Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಲಹರಿ ಮ್ಯೂಸಿಕ್ ಸಂಸ್ಥೆಗೆ ಗ್ರ್ಯಾಮಿ ಅವಾರ್ಡ್;‌ ರಿಕ್ಕಿಕೇಜ್‌ ಆಲ್ಬಂಗೆ ಸಂದ ಗೌರವ

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ “ಲಹರಿ” ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಗತಿಸಿವೆ. “ಲಹರಿ ಮ್ಯೂಸಿಕ್” ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂ ಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಅವಾರ್ಡ್ ಬಂದಿದೆ. ರಿಕ್ಕಿ ಕೇಜ್ ಅವರ ಸಂಗೀತ ಸಂಯೋಜನೆಗೆ ಈ ಪ್ರಶಸ್ತಿ ಸಂದಿದೆ.

ಕೇವಲ ಐನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ “ಡಿವೈನ್ ಟೈಡ್ಸ್ ” ಆಲ್ಬಂ ಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು , ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್ ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ‌ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ “ಆಕ್ಸಿಡೆಂಟ್”, ” ವೆಂಕಟ ಇನ್ ಸಂಕಟ” ಹಾಗೂ “ಕ್ರೇಜಿ ಕುಟುಂಬ” ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದ ರಿಕ್ಕಿಕೇಜ್, ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು ಲಹರಿ ಸಂಸ್ಥೆಯ ಚಂದ್ರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಈ ವೇಳೆ ಇದ್ದರು.

Categories
ಸಿನಿ ಸುದ್ದಿ

ಯುವ ಪ್ರತಿಭೆಯ ಬಂಬೂ ಸವಾರಿಗೆ ಸುನಿ ಕಿಟ್ಟಿ, ವಿನೋದ್‌ ಸಾಥ್…

ಆರ್ಯ ಎನ್.ಮಹೇಶ್ ನಿರ್ದೇಶನದ “ಬಂಬೂ ಸವಾರಿ” ಸಿನಿಮಾ ಮುಹೂರ್ತಕ್ಕೆ ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಯುವ ಆಗಮಿಸಿ ಪ್ರತಿಭೆಗಳ ಕನಸುಗಳಿಗೆ ಸಾಥ್ ನೀಡಿದರು.

ಸಿಂಪಲ್ ಸುನಿ ಮಾತನಾಡಿ, ಚಿತ್ರದ ಶೀರ್ಷಿಕೆಯಲ್ಲೇ ಪಾಸಿಟಿವ್ ಇದೆ. ಸವಾರಿ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳ್ತಾರೆ. ವರ್ಧನ್ ಒಳ್ಳೆಯ ಕಲಾವಿದ. ಹೊಸ ತಂಡದಲ್ಲಿ ಇರುವವರಿಗೆ ಎಲ್ಲರಿಗೂ ಶುಭ ಹಾರೈಕೆಗಳು. ಸವಾರಿ ನೂರು ದಿನ ಓಡಲಿ ಎಂದು ಹಾರೈಸಿದರು.

ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂತಾ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ಬಂಬೂ ಸವಾರಿ ಅಂತಾ ಗೊತ್ತಾಯ್ತು. ತಂತ್ರಜ್ಞರು, ಕಲಾವಿದರು ಎಲ್ಲರಿಗೂ ಒಳ್ಳೆದಾಲಿ ಎಂದರು.

ವಿನೋದ್ ಪ್ರಭಾಕರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆಶೀರ್ವಾದದೊಂದಿಗೆ ಸಿನಿಮಾ ಪ್ರಾರಂಭ ಮಾಡಿದ್ದಾರೆ. ನಾನು ಕೂಡ ಕಿಟ್ಟಪ್ಪನ ತರಹ ಜಂಬೂ ಸವಾರಿ ಅಂದುಕೊಂಡಿದ್ದೆ. ನವಗ್ರಹ ಮಾಡುವಾಗ ಜಂಬೂ ಸವಾರಿ ಫೇಮಸ್ ಆಗಿತ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಬೆಸ್ಟ್ ವಿಷಸ್ ತಿಳಿಸಿದರು.

ನಿರ್ದೇಶಕ ಕೆ.ಎಂ.ಚೈತನ್ಯ, ಒಳ್ಳೆ ದಿನ ಸಿನಿಮಾ ಆರಂಭಿಸಿದ್ದೀರ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು. ಬಂಬೂ ಸವಾರಿ ಸಿನಿಮಾದಲ್ಲಿ ತಾಂಡವ ರಾಮ, ವರ್ಧನ್, ದೀಪಕ್ ನಟಿಸುತ್ತಿದ್ದಾರೆ. ಆದ್ಯ ಪ್ರಿಯಾ, ಅಭಿ ಸಾರಿಕಾ ನಾಯಕಿಯಾರಾಗಿ ಬಣ್ಣ ಹಚ್ಚಿದ್ದು, ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಬಾಲರಾಜ್ ವಾಡಿ, ಷರೀಫ್ ಕಲಾ ಬಳಗದಲ್ಲಿದೆ.

