Categories
ಸಿನಿ ಸುದ್ದಿ

ತಪಸ್ಸಿ ಇದು ಮಹಿಳಾ ಪ್ರಧಾನ ಚಿತ್ರ: ರವಿಚಂದ್ರನ್ ವಿಶೇಷ ಪಾತ್ರ

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ಇದೆ. ಅದನ್ನು ಆರೇಳು ತಿಂಗಳಿನಿಂದ ನೀವೇ ಮಾಡಬೇಕು ಎಂಬ ಹಠ ಅವರದ್ದು. ಮ್ಯಾಥ್ಯೂ ನನಗೆ ತುಂಬಾ ಕ್ಲೋಸ್ ಫ್ರೆಂಡ್. ತುಂಬಾ ಶಿಸ್ತಿನಿಂದ ನಡೆದುಕೊಳ್ಳುವ ವ್ಯಕ್ತಿ. ರವಿ ಬೋಪಣ್ಣ ಸಿನಿಮಾದಿಂದ ನನಗೆ ಪರಿಚಯ. ಅದಕ್ಕೂ ಮುಂಚೆಯಿಂದಲೂ ಗಾಂಧಿನಗರದಲ್ಲಿ ಇದ್ದಾರೆ. ಅವರೇ ಈ ಸ್ಟೋರಿ ಮಾಡಿದ್ದಾರೆ. ನೀವೇ ಮಾಡಬೇಕು. ಒಂದು ಸಾಮಾಜಿಕ ಸಂದೇಶ ಸಾರಬೇಕು. ತೂಕವಾದ ಪಾತ್ರ. ಇಡೀ ಸಿನಿಮಾಗೆ ನ್ಯಾಯ ಒದಗಿಸಲು ನನ್ನ ಸೆಲೆಕ್ಟ್ ಮಾಡಿದ್ದಾರೆ ಎಂದರು.

ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಮಾತನಾಡಿ, ರವಿಚಂದ್ರನ್ ಸರ್ ಅವರಿಂದಲೇ ಈ ಪ್ರಾಜೆಕ್ಟ್ ಶುರುವಾಗಿದೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಚಿತ್ರದಲ್ಲಿ ಸ್ಟ್ರಾಂಗ್ ಮೆಸೇಜ್ ಇದೆ. ಜನರಿಗೆ ಅದು ತಲುಪಬೇಕು ಎಂದರೆ ರವಿಚಂದ್ರನ್ ಸರ್ ಅಂತಹ ತಾಕತ್ತು ಇರುವ ವ್ಯಕ್ತಿ ಬಿಟ್ಟು ಬೇರೆ ಯಾರು ಇಲ್ಲ ಎನಿಸಿತು. ಇದು ಮಹಿಳಾ ಪ್ರಧಾನ ಸಿನಿಮಾ. ಇದ್ರಲ್ಲಿ ಒಂದು ಸ್ಟ್ರಾಂಗ್ ಮೆಸೇಜ್ ಇದೆ ಎಂದರು.

ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿರುವ ತಪಸ್ಸಿಯಲ್ಲಿ ಪ್ರಾಧ್ಯಾಪಕರಾಗಿ ಡಾಕ್ಟರ್ ವಿ ರವಿಚಂದ್ರನ್ ನಟಿಸ್ತಿದ್ದು, ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ವಿನಯ ಪ್ರಸಾದ್, ಪ್ರಜ್ವಲ್, ಸಚಿನ್, ಅನುಷ ಕಿಣಿ, ಭಾಸ್ಕರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ತಪಸ್ಸಿ ಸಿನಿಮಾಗೆ ವಿರೇಶ್ ಕ್ಯಾಮರಾ ಹಿಡಿಯುತ್ತಿದ್ದು, ಅರುಣ್ . ಪಿ.ಥಾಮಸ್ ಸಂಕಲನ, ಆರವ್ರಿಷಿಕ್ ಸಂಗೀತ ನಿರ್ದೇಶನವಿರಲಿದೆ. ಸ್ಪೆನ್ಸರ್ ಮ್ಯಾಥ್ಯೂ ನಿರ್ದೆಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದು, ಆರ್ ಗಂಗಾಧರ್ ಕಾರ್ಯಕಾರಿ ನಿರ್ಮಾಪಕನಾಗಿ ಸಾಥ್ ಕೊಟ್ಟಿದ್ದಾರೆ. ಬೆಂಗಳೂರು ಸುತ್ತಮುತ್ತ ‘ತಪಸ್ಸಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

Categories
ಸಿನಿ ಸುದ್ದಿ

ರಾಮ್ ಚರಣ್ ಜೊತೆ ಶ್ರೀದೇವಿ ಪುತ್ರಿ ಸಿನಿಮಾ ಶುರು: ಇದು ಚೆರ್ರಿ 16ನೇ ಚಿತ್ರ

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹೈದ್ರಾಬಾದ್ ನಲ್ಲಿ ನೆರವೇರಿದೆ.

ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ಅನಿಸುತ್ತಿರುವುದು ವಿಶೇಷ.

