Categories
ಸಿನಿ ಸುದ್ದಿ

ಡಿಸೆಂಬರ್ 24 ಹಾಡುಗಳ ಸಂಭ್ರಮ!

ಗಾಂಧಿನಗರದಲ್ಲಿ ದಿನ ಕಳೆದಂತೆ ಹೊಸಬರ ಹೊಸತನದ ಚಿತ್ರಗಳು ಬರುತ್ತಿವೆ. ಆ ಸಾಲಿಗೆ ಡಿಸೆಂಬರ್ 24 ಕೂಡ ಸೇರಿದೆ. ಇದೊಂದು ಹಾರರ್, ಥ್ರಿಲ್ಲರ್, ಕಥಾನಕ ಹೊಂದಿರುವ ಚಿತ್ರ. ಇತ್ತೀಚೆಗೆ ಮೋಷನ್ ಪೋಸ್ಟರ್ ಹಾಗೂ ಆಡಿಯೋ ಬಿಡುಗಡೆಯಾಗಿದೆ

ಎಂಜಿ ಎನ್ ಪ್ರೊಡಕ್ಷನ್ ಮೂಲಕ ತಯಾರಾಗುತ್ತಿರುವ ಡಿಸೆಂಬರ್ 24 ಚಿತ್ರಕ್ಕೆ ದೇವು ಹಾಸನ್ ಮೊದಲ ಬಾರಿಗೆ ನಿರ್ಮಾಪಕರಾಗುತ್ತಿದ್ದಾರೆ. ಹುಲಿಯೂರು ದುರ್ಗದಲ್ಲಿ ನಡೆದ ನೈಜ ಘಟನೆ ಆಧರಿಸಿ ಅವರು ನಿರ್ಮಾಣ ಮಾಡಿರುವ ಚಿತ್ರವಿದು. ಇದು ಹಾರರ್, ಥ್ರಿಲ್ಲರ್, ಕಥಾನಕ ಹೊಂದಿದ್ದು, ಮೋಷನ್ ಪೋಸ್ಟರ್ ಹಾಗು ಹಾಡುಗಳನ್ನು ಹೊರತರಲಾಗಿದೆ. ಶ್ರೀನಗರ ಕಿಟ್ಟಿ ತಂಡಕ್ಕೆ ಶುಭಕೋರಿದ್ದಾರೆ.

ನಾಗರಾಜ್ ಎಂಜಿ ಗೌಡ ಕಥೆ, ಚಿತ್ರಕಥೆ , ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ಸಕಲೇಶಪುರ, ಹುಲಿಯೂರು ದುರ್ಗ ಹಾಗೂ ದಾಂಡೇಲಿ ಸುತ್ತಮುತ್ತ ಸುಮಾರು 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರದಲ್ಲಿ 4 ಹಾಡುಗಳಿದ್ದು ಪ್ರವೀಣ್ ನಿಕೇತನ್ ಹಾಗೂ ವಿಶಾಲ್ ಆಲಾಪ್ ಸಂಗೀತ ನೀಡಿದ್ದಾರೆ. ನಾಗೇಂದ್ರಪ್ರಸಾದ್, ವಿಶಾಲ್ ಆಲಾಪ್ ಹಾಗೂ ಗೀತಾ ಆನಂದ್ ಪಟೇಲ್ ಸಾಹಿತ್ಯ ಬರೆದಿದ್ದಾರೆ. ಮೋಷನ್ ಪೋಸ್ಟರ್ ಬಿಡುಗಡೆ ‌ಮಾಡಿದ ಶ್ರೀನಗರ ಕಿಟ್ಟಿ, ‘ ಹೊಸಬರು ಚಿತ್ರ ಮಾಡಿದ್ದಾರೆ. ಅವರಿಗೆ ಯಶಸ್ಸು ಸಿಗಲಿ ಎಂದರು.

ಚಿತ್ರದಲ್ಲಿ ಅಪ್ಪು ಬಡಿಗೇರ, ರವಿ ಕೆ.ಆರ್.ಪೇಟೆ, ರಘು ಶೆಟ್ಟಿ, ಜಗದೀಶ್ ಹೆಚ್. ದೊಡ್ಡಿ, ಸಾಗರ್, ‌ ಭೂಮಿಕಾ ರಮೇಶ್, ಮಿಲನಾ ರಮೇಶ್, ದಿವ್ಯ ಆಚಾರ್ ನಟಿಸಿದ್ದು, ಆನಂದ್ ಪಟೇಲ್ ಹುಲಿಕಟ್ಟೆ ಪಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನಿಲ್ ಗೌಡ ಖಳನಾಯಕನಾಗಿ ನಟಿಸಿದ್ದಾರೆ. ಎಂ.ಜಿ.ಎನ್. ಪ್ರೊಡಕ್ಷನ್ ಲಾಂಛನದಲ್ಲಿ ದೇವು ಹಾಸನ್, ಮಂಜು. ಡಿ. ಟಿ,ವಿ.ಬೆಟ್ಟೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.


ಉಸಿರಾಟದ ತೊಂದರೆಯಿಂದ ಮರಣ ಹೊಂದುತ್ತಿರುವ ಮಕ್ಕಳನ್ನು ರಕ್ಷಿಸಲು ಮೆಡಿಕಲ್ ರೀಸರ್ಚ್ ಗೆಂದು ಕಾಡಿಗೆ ತೆರಳುವ ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಲ್ಲಿ ಎದುರಾದ ಸಮಸ್ಯೆಗಳು, ತೊಂದರೆಗಳ ಹಿನ್ನೆಲೆ ಏನು. ಅದರ ಹಿಂದೆ ಯಾರ್ಯಾರಿದ್ದಾರೆ ಎನ್ನುವುದೇ ಡಿಸೆಂಬರ್ 24 ಚಿತ್ರದ ಕಥೆ. 2015ರಿಂದ 2019ರೊಳಗೆ ನಡೆದ ಕೆಲ ನೈಜ ಘಟನೆಗಳನ್ನಿಟ್ಟುಕೊಂಡು ಮಾಡಿಕೊಂಡಿರುವಂತಹ ಚಿತ್ರ ಇದಾಗಿದ್ದು, ಪಕ್ಕಾ ಫ್ಯಾಮಿಲಿ ಲವ್, ಫ್ರೆಂಡ್ಷಿಪ್, ಹಾರರ್, ಥ್ರಿಲ್ ಅಂಶಗಳಿವೆ. ಆರ್ಯಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮಿಗಳು ಹಾಗೂ
ಬಾಮಾ ಹರೀಶ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿಡಿಯೋಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Categories
ಸಿನಿ ಸುದ್ದಿ

ರೈಡರ್ ಎಂಬ ಭರ್ಜರಿ ಪ್ಯಾಕೇಜ್ ಸಿನಿಮಾ!