ಹೇಮಂತ್ ಕುಮಾರ್ ಸಂಗೀತ, ಮಂಜು ಛಾಯಾಗ್ರಾಹಣ, ಗಿರೀಶ್ ಕುಮಾರ್ ಕೆ ಸಂಕಲನ, ನಾಗೇಂದ್ರ ಪ್ರಸಾದ್ ಸಿಂಪಲ್ ಸುನಿ, ವಿಜಯ್ ಟಿ ಪಿ ಸಾಹಿತ್ಯ,ವಿದೆ. ಚಿತ್ರಕ್ಕೆ ಇನ್ಫ್ಯಾಂಟ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಡೇವಿಡ್ ಆರ್ ಬಂಡವಾಳ ಹೂಡಿದ್ದಾರೆ. ಬಂಬೂ ಸವಾರಿ ಕಲ್ಟ್ ಜಾನರ್ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಯಲಿದೆ.

Categories
ಸಿನಿ ಸುದ್ದಿ

ನಟ ಚೇತನ್‌ ಚಂದ್ರ ಹುಟ್ಟು ಹಬ್ಬಕ್ಕೊಂದು ಹೊಸ ಚಿತ್ರ! 15ನೇ ಸಿನಿಮಾ ಅನೌನ್ಸ್…

ಕನ್ನಡದಲ್ಲಿ “ಪಿಯುಸಿ’, ‘ರಾಜಧಾನಿ’, ‘ಕುಂಭ ರಾಶಿ’, ʼಜಾತ್ರೆʼ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟ ಚೇತನ್ ಚಂದ್ರಗೆ ಹುಟ್ಟುಹಬ್ಬದ ಸಂಭ್ರಮ. ಅವರ ಬರ್ತ್ ಡೇ ಪ್ರಯುಕ್ತ 15ನೇ ಅನೌನ್ಸ್ ಆಗಿದೆ. ಜೊತೆಗೆ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ನಿರ್ಮಾಪಕರಾದ ಭಾಮಾ ಹರೀಶ್-ಪ್ರಕಾಶ್ ಫಸ್ಟ್ ಲುಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಚೇತನ್ ಚಂದ್ರ 15ನೇ ಸಿನಿಮಾದ ಫಸ್ಟ್ ಲುಕ್ ನ್ನು ನಿರ್ಮಾಪಕರಾದ ಭಾಮಾ ಹರೀಶ್, ರಂಗಿತರಂಗ ಸಿನಿಮಾ ಖ್ಯಾತಿಯ ಪ್ರಕಾಶ್ ಅಭಿಮಾನಿಗಳ ಸಮ್ಮುಖದಲ್ಲಿಯೇ ಬಿಡುಗಡೆಗೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಚೇತನ್ ಚಂದ್ರ ಕುಟುಂಬಸ್ಥರು ನಮಗೆ ಹಳೆಯ ಪರಿಚಯ. ಅವರ ಎಲ್ಲಾ ಸಿನಿಮಾ ನೋಡುತ್ತಾ ಬಂದಿದ್ದೀನಿ. ಈ ಸಿನಿಮಾ ದೊಡ್ಡ ಯಶಸ್ಸು ಕಾಣಲಿ ಮತ್ತು ಯುವ ನಿರ್ದೇಶಕ ಅಗ್ನಿ ಅವರಿಗೆ ಒಳ್ಳೆಯದಾಗಲಿ ಎಂದು ನಿರ್ಮಾಪಕ ಭಾಮಾ ಹರೀಶ್ ಹೇಳಿದರು.

ಪೋಸ್ಟರ್ ತುಂಬಾ ಚೆನ್ನಾಗಿ ಬಂದಿದೆ. ಚೇತನ್ ಹೊಸ ಲುಕ್‌ನಲ್ಲಿ ಕಾಣುತ್ತಿದ್ದಾರೆ. ಅದಷ್ಟು ಬೇಗ ಚೇತನ್ ಇನ್ನೊಂದು ಸಿನಿಮಾ ಮಾಡಲಿ ಎಂದು ನಿರ್ಮಾಪಕ ಪ್ರಕಾಶ್ ಹೇಳಿದರು.

