Categories
ಸಿನಿ ಸುದ್ದಿ

ಪಿಂಕಿ ಹಿಂದೆ ದುರಾಸೆಯ ಮನಸು : ಸಾಕಾರವಾಗದ ಸಂಬಂಧಗಳ ಕನಸು

ಚಿತ್ರ ವಿಮರ್ಶೆ

ವಿಜಯ್ ಭರಮಸಾಗರ

ಚಿತ್ರ : ಪಿಂಕಿ ಎಲ್ಲಿ ?
ನಿರ್ಮಾಪಕ : ಕೃಷ್ಣೇಗೌಡ
ನಿರ್ದೇಶಕ : ಪೃಥ್ವಿ ಕೋಣನೂರು
ತಾರಾಗಣ : ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ ಕೋಣನೂರು ಇತರರು.

ಸಣ್ಣಮ್ಮ ಮನೇಲಿ ಇಲ್ಲ… ಆದರೆ, ಇಲ್ಲಿ ಬುರ್ಕಾ ಬಿದ್ದಿದೆ! ಪಿಂಕಿ ಎಲ್ಲಿ?

ಹೀಗೆ ಆತಂಕದಲ್ಲೇ ತನ್ನ ಹೆತ್ತ ಮಗು ಕಾಣದ್ದನ್ನುಬಕಂಡು ಗದ್ಗದಿತರಾಗುವ ತಾಯಿ ಹೃದಯ ಚಡಪಡಿಸೋ ಹೊತ್ತಿಗೆ, ಅಲ್ಲೊಂದು ಘಟನೆ ನಡೆದು ಹೋಗಿರುತ್ತೆ.

ಹೌದು, ವಾಸ್ತವಕ್ಕೆ ಹತ್ತಿರವಾದ, ಸಮಾಜದಲ್ಲಿ ಈಗಲೂ ಹಾಡಹಗಲೇ ನಡೆಯುವ ಘಟನೆಗಳಿಗೆ ಪಿಂಕಿ ಸಾಕ್ಷಿಯಾಗುತ್ತಾಳೆ. ಒಂದೊಳ್ಳೆಯ ಎಳೆ ಇಟ್ಟುಕೊಂಡು ನಿರ್ದೇಶಕ ಪೃಥ್ವಿ ಕೋಣನೂರು ಮನಸ್ಸಿಗೆ ಹಿಡಿಸುವ, ಕೊಂಚ ಎದೆ ಭಾರವಾಗಿಸುವ, ವಸ್ತುಸ್ಥಿತಿಯ ಚಿತ್ರ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಡಿ-ಬಡಿ- ಕಡಿ ಸಿನಿಮಾಗಳ ನಡುವೆ ಪಿಂಕಿ ವಿಭಿನ್ನ ಎನಿಸಿಕೊಳ್ಳುತ್ತಾಳೆ.

ಒಂದೇ ಮಾತಲ್ಲಿ ಹೇಳುವುದಾದರೆ, ಪಿಂಕಿ ಕಾಡುವ ಮತ್ತು ನೋಡುವ ಚಿತ್ರ. ಆಧುನಿಕ ಜಗತ್ತಲ್ಲಿ ಎಲ್ಲವೂ ಗೌಣ. ಇಲ್ಲಿ ಸಂಬಂಧಗಳ ಮೌಲ್ಯ ಲೆಕ್ಕಕ್ಕಿಲ್ಲ. ಹಣಕ್ಕಷ್ಟೇ ಬೆಲೆ ಎಂಬ ಸೂಕ್ಷ್ಮ ಅಂಶವನ್ನು ಅಷ್ಟೇ ಪರಿಣಾಮಕಾರಿಯಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ.

ಈಗಂತೂ ಇಲ್ಲಿ ಪ್ರೀ, ಸಂಬಂಧಗಳಿಗೆ ಅರ್ಥವೇ ಇಲ್ಲದಂತಾಗಿದೆ. ಜಂಜಾಟದ ಬದುಕಿನ ಮಧ್ಯೆ ಮನಸ್ಸುಗಳು ಕುಸಿಯುತ್ತಿವೆ. ಅರ್ಥ ಕಳೆದುಕೊಂಡ ಮನಸ್ಸುಗಳು ಅನಾಹುತಕ್ಕೆ ಕಾರಣವಾಗುತ್ತಿವೆ. ಅಂಥದ್ದೊಂದು ಅಂಶ ಮತ್ತು ಸಂದೇಶ ಪಿಂಕಿಯೊಳಗಿದೆ.

