Categories
ಸಿನಿ ಸುದ್ದಿ

ಆ ನಾಕು ಮಂದಿ ಪತ್ರಕರ್ತರಿಗೆ ಗುಂಡು ಹೊಡೆದಂತೆ ಮಾತಾಡಿದ್ದರು ಆನೇಕಲ್ ಬಾಲರಾಜ್: ಚಕ್ರವರ್ತಿ ಚಂದ್ರಚೂಡ್ ಹೇಳಿದ ಸತ್ಯ…

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ನಿಧನರಾಗಿದ್ದಾರೆ. ಸಿನಿಮಾ ರಂಗದಲ್ಲಿ ತಮ್ಮದೇ ಆದ ಹೆಸರು ಸಂಪಾದಿಸಿದ್ದ ಅವರು ತಮ್ಮ ಪುತ್ರ ಸಂತೋಷ್ ನನ್ನು ಹೀರೋ ಮಾಡುವ ಸಲುವಾಗಿ ಅನೇಕ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಅವರಿಲ್ಲ ಎಂಬ ಮಾತು ಕೇಳಿದ ಅದೆಷ್ಟೋ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಅಷ್ಟೆ ಯಾಕೆ ಪತ್ರಕರ್ತರು ಕೂಡ ಹಳೆಯ ದಿನಗಳನ್ನು ಮೆಲುಕು ಹಾಕಿದ್ದು ನಿಜ. ಅವರು ಈಗ ನಮ್ಮೊಂದಿಗಿಲ್ಲ. ಆದರೆ ಅವರ ನಿರ್ಮಾಣದ ಸಿನಿಮಾಗಳಿವೆ. ಬಿಟ್ಟು ಹೋದ ನೆನಪುಗಳಿವೆ. ಆ ಕುರಿತು ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಬರಹ ರೂಪದಲ್ಲಿ‌ ನೆನಪಿಸಿಕೊಂಡಿದ್ದಾರೆ…

ಓವರ್ ಟು ಚಕ್ರವರ್ತಿ ಚಂದ್ರಚೂಡ…

ಆನೇಕಲ್ ಬಾಲಣ್ಣ ….
ಅದೊಂದು ನಂಬರ್ ಗೆ ಕರೆ ಮಾಡಿದರೆ ಸಾಕು ಕುತ್ತಿಗೆ ತನಕ ಏನೇ ಬಂದಿದ್ರೂ ಚಕ್ರಿ ಫೋರ್ತ್ ಬ್ಲಾಕ್ ಬಾ ಅನ್ನುವ ಜೀವ.,.
ನಾಲ್ಕು ಮಂದಿ ಪತ್ರಕರ್ತರು ಬಾಲಣ್ಣನಿಗೆ ಯಾವುದೇ ಕಾರಣಕ್ಕೂ ಚಕ್ರವರ್ತಿ ಎಂಬ ಚಂದ್ರಚೂಡ್ ಗೆ ಸಿನಿಮಾ ಕೊಡಬಾರದು ಡೈರೆಕ್ಟರ್ ಆಗಿಬಿಡ್ತಾನಾ ಅಂತ ತಿದಿ ಒತ್ತಿಕೊಂಡು ಕುಳಿತಿದ್ದರೂ – ನಂಗೊತ್ತು ಚಕ್ರಿ ಯಾರತ್ರನೂ ಸಹಾಯಕನ ಕೆಲಸನೂ ಮಾಡಿಲ್ಲ.ಯಾವ ಸಿನಿಮಾದಲ್ಲೂ ಕೆಲಸ ಮಾಡಿಲ್ಲ.ಆದರೆ ಮಾತು ಕೊಟ್ಟಿದೀನಿ ಸಿನಿಮಾ ಕೊಡ್ತೀನಿ ರಾಜಕುಮಾರರು ತೀರ್ಕೊಂಡ ಒಂದೇವಾರಕ್ಕೆ ಎಂತ ಕಥೆ ಹೇಳಿದಾನೆ ಅಂತ ಆ ನಾಕು ಮಂದಿ ಪತ್ರಕರ್ತರಿಗೆ ಗುಂಡುಹೊಡೆದಂತೆ ಮಾತಾಡಿ ಗುಂಡು ಹೊಡೆಸಿ ಹೇಳಿ ಕಳಿಸಿದ್ಥರು.( ಈಗೀ ಪತ್ರಕರ್ತರು ನನಗೆ ಪರಮಾಪ್ತರು)
3ಸಿ ಕ್ಯಾಮರಾ ನೆಗೆಟಿವ್ ಕಾಲವದು ಅದ್ಧೂರಿ ಕಾರ್ಯಕ್ರಮಗಳು ಚೆನ್ಯೈಲಿ ನಡೆವ ಕಥೆ ಅವರ ಮಗ ಸಂತೋಷ್ ಹೀರೋ …


ಸಿತಾರಾ ಪೊನ್ನಾಂಬಲಂ ತಲೈವಾಸಲ್ ವಿಜಯ್ ಅನುರಾಧ ಬುಲೆಟ್ ಪ್ರಕಾಶ್ ಶಕೀಲಾ ಮುಂತಾದವರ ತಾರಾಗಣದ ಸಿನಿಮಾ ಅದು ಜನ್ಮ.ಕನ್ನಡ ತಮಿಳು ಎರಡು ಭಾಶೆಗಳಲ್ಲಿ ಚಿತ್ರೀಕರಿಸಿದ್ದೆ.
ಬಾಲಣ್ಣನದೊಂದೇ ಸಮಸ್ಯೆ ಬೇರೆ ನಿರ್ಮಾಪಕರ ಥರ ಬೇಗ ಬೇಗ ಸಿನಿಮಾ ಮುಗಿಸಲ್ಲ .ಒಂದು ಸಿನಿಮಾ ಅಂದರೆ ಗರಿಷ್ಠ ನಾಕು ವರುಶ .ಉದಯ ಟೀವಿಗೆ ಸಿನಿಮಾ ಸೇಲಾಯ್ತು ಬಿಡುಗಡೆಯೂ ಆಗಿ ನಾಕುವಾರ ದ ಕಲೆಕ್ಷನ್ನು….
ಈಗಿನ sunext ಆಗಿನ ಉದಯ ಟೀವಿಯವರು ಜಯಲಲಿತಾ ಹೋಲುವ ಅನುರಾಧ ಪಾತ್ರ ಮತ್ತು ಕರುಣಾನಿಧಿ ಹೋಲುವ ಪೊನ್ನಾಂಬಲಂ ನ ಮೂರು ದೃಶ್ಯಗಳು .ನಾಯಕ ಗಾಜನೂರಿನಿಂದ ರಜನೀಕಾಂತ್ ರ ಚೆನ್ನೈನ ಮನೆಗೆ ಹೋಗುವ ದೃಶ್ಯಗಳ ತೆಗೆಯಿರಿ ಅಂದರು.
ಉದಯದ ಮಾಲೀಕರಿಗೆ ಆಪ್ತರಾಗಿದ್ದ ಬಾಲಣ್ಣ ಚಕ್ರಿ ತೆಗಿತೀಯ ಅಂದರು ಬಾಲಣ್ಣ ಸಿನಿಮಾದ ಆತ್ಮವೇ ಹೋಗುತ್ತೆ ಅಣ್ಣಾವ್ರ ಸಾವಿನ ದಿನ,ನಡೆಯುವ ಘಟನೆಗಳಿಗೆ ಲಿಂಕಿರಲ್ಲ ಅಂದುಬಿಟ್ಟೆ.