ಆಂಕರ್, ಮಾಡೆಲ್ ಹಾಗೂ ಸೀರಿಯಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸಿರುವ ಯುವ ನಿರ್ದೇಶಕ ಅಗ್ನಿ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಲವ್ ಕಂ ಆಕ್ಷನ್ ಥ್ರಿಲ್ಲರ್ ಜಾನರ್ ನಲ್ಲಿ‌ ಮೂಡಿ ಬರಲಿರುವ ಈ ಹೊಸ ಸಿನಿಮಾಗೆ ತ್ರಿಬಲ್ ಸಿ ಪ್ರೊಡಕ್ಷನ್ ಹೌಸ್ ಬಂಡವಾಳ ಹೂಡಿದೆ. ಸದ್ಯದಲ್ಲಿಯೇ ಸಿನಿಮಾದ ಮುಹೂರ್ತ‌ ನೆರವೇರಿಸಲು ಚಿತ್ರತಂಡ ಪ್ಲ್ಯಾನ್ ಹಾಕಿದ್ದು, ಆ ದಿನವೇ ಟೈಟಲ್ ಹಾಗೂ‌ ಉಳಿದ ಸ್ಟಾರ್ ಕಾಸ್ಟ್ ಹಾಗೂ ತಂತ್ರಜ್ಞರ ಮಾಹಿತಿ ನೀಡಲಿದೆ.

Categories
ಸಿನಿ ಸುದ್ದಿ

ಗಿರ್ಕಿ ಟೀಸರ್‌ ಸದ್ದು ಜೋರು ಗುರು!‌ ಗೆಳೆಯ ವಿಶ್ವನಿಗೆ ಶುಭ ಕೋರಿದ ಶರಣ್…

ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ವೀರೇಶ್ ಪಿ.ಎಂ. ನಿರ್ದೇಶನದ ಈ ಚಿತ್ರದ ಟೀಸರ್ ಖ್ಯಾತ ನಟ ಶರಣ್ ಅವರು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ.

ಈ ವೇಳೆ ಮಾತನಾಡಿದ ಶರಣ್‌, ವಿಶ್ವ ನನ್ನ ಬಹುಕಾಲದ ಗೆಳೆಯ. ಇಬ್ಬರೂ ಸಾಕಷ್ಟು ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದೇವೆ. ಹಾಸ್ಯ ನಟನಾಗಿ ಚಿತ್ರರಂಗ ಪ್ರವೇಶಿಸಿ, ಈಗ ಚಿತ್ರ ನಿರ್ಮಾಣ ಮಾಡುವ ಮಟ್ಟಕ್ಕೆ ಬೆಳೆದಿರುವುದು ನಿಜಕ್ಕೂ ಹೆಮ್ಮೆ. ಇದು ಸುಲಭವಲ್ಲ. ಇದರ ಹಿಂದೆ ಸಾಕಷ್ಟು ಪರಿಶ್ರಮವಿದೆ. ನಾನು ನೂರು ಚಿತ್ರಗಳಲ್ಲಿ ನಟಿಸಿದ ಮೇಲೆ ನಿರ್ಮಾಪಕನಾದೆ. ವಿಶ್ವ ಕೂಡ ಅಷ್ಟೇ ಚಿತ್ರಗಳ ನಂತರ ನಿರ್ಮಾಪಕನಾಗಿದ್ದಾನೆ. ನಿರ್ದೇಶಕ ವೀರೇಶ್ ಕೂಡ ನನಗೆ ಪರಿಚಿತರು. ಚಿತ್ರತಂಡದ ಪರಿಶ್ರಮ ಟೀಸರ್ ನಲ್ಲಿ ಎದ್ದು ಕಾಣುತ್ತಿದೆ. ಒಳ್ಳೆಯದಾಗಲಿ ಎಂದು ಶರಣ್ ಹಾರೈಸಿದರು.‌

ನಮ್ಮ ಸ್ನೇಹಕ್ಕೆ ಬೆಲೆಕೊಟ್ಟು ಬಂದಿರುವ ಶರಣ್ ಅವರಿಗೆ ಧನ್ಯವಾದ. ನಾನು ಈ ಬೆಳವಣಿಗೆಗೆ ನನ್ನ ತಂದೆಯ ಪ್ರೋತ್ಸಾಹದಿಂದ ಸಾಧ್ಯವಾಗಿದೆ. ನಿರ್ಮಾಣದ ಜೊತೆಗೆ ನಾನು ಪ್ರಮುಖ ಪಾತ್ರದಲ್ಲೂ ನಟಿಸಿದ್ದೇನೆ. ಎಲ್ಲರ ಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಮೇನಲ್ಲಿ ಬಿಡುಗಡೆಯಾಗಲಿದೆ ಎಂದರು ವಿಶ್ವ.