Categories
ಸಿನಿ ಸುದ್ದಿ

ಮಿಸ್ ಗೈಡ್ ಮಾಡಿದ ಮಂಜು ಕವಿ! ಹೊಸ ಸಿನಿಮಾ ಟೀಸರ್ ಬಂತು

ಸೀಟಡೀಲ್ ಫಿಲಂಸ್ ಹಾಗೂ ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ “ಮಿಸ್ ಗೈಡ್” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು “ಮಿಸ್ ಗೈಡ್” ಬಗ್ಗೆ ಮಾಹಿತಿ ನೀಡಿದರು.

ಇದು ನಾನು ನಿರ್ದೇಶಿಸಿರುವ ಎರಡನೇ ಚಿತ್ರ. ನನ್ನ ಕಥೆ ಮೆಚ್ಚಿ ನಾಗರಾಜ್ ಹಾಗೂ ಸುಬ್ಬು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಾವು – ಮುಂಗುಸಿಯ ಕಥೆಯನ್ನು ಆದರ್ಶವಾಗಿಟ್ಟುಕೊಂಡು ಈ ಕಥೆ ಹೆಣೆಯಲಾಗಿದೆ.ಮುಂಗುಸಿಯೊಂದು ಮಗುವನ್ನು ಕಾಪಾಡಲು ಹಾವಿನೊಂದಿಗೆ ಸೆಣೆಸಾಡುತ್ತದೆ. ಆದರೆ ಮುಂಗುಸಿಯ ಬಾಯಲ್ಲಿ ರಕ್ತ ನೋಡಿದ ಮಗುವಿನ ತಾಯಿ ಮುಂಗುಸಿ ತನ್ನ ಮಗುವಿಗೆ ಏನೋ ಮಾಡಿದೆ ಅಂದುಕೊಳ್ಳುತ್ತಾಳೆ.

ಈ ಕಥೆಯೇ ನಮ್ಮ ಚಿತ್ರಕ್ಕೆ ಸ್ಪೂರ್ತಿ. ಇನ್ನು ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಎಲ್ಲಾ ಮುಕ್ತಾಯವಾಗಿದ್ದು, ಚಿತ್ರ ತೆರೆಗೆ ಬರುವ ಹಂತದಲ್ಲಿದೆ. ಚಿತ್ರತಂಡದ ಸಹಕಾರದಿಂದ “ಮಿಸ್ ಗೈಡ್” ಅಂದುಕೊಂಡ ಹಾಗೆ ಬಂದಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ನಾನೇ ಗೀತರಚನೆ ಮಾಡಿ ಸಂಗೀತ ನೀಡಿದ್ದೀನಿ. ತಾಯಿ – ಮಗನ ಸೆಂಟಿಮೆಂಟ್ ಹಾಡನ್ನು ಜನಪ್ರಿಯ ಗಾಯಕ ಗುರುಕಿರಣ್ ಹಾಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಮಂಜು ಕವಿ.

ಚಿತ್ರದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾಗಿರುವುದಾಗಿ ನಿರ್ಮಾಪಕರಾದ ನಾಗರಾಜ್ ಹಾಗೂ ಸುಬ್ಬು ಹೇಳಿದರು. ಚಿತ್ರದ ಪ್ರಮುಖ ಪಾತ್ರದಲ್ಲಿ ನಟನೆ ಕೂಡ ಮಾಡಿರುವುದಾಗಿ ಸುಬ್ಬು ತಿಳಿಸಿದರು.

ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡು ಚೆನ್ನಾಗಿದೆ ಎಂದರು ನಾಯಕ ನಿತೀಶ್ ವಿನಯ್ ರಾಜ್. ಮತ್ತು ಸುಬ್ಬು,ಫರೀನ್ ಹಾಗೂ ರಕ್ಷ ಈ ಚಿತ್ರದ ನಾಯಕಿಯರು.

ನಟರಾದ ಜಗದೀಶ್ ಕೊಪ್ಪ, ಪ್ರಾಣೇಶ್, ಹಿನ್ನೆಲೆ ಸಂಗೀತ ನೀಡಿರುವ ವಿನು ಮನಸು ಹಾಗೂ ಸಾಹಸ ನಿರ್ದೇಶಕ ಮಾಸ್ ಮಾದ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಹ ನಿರ್ದೇಶಕರಾಗಿ ಎಸ್‌ ಜೆ ಸಂಜಯ್,
ಸಂಗೀತ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಸಾಕಷ್ಟು ರಂಗಭೂಮಿ ಕಲಾವಿದರೆ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ.

Categories
ಸಿನಿ ಸುದ್ದಿ

ಝೈದ್ ಖಾನ್ ಹೊಸ ಚಿತ್ರದ ಪೋಸ್ಟರ್ ರಿಲೀಸ್: ಇದು ಅನಿಲ್ ಕುಮಾರ್ ಚಿತ್ರ

“ಬನಾರಸ್” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಏಪ್ರಿಲ್ 12ಕ್ಕೆ ಅಪ್ಪಾ ಐ ಲವ್ ಯೂ ರಿಲೀಸ್: ನೆನಪಿರಲಿ ಇಲ್ಲಿ ಪ್ರೇಮ್ ಹೈಲೆಟ್

ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಅಂದ್ಹಾಗೆ ಆ ಸಿನಿಮಾದ ಹೆಸರು ‘ಅಪ್ಪಾ ಐ ಲವ್ ಯೂ’.

ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ‘ಅಪ್ಪಾ ಐ ಲವ್ ಯೂ’ ಸಿನಿಮಾ ತೆರೆಗೆ ಬರಲು ಸನ್ನದ್ಧವಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದಾರೆ.

ಪ್ರೇಮ್ ಹಾಗೂ ಮಾನ್ವಿತಾ ಕಾಮತ್ ಜೊತೆಗೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್ ರಾವ್ , ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

‘ಅಪ್ಪಾ ಐ ಲವ್ ಯೂ’ ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. K.R.S ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.

Categories
ಸಿನಿ ಸುದ್ದಿ

ಇದು ಕೈ ಇರದ ಸಾಧಕನ ಚಿತ್ರ: ಅರಬ್ಬೀ ಟ್ರೇಲರ್ ಬಿಡುಗಡೆ

ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ಅವರು ಅರಬ್ಬೀ ಎಂಬ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯ ಜೊತೆಗೆ ತನ್ನ ಎರಡೂ ಕೈಗಳನ್ನು ಕಳೆದುಕೊಳ್ಳುವ ವಿಶ್ವಾಸ್, ತನ್ನ ಅಂಗವಿಕಲತೆಯ ಕಾರಣದಿಂದಲೇ ಸಮಾಜದಲ್ಲಿ ಸಾಕಷ್ಟು ಅವಮಾನ ಅನುಭವಿಸುತ್ತಾನೆ. ನಂತರ ತನ್ನನ್ನು ಅವಮಾನಿಸಿದವರೆದುರೇ ಸಾಧನೆಮಾಡಿ ತೋರಿಸಬೇಕೆಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ಸಾಧಿಸುತ್ತಾನೆ. ಸ್ವಿಮ್ಮಿಂಗ್ ಕೋಚ್ ಆಗಿ ನಾಯಕನಿಗೆ ಸ್ಪೂರ್ತಿ ತುಂಬುವ ಪಾತ್ರವನ್ನು ಅಣ್ಣಾಮಲೈ ಅವರು ನಿರ್ವಹಿಸಿದ್ದಾರೆ. ನಾಯಕನ ಗೆಳತಿಯೂ ಬೆನ್ನೆಲುಬಾಗಿ ನಿಲ್ಲುತ್ತಾಳೆ. ವಿಶ್ವಾಸ್ ಕೊನೆಗೂ ಅಂದುಕೊಂಡದ್ದನ್ನು ಸಾಧಿಸಿ ತೋರಿಸಿದನೇ ಇಲ್ಲವೇ ಎನ್ನುವುದೇ ಅರಬ್ಬೀ ಚಿತ್ರದ ಕಾನ್ಸೆಪ್ಟ್. ಶ್ರೀ ವಿಜಯ ರಾಘವೇಂದ್ರ ಪ್ರೊಡಕ್ಷನ್ಸ್ ಮೂಲಕ ಚೇತನ್ ಸಿ.ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ, ಇತ್ತೀಚೆಗೆ ಈ ಚಿತ್ರದ ಟ್ರೈಲರ್‌ನ್ನು ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ಬಿಡುಗಡೆಗೊಳಿಸಿದರು. ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಆನಂದ್ ದಿಂಡವಾರ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.

ವೇದಿಕೆಯಲ್ಲಿ ನಿರ್ಮಾಪಕ ಚೇತನ್ ಸಿ.ಎಸ್. ಮಾತನಾಡಿ ಈ ಹಿಂದೆ ಮಾಚಿದೇವ ಎಂಬ ಚಿತ್ರ ಮಾಡಿದ್ದೆ, ನಿರ್ದೇಶಕ ರಾಜ್‌ಕುಮಾರ್ ಬಂದು ಈ ಕಾನ್ಸೆಪ್ಟ್ ಹೇಳಿದಾಗ ಇಷ್ಟವಾಯಿತು. ಛಲವಿದ್ದರೆ ಏನನ್ನಾದರೂ ಮಾಡಿ ತೋರಿಸಬಹುದು ಎಂದು ಈ ಚಿತ್ರದಲ್ಲಿ ತೋರಿಸಿದ್ದೇವೆ, ಉಡುಪಿ, ಅರಬ್ಬೀ ಸಮುದ್ರದಲ್ಲಿ 32 ದಿನಗಳವರೆಗೆ ಚಿತ್ರೀಕರಿಸಿದ್ದೇವೆ, ಎಂದು ಹೇಳಿದರು.

ನಿರ್ದೇಶಕ ರಾಜಕುಮಾರ್ ಮಾತನಾಡಿ ಕಳೆದ 18 ವರ್ಷಗಳಿಂದ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಕಾರ್ಯಕ್ರಮವೊಂದರಲ್ಲಿ ವಿಶ್ವಾಸ್‌ರನ್ನು ನೋಡಿ, ಅವರ ಮೇಲೇ ಒಂದು ಸಿನಿಮಾ ಮಾಡಬಾರದೇಕೆ ಅನಿಸಿತು, ವಿಶ್ವಾಸ್ ರನ್ನು ಒಪ್ಪಿಸಿ, ನಂತರ ಕೋಚ್ ಪಾತ್ರಕ್ಕೆ ಅಣ್ಣಾ ಮಲೈ ಅವರನ್ನು ಕರೆತಂದೆವು, ಅವರು ಯಾವುದೇ ಸಂಭಾವನೆ ಪಡೆಯದೆ ಅಭಿನಯಿಸಿದರು. ಚಿತ್ರವೀಗ ಬಿಡುಗಡೆಗೆ ಸಿದ್ದವಿದೆ ಎಂದು ಹೇಳಿದರು.

