Categories
ಸಿನಿ ಸುದ್ದಿ

ರಾಜವರ್ಧನ್ ಜೊತೆ ಬಿಗ್ ಬಾಸ್ ಚೆಲುವೆ! ಹಿರಣ್ಯ ಸಿನಿಮಾಗೆ ದಿವ್ಯಾ ಸುರೇಶ್ ಸ್ಪೆಷಲ್ ರೋಲ್…

ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ಬಿಗ್ ಬಾಸ್ ಬ್ಯೂಟಿ ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟಿಸುತ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಪ್ರವೀಣ್ ಅವ್ಯಕ್ತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಇಬ್ಬರು ಒಟ್ಟಿಗೆ ನಟಿಸುವ ಅವಕಾಶ ಹಿರಣ್ಯ ಸಿನಿಮಾ ಮೂಲಕ ನನಸಾಗುತ್ತಿದೆ ಅನ್ನೋದು ಬಿಗ್ ಬಾಸ್ ಬ್ಯೂಟಿ ದಿವ್ಯಾ ಮಾತು. ಇದೇ 9 ರಿಂದ ದಿವ್ಯಾ ಸುರೇಶ್ ಭಾಗದ ಶೂಟಿಂಗ್ ಶುರುವಾಗಲಿದೆ.

ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿಘ್ನೇಶ್ವರ ಯು ಮತ್ತು ವಿಜಯ್ ಕುಮಾರ್ ಬಿವಿ ಹಿರಣ್ಯ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

Categories
ಸಿನಿ ಸುದ್ದಿ

ಸದಭಿರುಚಿಯ ಸಿನಿಮಾಗಳ ವಿತರಣೆಗೆ ಸಜ್ಜಾದ ಬೆಂಗಳೂರು ಕುಮಾರ್‌ ಫಿಲಂಸ್‌; ಕಂಟೆಂಟ್‌ ಸಿನಿಮಾಗಳಿಗೂ ಸಾಥ್‌ ಕೊಡಲು ರೆಡಿ

ಕನ್ನಡ ಚಿತ್ರರಂಗ ಈಗ ಎಂದಿಗಿಂತಲೂ ಶೈನ್ ಆಗಿದೆ. ಅದರಲ್ಲೂ ಬಹುಕೋಟಿ ವೆಚ್ಚದ ಚಿತ್ರಗಳು ರಿಲೀಸ್ ಅಗೋಕೆ ಸಾಲಾಗಿ ನಿಂತಿವೆ. ಅದಕ್ಕೆ ತಕ್ಕಂತಹ ವಿತರಣಾ ಸಂಸ್ಥೆಗಳು ಕೂಡ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಾಥ್ ನೀಡುತ್ತಿವೆ. ಆ ಸಾಲಿಗೆ ಈಗ ಕನ್ನಡದ ಸದಭಿರುಚಿಯ ಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರಲ್ಲಿ ಹೊಸ ಉತ್ಸಾಹ ತುಂಬುವ ನಿಟ್ಟಿನಲ್ಲಿ ಹೀಗೊಂದು ವಿತರಣೆ ಸಂಸ್ಥೆ ಸಜ್ಜಾಗಿದೆ. ಹೌದು, ಬೆಂಗಳೂರು ಕುಮಾರ್ ಫಿಲಂಸ್ ಎಂಬ ವಿತರಣೆ ಸಂಸ್ಥೆ ಚಿತ್ರರಂಗಕ್ಕೇನು ಹೊಸದಲ್ಲ. ಈಗಾಗಲೇ ಹಲವಾರು ಚಿತ್ರಗಳಿಗೆ ಮತ್ತು ಪ್ರೇಕ್ಷಕರಿಗೆ ಸೇತುವೆಯಾಗಿದೆ

ಅಂದಹಾಗೆ, ಬೆಂಗಳೂರು ಕುಮಾರ್ ಫಿಲಂಸ್ ಕಳೆದ ಹಲವಾರು ವರ್ಷಗಳಿಂದಲೂ ಕನ್ನಡದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದೆ. ಆದರೆ, ಅವೆಲ್ಲವೂ ಹೇಳಿಕೊಳ್ಳುವಂತಹ ಬಿಜಿನೆಸ್ ಆಗಿರಲಿಲ್ಲ. ಈಗ ಕನ್ನಡದ ಹೊಸ ಬಗೆಯ ಸಿನಿಮಾಗಳೂ ಸೇರಿದಂತೆ, ದೊಡ್ಡ ಬಜೆಟ್ ನ ಸ್ಟಾರ್ ವ್ಯಾಲ್ಯು ಇರುವಂತಹ ಸಿನಿಮಾಗಲು ಹಾಗು ಸದಭಿರುಚಿಯ ಮತ್ತು ಉತ್ತಮ ಸಂದೇಶ ಸಾರುವ ಚಿತ್ರಗಳನ್ನು ವಿತರಣೆ ಮಾಡಲು ಮುಂದಾಗಿದೆ.

ಬೆಂಗಳೂರು ಕುಮಾರ್ ಫಿಲಂಸ್ ಹೆಸರಿನ ವಿತರಣೆ ಸಂಸ್ಥೆ ಮೂಲಕ ಕನ್ನಡದ ಸಿನಿಮಾಗಳನ್ನು ವಿತರಿಸಲು ಉತ್ಸಾಹಗೊಂಡಿದೆ. ಈಗಾಗಲೇ ಕನ್ನಡದಲ್ಲಿ ಹಲವು ವಿತರಣೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಕ್ವಾಲಿಟಿ ಹಾಗು ಕಂಟೆಂಟ್ ಸಿನಿಮಾಗಳನ್ನು ವಿತರಿಸಲು ಸಂಸ್ಥೆ ಈಗಾಗಲೇ ತಯಾರಿ ನಡೆಸಿದೆ.

ಹೊಸ ಪ್ರಯತ್ನಕ್ಕೆ ಈಗಾಗಲೇ ಬೆಂಬಲ ಸಿಕ್ಕಿದ್ದು, ಯಾವುದೇ ಚಿತ್ರಮಂದಿರಗಳ ಬಾಡಿಗೆ ಇಲ್ಲದೆ, ಪರ್ಸಂಟೇಜ್ ಮೂಲಕ ಎಲ್ಲಾ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಿಕೊಡಲಿದ್ದಾರೆ. ಇನ್ನು, ಒಳ್ಳೆಯ ಕಂಟೆಂಟ್ ಇರುವ ಸಿನಿಮಾಗಳಿಗೆ ನಮ್ನ ಕಡೆಯಿಂದ ಫೈನಾನ್ಸಿಯಲ್ ಸಪೋರ್ಟ್ ಮಾಡಿ ರಿಲೀಸ್ ಮಾಡಿಕೊಡುತ್ತೇವೆ ಎಂಬುದು ಬೆಂಗಳೂರು‌ ಕುಮಾರ್ ಫಿಲಂಸ್‌ ಮಾತು.