“ಗಿರ್ಕಿ” ಎಂದರೆ ಸುತ್ತಾಟ ಹಾಗೂ ಪರ್ಯಟನೆ. ಒಂದೇ ತರಹದ ಕಥೆಯಲ್ಲ. ಲವ್, ಕಾಮಿಡಿ, ಕೌಟುಂಬಿಕ ಎಲ್ಲಾ ತರಹದ ಮಿಶ್ರಣ ಈ “ಗಿರ್ಕಿ”. ಹೆಚ್ಚಾಗಿ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳಿದೆ. ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್ ಹಾಗೂ ನಾನು ಹಾಡುಗಳನ್ನು ಬರೆದಿದ್ದೇವೆ. ಚಿತ್ರ ಚೆನ್ನಾಗಿದೆ. ನೋಡಿ ಹರಸಿ ಎಂ ಬುದು ನಿರ್ದೇಶಕ ವೀರೇಶ್ ಮಾತು.

ಹಿಂದೆ ಇದೇ ಸಭಾಂಗಣದಲ್ಲಿ ನಾನು ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದ ಚಿತ್ರವೊಂದರ ಸಮಾರಂಭ ನಡೆದಿತ್ತು. ಆ ತಂಡದವರು ನನ್ನ ವೇದಿಕೆಗೆ ಕರೆಯದೆ ಅವಮಾನ ಮಾಡಿದ್ದರು. ಅದನ್ನು ಗಮನಿಸಿದ್ದ ವಿಶ್ವ ಅವರು, ನಿನ್ನನ್ನು ಹೀರೋ ಮಾಡುತ್ತೇನೆ ಎಂದಿದ್ದರು. ಅಂದಂತೆ ಈಗ ಹೀರೋ ಮಾಡಿದ್ದಾರೆ ಅವರಿಗೆ ಹಾಗೂ ಇಡೀ ತಂಡಕ್ಕೆ ನಾನು ಆಭಾರಿ ಎಂದು ನಾಯಕ ವಿಲೋಕ್ ತಿಳಿಸಿದರು.

ನಾಯಕಿಯರಾದ ದಿವ್ಯಾ ಉರುಡುಗ ಹಾಗೂ ರಾಶಿ ಮಹದೇವ್ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಸಂಗೀತ ಹಾಗು ಹಾಡುಗಳ ಕುರಿತು ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿದರು.

Categories
ಸಿನಿ ಸುದ್ದಿ

ಬಾಂಡ್ ರವಿಗೆ ಸಾಥ್ ಕೊಟ್ಟ ಪೊಗರು ಪೋರ-ಯಂಗ್ ಟೈಗರ್: ಪ್ರಮೋದ್ ಬೆನ್ನುತಟ್ಟಿ ಶುಭಕೋರಿದ ಧ್ರುವ-ವಿನೋದ್

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಪ್ರಮೋದ್ ನಾಯಕನಾಗಿ ನಟಿಸುತ್ತಿರುವ ಬಾಂಡ್ ರವಿ ಸಿನಿಮಾಗೆ ಪೊಗರು ಪೋರ ಧ್ರುವ ಹಾಗೂ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಸಾಥ್ ಕೊಟ್ಟಿದ್ದಾರೆ. ಗುರುವಾರ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಧ್ರುವ-ವಿನೋದ್ ಪ್ರಮೋದ್ ಬೆನ್ನುತಟ್ಟಿ ಇಡೀ ಸಿನಿಮಾ ಟೀಂಗೆ ಶುಭಾಶಯ ಕೋರಿದರು.

ವಿನೋದ್ ಕ್ಲ್ಯಾಪ್..ಧ್ರುವ ಕ್ಯಾಮೆರಾಗೆ ಚಾಲನೆ

ಬಾಂಡ್ ರವಿ ಸಿನಿಮಾಗೆ ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿದ್ರೆ, ಧ್ರುವ ಸರ್ಜಾ ಕ್ಯಾಮೆರಾಗೆ ಚಾಲನೆ ನೀಡಿದರು. ಬಳಿಕ ಮಾತಿಗಿಳಿದ ವಿನೋದ್, ಧ್ರುವ ನನ್ನ ತಮ್ಮ. ನನ್ನ ಕಡೆಯಿಂದ ಕ್ಲ್ಯಾಪ್ ಮಾಡಿಸಿದ್ದಕ್ಕೆ ಧನ್ಯವಾದ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ಬಳಿಕ ಧ್ರುವ ಸರ್ಜಾ, ವಿನೋದ್ ಪ್ರಭಾಕರ್ ನಮ್ಮಣ್ಣ ಎನ್ನುತ್ತಾ, ಸಿನಿಮಾದ ಟೈಟಲ್ ಕೇಳಿದರೆ ಫೀಲ್ಡ್ ಸಿನಿಮಾ ಅನಿಸುತ್ತದೆ. ಇದು ಪ್ರಾಮಿಸಿಂಗ್ ಸಿನಿಮಾ. ಪ್ರತಿಯೊಬ್ಬರಿಗೂ ಪ್ರೋತ್ಸಾಹ ಮಾಡಬೇಕು ಅಂತಾ ನೆಗೆಟಿವ್ ಕಮೆಂಟ್ ಮಾಡುವವರಿಗೆ ವಾರ್ನಿಂಗ್ ಕೊಟ್ರು.