ಚಿತ್ರ ವಿಮರ್ಶೆ

ನಿರ್ದೇಶನ ವಿಜಯ್ ಕುಮಾರ್ ಕೊಂಡ
ನಿರ್ಮಾಣ : ಸುನೀಲ್ ಗೌಡ, ಲಹರಿ ಸಂಸ್ಥೆ
ತಾರಾಗಣ; ನಿಖಿಲ್ ಕುಮಾರ್, ಕಶ್ಮೀರಾ, ದತ್ತಣ್ಣ, ಅಚ್ಯುತಕುಮಾರ್, ಚಿಕ್ಕಣ್ಣ, ಗರುಡ ರಾಮ್, ರಾಜೇಶ್ ನಟರಂಗ ಇತರರು

ಒಂದು ಸಿನಿಮಾ ಅಂದರೆ ಹೇಗಿರಬೇಕು? ಮೊದಲಿಗೆ ಒಂದೊಳ್ಳೆಯ ಕಥೆ ಇರಬೇಕು. ಅಲ್ಲಿ ಚಿತ್ರಕಥೆಯೇ ಹೈಲೈಟ್ ಆಗಿರಬೇಕು. ಒಂದೇ ವರ್ಗಕ್ಕೆ ಸೀಮೀತವಾಗಿರಬಾರದು. ಅಲ್ಲಿ ಪ್ರೀತಿ, ಪ್ರೇಮ, ಗೆಳೆತನ, ಸೆಂಟಿಮೆಂಟ್, ಬಾಂಧವ್ಯ, ಹಾಸ್ಯ ಹೀಗೆ ಎಲ್ಲದರ ಪಾಕವಿರಬೇಕು. ಅಂಥದ್ದೊಂದು ರುಚಿಯಾದ ಹೂರಣದ ಸವಿಯಿರುವ ಸಿನಿಮಾಗಳ ಸಾಲಿಗೆ ನಿಖಿಲ್ ಕುಮಾರ್ ಅಭಿನಯದ ‘ರೈಡರ್’ ಸಿನಿಮಾದಲ್ಲಿದೆ.

ಹೌದು, ಈ ವಾರ ತರೆಗೆ ಅಪ್ಪಳಿಸಿರುವ ‘ರೈಡರ್’ ಅಪ್ಪಟ ಪ್ರೇಮಕಥೆಯೊಂದಿಗೆ
ಭರ್ಜರಿ ಆ್ಯಕ್ಷನ್ ಇರುವ ಮಜಭೂತಾದ ಚಿತ್ರವಾಗಿ ಹೊರಹೊಮ್ಮಿದೆ.

ಇದೊಂದು ಲವ್ ಸ್ಟೋರಿ, ಸೆಂಟಿಮೆಂಟ್, ಎಮೋಶನ್‌ಸ್‌, ಕಾಮಿಡಿ, ಭರ್ಜರಿ ಆ್ಯಕ್ಷನ್ ಜೊತೆಗೆ ನೆನಪಿಸೋ ಹಾಡುಗಳು ಚಿತ್ರದ ವೇಗಕ್ಕೆ ಅಡ್ಡಿಯಾಗಿಲ್ಲ.
ಇನ್ನು, ಸಿನಿಮಾ ಕಥೆ, ಚಿತ್ರಕಥೆಯಲ್ಲಷ್ಟೇ ಅಲ್ಲ ಎಲ್ಲದರಲ್ಲೂ ಶ್ರೀಮಂತಿಕೆ ಇದೆ. ಅದರಲ್ಕೂ ಅದ್ಧೂರಿ ಮೇಕಿಂಗ್ ‌ಖುಷಿ ಕೊಡುತ್ತದೆ. ಇದು ಔಟ್ ಆ್ಯಂಡ್ ಔಟ್ ಮಾಸ್ ಎಲಿಮೆಂಟ್ಸ್ ಇರುವ ಸಿನಿಮಾ ಆಗಿರುವುದರಿಂದ ಮಾಸ್ ಆಡಿಯನ್ಸ್ ಗೆ ರುಚಿಸಲಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದು ರೈಡರ್ ಒನ್ ಲೈನ್..
ಒಂದು ಅನಾಥಾಶ್ರಮದಲ್ಲಿ ಭೆಟಿಯಾಗುವ ಕಿಟ್ಟಿ ಮತ್ತು ಚಿನ್ನು ಆ ಬಳಿಕ ಘಟನೆಯೊಂದರಲ್ಲಿ ಅವರಿಬ್ಬರೂ ಬೇರೆಯಾಗುತ್ತಾರೆ. ಮತ್ತೆ ಅವರಿಬ್ಬರೂ ದೊಡ್ಡವರಾದ ನಂತರ ಒಬ್ಬರನ್ನೊಬ್ಬರು ಹುಡುಕಿಕೊಂಡು ಹೊರಡುತ್ತಾರೆ. ಅವರಿಬ್ಬರ ಪ್ರೀತಿಯ ಹುಡುಕಾಟ, ಒಂದಷ್ಟು ತಳಮಳದ ಸುತ್ತ ಸಾಗುವ ಕಥೆಯಲ್ಲಿ ರೋಚಕತೆ ಇದೆ, ಕುತೂಹಲವೂ ಇದೆ. ಹಾಗಾದರೆ, ಕೊನೆಗೆ ಕಿಟ್ಟಿ ಮತ್ತು ಚಿನ್ನು ಇಬ್ಬರೂ ಸಿಗ್ತಾರ, ಒಂದಾಗ್ತಾರ ಅನ್ನುವ ಕುತೂಹಲ ನಿಮಗಿದ್ದರೆ ಒಮ್ಮೆ ರೈಡರ್ ಜೊತೆ ಹಾಗೊಂದು ರೈಡ್ ಮಾಡಿಬರಬಹುದು.

ಚಿತ್ರ ನೋಡುವರಿಗೆ ಇಲ್ಲಿ ಮೋಸ ಇಲ್ಲ ಎಂಬ ಗ್ಯಾರಂಟಿ ಕೊಡಬಹುದು. ಕೊಟ್ಟ ಕಾಸಿಗೆ ಭರಪೂರ ಮನರಂಜನೆಗಂತೂ ಧೋಕ ಆಗಲ್ಲ. ನಿರ್ದೇಶಕ ವಿಜಯ್ ಕುಮಾರ್ ಕೊಂಡ ಅವರಿಗೊಂದು ಸ್ಪಷ್ಟತೆ ಇದೆ. ಈಗಿ ಯೂಥ್ಸ್ ಮನಸಲ್ಲಿಟ್ಟುಕೊಂಡು, ಫ್ಯಾನ್ಸ್ ಅನ್ನೂ ಗಮನದಲ್ಲಿಟ್ಟಕೊಂಡು ಮಜ ಎನಿಸೋ ಚಿತ್ರ ಕಟ್ಟಿಕೊಟ್ಟಿದ್ದಾರೆ.

ನಟನೆ ವಿಷಯಕ್ಕೆ ಬಂದರೆ.
ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲಿ ಎಷ್ಟು ಗಟ್ಟಿತನವಿದೆಯೋ ಪಾತ್ರದಲ್ಲೂ ಅಷ್ಟೇ ಗಟ್ಟಿತನ ಕಟ್ಟಿಕೊಡುವ ಪ್ರಯತ್ನ ಇಲ್ಲಿ ಸಾರ್ಥಕ.