ನಂತರ ನಾಯಕ ವಿಶ್ವಾಸ್ ಮಾತನಾಡಿ ಮೊದಲಬಾರಿಗೆ ಸಿನಿಮಾದಲ್ಲಿ ಆಕ್ಟ್ ಮಾಡಿದ್ದೇನೆ. ಅಣ್ಣಾಮಲೈ ಅವರೂ ನನ್ನ ಬಗ್ಗೆ ಕೇಳಿ ಒಪ್ಪಿದರು. ಚಿತ್ರದಲ್ಲಿ ನಾನೊಬ್ಬ ಈಜುಗಾರನಾಗಿ ಕಾಣಿಸಿಕೊಂಡಿದ್ದೇನೆ. ದೇವರ ಮೇಲಿನ ಕೋಪವನ್ನು ಹೇಗೆ ವ್ಯಕ್ತಪಡಿಸುವೆ, ದಿನನಿತ್ಯದ ಕೆಲಸಗಳನ್ನು ಹೇಗೆ ಮಾಡಿಕೊಳ್ಳುವೆ. ಸೊಸೈಟಿ ನನ್ನನ್ನು ಯಾವರೀತಿ ನೋಡುತ್ತದೆ ಎಂಬುದನ್ನೂ ಚಿತ್ರದಲ್ಲಿ ತೋರಿಸಿದ್ದಾರೆ. ಈವರೆಗೆ ನಾನು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಗಳಿಸಿದ್ದೇನೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಕಂಬದ ರಂಗಯ್ಯ ಮಾತನಾಡಿ ಹಂಸಲೇಖ ಅವೇ ನನಗೆ ಸ್ಪೂರ್ತಿ. ವೇದಿಕೆಯಲ್ಲಿ ಹಾಡ್ತಿದ್ದ ನನ್ನನ್ನು ಕರೆದು ಈ ಅವಕಾಶ ನೀಡಿದರು. ಚಿತ್ರದಲ್ಲಿ 2 ಹಾಡುಗಳಿದ್ದು, ಚಂದನ್ ಶೆಟ್ಟಿ, ರಾಜೇಶ್ ಕೃಷ್ಣನ್ ಹಾಡಿದ್ದಾರೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದು ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ಉಪಾಧ್ಯಕ್ಷ ವೆಂಕಟೇಶ್, ಯಶವಂತಪುರ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ವಿಶ್ವಾಸ್‌ರಂಥ ವಿಶೇಷಚೇತನರಿಗೆ ನಮ್ಮ ಸಮಾಜ ಬರೀ ಅನುಕಂಪ ತೋರಿಸದೆ, ಅವರ ಪ್ರತಿಭೆಗೆ ತಕ್ಕಂತೆ ಅವಕಾಶಗಳನ್ನು ಕೊಟ್ಟರೆ, ದೊಡ್ಡ ಸಾಧನೆ ಮಾಡುವರು ಎನ್ನುವುದೇ ಈ ಚಿತ್ರದ ಸಂದೇಶ.

Categories
ಸಿನಿ ಸುದ್ದಿ

ಸಿನಿ ಪ್ರೇಮಿ ಹೇಳಿದ ಸತ್ಯ!

ಸಿನಿಮಾ ಮಾಡಬೇಕೆಂಬ ಆಸಕ್ತಿಯಿಂದ ಐಟಿ ಕಂಪನಿಯಲ್ಲಿ ಒಳ್ಳೇ ಉದ್ಯೋಗವಿದ್ದರೂ ಸಹ ಚಿತ್ರರಂಗಕ್ಕೆ ಬಂದಿದ್ದಾರೆ ಆನಂದ್ ಅಹಿಪತಿ. ಸಿನಿಮಾ ಮಾಡುವುದಕ್ಕೂ ಮುನ್ನ ಅದೇ ಕ್ವಾಲಿಟಿಯಲ್ಲಿ ಸತ್ಯ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡಿದೆ. ಈ ಕಿರುಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಆನಂದ್ ಅಹಿಪತಿ ಅವರೇ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಯಾವುದೇ ಚಿತ್ರಕ್ಕೂ ಕಮ್ಮಿಯಿಲ್ಲದ ಹಾಗೆ ಈ ಕಿರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಆನಂದ್, 3 ವರ್ಷದ ಹಿಂದೆ ಐಟಿ ಕಂಪನಿಯಲ್ಲಿ ವರ್ಕ್ ಮಾಡ್ತಿದ್ದೆ. ಆದರೆ ನನಗೆ ಇಂಟರೆಸ್ಟ್ ಇದ್ದದ್ದು ಆಕ್ಟಿಂಗ್ ನಲ್ಲಿ. ಅನುಪಂ ಖೇರ್ ಇನ್ ಸ್ಟಿಟ್ಯೂಟ್ ನಲ್ಲಿ ಕೋರ್ಸ್ ಮುಗಿಸಿ, ಈ ಶಾರ್ಟ್ ಫಿಲಂನಲ್ಲಿ ಅಭಿನಯಿಸಿದೆ. ಹಠ ಹಿಡಿದು 38 ನಿಮಿಷಗಳ ಈ ಚಿತ್ರ ನಿರ್ದೇಶನ‌ ಮಾಡಿದ್ದೇನೆ. ಇದು ಪ್ರೀಕ್ವೇಲ್ ಟು ಫ್ಯೂಚರ್ ಫಿಲಂ ಅನ್ನಬಹುದು, ಹಣದ ಬಗ್ಗೆ ಯೋಚಿಸದೆ ಕ್ವಾಲಿಟಿ ಹೆಚ್ಚು ಆದ್ಯತೆ ಕೊಟ್ಟು ಈ ಚಿತ್ರ ಮಾಡಿದ್ದೇನೆ.