ಸೀದಾ ಸೆಲ್ವಂ ರಿಗೆ ಫೋನು ಮಾಡಿ ನಮ್ ಡೈರೆಕ್ಟರ್ ಬೇಡ ಅಂತಿದಾನೆ.ಜನ್ಮದ ವ್ಯವಹಾರ ನಾ ಬೇರೆ ಥರ ಮಾಡ್ತೀನಿ ಬಿಡಿ ಅಂದು ಬಿಟ್ಟರು .ಬಹುತೇಕ ಸಿನಿಮಾಗೆ ಹಾಕಿದ ಹಣನೇ ಕೊಡ್ತೀನಿ ಅಂದರೂ ಬೇಡ ಅನ್ನುವ ನಿರ್ಮಾಪಕ ಅವರು.
ಅದಾದ ಮೇಲೆ ನೀ ಯಾವಾಗ ಡೈರಕ್ಟ್ ಮಾಡ್ತೀಯ ಹೇಳು ಆಗ ಬಾ ಕಥೆನೂ ಹೇಳಬೇಡ ಸಿನಿಮಾ ಶುರುಮಾಡೋಣ ಅನ್ನುತ್ತಿದ್ದರು.


ತುಂಬಿದ ಪತ್ರಿಕಾಗೋಷ್ಠಿಯಲಿ ಸೋತರೆ ನಾನು ಹೊಣೆ ಗೆದ್ದರೆ ಚಕ್ರಿ ಹೊಣೆ ಅಂತ ಘೋಷಿಸಿದ್ದು ಪತ್ರಿಕೆಗಳ ತಲೆ ಬರಹ .ಜನ್ಮ ಟೈಟಲ್ ಟ್ರಾಕ್ ಹಾಡಿನ ಅಷ್ಟೂ ಸಾಹಿತ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿ ದೇವಶೆಟ್ಟಿ ಮಹೇಶ್ ಅವರ ಪ್ರೀತಿಗೆ ಅಚ್ಚಾಗಿತ್ತು.
“ನಿನ್ನ ತಲೇನಾ ನಿನಗೋಸ್ಕರ ಬಳಸಿಕೋ ಒಂದು ರೌಂಡ್ ಬರ್ತೀಯ “ಅನ್ನುತ್ತಿದ್ದ ಬಾಲಣ್ಣ ಬೆಳಗಿನ ಜಾವದ ವಾಕಿಂಗ್ ಮುಗಿಸಿ ಬರುವಾಗ ಬೈಕೊಂದು ಗುದ್ದಿದ ಅಪಘಾತದಲಿ ಅಸುನೀಗಿದ್ದಾರೆ.ಅವರಿಲ್ಲದಿರುತ್ತಿದ್ದರೆ ನಾನು ಪತ್ರಕರ್ತನಾಗಿಯೇ ಉಳಿದುಬಿಡುತ್ತಿದ್ದೆ .
ಬಾಲಣ್ಣ ತುಂಬಾ ಜನರಿಗೆ ಮೆಟ್ಟಿಲಾದ ನಿರ್ಮಾಪಕ. ಹೋಗಿಬನ್ನಿ…
ನಮಸ್ಕಾರಗಳು…

Categories
ಸಿನಿ ಸುದ್ದಿ

ಫಿಲಂ ಚೇಂಬರ್ ಚುನಾವಣೆಗೆ ಸಾ.ರಾ.ಗೋವಿಂದು ತಂಡ ನಾಮಪತ್ರ ಸಲ್ಲಿಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಇಂದು ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.


ಅಧ್ಯಕ್ಷನಾಗಿದ್ದಾಗ ನಾನು ಮಾಡಿದ ಕೆಲಸ ಎಲ್ಲರಿಗೂ ಗೊತ್ತಿದೆ. ಸ್ನೇಹಿತರ ಒತ್ತಾಯದ ಮೇರೆಗೆ ಚುನಾವಣೆಗೆ ನಿಂತಿದ್ದೇನೆ. ಚುನಾವಣೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳೋಣ. ಗೆದ್ದವರು ಕೆಲಸ ಮಾಡೋಣ. ಸೋತವರು ಗೆದ್ದವರಿಗೆ ಬೆನ್ನೆಲುಬಾಗಿ ನಿಲ್ಲೋಣ ಎಂಬ ಕ್ರೀಡಾ ಮನೋಭಾವ ಪ್ರದರ್ಶಿಸಿದರು.


ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲ್.ಸಿ.ಕುಶಾಲ್ ಹಾಗೂ ಗೌರವ ಖಜಾಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ.


ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

Categories
ಸಿನಿ ಸುದ್ದಿ

ಮೇ 28ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ…ನಾಮಪತ್ರ ಸಲ್ಲಿಸಿದ ಭಾ.ಮಾ.ಹರೀಶ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ.

ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು.


ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಭಾ.ಮ.ಹರೀಶ್ ಹೆಸರು ಕೇಳಿಬರುತ್ತಿದೆ.

