Categories
ಸಿನಿ ಸುದ್ದಿ

ನೋಡೋರಿಗೆ ಮೈಸೂರು ರೆಡಿ! ಈ ವಾರ ಬಿಡುಗಡೆ

ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ “ಮೈಸೂರು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ. ಜೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಇತರರು ಚಿತ್ರದಲ್ಲಿದ್ದಾರೆ.

ಎಸ್ ಆರ್ ಕಂಬೈನ್ಸ್ ಲಾಂಛನದಲ್ಲಿ ವಾಸುದೇವ ರೆಡ್ಡಿ ಅವರೆ ಈ ಚಿತ್ರ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್ (ಜೆ.ಕೆ), ಆರ್.ಅಪ್ಪಾಜಿ(ಕೊಡವತ್ತಿ) ಈ ಚಿತ್ರದ ಸಹ‌ ನಿರ್ಮಾಪಕರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗಿದೆ.

ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.

ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಸೀತಮ್ಮನ ಮಗನಿಗೆ ಗುರು ಬಲ! ಯತಿರಾಜ್‌ ಚಿತ್ರದ ಹಾಡಿಗೆ ದೇಶಪಾಂಡೆ ಸಾಥ್

ಕಲಾವಿದ ಯತಿರಾಜ್ ನಿರ್ದೇಶಿಸಿ, ನಟಿಸಿರುವ “ಸೀತಮ್ಮನ ಮಗ” ಚಿತ್ರದ ಹಾಡುಗಳು ಹೊರಬಂದಿವೆ. ನಿರ್ದೇಶಕ ಕಮ್ ನಿರ್ಮಾಪಕ ಗುರು ದೇಶಪಾಂಡೆ ಸಾಂಗ್‌ ರಿಲೀಸ್‌ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕೆಂಪೇಗೌಡ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲೇ ಈ ಚಿತ್ರ ನಿರ್ಮಾಣವಾಗಬೇಕಿತ್ತು. ಕಿಚ್ಚ ಸುದೀಪ್ ಅವರು ಸಹ ಈ ಚಿತ್ರದಲ್ಲಿ ನಟಿಸಲು ಒಪ್ಪಿದ್ದರು. ಆದರೆ, ಕಾರಣಾಂತರದಿಂದ ಅದು ಆಗಲಿಲ್ಲ. ಈಗ ಕಾಲ ಕೂಡಿ ಬಂದಿದೆ. ನನ್ನ ಸ್ನೇಹಿತರೊಬ್ಬರ ಮೂಲಕ ಪರಿಚಿತರಾದ, ಉಪಾಧ್ಯಾಯರಾಗಿರುವ ಮಂಜುನಾಥ್ ನಾಯಕ್, ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ
ಚಿತ್ರದ ಚಿತ್ರೀಕರಣವನ್ನು ಚಿತ್ರದುರ್ಗದ ಬಳಿಯ ಪಂಡರಹಳ್ಳಿಯಲ್ಲಿ ಮಾಡಿದ್ದೇವೆ. ಸದ್ಯ ಸಂಗೀತ ನಿರ್ದೇಶಕ ವಿನು ಮನಸು ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ.

ಸದ್ಯದಲ್ಲೇ ನಮ್ಮ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ತಂತ್ರಜ್ಞರ ಕೈ ಚಳಕವೂ ಚೆನ್ನಾಗಿದೆ. ಎರಡು ಹಾಡುಗಳನ್ನು ಮಾನಸ ಹೊಳ್ಳ ಹಾಗೂ ಮೆಹಬೂಬ್ ಸಾಬ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಇಸ್ಮು ಮ್ಯೂಸಿಕ್ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ ಎಂದು ನಿರ್ದೇಶಕ ಯತಿರಾಜ್ ಸಿನಿಮಾ ಕುರಿತು ವಿವರಣೆ ನೀಡಿದರು.

ಮಕ್ಕಳ ಸಿನಿಮಾ ಮಾಡಬೇಕೆಂಬುದು ನನ್ನ ಬಹು ದಿನಗಳ ಕನಸು. ಅದರಲ್ಲೂ ನಮ್ಮ ಪಂಡರಹಳ್ಳಿಯಲ್ಲೇ ಚಿತ್ರೀಕರಣ ಮಾಡಬೇಕೆಂಬ ಆಸೆಯಿತ್ತು. ಬಹಳ ವರ್ಷಗಳ ನಂತರ ನನ್ನ ಆಸೆ ಈಡೇರಿದೆ. ನಾನು ಸಿನಿಮಾ ಆರಂಭಿಸುವುದಾಗಿ ಹೇಳಿದಾಗ ಸಾಕಷ್ಟು ಜನ ನಿರ್ದೇಶಕರು ಫೋನ್ ಮಾಡಿದ್ದರು. ಆದರೆ ನಾನು ಯತಿರಾಜ್ ಅವರಿಗೆ ಸಿನಿಮಾ ಮಾಡಲು ಹೇಳಿದೆ. ಯತಿರಾಜ್ ಬಿಟ್ಟರೆ ಯಾರಿಂದಲೂ ಇಷ್ಟು ಚೆನ್ನಾಗಿ ಚಿತ್ರ ನಿರ್ದೇಶನ ಮಾಡಲು ಆಗುತ್ತಿರಲಿಲ್ಲವೇನೋ? ಎಂಬುದು ನನ್ನ ಅನಿಸಿಕೆ ಎಂದರು ನಿರ್ಮಾಪಕ ಮಂಜುನಾಥ್ ನಾಯಕ್.