ಸತ್ಯ ಅಂದ್ರೆ ನಿಜ, ಈತ ಒಬ್ಬ ಸೈಕೋ ಕಿಲ್ಲರ್, ಆತನ ಮನದಲ್ಲಿ ಏನೇನು ನಡೀತಿದೆ ಅನ್ನೋದೇ ಈ ಚಿತ್ರದ ಕಾನ್ಸೆಪ್ಟ್. ಆತ ಏನೇನು ಮಾಡ್ತಾನೆ, ಯಾಕೆ ಮಾಡ್ತಾನೆ, ಹೇಗೆ ಮಾಡ್ತಾನೆ ಅಂತ ಈ ಚಿತ್ರದಲ್ಲಿ ತೋರಿಸಿದ್ದೇವೆ. ಕೊನೇವರೆಗೆ ನೋಡಿದಾಗ ಅದು ಅರ್ಥವಾಗುತ್ತದೆ ಎಂದರು. ನಾಯಕಿ ಪಾತ್ರ ಮಾಡಿರುವ ಸೌಮ್ಯ ಮಾತನಾಡಿ ಈ ಸಿನಿಮಾ ಆನಂದ್ ರ ಕನಸು, ಇದೊಂದು ವಿಭಿನ್ನ ಜಾನರ್ ಸಿನಿಮಾ, ನಾನೊಬ್ಬ ಕಲಾವಿದೆಯಾಗೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು.

ದುರ್ಗಾ ಸಿನಿಮಾಸ್ ಮೂಲಕ ನಿರ್ದೇಶಕ ಆನಂದ್ ಅಹಿಪತಿ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿದ್ದು, ಅಜಯ್ ಶಿವರಾಜ್ ಸಂಗೀತ ನಿರ್ದೆಶನ ಮಾಡಿದ್ದಾರೆ. ಕಾರ್ತೀಕ್ ಸಿದ್ದರಾಜು ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.

Categories
ಸಿನಿ ಸುದ್ದಿ

ಪೃಥ್ವಿರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್ ಟ್ರೇಲರ್ ರಿಲೀಸ್

ಭಾರತೀಯ ಚಿತ್ರರಂಗದ ಅತಿ ದೊಡ್ಡ ಸಾಹಸ, ದಿ ಗೋಟ್ ಲೈಫ್ ನಿಮ್ಮಮಾರ್ಚ್ 28 ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಮೇಕೆ ಜೀವನವು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಛಾಪು ಮೂಡಿಸುತ್ತಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಚಿತ್ರ ಟ್ರೇಲರ್ ಬಂದಿದೆ. ವಿಸ್ಮಯ ಹುಟ್ಟಿಸುವ ಕಥೆಯು ನಿಜ ಜೀವನದ ನಜೀಬ್ ಮತ್ತು ಉತ್ತಮ ಜೀವನವನ್ನು ಹುಡುಕುವ ಕ್ಲೇಶಗಳಿಂದ ತುಂಬಿದ ಅವನ ಅವಾಸ್ತವ ಪ್ರಯಾಣದ ಸುತ್ತ ಸುತ್ತುತ್ತದೆ. ಪೃಥ್ವಿರಾಜ್ ಸುಕುಮಾರನ್ ಅವರ ಬೆರಗುಗೊಳಿಸುವ ರೂಪಾಂತರ ಮತ್ತು ವಿವಿಧ ನೋಟಗಳು, ಹಾಗೆಯೇ ವಿಶಾಲವಾದ ಮತ್ತು ಭವ್ಯವಾದ ಮರುಭೂಮಿಯ ಗೂಸ್‌ಬಂಪ್-ಪ್ರಚೋದಿಸುವ ದೃಶ್ಯಗಳೊಂದಿಗೆ, ಟ್ರೈಲರ್ ದಿ ಮೇಕೆ ಜೀವನದ ಜಗತ್ತಿನಲ್ಲಿ ಸುಂದರವಾದ ಡೈವ್ ಅನ್ನು ನೀಡುತ್ತದೆ.

