Categories
ಸಿನಿ ಸುದ್ದಿ

ರೆಡ್‌ ಶೇಡ್‌ ಟೊಮೆಟೊ ! ದಿ ಕಲರ್‌ ಆಫ್‌ ಟೊಮೆಟೊ ಟೀಸರ್‌ಗೆ ಜನ ಮೆಚ್ಚುಗೆ

“ರಕ್ತ ಚಿಮ್ಮುವ ಅಖಾಡದಲ್ಲಿ ನಿಷ್ಠೆಯ ನೂರು ತಲೆಗಳು ಬಿದ್ದರೂ, ಪ್ರತಿಷ್ಠೆಯ ತಲೆ ಮಾತ್ರ ಬೀಳಬಾರದು… ಮಾರ್ಕೆಟ್‌ನಲ್ಲಿ ಮಾರೋಕೆ ಏನ್‌ ತಂದಿದ್ದೇವೆ ಅನ್ನೋದರ ಮೇಲೆ ಬೆಲೆ..” ಇದಿಷ್ಟೇ ಡೈಲಾಗ್‌ ಆ ಟೀಸರ್‌ನಲ್ಲಿದೆ. ಅದರ ಮೇಕಿಂಗ್‌ ನೋಡಿದವರಿಗೆ ಅದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಸಿನಿಮಾ ಎನಿಸದೇ ಇರದು. ಅಷ್ಟರಮಟ್ಟಿಗೆ ನಿರ್ದೇಶಕ ತಾಯಿ ಲೋಕೇಶ್‌ ಕಟ್ಟಿಕೊಟ್ಟಿದ್ದಾರೆ. ಶೀರ್ಷಿಕೆ ಹೇಳುವಂತೆಯೇ, ಇದೊಂದು ಟೊಮೆಟೊ ಕಥೆ ಎನಿಸುತ್ತೆ. ಟೊಮ್ಯಾಟೊ ಕಲರ್‌ ರೆಡ್‌ ಆಗಿದ್ದರೂ, ಅದರಲ್ಲಿ ರೆಡ್‌ ಶೇಡ್‌ ಜಾಸ್ತೀನೆ ಇರಬಹುದಾ ಎಂಬ ಪ್ರಶ್ನೆ ಟೀಸರ್‌ ನೋಡಿದವರಿಗೆ ಗೊತ್ತಾಗುತ್ತೆ. ಇದು ವಾಸ್ತವತೆಗೆ ಹತ್ತಿರದ ಕಥೆ ಅನ್ನುವುದನ್ನು ಹೇಳುತ್ತದೆ

ಕನ್ನಡದಲ್ಲಿ ದಿನ ಕಳೆದಂತೆ ಹೊಸಬರ ಸಿನಿಮಾಗಳು ಶುರುವಾಗುತ್ತಲೇ ಇವೆ. ಅದರಲ್ಲೂ ಹೊಸ ಪ್ರತಿಭಾವಂತರು ಅಂದರೆ ಸುಮ್ಮನೆ ಅಲ್ಲ ಬಿಡಿ. ಮೊದಲ ಪ್ರಯತ್ನದಲ್ಲೇ ಸುದ್ದಿಯಾಗಿಬಿಡುತ್ತಾರೆ. ಇಲ್ಲೀಗ ಹೇಳಹೊರಟಿರುವುದು ಹೊಸ ಸಿನಿಮಾದ ಫಸ್ಟ್‌ ಲುಕ್‌ ಕುರಿತು. ಅಷ್ಟೇ ಅಲ್ಲ, ಈಗಾಗಲೇ ಆ ಚಿತ್ರದ ಟೀಸರ್‌ ಕೂಡ ಬಿಡುಗಡೆಯಾಗಿದೆ. ಪ್ರತಾಪ್‌ ನಾರಾಯಣ್‌ ಅಭಿನಯದ ಈ ಚಿತ್ರದ ಫಸ್ಟ್‌ ಲುಕ್‌ ವಿಶೇಷವೆನಿಸಿದೆ. ಹೌದು, ಅ ಚಿತ್ರದ ಹೆಸರು. “ದಿ ಕಲರ್‌ ಆಫ್‌ ಟೊಮೆಟೊ” ಚಿತ್ರದ ಶೀರ್ಷಿಕೆಯೇ ವಿಭಿನ್ನ ಅಂದುಕೊಂಡರೆ, ಕಥೆ ಅದಕ್ಕಿಂತಲೂ ವಿಭಿನ್ನವಾಗಿರುತ್ತೆ ಎನ್ನುವುದರಲ್ಲಿ ಎರಡು ಮಾತಿಲ್ಲ ಬಿಡಿ.

