.

ಶೇಖರ್ ಅಸ್ತಿತ್ವ ಸಾಹಿತ್ಯದ ದಿ ಕಾಶ್ಮೀರ್ ಹಾಡಿಗೆ ವೀರ್ ಸಮರ್ಥ್ ಸಂಗೀತ ನೀಡುವುದರ ಜೊತೆಗೆ ಧ್ವನಿಯಾಗಿದ್ದಾರೆ. ಕ್ರಿಶ್ ಜೋಷಿ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು ಇಲ್ಲಿ ವಿಶೇಷ. ಮನು ಛಾಯಾಗ್ರಹಣ ಮಾಡಿದರೆ, ದೀಪಕ್ ಕೆ. ರಾಜು ಸಂಕಲನ ಮಾಡಿದ್ದಾರೆ. ಕೆ.ಎಂ. ಮೀಡಿಯಾ ಮತ್ತು ಪ್ರೊಡಕ್ಷನ್ ನಡಿ ನಿರ್ಮಾಣವಾದ ಹಾಡಿಗೆ ಸಾಗರ್ ಬರರ್ದಾಪುರೆ ನಿರ್ವಹಣೆ ಇದೆ.

ಹಾಡಿನ ಸಾರಾಂಶವಿದು…

ಆದಿತ್ಯ 25 ವರ್ಷದ ನಂತರ ತನ್ನ ತಾಯ್ನಾಡು ಕಾಶ್ಮೀರಕ್ಕೆ ಬಂದಾಗ ಹಳೆ ನೆನೆಪುಗಳನ್ನು ಮೆಲುಕು ಹಾಕುತ್ತಾ ಸಾಗುವ ಕಾಶ್ಮೀರದ ಕರಾಳತೆಯನ್ನು ವಿವರಿಸುವ ಹಾಡಿನಲ್ಲಿ ಕೋವಿದ್ ಮಿತ್ತಲ್ ಹಾಗೂ ವೀರ್ ಸಮರ್ಥ್ ನಟಿಸಿದ್ದು, ಈ ಅಲ್ಬಮ್ ಸಾಂಗ್ Get High on Music” ಎಂಬದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಆಯ್ತು ಬರ್ತಿದೆ ದಿ ಕಾಶ್ಮೀರ್ ಸಾಂಗ್ ಜೂನ್ 18ರಂದು ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ರಿಷಬ್ ಶೆಟ್ಟಿ ತಂಡದ ಕಥೆಗೆ ಮೆಚ್ಚುಗೆ: ಹರಿಕಥೆ ಅಲ್ಲ ಗಿರಿಕಥೆ ಟ್ರೇಲರ್ ಹೊರಬಂತು…

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಸಿನಿಮಾ ನಿರ್ದೇಶಕನಾಗುವ ಆಸೆಹೊತ್ತ ಮಧ್ಯಮವರ್ಗದ
ಯವಕನೊಬ್ಬನ ಸುತ್ತ ನಡೆಯುವ ಕಥೆ ಇದು. ಇದರಲ್ಲಿ ನಾನು ಗಿರಿಕೃಷ್ಣ ಎಂಬ ಪಾತ್ರ ಮಾಡಿದ್ದೀನಿ. ಗಿರಿ ಅಂದರೆ ನಾನೊಬ್ಬನ ಹೆಸರಲ್ಲ. ಹೀರೋಯಿನ್ ಹೆಸರು ಗಿರಿಜಾ ಥಾಮಸ್ ಹಾಗೂ ವಿಲನ್ ಹೆಸರು ಗಿರಿ ಅಂತ. ಹೀಗೆ ನಮ್ಮ ಚಿತ್ರದಲ್ಲಿ ಹಲವು ಗಿರಿಗಳ ಸಂಗಮವಾಗಿದೆ.


ಸಿನಿಮಾ ಮಾಡಲು ಹೊರಟಿರುವ ಅನೇಕರ ಕಥೆಯಿದು. ಅದ್ಬುತವಾದ ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜೂನ್ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎರಡು ಗಂಟೆಳ ಕಾಲ ಸಂಪೂರ್ಣ ಮನೋರಂಜನೆಯಿರುವ ಸಿನಿಮಾ ನಮ್ಮದು. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು ರಿಷಭ್ ಶೆಟ್ಟಿ.