ನಟ ನಿಖಿಲ್ ಕುಮಾರ್ ಇಲ್ಲಿ ಎಂದಿಗಿಂತಲೂ ಇಷ್ಟವಾಗುತ್ತಾರೆ. ಮತ್ತೆ ಅವರಿಲ್ಲಿ ಪಕ್ಜಾ ಮಾಸ್ ಹೀರೋ ಆಗಿ ಕಾಣಿಸಿಕೊಂಡಿದ್ದಾಾರೆ. ಒಂದು ಮನೆಗೆ ಒಳ್ಳೆಯ ಮಗನಾಗಿ, ಗೆಳೆಯನಾಗಿ, ಹುಡುಕಾಟದ ಲವರ್ ಬಾಯ್ ಆಗಿ ನಿಖಿಲ್ ಗಮನಸೆಳೆಯುವುದರ ತಮ್ಮ ಪಾತ್ರವನ್ನು ಅಚ್ಚುಕಟ್ಟಾಾಗಿ ಕಟ್ಟಿಕೊಟ್ಟಿದ್ದಾರೆ.
ಇನ್ನು, ಭರ್ಜರಿ ಆ್ಯಕ್ಷನ್, ಡ್ಯಾಾನ್ಸ್‌ ಮತ್ತು ತಮ್ಮ ಹೊಸತನದ ಮ್ಯಾನರಿಸಂ ಮೂಲಕ ತಾವು ಮಾಸ್ ಹೀರೋ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.
ನಾಯಕಿ ಕಶ್ಮೀರಾ ಕೂಡ ಇಲ್ಲಿ ಅಕರ್ಷಿಸುತ್ತಾರೆ. ತಮ್ಮ ಬ್ಯೂಟಿ ಮತ್ತು ನಟನೆ ಈ ಎರಡರಿಂದಲೂ ಇಷ್ಟವಾಗುತ್ತಾರೆ. ಉಳಿದಂತೆ ಹಿರಿಯ ನಟ ದತ್ತಣ್ಣ, ಅಚ್ಯುತ ಕುಮಾರ್, ಚಿಕ್ಕಣ್ಣ, ಶಿವರಾಜ್ ಕೆ.ಆರ್ ಪೇಟೆ, ರಾಜೇಶ್ ನಟರಂಗ, ಶೋಭರಾಜ್, ಗರುಡ ರಾಮ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡು ತೆರೆಯ ಮೇಲೆ ಮೋಡಿ ಮಾಡಿದೆ.

ರೈಡರ್ ತಾಂತ್ರಿಕವಾಗಿ ಹೊಸತನದಿಂದ ಕೂಡಿದೆ. ಚಿತ್ರದ ಮೇಕಿಂಗ್ ನೋಡಿದವರಿಗೆ ನಿರ್ಮಾಪಕರ ಸಿನಿಮಾ ಪ್ರೀತಿ ಎಂಥದ್ದು ಅನ್ನೋದು ಗೊತ್ತಾಗುತ್ತೆ. ಭರ್ಜರಿಯಾಗಿ ಸಿನಿಮಾ ಕಥೆ ಡಿಮ್ಯಾಂಡ್ ಮಾಡಿದ್ದನ್ನು ಚಾಚೂ ತಪ್ಪದೆ ಮಾಡಿದ್ದಾರೆ.
ಅರ್ಜುನ್ ಜನ್ಯ ಸಂಗೀತ ಹಾಡುಗಳು ಗುನುಗುವಂತಿವೆ.
ನೃತ್ಯ ನಿರ್ದೇಶಕ ಭೂಷಣ್ ಹಾಗೂ ಸಾಹಸ ನಿರ್ದೇಶಕ ಚೇತನ್ ಅವರ ಕೆಲಸ ಇಲ್ಲಿ ಗಮನಸೆಳೆಯುತ್ತದೆ.
ಒಟ್ಟಾರೆ ಇದು ಎಲ್ಲ ಮನರಂಜನಾತ್ಮಕ ಅಂಶಗಳನ್ನು ಹೊತ್ತು ಬಂದ ರೈಡರ್.

Categories
ಸಿನಿ ಸುದ್ದಿ

ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ…

ಹಿರಿಯ ನಿರ್ದೇಶಕರಾದ ಕೆ.ವಿ ರಾಜು ಇನ್ನಿಲ್ಲ. ಅವರ ಸಿನಿಮಾಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ನೇರ ನುಡಿ, ನಿಷ್ಟುರ ವ್ಯಕ್ತಿತ್ವದವರಾಗಿದ್ದ ಅವರು, ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು. ಇದು ಅವರ ಒಡನಾಡಿಗಳಿಗೆ ಗೊತ್ತು.

ನಿರ್ದೇಶಕ ಕೆ.ವಿ ರಾಜು
ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ನೆಲೆಕಂಡರು. ನಂತರದ ಕೆಲವೇ ವರ್ಷಗಳಲ್ಲಿ ಚಿತ್ರರಂಗದಲ್ಲಿ ಅದ್ಭುತ ಸಿನಿಮಾಗಳ ನಿರ್ದೇಶಕರಾಗಿ ಜನಮೆಚ್ಚುಗೆ ಪಡೆದರು.

ಅವರ ಸಿನಿಮಾ ವಿವರ; ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದರು.

1991ರಲ್ಲಿ ‘ಇಂದ್ರಜಿತ್’ ಚಿತ್ರದ ಮೂಲಕ ಬಾಲಿವುಡ್​ಗೂ ಕೆವಿ ರಾಜು ಪ್ರವೇಶಿಸಿದ್ದರು. ಅಮಿತಾಭ್ ಬಚ್ಚನ್ ಹಾಗೂ ಜಯಪ್ರದಾ ಆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೇ ಮತ್ತೆರಡು ಹಿಂದಿ ಚಿತ್ರಗಳಿಗೂ ಅವರ ನಿರ್ದೇಶನವಿತ್ತು. ಹುಲಿಯಾ ಮರೆಯಲಾರದ ಸಿನಿಮಾಗಳಲ್ಲೊಂದು.

Categories
ಸಿನಿ ಸುದ್ದಿ

ಅರ್ಜುನ್ ಗೌಡ ಬರ್ತಾನೆ ಗುರು; ಡಿಸೆಂಬರ್ 31 ಪ್ರಜ್ವಲ್ ಅಬ್ಬರ!

ನಿರ್ಮಾಪಕ ರಾಮು ಅವರು ನಿರ್ಮಿಸಿರುವ ಕೊನೆಯ ಚಿತ್ರ “ಅರ್ಜುನ್ ಗೌಡ”.ಈಗ ತೆರೆಗೆ ಬರಲು ಸಜ್ಜಾಗಿದೆ. ರಾಮು ಅವರು ಈಗ ಇಲ್ಲ. ಆದರೆ, ಅವರ ಅದ್ಬುತ ಸಿನಿಮಾಗಳು ನಮ್ಮೊಂದಿಗಿವೆ.