ಯಾಕೆಂದರೆ, ಈ ಚಿತ್ರದ ಕಥೆ ಬರೆದಿರೋದು. ಕೋಟಿಗಾನಹಳ್ಳಿ ರಾಮಯ್ಯ. ಈ ಹೆಸರೇ ಸಾಕು ಅದ್ಭುತ ಕಥೆಗಾರ ಅನ್ನುವುದಕ್ಕೆ. ಈಗಾಗಲೇ “ಮೂಕ ಹಕ್ಕಿ” ಸಿನಿಮಾನೇ ಸಾಕು ಅವರ ಬರಹ ಎಂಥದ್ದು ಅಂತ ತಿಳಿಯೋಕೆ. ಅದಾಗಲೇ ಸಾಬೀತು ಮಾಡಿರುವ ಕೋಟಿಗಾನಹಳ್ಳಿ ರಾಮಯ್ಯ, ಈಗ ಮತ್ತೊಂದು ಸಿನಿಮಾ ಮೂಲಕ ಹೊಸ ವಿಷಯ ಹೇಳೋಕೆ ಬಂದಿದ್ದಾರೆ. ಅವರ ಬರಹದಲ್ಲಿ ಸಾಕಷ್ಟು ವಿಶೇಷತೆಗಳಿರುತ್ತವೆ ಎನ್ನುವುದನ್ನು ಹೆಚ್ಚೇನು ಹೇಳಬೇಕಿಲ್ಲ. ಇನ್ನೂ ಬಿಡುಗಡೆಯ ಹಂತದಲ್ಲಿರುವ ಕನ್ನೇರಿ ಸಿನಿಮಾಗೂ ಕೋಟಿಗಾನಹಳ್ಳಿ ರಾಮಯ್ಯ ಅವರದೇ ಬರವಣಿಗೆ ಇದೆ. ಈಗ “ದಿ ಕಲರ್‌ ಆಫ್‌ ಟೊಮೆಟೊ” ಸಿನಿಮಾಗೂ ಕಥೆ ಬರೆದಿದ್ದಾರೆ.
ಈ ಸಿನಿಮಾಗೆ ಸ್ವಾತಿ ಕುಮಾರ್ ನಿರ್ಮಾಪಕರು. ತಾಯಿ ಲೋಕೇಶ್ ನಿರ್ದೇಶನ ಮಾಡುತ್ತಿರುವ ಸಿನಿಮಾ ಇದು. ಈಗಾಗಲೇ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಅದರೊಂದಿಗೆ ಟೀಸರ್‌ ಕೂಡ ರಿಲೀಸ್‌ ಮಾಡಲಾಗಿದೆ.

“ರಕ್ತ ಚಿಮ್ಮುವ ಅಖಾಡದಲ್ಲಿ ನಿಷ್ಟೆಯ ನೂರು ತಲೆಗಳು ಬಿದ್ದರೂ, ಪ್ರತಿಷ್ಟೇಯ ತಲೆ ಮಾತ್ರ ಬೀಳಬಾರದು… ಮಾರ್ಕೆಟ್‌ನಲ್ಲಿ ಮಾರೋಕೆ ಏನ್‌ ತಂದಿದ್ದೇವೆ ಅನ್ನೋದರ ಮೇಲೆ ಬೆಲೆ..” ಇದಿಷ್ಟೇ ಡೈಲಾಗ್‌ ಆ ಟೀಸರ್‌ನಲ್ಲಿದೆ. ಅದರ ಮೇಕಿಂಗ್‌ ನೋಡಿದವರಿಗೆ ಅದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಸಿನಿಮಾ ಎನಿಸದೇ ಇರದು.

ದಿ ಕಲರ್‌ ಆಫ್‌ ಟೊಮೆಟೊ ಟೀಸರ್

ಅಷ್ಟರಮಟ್ಟಿಗೆ ನಿರ್ದೇಶಕ ತಾಯಿ ಲೋಕೇಶ್‌ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಶೀರ್ಷಿಕೆ ಹೇಳುವಂತೆಯೇ, ಇದೊಂದು ಟೊಮ್ಯಾಟೊ ಕಥಾಹಂದರ ಹೊಂದಿರುವ ಸಿನಿಮಾ. ಟೊಮೆಟೊ ಕಲರ್‌ ರೆಡ್‌ ಆಗಿದ್ದರೂ, ಅದರಲ್ಲಿ ರೆಡ್‌ ಶೇಡ್‌ ಜಾಸ್ತೀನೆ ಇರಬಹುದಾ ಎಂಬ ಪ್ರಶ್ನೆ ಟೀಸರ್‌ ನೋಡಿದವರಿಗೆ ಗೊತ್ತಾಗುತ್ತೆ.