ಇಲ್ಲಿ ತಪ್ಪಿನ ಅರಿವಿದೆ, ಆತಂಕವಿದೆ, ಆಕ್ರಂದನವಿದೆ, ನೋವು, ತಳಮಳ, ಭಾವುಕತೆ, ಪಾಪಪ್ರಜ್ಞೆಯೂ ಇದೆ. ಇದರೊಂದಿಗೆ ಆಸೆ, ದುರಾಸೆಗಳ ಗುಚ್ಛವೂ ಇದೆ.
ಕಥೆಯಲ್ಲಿ ಒಂದಷ್ಟು ಆಶಯವಿದೆ. ಚಿತ್ರಕಥೆಯಲ್ಲಿ ಇನ್ನಷ್ಟು ಬಿಗಿ ಹಿಡಿತ ಇರಬಹುದಿತ್ತು. ಎಲ್ಲವೂ ಇಲ್ಲಿ ನೈಜ ಎನಿಸುವುದರಿಂದ ಅಲ್ಲಲ್ಲಿ ಕಾಣುವ ತಪ್ಪುಗಳನ್ನು ಬದಿಗೊತ್ತಲು ಅಡ್ಡಿ ಇಲ್ಲ.

ನಿರ್ದೇಶಕರ ಕಲ್ಪನೆ, ನಿರೂಪಣೆ, ಆಯ್ಕೆ ಮಾಡಿಕೊಂಡ ಪಾತ್ರಗಳು ಸಿನಿಮಾದ ವೇಗ ಹೆಚ್ಚಿಸಿವೆ. ಅದಕ್ಕೆ ತಕ್ಕಂತಹ ಸಂಭಾಷಣೆ, ಛಾಯಾಗ್ರಹಣ, ಹಿನ್ನೆಲೆ ಸಂಗೀತ ಕೂಡ ಪಿಂಕಿಗೆ ಬಲ ಕೊಟ್ಟಿದೆ. ಸಮಾಜದಲ್ಲಿ ನಡೆಯೋ ಘಟನೆಯೊಂದು ಹೇಗೆಲ್ಲಾ ತಿರುವು ಪಡೆದುಕೊಳ್ಳುತ್ತೆ ಅನ್ನೋದು ಹೈಲೆಟ್. ಆ ಕುತೂಹಲ ಇದ್ದರೆ, ಒಮ್ಮೆ ಪಿಂಕಿ ನೋಡಲ್ಲಡ್ಡಿಯಿಲ್ಲ.

ಕಥೆ ಏನು?

ಪಿಂಕಿ ಎಂಬ ಎಂಟು ತಿಂಗಳ ಹೆಣ್ಣು ಮಗು ಕಥೆಯ ಕೇಂದ್ರ ಬಿಂದು. ಬೆಂಗಳೂರು ಎಂಬ ದಟ್ಟ ಕಾಂಕ್ರೀಟ್ ನಗರದಲ್ಲಿ ಒಂದು ಕುಟುಂಬ. ಆ ಮನೆಯಲ್ಲಿ ಪಿಂಕಿ ಮತ್ತು ಆಕೆಯ ಅಪ್ಪ ಅಮ್ಮ ವಾಸ. ದುಡಿಯಲು ಹೊರ ಹೋಗುವ ಅಪ್ಪ ಅಮ್ಮ ಪಿಂಕಿ ನೋಡಿಕೊಳ್ಳಲೆಂದೆ ಕೆಲಸದಾಕೆಯನ್ನು ನೇಮಿಸುತ್ತಾರೆ. ಅತ್ತ ಪಿಂಕಿಯ ಪೋಷಕರು ಕೆಲಸಕ್ಕೆ ಹೊರಡುತ್ತಿದ್ದಂತೆ ಇತ್ತ ಕೆಲಸವಳ ಚಾಲಾಕಿ ಬುದ್ಧಿ ಅನಾವರಣಗೊಳ್ಳುತ್ತೆ. ಅದೇನು ಅನ್ನೋದು ಸಸ್ಪೆನ್ಸ್.

ಪಿಂಕಿ ಕೇವಲ 8 ತಿಂಗಳಲ್ಲೇ ದುಡಿಯೋ ಮಗುವಾಗುತ್ತಾಳೆ! ಅಲ್ಲೊಂದು ಜಾಲ ಪಿಂಕಿಯನ್ನು ದುರುಪಯೋಗ ಮಾಡಿಕೊಳ್ಳುತ್ತೆ. ಹೀಗಿರುವಾಗಲೇ ಪಿಂಕಿ ಕಳೆದುಹೋಗುತ್ತಾಳೆ. ಪಿಂಕಿ ಕಳೆದದ್ದು ಹೇಗೆ? ಅವಳನ್ನು ಹೊತ್ತು ಹೊಯ್ದವರಾರು? ಇಷ್ಕಕ್ಕೂ ಪಿಂಕಿ ಭಿಕ್ಷೆ ಬೇಡಿ ಬದುಕುವ ಮಹಿಳೆಯೊಬ್ಬಳ ಕೈ ಸೇರುತ್ತಾಳೆ ಹಾಲಲ್ಲಿ ಅಮಲು ಬರುವ ಆಲ್ಕೋಹಾಲ್ ಸೇರಿಸಿ ಅವಳನ್ನು ಮಲಗುವಂತೆ ಮಾಡುವ ಭಿಕ್ಷುಕಿಯೊಬ್ಬಳು, ತನ್ನ ಕುಡಿತದ ಚಟಕ್ಕೆ ಪಿಂಕಿಯನ್ನೇ ಬೀದಿ ಬದಿ ಬಿಟ್ಟುಬಿಡುತ್ತಾಳೆ!!