ಈಗ ವಿತರಣೆ ಮಾಡಲು ರೆಡಿಯಾಗಿದ್ದು, ಉಪೇಂದ್ರ ಅಭಿನಯದ ಹೋಮ್ ಮಿನಿಸ್ಟರ್ ಚಿತ್ರವನ್ನು ರಾಜ್ಯಾದ್ಯಂತ ರಿಲೀಸ್ ಮಾಡಲಾಗುತ್ತಿದೆ. ಕೆಲವು ಸಿನಿಮಾಗಲ ಜೊತೆ ಮಾತುಕತೆ ನಡೆಯುತ್ತಿದೆ. ಇದರ ಜೊತೆಗೆ ಸಂಸ್ಥೆ ನಿರ್ಮಾಣ ಕೂಡ ಮಾಡುತ್ತಿದೆ. ಈಗಾಗಲೇ ಪ್ರಜ್ವಲ್ ದೇವರಾಜ್ ಅವರ “ಮಾಫಿಯಾ” ಕೂಡ ತಯಾರಾಗುತ್ತಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಸಿನಿಮಾಗಳನ್ನು ವಿತರಣೆ ಮಾಡುವುದರ ಜೊತೆಗೆ ನಿರ್ಮಾಪಕರ ಸಮಸ್ಯೆಗೆ ಸ್ಪಂದಿಸುವುದಾಗಿ ಹೇಳುತ್ತಾರೆ ಸಂಸ್ಥೆಯ ಕುಮಾರ್.

Categories
ಸಿನಿ ಸುದ್ದಿ

ಡಿಯರ್‌ ಸತ್ಯನಿಗೆ ಶ್ರೀಮುರಳಿ ಸಾಥ್‌; ಆರ್ಯನ್‌ ಸಂತೋಷ್‌ ನಟನೆಯ ಚಿತ್ರ ಮಾರ್ಚ್‌ 10ಕ್ಕೆ ರಿಲೀಸ್

ಪರ್ಪಲ್ ರಾಕ್ ಎಂಟರ್ ಟೈನರ್ ಹಾಗೂ ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಬ್ಯಾನ‌ರ್‌ನಲ್ಲಿ ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್, ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಅಪರೂಪ ನಿರ್ಮಿಸಿರುವ “ಡಿಯರ್ ಸತ್ಯ” ಚಿತ್ರದ ಟ್ರೇಲರ್ ಅಮ್ಮಿ ನಟ ಶ್ರೀಮುರಳಿ ಅವರು ಬಿಡುಗಡೆ ಮಾಡಿ ಶುಭ ಕೋರಿದರು.

“ಸಂತೋಷ್ ನನಗೆ ತುಂಬಾ ವರ್ಷಗಳ ಸ್ನೇಹಿತ. ಈಗ ಆರ್ಯನ್ ಸಂತೋಷ್ ಆಗಿದ್ದಾರೆ. ನಿರ್ಮಾಪಕ ಯತೀಶ್, ಗಣೇಶ್ ಪಾಪಣ್ಣ ಕೂಡ ನನಗೆ ಬಹಳ ದಿನಗಳ ಪರಿಚಯ. ಟ್ರೇಲರ್ ತುಂಬಾ ಚೆನ್ನಾಗಿ ‌ಮೂಡಿಬಂದಿದೆ. ಈ ಚಿತ್ರದಲ್ಲಿ ಉಪ್ಪಿ ಸರ್ ಹಾಡಿರುವ ಹಾಡು ನನಗಿಷ್ಟ. ಎಲ್ಲಕ್ಕಿಂತ ನನ್ನ ಸ್ನೇಹಿತ ಸಂತೋಷ್ ಗೆ ಈ ಚಿತ್ರ
ಯಶಸ್ಸು ತಂದು ಕೊಡಲಿ ಎಂದು ಹಾರೈಸಿದರು ಶ್ರೀಮುರಳಿ.

ಚಿತ್ರ ಆರಂಭವಾದ ಬಗ್ಗೆ ಹಾಗೂ ಸಾಗಿ ಬಂದ ದಾರಿ ಕುರಿತು ನಿರ್ಮಾಪಕರಾದ ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಶ್ರೀಭಕ್ತ ವಿವರಿಸಿದರು.

ಈ ಚಿತ್ರವನ್ನು ಮೊದಲು ತಮಿಳಿನಲ್ಲಿ ಮಾಡಬೇಕೆಂದುಕೊಂಡಿದ್ದೆ. ಚೆನ್ನೈ ನ ಹೈಕೋರ್ಟ್ ಎದುರು ಪ್ಯಾರಿಸ್ ಕಾರ್ನರ್ ಎಂಬ ಸ್ಥಳವಿದೆ. ಆ ಜಾಗವೇ ನನಗೆ ಕಥೆ ರಚಿಸಲು ಸ್ಪೂರ್ತಿ. ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಕಥೆ ಸಿದ್ದ ಮಾಡಿಕೊಂಡ ಮೇಲೆ ನಿರ್ಮಾಪಕರ ಹುಡುಕಾಟದಲ್ಲಿ ಸಾಕಷ್ಟು ವರ್ಷ ಕಳೆದಿದ್ದೇನೆ.‌ ನಂತರ ಗಣೇಶ್ ಪಾಪಣ್ಣ ಅವರು ಫೋನ್ ಮಾಡಿ ಕಥೆ ಕೇಳಿದರು.‌ ಗಣೇಶ್,
ಯತೀಶ್, ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಸಹ ಪರ್ಪಲ್ ರಾಕ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಚಿತ್ರೀಕರಣ ಮುಗಿದ ತಕ್ಷಣ ಕೋವಿಡ್ ಶುರುವಾಯಿತು.

ಎಲ್ಲಾ ಮುಗಿದು , ಈಗ ನಮ್ಮ ಚಿತ್ರ ಮಾರ್ಚ್ ಹತ್ತರಂದು ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗೆಳೆಯ ಶ್ರೀಮುರಳಿ ಹಾಗೂ ನನ್ನ ಗೆಳೆತನ ದಶಕಕ್ಕೂ ಮೀರಿದ್ದು. ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ನಾನು ಆಬಾರಿ ಎಂದರು ನಾಯಕ ಆರ್ಯನ್ ಸಂತೋಷ್. ಚಿತ್ರದ ನಿರ್ದೇಶಕ ಶಿವಗಣೇಶ್ ಚಿತ್ರ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದರು.

ಚಿತ್ರದ ನಾಯಕಿ ಅರ್ಚನಾ ಕೊಟ್ಟಿಗೆ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್, ಛಾಯಾಗ್ರಾಹಕ ವಿನೋದ್ ಭಾರತಿ ಸೇರಿದಂತೆ ಅನೇಕ ತಂತ್ರಜ್ಞರು “ಡಿಯರ್ ಸತ್ಯ” ನ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಮರೆಯಾದ ಸಂಗೀತ ಲೋಕದ ಮಾಣಿಕ್ಯ ! ಸಂಗೀತ ಮ್ಯೂಸಿಕ್ ಸಂಸ್ಥೆಯ ಸಂಸ್ಥಾಪಕ ಮಹೇಶ್ ಇನ್ನು ನೆನಪು ಮಾತ್ರ; ಸಂಗೀತ ದಿಗ್ಗಜನ ಸಾಹಸ ಮೆಲುಕು ಹಾಕಿದ ಲಹರಿ ಸಂಸ್ಥೆ

ಸಂಗೀತ ಮ್ಯೂಸಿಕ್ ಕಂಪನಿಯ ಸಂಸ್ಥಾಪಕ ರಾದ ಎಚ್. ಎಂ ಮಹೇಶ್ ಅವರು ಶುಕ್ರವಾರ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೃತಪಟ್ಟಿದ್ದಾರೆ. 72 ವಯಸ್ಸಿನ ಮಹೇಶ್ ಅವರು ಇಬ್ಬರು ಹೆಣ್ಣು ಮಕ್ಕಳನ್ನು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತ ಮಹೇಶ್ ಅವರು ಸಂಗೀತ ಲೋಕಕ್ಕೆ ಹಾಗು ಕನ್ನಡ ಚಿತ್ರರಂಗಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಮೃತರ ಅಗಲಿಕೆಗೆ ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ತೀವ್ರ ಸಂತಾಪ ಸೂಚಿಸಿದ್ದಾರೆ.