ಪ್ರಮೋದ್, ನಾನು ಅಪ್ಪು ಸರ್ ಅಭಿಮಾನಿಯಾಗಿ ಬಾಂಡ್ ರವಿ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಅಣ್ಣಾ ಬಾಂಡ್ ಸಿನಿಮಾದಲ್ಲಿ ಅಪ್ಪು ಸರ್ ಮಿಂಚಿದ್ದ ಬಾಂಡ್ ರವಿ ಪಾತ್ರದ ರೀತಿ ಇರುತ್ತದೆ. ಹೀಗಾಗಿ ಅಪ್ಪು ಸರ್ ಮ್ಯಾನರಿಸಂ, ಆಕ್ಟಿಂಗ್ ಖದರ್ ನ್ನು ನೋಡಿ‌ ಕಲಿಯುತ್ತಿದ್ದೇನೆ. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ಫ್ಯಾಷನ್ ಪ್ರೊಡ್ಯೂಸರ್ ಎಂದರು.

ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಯುಗಾದಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಲಾಗಿತ್ತು.
ಅಂದಹಾಗೆ, ಬಾಂಡ್ ರವಿ ಕಮರ್ಷಿಯಲ್ ಎಮೋಷನಲ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದು, ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು.

ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್&ದೇವರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ಶುಕ್ರವಾರದಿಂದಲೇ ಶೂಟಿಂಗ್ ನಡೆಯುತ್ತಿದ್ದು, ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ ಸುತ್ತಮುತ್ತ ಐವತ್ತು ದಿನಗಳ ಕಾಲ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿದೆ.

Categories
ಸಿನಿ ಸುದ್ದಿ

ಕುಚಿಕು ಗೆಳೆಯನಿಗೆ ಸಿಂಪಲ್‌ ಸುನಿ ಹೆಲ್ಪ್!‌ ಇದು ಶಾರ್ಟ್‌ ಫ್ಯೂಚರ್‌ ಫಿಲ್ಮ್; ಓಟಿಟಿಯಲ್ಲಿ ಬರಲಿದೆ ಹೊಸಬರ ಹೆಲ್ಪ್‌ ಚಿತ್ರ…

ಕಿರುಚಿತ್ರಗಳು ಸಾಕಷ್ಟು ಪ್ರಭಾವಿಸುತ್ತವೆ. ಅದರಲ್ಲೂ ಹೊಸಬರು ಸಿನಿಮಾ ಮಾಡಲು ಹೊರಡುವ ಮುನ್ನ, ಮೊದಲ ಮೆಟ್ಟಿಲಂತೆ ಈ ಕಿರುಚಿತ್ರಗಳು. ಹಲವು ಕಿರುಚಿತ್ರಗಳ ಸಾಲಿಗೆ ಈಗ ಹೆಲ್ಫ್‌ ಎಂಬ ಹೊಸ ಕಿರುಚಿತ್ರ ಮೂಡಿಬಂದಿದ್ದು, ಏಪ್ರಿಲ್‌ 27ರಂದು ಈ ಚಿತ್ರ ರಿಲೀಸ್‌ ಆಗುತ್ತಿದೆ. ಇದು ಸಾಮಾನ್ಯನ ಜೀವನದಲ್ಲಾಗುವ ಏರಿಳಿತಗಳನ್ನಿಟ್ಟುಕೊಂಡು ಮಾಡಿರುವ ಕಿರುಚಿತ್ರ ಜೆರಿನ್ ಚಂದನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಅಂದಹಾಗೆ, ಏಪ್ರಿಲ್ 27ರಂದು ಇದೇ ಮೊದಲ ಬಾರಿಗೆ ಕನ್ನಡ ಕಿರುಚಿತ್ರವೊಂದು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಕಿರುಚಿತ್ರದ ತಂಡಕ್ಕೆ ಶುಭ ಹಾರೈಸಲು ನಿರ್ದೇಶಕ ಸಿಂಪಲ್ ಸುನಿ ಆಗಮಿಸಿದ್ದರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ಜೆರಿನ್‌ ಚಂದನ್‌, ಕ್ಲಾಸ್ ರೂಮ್ ಕಥೆಗಳು ಅರ್ಥಗರ್ಭಿತವಾಗಿದ್ದವು. ಕಥೆ ಸಂದೇಶಗಳನ್ನು ತಲುಪಿಸಲು ಇದು ಸೂಕ್ತ ವೇದಿಕೆ ಎನಿಸಿತು. ಹೀಗಾಗಿ, ಈ ಮಾಧ್ಯಮ ಬಳಸಿಕೊಂಡು ಜೀವನದ ಏರಿಳಿತಗಳನ್ನು ತೋರಿಸಲು ಈ ಕಿರುಚಿತ್ರದ ಮೂಲಕ ಪ್ರಯತ್ನಿಸಿದ್ದೇನೆ ಎಂದ ನಿರ್ದೇಶಕ ಜೆರಿನ್ ಚಂದನ್, ಮುಂದಿನ ದಿನಗಳಲ್ಲಿ ಹಿರಿತೆರೆಯಲ್ಲಿ ಸಿನಿಮಾವೊಂದನ್ನು ನಿರ್ದೇಶಿಸುವುದಾಗಿ ಹೇಳಿದರು.