ಅಲ್ಲಿಂದ ಪಿಂಕಿಯ ಹುಡುಕಾಟ ಶುರುವಾಗುತ್ತೆ. ಅಲ್ಲಿಂದಲೇ ಸಂಬಂಧಗಳ ಒಂದೊಂದೇ ಕರಾಳ ಮುಖ ಬೆತ್ತಲಾಗುತ್ತವೆ. ಒಂದು ಕಡೆ ಮಕ್ಕಳಿಲ್ಲದ ಪರಿತಪಿಸುವ ಸ್ಲಂ ಬಳಿ ವಾಸಿಸುವ ದಂಪತಿ ಕೈಗೆ ಪಿಂಕಿ ಸಿಕ್ಕಾಗ ನಡೆಯೋ ಘಟನಾವಳಿ ಇಮ್ನೂ ವಿಶೇಷ ಎನಿಸುತ್ತವೆ. ಒಂದಮದೇ ಜಾಲಗಳ ದರ್ಶನವೂ ಆಗುತ್ತದೆ. ಇದೆಲ್ಲದರ ನಡುವೆ ಕಳಚಿ ಬಿದ್ದ ಸಂಬಂಧಗಳ ಪರಿಚಯವಾಗುತ್ತದೆ. ಭಾವನೆಗಳಿಲ್ಲದೆ ಬದುಕುವ ಮಂದಿಯ ವ್ಯಕ್ತಿತ್ವ ಬಯಲಾಗುತ್ತೆ. ಇದೆಲ್ಲದರ ನಡುವೆ ಪಿಂಕಿ ಎಲ್ಲಿ? ಆಕೆ ಸಿಕ್ತಾಳ ಇಲ್ಲವೋ ಅನ್ನೋದೇ ಇಲ್ಲಿರುವ ಚಿತ್ರಣ.

ಹಾಗೆ ನೋಡಿದರೆ, ಇಲ್ಲಿ ಪಿಂಕಿ ನೆಪಮಾತ್ರ. ಅವಳ ಹುಡುಕುವ ಜರ್ನಿಯಲ್ಲಿ ಬರುವ ದೃಶ್ಯಗಳು ಹುಬ್ಬೇರಿಸುತ್ತವೆ. ಗಂಡ ಹೆಂಡತಿ ಮತ್ತು ಸ್ನೇಹಿತರ ನಡುವಿನ ಭಾವನೆಗಳ ಬಣ್ಣ ಕಳಚುತ್ತದೆ. ಪಿಂಕಿಯ ಹುಡುಕಾಟದ ಜೊತೆಯಲ್ಲಿ ಸಮಾಜದ ಅವ್ಯವಸ್ಥೆ ರಾಚುತ್ತದೆ.

ಯಾರು ಹೇಗೆ?


ಇಂತಹ ಕಥೆಗೆ ನುರಿತ ಕಲಾವಿದರ ಅಗತ್ಯವಿಲ್ಲ. ಯಾಕೆಂದರೆಬಿಲ್ಲಿ ಗಟ್ಟಿ ಕಥೆ ಇದೆ. ಅಲ್ಲಿ ಯಾರೇ ಇದ್ದರೂ ಕಥೆಯೇ ಎದ್ದುಬಕಾಣುತ್ತೆ. ಅಕ್ಷತಾ ಅಮ್ಮನಾಗಿ ಇಷ್ಟವಾಗುತ್ತಾರೆ. ಮಗು ಕಳಕೊಂಡು ಚಡಪಡಿಸುವ ನೈಜ ಅಭಿನಯ ಮೂಲಕ ಮೆಚ್ಚುಗೆ ಆಗುತ್ತಾರೆ. ದೀಪಕ್ ಸುಬ್ರಹ್ಮಣ್ಯ, ಪೃಥ್ವಿ ಸೇರಿದಂತೆ ಕೊಳಗೇರಿ ವಾಸಿಗಳಾಗಿ ಕಾಣಿಕೊಂಡ ಸಣ್ಣಮ್ಮ, ಅನುಷ ಕಲಾವಿದರಿಗೆ ಇದು‌ ಹೊಸತಾದರೂ ನೈಜವಾಗಿಯೇ ಕಾಣಿಸಿಕೊಂಡಿದ್ದಾರೆ. ಕಥೆಗೆ ಪೂರಕವಾಗಿ ಸಂಗೀತವೂ ಇದೆ.