Categories
ಸಿನಿ ಸುದ್ದಿ

ಚಿತ್ರರಂಗಕ್ಕೆ ಬರಲು ಚಂದದ ಬೆಡಗಿ ರೆಡಿ; ಈ ಬ್ಯೂಟಿ ಹೆಸರು ಆರ್ತಿ ಬೇಡಿ…

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಹೈ ಸ್ಕೋರ್ ಪಂದ್ಯ ಅಭಿಮಾನಿಗಳನ್ನು ಸೀಟಿನ ತುದಿಗೆ ತಂದು ಕುರಿಸಿತ್ತು. ಈ ಪಂದ್ಯದ ಮಧ್ಯೆ ಎಲ್ಲರ ಗಮನಸೆಳೆದಿದ್ದು ಆ ಬ್ಯೂಟಿ. ಅವ್ರೇ ಆರ್ತಿ ಬೇಡಿ. ಈ ಪಂದ್ಯದಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾದ ಆರ್ತಿ ಬೇಡಿ ರಾತ್ರೋ ರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು‌. ಇಂಟರ್ ನೆಟ್ ಜಗತ್ತಿನಲ್ಲಿ ಎಲ್ಲೆಡೆ ಆರ್ತಿ ಬೇಡಿ ಪಟಗಳು ವೈರಲ್ ಆದ ನಂತ್ರ ಈಕೆ ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಆಗಿಬಿಟ್ಟರು.

ಆರ್ತಿ ಬೇಡಿ ಖ್ಯಾತಿ ಈಗ ದುಪ್ಪಟ್ಟಾಗಿದೆ. ಈ ನಡುವೆ ಸಿನಿಮಾ ಲೋಕಕ್ಕೆ ಎಂಟ್ರಿ ಕೊಡಲು ಈ ಬ್ಯೂಟಿ ತಯಾರಾಗ್ತಿದ್ದಾಳೆ. ಹಲವು ನಿರ್ಮಾಪಕರು, ನಿರ್ದೇಶಕರನ್ನು ಅಪ್ರೋಚ್ ಆಗಿರುವ ಆರ್ತಿ ಕಂಟೆಂಟ್ ಹಾಗೂ ಕ್ವಾಲಿಟಿ ಸಿನಿಮಾ ಮಾಡುವ ಉತ್ಸಾಹದಲ್ಲಿದ್ದು, ಈಗಾಗಲೇ ಕೆಲ ಕಥೆಗಳನ್ನು ಓದುತ್ತಿದ್ದು, ಆ ಕಥೆಗಳು ಇಷ್ಟವಾದಲ್ಲಿ ಬಣ್ಣ ಹಚ್ಚಿ ಕ್ಯಾಮೆರಾ ಎದುರು ಹಾಜರಾಗಲಿದ್ದಾರೆ.

ಆರ್ತಿ ಬೇಡಿ ಹಿಮಾಲಯ, ಒಲಾ, ಐಸಿಐಸಿಐ ಬ್ಯಾಂಕ್, ವೈಲ್ಡ್ ಸ್ಟೋನ್ ನಂತಹ 35-40ಕ್ಕೂ ಜಾಹೀರಾತುಗಳಲ್ಲಿ ನಟಿಸ್ತಿದ್ದಾರೆ. ಸದ್ಯ ಆರ್ತಿ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿಯಾಗಲು ಅಖಾಡ ಸಿದ್ಧ ಮಾಡಿಕೊಳ್ತಿದ್ದು, ಯಾವ ರೀತಿ ಸಿನಿಮಾವನ್ನು ಆಯ್ಕೆ ಮಾಡ್ತಾರೆ ಅನ್ನೋದು ಸದ್ಯದ ಕುತೂಹಲ.

Categories
ಸಿನಿ ಸುದ್ದಿ

ಮ್ಯಾನ್ ಆಫ್ ದ ಮ್ಯಾಚ್ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್‍ಗೆ ಆಯ್ಕೆ: ಇದು ಸತ್ಯಪ್ರಕಾಶ್ ಸಿನಿಮಾ

ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯ ಪ್ರಕಾಶ್ ಅವರ ಹೊಸ ಸಿನಿಮಾ, ಮ್ಯಾನ್ ಆಫ್ ದ ಮ್ಯಾಚ್ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಪೆಂಡೆಂಮಟ್ ಪಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ಫೆಸ್ಟಿವಲ್ ಆಫ್ ಸಿನಿಮಾ, ತನ್ನ ಆರನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, ಆಗಸ್ಟ್ 5 ರಿಂದ 14, 2022 ರಿಂದ ನಡೆಯಲಿದೆ. ಕೊರೋನಾ ನಂತರ ಮೊದಲ ಬಾರಿಗೆ, ಫಿಸಿಕಲ್ ಆಗಿ ನಡೆಯಲಿರುವ ಫೆಸ್ಟಿವಲ್, ನ್ಯೂಯಾರ್ಕ್‌ನ ಕ್ವೀನ್ಸ್‌ನಲ್ಲಿರುವ ರೀಗಲ್ ಯೂಎ ಮಿಡ್‌ವೇ ಥಿಯೇಟರನಲ್ಲಿ ಚಿತ್ರೋತ್ಸವ ನಡೆಯಲಿದೆ.

ಚಲನಚಿತ್ರವನ್ನು ನೋಡಿದ ವಿಮರ್ಶಕ, ಲಾರೆನ್ಸ್ ವೈಟ್ನರ್, ನಿರ್ದೇಶಕರನ್ನ ಅಭಿನಂದಿಸಿ ಟ್ವೀಟ್ ಮಾಡಿ ‘ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್‍ಗಾಗಿ ನೋಡಿದ ಒಂದು ಅದ್ಭುತವಾದ ಭಾರತೀಯ ವ್ಯಂಗ್ಯಭರಿತ ಚಿತ್ರ. … ನಾನು ಅದಕ್ಕೆ 10/10 ನೀಡಿದ್ದೇನೆ’ ಎಂದು ಟ್ವೇಟ್ ಮಾಡಿದ್ದಾರೆ.