ಉತ್ತಮ ಸಂದೇಶವಿರುವ ಚಿತ್ರವನ್ನು ಮಾಡಿದ್ದೇವೆ. “ಹೆಲ್ಪ್” ಯಾವುದೇ ಕಾರಣಕ್ಕೂ ಕಿರುಚಿತ್ರ ಅನಿಸುವುದಿಲ್ಲ. ಸಿನಿಮಾ ರೀತಿಯಲ್ಲೇ ಮಾಡಿದ್ದೇವೆ. ಮೂವತ್ತು ನಿಮಿಷ ಕಳೆಯುವುದೇ ಗೊತ್ತಾಗದ ಹಾಗೆ ನಿರ್ದೇಶಕರು ಈ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಏಪ್ರಿಲ್ 27 ರಂದು ಓಟಿಟಿಯಲ್ಲಿ ಈ ಕಿರುಚಿತ್ರ ಬಿಡುಗಡೆಯಾಗುತ್ತಿದೆ. 20 ರ ನಂತರ ಈ ಕಿರುಚಿತ್ರದ ಪ್ರದರ್ಶನ ಏರ್ಪಡಿಸುತ್ತೇವೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ. ನಾನು ಸಹ ಇದರಲ್ಲಿ ಒಂದು ಪಾತ್ರ ಮಾಡಿದ್ದೇನೆ ಎಂದರು ನಿರ್ಮಾಪಕ ಆದಿತ್ಯ.

ನಿರ್ದೇಶಕ ಜೆರಿನ್ ಅವರ ಜೊತೆ ಶಾಲೆಯಲ್ಲಿ ಕಳೆದ ಸವಿನೆನಪುಗಳನ್ನು ನೆನಪಿಸಿಕೊಂಡರು ನಿರ್ದೇಶಕ ಸಿಂಪಲ್ ಸುನಿ. ನನ್ನ ಮೊದಲ ಚಿತ್ರ “ಸಿಂಪಲಾಗೊಂದು ಲವ್ ಸ್ಟೋರಿ ” ಚಿತ್ರದಲ್ಲಿ ಜೆರಿನ್ ಎಂಬ ಪಾತ್ರ‌ ಬರುತ್ತದೆ. ಆ ಹೆಸರಿಡಲು ನನ್ನ ಈ ಗೆಳೆಯನೆ ಸ್ಪೂರ್ತಿ. ಈಗ “ಹೆಲ್ಪ್” ಎಂಬ ಕಿರುಚಿತ್ರ ಮಾಡಿದ್ದಾನೆ. “ಹೆಲ್ಪ್” ಎಂದರೆ ಈ ಕ್ಷಣಕ್ಕೆ ನೆನಪಾಗುವುದು ಪುನೀತ್ ಸರ್. ಅವರು ಮಾಡಿರುವ ಸಹಾಯ ಎಲ್ಲರಿಗೂ ಸ್ಪೂರ್ತಿ. ಜೆರಿನ್ ಅವರಿಂದ ಇನ್ನೂ ಉತ್ತಮ ಚಿತ್ರಗಳು ಮೂಡಿಬರಲಿ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಸಿಂಪಲ್ ಸುನಿ ಹಾರೈಸಿದರು.

ಕಿರುಚಿತ್ರದಲ್ಲಿ ನಟಿಸಿರುವ ವಿನಯ್ ನಾಗೇಶ್ ರಾವ್ ಹಾಗೂ ಛಾಯಾಗ್ರಾಹಕ ರಾಜಕುಮಾರ್ “ಹೆಲ್ಪ್” ಬಗ್ಗೆ ಮಾತನಾಡಿದರು.