ಸಹ ನಿರ್ಮಾಪಕ ಸುಮಿತ್ ನಾಯಕ್, ಮುಪ್ಪಣ್ಣ ಗೌಡ್ರು, ಸಂಗೀತ ನಿರ್ದೇಶಕ ವಿನು ಮನಸು, ಇಸ್ಮು ಮ್ಯೂಸಿಕ್ ನ ಇಸ್ಮಾಯಿಲ್, ಸೀತಮ್ಮನ ಪಾತ್ರಧಾರಿ ಚೈತ್ರ ಶ್ರೀನಿವಾಸ್, ಸೀತಮ್ಮನ ಮಗನಾಗಿ ಅಭಿನಯಿಸಿರುವ ಚರಣ್ ಕಾಸಾಲ ಹಾಗೂ ನಟಿ ಸೋನು ಸಾಗರ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಮೇಡ್ ಇನ್ ಚೈನಾ ಮಾರ್ಚ್ 11ಕ್ಕೆ ರಿಲೀಸ್

ನಾಗಭೂಷಣ್ ಹಾಗೂ ಪ್ರಿಯಾಂಕಾ ತಿಮ್ಮೇಶ್‌ ನಟನೆಯ ಮೇಡ್ ಇನ್ ಚೈನಾ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಈಗಾಗಲೇ ಟೀಸರ್ ಮೂಲಕ‌ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಮಾರ್ಚ್ 11ಕ್ಕೆ ರಿಲೀಸ್ ಆಗುತ್ತಿದೆ.

ಈ ಮೊದಲು ಹಲವು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರೀತಂ ತೆಗ್ಗಿನಮನೆ ‘ಮೇಡ್​ ಇನ್​ ಚೈನಾ’ ಮೂಲಕ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್​ ತೊಟ್ಟಿದ್ದಾರೆ. ಜೊತೆಗೆ ಚಿತ್ರಕ್ಕೆ ಛಾಯಾಗ್ರಹಣ, ವಿಎಫ್​ಎಕ್ಸ್​, ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ಕನ್ನಡದ ಮೊದಲ ವರ್ಚುವಲ್ ಸಿನಿಮಾ ಇದಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪತಿಯು ವಿದೇಶದಲ್ಲಿ ಲಾಕ್ ಆಗುತ್ತಾನೆ. ಹೆಂಡತಿ ಭಾರತದಲ್ಲಿರುತ್ತಾಳೆ. ಇವರ ನಡುವೆ ನಡೆಯುವ ಕಥೆಯೇ ‘ಮೇಡ್ ಇನ್ ಚೈನಾ’.

ಮೇಡ್‌ ಇನ್‌ ಚೈನಾ ಚಿತ್ರದಲ್ಲಿ ಗೌರವ್ ಶೆಟ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಅರುಣ ಬಾಲರಾಜ್, ರವಿ ಭಟ್ ಕೂಡ ನಟಿಸಿದ್ದಾರೆ. ನಿಶ್ಚಲ್ ವಿ ಹಾಗೂ ಪ್ರೀತಮ್ ತೆಗ್ಗಿನಮನೆ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ವಿವಾನ್ ರಾಧಾಕೃಷ್ಣ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಎನ್.ಕೆ. ಸ್ಟುಡಿಯೋಸ್ ಬ್ಯಾನರ್‌ನಡಿ ನಂದಕಿಶೋರ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಕ್ರಿಸ್ಟಲ್ ಪಾರ್ಕ್ ಬ್ಯಾನರ್ ನಡಿ‌ ಈ ಸಿನಿಮಾವನ್ನು ನಿರ್ಮಾಪಕ ಟಿ ಆರ್ ಚಂದ್ರಶೇಖರ್ ಪ್ರಸ್ತುತಪಡಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ಗತವೈಭವಕ್ಕೆ ದುಶ್ಯಂತ್ ರೆಡಿ! ಸಿಂಪಲ್ ಸುನಿಯ ಹೊಸ ವೈಭವ…

ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್.
ಇವರಿಬ್ಬರ ಕಾಂಬಿನೇಶನ್ ನಲ್ಲಿ “ಗತವೈಭವ” ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಇತ್ತೀಚೆಗೆ “ಗತವೈಭವ” ಕ್ಕೆ ಚಾಲನೆ ಸಿಕ್ಕಿದೆ. ಗುಬ್ಬಿ ಶಾಸಕ ಶ್ರೀನಿವಾಸ್, ಲಹರಿ ವೇಲು, ನಿರ್ಮಾಪಕ ಪುಷ್ಕರ್, ನಿರ್ದೇಶಕರಾದ ಪವನ್ ಒಡೆಯರ್ , ಮಹೇಶ್ ಕುಮಾರ್ ಹಾಗೂ ವಿತರಕ ಸುಪ್ರೀತ್ ಚಿತ್ರತಂಡಕ್ಕೆ ಶುಭ ಕೋರಿದರು.