ಪ್ರಜ್ವಲ್ ಚಿತ್ರದ ಹೀರೋ. ಈ ಬಗ್ಗೆ ಅವರು ಹೇಳಿದ್ದಿಷ್ಟು. ‘ ಅಂಕಲ್, ಕೇವಲ ನಿರ್ಮಾಪಕರಷ್ಟೇ ಅಲ್ಲ. ನಮ್ಮ ಕುಟುಂಬದ ಸದಸ್ಯರ ರೀತಿ ಇದ್ದರು. ನಮ್ಮ ತಂದೆಯವರ ಜೊತೆ ನಾನು ಚಿಕ್ಕವನಾಗಿದಾಗ ಅವರ‌ ನಿರ್ಮಾಣದ ಚಿತ್ರಗಳ ಚಿತ್ರೀಕರಣಕ್ಕೆ ಹೋಗುತ್ತಿದ್ದೆ. ನಾನು ಸಹ “ಗುಲಾಮ” ಚಿತ್ರದಿಂದ ಆರಂಭಿಸಿ ಅವರ ನಿರ್ಮಾಣದ ಮೂರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. “ಅರ್ಜುನ್ ಗೌಡ” ಆದ ಮೇಲೆ ಮತ್ತೊಂದು ಚಿತ್ರ ಆರಂಭಿಸೋಣ ಎಂದು ಹೇಳಿದ್ದರು.‌ ಅವರ ಸಾವಿನ ನೋವು ನಮ್ಮಗೆಲ್ಲಾ ತುಂಬಾ ಇದೆ. ಇದರ ನಡುವೆ ನಮ್ಮ ಚಿತ್ರ ಇದೇ ಡಿಸೆಂಬರ್ ‌31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಆಕ್ಷನ್ ಚಿತ್ರಗಳ ನಿರ್ಮಾಣಕ್ಕೆ ಹೆಸರಾದ‌ ರಾಮು ಫಿಲಂಸ್ ಮೂಲಕ ‌ನಿರ್ಮಾಣವಾಗಿರುವ ಈ ಚಿತ್ರದಲ್ಲೂ ಭರ್ಜರಿ ಆಕ್ಷನ್ ಸನ್ನಿವೇಶಗಳಿವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಪ್ರಜ್ವಲ್ ದೇವರಾಜ್.

ಚಿತ್ರದಲ್ಲಿ ಜಾಹ್ನವಿ ಎಂಬ ಪಾತ್ರ ನನ್ನದು. ನಾಯಕನಿಗೆ ಉತ್ತಮ ಗೆಳತಿ. ಆತನನ್ನು ತುಂಬಾ ಪ್ರೀತಿಸುವ ಯುವತಿ.‌ ಪ್ರೀತಿ ಮೂಡಿದ ನಂತರ ಏನಾಗುತ್ತದೆ ಎಂಬುದು ಚಿತ್ರದ ಕಥಾವಸ್ತು. ‌ಚಿತ್ರ ಬಿಡುಗಡೆಗೆ ನಾನು ಕಾತುರದಲ್ಲಿದ್ದೇನೆ ಎಂದರು ನಾಯಕಿ ಪ್ರಿಯಾಂಕ ತಿಮ್ಮೇಶ್.

ರಾಮು ಫಿಲಂಸ್ ನಿರ್ಮಾಣದ 39 ನೇ ಸಿನಿಮಾ “ಅರ್ಜುನ್ ಗೌಡ”. ಇದೊಂದು ಕುಟುಂಬ ಸಮೇತ ನೋಡಬಹುದಾದ ಸಿನಿಮಾ. ಆಕ್ಷನ್, ರೊಮ್ಯಾಂಟಿಕ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದಲ್ಲಿ ಮನಸೂರೆಗೊಳ್ಳುವ ಸಾಹಸ ಸನ್ನಿವೇಶಗಳಿದೆ. “ಅರ್ಜುನ್ ಗೌಡ” ನೇರ ಸ್ವಭಾವದ ವ್ಯಕ್ತಿ. ಸಮಾಜದಲ್ಲಿನ ಕೆಲವು ತೊಡಕುಗಳನ್ನು ಸರಿಪಡಿಸಲು ಹೋರಾಡಲು ಸದಾ ಸಿದ್ದವಿರುವಾತ.

ಬರೀ ಮನೋರಂಜನೆ ಅಷ್ಟೇ ಅಲ್ಲ. ಈ ಚಿತ್ರದಲ್ಲಿ ಯುವಜನತೆಗೆ ಒಂದು ಒಳ್ಳೆಯ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಧರ್ಮವಿಶ್ ಸಂಗೀತ ನೀಡಿರುವ ಹಾಡುಗಳು ತುಂಬಾ ಚೆನ್ನಾಗಿದೆ.‌ ರಾಜ್ಯಾದ್ಯಂತ ಸುಮಾರು ‌ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಶುಭ ಹಾರೈಕೆಯಿರಲಿ ಎಂದರು ನಿರ್ದೆಶಕ ಶಂಕರ್.

ಛಾಯಾಗ್ರಹಕ ಜೈ ಆನಂದ್, ರಾಮು ಫಿಲಂಸ್ ಕಡೆಯಿಂದ ಹನುಮಂತು ಹಾಗೂ ಸಂಕಲನಕಾರ ಅರ್ಜುನ್ ಕಿಟ್ಟು ಇದ್ದರು.

Categories
ಸಿನಿ ಸುದ್ದಿ

ಡಿಸೆಂಬರ್ 25ಕ್ಕೆ ಸಿನಿಮಾ ಅಂತರಂಗ ಚಿತ್ರೋತ್ಸವ ಪ್ರಶಸ್ತಿ ಪ್ರದಾನ; ಗಾಂಧಿಭವನದಲ್ಲಿ ವರ್ಣರಂಜಿತ ಸಮಾರಂಭ…