ಅದರಲ್ಲೂ, ಇದು ವಾಸ್ತವತೆಗೆ ಹತ್ತಿರವಾಗಿರುವ ಕಥೆ ಅನ್ನುವುದನ್ನು ಈ ಟೀಸರ್‌ ಹೇಳುತ್ತದೆ. ರೈತ ಇಂದು ಟೊಮೆಟೊ ಬೆಳೆಗೆ ಬೆಂಬಲ ಸಿಗದೆ ಪರದಾಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ರೈತ ರೊಚ್ಚಿಗೆದ್ದರೆ ರಕ್ತಪಾತವೂ ಗ್ಯಾರಂಟಿ ಅನ್ನೋದು ಯಾವಾಗಲೋ ಸಾಬೀತಾಗಿದೆ. ಅದೇನೆ ಇರಲಿ, ಇಲ್ಲಿ ನಿರ್ದೇಶಕ ತಾಯಿ ಲೋಕೇಶ್‌ ಏನು ಹೇಳೋಕೆ ಹೊರಟಿದ್ದಾರೋ ಗೊತ್ತಿಲ್ಲ. ಟೀಸರ್‌ ನೋಡಿದ ಮೇಲೆ, ಅದೊಂದು ಪಕ್ಕಾ ಮಾಸ್‌ ಎಲಿಮೆಂಟ್ಸ್‌ ಇರುವ ಸಿನಿಮಾ ಅನ್ನೋದು ಗೊತ್ತಾಗುತ್ತೆ. ಟೀಸರ್‌ ಮೇಕಿಂಗ್‌ ಜೊತೆಗೆ ಹಿನ್ನೆಲೆ ಸಂಗೀತ ಇಲ್ಲಿ ಗಮನಸೆಳೆಯುತ್ತದೆ. ಅಲ್ಲೊಂದು ಕುತೂಹಲವೂ ಇದೆ. ಆ ಕುತೂಹಲ ಏನೆಂಬುದಕ್ಕೆ ಸಿನಿಮಾ ಬರೋವರೆಗೆ ಕಾಯಬೇಕು.

ನಿರ್ದೇಶಕ ತಾಯಿ ಲೋಕೇಶ್‌ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಹಾಗಾಗಿ ಒಂದಷ್ಟು ಹೋರಾಟದ ಛಾಯೆ ಈ ಟೀಸರ್‌ನಲ್ಲೂ ಈಗಾಗಲೇ ಎದ್ದು ಕಾಣುತ್ತಿದೆ. ಸಾಂಸ್ಕೃತಿಕ ಲೋಕದ ಬಗ್ಗೆ ಅಪಾರ ಒಲವು ಇಟ್ಟುಕೊಂಡಿರುವ ತಾಯಿ ಲೋಕೇಶ್, ಹಲವು ಬೀದಿ ಬದಿಯ ಬದುಕನ್ನು, ಪಾತ್ರಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು ದಾಖಲಿಸಿದ್ದಾರೆ.

ದೊಡ್ಡವರ, ಚಿಂತಕರ ಒಡನಾಟವಿರಿಸಿಕೊಂಡಿರುವ ಅವರಿಗೆ ಸಿನಿಮಾ ಹುಚ್ಚು ಹೆಚ್ಚು. ಸಿನಿಮಾ ಕಥೆ ಬಗ್ಗೆ ಅಪಾರ ಆಸಕ್ತಿ ತೋರುವ ಅವರಿಗೆ ಸಿನೆಮಾವನ್ನು ಹೇಗೆ ಕಟ್ಟಬೇಕು ಎಂಬ ಕುರಿತು ಅರಿವಿದೆ. ಒಳ್ಳೆಯ ಆಲೋಚನೆಗಳೊಂದಿಗೆ “ದಿ ಕಲರ್‌ ಆಫ್‌ ಟೊ‌ಮೆಟೊ” ಸಿನಿಮಾ ಮಾಡಲು ಹೊರಟಿರುವ ಅವರ ತಂಡಕ್ಕೆ “ಸಿನಿಲಹರಿ” ಶುಭ ಹಾರೈಸಲಿದೆ.