ದುಶ್ಯಂತ್ ಹೇಳಿದ್ದಿಷ್ಟು.’ ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್ ಎಲ್ ಬಿ ಓದಿದ್ದೇನೆ. ಆದರೆ ಅಭಿನಯದಲ್ಲಿ ಆಸಕ್ತಿ ಹೆಚ್ಚು . ಮೊದಲು ನಾನು ಅಪ್ಪು ಅವರನ್ನು ನೆನೆಯುತ್ತೇನೆ . ಈ ಚಿತ್ರದ ಟೀಸರ್ ಕಳೆದ ವರ್ಷ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೆ ಅಪ್ಪು ಅವರಿಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು. ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದಿದ್ದರು ಅಪ್ಪು. ಅವರ ಮಾತುಗಳು ನನಗೆ ಸ್ಪೂರ್ತಿ.
ನಮ್ಮದು ಸಂಪ್ರದಾಯಸ್ಥರ ಕುಟುಂಬ. ಸಿನಿಮಾದಲ್ಲಿ ನಟಿಸುವುದು ನನ್ನ ತಂದೆ, ತಾಯಿಗೆ ಇಷ್ಟವಿರಲಿಲ್ಲ. ಕೊನೆಗೆ ತಾಯಿಯನ್ನು ಒಪ್ಪಿಸಿದೆ.

ತಂದೆ ಈಗಲೂ ಪೂರ್ಣ ಒಪ್ಪಿಗೆ ನೀಡಿಲ್ಲ. ನಾನು ವಿದೇಶದಲ್ಲಿ ಓದುತ್ತಿದ್ದಾಗ ದಿನ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದೆ. ಬನ್ನೇರುಘಟ್ಟದ ಬಳಿ ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸುವ ನಾಟಕವೊಂದಕ್ಕೆ ಹೋದಾಗ ಕಲಾವಿದರೆಲ್ಲಾ ಒಂದು ಕಡೆ ಬನ್ನಿ ಎಂದರು . ಅವರು ಕಲಾವಿದ ಅಂದ ತಕ್ಷಣ ನನ್ನ ಮನಸ್ಸಿನಲ್ಲಿ ನಟನಾಗಬೇಕೆಂಬ ಹಂಬಲ ಹೆಚ್ಚಾಯಿತು.‌ ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು.


ಕಥೆ ಸಿದ್ದವಾಯಿತು. ನಿರ್ಮಾಪಕರ ಹುಡುಕಾಟ ಆರಂಭವಾಯಿತು ಎಂದರು ದುಶ್ಯಂತ್.
ಕೆಲವರು ಹೇಳುತ್ತಾರೆ ದುಡ್ಡಿರುವವರ ಮಕ್ಕಳು ಹೀರೋ ಆಗುತ್ತಾರೆ ಅಂತ. ನಾನು ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಪುತ್ರ. ಆದರೆ ನಮ್ಮ ತಂದೆಗೆ ನಾನು ಚಿತ್ರರಂಗಕ್ಕೆ ಬರಲು ಇಷ್ಟವಿಲ್ಲ. ನನಗೆ ಇದಲ್ಲದೆ ಬೇರೆ ಇಷ್ಟವಿಲ್ಲ ಹಾಗಾಗಿ ನಾನು ನಿರ್ಮಾಪಕರ ಹುಡುಕಿ ಹಣ ಹೊಂದಿಸಲು ಒಂದು ವರ್ಷಕ್ಕೂ ಅಧಿಕ ಸಮಯ ತೆಗೆದು ಕೊಂಡೆ ಎಂದು ದುಶ್ಯಂತ್ ತಿಳಿಸಿದರು.

ನಾವು ರಾಜಕೀಯ ವ್ಯಕ್ತಿಗಳು ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ ನಾನು ನನ್ನ ಮಗನನ್ನು ಬೆಳೆಸಿದ ರೀತಿಯ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ ಯಾರಿಗೂ ಕೆಟ್ಟದಾಗುವುದು ಬೇಡ ಎಂದರು ಗುಬ್ಬಿ ಶಾಸಕ ಶ್ರೀನಿವಾಸ್.