ಚೆನ್ನೈ ನ ಮಾಸ್ಟರ್ ರೆಕಾರ್ಡಿಂಗ್ ಕಂಪನಿಯ ಸಂಗೀತ ಮ್ಯೂಸಿಕ್ ಸಂಸ್ಥೆ ಸಾಕಷ್ಟು ಹೆಸರು ಮಾಡಿದೆ. ಸಂಸ್ಥಾಪಕ ಮಹೇಶ್ ಅವರ ಕುರಿತು ಸಿನಿಲಹರಿ ಜೊತೆ ಮಾತಾಡಿದ ಲಹರಿ ವೇಲು ಗುಣಗಾನ ಮಾಡಿದ್ದಾರೆ.
‘ ಸಂಗೀತ ಕ್ಷೇತ್ರಕ್ಕೆ ಮಹೇಶ್ ಅವರ ಕೊಡುಗೆ ತುಂಬಾ ದೊಡ್ಡದು. ಎಚ್.ಎಂ.ಮಹೇಶ್ ಅಂದರೆ ಸಂಗೀತ ಮ್ಯೂಸಿಕ್ ಸಂಸ್ಥೆ ನೆನಪಾಗುತ್ತೆ. ಕನ್ನಡ ಚಿತ್ರರಂಗ ಮತ್ತು ಸಂಗೀತ ಕ್ಷೇತ್ರಕ್ಕೆ ತನ್ನದೇ ಕೊಡುಗೆ ನೀಡಿದ್ದಾರೆ.
ಅವರು 1970ರಲ್ಲಿ ಕಾಸರಗೋಡಿನಿಂದ ಆಗ ಇದ್ದ ಮಡ್ರಾಸ್ ಗೆ ಹೋಗಿ ಸರಸ್ವತಿ ಸ್ಟೋರ್ಸ್ ನಲ್ಲಿ ಕೆಲಸ ಮಾಡುತ್ತಾರೆ. ಆಗ ಕನ್ನಡ ವಿಭಾಗದಲ್ಲಿ ಕಂಪೆನಿಯೊಂದರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು. ಆಗ ಕನ್ನಡದ ಒಡನಾಟ ಹೆಚ್ಚಾಗುತ್ತೆ. ಆಗ ಕನ್ನಡಕ್ಕೆ ನಾವೇ ಯಾಕೆ ಮ್ಯೂಸಿಕ್ ಸಂಸ್ಥೆ ಶುರು ಮಾಡಬಾರದು ಅಂದುಕೊಂಡು ಚೆನ್ನೈ ನಲ್ಕಿ ಮಾಸ್ಟರ್ ರೆಕಾರ್ಡಿಂಗ್ ಕಂಪೆನಿ ಮೂಲಕ ಸಂಗೀತ ಕ್ಯಾಸೆಟ್ ಶುರು ಮಾಡುತ್ತಾರೆ. ಶುರುವಾದ ಬಳಿಕ ಅಣ್ಣಾವ್ರು ಡಾ.ರಾಜಕುಮಾರ ಅವರ ಮೊದಲ ಧ್ವನಿಸುರುಳಿ ಭಕ್ತಿಗೀತೆ ಹೊರತಂದ ಹೆಗ್ಗಳಿಕೆ ಇವರದಾಗುತ್ತೆ. ಇದರೊಂದಿಗೆ ಸಂತ ಶಿಶುನಾಳ ಶರೀಫ ಅವರ ಹಾಡುಗಳನ್ನೂ ಬೆಳಕಿಗೆ ತಂದಿದ್ದು ಇದೇ ಸಂಸ್ಥೆ. ದಾಸ ಸಾಹಿತ್ಯ, ವಚನ ಸಾಹಿತ್ಯ, ಯಕ್ಷಗಾನ, ಜಾನಪದ ಶಾಸ್ತ್ರೀಯ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಹೀಗೆ ಹಲವು ಪ್ರಾಕಾರಗಳ ಹಾಡುಗಳು ಈ ಮ್ಯೂಸಿಕ್ ಸಂಸ್ಥೆ ಮೂಲಕ ಹೊರಬಂದವು.

ಕನ್ನಡದ ಅನೇಕ ಸಿನಿಮಾ ಹಾಡುಗಳು ಹೊರಬಂದವು. ಅಣ್ಣಾವ್ರ ಹಾಲುಜೇನು, ಹೊಸ ಬೆಳಕು, ಸಮಯದ ಗೊಂಬೆ, ಭಕ್ತ ಪ್ರಹ್ಲಾದ, ಚಲಿಸುವ ಮೋಡಗಳು, ಕವಿರತ್ನ ಕಾಳಿದಾಸ ಹೀಗೆ ಅಣ್ಣಾವ್ರ ಬಹುತೇಕ ಸಿನಿಮಾ ಹಾಡುಗಳನ್ನು ಈ ಸಂಸ್ಥೆ ಬಿಡುಗಡೆ ಮಾಡಿತು. ಪುಟ್ಟಣ್ಣ ಕಣಗಾಲ್ ಅವರ ಮಾನಸ ಸರೋವರ, ಧರಣಿ ಮಂಡಲ ಮಧ್ಯದೊಳಗೆ, ಮಸಣದ ಹೂವು, ಬೆಂಕಿಯ ಬಲೆ, ಮುದುಡಿದ ತಾವರೆ ಅರಳಿತು ಹೀಗೆ ನೂರಾರು ಕನ್ನಡದ ಸದಭಿರುಚಿಯ ಸಿನಿಮಾ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ.

ಮಹೇಶ್ ಅವರು ಕನ್ನಡ ಚಿತ್ರರಂಗಕ್ಕೆ ಸಾವಿರಾರು ಹಿಟ್ ಹಾಡುಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರ ಸೇವೆ ಗುರುತಿಸಿ ರಾಜ್ಯ ಸರ್ಕಾರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ಮೂಲತಃ ಕಾಸರಗೋಡಿಂದ ಹೋಗಿ ಅಲ್ಲಿ ಕೆಲಸ ಮಾಡಿ ಬೆಂಗಳೂರಿನ ಎಚ್ ಎಸ್‌ ಆರ್ ಲೇ ಔಟ್ ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ನಿಧನರಾಗಿದ್ದಾರೆ. ನಮ್ಮ ಸಹೋದರರಾದ ಮನೋಹರ ನಾಯ್ಡು ಅವರೊಂದಿಗೆ ಸುಮಾರು ನಾಲ್ಕು ದಶಕಗಳ ಕಾಲ ಒಡನಾಟ ಇಟ್ಟುಕೊಂಡಿದ್ದರು.

ಒಂದು ರೀತಿ ಅವರು ಸಹೋದರರಂತಿದ್ದರು. ಹದಿನೈದು ದಿನಗಳ ಹಿಂದೆ ಅಣ್ಣ ಫೋನ್ ಮಾಡಿದಾಗ ಪಿಕ್ ಮಾಡಲಿಲ್ಲ. ನಿತ್ಯ ಕಾಲ್ ಮಾಡುತ್ತಿದ್ದವರು ಯಾಕೆ ಪಿಕ್ ಮಾಡ್ತಾ ಇಲ್ಲ ಅಂತ ನಾನು ಮಾಡಿದೆ. ಅವರಿಗೆ ಅನಾರೋಗ್ಯ ಬಗ್ಗೆ ಗೊತ್ತಾಯಿತು. ಈಗ ಅಗಲಿದ್ದಾರೆ. ಕನ್ನಡ ಚಿತ್ರರಂಗದ ಸಂಗೀತ ಲೋಕದ ದಂತಕತೆ ಅವರು. ಲಹರಿ ಸಂಸ್ಥೆ ಜೊತೆ ಅವಿನಾಭಾವ ಹೊಂದಿದವರು ಎಂದು ಲಹರಿ ವೇಲು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

Categories
ಸಿನಿ ಸುದ್ದಿ

ಜನಾರ್ದನ ರೆಡ್ಡಿ ಪುತ್ರನ ಅದ್ಧೂರಿ ಚಿತ್ರರಂಗ ಎಂಟ್ರಿ; ಕಿರೀಟಿ ಸಿನಿಮಾ ಮುಹೂರ್ತಕ್ಕೆ ತಾರಾಮೆರಗು…

ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಜಿಗಿದಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಶುಕ್ರವಾರ ಅದ್ಧೂರಿಯಾಗಿ ನೆರವೇರಿದೆ.

ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..!


ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ ನೋಡಿ ಕಿರೀಟಿ ಬೆನ್ನು ತಟ್ಟಿದರು. “ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ ಮಾಡಬಹುದು, ಡ್ಯಾನ್ಸ್ ಮಾಡಬಹುದು, ಇವರು ಸ್ಟಂಟ್ಸ್ ಅನ್ನೂ ಮಾಡಬಹುದು. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ. ಎಂದು ರಾಜಮೌಳಿ ಹೇಳಿದ್ದಾರೆ.

ಕಿರೀಟಿ ಬಗ್ಗೆ ಏನಂದ್ರು ಕ್ರೇಜಿಸ್ಟಾರ್!

ಕ್ರೇಜಿಸ್ಟಾರ್ ರವಿಚಂದ್ರನ್ ಕಿರೀಟಿ ಸಿನಿಮಾದಲ್ಲಿ ಸ್ಪೆಷಲ್ ರೋಲ್ ವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಕಿರೀಟಿ ತಂದೆಯಾಗಿ ಕಾಣಿಸಿಕೊಳ್ಳಲಿರುವ ರವಿಮಾವ ಸಿನಿಮಾ ಬಗ್ಗೆ ಸ್ಟಾರ್ ಕಾಸ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರೀಟಿ ಏರ್ ಪೋರ್ಟ್ ನಲ್ಲಿ ಒಮ್ಮೆ ಭೇಟಿ ಮಾಡಿದ್ದೆವು. ನನಗೆ ನಟನೆ ಬಗ್ಗೆ ಸಾವಿರ ಪ್ರಶ್ನೆ ಕೇಳಿದ್ದರು. ಈ ಸಿನಿಮಾದಲ್ಲಿ ಕಿರೀಟಿಗೆ ಸಾರಥಿ ಬಂದು ರಾಧಾಕೃಷ್ಣ. ಹಿಂದೆ ಜನಾರ್ಧನ್ ರೆಡ್ಡಿಯವರ ಆಶೀರ್ವಾದ. ಶ್ರೀಲೀಲಾ ಇದ್ದಾರೆ, ಜೆನಿಲಿಯಾ ಇದ್ದಾರೆ. ನಾನೂ ಇದ್ದೀನಿ. ಇದಕ್ಕಿಂತ ಒಳ್ಳೆಯ ಪ್ಯಾಕೇಜ್ ಬೇಕಾ ನಿಮಗೆ? ಎಂದರು.

ಕನ್ನಡಕ್ಕೆ ಜೆನಿಲಿಯಾ ಕಂಬ್ಯಾಕ್!

ಶಿವರಾಜ್ ಕುಮಾರ್ ನಟನೆಯ ‘ಸತ್ಯ್ ಇನ್ ಲವ್’ ಸಿನಿಮಾದಲ್ಲಿ ನಟಿಸಿದ್ದ ಜೆನಿಲಿಯಾ ಮತ್ತೆ ಸ್ಯಾಂಡಲ್‌ವುಡ್‌ ಕ್ಕೆ ಮರಳಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಜೆನಿಲಿಯಾ 10 ವರ್ಷಗಳ ಬಳಿಕ ನಟನೆಗೆ ಹಿಂದಿರುಗಿದ್ದಾರೆ. 10 ವರ್ಷಗಳ ಬಳಿಕ ಮತ್ತೆ ನಟನೆಗೆ ಮರಳುತ್ತಿದ್ದೇನೆ. ಇದು ತುಂಬಾನೇ ಸ್ಪೆಷಲ್ ಪ್ರಾಜೆಕ್ಟ್. ನಿಮ್ಮ ಮೊದಲ ಸಿನಿಮಾ. ಈ ಸಿನಿಮಾದುದ್ದಕ್ಕೂ ನಾವು ಇರುತ್ತೇವೆ ಎಂದಿದ್ದಾರೆ.

ಕಿರೀಟಿ ಇಂಟ್ರೂಡಕ್ಷನ್ ಟೀಸರ್ ಸೂಪರ್!

ಕಿರೀಟಿ ಸಿನಿಮಾದ ಮುಹೂರ್ತದ ವೇಳೆ ಹೀರೋ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಲಾಯಿತು. ಆಕ್ಷನ್, ಸ್ಟಂಟ್, ಡ್ಯಾನ್ಸ್, ಬೊಂಬಾಟ್ ಆಕ್ಟಿಂಗ್ ಎಲ್ಲರ ಮಿಶ್ರಣದ ಟೀಸರ್ ಝಲಕ್ ನೋಡಿ ಎಲ್ಲರೂ ಹುಬ್ಬೇರಿಸ್ತಿದ್ದಾರೆ. ಕಿರೀಟಿ ರೈಸಿಂಗ್ ಸ್ಟಾರ್ ಅಂತಾ ಕೊಂಡಾಡ್ತಿದ್ದಾರೆ.

ಕಿರೀಟಿ ಸಿನಿಮಾ ತೆಲುಗಿನ ಖ್ಯಾತ ಪ್ರೊಡಕ್ಷನ್ ಹೌಸ್ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಡಿ ಅದ್ಧೂರಿ ಬಜೆಟ್ ನಲ್ಲಿ ತಯಾರಾಗ್ತಿರುವ 15ನೇ ಸಿನಿಮಾ. ಮಯಾಬಜಾರ್ ಸಿನಿಮಾ ಖ್ಯಾತಿಯ ರಾಧಾಕೃಷ್ಣರೆಡ್ಡಿ ನಿರ್ದೇಶನ, ಬಾಹುಬಲಿ ಛಾಯಾಗ್ರಾಹ ಕೆಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ಕೈ ಚಳಕದ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀಪ್ರಸಾದ್ ಮ್ಯೂಸಿಕ್ ಇಂಪು ಇರುವ, ಭಾರತದ ಬಹುಬೇಡಿಕೆಯ ಸ್ಟಂಟ್‌ ಮಾಸ್ಟರ್ ಪೀಟರ್ ಹೇನ್ ಆಕ್ಷನ್ ಸೀನ್ಸ್, ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

Categories
ರಿ ವಿವ್ಯೂ ಸಿನಿ ಸುದ್ದಿ

ಅಘೋರ ಎಂಬ ಭಯಾನಕ ಸಿನಿಮಾ… ಬದುಕು ಕಳಕೊಂಡ ಆತ್ಮದ ಅರ್ತನಾದ!

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಹಾರರ್ ಸಿನಿಮಾಗಳು ಬಂದಿವೆ. ಅವುಗಳ ಸಾಲಿಗೆ ಈಗ ಅಘೋರ ಸಿನಿಮಾವೂ ಸೇರಿದೆ. ಹೆಸರೇ ಹೇಳುವಂತೆ ಸಿನಿಮಾ ಕೂಡ ಗಂಭೀರದ ಜೊತೆ ಭಯಾನಕವಾಗಿಯೂ ಇದೆ. ಅದಕ್ಕೆ ಕಾರಣ ನಿರ್ದೇಶಕರ ಯೋಚನೆ ಮತ್ತು ಆಲೋಚನೆ.