Categories
ಸಿನಿ ಸುದ್ದಿ

ಬರ್ಕ್ಲಿ ಲಿರಿಕಲ್‌ ಸಾಂಗ್‌ ರಿಲೀಸ್‌ ; ಹಾಡು ಕೇಳಿದ ಮಂದಿಯಿಂದ ಮೆಚ್ಚುಗೆ

ಹಬ್ಬಗಳು ಬಂದರೆ ಸಿನಿಮಾ ಮಂದಿಗೆ ಅದೊಂದು ರೀತಿ ದೊಡ್ಡ ಸಂಭ್ರಮ. ಕಾರಣ, ತಮ್ಮ ಸಿನಿಮಾಗಳ ಪೋಸ್ಟರ್‌, ಟೀಸರ್‌, ಟ್ರೇಲರ್‌, ಸಾಂಗ್‌ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರುವಿಟ್ಟುಕೊಳ್ಳುತ್ತಾರೆ. ಆ ಸಾಲಿಗೆ “ಬರ್ಕ್ಲಿʼ ಸಿನಿಮಾ ಕೂಡ ಸೇರಿದೆ. ಹೌದು, ಗೌರಿ-ಗಣೇಶ ಹಬ್ಬಕ್ಕೆ “ಬರ್ಕ್ಲಿ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಿದ್ದು, ಎಲ್ಲೆಡೆ ಮೆಚ್ಚುಗೆಗೂ ಪಾತ್ರವಾಗಿದೆ.

ಸಂತೋಷ್ ಬಾಲರಾಜ್ ಹೀರೋ ಆಗಿರುವ ಈ ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ “ಬರ್ಕ್ಲಿ” ಚಿತ್ರದ ಲಿರಿಕಲ್ ಸಾಂಗ್ ಝೇಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಹದ್ದೂರ್ ಚೇತನ್ ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ‌ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಇರುವ ಚಿತ್ರವನ್ನು ಸಂತೋಷ್ ಎಂಟರ್ ಪ್ರೈಸಸ್ ಬ್ಯಾನರ್‌ನಲ್ಲಿ ಆನೇಕಲ್ ಬಾಲರಾಜ್ ನಿರ್ಮಿಸಿದ್ದಾರೆ.
ಸದ್ಯ ಚಿತ್ರದ ಮೊದಲ ಪ್ರತಿ ಸಿದ್ಧವಾಗುತ್ತಿದೆ. “ಕರಿಯ”, “ಗಣಪ”, “ಕರಿಯ ೨”, ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದ ಮತ್ತೊಂದು ಅದ್ದೂರಿ ಚಿತ್ರ “ಬರ್ಕ್ಲಿ‌”. ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.


ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ. ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಇತರರು ನಟಿಸಿದ್ದಾರೆ.

Categories
ಸಿನಿ ಸುದ್ದಿ

ಶಿವಾಜಿಯಾಗಿ ಮತ್ತೆ ರಮೇಶ್‌ ಅರವಿಂದ್‌ ; ಪಾರ್ಟ್‌‌ 2 ಬರಲಿದ ಶಿವಾಜಿ ಸುರತ್ಕಲ್

ಕನ್ನಡದಲ್ಲಿ ಈಗಾಗಲೇ ಭಾಗ-2 3 ಸಿನಿಮಾಗಳಿಗೆ ಲೆಕ್ಕವಿಲ್ಲ. ಪಾರ್ಟ್‌ 1, ಪಾರ್ಟ್‌ 2 ಮತ್ತು ಪಾರ್ಟ್‌ 3 ಸಿನಿಮಾಗಳು ಈಗಾಗಲೇ ಬಂದು ಹೋಗಿವೆ. ಆ ಸಾಲಿಗೆ ಈಗ ರಮೇಶ್‌ ಅರವಿಂದ್‌ ಅಭಿಯದ ಸಿನಿಮಾ ಕೂಡ ಸೇರಿದೆ. ಹೌದು, ಕಳೆದ 2020ರಲ್ಲಿ ಬಿಡುಗಡೆಯಾಗಿದ್ದ “ಶಿವಾಜಿ ಸುರತ್ಕಲ್” ಸಿನಿಮಾ ಪ್ರೇಕ್ಷಕರ ಮನಗೆದ್ದಿತ್ತು. ಸ್ವತಃ ವಿತರಕರಿಂದಲೇ ಬ್ಲಾಕ್ ಬಸ್ಟರ್ ಸಿನಿಮಾ ಎನಿಸಿಕೊಂಡಿತ್ತು. ರಮೇಶ್ ಅರವಿಂದ್ ಅವರ ಈ ಚಿತ್ರವನ್ನು ಆಕಾಶ್ ಶ್ರೀವತ್ಸ ನಿರ್ದೇಶಿಸಿದ್ದರು. ರೇಖಾ ಕೆ.ಎನ್ ಮತ್ತು ಅನೂಪ್ ಅವರು ನಿರ್ಮಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ ಭಾಗ -2 ಮಾಡ ಹೊರಟಿರುವುದು ಗೊತ್ತೇ ಇದೆ.