“ಗತವೈಭವ” ಎಂದರೆ ಗತಿಸಿ ಹೋದ ವೈಭವ ಎಂದು. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತದೆ. ಫನ್, ಸೆಂಟಿಮೆಂಟ್ ಹಾಗೂ ಮೈಂಡ್ ಗೇಮ್ ನ ಮಿಶ್ರಣ ಅನ್ನಬಹುದು. ದುಶ್ಯಂತ್ ಗೆ ಸ್ಟೇಜ್ ಫಿಯರ್ ಇಲ್ಲ. ಟೀಸರ್ ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದರು ಸುನಿ.

ನಾನು ದುಶ್ಯಂತ್ ಅಕ್ಕಪಕ್ಕದ ಮನೆಯವರು. ಸುಮಾರು ಇಪ್ಪತ್ತು ವರ್ಷಗಳ ಪರಿಚಯ.‌ ದುಶ್ಯಂತ್ ನನ್ನ ಬಳಿ ಈ ವಿಷಯ ಹೇಳಿದಾಗ ನಿರ್ಮಾಣಕ್ಕೆ ಮುಂದಾದೆ. ನನ್ನೊಂದಿಗೆ ಸುನಿ ಸಹ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ ಎಂದರು ನಿರ್ಮಾಪಕ ದೀಪಕ್ ತಿಮ್ಮಪ್ಪ.

ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಗೀತ ನಿರ್ದೇಶಕ ಭರತ್ ಬಿ.ಜೆ, ಸಂಕಲನಕಾರ ಆಶಿಕ್, ಕಲಾ ನಿರ್ದೇಶಕ ಶಿವಕುಮಾರ್, ವಿ ಎಫ್ ಎಕ್ಸ್ ಸೂಪರ್ ವೈಸರ್ ನಿರ್ಮಲ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಚೇತನ್ ಡಿಸೋಜ ಮುಂತಾದವರು ಈ ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಜನಾರ್ದನ ರೆಡ್ಡಿ ಪುತ್ರ ಈಗ ಹೀರೋ! ವಾರಾಹಿ ಪ್ರೊಡಕ್ಷನ್ ಹೌಸ್ ನ 15ನೇ ಸಿನಿಮಾ ಅನೌನ್ಸ್…

ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದೆ. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿಯನ್ನು ನಾಯಕನಾಗಿ ಪರಿಚಯಿಸುತ್ತಿದೆ.

ಇನ್ನೂ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದ್ದು ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರು ಈ ಸಿನಿಮಾದ ಭಾಗವಾಗಿದ್ದಾರೆ.

ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ಮಾಡಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.

ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇತರ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

Categories
ಸಿನಿ ಸುದ್ದಿ

ಕರ್ಮದ ಮರ್ಮ ತಿಳಿಸೋ ಇನ್ ಸ್ಟಂಟ್ ಕರ್ಮ: ಏಪ್ರಿಲ್ ಗೆ ರಿಲೀಸ್

ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಎಂಬ ಮಾತಿದೆ. ಅದು ಯಾವತ್ತೊ ಅಲ್ಲ. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವ ಇಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಚಿತ್ರ ರೆಡಿಯಾಗಿದೆ . ಈ ಚಿತ್ರಕ್ಕೆ ಸಂದೀಪ್ ಮಹಾಂತೇಶ್ ನಿರ್ದೇಶಕರು.

ನಾನು ಈ ಹಿಂದೆ “D k ಬೋಸ್” ಚಿತ್ರ ನಿರ್ದೇಶನ ಮಾಡಿದ್ದೆ. ಮಾಧ್ಯಮದಿಂದ ಈ ಚಿತ್ರಕ್ಕೆ ಒಳ್ಳೆ ಪ್ರಶಂಸೆ ಸಿಕ್ಕಿತ್ತು. ಆದರೆ ನಿರೀಕ್ಷಿಸಿದಷ್ಟು ಗೆಲವು ಸಿಗಲಿಲ್ಲ. ಆ ಚಿತ್ರದಲ್ಲಾದ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ನಾಲ್ಕು ಪ್ರಮುಖ ಪಾತ್ರಗಳ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ನಾನು ನನ್ನ ತಾಯಿಯನ್ನು‌ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲೊಂದು ಘಟನೆ ನಡೆಯಿತು. ಅದನ್ನು ಸ್ಪೂರ್ತಿಯಾಗಿಟ್ಟುಕೊಂಡು ಕಥೆ ಮಾಡಿದ್ದೇನೆ. ಸೆನ್ಸಾರ್ ನಮ್ಮ ಚಿತ್ರಕ್ಕೆ ಯು\ಎ ಪ್ರಮಾಣಪತ್ರ ನೀಡಿದೆ. ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ಮಾಹಿತಿ ನೀಡಿದರು.