ನಮ್ಮ ಚಿತ್ರತಂಡದ ಸಹಕಾರದಿಂದ ಚೆನ್ನಾಗಿ ಬಂದಿದೆ. ನಾನು ಹಾಗೂ ರಿಷಭ್ “ಕಥಾಸಂಗಮ” ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೆವು. ಗಿರಿಕೃಷ್ಣ ಈ ಚಿತ್ರದ ಕಥೆ ಬರೆದಿದ್ದರು. ಆನಂತರ ನಾನು ಹಾಗೂ ಅನಿರುದ್ಧ್ ಮಹೇಶ್ ಸೇರಿ ಈ ಚಿತ್ರ ನಿರ್ದೇಶನ‌ ಮಾಡಿದ್ದೇವೆ ಎಂದರು ಕರಣ್ ಅನಂತ್ . ಮತ್ತೊಬ್ಬ ನಿರ್ದೇಶಕ ಅನಿರುದ್ಧ್ ಮಹೇಶ್ ಚಿತ್ರದ ಕುರಿತು ಮಾತನಾಡಿದರು.

ನಾನು ಈ ಚಿತ್ರದಲ್ಲಿ ಗಿರಿಜಾ‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ನಟಿಯಾಗಬೇಕೆಂಬ ಆಸೆ ಹೊತ್ತ‌ ಹುಡುಗಿ. ತಾಯಿ ಇರುವುದಿಲ್ಲ. ತಂದೆ ಹಾಗೂ ಅಣ್ಣ ಇರುತ್ತಾರೆ ಎಂದು ನಾಯಕಿ ರಚನಾ ಇಂದರ್ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ನನ್ನ ಪಾತ್ರ ಕೂಡ ಚೆನ್ನಾಗಿದೆ. ಖುಷಿ ಜೋಕುಮಾರಸ್ವಾಮಿ ನನ್ನ ಪಾತ್ರದ ಹೆಸರು ಎಂದರು ನಟಿ ತಪಸ್ವಿನಿ.

ನಾನು ಈ ಹಿಂದೆ ಜೋಕುಮಾರಸ್ವಾಮಿ ನಾಟಕದಲ್ಲಿ ಅಭಿನಯಿಸಿದ್ದೆ‌.‌ಇದರಲ್ಲೂ ಅದೇ ಹೆಸರು . ಆದರೆ ಮಂತ್ರಿಯಾಗಿ ಕಾಣಿಸಿಕೊಂಡಿದ್ದೇನೆ ಎನ್ನುತ್ತಾರೆ ನಟ ದಿನೇಶ್ ಮಂಗಳೂರು.

ನಾನು ಎಲ್ಲಾ‌ ಜವಾಬ್ದಾರಿಯನ್ನು ರಿಷಭ್ ಅವರಿಗೆ ನೀಡಿದ್ದೀನಿ. ಅವರ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗಿದೆ. ಜಯಣ್ಣ ಈ ಚಿತ್ರದ ಹಂಚಿಕೆದಾರರು. ಚಿತ್ರವನ್ನು ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಸಂದೇಶ್ ಎನ್.

ರಿಷಭ್ ಶೆಟ್ಟಿ, ರಚನ ಇಂದರ್, ತಪಸ್ವಿನಿ, ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.
ರಂಗನಾಥ್ – ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಭರತ್ ದೀಪ್ ಅವರ ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮಠದಲ್ಲಿ ಹಾಸ್ಯ ಕಲಾವಿದರ ದಂಡು: 25 ಜಿಲ್ಲೆಗಳಲ್ಲಿ ಶೂಟಿಂಗ್- ಇದು ರಿಯಲ್ ಸ್ಟೋರಿ ಸಿನಿಮಾ…

ಮಠ…ಗುರು ಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ. ಜಗ್ಗೇಶ್ ಹಾಗೂ ಗುರು ಪ್ರಸಾದ್ ಜುಗಲ್ ಬಂದಿಯ ಈ ಚಿತ್ರ ಪ್ರೇಕ್ಷಕರನ್ನು‌ ನಕ್ಕು ನಲಿಸಿತ್ತು. ಇದೀಗ ಇದೇ ಹೆಸರಿನ ಸಿನಿಮಾ ಬರ್ತಿದೆ. ಹಾಗಂತ ಈ ಸಿನಿಮಾಗೂ ಆ ಸಿನಿಮಾಗೂ ಸಂಬಂಧವಿಲ್ಲ. ಇದೇ ಬೇರೆ ಅದೇ ಬೇರೆ.

ಫಿಲಾಸಫಿಕಲ್, ಕಾಮಿಡಿ ಸತ್ಯ ಘಟನೆಯಾಧಾರಿತ ಮಠ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಬರೋಬ್ಬರಿ 82 ಜನ ಕಲಾವಿದರು ನಟಿಸಿರುವ ಈ ಚಿತ್ರದಲ್ಲಿ ಗುರು ಪ್ರಸಾದ್, ತಬಲನಾಣಿ, ಮಂಡ್ಯ ರಮೇಶ್, ಬಿರಾದಾರ್ ಸೇರಿದಂತೆ ಹಾಸ್ಯಕಲಾವಿದರ ದಂಡೇ ಇದೆ.