ಕಥೆ, ಚಿತ್ರಕಥೆ ರೆಡಿ ಮಾಡಿ ಕೊಂಡಿರುವ ಚಿತ್ರತಂಡ, ಅಕ್ಟೋಬರ್‌ನಲ್ಲಿ ಚಿತ್ರೀಕರಿಸುವ ಯೋಜನೆ ರೂಪಿಸಿದೆ.
ಶಿವಾಜಿಯಾಗಿ ರಮೇಶ್ ಅರವಿಂದ್ ಕಾಣಿಸಿಕೊಳ್ಳಲಿದ್ದು, ರಾಧಿಕಾ ನಾರಾಯಣ್, ರಘು ರಾಮನಕೊಪ್ಪ ಮತ್ತು ವಿದ್ಯಾಮೂರ್ತಿ ಭಾಗ-2ರಲ್ಲೂ ಮುಂದುವರಿಯಲಿದ್ದಾರೆ. ಉಳಿದಂತೆ ಚಿತ್ರದಲ್ಲಿ ಒಂದಷ್ಟು ಹೊಸ ಪ್ರತಿಭೆಗಳು ಕಾಣಿಸಿಕೊಳ್ಳಲಿವೆ. “ಶಿವಾಜಿ ಸುರತ್ಕಲ್” ಎರಡು ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿತ್ತು.

ಆದರೆ, ಭಾಗ-2 ಬಹುಕೋನಗಳಿರುವ ಚಿತ್ರಕಥೆ ಹೊಂದಿದ್ದು, ಪತ್ತೇದಾರಿ ಕತೆಯಾಗಿರುವುದರಿಂದ ಕೊಲೆಗಾರನ ಹುಡುಕಾಟದ ಅಂಶಗಳು ಇಲ್ಲಿ ಹೈಲೈಟ್‌ ಆಗಿರಲಿವೆ. ಚಿತ್ರಕ್ಕೆ ಗುರುಪ್ರಸಾದ್ ಕ್ಯಾಮೆರಾ ಹಿಡಿಯಲಿದ್ದು, ಉಳಿದಂತೆ ತಾಂತ್ರಿಕ ತಂಡದ ಆಯ್ಕೆ ಇಷ್ಟರಲ್ಲೇ ನಡೆಯಲಿದೆ. “ಶಿವಾಜಿ ಸುರತ್ಕಲ್‌” ಚಿತ್ರದ ಯಶಸ್ಸು ಮತ್ತು ತಮಿಳು, ಮಲಯಾಳಂ, ತೆಲುಗಿಗೆ ರೀಮೇಕ್ ರೈಟ್ಸ್ ಮಾರಾಟವಾಗಿದ್ದರಿಂದ ಚಿತ್ರತಂಡ ಮತ್ತಷ್ಟು ಉತ್ಸಾಹದಿಂದ ಅದ್ದೂರಿಯಾಗಿ ಚಿತ್ರ ಮಾಡುವ ತಯಾರಿಯಲ್ಲಿದೆ.

Categories
ಸಿನಿ ಸುದ್ದಿ

ದರ್ಶನ್ ಈಗ ‘ಕ್ರಾಂತಿ’ಕಾರಿ; ನಯಾ ‘ಕ್ರಾಂತಿ’ ಮಾಡಲು ಚಾಲೆಂಜಿಂಗ್ ಸ್ಟಾರ್ ಸಜ್ಜು ; ಪೋಸ್ಟರ್ ಟ್ರೆಂಡಿಂಗ್ ಆದ್ಮೇಲೆ ಸಿನಿಮಾ ಸುನಾಮಿ ಅಲ್ಲವೇ !

‘ಕ್ರಾಂತಿ’ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಸ ಸಿನಿಮಾ. ಗಣೇಶ ಹಬ್ಬದಂದು ವಿಶೇಷವಾಗಿ ಶೀರ್ಷಿಕೆ ಬಿಡುಗಡೆ ಮಾಡಲಾಗಿದೆ. ಡಿ‌55 ಟೈಟಲ್ ಏನಿರಬಹುದು ಎನ್ನುವ ದರ್ಶನ್ ಭಕ್ತಗಣದ ಮಹಾ ನಿರೀಕ್ಷೆಗೆ ಕುಂಬಳಕಾಯಿ ಹೊಡೆದಾಗಿದೆ. ಟೈಟಲ್ ಅನೌನ್ಸ್ ಆದ ಒಂದೇ ಗಂಟೆಯಲ್ಲಿ ಟ್ರೆಂಡಿಂಗ್ ಆಗಿದೆ. ಇದು‌ ದರ್ಶನ್ ಹೆಸರಿಗಿರುವ ಶಕ್ತಿ, ದಾಸನ ಅಭಿಮಾನಿ ಬಳಗಕ್ಕಿರುವ ತಾಕತ್ತು.