ಯಶ್ ಶೆಟ್ಟಿ ಚಿತ್ರದ ಪ್ರಮುಖ ಆಕರ್ಷಣೆ. ಈ ಬಗ್ಗೆ ಹೇಳುವ ಅವರು, ನಾನು ಈ ಚಿತ್ರದ ಪ್ರಮುಖ ಪಾತ್ರಧಾರಿ. ಹೀರೋ ಎನ್ನುವುದಕ್ಕಿಂತ, ಕಥೆಯೇ ಈ ಚಿತ್ರದ ಹೀರೋ ಎನ್ನಬಹುದು. ಅಷ್ಟು ಚೆನ್ನಾಗಿ ನಮ್ಮ ನಿರ್ದೇಶಕರು ಕಥೆ ಹೆಣೆದಿದ್ದಾರೆ. ನಮಗೆ ಏನೇ ಸಂದೇಹ ಬಂದರೂ ನಿರ್ದೇಶಕರು ಅದಕ್ಕೆ ಸ್ಪಷ್ಟನೆ ನೀಡುತ್ತಿದ್ದರು ಎಂದರು ನಟ ಯಶ್ ಶೆಟ್ಟಿ.

ಪ್ರಮುಖಪಾತ್ರದಲ್ಲಿ ನಟಿಸಿರುವ ಅಂಜನ್ ದೇವ್(ಸಲಗ), ಹರಿ, ಪ್ರಜ್ವಲ್ ಶೆಟ್ಟಿ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಧನಂಜಯ, ಪನೀತ್ ಮುಂತಾದವರು ಚಿತ್ರದ ಕುರಿತಾದ ತಮ್ಮ ಅನುಭವ ಹಂಚಿಕೊಂಡರು.

ಮೂವತ್ತೈದು ಕೆಜಿ ಭಾರವುಳ್ಳ ಕ್ಯಾಮೆರಾವನ್ನು ಇಡೀ ದಿನ ಹೆಗಲ ಮೇಲೆ ಹೊತ್ತು ಚಿತ್ರೀಕರಣ ಮಾಡಿದ ಬಗ್ಗೆ ಛಾಯಾಗ್ರಾಹಕ ಭಾಸ್ಕರ್ ಹೆಗ್ಡೆ ಹೇಳಿಕೊಂಡರು. ಸೂರಜ್ ಜೋಯಿಸ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

ಸಂತೋಷ್ ಮಹಾಂತೇಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಸಂದೀಪ್ ಮಹಾಂತೇಶ್ ಹಾಗೂ ಸಂಕಲನಕಾರ ಸುರೇಶ್ ಆರ್ಮುಗಂ ಕೂಡ ಈ ಚಿತ್ರದ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ರೈತನಿಗೆ ಗಾನ ನಮನ; ಇದು ALL OK ಗೆಳೆಯರ ಶ್ರಮ

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ “ರೈತ” ನಿಜಕ್ಕೂ ಅನ್ನದಾತ.

ಇಂತಹ “ರೈತ” ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು “ರೈತ” ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ.
ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು, ಹಾಡಿ, ಸಂಗೀತ ನೀಡಿದ್ದಾರೆ. ಜೊತೆಗೆ ನಿರ್ದೇಶನವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆಯಾಗಿದೆ.
ರೈತರ ಮಕ್ಕಳು ಈ ಹಾಡನ್ನು ಲೋಕಾರ್ಪಣೆ ಮಾಡದ್ದು ವಿಶೇಷ.


ಸಾಯಿಗೋಲ್ಡ್ ಪ್ಯಾಲೆಸ್ ನ ಶರವಣ, ಯುನೈಟೆಡ್ ಆಸ್ಪತ್ರೆಯ ಶಾಂತಕುಮಾರ್, ಅನಂತು, ನಟ ಉಪೇಂದ್ರ ಅವರ ಸಹೋದರ ಸುಧೀಂದ್ರ ಸೇರಿದಂತೆ ಅನೇಕರು ಈ ಸ ಸಮಾರಂಭಕ್ಕೆ ಆಗಮಿಸಿದ್ದರು.