ಫಿಲ್ಮಾಲಿಕ್ ಫೌಂಡೇಶನ್ ಸಂಸ್ಥೆಯ ಎರಡನೇ ವರ್ಷದ ಸಿನಿಮಾ ಅಂತರಂಗ ಚಲನಚಿತ್ರೋತ್ಸವ ಹಾಗೂ ಪಬ್ಲಿಕ್ ಐ ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್ಸ್ ಆಯೋಜಿಸಿರುವುದು ಗೊತ್ತೇ ಇದೆ. ಡಿಸೆಂಬರ್ 25ರಂದು ಗಾಂಧಿ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಇಂಡಿಯನ್ ಫಿಲಂ ಮೇಕರ್ಸ್ ಅಸೋಸಿಯೇಷನ್, ಭಾರತ ಸಾರಥಿ ಹಾಗೂ ಶ್ರೀ ದಾರಿ ಆಂಜನೇಯ ಸ್ವಾಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸಹ ಪ್ರಾಯೋಜಕರಾಗಿದ್ದಾರೆ. ಐ ಕ್ಯಾಚ್ ಮೀಡಿಯಾ, ಸಿನಿ ಲಹರಿ, ಚಿತ್ತಾರ, ನಮ್ಮ ಸೂಪರ್ ಸ್ಟಾರ್ಸ್, ಎಂಎಂಎಂ ಮೀಡಿಯಾ, ಬಿ ಸಿನಿಮಾಸ್, ಸುರ್ವೇ ನ್ಯೂಸ್ ಹಾಗೂ ಪತ್ರಿಕೆ, ಸಿರಿ ಟಿವಿ, ಮಯೂರಿ ಸ್ಟುಡಿಯೋ, ಸ್ಟಾರ್ ಕನ್ನಡ, ಕನ್ನಡ ಫಿಲ್ಮೋಲಜಿ, ಫಿಲಂ ಗಪ್ಪ, ಪೂವರಿ, ಲೈವ್ ಬೆಂಗಳೂರು ಕನ್ನಡ, ಮಫ್ತಿ ನ್ಯೂಸ್, ಜಸ್ಟ್4u ಇನ್ಫೋಟೇನ್ಮೆಂಟ್, ರಿಯಲ್ ಟೈಮ್ಸ್, ಕೆ ಬಿಟ್ಸ್ ಮಾಧ್ಯಮಗಳು ಮೀಡಿಯಾ ಪಾರ್ಟ್ನರ್ ಆಗಿದ್ದು, ಮಾರುತಿ ಮೆಡಿಕಲ್ಸ್ ಕೂಡ ಸಾಥ್ ನೀಡಿದೆ.


ಅಂದು ಪದ್ಮಶ್ರೀ ಡಾ. ದೊಡ್ಡ ರಂಗೆ ಗೌಡ, ಭಾಸ್ಕರ್ ರಾವ್, ಡಾ. ರಾಮಲಿಂಗ ವೆಂಕಟ ರೆಡ್ಡಿ, ಸುನೀಲ್ ಪುರಾಣಿಕ್, ಗಂಡಸಿ ಸದಾನಂದ ಸ್ವಾಮಿ, ಡಾ. ಅಂಬರೀಶ್ ಜಿ., ಹೆಚ್. ಆರ್. ದಿಲೀಪ್ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಸಾಮಾಜಿಕ ಕಾರ್ಯಕರ್ತರು, ಸಾಹಿತಿಗಳು, ಸಿನಿಮಾ ರಂಗದ ದಿಗ್ಗಜರು ರಂಗಭೂಮಿ ಕಲಾವಿದರು ಇರಲಿದ್ದಾರೆ. ಸಿನಿಮಾ ಅಂತರಂಗ ಚಲನಚಿತ್ರೋತ್ಸವದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಅಂದು 10ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ನಂತರ ಮಧ್ಯಾಹ್ನ 3:30ರವರೆಗೆ ಚಲನಚಿತ್ರ ಪ್ರದರ್ಶನವಿದೆ.
ಆ ಬಳಿಕ ಚಲನಚಿತ್ರ ನಿರ್ಮಾಣ ಕಾರ್ಯಾಗಾರ ಮತ್ತು ಚಲನಚಿತ್ರ ನಿರ್ಮಾಣ ಬಗ್ಗೆ ಚರ್ಚೆ ನಡೆಯಲಿದೆ.
ಸಂಜೆ 5ಕ್ಕೆ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ವಿಜಯಲಕ್ಷ್ಮಿ ಸತ್ಯಮೂರ್ತಿ ಬರೆದ ವ್ಯೂಹರೆ ಕಾದಂಬರಿ ಬಿಡುಗಡೆಯಾಗಲಿದೆ. ಪದ್ಮಶ್ರೀ ಡಾ. ದೊಡ್ಡ ರಂಗೆ ಗೌಡ ಅವರು ಬಿಡುಗಡೆ ಮಾಡಲಿದ್ದು, ನಂತರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Categories
ಸಿನಿ ಸುದ್ದಿ

ಪ್ರೇಮಿಗಳ ದಿನಕ್ಕೆ ಪ್ರೇಮ್ ಸಿನಿಮಾ: ಪ್ರೇಮಂ ಪೂಜ್ಯಂ ಭಾಗ 2 ಶುರುವಾಗಲಿದೆ…

ನೆನಪಿರಲಿ ಪ್ರೇಮ್ ಅಭಿನಯದ ಸಿನಿಮಾ ಎಂದರೆ ಕಾಲೇಜ್ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚು, ಅವರು ಆರಂಭದಿಂದಲೂ ಯೂಥ್‌ಬೇಸ್ ಲವ್‌ಸ್ಟೋರಿಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಈ ಹಿಂದೆ ಬಿಡುಗಡೆಯಾದ ಪ್ರೇಮ್ ಅಭಿನಯದ 25ನೇ ಚಿತ್ರ ಪ್ರೇಮಂ ಪೂಜ್ಯಂನಲ್ಲೂ ಸಹ ಅವರು ಮೆಡಿಕಲ್ ಸ್ಟೂಡೆಂಟ್ ಆಗಿ ಕಾಣಿಸಿಕೊಂಡು ಯುವ ಪ್ರೇಮಿಗಳ ಫೇವರೇಟ್ ಹೀರೋ ಆಗಿದ್ದಾರೆ. ಈ ಚಿತ್ರ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳನ್ನೇ ಆಕರ್ಷಿಸುತ್ತಿದೆ. ಡಾ.ಬಿ.ಎಸ್. ರಾಘವೇಂದ್ರ ಅವರ ನಿರ್ದೇಶನದ ಪ್ರೇಮಂ ಪೂಜ್ಯಂ ಚಿತ್ರ ಬಿಡುಗಡೆಯಾದ ಕಡೆ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರ 50ನೇ ದಿನದತ್ತ ಸಾಗುತ್ತಿದೆ. ನೂರನೇ ದಿನದತ್ತ ದಾಪುಗಾಲು ಹಾಕಿದೆ. ಚಿತ್ರವನ್ನು ವೀಕ್ಷಿಸಿದ ತಮಿಳು, ತೆಲುಗು ನಿರ್ಮಾಪಕರಿಂದ ರೀಮೇಕ್ ಹಕ್ಕಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಲ್ಲದೆ ಓಟಿಟಿಯಿಂದಲೂ ಉತ್ತಮ ಆಫರ್ ಬರುತ್ತಿದ್ದು, ನಿರ್ಮಾಪಕರು ಸದ್ಯ ಯಾವುದನ್ನೂ ಒಪ್ಪಿಕೊಳ್ಳದೆ ಚಿತ್ರವು ನೂರು ದಿನಗಳ ಪ್ರದರ್ಶನವಾದ ನಂತರ ಬೇರೆ ಭಾಷೆಗೆ ಕೊಡಬೇಕೆಂಬ ನಿರ್ಧಾರ ಮಾಡಿದ್ದಾರೆ.