ರಾಮಾ ರಾಮಾ ರೇ ಮತ್ತು ಒಂದಲ್ಲಾ ಎರಡಲ್ಲಾ ಸಿನಿಮಾಗಳ ಯಶಸ್ಸಿನ ನಂತರ ಸತ್ಯ ಪ್ರಕಾಶ್ ನಿರ್ದೇಶಿಸಿರುವ ಮೂರನೇ ಚಿತ್ರ, ಮ್ಯಾನ್ ಆಫ್ ದಿ ಮ್ಯಾಚ್ . ಸತ್ಯ ಮತ್ತು ಮಯೂರ ಪಿಕ್ಚರ್ಸ್ ಸಹಯೋಗದಲ್ಲಿ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸಿದೆ.

ಆಡಿಷನ್‌ಗೆ ಕರೆದ ನಿರ್ದೇಶಕ, ಆಡಿಷನ್‌ಗೆ ಹಾಜರಾಗುವ ಕಲಾವಿದರ ನಡುವೆ ಘರ್ಷಣೆಯನ್ನು ಸೃಷ್ಟಿಸುವ ಮೂಲಕ ಚಲನಚಿತ್ರವನ್ನು ಮಾಡುತ್ತಾರೆ. ದೊಡ್ಡ ಪಾತ್ರವರ್ಗ ಹೊಂದಿರುವ ಮತ್ತು ಪ್ರಸ್ತುತ ಸಾಮಾಜಿಕ ಸಂಘರ್ಷಗಳನ್ನು ಹಾಸ್ಯಮಯ ಮತ್ತು ವಿಡಂಬನಾತ್ಮಕ ರೀತಿಯಲ್ಲಿ ಸ್ಪರ್ಶಿಸುವ ಚಿತ್ರವಾಗಿದೆ.

ನಟರಾಜ್ ಎಸ್ ಭಟ್ ಮತ್ತು ಧರ್ಮಣ್ಣ ಕಡೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ, ಇಬ್ಬರೂ ರಾಮಾ ರಾಮಾ ರೇ ನಂತರ ಸತ್ಯ ಪ್ರಕಾಶ್ ಅವರೊಂದಿಗೆ ಒಟ್ಟಿಗೆ ಬರುತ್ತಿದ್ದಾರೆ. ಅಥರ್ವ ಪ್ರಕಾಶ್ ಮತ್ತು ಮಯೂರಿ ನಟರಾಜ್ ಅವರಂತಹ ಹೊಸಬರೊಂದಿಗೆ ವೀಣಾ ಮತ್ತು ಸುಂದರ್ ಕೂಡ ಈ ಚಿತ್ರದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನು ನಿರ್ವಹಿಸಿದ್ದಾರೆ.
ವಾಸುಕಿ ವೈಭವ್ ಸಂಗೀತ ಸಂಯೋಜಿಸುವುದರ ಜೊತೆಗೆ, ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರವು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.
ಮೇ 2 ರಂದು ಟ್ರೇಲರ್ ಬಿಡುಗಡೆಯಾದ ಮೊದಲ 24 ಗಂಟೆಗಳಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿತ್ತು.

Categories
ಸಿನಿ ಸುದ್ದಿ

ಕುಟುಂಬ ಸಮೇತ ಚಿತ್ರಮಂದಿರಕ್ಕೆ ಬನ್ನಿ! ಮೇ 20 ಕ್ಕೆ ಸಕುಟುಂಬ ಸಮೇತ ರಿಲೀಸ್…

ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ “ಸಕುಟುಂಬ ಸಮೇತ” ಎಂಬ ಸಿನಿಮಾ ತೆರೆಗೆ ಬರುತ್ತಿದೆ . ಹೌದು ಮೇ 20 ರಂದು ಚಿತ್ರ ರಿಲೀಸ್ ಆಗುತ್ತಿದೆ.

ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ ಮಾಡುತ್ತಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಪ್ರಸ್ತುತ ರಕ್ಷಿತ್ ಶೆಟ್ಟಿ ತಮ್ಮ ಪರಂ ವಾ ಸ್ಟುಡಿಯೋ ಮೂಲಕ ನಿರ್ಮಿಸಿರುವ “ಸಕುಟುಂಬ ಸಮೇತ” ಚಿತ್ರ ಮೇ ಇಪ್ಪತ್ತರಂದು ತೆರೆಗೆ ಬರುತ್ತಿದೆ.

“ಸಕುಟುಂಬ ಸಮೇತ” ಕುಟುಂಬ ಸಮೇತ ನೋಡುವ ಸಿನಿಮಾ. ಮದುವೆ ನಿಶ್ಚಯವಾದ ಹುಡುಗಿಯೊಬ್ಬಳು ಮದುವೆಗೆ ಒಂದು ವಾರ ಇರುವಾಗ, ಮದುವೆ ಬೇಡ ಎಂದು ಹುಡುಗನ ಮನೆಗೆ ಬಂದು ಹೇಳುತ್ತಾಳೆ. ಮುಂದೇನಾಗುತ್ತದೆ? ಎಂದು ತಿಳಿಯಲು ಸಿನಿಮಾ ನೋಡಬೇಕು ಎಂದರು ನಿರ್ದೇಶಕ ರಾಹುಲ್.

ನಾನು ರಾಹುಲ್ ಅವರನ್ನು “ಉಳಿದವರು ಕಂಡಂತೆ” ಸಿನಿಮಾದಿಂದಲೂ ಬಲ್ಲೆ. ಅಸಿಸ್ಟೆಂಟ್ ಡೈರೆಕ್ಟರ್ ಅಗಿದ್ದ ರಾಹುಲ್ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಾನು ಚಿತ್ರ ನೋಡಿದ್ದೇನೆ. ಚೆನ್ನಾಗಿದೆ. ಕಲರ್ಸ್ ವಾಹಿನಿಯವರು ಈ ಚಿತ್ರದ ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕು ಪಡೆದುಕೊಂಡಿದ್ದಾರೆ. ಚಿತ್ರಮಂದಿರಗಳಲ್ಲೂ ಈ ಚಿತ್ರ ಬಿಡುಗಡೆಯಾಗುತ್ತಿದೆ. ಜಿ.ಎಸ್.ಗುಪ್ತ ಅವರು ನನ್ನ ಜೊತೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಬಿಡುಗಡೆಗೂ ಮುನ್ನವೇ ನಾವು ಹಾಕಿರುವ ದುಡ್ಡು ನಮಗೆ ವಾಪಸ್ ಬಂದಿರುವುದಕ್ಕೆ ಖುಷಿಯಿದೆ ಎಂದರು ರಕ್ಷಿತ್ ಶೆಟ್ಟಿ.

ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಮುಂತಾದ ಗೆಳೆಯರ ಬಳಗದಿಂದ ಬಂದವರು ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ನಿರ್ದೇಶಕ ರಾಹುಲ್ ಸಹ ನನಗೆ ಪರಿಚಯ. ಅವರು ಈ ಚಿತ್ರದ ಕಥೆ ಹೇಳಿದಾಗ ಸ್ವಲ್ಪ ಭಯವಾಯಿತು. ಹೆಚ್ಚು ಮನೆಯಲ್ಲೇ ನಡೆಯುವ ಕಥೆಯಿದು. ಆದರೆ ನಿರ್ದೇಶಕರು ಚಿತ್ರವನ್ನು ಅಂದುಕೊಂಡದ್ದಕ್ಕಿಂತ
ಚೆನ್ನಾಗಿ ನಿರ್ದೇಶಿಸಿದ್ದಾರೆ ಅಂದರು ಅಚ್ಯುತಕುಮಾರ್.

ರೇಡಿಯೋ, ನಾಟಕಗಳಲ್ಲಿ ಅನುಭವವಿದ್ದ ನನಗೆ ಇದು ಮೊದಲ ಚಿತ್ರ. ನನ್ನ ಪಾತ್ರ ಚೆನ್ನಾಗಿದೆ. ಅವಕಾಶ ನೀಡದ್ದ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ‌ ಸಿರಿ ರವಿಕುಮಾರ್.

ಆಡಿಷನ್ ಮೂಲಕ ಸೆಲೆಕ್ಟ್ ಆದ ನನಗೆ ಸ್ಕ್ರಿಪ್ಟ್ ‌ಓದುವಾಗ ಎಷ್ಟು ನಕ್ಕಿದೇನೋ? ಗೊತ್ತಿಲ್ಲ. ಕುಟುಂಬ ಸಮೇತ ನೋಡಬೇಕಾದ ಚಿತ್ರವಿದು ನೋಡಿ ಹಾರೈಸಿ ಎಂದರು ನಾಯಕ ಭರತ್ ಜಿ.ಬಿ.

ಚಿತ್ರದಲ್ಲಿ ಅಭಿನಯಿಸಿರುವ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ಜಯಲಕ್ಷ್ಮಿ ಪಾಟೀಲ್, ಛಾಯಾಗ್ರಾಹಕ ಕರಮ್ ಚಾವ್ಲಾ, ಸಂದೀಪ್ ಹಾಗೂ ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಮುಂಬಾಯಿಂಡಿಯಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ: ಇದು ಕನ್ನಡಿಗ ಸುಧೀರ್ ಅತ್ತಾವರ್ ಗೆಳೆಯರ ಕನಸು…

ಸಿನಿಮಾ ಅನ್ನೋದೇ ಒಂದು ಅದ್ಭುತ ಪ್ರಕ್ರಿಯೆ. ಬೆಳಕಲ್ಲಿ ಚಿತ್ರೀಕರಿಸಿ ಕತ್ತಲಲ್ಲಿ ತೋರಿಸುವ ಅನನ್ಯ ಅನುಭವ. ಸಿನಿಮಾವನ್ನೇ ಧ್ಯಾನಿಸಿ ಅಂದುಕೊಂಡಿದ್ದನ್ನು ತೆರೆಯ ಮೇಲೆ ತೋರಿಸಿ ಖುಷಿಪಡುವ ಮನಸ್ಸುಗಳಿಗೆ ಇಲ್ಲಿ ಲೆಕ್ಕವಿಲ್ಲ. ಅಂತಹ ಪ್ರತಿಭಾವಂತರನ್ನು ಗುರುತಿಸಿ, ಗೌರವಿಸುವ ಪ್ರಯತ್ನ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅಂದರೆ, ಚಿತ್ರೋತ್ಸವಗಳಲ್ಲಿ ತಮ್ಮ ಸಿನಿಮಾಗಳನ್ನು ತೋರಿಸಿ ಪ್ರಶಂಸೆ ಪಡೆಯುವ, ಮೆಚ್ಚುಗೆಯನ್ನು ಪಡೆಯುವ ಮನಸ್ಸುಗಳಿಗೆ ಪ್ರೋತ್ಸಾಹಿಸುವ ಸಿನಿಮಂದಿ ಅನೇಕ. ಅಂತಹ ಚಿತ್ರೋತ್ಸವದ ವೇದಿಕೆ ಹುಟ್ಟು ಹಾಕಿ ಪ್ರತಿಭಾವಂತರಿಗೊಂದು ಮನ್ನಣೆ ಕೊಡಬೇಕೆಂಬ ಉದ್ದೇಶದಿಂದ ಕನ್ನಡಿಗರಿಬ್ಬರು ದೂರದ ಮುಂಬೈನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಸಲು ಮುನ್ನುಡಿ ಬರೆದಿದ್ದಾರೆ

ಹೌದು, ಹಲವು ವೈಶಿಷ್ಟ್ಯತೆಗಳ ಮ‌ೂಲಕ ತಯಾರಾಗುತ್ತಿರುವ ‘ಮುಂಬಾಯಿಂಡಿಯಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋ (ಲಾಂಛನ) ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನ ಅಂಧೇರಿಯಲ್ಲಿರುವ ಫನ್ ರಿಪಬ್ಲಿಕ್ ನಲ್ಲಿ ಸಕ್ಸಸ್ ಫಿಲ್ಮ್ಸ್ ನ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿದೆ.