ಟ್ರೇಲರ್ ಮತ್ತು ಚಿತ್ರದ ಕುರಿತು ಮಾತನಾಡುವ ಬ್ಲೆಸ್ಸಿ, “ಆಡು ಲೈಫ್ ಇದುವರೆಗಿನ ಶ್ರೇಷ್ಠ ಬದುಕುಳಿಯುವ ಸಾಹಸ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ, ಏಕೆಂದರೆ ಯಾರಿಗಾದರೂ ನಂಬಲಾಗದ ಸಂಗತಿ ಸಂಭವಿಸಿದೆ. ಸತ್ಯವು ಎಂದಿಗೂ ಕಾಲ್ಪನಿಕ ಕಥೆಗಿಂತ ಅಪರಿಚಿತವಾಗಿರಲಿಲ್ಲ. ವಾಸ್ತವವಾಗಿ ಕಾದಂಬರಿಯ ಅಡಿಬರಹವು ಚಲನಚಿತ್ರವನ್ನು ಸ್ವತಃ ಅಳವಡಿಸಿಕೊಂಡಿದೆ ‘ನಾವು ಬದುಕದ ಜೀವನವು ನಮಗೆ ಎಲ್ಲಾ ಪುರಾಣಗಳು’. ಇದು ಒಂದು ದಶಕವಾಗಿದೆ, ಆದರೆ ನಾನು ರಿಚರ್ಡ್ ಅಟೆನ್‌ಬರೋ ಗಾಂಧಿಯನ್ನು ತಯಾರಿಸಲು ಕಳೆದ ಅರ್ಧ ಸಮಯವನ್ನು ಮಾತ್ರ ಕಳೆದಿದ್ದೇನೆ, ಇದು ದೊಡ್ಡ ವಿಷಯವಲ್ಲ. ಪ್ರೇಕ್ಷಕರು ಚಿತ್ರ ಮತ್ತು ನಾವು ಅವರಿಗೆ ಪ್ರಸ್ತುತಪಡಿಸುತ್ತಿರುವ ಜಗತ್ತನ್ನು ಆನಂದಿಸುತ್ತಾರೆ ಎಂದು ನಾನು ಭಾವಿಸುತ್ತೇನೆ.


ದಿ ಗೋಟ್ ಲೈಫ್‌ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡ ಪೃಥ್ವಿರಾಜ್ ಸುಕುಮಾರನ್, “ಇದು ಸುದೀರ್ಘ ಪ್ರಯಾಣ ಮತ್ತು ಸುಲಭವಲ್ಲ; ಒಂದು ದಶಕದ ಸುದೀರ್ಘ ಕಾಯುವಿಕೆಯ ನಂತರ ಪ್ರೇಕ್ಷಕರು ನಮ್ಮ ಶ್ರಮ ಮತ್ತು ಪ್ರಕ್ಷುಬ್ಧತೆಯ ಫಲವನ್ನು ವೀಕ್ಷಿಸುತ್ತಾರೆ. ಕೋವಿಡ್ ದಿನಗಳಿಂದ ಇಂದಿನವರೆಗೆ, ಮೇಕೆ ಜೀವನವು ಅನಿರೀಕ್ಷಿತ ಮತ್ತು ಮರೆಯಲಾಗದ ಪ್ರಯಾಣವಾಗಿದೆ. ಬ್ಲೆಸ್ಸಿ ಸರ್ ಅವರ ದೂರದೃಷ್ಟಿಯ ಭಾಗವಾಗಲು ಮತ್ತು ಎ.ಆರ್.ರೆಹಮಾನ್ ಅವರಂತಹ ಮೇಷ್ಟ್ರನ್ನು ಸಂಗೀತಕ್ಕೆ ಜೀವ ತುಂಬುವುದನ್ನು ವೀಕ್ಷಿಸಲು ಇದು ಗೌರವವಾಗಿದೆ. ಮೇಕೆಯ ಜೀವನ ನಮಗೆ ಕೇವಲ ಒಂದು ಚಲನಚಿತ್ರವಲ್ಲ, ಇದು ನಮ್ಮ ಹೃದಯವನ್ನು ಮುಟ್ಟಿದ ಮತ್ತು ನಮ್ಮೊಂದಿಗೆ ಶಾಶ್ವತವಾಗಿ ಉಳಿಯುವ ಕಥೆಯಾಗಿದೆ. ಪ್ರೇಕ್ಷಕರೂ ಅದೇ ರೀತಿ ಭಾವಿಸುತ್ತಾರೆ ಎಂದು ನಾವು ಭಾವಿಸುತ್ತೇವೆ.

ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಲೋಕದ ಅತ್ಯಂತ ಜನಪ್ರಿಯ ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡುಜೀವಿತಂ’ ಕಾದಂಬರಿಯನ್ನು ಆಧರಿಸಿದೆ, ಇದನ್ನು ವಿದೇಶಿ ಭಾಷೆಗಳು ಸೇರಿದಂತೆ 12 ವಿವಿಧ ಭಾಷೆಗಳಲ್ಲಿ ಅನುವಾದಿಸಲಾಗಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿದ್ದಾರೆ ಮತ್ತು ಇದು 90 ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ತೀರದಿಂದ ವಿದೇಶದಲ್ಲಿ ಅದೃಷ್ಟವನ್ನು ಹುಡುಕುತ್ತಾ ವಲಸೆ ಬಂದ ಯುವಕ ನಜೀಬ್‌ನ ಜೀವನದ ನೈಜ ಕಥೆಯನ್ನು ಅನುಸರಿಸುತ್ತದೆ.