ಕಳೆದ ಒಂದು ತಿಂಗಳಿಂದ ದಚ್ಚು ಭಕ್ತರು ಒಂಟಿಕಾಲಿನಲ್ಲಿ ನಿಂತಿದ್ದರು. ಡಿ‌55 ಅನೌನ್ಸ್ ಆಗುವ ದಿವ್ಯಕ್ಷಣಕ್ಕಾಗಿ ಕಾತುರದಿಂದ ಕಾದಿದ್ದರು. ಆ ಸುಂದರ ಕ್ಷಣಕ್ಕೆ ಗಣೇಶನ ಹಬ್ಬ ಸಾಕ್ಷಿಯಾಗಿದೆ. ಗಜಾನನ ಆಶೀರ್ವಾದದೊಂದಿಗೆ ‘ ಕ್ರಾಂತಿ’ಗೆ ಕಿಕ್ ಸ್ಟಾರ್ಟ್ ಸಿಕ್ಕಿ
ದೆ. ಇಂಟ್ರೆಸ್ಟಿಂಗ್ ಅಂದರೆ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಕ್ರಾಂತಿ ಆಗ್ತಿರುವುದು.

ಬಜಾರ್ ನಲ್ಲಿ, ಬೆಳ್ಳಿತೆರೆ ಅಂಗಳದಲ್ಲಿ, ಬಾಕ್ಸ್ ಆಫೀಸ್ ಅಡ್ಡದಲ್ಲಿ ಚಾಲೆಂಜಿಂಗ್ ಚಕ್ರವರ್ತಿಯ ಸಿನಿಮಾಗಳು ಎಷ್ಟೆಲ್ಲಾ ಕ್ರಾಂತಿ ಮಾಡಿವೆ ಎನ್ನುವುದು ಇಡೀ ಕರ್ನಾಟಕ ಮಾತ್ರವಲ್ಲ ಪಕ್ಕದ ರಾಜ್ಯವೂ ಕಣ್ಣರಳಿಸಿ‌ ನೋಡಿದೆ. ದಾಸ ಬರ್ತಾವ್ನೆ ಅಂದಾಗ ಬೆಳ್ಳಿತೆರೆ ಕುಣಿಯುತ್ತೆ, ಬಾಕ್ಸ್ ಆಫೀಸ್ ಪಟಾಕಿ ಕೇಕೆ ಹಾಕುತ್ತೆ. ಅದಕ್ಕೆ ಕಾರಣ ಚಿತ್ರಮಂದಿರ ಹೌಸ್ ಫುಲ್ ಮಾಡಿ, ಬಾಕ್ಸ್ ಆಫೀಸ್ ಡಬ್ಬದಲ್ಲಿ ಕೋಟಿಕೋಟಿ ಕುಣಿಯುವಂತೆ ಕ್ರಾಂತಿ ಮಾಡುವ ಪವರ್ ಚಕ್ರವರ್ತಿಗಿರುವುದಕ್ಕೆ. ಅಪ್ ಕೋರ್ಸ್ ಇದೆ. ಆ ಪವರ್ ಇರುವುದಕ್ಕೇನೇ ಬಾಕ್ಸ್ ಆಫೀಸ್ ಸುಲ್ತಾನ್ ಪಟ್ಟ ಸಿಕ್ಕಿರುವುದು.

ಅಷ್ಟಕ್ಕೂ, ಈ ಭಾರಿ ‘ಕ್ರಾಂತಿ’ ಟೈಟಲ್ ಇಟ್ಟುಕೊಂಡೇ ಫೀಲ್ಡಿಗಿಳಿಯುತ್ತಿರುವ ದರ್ಶನ್, ಯಾವ ಕ್ಷೇತ್ರದಲ್ಲಿ ರೆವಲ್ಯೂಷನ್ ತರುತ್ತಾರೆ ಎನ್ನುವ ಕೂತೂಹಲ ಹೆಚ್ಚಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಕ್ರಾಂತಿಯಾಗಬಹುದಾ ಎನ್ನುವ ನಿರೀಕ್ಷೆಯ ಜೊತೆಗೆ
ಫ್ರೀಡಂ ಫೈಟರ್ ಆಗಿ ತೊಡೆತಟ್ಟಲಿದ್ದಾರಾ ಯಜಮಾನ? ಈ ಮಹಾನಿರೀಕ್ಷೆಯ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಚಿತ್ರತಂಡವೇ ಉತ್ತರ ನೀಡಲಿದೆ.