ಅದೇನೆ ಇರಲಿ, ನಮ್ಮ ನಡುವೆ ನಡೆಯೋ ಇಂತಹ ಘಟನೆಗಳನ್ನು ದೃಶ್ಯರೂಪಕ್ಕೆ ಅಳವಡಿಸಿ ಮನಕಲಕುವಂತೆ ಮಾಡಿರುವ ತಂಡದ ಪ್ರಯತ್ನ ಸಾರ್ಥಕ.

Categories
ಸಿನಿ ಸುದ್ದಿ

ಸಿರಿಗನ್ನಡಂ ರಂಜನೆ! ಜೂನ್ 5 ರಿಂದ ಮೆಗಾ ಧಾರಾವಾಹಿ, ರಿಯಾಲಿಟಿ ಶೋ

ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ “ಸಿರಿಕನ್ನಡ” ವಾಹಿನಿಯಲ್ಲಿ ಜೂನ್ 5 ರಿಂದ “ಊರ್ಮಿಳಾ”,‌ “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂ ರಿಯಾಲಿಟಿ ಶೋ ಆರಂಭವಾಗಲಿದೆ.

ನಮ್ಮ “ಸಿರಿಕನ್ನಡ” ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ “ಸಿರಿಕನ್ನಡ” ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ “ಊರ್ಮಿಳಾ” ಹಾಗೂ “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ನಮ್ಮ ವಾಹಿನಿಯಿಂದ ಅಪಾರ ವೆಚ್ಚದಲ್ಲಿ ಈ ರಿಯಾಲಿಟಿ ಶೋ ನಿರ್ಮಾಣವಾಗುತ್ತಿದೆ.

ಈ ಶೋನಲ್ಲಿ ಭಾರಿ ಮೊತ್ತದ ಉಡುಗೊರೆಗಳು ಇದೆ. ಮುಂದೆ ನಮ್ಮ ವಾಹಿನಿಯ ವೀಕ್ಷಕರಿಗೆ ಅರ್ಧಗಂಟೆಗೊಮ್ಮೆ ಪ್ರಶ್ನೆ ಕೇಳುವುದು. ಗೆದ್ದವರಿಗೆ ವಿಶೇಷ ಬಹುಮಾನ ನೀಡುವ ಯೋಜನೆ ಕೂಡ ಹಾಕಿಕೊಂಡಿದ್ದೇವೆ ಎಂದರು ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ.‌ ಇದೇ ಸಂದರ್ಭದಲ್ಲಿ ಸಂಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಅವರು ಉಪಸ್ಥಿತರಿದ್ದರು.

ನನ್ನನ್ನು ಹಾಸ್ಯ ನಟನಾಗಿ ಗುರುತಿಸಿದ್ದೀರಿ. “ಸಖತ್ ಜೋಡಿ” ಎಂಬ ಸಖತ್ ಕಾರ್ಯಕ್ರಮವನ್ನು ನಾನು ಹಾಗೂ ಹೇಮಲತಾ ನಿರೂಪಣೆ ಮಾಡುತ್ತಿದ್ದೇವೆ. ಈಗಾಗಲೇ ಮೂರು ಎಪಿಸೋಡ್ ಚಿತ್ರೀಕರಣವಾಗಿದೆ. “ಊರ್ಮಿಳಾ” ಧಾರಾವಾಹಿ ತಂಡದವರು, ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಟಾಪರ್ಸ್ ಹಾಗೂ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6ಗಂಟೆಗೆ “ಸಖತ್ ಜೋಡಿ” ಪ್ರಸಾರವಾಗಲಿದೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ ಎಂದರು ಹಿತೇಶ್.

ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಪಂಕಜ್ ಹಾಗೂ ರಶ್ಮಿತಾ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ “ಊರ್ಮಿಳಾ” ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ.

ನಾನು ಚಿಕ್ಕ ವಯಸ್ಸಿನಲ್ಲಿ ಬಾಲ ಕಲಾವಿದನಾಗಿ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದೆ. ಈಗ ಈ ಧಾರಾವಾಹಿ ಮೂಲಕ ಕಿರುತೆರೆಗೆ ಮತ್ತೆ ಬಂದಿದ್ದೇನೆ ಎಂದರು ಪಂಕಜ್. ರಶ್ಮಿತಾ, ಆಶಾರಾಣಿ, ಶಿವು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

ರವಿ.ಆರ್.ಗರಣಿ ಕಥೆ ಬರೆದಿರುವ “ಬ್ರಾಹ್ಮಿನ್ಸ್ ಕೆಫೆ” ವಿಭಿನ್ನ ಕಥಾಹಂದರ ಹೊಂದಿದೆ. ಜೂನ್ 5ರಿಂದ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಶಿವು ಎಂಬ ಹೊಸಹುಡುಗ ಈ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸುತ್ತಿದ್ದಾನೆ.