ಸುಮಾರು ಮೂರು ವರ್ಷಗಳ ಕಾಲ ಚಿತ್ರೀಕರಣ ನಡೆಸಿರುವ ಚಿತ್ರತಂಡ, 25 ಜಿಲ್ಲೆಗಳಲ್ಲಿ ವಿವಿಧ ಪ್ರವಾಸಿ ತಾಣಗಳಲ್ಲಿ ಕಥೆಗೆ ತಕ್ಕಂತೆ ಚಿತ್ರೀಕರಿಸಲಾಗಿದೆ. ಸುಮಾರು ಮುನ್ನೂರು ಮಠಗಳಲ್ಲಿ ಚಿತ್ರೀಕರಣ ನಡೆಸಲಾಗಿದೆಯಂತೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ.

ಸಾಧುಕೋಕಿಲಾ ಮಾತಾನಾಡಿ, ನಾನು ಸುಮಾರು ಮಾಡಿರಬಹುದು. ಆದ್ರೆ ಲೆಕ್ಕ ಇಟ್ಟಿಲ್ಲ. ಸುಮಾರು 600 ರಿಂದ 700 ಸಿನಿಮಾ ಮಾಡಿರಬಹುದು. ಜಾಸ್ತಿ, ಕಡಿಮೆ ಎರಡು ಇರಬಹುದು. ಆದ್ರೆ ಗುರು ಪ್ರಸಾದ್ ಮಠ ಸಿನಿಮಾದಲ್ಲಿ ನಾನು ಒಂದೆರೆಡು ಸೀನ್ ನಲ್ಲಿ ಮಾಡಿದ್ದೇನೆ. ಆ ಎಲ್ಲಾವೂ ಹಿಟ್. ಆದ್ರೆ ಈ ಮಠ ಹೆಸ್ರು ತೆಗೆದುಕೊಂಡಿದೆ. ಕಥಾವಸ್ತು ಬೇರೆ. ನಾನು ಮೇಜರ್ ರೋಲ್ ಮಾಡಿದ್ದು, ಆದ್ರೆ ಅದು ನನಗೆ ಕಾಮಿಡಿಯಲ್ಲ. ಇದು ನಿಜ ಜೀವನದ ಕಥೆ. ಒಂದೊಂದು ಪಾತ್ರವೂ ಕಥಾನಕ‌ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ಗುರು ಪ್ರಸಾದ್ ಮಾತಾನಾಡಿ, ಮನೆ ಕಟ್ಟುವುದು ಸುಲಭ. ಮಠದ ಕಟ್ಟುವುದು ಕಷ್ಟ. 290 ದಿನ ಪಯಣ ಮಾಡಿ ಮಠಗಳಿಗೆ ಭೇಟಿ‌ ಕೊಟ್ಟು ಕಥೆ ಮಾಡಿ ಸಿನಿಮಾ ಮಾಡೋದು ಕಷ್ಟ. ಈ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದರು.

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, ಮಠ ಸಿನಿಮಾ ಕಥೆಗೆ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದಾರೆ. ಗುರು ಪ್ರಸಾದ್ ಇಲ್ಲದೇ ಮಠ ಅಪೂರ್ಣ. ಹೀಗಾಗಿ ಅವರನ್ನು ಕೇಳಿದ್ವಿ. ಅವ್ರು ಗ್ರೀನ್ ಸಿಗ್ನಲ್ ಕೊಟ್ಟರು ಸಿನಿಮಾ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಜೀವನ್ ಗೌಡ ಛಾಯಾಗ್ರಹಣ, ರಾಜ್ಯಪ್ರಶಸ್ತಿ ವಿಜೇತ ಸಿ.ರವಿಚಂದ್ರನ್ ಸಂಕಲನ, ವಿ ಮನೋಹರ್ ಸಂಗೀತ ನಿರ್ದೇಶನ, ಯೋಗರಾಜ್ ಭಟ್ಟ್, ವಿ‌ ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ಶುಗರ್‌ ಗೆ ಸಿಕ್ತು ಒಳ್ಳೇ ಬೆಲೆ! ಹಿಂದಿ ರೀಮೇಕ್ ರೈಟ್ಸ್ ಮಾರಾಟ; ಟೀಮ್ ಖುಷಿ