ಕುಲಕೋಟಿ ಅಭಿಮಾನಿಗಳ ಒಡೆಯನನ್ನ ಕ್ರಾಂತಿಯ ಕಣಕ್ಕೆ ಇಳಿಸ್ತಿರುವುದು ಯಜಮಾನ ಸಿನಿಮಾ ತಂಡ. ನಿರ್ಮಾಪಕಿ ಶೈಲಜನಾಗ್ ಹಾಗೂ ಬಿ ಸುರೇಶ್ ಅವರು ದರ್ಶನ್ ಆಗಿದ್ದಾಗ್ಲೀ ಈ‌ ಭಾರಿ ಕ್ರಾಂತಿ ಮಾಡೆಬಿಡೋಣ ಅಂತ ಸಜ್ಜಾಗಿದ್ದಾರೆ. ಸಾರಥಿಯ ಜೊತೆಜೊತೆಗೆ ಹೆಜ್ಜೆಹಾಕುತ್ತಿರುವ ವಿ ಹರಿಕೃಷ್ಣ ‘ ಕ್ರಾಂತಿ’ ಗೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಬಹುಭಾಷೆಯಲ್ಲಿ ಕ್ರಾಂತಿ ಮಾಡೋದಕ್ಕೆ ಹೊರಟಿರುವ ಫಿಲ್ಮ್ ಟೀಮ್ ಗಣೇಶನ ಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿ ಫ್ಯಾನ್ಸ್ ಗೆ ಹಬ್ಬದೂಟ ಹಾಕಿಸಿದೆ. ಯಜಮಾನ ತಂಡ ಮತ್ತೆ ಒಂದಾಗಿರುವುದಕ್ಕೆ ದಾಸನ ಭಕ್ತರಲ್ಲಿ ಮಾತ್ರವಲ್ಲ ಇಡೀ ಗಾಂಧಿನಗರದ ಮಂದಿಯಲ್ಲಿ ನಿರೀಕ್ಷೆ ಮುಗಿಲೆತ್ತರಕ್ಕೇರಿದೆ.

ವಿಶಾಲಾಕ್ಷಿ, ಎಂಟರ್ ಟೈನ್ಮೆಂಟ್ ಬ್ಯೂರೋ‌ ಸಿನಿಲಹರಿ

Categories
ಸಿನಿ ಸುದ್ದಿ

ನಾನೆಲ್ಲೂ ಓಡಿ ಹೋಗಿಲ್ಲ; ಓಡಿ ಹೋಗಲ್ಲ; ಮಾಧ್ಯಮ ಮುಂದೆ ಆಂಕರ್ ಅನುಶ್ರೀ ಪ್ರತ್ಯಕ್ಷ!


ಸ್ಯಾಂಡಲ್‌ವುಡ್ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎ2 ಆರೋಪಿ ಕಿಶೋರ್ ಶೆಟ್ಟಿ ಹೇಳಿಕೆಯನ್ನ ಆಧರಿಸಿ ಮಂಗಳೂರು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ಸುದ್ದಿಯಾಗಿದೆ. ಕಿಶೋರ್ ಶೆಟ್ಟಿ ಅನುಶ್ರೀ ವಿರುದ್ದ ಹೇಳಿಕೆ ನೀಡಿದ್ದಾರೆಂದು ಮೊದಲು ಸುದ್ದಿಯಾಯ್ತು. ಕೊನೆಗೆ ಕಿಶೋರ್ ಶೆಟ್ಟಿ ನಾನು ಅನುಶ್ರೀ ವಿರುದ್ದ ಹೇಳಿಕೆ ನೀಡಿಲ್ಲವೆಂದು
ಡ್ರಗ್ಸ್ ಪಾರ್ಟಿ ಮಾಡಿಲ್ಲವೆಂದು ಕ್ಲ್ಯಾರಿಟಿ ಕೊಟ್ಟರು. ಅಷ್ಟಕ್ಕೂ, ಇದರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವುದು ಗೊಂದಲದ ಗೂಡಾಗಿದೆ. ಈ ನಡುವೆ ಕಿಶೋರ್ ಹೇಳಿಕೆ ಅನುಶ್ರೀಗೆ ಮುಳುವಾಗ್ಬೋದು, ನಶೆಯ ಸುಳಿಯಲ್ಲಿ ಸಿಲುಕಿ ಲಾಕ್ ಆಗ್ಬೋದು ಎನ್ನುವಂತಹ ಮಾತುಗಳು ಕೇಳಿಬಂದವು. ಎಲ್ಲಿ ಲಾಕ್ ಆಗ್ತೀನೋ ಎಂಬ ಭಯದಿಂದ ಆಂಕರ್ ಕಮ್ ನಟಿ ಅನುಶ್ರೀ ತಲೆಮರೆಸಿಕೊಂಡಿದ್ದಾರೆ, ಮುಂಬೈನಲ್ಲಿ ಅಡಗಿ ಕುಳಿತಿದ್ದಾರೆ ಅಂತೆಲ್ಲಾ ಚರ್ಚೆಯಾಯ್ತು. ಇದೆಲ್ಲದಕ್ಕೂ ಸ್ವತಃ ಅನುಶ್ರೀ ಫುಲ್ ಸ್ಟಾಪ್ ಹಾಕಿದ್ದಾರೆ. ವೃತ್ತಿ ನಿಮಿತ್ತ ಮುಂಬೈಗೆ ಹೋಗಿದ್ದು ನಿಜ ಆದರೆ ನಾನು ಓಡಿಹೋಗಿಲ್ಲ. ಎಂತಹದ್ದೇ ಸಂದರ್ಭ ಬಂದರೂ ಕೂಡ ಎದುರಿಸಿ ನಿಲ್ತೇನೆ ಹೊರೆತು ಈ ಕನ್ನಡ ನೆಲ ಬಿಟ್ಟು ಓಡಿಹೋಗೋದಿಲ್ಲ ಎಂದಿದ್ದಾರೆ.