ವಿಷುಯಲ್ ರೊಮ್ಯಾನ್ಸ್‌ನಿಂದ ನಿರ್ಮಿಸಲ್ಪಟ್ಟ ದಿ ಗೋಟ್ ಲೈಫ್ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಭಾರತೀಯ ನಟರಾದ ಅಮಲಾ ಪೌಲ್ ಮತ್ತು ಕೆ.ಆರ್. ಗೋಕುಲ್ ಜೊತೆಗೆ ಖ್ಯಾತ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕ್ ಅಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮುಂಬರುವ ಚಿತ್ರದ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್. ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಕ್ರಮವಾಗಿ. ಚಿತ್ರದ ಅತ್ಯಾಕರ್ಷಕ ದೃಶ್ಯಗಳನ್ನು ಸುನಿಲ್ ಕೆ ಎಸ್ ಚಿತ್ರೀಕರಿಸಿದ್ದಾರೆ ಮತ್ತು ಎ. ಶ್ರೀಕರ್ ಪ್ರಸಾದ್ ಸಂಕಲನ ಮಾಡಿದ್ದಾರೆ.

ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಿಸಲಾಗುತ್ತಿರುವ ಈ ಚಲನಚಿತ್ರವು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಇದುವರೆಗಿನ ಅತಿದೊಡ್ಡ ಸಾಹಸೋದ್ಯಮವಾಗಿದೆ, ಇದು ನಿರ್ಮಾಣ ಗುಣಮಟ್ಟ, ಕಥೆ ಹೇಳುವಿಕೆ ಮತ್ತು ನಟನಾ ಪರಾಕ್ರಮದಲ್ಲಿ ಹೊಸ ಮಾನದಂಡಗಳನ್ನು ಹೊಂದಿಸುತ್ತದೆ. ಅನುಕರಣೀಯ ಪ್ರದರ್ಶನಗಳು ಮತ್ತು ಆತ್ಮವನ್ನು ಕಲಕುವ ಹಿನ್ನೆಲೆ ಸ್ಕೋರ್‌ನೊಂದಿಗೆ, ಚಲನಚಿತ್ರವು ಜೀವನಕ್ಕಿಂತ ದೊಡ್ಡದಾದ ನಾಟಕೀಯ ಅನುಭವವನ್ನು ನೀಡುತ್ತದೆ.

ವಿಷುಯಲ್ ರೊಮ್ಯಾನ್ಸ್ ಒಂದು ವಿಶಿಷ್ಟವಾದ ಭಾರತೀಯ ಚಲನಚಿತ್ರ ನಿರ್ಮಾಣ ಸಂಸ್ಥೆಯಾಗಿದ್ದು, ಕೇರಳದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ, ಇದು ಅಸಾಧಾರಣ ರಾಷ್ಟ್ರೀಯ ಉಪಸ್ಥಿತಿಯನ್ನು ಹೊಂದಿದೆ. 7 ವರ್ಷಗಳ ಅಲ್ಪಾವಧಿಯಲ್ಲಿ, ಕಂಪನಿಯು ಸೃಜನಶೀಲ ಶಕ್ತಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ

Categories
ಸಿನಿ ಸುದ್ದಿ

ಕೆರೆಬೇಟೆಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಥ್: ಮೂರನೇ ಹಾಡು ಬಂತು

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ಈಗಾಗಲೇ ಸಿನಿಮಾದಿಂದ ಟೀಸರ್, ಟ್ರೈಲರ್ ಮತ್ತು ಎರಡು ಹಾಡುಗಳು ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್ ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.

‘ಕಣ್ಣುಗಳೆ ಕಳೆದು ಹೋದಾಗ…’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ. …. ಈ ಸುಂದರ ಹಾಡಿಗೆ…. ಸಿದ್ಧಾರ್ಥ ಬೆಳ್ಮಣ್ಣು ಧ್ವನಿ ನೀಡಿದ್ದು ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇತ್ತೀಚಿಗಷ್ಟೇ ಸಿನಿಮಾತಂಡ 2ನೇ ಹಾಡನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ರಿಲೀಸ್ ಮಾಡಿ ಅಭಿಮಾನಿಗಳ ಗಮನ ಸೆಳೆದಿದ್ದರು. ಇದೀಗ ಸಿನಿಮಾ ತಂಡ ಚಿತ್ರದ ಪ್ಯಾತೋ ಸಾಂಗ್ ರಿಲೀಸ್ ಮಾಡಿದೆ. ಈ ಹಾಡಿಗೆ ಮನ ಸೋತ ಅಶ್ವಿನಿ ಪುನೀತ್ ರಾಜಕುಮಾರ್ ಸಂತಸ ವ್ಯಕ್ತಪಡಿಸಿದರು.