ನಾವು ಮಕ್ಕಳನ್ನು ನೀನು ದೊಡ್ಡವನಾದ ಮೇಲೆ ಏನಾಗುತ್ತೀಯಾ ? ಅಂತ ಕೇಳಿದಾಗ, ಅವರು ಡಾಕ್ಟರ್, ಇಂಜಿನಿಯರ್ ಆಗುತ್ತೀನಿ ಎನ್ನುತ್ತಾರೆ ಹೊರೆತು ರೈತ ಆಗುತ್ತೀನಿ ಅನ್ನುವುದಿಲ್ಲ. ನಾನು ರೈತ ಆಗುತ್ತೀನಿ ಅನ್ನುವ ದಿನ ಬೇಗ ಬರಬೇಕು ಎಂಬುದೇ ನಮ್ಮ‌ ಆಸೆ. ನಾನು ಹಾಗೂ ಸಂಜಯ್ ಗೌಡ ಇಬ್ಬರು ಬಾಲ್ಯ ಸ್ನೇಹಿತರು. ಹಿಂದೆ KA01 ಎಂಬ ಆಲ್ಬಂ ಸಾಂಗ್ ಮಾಡಿ ವಿದೇಶದಲ್ಲಿ ಬಿಡುಗಡೆ ಮಾಡಿದ್ದೆವು. ಈಗ ರೈತನ ಕುರಿತಾದ ಈ ಗೀತೆ ತಂದಿದ್ದೀವಿ. ಈ ವಿಷಯವನ್ನು ರಾಜಕೀಯ ವ್ಯಕ್ತಿಗಳು ಸೇರಿದಂತೆ ಅನೇಕ ‌ಗಣ್ಯರ ಮುಂದೆ ಹೇಳಿದಾಗ ಸಂತೋಷದಿಂದ ಸಾಥ್ ನೀಡಿದರು. ಛಾಯಾಗ್ರಾಹಕ ಆಕಾಶ್ ಜೋಶಿ ಸೇರಿದಂತೆ ಎಲ್ಲಾ ತಂತ್ರಜ್ಞರ ಸಾಹಕಾರ ಅಪಾರ ಎಂದರು ALL OK.

ನನ್ನನ್ನು ಪರದೆಯ ಮೇಲೆ ತರುವ ಸಲುವಾಗಿ ಗೆಳೆಯ ALL OK ಈ ವಿಭಿನ್ನ ಹಾಡನ್ನು ಮಾಡಿದ್ದಾನೆ.. ಆದರೆ ನಾವು ಪರದೆಯ ಮೇಲೆ ಬರುವುದಕ್ಕಿಂತ ನಮಗೆ ತಿನ್ನಲು ಅನ್ನ ನೀಡುತ್ತಿರುವ ರೈತನಿಗೆ ನಮನ ಸಲ್ಲಿಸುವ ಈ “ರೈತ” ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ. ರೈತನಿಗೆ ನೋಡಿ ಪ್ರಮೋಷನ್, ಇನ್ಕ್ರಿಮೆಂಟ್, ರಿಟೈರ್ ಮೆಂಟ್ ಏನು ಇಲ್ಲ. ಯಾವಾಗಲೂ ದುಡಿಮೆಯೇ ಆತನ ಜೀವನ. ನಮ್ಮ
ಮಕ್ಕಳು ರಜೆ ದಿನಗಳಲ್ಲಿ ಅಲ್ಲಿಇಲ್ಲಿ ಕರೆದುಕೊಂಡು ಹೋಗು ಎನ್ನುವ ಬದಲು ಹೊಲ,ಗದ್ದೆಗಳಿಗೆ ಕರೆದುಕೊಂಡು ಹೋಗು ನಾನು ನೋಡಬೇಕು ಎನ್ನುವಂತಾಗಲಿ ಎಂದು ಸಂಜಯ್ ಗೌಡ ಆಶಿಸಿದರು.


ಈ ಹಾಡಿನಲ್ಲಿ ನನ್ನೊಂದಿಗೆ ಸೋನು ಗೌಡ ಅಭಿನಯಿಸಿದ್ದಾರೆ. ತಂತ್ರಜ್ಞರ ಕೆಲಸ ಉತ್ತಮವಾಗಿದೆ. ರೈತರ ಮೇಲಿನ ಗೌರವದಿಂದ ಅನೇಕ ಗಣ್ಯರು ಇದರಲ್ಲಿ ಕಾಣಿಸಿಕೊಂಡಿದ್ದಾರೆ.
ಮುಂದೊಂದು ದಿನ ರೈತನ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತೇನೆ ಎಂದ ಸಂಜಯ್ ಗೌಡ ಅವರು, ಕಾರ್ಯಕ್ರಮ ಬಂದ ಎಲ್ಲಾ ಅತಿಥಿಗಳಿಗೆ ಧನ್ಯವಾದ ತಿಳಿಸಿದರು.

ಸಂಜಯ್ ಗೌಡ ಮತ್ತು ALL OK ತಂಡದವರನ್ನು ಶರವಣ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ವಿಮೆ ಇಲ್ಲದ ರೈತನ ಕುಟುಂಬದಲ್ಲಿ ಯಾರಿಗಾದರೂ ತೊಂದರೆಯಾದರೆ, ಕೇವಲ ಅವರ ಚಿಕಿತ್ಸೆ ವೆಚ್ಚದಲ್ಲಿ 50% ಕಡಿಮೆ ಮಾಡುವುದಾಗಿ ಯುನೈಟೆಡ್ ಆಸ್ಪತ್ರೆಯ ಶಾಂತಕುಮಾರ್ ಹೇಳಿದರು.

ಭೋಧಿ ಟ್ರೀ ಸಂಸ್ಥೆಯವರು
ಸುಮಾರು ನೂರೈವತ್ತಕ್ಕೂ ಅಧಿಕ ಮಕ್ಕಳಿಗೆ ವಿಶೇಷ ಕಿಟ್ ನೀಡಿದರು. ALL OK ಚಿತ್ರರಂಗ ಪ್ರವೇಶಿಸಿ ಹದಿನೈದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅವರ ಸ್ನೇಹಿತರು ಗೌರವಿಸಿದರು.