ಅಂತಾರಾಷ್ಟ್ರೀಯ ಖ್ಯಾತ ಪಾಪ್ ಅವರ ಗಾಯಕಿ ಶರನ್ ಪ್ರಭಾಕರ್ ಮತ್ತು ಕನ್ನಡಿಗ ಸುಧೀರ್ ಅತ್ತಾವರ್ ರವರ ಕನಸಿ ಕೂಸಿಗೆ ಮತ್ತೊಬ್ಬ ಕನ್ನಡಿಗ ಹಾಗೂ ನಿರ್ಮಾಪಕ ತ್ರಿವಿಕ್ರಮ್ ಬೆಳ್ತಂಗಡಿ, ಹಾಲಿವುಡ್, ಫ಼್ರೆಂಚ್ ಮತ್ತು ಬಾಲಿವುಡ್ ನ ಖ್ಯಾತ ಕೋರಿಯೋಗ್ರಾಫರ್ ಮತ್ತು ಬಾಲ್ ಡಾನ್ಸರ್ ಸಂದೀಪ್ ಸೋಪರ್ಕರ್ ಜೊತೆಗೆ ದೇಶಾದ್ಯಂತ ಹರಡಿರುವ “ವೀ”( W E E ) ಕಮ್ಯೂನಿಟಿ ಯ ಮುಖ್ಯಸ್ಥೆ ಚೈತಾಲಿ ಚಟರ್ಜಿ ಈ ಚಿತ್ರೋತ್ಸವದ ಸಂಸ್ಥಾಪಾಕರಾಗಿ ಕೈ ಜೋಡಿಸಿರುವುದು ವಿಶೇಷ.

ಜನವರಿ ಎರಡನೇ ವಾರದಲ್ಲಿ ಆರು ವಿಭಾಗಗಳಲ್ಲಿ ಐದು ದಿನಗಳ ಕಾಲ ನಡೆಯಲಿರುವ ಚಿತ್ರೋತ್ಸವದಲ್ಲಿ ಶರನ್ ಪ್ರಭಾಕರ್ ರವರ ಪತಿ ಹಾಗೂ ದೇಶದ ಸುಪ್ರಸಿದ್ದ “ಆಡ್ ಫಿಲ್ಮ್ ಮೇಕರ್ ” ಪದ್ಮಶ್ರೀ ವಿಜೇತ ಆಲೆಕ್ ಪದಂಸಿ ಅವರ ನೆನಪಿನಾರ್ಥ ಮೊದಲ ಬಾರಿಗೆ “ಮಿಫ್ ” ಚಿತ್ರೋತ್ಸವದಲ್ಲಿ ಜಾಹಿರಾತು ಚಿತ್ರಗಳ ಪ್ರದರ್ಶನವಿದೆ. ಉಳಿದಂತೆ ಎಲ್ ಜಿ ಬಿ ಟಿ ( LGBT) ಕಮ್ಯೂನಿಟಿ ಸಂಬಂಧಿಸಿದ ಚಿತ್ರಗಳು, ಮಹಿಳಾ ನಿರ್ದೇಶಕಿಯರ ಸಿನಿಮಾಗಳು, ಮರಾಠಿ ಸಿನಿಮಾಗಳು, ಫಿಲ್ಮ್ ಇನ್ಸ್ಟಿಟ್ಯೂಟ್ ನ ವಿದ್ಯಾರ್ಥಿಗಳ ಸಿನಿಮಾ ಹಾಗು ವರ್ಲ್ಡ್ ಸಿನಿಮಾ ಚಿತ್ರೋತ್ಸವದಲ್ಲಿರಲಿವೆ.

ಶರೋನ್ ಪ್ರಭಾಕರ್, ಸುಧೀರ್ ಅತ್ತಾವರ್ ಹಾಗೂ ಸಂದೀಪ್ ಸೋಪರ್ಕರ್ ರವರು ಚಿತ್ರೋತ್ಸವದ ರೂಪುರೇಷೆ ಬಗ್ಗೆ ವಿವರಿಸಿದ್ದಾರೆ. ಈ ಸಿನಿಮಾ ಉತ್ಸವ ಇತರ ಚಿತ್ರೋತ್ಸವಗಳಿಗಿಂತ ಹೇಗೆ ಭಿನ್ನವಾಗಿರುತ್ತದೆ ಎನ್ನುವುದನ್ನು ಸಹ ಹೇಳಿದ್ದಾರೆ.

ಮುಂಬಾದೇವಿ ದೇವಸ್ಥಾನದಿಂದ “ಮುಂಬಾಯಿ” ಹೆಸರು ಬಂದಿರುವುದರಿಂದ ಆ ದೇವಿ “ಮುಂಬಾ” ಹೆಸರನ್ನೇ ಈ ಚಿತ್ರೋತ್ಸವಕ್ಕೆ ಇಡಲಾಗಿದ್ದು ಅದೇ “ಮುಂಬಾಯಿಂಡಿಯಾ” ಎಂದು ತಮ್ಮ ಚಿತ್ರೋತ್ಸವದ “ಲೋಗೋ ಲಾಂಚ್” ಬಳಿಕ ಈ ಚಿತ್ರೋತ್ಸವದ ಹೆಸರಿನ ಕುರಿತ ವಿವರಣೆಯನ್ನು ಸುಧೀರ್ ಅತ್ತಾವರ್ ನೀಡಿದರು.

ಅಂದಿನ ಕಾರ್ಯಕ್ರಮಕ್ಕೆ ಬಾಲಿವುಡ್ ನ ಹಲವಾರು ಗಣ್ಯರು ಆಗಮಿಸಿದ್ದು, ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ನಡೆಯುತ್ತಿರುವ ಲಾಭಿ ಮತ್ತು ರಾಜಕೀಯ ಬಗ್ಗೆ ಅಗಲಿದ ಖ್ಯಾತ ಬಾಲಿವುಡ್ ನಟ ಓಂಪುರಿಯವರ ಪತ್ನಿ ಅಂತಾರಾಷ್ಟ್ರೀಯ ಖ್ಯಾತಿಯ ನಂದಿತಾ ಓಂ ಪುರಿಯವರು ತೀಕ್ಷ್ಣವಾಗಿ ಖಂಡಿಸಿ, ಈ ಚಿತ್ರೋತ್ಸವವು ಸ್ಪಷ್ಟ ಹಾಗೂ ಸ್ವಚ್ಚ ಇಮೇಜಿನಿಂದ ಕೂಡಿಬರಲಿ ಎಂದು ಶುಭ ಹಾರೈಸಿದರು.
ಸಕ್ಸಸ್ ಫಿಲ್ಂಸ್ ನ ವಿದ್ಯಾಧರ್ ಶೆಟ್ಟಿ ಕಾರ್ಯಕ್ರಮ ವ್ಯವಸ್ಥೆಗೊಳಿಸಿದ್ದರು.