ಮೊದಲೇ ಹೇಳಿದಂತೆ ಇದೊಂದು ಭಯಪಡಿಸೋ ಸಿನಿಮಾ. ಹಾರರ್ ಸಿನಿಮಾಗಳಿಗೆ ಮುಖ್ಯವಾಗಿ ಬೇಕಿರೋದು ಕಥೆ ಮತ್ತು ಎಫೆಕ್ಟ್ಸ್. ಅದು ಈ ಚಿತ್ರದ ಹೈಲೈಟ್. ಇಲ್ಲಿ ಭಯಪಡಿಸುವುದರ ಜೊತೆಗೊಂದು ವಿಶೇಷ ಸಂದೇಶವೂ ಇದೆ. ಅಂಥದ್ದೊಂದು ವಿಭಿನ್ನ ಮೆಸೇಜ್ ಇಟ್ಟುಕೊಂಡು ಹಾರರ್ ಕಮ್ ಥ್ರಿಲ್ಲರ್ ಸಿನಿಮಾ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕರು.

ಹಾರರ್ ಸಿನಿಮಾ ಅಂದಾಕ್ಷಣ, ಬಿಳಿ ಸೀರೆ ಧರಿಸಿ, ಕೂದಲು ಬಿಟ್ಟುಕೊಂಡು ಕಾಲ್ಗೆಜ್ಜೆಯ ಸದ್ದು ಮಾಡುತ್ತ ಕಿರುಚುತ್ತ, ಅರುಚುತ್ತ, ಭೀತಿ ಹುಟ್ಟಿಸೋ ದೆವ್ವಗಳು ಕಾಮನ್. ಆದರೆ, ಈ ಚಿತ್ರ ಇವೆಲ್ಲದರಿಂದ ಹೊರತಾಗಿದೆ. ಒಂದು ಹಾರರ್ ಸಿನಿಮಾಗೆ ಏನೆಲ್ಲಾ ಕ್ವಾಲಿಟೀಸ್ ಇರಬೇಕೋ ಅದೆಲ್ಲವೂ ಈ ಚಿತ್ರದಲ್ಲಿದೆ. ಮೊದಲಿಗೆ ಇದು ಕಂಟೆಂಟ್ ಚಿತ್ರ. ಕಥೆಯೇ ಇಲ್ಲಿ ಜೀವಾಳ. ಇನ್ನು ಇಂತಹ ಚಿತ್ರಗಳಿಗೆ ಸಂಗೀತ ಮುಖ್ಯ ಆಕರ್ಷಣೆ. ಅದರ ಕೆಲಸ ಇಲ್ಲಿ ಎದ್ದು ಕಾಣುತ್ತೆ. ಹಾರರ್ ಚಿತ್ರಕ್ಕೆ ಎಫೆಕ್ಟ್ಸ್ ಕೂಡ ಪ್ರಮುಖ ಅಂಶ. ಎಫೆಕ್ಟ್ಸ್ ಇಲ್ಲಿ ಅಘೋರನನ್ನು ಮತ್ತಷ್ಟು ಇಷ್ಟವಾಗುವಂತೆ ಮಾಡಿದೆ. ಮೊದಲರ್ಧ ಜಾಲಿಯಾಗಿಯೇ ಸಾಗುವ ಸಿನಿಮಾ ದ್ವಿತಿಯಾರ್ಧ ಗಂಭೀರತೆಗೆ ದೂಡುತ್ತದೆ. ಜೊತೆಗೆ ಅಷ್ಟೇ ಭಯ ಹುಟ್ಟಿಸುತ್ತ ಹೋಗುತ್ತದೆ. ಅಷ್ಟರಮಟ್ಟಿಗೆ ನಿರ್ದೇಶಕರ ಪ್ರಯತ್ನ ಇಲ್ಲಿ ಸಾರ್ಥಕ.

ಕಥೆ ಏನು?
ಐದಾರು ಪಾತ್ರಗಳು ಇಲ್ಲಿ ಹೈಲೈಟ್. ಪಾತ್ರವೊಂದರ ಜೊತೆ ಅನಿರೀಕ್ಷಿತ ಭೇಟಿಯಾಗುವ ಮೂರು ಪಾತ್ರಗಳು ರಾತ್ರಿ ವೇಳೆ ಒಂದು ಸ್ಥಳಕ್ಕೆ ಹೋಗ್ತಾರೆ. ಅವರು ಅಲ್ಲಿ ಯಾಕೆ ಹೋಗ್ತಾರೆ ಅದಕ್ಕೆ ಕಾರಣ ಏನು ಅನ್ನೋದು ಸಸ್ಪೆನ್ಸ್. ಅಲ್ಲೊಂದು ವಿಚಿತ್ರ ಘಟನೆ ನಡೆಯುತ್ತೆ. ಅಲ್ಲಿಂದ ಆ ನಾಲ್ಕು ಜನ ಒಂದು ಮನೆಗೆ ಎಂಟ್ರಿಯಾಗ್ತಾರೆ. ಅಲ್ಲಿ ವಿಚಿತ್ರ ಘಟನೆಗಳು ಜರುಗುತ್ತವೆ. ಅಲ್ಲೊಂದು ಭಯವೆನಿಸುವ ಸನ್ನಿವೇಶ ನಡೆಯುತ್ತೆ. ಇಡೀ ಚಿತ್ರದ ಸ್ವೀಕೆನ್ಸ್ ನಡೆಯೋದೆ ಅಲ್ಲಿ.

ಒಂದು ಮನೆಯಲ್ಲಿ ನಡೆಯೋ ವಿಚಿತ್ರ ಘಟನೆಗಳು ನೋಡುಗರನ್ನು ಅಕ್ಷರಶಃ ಬೆಚ್ಚಿ ಬೀಳಿಸುತ್ತವೆ. ಅದಕ್ಕೆ ಕಾರಣ ಸೌಂಡಿಂಗ್ ಮತ್ತು ಹಿನ್ನೆಲೆ ಸಂಗೀತ. ಇನ್ನು ಇಂತಹ ಚಿತ್ರಕ್ಕೆ ಸಂಕಲನ ಕೆಲಸವೂ ಮುಖ್ಯ. ಅದಿಲ್ಲಿ ಸಿನಿಮಾದ ವೇಗಕ್ಕೆ ಹೆಗಲು ಕೊಟ್ಟಿದೆ.

ತಾನು ನಟ ಆಗಬೇಕು ಅಂತ ನೂರಾರು ಆಸೆ ಆಕಾಂಕ್ಷೆ ಇಟ್ಟುಕೊಂಡ ಪ್ರತಿಭೆ ಒಂದು ಘಟನೆಗೆ ಸಿಲುಕುತ್ತಾನೆ. ಆ ಬಳಿಕ ಅವನ ಬದುಕೇ ಹಾಳಾಗುತ್ತೆ. ಅಲ್ಲಿಂದಲೇ ನೋಡುಗರಿಗೆ ಹೊಸ ಭೀತಿ ಶುರುವಾಗುತ್ತೆ. ನಿಜ ಹೇಳುವುದಾದರೆ, ಒಂದು ಭಯಾನಕತೆ ಹೇಗೆಲ್ಲ ಇರುತ್ತೆ ಅನ್ನೋದನ್ನ ನಿರ್ದೇಶಕರು ಅಚ್ಚುಕಟ್ಟಾಗಿ ತೋರಿಸಿದ್ದಾರೆ.