Categories
ಸಿನಿ ಸುದ್ದಿ

ಪೆದ್ರೊ ಹಿಂದೆ ಶಿರಸಿ ಹುಡುಗ: ಹೊಸ ಪ್ರತಿಭೆಗೆ ರಿಷಭ್ ಶೆಟ್ಟಿ ಸಾಥ್

ಶಿರಸಿ ಮೂಲದ ನಟೇಶ್ ಹೆಗಡೆ ಮಾಡಿದ ಕೆಲವು ಕಿರುಚಿತ್ರಗಳು ಜನಪ್ರಿಯವಾಗಿದೆ. ಇವರ ಒಂದು ಕಿರುಚಿತ್ರ ವೀಕ್ಷಿಸಿದ ರಾಜ್ ಬಿ‌ ಶೆಟ್ಟಿ, ನಟೇಶ್ ಅವರನ್ನು ಸಂಪರ್ಕಿಸುತ್ತಾರೆ. ನಟೇಶ್ ಅವರ ಪ್ರತಿಭೆ ಬಗ್ಗೆ ರಿಷಭ್ ಶೆಟ್ಟಿ ಅವರ ಬಳಿ ಹೇಳಿದಾಗ, ರಿಷಭ್ ” ಪೆದ್ರೊ”ಚಿತ್ರ‌ ನಿರ್ಮಾಣಕ್ಕೆ ಮುಂದಾಗುತ್ತಾರೆ.

ಈ ಚಿತ್ರ ನಿರ್ಮಾಣವಾಗಿ ವಿವಿಧ ದೇಶಗಳ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಸದ್ಯದಲ್ಲೇ ಕರ್ನಾಟಕದ ಚಿತ್ರಮಂದಿರಗಳಲ್ಲೂ “ಪೆದ್ರೊ” ಬಿಡುಗಡೆಯಾಗಲಿದೆ.

ಇತ್ತೀಚೆಗೆ ಈ‌ ಚಿತ್ರದ ಟ್ರೇಲರ್ ಅನ್ನು ನಿರ್ದೇಶಕ ಗಿರೀಶ್ ಕಾಸರವಳ್ಳಿ ಬಿಡುಗಡೆ ಮಾಡಿದರು.

ನಾನು “ಪೆದ್ರೊ” ಚಿತ್ರ ನೋಡಿ ಬೆರಗಾದೆ. ಇತ್ತೀಚೆಗೆ ದೂರವಾಗಿರುವ ಸಿನಿಮಾ ಭಾಷೆಯನ್ನು ಈ ಚಿತ್ರದಲ್ಲಿ ಚೆನ್ನಾಗಿ ಬಳಸಿಕೊಂಡಿದ್ದಾರೆ.‌‌ ಮಾಮೂಲಿ ತರಹ‌ ಅಲ್ಲದೆ ಬೇರೆಯದೇ ರೀತಿಯ ಸಿನಿಮಾ ಮಾಡಬೇಕು. ಆ ರೀತಿ ಕನ್ನಡದಲ್ಲಿ “ತಿಥಿ” ಹಾಗೂ “ಹರಿಕಥಾ ಪ್ರಸಂಗ” ಚಿತ್ರಗಳು ನನಗೆ ಹಿಡಿಸಿದ್ದವು. ಈಗ ಆ ಸಾಲಿಗೆ “ಪೆದ್ರೊ” ಸೇರಿದೆ. ರಿಷಭ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯ ದಾಗಲಿ ಎಂದು ಗಿರೀಶ್ ಕಾಸರವಳ್ಳಿ ಹಾರೈಸಿದರು.

ನನ್ನ ಪ್ರಕಾರ ಕಮರ್ಷಿಯಲ್ ಸಿನಿಮಾ, ಅವಾರ್ಡ್ ಸಿನಿಮಾ ಎಂಬುದು ಇಲ್ಲ. ಸಿನಿಮಾ ಅಂದರೆ ಸಿನಿಮಾ ಅಷ್ಟೇ. ವಿಭಾಗಗಳನ್ನು ನಾವು ಮಾಡಿಕೊಂಡಿದ್ದೇವೆ. ನಾನು ಇಷ್ಟಪಡುವ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಟ್ರೇಲರ್ ಬಿಡುಗಡೆ ಮಾಡಿದ್ದು ಬಹಳ ಸಂತೋಷವಾಗಿದೆ. ಅವರ ಮಾರ್ಗದರ್ಶನ ನಮಗೆ‌ ಮುಖ್ಯ. ನಟೇಶ್ ತುಂಬಾ ಚೆನ್ನಾಗಿ ನಿರ್ದೇಶನ‌ ಮಾಡಿದ್ದಾರೆ. ಸಾಮಾನ್ಯವಾಗಿ ತಂದೆ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಾರೆ. ಆದರೆ ನಮ್ಮ ಚಿತ್ರದಲ್ಲಿ ಮಗ , ತಂದೆಯನ್ನು ಚಿತ್ರರಂಗಕ್ಕೆ ಪ್ರವೇಶ ಮಾಡಿಸಿದ್ದಾರೆ. ನಟೇಶ್ ಹೆಗಡೆ ಅವರ ತಂದೆ ಗೋಪಾಲ್ ಹೆಗಡೆ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ, ರಾಮಕೃಷ್ಣ ಭಟ್, ಮೇಧಿನಿ ಕೆಳಮನೆ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ರಿಷಭ್ ಶೆಟ್ಟಿ.