ಅಭಿಜಿತ್, ಬಿ.ಸುರೇಶ್, ವೀಣಾ ಸುಂದರ್ , ಡಿ.ಎನ್. ಆದಿತ್ಯ, ನಿಶಾ ಸೇರಿದಂತೆ ಅನೇಕರು “ಹೆಲ್ಪ್” ನಲ್ಲಿ ನಟಿಸಿದ್ದಾರೆ.ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಹೊರ ಬಂತು ಪ್ರೀತ್ಸು ಸಾಂಗ್ಸ್! ಇದು ಇಳಯರಾಜ ಮ್ಯೂಸಿಕಲ್‌ ಸಿನಿಮಾ…

ಸಂಗೀತ ಕ್ಷೇತ್ರದ ಮೇರು ಪ್ರತಿಭೆ ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ
“ಪ್ರೀತ್ಸು” ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಇತರರು ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ನವಭಾರತ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ “ಪ್ರೀತ್ಸು” ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ ಸಾಥ್ ನೀಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಚಿತ್ರಕ್ಕೆ ಸಂಗೀತ ನೀಡಿರುವುದು ನಿಜಕ್ಕೂ ಸಂತಸ ತಂದಿದೆ. ನನಗೆ ಇಳಯರಾಜ ಅವರು ಬಹುದಿನಗಳ ಪರಿಚಯ. ಅವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ವೈದ್ಯರ ಸಲಹೆ ಮೇರೆಗೆ ಕೊನೆಯಲ್ಲಿ ಅವರು ಬರುವುದು ರದ್ದಾಯಿತು. ವಿಡಿಯೋ ಮೂಲಕ ಅವರು ಸಂದೇಶ ಕಳುಹಿಸಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಹರಸಿ ಎಂದರು ನಿರ್ದೇಶಕ ಕೆ.ಗಣೇಶನ್.

ಮಲೇಷಿಯಾ ಗೆ ಬಂದಾಗ ಗಣೇಶನ್ ಈ ಕಥೆ ಹೇಳಿದ್ದರು. ಇಷ್ಟವಾಯಿತು ನಿರ್ಮಾಣಕ್ಕೆ ಮುಂದಾದೆವು. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಗಾನ ವಿನೋದನ್.

ನಾಯಕ ಸುಭಾಷ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಅತಿಥಿಗಳಿಗೆ ಧನ್ಯವಾದ ಅರ್ಪಿಸಿದರು. ಮುಖ್ಯ ಅತಿಥಿಗಳು ಚತ್ರಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸುಭಾಷ್ ಅವರಿಗೆ ನಾಯಕಿಯಾಗಿ ನೇಹ ಅಭಿನಯಿಸಿದ್ದಾರೆ. ಗಣೇಶನ್, ಮನೋಬಲ, ಸ್ವಾಮಿನಾಥ, ಮನೋಹರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಎ.ಸಿ.ಮಹೇಂದ್ರನ್ ಛಾಯಾಗ್ರಹಣ, ಸಂಜೀವ ಸಂಕಲನ ಹಾಗೂ ಜಾನ್ ಪೀಟರ್ ಅವರ ಕಲಾ ನಿರ್ದೇಶನ “ಪ್ರೀತ್ಸು” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಡಾ.ಸುಧಾಕರ್‌ ಬಣ್ಣ ಹಚ್ಚಿ ನಟನೆ! ಯಡಿಯೂರಪ್ಪ ಬಳಿಕ ತನುಜಾ ಸಿನಿಮಾದಲ್ಲಿ ಅಭಿನಯಿಸಿದ ಸಚಿವ

ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.


ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು, ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೂಡ ಸೆಟ್ಟೇರಿದ್ದು ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು .


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು, ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.


ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಈ ಚಿತ್ರವು ಶಿವಮೊಗ್ಗ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್ , ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದಾರೆ.

ಪ್ರದ್ಯೋತನ ಸಂಗೀತ ನಿರ್ದೇಶನ ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ, ರಘುನಂದನ್ ಎಸ್.ಕೆ ಕಾರ್ಯಕಾರಿ ನಿರ್ಮಾಪಕರು, ಸತೀಶ್ ಬ್ರಮ್ಮಾವರ್ ನಿರ್ಮಾಣ ನಿರ್ವಹಣೆ ಇದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಶೂಟಿಂಗ್‌ ಮೊದಲೇ ಭೀಮನಿಗೆ ಭರ್ಜರಿ ಬ್ಯುಜಿನೆಸ್!‌ ದುನಿಯಾ ವಿಜಯ್‌ ಚಿತ್ರದ ಆಡಿಯೋ ದಾಖಲೆ ಮೊತ್ತಕ್ಕೆ ಖರೀದಿಸಿದ ಆನಂದ್‌ ಆಡಿಯೊ…