ಇದರ ಜೊತೆಗೆ ಈಗಾಗಲೇ ನಿರ್ದೇಶಕ ಡಾ.ಬಿ.ಎಸ್. ರಾಘವೇಂದ್ರ ಅವರು ಚಿತ್ರದ ಮುಂದುವರಿದ ಭಾಗವಾಗಿ ಪ್ರೇಮಂ ಪೂಜ್ಯಂನ ಸೀಕ್ವೇಲ್ ಮಾಡಲು ಮುಂದಾಗಿದ್ದು, ಈಗಾಗಲೇ ಇದಕ್ಕೆ ಚಿತ್ರಕಥೆಯನ್ನೂ ಸಹ ರೆಡಿ ಮಾಡಿಕೊಂಡಿದ್ದಾರೆ. ಮುಂದಿನ ಭಾಗದಲ್ಲಿ ಒಂದಷ್ಟು ಕುತೂಹಲಕರ ಕಥೆಯನ್ನು ಬಿಚ್ಚಿಡಲು ನಿರ್ಧರಿಸಿದ್ದಾರೆ.

ಪ್ರೇಮಿಗಳ ದಿನವಾದ 2022ರ ಫೆಬ್ರವರಿ 14ರಂದು ಪೇಮಂ ಪೂಜ್ಯಂ ಚಿತ್ರದ 2ನೇ ಭಾಗಕ್ಕೆ ಚಾಲನೆ ನೀಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಚಿತ್ರದ ಮೊದಲ ಭಾಗದಲ್ಲಿ ಕೆಲಸ ಮಾಡಿದ್ದ ಬಹುತೇಕ ಕಲಾವಿದ, ತಂತ್ರಜ್ಞರೇ ಈ ಚಿತ್ರದಲ್ಲೂ ಮುಂದುವರಿಯಲಿದ್ದಾರೆ.
ನಾಯಕನ ಪ್ರೀತಿಯ ಕಥೆಯ ವಿವಿಧ ಮಜಲುಗಳನ್ನು ಹೇಳುವ ಕಥೆಯಿರುವ ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್, ಬೃಂದಾ ಆಚಾರ್ಯ, ಐಂದ್ರಿತಾರೇ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರೇಮಿಗಳು, ತಂದೆ-ತಾಯಿ, ಸ್ನೇಹಿತರು ಈ ಎಲ್ಲ ಸಂಬಂಧಗಳಲ್ಲೂ ಪೂಜ್ಯನೀಯ ಭಾವನೆ ಇರಬೇಕೆಂಬ ಉತ್ತಮ ಸಂದೇಶವಿದೆ, ಡಾ.ರಕ್ಷಿತ್ ಕದಂಬಾಡಿ, ಡಾ. ರಾಜಕುಮಾರ್ ಜಾನಕಿರಾಮನ್, ಮನೋಜ್‌ ಕೃಷ್ಣನ್ ಹಾಗು ರಾಘವೇಂದ್ರ ಎಸ್. ಸೇರಿ ನಿರ್ಮಿಸಿರುವ ಈ ಚಿತ್ರಕ್ಕೆ ಡಾ.ಮಾಧವಕಿರಣ ಕಾರ್ಯಕಾರಿ ನಿರ್ಮಾಪಕರು.

Categories
ಸಿನಿ ಸುದ್ದಿ

ಕನ್ನಡ ಧ್ವಜ ಸುಟ್ಟು,ರಾಯಣ್ಣ ಪ್ರತಿಮೆ ಭಗ್ನ ಗೊಳಿಸಿದ ಪುಂಡರ ವಿರುದ್ಧ ನಟ ಶ್ರೀಮುರಳಿ ಆಕ್ರೋಶ!

ಕರುನಾಡಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದೆ. ಕನ್ನಡ ಧ್ವಜ ಸುಟ್ಟು ಹಾಕಿ, ಸಂಗೊಳ್ಳಿ ರಾಯಣ್ಣ ಅವರಪ್ರತಿಮೆ ಭಗ್ನಗೊಳಿಸಲಾಗಿದೆ. ಇಡೀ ಕರುನಾಡೇ ಬೆಳಗಾವಿ ಕಡೆ ಧಾವಿಸಿದೆ. ಕನ್ನಡ ನೆಲದಲ್ಲಿದ್ದು, ಬದುಕು ಕಟ್ಟಿಕೊಂಡವರೆ ಇಂತಹ ಕೃತ್ಯ ಎಸಗಿದ್ದಾರೆ. ಅಂತಹವರನ್ನು ಶಿಕ್ಷಿಸಬೇಕು ಅಂತ ಕನ್ನಡಿಗರೇ ಧ್ವನಿ ಎತ್ತಿದ್ದಾರೆ.


ಚಿತ್ರರಂಗವೇ ಈಗ ಆ ವಿರುದ್ಧ ಎದ್ದು ನಿಂತಿದೆ. ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಕೂಡ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.


‘ಗಡಿಭಾಗ ಕನ್ನಡಿಗರ ಜೊತೆ ಸದಾ ನಾವಿದ್ದೇವೆ. ಕನ್ನಡ ಧ್ವಜ ಸುಟ್ಟು ಕನ್ನಡಿಗರ ಮನಸ್ಸು ಕೆರಳಿಸಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಮಾಡಿ ಅಕ್ರೋಶದ ಜ್ವಾಲೆಗೆ ಕಾರಣರಾಗಿದ್ದಾರೆ. ಇದು ಹೇಯ ಕೃತ್ಯ. ಕುರುನಾಡಲ್ಲೇ ಇದ್ದು ನಮ್ಮ ನೆಲ, ಜಲದಿಂದಲೇ ಬೆಳೆದು ಕನ್ನಡಿಗರನ್ನು ಕೆಣಕ್ಕಿದ್ದು ಕಿಚ್ಚು ಹೆಚ್ಚಿಸಿದೆ. ಅಂತಹವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

Categories
ಸಿನಿ ಸುದ್ದಿ

ಇದು ಹೊಸಬರ ಆ್ಯಂಗರ್; ಕೋಪದ ಹುಡುಗನ ಹಾಡು ಪಾಡು!

ವಿಭಿನ್ನ ಕಥಾಹಂದರದ ಈ ಚಿತ್ರದ ಹೀರೋ ಮೈಸೂರು ಹುಡುಗ ಮನ್ವಿತ್….

ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ ರೂಪೇಶ್ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ರೊಮ್ಯಾಂಟಿಕ್ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರವ, ಚಿತ್ರದ ನಾಯಕ ಬಾಲ್ಯದ ಕೆಲವು ಘಟನೆಗಳಿಂದ ತುಂಬಾ ಮುಂಗೋಪಿಯಾಗಿರುತ್ತಾನೆ. ನಾಯಕಿಯ ಪ್ರವೇಶದ ನಂತರ ಆತನ ಜೀವನದಲ್ಲಿ ಏನಾಗುತ್ತದೆ ಎಂಬುದೇ ಚಿತ್ರದ ಕಥಾವಸ್ತು. ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಹಾಡುಗಳು ಸುಂದರವಾಗಿದೆ. ಅಷ್ಟೇ ಸುಂದರವಾಗಿ ಚಿತ್ರವೂ ಮೂಡಿ ಬಂದಿದೆ. ಸದ್ಯದಲ್ಲೇ ತೆರೆಗೆ ಬರಲಿದೆ ಎಂಬುದು ನಿರ್ದೇಶಕ ನಟರಾಜ್ ರಂಗಾಯಣ ಅವರ ಮಾತು.