ಗಾಯತ್ರಿ ಸೆಲ್ವಂ ಹಾಗೂ ಸೆಲ್ವಂ ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಸಂಜೀವ್ ತಗಡೂರು ತಿಳಿಸಿದರು. ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀನಾಥ್ ವಸಿಷ್ಠ, ಪ್ರಥಮ ಪ್ರಸಾದ್, ಶಿವು, ರಾಮಸ್ವಾಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ಅಮರಾವತಿಯಲ್ಲಿ ಭಯಾನಕ ದೆವ್ವ! ಹೀಗೊಂದು ವಿಚಿತ್ರ ಹಾರರ್ ಕಥೆ

ಭಯಪಡಿಸೋ ಸಿನಿಮಾಗಳು ಕನ್ನಡಕ್ಕೆ ಹೊಸದಲ್ಲ. ಅದರಲ್ಲೂ ಹಾರರ್ ಸಿನಿಮಾಗಳಿಗೆ ಇಲ್ಲಿ ಬರವಿಲ್ಲ. ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಹಾರರ್ ಸಿನಿಮಾಗಳು ಯಶಸ್ಸು ಕಂಡಿವೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲು ಈಗ ಅಮರಾವತಿ ಚಿತ್ರ ರೆಡಿಯಾಗುತ್ತಿದೆ.

ಸದ್ಉ ಹಾರರ್ ಸಿನಿಮಾಗಳು ಸಕ್ಸಸ್‌ ಸೂತ್ರದಂತೆ ಬಳಕೆಯಾಗುತ್ತಿವೆ. ಇದರಲ್ಲಿ ಒಂದಷ್ಟು ನವೀನ ಪ್ರಯೋಗಗಳು ಆಗುತ್ತಿದ್ದಾವಾದರೂ ಮತ್ತೆ ಕೆಲ ಚಿತ್ರಗಳು ನಿಜಕ್ಕೂ ಭೂತದರ್ಶನ ಮಾಡಿಸುವಂತಿರುತ್ತವೆ. ಸಧ್ಯ ಕನ್ನಡದಲ್ಲಿ ಈ ವರೆಗೂ ಬಂದ ಎಲ್ಲಾ ಹಾರರ್‌ ಸಿನಿಮಾಗಳನ್ನೂ ಮೀರಿಸುವ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದೆ. ಅದು ಅಮರಾವತಿ.


ಬ್ರಾಡ್‌ ವೇ ಪಿಚ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ವಾಸು ರವರ ಸಾರಥ್ಯವಿದೆ. ಪ್ರಿಯಾ, ರಮ್ಯ ಮತ್ತು ಕೃಷ್ಣ ಪ್ರಮುಖ ಪಾತ್ರದಲ್ಲಿರಿತ್ತಾರೆ. ಮೊದಲಹಂತದ ಚಿತ್ರೀಕರಣ ನಡೆಯುತ್ತಿದೆ.. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ.

ಇಡೀ ಚಿತ್ರತಂಡ ಚಿತ್ರ ರಸಿಕರನ್ನು ಸೆಳೆಯುವ ಭರವಸೆ ಹೊಂದಿರುತ್ತದೆ. ಈಗ ತಯಾರಾಗುತ್ತಿರುವ ಅಮರಾವತಿ ಚಿತ್ರ ಕರ್ನಾಟಕ ಮಾತ್ರವಲ್ಲದೆ ಇಡೀ ಭಾರತದಲ್ಲಿ ಸಂಚಲನ ಸೃಷ್ಠಿಸುವಂತಹ ಕಥಾವಸ್ತು ಮತ್ತು ಮೇಕಿಂಗ್‌ ನಿಂದ ಕೂಡಿದೆಯಂತೆ.

Categories
ಸಿನಿ ಸುದ್ದಿ

ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ: ಇದು ಡಾಲಿ ನಿರ್ಮಾಣದ‌ ಚಿತ್ರ

ನಟ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ.

ಮಂಡ್ಯ, ಮಳವಳ್ಳಿ,‌ ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ ಟಗರು ಪಲ್ಯ.