ಪ್ರತಿಭೆಗಳ ಅನಾವರಣ

ಇಲ್ಲಿ ಕಾಣಿಸಿಕೊಂಡಿರುವ ಪ್ರತಿ ಪಾತ್ರಗಳು ನೋಡುಗರನ್ನು ಖುಷಿಪಡಿಸುತ್ತವೆ. ತಮಾಷೆ ಸೀನ್ ಗಳಲ್ಲೂ ಗಮನ ಸೆಳೆಯೊ ಕಲಾವಿದರು, ಅಷ್ಟೇ ಭಯ ಹುಟ್ಟಿಸುತ್ತಾರೆ. ಎಲ್ಲರೂ ತಮ್ಮ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ.

ಒಟ್ಟಾರೆ ನಿರ್ದೇಶಕ ಪ್ರಮೋದ್ ರಾಜ್ ಅವರು ನೋಡುಗರನ್ನು ಬೆಚ್ಚಿ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ಅವಿನಾಶ್ ಅವರು ಅಘೋರನಾಗಿ ಅಬ್ಬರಿಸಿದ್ದಾರೆ. ಉಳಿದಂತೆ, ತೆರೆ ಮೇಲೆ ಅಶೋಕ್ ಪುನೀತ್, ದ್ರವ್ಯ, ರಚನಾ ಸೇರಿದಂತೆ ಇತರರು ಕೂಡ ಗಮನ ಸೆಳೆಯುತ್ತಾರೆ.

ಶರತ್ ಕುಮಾರ್ ಅವರ ಛಾಯಾಗ್ರಹಣ ಅಘೋರನನ್ನು ಅಂದಗಾಣಿಸಿದೆ ಮುರಳೀಧರನ್ ಅವರ ಬಿಜಿಎಂ ಖುಷಿ ಕೊಡಿಸುತ್ತೆ. ವಿ.ನಾಗೇಂದ್ರಪ್ರಸಾದ್ ಸಂಗೀತ ಮತ್ತು ಸಾಹಿತ್ಯ ಚಿತ್ರದ ಕಥೆಗೆ ಪೂರಕವಾಗಿದೆ. ವೆಂಕಟೇಶ್ ಯುಡಿವಿ ಅವರ ಕತ್ತರಿ ಪ್ರಯೋಗ ಅಘೋರನನ್ನು ವೇಗಗೊಳಿಸಿದೆ. ಮಾಸ್ ಮಾದ ಅವರ ಕೆಲಸ ಕೂಡ ಗಮನಸೆಳೆಯುತ್ತದೆ.

Categories
ಸಿನಿ ಸುದ್ದಿ

ದುನಿಯಾ ವಿಜಯ್ ಈಗ ಭೀಮ! ಸಲಗ ಬಳಿಕ ಮತ್ತೆ ನಿರ್ದೇಶನ

“ಸಲಗ” ಚಿತ್ರದ ಮೂಲಕ ಜನಮನ ಗೆದ್ದಿರುವ ದುನಿಯಾ ವಿಜಯ್, ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ನೈಜಘಟನೆ ಆಧಾರಿತ ಕಥೆಯನ್ನು ಸಿದ್ದ ಮಾಡಿಕೊಂಡಿದ್ದಾರೆ.
ಈ ಚಿತ್ರಕ್ಕೆ “ಭೀಮ” ಎಂದು ಹೆಸರಿಡಲಾಗಿದೆ. ದುನಿಯಾ ವಿಜಯ್ ಈ ಚಿತ್ರದಲ್ಲಿ ನಿರ್ದೇಶನದೊಂದಿಗೆ ನಾಯಕನಾಗಿಯೂ ಅಭಿನಯಿಸುತ್ತಿದ್ದಾರೆ.

ಕರುನಾಡ ಚಕ್ರವರ್ತಿ ಶಿವ
ರಾಜಕುಮಾರ್ ಅಭಿನಯದ “ಭೈರಾಗಿ” ಚಿತ್ರವನ್ನು ನಿರ್ಮಿಸುತ್ತಿರುವ ಕೃಷ್ಣ ಸಾರ್ಥಕ್ ಈ ಚಿತ್ರ‌ ನಿರ್ಮಾಣ ಮಾಡುತ್ತಿದ್ದಾರೆ. “ಸಲಗ” ಚಿತ್ರದ ವಿತರಕ ಜಗದೀಶ್ ಗೌಡ ಅವರು ಸಹ ಕೃಷ್ಣ ಸಾರ್ಥಕ್ ಅವರೊಂದಿಗೆ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

“ಟಗರು” ಖ್ಯಾತಿಯ ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ದೀಪು ಎಸ್ ಕುಮಾರ್ ಸಂಕಲನಕಾರರಾಗಿ ಕಾರ್ಯ‌ ನಿರ್ವಹಿಸಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆಯಲಿದ್ದಾರೆ.

ಮಹಾಶಿವರಾತ್ರಿಯ ಶುಭದಿನದಂದು “ಭೀಮ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Categories
ಸಿನಿ ಸುದ್ದಿ

ಅಪ್ಪು ಜೊತೆಗಿನ ಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ: ಕಿರೀಟಿ ಬಣ್ಣದ ಲೋಕಕ್ಕೆ ಎಂಟ್ರಿ…

ಅಪ್ಪು ಅಂದ್ರೆ ಅಪ್ಪುಗೆ, ಪ್ರೀತಿ, ಸ್ನೇಹ.. ಆತ್ಮೀಯತೆ.. ಸ್ಟಾರ್ ಅನ್ನುವ ಹಮ್ಮು ಬಿಮ್ಮು ಇಲ್ಲದೇ ಎಲ್ಲರೊಳಗೆ ಒಬ್ಬರಾಗಿ ಬೆರೆಯುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಲ್ಲರೊಟ್ಟಿಗೆ ಒಡನಾಟ ಹೊಂದಿದ್ದವರು. ಅದೇ ರೀತಿ ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬಕ್ಕೂ ಅಪ್ಪುಗೆ ಕುಟುಂಬಕ್ಕೂ ಒಂದೊಳ್ಳೆ ಅವಿನಾಭಾವ ಸಂಬಂಧವಿತ್ತು. ಈಗ ಅಪ್ಪು ಆಶೀರ್ವಾದೊಂದಿಗೆ ಕಿರೀಟಿ ಬಣ್ಣದ ಲೋಕಕ್ಕೆ ಅಡಿ ಇಡಲು ಸಜ್ಜಾಗಿದ್ದಾರೆ. ಒಂದಷ್ಟು ತಯಾರಿ ಮಾಡಿಕೊಂಡು ದೊಡ್ಡ ತಾರಾಬಳಗ, ತಾಂತ್ರಿಕ ಬಳಗದೊಂದಿಗೆ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡ್ತಿರುವ ಕಿರೀಟಿ, ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಅಪ್ಪು ಸರಳತೆ ಕೊಂಡಾಡಿದ ಕಿರೀಟಿ!