Categories
ಸಿನಿ ಸುದ್ದಿ

ಲವ್ ಸ್ಟೋರಿ ಹಿಂದೆ ಬಿದ್ದ ಶಶಾಂಕ್! ಲವ್ 360 ಮೂಲಕ ಮತ್ತೆ ಬಂದ್ರು: ಡಾಕ್ಟರ್ ಈಗ ಆಕ್ಟರ್…

“ಮೊಗ್ಗಿನ ಮನಸ್ಸು”, ” ಕೃಷ್ಣನ್ ಲವ್ ಸ್ಟೋರಿ ” ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಲವ್ 360”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆಯಾಗಿದೆ

ಬಹಳ ದಿನಗಳ ನಂತರ ನಿಮ್ಮನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರು ವರ್ಷಗಳ ನಂತರ “ತಾಯಿಗೆ ತಕ್ಕ ಮಗ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್ ಡೌನ್ ಸಮಯದಲ್ಲಿ ಸಿದ್ದವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೋನ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂ.ಬಿ.ಬಿ.ಎಸ್ ಓದಿರುವ ಪ್ರವೀಣ್ ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು.

ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ, ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್ ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿದೆ‌.
ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು.

ನಾನು ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿದಾಗಿನಿಂದಲೂ ನಟನೆಯಲ್ಲಿ ಆಸಕ್ತಿ. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಗೆ ಬಂದು ಅಭಿನಯ ಕಲಿಯುತ್ತಿದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ಆನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮೆಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಅಂದರು ಪ್ರವೀಣ್.

ನಾನು “ಲವ್ ಮಾಕ್ಟೇಲ್” ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ಆನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು
ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರು ರಚನಾ ಇಂದರ್.

ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಹಾಗೂ ಕಾವ್ಯ ಶಾಸ್ತ್ರಿ
ತಮ್ಮ ಪಾತ್ರದ ಬಗ್ಗೆ, ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಹಾಗೂ ಸಾಹಸ ನಿರ್ದೇಶಕದ ಬಗ್ಗೆ ಮಾಸ್ ಮಾದ ಮಾತನಾಡಿದರು.

Categories
ಸಿನಿ ಸುದ್ದಿ

ಜೂನ್ 24ಕ್ಕೆ ತ್ರಿವಿಕ್ರಮನ ಪರಾಕ್ರಮ! ವಿಕ್ರಮ್ ಬರ್ತಾನೆ‌ ದಾರಿ ಬಿಡಿ…

ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ ” ತ್ರಿವಿಕ್ರಮ ” ಚಿತ್ರ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಬಿಡುಗಡೆ ಘೋಷಣೆಗೆ ತಾರಾ, ನಟರಾದ ಮನುರಂಜನ್, ಸಾಧುಕೋಕಿಲ, ಶರಣ್, ಆದಿ ಲೋಕೇಶ್, ನಿರ್ದೇಕರಾದ ಶಿವಮಣಿ, ಸಂತೋಷ್ ಆನಂದರಾಮ್, ಚೇತನ್ ಕುಮಾರ್ ಮುಂತಾದ ಗಣ್ಯರು ಸಾಕ್ಷಿಯಾದರು.

ನಮ್ಮ ಚಿತ್ರ ಪೂರ್ಣವಾಗಿ ಮೂರು ವರ್ಷವಾಯಿತು. ಕೋವಿಡ್ ಕಾರಣದಿಂದ ತಡವಾಯಿತು. ಈ ಸಮಯದಲ್ಲಿ ನಾನು ಪುನೀತ್ ಸರ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಈ ಚಿತ್ರದ ಕಥೆ ಅವರಿಗೆ ಹೇಳಿದ್ದೆ. ಕೇಳಿ ಖುಷಿ ಪಟ್ಟಿದ್ದರು. ನಾನು ಒಂದು ಹಾಡು ಹಾಡುತ್ತೀನಿ ಅಂದಿದ್ದರು. ನೀನು ಚೆನ್ನಾಗಿ ಡ್ಯಾನ್ಸ್ ಮಾಡಬೇಕು. ಇಲ್ಲದಿದ್ದರೆ ಹೊಡೀತಿನಿ ಅಂದಿದ್ದರು ಪ್ರೀತಿಯಿಂದ. ಅವರು ಇಲ್ಲ ಅಂತ ಹೇಳಲ್ಲ. ಇಲ್ಲೇ ಇದ್ದಾರೆ. ಈ ಚಿತ್ರದ ಕಥೆ ನಾನು ನಮ್ಮ ತಂದೆಯವರಿಗೂ ಪೂರ್ತಿ ಹೇಳಿಲ್ಲ. ಕಥೆ ಗೊತ್ತಿರುವುದು ನನಗೆ, ಅಪ್ಪು ಸರ್ ಗೆ ಹಾಗೂ ಶಿವಣ್ಣ ಅವರಿಗೆ. ನಾನು ರವಿಚಂದ್ರನ್ ಅವರ ಮಗ ಹೌದು. ಆದರೆ ಚಿತ್ರರಂಗಕ್ಕೆ ನಾಯಕನಾಗಿ ಹೊಸಬ. ನಮ್ಮ ಚಿತ್ರ ನೋಡಿ ಹಾರೈಸಿ. ಅವಕಾಶ ನೀಡಿದ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ವಿಕ್ರಮ್ ರವಿಚಂದ್ರನ್.