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ‌ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Categories
ಸಿನಿ ಸುದ್ದಿ

ಬರೆದ ಕವಿತೆಯೊಂದು ಜನಮೆಚ್ಚುಗೆ ಪಡೆದಿದೆ! ಮೆಲೋಡಿ ಡ್ರಾಮಾ ಹಾಡು ಎಲ್ರೂಗು ಇಷ್ಟವಾಯ್ತು

ಪ್ರೈಮ್ ಸ್ಟಾರ್ ಸ್ಟುಡಿಯೋ ಬ್ಯಾನರ್ ಬಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ “ಮೆಲೋಡಿ ಡ್ರಾಮ” ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ “ಯಾರು ಬರೆಯದ ಕವಿತೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಅಷ್ಟೇ ಅಲ್ಲ ಅದು, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ ಹಾಡನ್ನು ಪಲಾಕ್ ಮುಚ್ಚಲ್ ಹಾಗೂ ವರುಣ್ ಪ್ರದೀಪ್ ಹಾಡಿದ್ದಾರೆ.

ಚಿತ್ರದ ಮೊದಲ ಹಾಡು ಇದಾಗಿದ್ದು, ಒಟ್ಟು ಏಳು ಹಾಡುಗಳು ಈ ಚಿತ್ರದಲ್ಲಿದೆ. ಸೋನು ನಿಗಮ್ , ಕೈಲಾಶ್ ಖೇರ್, ಪಲಾಕ್ ಮುಚ್ವಲ್, ಮುಂತಾದ ಖ್ಯಾತ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ಪ್ರಥಮಪ್ರತಿ ಸಿದ್ದವಾಗಿದ್ದು, ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಸತ್ಯ ಈ ಚಿತ್ರದ ನಾಯಕನಾಗಿ, ಸುಪ್ರೀತ ಸತ್ಯನಾರಾಯಣ ಅವರು ನಾಯಕಿಯಾಗಿ ನಟಿಸಿದ್ದಾರೆ.

ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಟರಂಗ, ಬಾಲು ರಾಜವಾಡಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ರಿಷಿ ಈಗ ಶೈತಾನ್! ಕ್ರೈಮ್ ಡ್ರಾಮಾ ವೆಬ್ ಸಿರೀಸ್ ಗೆ ಹೊಸ ಅವತಾರ!! ಡಿಸ್ನಿ ಹಾಟ್ ಸ್ಟಾರ್ ನಲ್ಲಿ ಜೂ.15ಕ್ಕೆ ಶುರು…

ಈಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ.

ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, ಲವ್ ಸ್ಟೋರಿ ಯಾವುದೇ ಇರಲಿ ಎಲ್ಲದಕ್ಕೂ ಸರಿಹೊಂದುವ ನಟ ರಿಷಿ. ಅದಕ್ಕೆ ಉದಾರಹಣೆ ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೆ ಹೀಗೆ ಸಿನಿಮಾಗಳು. ಪ್ರತಿ ಸಿನಿಮಾದಲ್ಲಿಯೂ ಹೊಸ ಬಗೆಯ ಕಂಟೆಂಟ್, ಕ್ಯಾರೆಕ್ಟರ್ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ತಾವೊಬ್ಬ ಪ್ರತಿಭಾನ್ವಿತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಸದ್ಯ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ರಿಷಿ ಒಂದಷ್ಟು ಹೊಸ ಪ್ರಾಜೆಕ್ಟ್ ಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಬರೀ ಸಿನಿಮಾಗಳಲ್ಲಿ ಮಾತ್ರವಲ್ಲ ಈಗ ವೆಬ್ ಸಿರೀಸ್ ಜಗತ್ತಿನಲ್ಲಿಯೂ‌ ತಮ್ಮ ನಟನ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ತೆಲುಗಿನ ಹೆಸರಾಂತ ನಿರ್ದೇಶಕರಾದ ಮಹಿ ರಾಘವ್ ನಿರ್ದೇಶನದ ಕ್ರೈಮ್ ಡ್ರಾಮಾ ಶೈತಾನ್ ಮೂಲಕ ರಿಷಿ ತೆಲುಗು ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ವೆಬ್ ಸರಣಿಯಲ್ಲಿ ರಿಷಿ ಬಾಲಿ‌ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕ ಹಾಗೂ ಖಳನಾಯಕ ಎರಡು ಶೇಡ್ ನಲ್ಲಿರುವ ಬಾಲಿ ಪಾತ್ರದ ಸಣ್ಣ ಝಲಕ್ ರಿಲೀಸ್ ಆಗಿದ್ದು, ಕಂಪ್ಲೀಟ್ ಮಾಸ್ ಅವತರಾದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 15ರಂದು ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ಶೈತಾನ್ ಸ್ಟ್ರೀಮಿಂಗ್ ಆಗಲಿದೆ. ತೆಲುಗು ಭಾಷೆ ಜೊತೆಗೆ ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂನಲ್ಲಿಯೂ ವೆಬ್ ಸರಣಿ ಮೂಡಿಬರಲಿದೆ.