ಡಾಟರ್ ಆಫ್ ಪಾರ್ವತಮ್ಮ ಖ್ಯಾತಿಯ ನಿರ್ಮಾಪಕ ಶಶಿಧರ ಕೆ.ಎಂ. ಅವರು ಇದೇ ಮೊದಲಬಾರಿಗೆ ನಿರ್ದೇಶನ ಮಾಡಿರುವ ಶುಗರ್‌ ಲೆಸ್ ಚಿತ್ರದ ಹಿಂದಿ ರೀಮೇಕ್ ರೈಟ್ಸ್ ನ್ನು ಹೆಸರಾಂತ ಸಂಸ್ಥೆಯೊಂದು ಖರೀದಿಸಿದೆ.
ಬ್ಲ್ಯಾಕ್ ಪ್ಯಾಂತರ್ ಮೂವೀಸ್ ಲಿಮಿಟೆಡ್ (ಲಂಡನ್ ಹಾಗೂ ಮುಂಬೈ)ನ ಶಿವ ಆರ್ಯನ್ ಅವರು ಶುಗರ್ಲೆಸ್ ಚಿತ್ರದ ನಿರೂಪಣೆ ಇಷ್ಟ ಪಟ್ಟು ಉತ್ತಮ ಬೆಲೆಗೆ ಖರೀದಿಸಿದ್ದಾರೆ.

ಶಿವ ಆರ್ಯನ್ ಕೂಡ ಒಬ್ಬ ಪ್ರತಿಭಾವಂತ ಕಲಾವಿದ, ನಿರ್ಮಾಪಕ ಹಾಗೂ ಉದ್ಯಮಿಯಾಗಿದ್ದು ಶುಗರ್ ಲೆಸ್ ಸಿನಿಮಾದ ಮೇಕಿಂಗ್ ಅವರಿಗೆ ಇಷ್ಟವಾಗಿದೆ. ಬರುವ ಜುಲೈ ತಿಂಗಳಲ್ಲಿ ಈ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಸಹ ಶಶಿಧರ್ ಕೆ.ಎಂ. ಅವರೇ ಮಾಡಿದ್ದು, ಅವರ ಜೊತೆ ಸಹಾಯಕ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾಥ್ ನೀಡಿದ್ದಾರೆ. ಅಲ್ಲದೆ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ರಘು ಸಿಂಗಂ ಹಾಗೂ ದಿವ್ಯ ಶಶಿಧರ್ ಕಾರ್ಯನಿರ್ವಹಿಸಿದ್ದಾರೆ.

ದಿಶಾ ಎಂಟರ್‌ಟೈನ್‌ಮೆಂಟ್ ಹಾಗೂ ಜಾಜಿ ಪ್ರೊಡಕ್ಷನ್ಸ್ ಸಹಕಾರದೊಂದಿಗೆ ನಿರ್ಮಾಣವಾಗಿರುವ ಶುಗರ್‌ಲೆಸ್ ಛಾಯಾಗ್ರಾಹಕರಾಗಿ ಲವಿತ್, ಸಂಗೀತ ನಿರ್ದೇಶಕರಾಗಿ ಅನೂಪ್ ಸೀಳಿನ್ ಕೆಲಸ ಮಾಡಿದ್ದು, ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ಗುರು ಕಶ್ಯಪ್ ಅವರ ಸಂಭಾಷಣೆ ಈ ಚಿತ್ರಕ್ಕಿದೆ.


ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ
ಕಲೆ ವಿನ್ಯಾಸ ರೂಪೇಂದ್ರ ಆಚಾರ್ ಅವರದ್ದು. ಈ ಚಿತ್ರಕ್ಕೆ
ನಲವತೈದು ದಿನಗಳ ಕಾಲ ಚಿತ್ರೀಕರಣ
ನಡೆಸಲಾಗಿದೆ. ಸಕ್ಕರೆ ಖಾಯಿಲೆ ಹಿನನೆಲೆಯಲ್ಲಿ ನಡೆಯುವ ತುಂಬಾ ಹ್ಯೂಮರಸ್ ಆದ ನಿರೂಪಣೆ ಇರುವಂಥ ಚಿತ್ರ ಇದಾಗಿದ್ದು, ಕಥೆಯಲ್ಲಿ ಹಾಸ್ಯವೇ ಪ್ರಧಾನವಾಗಿರುತ್ತದೆ.
ನಾನು ಸ್ಕಿಪ್ಟ್ ಮಾಡುವಾಗ ನನ್ನ ಸಿನಿಮಾದ ಹೀರೋ ಪಾತ್ರ ಹೇಗೆಲ್ಲ ಇರಬೇಕು ಎಂದುಕೊಡಿದ್ದೆನೋ, ಅದೇ ರೀತಿಯಲ್ಲಿ ನಾಯಕನಟ ಪೃಥ್ವಿ ಅಂಬರ್ ನಟಿಸಿದ್ದಾರೆ ಎಂದು ಶಶಿಧರ ಹೇಳಿದ್ದಾರೆ.

error: Content is protected !!