ರಂಗಾಯಣದಲ್ಲಿ ಅಭಿನಯ ತರಬೇತಿ ಪಡೆದಿದ್ದೇನೆ. ಇದೇ ಮೊದಲ ಚಿತ್ರ. ಮುಂಗೋಪಿಯಾದರೆ ಏನೆಲ್ಲಾ‌ ಸಂಕಷ್ಟ ಎದರಾಗುತ್ತದೆ ಎಂಬುದನ್ನು ನನ್ನ ಪಾತ್ರದ ಮೂಲಕ ನಿರ್ದೇಶಕರು ಹೇಳಿದ್ದಾರೆ. ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಮನ್ವಿತ್.

ಚಿತ್ರದಲ್ಲಿ ಏಳು ಹಾಡುಗಳಿದೆ. ಅದರಲ್ಲಿ ಮೂರು ಬಿಟ್ ಸಾಂಗ್.‌ ಶಶಾಂಕ್ ಶೇಷಗಿರಿ ಸೇರಿದಂತೆ ಎಲ್ಲಾ ಕನ್ನಡ ಗಾಯಕರ ಕಂಠಸಿರಿಯಲ್ಲಿ ಈ ಚಿತ್ರದ ಹಾಡುಗಳು ಮೂಡಿಬಂದಿದೆ ಎಂದು ಸಂಗೀತ ನಿರ್ದೇಶಕ ವಿಜಯ್ ಮಾಹಿತಿ ನೀಡಿದರು.

ನಾಯಕಿ ಪುಣ್ಯಗೌಡ, ಸಾಹಸ ನಿರ್ದೇಶಕ ಮಾಸ್ ಮಾದ, ಗಾಯಕ ಶಶಾಂಕ್ ಶೇಷಗಿರಿ ಮುಂತಾದ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಅಭಿನಯಿಸಿರುವ ಶಿವಾಜಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Categories
ಸಿನಿ ಸುದ್ದಿ

ಸ್ಟಾಕರ್ ಎಂಬ ಆರ್ ಜಿ ವಿ ಶಿಷ್ಯನ ಸಿನಿಮಾ; ಸುಮನ್ ನಗರ್ ಕರ್ ನಟನೆಯ ಚಿತ್ರ ರಿಲೀಸ್ ರೆಡಿ…

ಬಣ್ಣದ‌ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ‌ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿಯಿಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಹೆಸರು ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್ ರ್ಭಾರ್ಗವ್ ಗಮನ ಸೆಳೆಯುತ್ತಿದ್ದಾರೆ

ಆರ್ ಜಿವಿ ಕ್ಯಾಂಪ್ ನಲ್ಲಿ ಐದಾರು ವರ್ಷಗಳ ಕಾಲ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಆರಂಭಿಸಿ ಸೈಕೋ ಎಂಬ ತೆಲುಗು ಸಿನಿಮಾ ಮಾಡಿದ್ದ ಕಿಶೋರ್ ಭಾರ್ಗವ್ ನಿರ್ದೇಶಿಸಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಸುಮನ್ ನರ್ಗಕರ್, ರಾಮ್, ಐಶ್ವರ್ಯ ನಂಬಿಯರ್, ಉದಯ್ ಆಚಾರ್, ನಮ್ರತಾ ಪಾಟೀಲ್, ಜಿತೆನ್ ಆರೋರಾ, ಭವಾನಿಶಂಕರ್ ದೇಸಾಯಿ ಮುಂತಾದವರು ಸ್ಟಾಕರ್ ಸಿನಿಮಾದಲ್ಲಿ ನಟಿಸಿದ್ದು, ಕನ್ನಡದ ಜೊತೆಗೆ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತಯಾರಾಗಿದೆ.

ಥ್ರಿಲ್ಲರ್ ಜೊತೆಗೆ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಸ್ಟಾಕರ್ ಸಿನಿಮಾವನ್ನು, ಎಸ್ ಎಂ ಎಲ್ ಪ್ರೊಡಕ್ಷನ್ಸ್, ಸ್ಕ್ರಿಪ್ಟ್ ಟೀಸ್ ಫಿಲ್ಮ್ಸ್ ನಡಿ ಎಂ ಎನ್ ವಿ ರಮಣ, ಸಂದೀಪ್ ಗೌಡ ಹಾಗೂ ಸ್ವಾತಿ ಗೋವಾಡ ನಿರ್ಮಾಣ ಮಾಡಿದ್ದಾರೆ.

ಸೋಮಶೇಖರ್, ಭರತ್ ಪ್ರಮೋದ್ ಹಾಗೂ ಕಿಶೋರ್ ಭಾರ್ಗವ್ ಚಿತ್ರಕಥೆ ಬರೆದಿದ್ದು, ವಿನೋದ್ ರಾಜ್ ಕ್ಯಾಮೆರಾ ಕೈ ಚಳಕ, ಸ್ಕಂದ ಕಶ್ಯಪ್ ಮ್ಯೂಸಿಕ್, ಸುಧೀರ್ ಪಿಆರ್ ಕಲಾ ನಿರ್ದೇಶನ, ವಂದನಾ ಭಂಡಾರೆ ವಸ್ತ್ರ ವಿನ್ಯಾಸ ಸಿನಿಮಾದಲ್ಲಿರಲಿದೆ. ಸದ್ಯ ಸ್ಟಾಕರ್ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಬಿಡುಗಡೆಗೆ ಎದುರು ನೋಡುತ್ತಿದೆ.

Categories
ಸಿನಿ ಸುದ್ದಿ

ಗಂಡುಲಿ ಚಿತ್ರದ ಟ್ರೇಲರ್ ಬಿಡುಗಡೆ;

ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್ ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ ವಿನಯ್ ರತ್ನಸಿದ್ಧಿ ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ ಈ ಚಿತ್ರದ ಹೆಸರು ಗಂಡುಲಿ. ‌ವಿನಯ್ ರತ್ನಸಿದ್ದಿ ಜೊತೆ ನಾಯಕಿಯಾಗಿ ಛಾಯಾದೇವಿ ನಟಿಸಿದ್ದು, ನಾಯಕನ ತಾಯಿಯ ಪಾತ್ರವನ್ನು ಹಿರಿಯ ಕಲಾವಿದೆ ಸುಧಾನರಸಿಂಹರಾಜು ನಿರ್ವಹಿಸಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಹೆಚ್ಚು ವೀಕ್ಷಣೆಯಾಗುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೆ ಚಿತ್ರವನ್ನು ಸಂಕ್ರಾಂತಿಗೆ ರಿಲೀಸ್ ಮಾಡಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ.