ರವಿಕಾಳೆ, ಜಾಫರ್ ಸಾದಿಕ್, ಲೀನಾ, ಮಣಿಕಂದನ್ ಮುಂತಾದವರು ಶೈತಾನ್ ಸಿರೀಸ್ ಭಾಗವಾಗಿದ್ದಾರೆ. ಹಾಗ್ ನೋಡಿದರೆ ತೆಲುಗು ಚಿತ್ರರಂಗದಲ್ಲಿಯೂ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ. ಹಾಗಿದ್ದರೂ ರಿಷಿ ಅವರಿಗೆ ಶೈತಾನ್ ವೆಬ್ ಸಿರೀಸ್ ಸಿಗೋದಿಕ್ಕೆ ಅವರ ಅಭಿನಯವೇ ಕಾರಣ. ರಿಷಿ ಸಿನಿಮಾಗಳನ್ನು ನೋಡಿ ಥ್ರಿಲ್ ಆಗಿದ್ದ ನಿರ್ದೇಶಕ ಮಹಿ ರಾಘವ್ ತಮ್ಮ ವೆಬ್ ಸಿರೀಸ್ ತಾವೇ ನಟಿಸುವ ಆಫರ್ ಇಟ್ಟಿದ್ದರು. ಅದಕ್ಕೆ‌ ನೋ ಎನ್ನದ ರಿಷಿ, ಬಾಲಿಯಾಗಿ ಅಬ್ಬರಿಸಿದ್ದಾರೆ. ಇತ್ತೀಚೆಗೆ ಕನ್ನಡ ಸಿನಿಮಾಗಳು ಹಾಗೂ ಕನ್ನಡ ಕಲಾವಿದರ ನಟನೆಗೆ ಒಂದೊಳ್ಳೆ ಬೆಲೆ ಸಿಗುತ್ತಿದೆ. ನಮ್ಮ ಇಂಡಸ್ಟ್ರೀಯ ಸ್ಟಾರ್ಸ್ ಅಕ್ಕಪಕ್ಕದ ಸಿನಿ ಲೋಕದಲ್ಲಿ ಮಿಂಚು ಹರಿಸುತ್ತಿದ್ದಾರೆ. ಈಗ ಅದಕ್ಕೆ ಹೊಸ ಸೇರ್ಪಡೆ ರಿಷಿ.

ಕಾಮಿಡಿ, ಸಸ್ಪೆನ್ಸ್ ಪಾತ್ರದ ಮೂಲಕ ಗಮನಸೆಳೆದಿದ್ದ ಅವರೀಗ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಬಹುಕೋಟಿ ಬಜೆಟ್ ನಲ್ಲಿ ತಯಾಗಿರುವ ಶೈತಾನ್ ಮೂಲಕ ಇಡೀ ಇಂಡಿಯನ್ ಸಿನಿಲೋಕಕ್ಕೆ ಪರಿಚಯವಾಗಲಿದ್ದಾರೆ. ಕನ್ನಡದ ಹುಡ್ಗನ ಪ್ರತಿಭೆ ಗಮನಿಸಿ, ಅವರಿಂದ ಮಾತ್ರ ಈ ಪಾತ್ರ ಮಾಡಲು ಸಾಧ್ಯ ಅಂತಾ ಅವಕಾಶ ನೀಡಿರುವ ನಿರ್ದೇಶಕ ಮಹಿ ರಾಘವ್ ಹಾಗೂ ಇಡೀ ಚಿತ್ರತಂಡಕ್ಕೆ ರಿಷಿ ಧನ್ಯವಾದ ಅರ್ಪಿಸಿದ್ದಾರೆ.

Categories
ಸಿನಿ ಸುದ್ದಿ

ಹಿರಿಯ ಕಲಾವಿದೆ ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರು: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಅಂದ್ರು ಸನ್ಮಾನಿಸಿದರು

ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ.

ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ನೆರವೇರಿದೆ.

ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ‘ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ” ಪ್ರಶಸ್ತಿ ಪ್ರದಾನ ಮಾಡಿ ಹಿರಿಯ ಚೇತನವನ್ನು ಗೌರವಿಸಿದ್ದಾರೆ. ಐವತ್ತಕ್ಕೂ ಹೆಚ್ಚು ಕಲಾಬಳಗವೇ ಲೀಲಾವತಿ ಅವರ ಮನೆಗೆ ಆಗಮಿಸಿತ್ತು.