ಚಿತ್ರೀಕರಣಕ್ಕೂ‌ ಮೊದಲೇ ದುನಿಯಾ ವಿಜಯ್‌ ಅಭಿನಯದ ಭೀಮ ಚಿತ್ರಕ್ಕೆ ಭರ್ಜರಿ ಬ್ಯುಜಿನೆಸ್‌ ಆಗಿದೆ. ಹೌದು, ರಿಲೀಸ್‌ ಮೊದಲೇ ದುನಿಯಾ ವಿಜಯ್ ಅವರ ಭೀಮ ಚಿತ್ರದ ಆಡಿಯೋ ಹಕ್ಕನ್ನು ಆನಂದ್‌ ಆಡಿಯೋ ದಾಖಲೆ ಮೊತ್ತ ಕೊಟ್ಟು ಖರೀದಿ ಮಾಡಿದೆ. ಇದು ಚಿತ್ರತಂಡಕ್ಕೆ ಸಿಕ್ಕ ಮೊದಲ ಜಯ.

ಹೌದು, 1.50ಕೋಟಿ ದಾಖಲೆಯ ಮೊತ್ತಕ್ಕೆ ಭೀಮ ಚಿತ್ರದ ಆಡಿಯೋ ಸೋಲ್ಡೌಟ್ ಆಗಿರುವುದು ನಿಜಕ್ಕೂ ಖುಷಿಯ ವಿಷಯವೇ. ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್‌ ಹಾಗು ಆನಂದ್‌ ಅವರು ಭೀಮ ಚಿತ್ರದ ಆಡಿಯೋ ರೈಟ್ಸ್‌ ಅನ್ನು ದಾಖಲೆಯ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

ಸಲಗ ಚಿತ್ರ ಆಡಿಯೋ ಸಕ್ಸಸ್ ನ ಎಫೆಕ್ಟ್ ಇದಾಗಿದ್ದು, ಅಲ್ಲದೆ ದುನಿಯಾ ವಿಜಯ್ ಹಾಗೂ ಚರಣ್ ಕಾಂಬಿನೇಷನ್‌ ಸಿನಿಮಾ ಮತ್ತೆ ಮೂಡಿ ಬರುತ್ತಿರುವ ಹಿನ್ನಲೆಯಲ್ಲಿ ಈ ಭರ್ಜರಿ ಬ್ಯುಜಿನೆಸ್‌ ಆಗಿದೆ.

ಆನಂದ್ ಆಡಿಯೋದಿಂದ ಅಡ್ವಾನ್ಸ್ ಚೆಕ್ ಹಾಗೂ ಅಗ್ರಿಮೆಂಟ್ ಸ್ವೀಕರಿಸಿರುವ ಭೀಮ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಅವರು ಇದೇ ಏಪ್ರಿಲ್ 18ಕ್ಕೆ ಭೀಮ ಚಿತ್ರ ಅದ್ಧೂರಿ ಮುಹೂರ್ತ ನಡೆಸಲು ತೀರ್ಮಾನಿಸಿದ್ದಾರೆ. ದುನಿಯಾ ವಿಜಯ್ ಅವರ ಇಷ್ಟ ದೇವತೆ ಶ್ರೀ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದೆ.

Categories
ಸಿನಿ ಸುದ್ದಿ

ಬೆಲ್‌ ಬಟನ್‌ ಒತ್ತಿದ ದೇಸಾಯಿ! ಹೊಸಬರಿಗೆ ‌ಸುನೀಲ್‌ ಕುಮಾರ್ ಸಾಥ್…‌

ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ, ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿ ಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು. ಅಂತಹ ನಿರ್ದೇಶಕರಿಂದ ಇತ್ತೀಚೆಗೆ “ಬೆಲ್ ಬಟನ್” ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ.

ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವ ಇರುವ ಲ‌ಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎ.ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ. ಗೌತಮ್ ನಾಯಕ್ ಛಾಯಾಗ್ರಹಣ ಹಾಗೂ ಎಸ್. ಆಕಾಶ್ ಮಹೇಂದ್ರಕರ್
ಸಂಕಲನ ಈ ಚಿತ್ರಕ್ಕಿದೆ.

ಕಲಾವಿದರ ಆಯ್ಕೆಯಲ್ಲಿ ‌ತೊಡಗಿರುವ ನಿರ್ದೇಶಕ ಲಕ್ಷ್ಮಿನರಸಿಂಹ ಅವರು, ಮೇನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿದ್ದಾರೆ.

error: Content is protected !!