ಹಾಡು ರಿಲೀಸ್ ಮಾಡುವ ನೆಪದಲ್ಲಿ ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾ ತಂಡ ಒಂದಿಷ್ಟು ಇಂಟರೆಸ್ಟಿಂಗ್ ಮಾಹಿತಿಯನ್ನ ಹಂಚಿಕೊಂಡರು.

ನಿರ್ದೇಶಕ ರಾಜ್ ಗುರು ಮಾತನಾಡಿ ನಿರ್ಮಾಪಕ ಅಶ್ವಿನಿ ಪುನೀತ್ ರಾಜಕುಮಾರ್ ಹಾಡನ್ನು ರಿಲೀಸ್ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ‘ದೊಡ್ಮನೆಗೂ ನನಗೂ ಒಂದು ಸಂಬಂಧವಿದೆ‌. ಅಪ್ಪು ಸರ್ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಮಣ್ಣಿನ ಕಥೆಗಳ ಬಗ್ಗೆ ತುಂಬಾ ಮಾತನಾಡುತ್ತಿದ್ವಿ. ಈ ರೀತಿಯ ಸಿನಿಮಾ ಅವರಿಗೆ ತುಂಬಾ ಇಷ್ಟ’ ಎಂದರು.

ನಾಯಕಿ ಬಿಂಧು ಶಿವರಾಮ್ ಮಾತನಾಡಿ, ‘ಮಲೆನಾಡಿನ ಭಾಷೆ ನನಗೆ ತುಂಬಾ ಕಷ್ಟವಾಯಿತು. ಇಡೀ ಸಿನಿಮಾ ತಂಡ ಮಲೆನಾಡಿನವರಾಗಿದ್ದರಿಂದ ಅದೇ ಭಾಷೆಯನ್ನು ಮಾತನಾಡುತ್ತಿದ್ದರು. ಹಾಗಾಗಿ ನನಗೂ ಅವರ ಜೊತೆ ಸೇರಿ ಮಲೆನಾಡಿನ ಭಾಷೆ ಮಾತನಾಡಲು ಸುಲಭವಾಯ್ತು. ಈ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಗಟ್ಟಿಯಾಗಿದೆ’ ಎಂದರು.

ನಾಯಕ ಗೌರಿಶಂಕರ್ ಮಾತನಾಡಿ, ‘ಅಶ್ವಿನಿ ಮೇಡಮ್ ಸಿನಿಮಾದ ಟೀಸರ್, ಟ್ರೈಲರ್ ಹಾಡನ್ನು ನೋಡಿ ತುಂಬಾ ಇಷ್ಟಪಟ್ಟರು. ಈ ಸಿನಿಮಾ ನನಗೆ ಗೆಲ್ಲಲೇ ಬೇಕಾಗಿದೆ. ಏಕೆಂದರೆ ನಾನು ತುಂಬಾ ಸೋಲನ್ನು ಕಂಡಿದ್ದೇನೆ. ಸೋತು ಮನೆಯಲ್ಲಿ ಕೂರುವುದು ತುಂಬಾ ಕಷ್ಟ. ಸಿನಿಮಾ ಸಹವಾಸವೇ ಬೇಡ ಅಂತ ಇದ್ದೆ. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಹಾಗಾಗಿ ಈ ಸಿನಿಮಾ ಒಪ್ಪಿಕೊಂಡೆ. ತುಂಬಾ ಪ್ರಿಪರೇಷನ್ ಮಾಡಿದ್ದೇವೆ, ಗೆಲುವು ನನಗೆ ಅನಿವಾರ್ಯವಾಗಿದೆ’ ಎಂದರು.

ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

Categories
ಸಿನಿ ಸುದ್ದಿ

ಉದಯ ಟಿವಿಯಲ್ಲೂ ಸೂರ್ಯವಂಶನ ಮೋಡಿ: ಅನಿರುದ್ಧ್ ನಟನೆಯ ಹೊಸ ಧಾರಾವಾಹಿ ಮಾರ್ಚ್ 11 ರಿಂದ ಶುರು

ಡಾ.ವಿಷ್ಣುವರ್ಧನ್ ಅಭಿನಯದ ’ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ’ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ ಮಾಡುತ್ತಿದ್ದಾರೆ.

ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ’ಸೂರ್ಯವಂಶ’ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ. ವಂಶದ ಕುಡಿ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದೆ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ.

ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ. ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ. ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.

ನಾಯಕನಾಗಿ ಅನಿರುದ್ದ್‌ ಜಟ್ಕರ್, ನಾಯಕಿಯಾಗಿ ಸುರಭಿ. ತಾತನಾಗಿ ಸುಂದರರಾಜ್, ಖಳನಾಗಿ ದಿ.ಉದಯ್‌ಕುಮಾರ್ ಪುತ್ರ ವಿಕ್ರಂಉದಯಕುಮಾರ್. ಉಳಿದಂತೆ ರವಿಭಟ್, ಸುಂದರಶ್ರೀ, ಲೋಕೇಶ್‌ಬಸವಟ್ಟಿ, ಪುಷ್ಪಾಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರು ನಟಿಸುತ್ತಿದ್ದಾರೆ.

ಮಾರ್ಚ್,11 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

error: Content is protected !!