ನಿರ್ದೇಶಕ ಹಾಗೂ ನಾಯಕ ವಿನಯ್ ರತ್ನಸಿದ್ದಿ ಮಾತನಾಡಿ, ನಮ್ಮ ಚಿತ್ರ 2 ವರ್ಷಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ವ್ಯಾಪಿಸಿದ ಕಾರಣದಿಂದಾಗಿ ಮೂರು ಬಾರಿ ಮುಂದಕ್ಕೆ ಹೋಯಿತು. ಈಗ ಜನವರಿ 14ರಂದು ರಿಲೀಸ್ ಮಾಡಲು ನಿರ್ಧರಿಸಿದ್ದೇವೆ. ಚಿತ್ರದಲ್ಲಿ ವಿಭಿನ್ನ ಶೈಲಿಯ 3 ಹಾಡುಗಳಿವೆ. ನಮ್ಮ ಅಮರೇಂದ್ರ, ಪುನೀತ್, ಲೋಕೆಶ್ ರಾಜಣ್ಣ ಹಾಗೂ ಚಂದನ. ಸೇರಿ 4ಜನ ನಿರ್ಮಾಪಕರು. ಅವರಲ್ಲಿ ಅಮರೇಂದ್ರ ಅವರು ಮೂಲತಃ ತೆಲುಗುನವರಾದರೂ ಕನ್ನಡದ ಮೇಲೆ ಅಪಾರ ಪ್ರೀತಿ ಹೊಂದಿದ್ದಾರೆ. ಅಲ್ಲದೆ ಒಂದು ಚಿತ್ರವನ್ನು ನಿರ್ದೇಶನ ಕೂಡ ಮಾಡಿದ್ದಾರೆ. ನಟ ಧರ್ಮೇಂದ್ರ ಅರಸ್ ಅವರು ಬಹು ಮುಖ್ಯವಾದ ಪಾತ್ರ ಮಾಡಿದ್ದಾರೆ. ಗಂಡುಲಿ ಎಂದರೆ ಹುಲಿಯಷ್ಟೇ ಧೈರ್ಯವಂತ, ಸಾಹಸವಂತ ಎಂದರ್ಥ. ಸಂಪೂರ್ಣ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದರಲ್ಲಿದೆ. ಅದೊಂದು ದಿವಾನರ ಕುಟುಂಬ. ಊರಿನ ಬಡಜನರಿಗೆ ದಾನ-ಧರ್ಮ ಮಾಡುತ್ತ ಜನರ ಪಾಲಿಗೆ ಆಪದ್ಬಾಂಧವರು ಎನಿಸಿಕೊಂಡಿದ್ದ ಆ ಕುಟುಂಬದ ಆಸ್ತಿ, ಪಾಸ್ತಿ ದಿನಗಳೆದಂತೆ ಕರಗುತ್ತಾ ಕೊನೆಗೊಂದು ದಿನ ಅವರೆಲ್ಲ ಸಾಮಾನ್ಯರ ಹಾಗೆ ಬದುಕಬೇಕಾದ ಪರಿಸ್ಥಿತಿ ಬಂದೊದಗುತ್ತದೆ. ನಾಯಕ ಕೂಡ ಅದೇ ಫ್ಯಾಮಿಲಿಯಿಂದ ಬಂದ ಹುಡುಗ. ಆತ ತನ್ನ ತಾಯಿ ಜೊತೆ ಹಳ್ಳಿಯಲ್ಲಿ ಸಾಮಾನ್ಯ ಜನರ ಹಾಗೆ ಬದುಕುತ್ತಿರುವಾಗ ನಡೆದ ಒಂದು ಘಟನೆ ನಡೆಯುತ್ತದೆ. ಮುಂದೆ ಚಿತ್ರದಲ್ಲಿ ಕುತೂಹಲಕರವಾದ ತಿರುವುಗಳಿವೆ. ನಮ್ಮ ಮುಂದಿನ ಚಿತ್ರ ಪ್ರೇಮಂ ಕೂಡ ತೆರೆಗೆ ಸಿದ್ದವಾಗಿದೆ ಎಂದು ಹೇಳಿದರು.

ಹಿರಿಯ ನಟಿ ಸುಧಾ ನರಸಿಂಹರಾಜು, ದಾನ ಧರ್ಮಕ್ಕೆ ಹೆಸರಾದ ದಿವಾನರ ಮನೆತನದ ಹೆಣ್ಣು ಮಗಳಾಗಿ ನಾನು ಕಾಣಿಸಿಕೊಂಡಿದ್ದೇನೆ. ತಾಯಿ ಮಗನ ಸೆಂಟಿಮೆಂಟ್ ಜೊತೆಗೆ ಎಂಟರ್‌ಟೈನ್ ಮೆಂಟ್ ಕಥೆ ಈ ಚಿತ್ರದಲ್ಲಿದೆ. ನಾನು ಹೀರೋ ತಾಯಿ ಕೂಡ. ಹಳ್ಳಿ ವಾತಾವರಣದಲ್ಲಿ ನಡೆಯುವ ಕಥೆಯಿದು. ತುಂಬಾ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದಾರೆ ಎಂದು ಹೇಳಿದರು. ಮಾಸ್ ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಥೆಯನ್ನು ಇಟ್ಟುಕೊಂಡು ಮಾಡಿರುವ ಈ ಚಿತ್ರದಲ್ಲಿ ನಾಯಕಿ ಛಾಯಾದೇವಿ ಒಬ್ಬ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಅಮರೇಂದ್ರ,ಪುನೀತ್,
ಲೋಕೆಶ್ ರಾಜಣ್ಣ ಹಾಗೂ ಚಂದನ ಸೇರಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಈ ಚಿತ್ರದಲ್ಲಿ ಮಾಸ್, ಕ್ಲಾಸ್, ಸೆಂಟಿಮೆಂಟ್, ಆ್ಯಕ್ಷನ್ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಕಥೆಯೂ ಇದೆ. ಊರಿನ ಜನರೆಲ್ಲಾ ಹೆದರಿಕೊಳ್ಳುವಂತಹ ಘಟನೆಗಳು ನಡೆದಾಗ ಅದರ ಹಿಂದೆ ಯರ‍್ಯಾರಿದ್ದಾರೆ ಅದಕ್ಕೆ ಕಾರಣ ಏನು ಎನ್ನುವುದನ್ನು ನಾಯಕ ಪತ್ತೆ ಹಚ್ಚುತ್ತಾನೆ. ಊರಿನ ಗಂಡುಲಿ ಎನಿಸಿಕೊಳ್ಳುತ್ತಾನೆ. ಇದು ಈ ಚಿತ್ರದ ಒನ್ ಲೈನ್ ಸ್ಟೋರಿ. ಈ ಚಿತ್ರಕ್ಕೆ ಅಜಯ್ ಮತ್ತು ರವಿದೇವ್ ಇವರ ಸಂಗೀತ, ರಾಜು ಶಿವಶಂಕರ್ ಮತ್ತು ಶ್ಯಾಮ್ ಅವರ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಅವರ ಸಂಕಲನ, ಸುರೇಶ್ ಅವರ ಸಾಹಸವಿದೆ. ಉಳಿದ ತಾರಾಬಳಗದಲ್ಲಿ ಸುಬ್ಬೇಗೌಡ್ರು, ರಾಮಣ್ಣ, ರಂಜಿತ್, ಪುನೀತ್ ಇದ್ದಾರೆ.

error: Content is protected !!