ಹಿರಿಯ ನಟರಾದ ಶ್ರೀಧರ್, ದೊಡ್ಡಣ್ಣ, ಸುಂದರ್ ರಾಜ್, ಜೈಜಗದೀಶ್, ಹಿರಿಯ ನಟ ಗಿರಿಜಾ ಲೋಕೇಶ್, ಪದ್ಮಾವಸಂತಿ, ಅಂಜಲಿ, ಭವ್ಯ, ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ನಟಿ ಪೂಜಾಗಾಂಧಿ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ಹಾಗೂ ಮಂಡಳಿ ಸದಸ್ಯರು ಸೇರಿದಂತೆ 50ಕ್ಕೂ ಹೆಚ್ಚು ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ ನಟ ನಟಿಯರು ಲೀಲಾವತಿಯರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು. ನಟ ನಟಿಯರನ್ನು ಬರಮಾಡಿಕೊಂಡ ಲೀಲಾವತಿ ಅವರ ಮಗ ವಿನೋದ್ ರಾಜ್ ಕಲಾವಿದರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿದರು. ಲೀಲಾವತಿ ಅವರ ಸಿನಿಮಾಗಳ ಹಾಡುಗಳ, ನೃತ್ಯ ಕಾರ್ಯಕ್ರಮದ ಹೈಲೆಟ್ಸ್.

Categories
ಸಿನಿ ಸುದ್ದಿ

ರಾಮ ಜೆಂಟಲ್ ಮ್ಯಾನ್ ಅವತಾರ! ರಾಮನ ಅವತಾರ ಹಾಡು ರಿಲೀಸ್

ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ.

ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ ಸ್ಥಳಗಳಲ್ಲಿ ಮಾಡಿದ್ದು… ವೆಸ್ಟೆರ್ನ್ ಶೈಲಿಯ ಸಂಗೀತಕ್ಕೆ ಪಕ್ಕಾ ದೇಸಿ ಟಚ್ ಕೊಟ್ಟಂತಿದೆ. ಸಾಹಿತ್ಯ ಕೇಳಲು ಇಂಪಾಗಿರುವದರ ಜೊತೆಗೆ ಪ್ರೇಕ್ಷರ ಮುಖದಲ್ಲಿ ನಗುವನ್ನು ತರಿಸುವುದರಲ್ಲಿ ಯಶಸ್ವಿಯಾಗಿದೆ. .. ತಮ್ಮದೇ ವಿಭಿನ್ನ ಶೈಲಿಯ ನಟನೆಯಿಂದ ಜನರ ಮನಸ್ಸನ್ನು ಗೆದ್ದಿರುವ ರಿಷಿ ರಾಮ ಐಸ್ ಆ ಜೆಂಟಲ್ ಮ್ಯಾನ್ ಹಾಡಿನಲ್ಲಿ ಕುಣಿದು ಜನರನ್ನು ಮನೋರಂಜಿಸಿದ್ದಾರೆ. ಈ ಹಾಡಿನ ಮುಖಾಂತರ ಜನರ ಮನಸ್ಸನ್ನು ಮತ್ತೊಮ್ಮೆ ಗೆದ್ದಿರುವ ಚಿತ್ರತಂಡ ಚಿತ್ರದ ಉಳಿದ ಹಾಡುಗಳನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದೆ.

ಟೀಸರ್ ಮೂಲಕ ಭರಪೂರ ಕಾಮಿಡಿ ಉಣಬಡಿಸಿದ್ದ ರಾಮನ ಅವಾತರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದೆ.

, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ರಾಮನ ಅವತಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ರವಿ ಬಸ್ರೂರ್ ಪುತ್ರ ಸಿನಿಮಾಗೆ ಎಂಟ್ರಿ: ಕ್ಲಿಕ್ ಮೂಲಕ ಪವನ್ ಬಣ್ಣ

ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದಾರೆ.

ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಕೋ ಡೈರೆಕ್ಟರ್ ಆಗಿ ವೀರು ಸಾಥ್ ಕೊಟ್ಟಿದ್ದಾರೆ.

ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಅಂಬರೀಶ್ ಹುಟ್ಟು ಹಬ್ಬಕ್ಕೆ ಪುತ್ರ ಅಭಿಷೇಕ್ ವಿಶೇಷ ವೀಡಿಯೋ

ಮೇ 29. ಡಾ. ಅಂಬರೀಶ್ ಅವರ 71ನೇ ಹುಟ್ಟು ಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈ ಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ.

ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿದೆ.

ಸದ್ಯ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಷೇಕ್, ಜೂನ್ ತಿಂಗಳಲ್ಲಿ ಅವೀವಾ ಜೊತೆಗೆ ದಾಂಪತ್ಯ ಚಿತ್ರಕ್ಕೆ ಕಾಲಿಡುತ್ತಿದ್ದಾರೆ.

‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್ಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ನಟಿಸಿದ್ದು, ದುನಿಯಾ ಸೂರಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

error: Content is protected !!