ವಿಕ್ರಮ್ ಅವರ ನಟನೆಗೆ ನೂರಕ್ಕೆ ಸಾವಿರ ಅಂಕ ಕೊಡಬಹುದು. ಮಧ್ಯಮರ್ಗದ ಹುಡುಗನಾಗಿ ವಿಕ್ರಮ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಮಿಡಲ್ ಕ್ಲಾಸ್ ಫ್ಯಾಮಿಲಿ ಹುಡುಗ, ಹೈ ಕ್ಲಾಸ್ ಫ್ಯಾಮಿಲಿ ಹುಡುಗಿಯನ್ನು ಏಕೆ ಲವ್ ಮಾಡಬಾರದು? ಎಂಬ ವಿಷಯವನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದೇನೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಅಮ್ಮನ ಕುರಿತಾದ ಹಾಡು ಈಗಾಗಲೇ ಜನಮನ ಗೆದ್ದಿದೆ.
ಚಿತ್ರಕ್ಕೆ ನಿರ್ಮಾಪಕ ಸೋಮಣ್ಣನವರ ಸಹಕಾರ ಅಪಾರ. ಜೂನ್ 24 ಚಿತ್ರ ತೆರೆಗೆ ಬರಲಿದೆ. ಇದು ನನ್ನ ಮೂರನೇ ಚಿತ್ರ. ಹಿಂದಿನ ಚಿತ್ರಗಳಿಗೆ ತಾವು ನೀಡಿದ ಪ್ರೋತ್ಸಾಹವನ್ನು ಈ ಚಿತ್ರಕ್ಕೂ ಮುಂದುವರಿಸಿ ಎಂದರು ನಿರ್ದೇಶಕ ಸಹನಾಮೂರ್ತಿ.

ನಿರ್ದೇಶಕ ಸಹನಾಮೂರ್ತಿ ನನ್ನ ಸ್ನೇಹಿತ. ಆತ ಈ ಚಿತ್ರದ ಕಥೆ ಸಿದ್ದಮಾಡಿಕೊಂಡು ಅನೇಕರ ಹತ್ತಿರ ಹೇಳುತ್ತಿದ್ದ. ಕೊನೆಗೆ‌ ನಾನು ಕೇಳಿದ್ದೆ. ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ಹಾಗಾಗಿ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. 2019ರಲ್ಲಿ ಚಿತ್ರ ಆರಂಭವಾಯಿತು. ಅಪ್ಪು ಸರ್ ಬಂದು ಕ್ಲಾಪ್ ಮಾಡಿದ್ದರು. ಚಿತ್ರದ ಎಲ್ಲಾ ಇವೆಂಟ್ ಗಳಗೂ ಬರುವ ಭರವಸೆ ನೀಡಿದ್ದರು. ಆದರೆ ವಿಧಿಲಿಖಿತವೇ ಬೇರೆಯಾಗಿತ್ತು. ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ ಎಂದರು ನಿರ್ಮಾಪಕ ಸೋಮಣ್ಣ.

ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಅಭಿನಯಿಸುವಾಗ ವಿಕ್ರಮ್ ಸರ್ ಸಾಕಷ್ಟು ಸಹಾಯ ಮಾಡಿದರು ಎಂದು ನಾಯಕಿ ಆಕಾಂಕ್ಷ ಶರ್ಮ ಹೇಳಿಕೊಂಡರು.

ಹಿಂದೆ “ಜನುಮದ ಜೋಡಿ” ಚಿತ್ರ ಬಂದಾಗ, ಜನ ಎಷ್ಟೋ ದಿನ ಅದೇ ಗುಂಗಿನಲಿದ್ದರು. ಈಗ ” ಕೆ.ಜಿ.ಎಫ್ 2″ ಚಿತ್ರವನ್ನು ಅದೇ ರೀತಿ ನೋಡುತ್ತಿದ್ದಾರೆ. ಜನರನ್ನು ಮತ್ತೆ ಚಿತ್ರಮಂದಿರದತ್ತ ಕರೆದುಕೊಂಡು ಬರುವ ಚಿತ್ರ ಬರಬೇಕು. ಅಂತಹ ಚಿತ್ರ “ತ್ರಿವಿಕ್ರಮ” ಆಗಲಿ. ವಿಕ್ಕಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಸಾಧುಕೋಕಿಲ.

ಹಿರಿಯ ನಿರ್ದೇಶಕ ಶಿವಮಣಿ ಅವರು ಸಹ ಈ ಚಿತ್ರದ ತಮ್ಮ ಪಾತ್ರದ ಕುರಿತು ಹೇಳಿಕೊಂಡರು.

ಮನುರಂಜನ್ ರವಿಚಂದ್ರನ್, ತಾರಾ, ಸಂತೋಷ್ ಆನಂದರಾಮ್, ಚೇತನ್, ಶರಣ್, ಆದಿ ಲೋಕೇಶ್ ತಮ್ಮ ಪ್ರೋತ್ಸಾಹಭರಿತ ಮಾತುಗಳಿಂದ ಚಿತ್ರತಂಡಕ್ಕೆ ಶುಭ ಕೋರಿದರು.

Categories
ಸಿನಿ ಸುದ್ದಿ

ಬೆಲ್ ಬಟನ್ ಒತ್ತಿದ ಜಗ್ಗೇಶ್! ಹೊಸಬರ ಚಿತ್ರಕ್ಕೆ ನವರಸ ನಾಯಕ ಕ್ಲಾಪ್…

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ನಡೆದಿದೆ.

ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ ಲ‌ಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎ.ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ. ಲಕ್ಕಿ ಛಾಯಾಗ್ರಹಣ ಹಾಗೂ ಎಸ್ ಆಕಾಶ್ ಮಹೇಂದ್ರಕರ್ ಸಂಕಲನ ಈ ಚಿತ್ರಕ್ಕಿದೆ.

ಜೈ, ಈ ಚಿತ್ರದ ನಾಯಕ, ನಿಸರ್ಗ ಅಪ್ಪಣ್ಣ ಮತ್ತು ಚೈತ್ರಾ ಗೌಡ , ನಾಯಕಿಯರು, ಪ್ರಮೀಳಾ ಸುಬ್ರಮಣ್ಯ, ಭಾನುಪ್ರಕಾಶ್, ಶ್ರುತಿ, ರಮೇಶ್, ಪವನ್ ರಿಚ್ಚಿ, ವೇಣು, ಸುಜನಿತ್ ಶೆಟ್ಟಿ, ಗಿರೀಶ್, ಅರವಿಂದ್, ಹರೀಶ್, ಮುಂತಾದವರು ಅಭಿನಯಸುತ್ತಿದ್ದಾರೆ, ಮೇ 15 ರಿಂದ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಲಕ್ಷ್ಮಿನರಸಿಂಹ ಅವರು ತಿಳಿಸಿದ್ದಾರೆ.

error: Content is protected !!