ಅಪ್ಪು ಅಂದ್ರೆ ಕಿರೀಟಿಗೆ ಅಚ್ಚುಮೆಚ್ಚು. ಪ್ರೀತಿಯ ಹುಚ್ಚು. ಬಾಲ್ಯದಲ್ಲೊಮ್ಮೆ ಕಿರೀಟಿ ಅಪ್ಪು ಭೇಟಿಯಾದ ಕ್ಷಣ ಹಾಗೂ ಜಾಕಿ ರಿಲೀಸ್ ಸಂದರ್ಭದಲ್ಲಿ ಭೇಟಿಯಾದ ಎರಡು ಘಟನೆಗಳನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ವೊಂದನ್ನು ಮಾಡಿದ್ದಾರೆ. ಅಪ್ಪು ಸರಳತೆ.. ವಿನಯತೆ, ನಮತ್ರೆ.. ಆತ್ಮೀಯತೆ ಎಲ್ಲವನ್ನು ಅದ್ಭುತ ಬರವಣೆಗೆ ಮೂಲಕ ಕಿರೀಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಿರೀಟಿ ಪೋಸ್ಟ್

ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸ 10 ವರ್ಷಗಳದ್ದು . ಆದರೂ ಆ ನೆನಪುಗಳು ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. 2010ರಲ್ಲಿ ಜಾಕಿ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ನಾನು ಅಪ್ಪು ಸರ್ ಅವರನ್ನು ಮೊದಲ ಸಲ ಭೇಟಿಯಾದೆ. ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ. ಆದರೆ, ಅವರು ಆಫ್ ಸ್ಕ್ರೀನ್ ನಲ್ಲಿದ್ದ ರೀತಿ ಮನಸಿಗೆ ಹತ್ತಿರವಾಯಿತು.

ನಾವು ಥಿಯೇಟರ್‌ನಿಂದ ನನ್ನ ಮನೆಗೆ ಹೋಗುತ್ತಿದ್ದಾಗ, ಮಳೆ ಬೀಳುತ್ತಿತ್ತು ಆಗ ಅವರೇ ಕರೆದು ಮಾತಾಡಿಸಿದರು. ನೃತ್ಯದ ಬಗ್ಗೆ ಮತ್ತು ಅವರ ಆಕ್ಷನ್ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿದ್ದರು. ಅದು ಕನಸಿನಲ್ಲಿಯೂ ಊಹಿಸಲಾಗದ ಸಂಗತಿ. ಅದು ಪುನೀತ್ ಸರ್ ಅವರಿಂದ ಮಾತ್ರ ಸಾಧ್ಯ. ಆ ದಿನ ನಾನು ಸರಳತೆಯ ಮೌಲ್ಯವನ್ನು ಅರಿತೆ. ಇದು ಅಪ್ಪು ಸರ್ ಅವರಿಂದ ನಾನು ಅತ್ಯಮೂಲ್ಯವಾದ ಪಾಠ.

ಜಗತ್ತಿಗೆ ನನ್ನನ್ನು ಪರಿಚಯಿಸಿಕೊಳ್ಳಲು ಕೇವಲ ಒಂದು ದಿನ ಬಾಕಿ. ಇದೆಲ್ಲಾ ಶುರುವಾಗಿದ್ದು ಪುನೀತ್ ರಾಜ್‌ಕುಮಾರ್ ಸರ್ ಅವರಿಂದ. ಸ್ಫೂರ್ತಿ, ಮಾದರಿ, ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಜೀವನದ ಮಾರ್ಗದರ್ಶಿ ಅವರು. “ನಿಮ್ಮ ಮಾತುಗಳನ್ನು ಎಂದಿಗೂ ಮರೆಯುವುದಿಲ್ಲ ಸರ್”. ನನ್ನ ಮೇಲಿನ ನಿಮ್ಮ ನಂಬಿಕೆಯೆ ರಕ್ಷಾಕವಚ. ನಾನು ಅದನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ನೀವು ಮತ್ತು ನಮ್ಮ ಜನತೆ ಯಾವಾಗಲೂ ಹೆಮ್ಮೆಪಡುವಂತೆ ಮಾಡಲು ಸದಾ ಶ್ರಮಿಸುತ್ತೇನೆ.

ಕಿರೀಟಿ ಹೀಗೆ ಅಪ್ಪು ಒಟ್ಟಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದು, ತಮ್ಮ ಮುಂದಿನ ಸಿನಿಮಾ ಹಾದಿಗೆ ಜೊತೆಯಾಗಿ ಇರಬೇಕೆಂದು ಕೇಳಿಕೊಂಡಿದ್ದಾರೆ. ಅಪ್ಪು ಆರ್ಶೀವಾದದೊಂದಿಗೆ ಹೊಸ ಸಿನಿಮಾಗೆ ಕಿರೀಟಿ ಮುನ್ನುಡಿ ಬರೆಯುತ್ತಿದ್ದು, ನಾಳೆ (ಮಾರ್ಚ್ 4) ಅದ್ಧೂರಿಯಾಗಿ ಕಿರೀಟಿ ಬೊಚ್ಚಲ ಚಿತ್ರ ಸೆಟ್ಟೇರುತ್ತಿದೆ. ರಾಜಮೌಳಿಯ ಬಲದೊಂದಿಗೆ ರವಿಚಂದ್ರನ್ ನಂತಹ ದಿಗ್ಗಜ ತಾರೆಯರ ಸಾಥ್ ನೊಂದಿಗೆ ಕಿರೀಟಿ ಮೊದಲ ಸಿನಿಮಾ ಮುಹೂರ್ತ ನೆರವೇರಲಿದೆ.

Categories
ಸಿನಿ ಸುದ್ದಿ

ಅಪೂರ್ವ ನಿರ್ದೇಶನ! ಕನ್ನಡಕ್ಕೆ ಮತ್ತೊಬ್ಬ ನಿರ್ದೇಶಕಿ ಬಂದ್ರು…

ಅಪೂರ್ವ, ವಿಕ್ಟರಿ, ಕೃಷ್ಣ ಟಾಕೀಸ್ ಖ್ಯಾತಿಯ ನಟಿ ಅಪೂರ್ವ ಈಗ ನಿರ್ದೇಶಕಿಯಾಗಿದ್ದಾರೆ.
ಕನ್ನಡ ಚಿತ್ರರಂಗದ ನಿರ್ದೇಶಕಿಯರ ಸಾಲಿಗೆ ಮತ್ತೊಂದು ಯುವ ನಿರ್ದೇಶಕಿ ಸೇರ್ಪಡೆಯಾದಂತಾಗಿದೆ.


“ಓ ನನ್ನ ಚೇತನ ” ಸ್ಮಾರ್ಟ್ ಪೋನ್ ಜೀವನ ಅನ್ನೊ ಅಡಿ ಬರಹವಿರೋ ಈ ಚಿತ್ರವನ್ನ ಅಪೂರ್ವ, ಇಂದಿನ ಮಕ್ಕಳು ಹಾಗೂ ಸ್ಮಾರ್ಟ್ ಪೋನ್ ವಿಚಾರವನ್ನಿಟ್ಟುಕೊಂಡು ಚಿತ್ರವನ್ನ ನಿರ್ದೇಶಿಸಿದ್ದಾರೆ. ಅಪೂರ್ವ ಚೊಚ್ಚಲ ನಿರ್ದೆಶನದ ಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದೆ.

ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಓ‌ ನನ್ನ ಚೇತನ ಆಯ್ಕೆಯಾಗಿದ್ದು, ಮಾರ್ಚ್ 9 ರಂದು 3:15ಕ್ಕೆ ಒರಾಯನ್ ಮಾಲ್ ಪಿವಿಆರ್ ನಲ್ಲಿ ಪ್ರದರ್ಶನವಾಗಲಿದೆ.

ಓ ನನ್ನ ಚೇತನ ಚಿತ್ರಕ್ಕೆ ನಿರ್ದೇಶಕ ಹರಿಸಂತು ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಗುರುಪ್ರಶಾಂತ್ ರೈ ಛಾಯಾಗ್ರಹಣವಿದೆ. ಪ್ರದೀಪ್ ವರ್ಮಾ ಸಂಗೀತ, ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ.
ಎಸ್ ಅಂಡ್ ಎಸ್ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ದೀಪಕ್,ಸಾಯಿ ಅಶೋಕ್,ಹರೀಶ್,ಪ್ರಶಾಂತ್ ನಿರ್ಮಾಣ ಮಾಡಿದ್ದಾರೆ.