ನಮ್ಮ ಚಿತ್ರ ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ. ಆದರೆ ಇಲ್ಲಿನವರಿಗೆ ಈ ಚಿತ್ರ ತಲುಪಬೇಕು. ಅದರ ಮೊದಲ ಹೆಜ್ಜೆಯಾಗಿ ಟ್ರೇಲರ್ ಬಿಡುಗಡೆ ಮಾಡಿದ್ದೀವಿ. ನನ್ನ ಕಥೆ ಇಷ್ಟಪಟ್ಟು ಹಣ ಹಾಕಿದ ರಿಷಭ್ ಶೆಟ್ಟಿ ಅವರಿಗೆ, ರಿಷಭ್ ರನ್ನು ಪರಿಚಯಿಸಿದ ರಾಜ್ ಶೆಟ್ಟಿ ಅವರಿಗೆ , ಚಿತ್ರದಲ್ಲಿ ನಟಿಸಿರುವ ನನ್ನ ತಂದೆ ಗೋಪಾಲ್ ಹೆಗಡೆ ಹಾಗೂ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಿರೀಶ್ ಕಾಸರವಳ್ಳಿ ಸರ್ ಅವರಿಗೆ ಅನಂತ ಧನ್ಯವಾದ ತಿಳಿಸಿದರು ನಿರ್ದೇಶಕ ನಟೇಶ್ ಹೆಗಡೆ.

ಈ ಹುಡುಗನನ್ನು ಫೇಸ್ ಬುಕ್ ಮೂಲಕ ಹುಡುಕಿ, ನಿನ್ನ ಕಿರುಚಿತ್ರವೊಂದನ್ನು ಕಳುಹಿಸು ಎಂದೆ. ಆತನ ಕಿರುಚಿತ್ರ ನೋಡಿ ಸಂತೋಷ ಪಟ್ಟೆ. ರಿಷಭ್ ಗೆ ಈತನನ್ನು ಪರಿಚಯಿಸಿದೆ. ಈಗ ಈ ಚಿತ್ರ ನಿರ್ಮಾಣವಾಗಿದೆ. ಉತ್ತಮ ಪ್ರತಿಕ್ರಿಯೆ ಕೂಡ ಸಿಗುತ್ತಿದೆ. ಈ ಹುಡುಗನಿಗೆ ಹಾಗೂ ತಂಡಕ್ಕೆ ನಿಮ್ಮ ಬೆಂಬಲವಿರಲಿ ಎಂದರು ರಾಜ್ ಬಿ ಶೆಟ್ಟಿ.

ಚಿತ್ರದಲ್ಲಿ ನಟಿಸಿರುವ ರಾಮಕೃಷ್ಣ ಭಟ್ ಹಾಗೂ ಸೌಂಡ್‌ ಡಿಸೈನರ್ ಶ್ರೇಯಾಂಕ್ ಸಹ ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಕ್ರೇಜಿ ಸ್ಟಾರ್ ರವಿಚಂದ್ರನ್ ತಾಯಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಅವರು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಮೃತರು ಇಬ್ಬರು ಪುತ್ರರು ಹಾಗು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ದರ್ಶನಕ್ಕೆ ಅವರ ಮನೆಯ ಬಳಿ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Categories
ಸಿನಿ ಸುದ್ದಿ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ಟ್ರೋಫಿ ಅನಾವರಣ: ಇದು ಮೂರನೇ ಪ್ರಶಸ್ತಿ ಟ್ರೋಫಿ

ನಟಿ ರಾಗಿಣಿ, ನಟ ರಿಷಿ ಹಾಗು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರು ಆ ಟ್ರೋಫಿಯನ್ನು ಅನಾವರಣಗೊಳಿಸಿದರು.

ಇದೇ ಸಂಧರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರು ಹಾಗೂ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಸದಾಶಿವ ಶೆಣೈ ಅವರನ್ನು ಸಿನೆಮಾ ಪತ್ರಕರ್ತರ ಪರವಾಗಿ ಸನ್ಮಾನಿಸಲಾಯಿತು.

error: Content is protected !!