ಮಾಸ್ಟರ್ ಪ್ರತೀಕ್, ಬೇಬಿ ಡಿಂಪನಾ, ಮಾಸ್ಟರ್ ಶೌರ್ಯ, ಮಾಸ್ಟರ್ ಹರ್ಷ ಮುಖ್ಯಭೂಮಿಕೆಯಲ್ಲಿರೋ
ಓ ನನ್ನ ಚೇತನ ಚಿತ್ರವನ್ನ, ಎಲ್ಲಾ ಬಗೆಯ ರಂಜನೀಯ ಅಂಶಗಳೊಂದಿಗೆ ಕರ್ಮಷಿಯಲ್ ಚೌಕಟ್ಟಿನಲ್ಲೇ ಮಾಡಲಾಗಿದೆ. ಇದೀಗ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರೋ ಚಿತ್ರತಂಡ, ಸದ್ಯದಲ್ಲೇ ಟ್ರೈಲರ್ ನ ರಿಲೀಸ್ ಮಾಡಲಿದೆ.

Categories
ಸಿನಿ ಸುದ್ದಿ

ಕಿಚ್ಚನ ಮತ್ತೊಂದು ಹೊಸ ದಾಖೆಲೆ!‌ ವಿಕ್ರಾಂತ್‌ ರೋಣ ಪಾತ್ರಕ್ಕೆ ಇಂಗ್ಲಿಷ್‌ನಲ್ಲಿ ಡಬ್ ಮಾಡಿದ ಸುದೀಪ್

ಕನ್ನಡ ಚಿತ್ರರಂಗದಲ್ಲಿ ಮತ್ತೆ ಕಲರವ ಶುರುವಾಗಿದೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ್ದ ಚಿತ್ರರಂಗ ಈಗ ಮೆಲ್ಲನೆ ಚೇತರಿಸಿಕೊಂಡು, ಪುನಃ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆದುಕೊಳ್ಳುವಲ್ಲಿ ರೆಡಿಯಾಗಿದೆ. ಹೌದು, ಈಗಾಗಲೇ ಕನ್ನಡ ಸಿನಿಮಾ ಪ್ರಪಂಚದಲ್ಲೂ ಮಿನುಗತೊಡಗಿದೆ. ಈಗಾಗಲೇ ಅದಕ್ಕೆ ಸಾಕ್ಷಿಯಾಗಿ ‘ಕೆಜಿಎಫ್’ ಇದೆ. ಈಗ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಸಾಕ್ಷಿಯಾಗುತ್ತಿದೆ. ಹೌದು, ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಈಗ ಮತ್ತೊಂದು ದಾಪುಗಾಲು ಇಟ್ಟಿದೆ. ಈ ಚಿತ್ರ ಇಂಗ್ಲೀಷ್ ಭಾಷೆಗೂ ಡಬ್ ಆಗಿದ್ದು, ವಿಶ್ವದ ಪ್ರಮುಖ ನಗರಗಳಲ್ಲಿ ಇಂಗ್ಲೀಷ್ ಅವತರಣಿಕೆಯಲ್ಲೇ ಬಿಡುಗಡೆಯಾಗಲು ಸಜ್ಜಾಗಿದೆ.‌

‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ಎಲ್ಲರಿಗೂ ಗೊತ್ತಿದೆ. ಈಗ ಅದು ವಿಶ್ವಮಟ್ಟದ ಸಿನಿಮಾ ಕೂಡ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಮಾತ್ರವಲ್ಲ, ಇದೀಗ ಇಂಗ್ಲೀಷ್ ಭಾಷೆಯಲ್ಲಿಯೂ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ ಎಂಬುದು ವಿಶೇಷ. ಅಂದಹಾಗೆ, ಇಂಗ್ಲೀಷ್ ಭಾಷೆಯಲ್ಲಿ ಸ್ವತಃ ಸುದೀಪ್ ಅವರೇ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಕನ್ನಡದ ನಟರೊಬ್ಬರು ಕಮರ್ಷಿಯಲ್ ಸಿನಿಮಾಕ್ಕೆ ಇಂಗ್ಲೀಷ್‌ನಲ್ಲಿ ಡಬ್ ಮಾಡಿರುವುದು ಇದೇ ಮೊದಲು. ಹಾಗಾಗಿ ಇದೊಂದು ದಾಖಲೆಯೇ ಹೀಗೆ ಕಮರ್ಷಿಯಲ್ ಸಿನಿಮಾ ಒಂದರ ಪಾತ್ರಕ್ಕಾಗಿ ಪೂರ್ಣ ಇಂಗ್ಲೀಷ್‌ನಲ್ಲಿ ಡಬ್ ಮಾಡಿದ ಭಾರತೀಯ ಕಲಾವಿದರು ಬಹಳ ವಿರಳ. ಈ ವಿರಳ ಕಲಾವಿದರ ಪಟ್ಟಿಗೆ ಈಗ ಸುದೀಪ್ ಸಹ ಸೇರಿಕೊಂಡಿದ್ದಾರೆ.

ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾಕ್ಕಾಗಿ ಇಂಗ್ಲೀಷ್‌ನಲ್ಲಿ ಡಬ್ಬಿಂಗ್ ಮಾಡುತ್ತಿರುವ ವಿಡಿಯೋ ಒಂದನ್ನು ಸಿನಿಮಾದ ನಿರ್ದೇಶಕ ಅನುಪ್ ಭಂಡಾರಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಸಿನಿಮಾದ ಒಂದು ಸಣ್ಣ ತುಣುಕನ್ನು ಸಹ ವಿಡಿಯೋದಲ್ಲಿ ಸೇರಿಸಿದ್ದಾರೆ. ಸುದೀಪ್ ಕಂಠದಲ್ಲಿ ಕನ್ನಡ ಮಾತ್ರವಲ್ಲ ಇಂಗ್ಲೀಷ್ ಡೈಲಾಗ್ ಸಖತ್‌ ಖಡಕ್‌ ಆಗಿದೆ. ‘ವಿಕ್ರಾಂತ್ ರೋಣ’ ಸಿನಿಮಾದ ಚಿತ್ರೀಕರಣ ಆರಂಭವಾದಾಗಿನಿಂದಲೂ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಟೀಸರ್ ಕೂಡ ದುಬೈನ ಬುರ್ಜ್‌ ಖಲೀಫಾದ ಮೇಲೆ ಬಿಡುಗಡೆ ಮಾಡಲಾಗಿತ್ತು. ಕನ್ನಡದ ಮಟ್ಟಿದೆ ಇದೊಂದು ದಾಖಲೆಯಾಗಿ ಉಳಿದಿದೆ. ವಿಕ್ರಾಂತ್ ರೋಣ’ ಆಕ್ಷನ್ ಥ್ರಿಲ್ಲರ್ ಸಿನಿಮಾ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ನಿರೂಪ್ ಭಂಡಾರಿ, ರವಿಶಂಕರ್, ನೀತಾ ಅಶೋಕ್, ಶ್ರದ್ಧಾ ಶ್ರೀನಾಥ್ ಇತರರು ಇದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಹೈಲೈಟ್‌ ಆಗಿದ್ದಾರೆ. ಜಾಕ್ ಮಂಜು ನಿರ್ಮಾಣವಿದೆ.

error: Content is protected !!