ಅಷ್ಟಕ್ಕೂ, ಕಳೆದ ವರ್ಷ ಮಂಗಳೂರು ಸಿಸಿಬಿ ಪೊಲೀಸರು ನನ್ನ ಕರೆಸಿ ತನಿಖೆ ಮಾಡಿದ್ದು ನಾನು ಆರೋಪಿ ಅಥವಾ ಅಪರಾಧಿ ಎನ್ನುವ ಕಾರಣಕ್ಕೆ ಅಲ್ಲ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ತರುಣ್ ಇಬ್ಬರು ಕೂಡ ನನ್ನ ಡ್ಯಾನ್ಸ್ ರಿಯಾಲಿಟಿ ಶೋಗೆ ಕೊರಿಯಾಗ್ರಫಿ ಮಾಡಿದ್ದರು. ಹೀಗಾಗಿ ನನ್ನ ಕರೆಸಿ ತನಿಖೆ ನಡೆಸಿದ್ದರು. ನಾನು ತನಿಖೆಗೆ ಸ್ಪಂಧಿಸಿ ಅವರು ಏನೆಲ್ಲಾ ಪ್ರಶ್ನೆಗಳನ್ನ ಕೇಳಿದ್ದರೋ ಅದೆಲ್ಲದಕ್ಕೂ ಉತ್ತರಿಸಿ ಬಂದಿದ್ದೆ. ಈಗ, ಚಾರ್ಜ್ಶೀಟ್‌ನಲ್ಲಿ ನನ್ನ ಹೆಸರು ಕೇಳಿಬಂದಿದೆ ಎನ್ನುವ ಸುದ್ದಿ ಹರಿದಾಡ್ತಿದೆ. ಒಂದ್ವೇಳೆ ನನ್ನ ಹೆಸರು ಚಾರ್ಜ್ ಶೀಟ್‌ನಲ್ಲಿದ್ದು, ಆರೋಪಿ ಕಿಶೋರ್ ಶೆಟ್ಟಿ ನನ್ನ ವಿರುದ್ದ ಹೇಳಿಕೆ ನೀಡಿದ್ದರೆ, ಪೊಲೀಸರು ತನಿಖೆಗೆ ಕರೆದರೆ ನಾನು ಹಾಜರಾಗ್ತೀನಿ ಮತ್ತು ತನಿಖೆಗೆ ಸ್ಪಂಧಿಸ್ತೇನೆ ಎಂದಿದ್ದಾರೆ.

ನನ್ನ ವಿರುದ್ದ ನೂರು ಜನ ನೂರು ಮಾತನಾಡ್ತಿದ್ದಾರೆ ಮತ್ತು ಆರೋಪ ಮಾಡ್ತಿದ್ದಾರೆ. ಅವರೆಲ್ಲರ ಮಾತಿಗೆ ಹಾಗೂ ಆರೋಪಕ್ಕೆ ನಾನು ಉತ್ತರ ಕೊಡುವುದಿಲ್ಲ. ಕಾನೂನಿದೆ, ಪೊಲೀಸರು ತನಿಖೆ ಮಾಡ್ತಿದ್ದಾರೆ ಮಾಡಲಿ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಹೀಗಾಗಿ ನಾನು ಕಾನೂನಿಗೆ ತಲೆಬಾಗ್ತೀನಿ ಎಂದಿದ್ದಾರೆ. ಅಷ್ಟೇ ಅಲ್ಲದೇ ಬೆಂಗಳೂರಲ್ಲಿ ೪ ಕೋಟಿ ಮನೆಯಿದೆ, ಮಂಗಳೂರಲ್ಲಿ ೧೨ ಕೋಟಿ ಮನೆಯಿದೆ ಅಂತೆಲ್ಲಾ ಹೇಳಿಕೆ ಕೊಡ್ತಿದ್ದಾರೆ. ಕಳೆದ ೩ ವರ್ಷದಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡ್ತಿದ್ದೇನೆ. ಬ್ಯಾಂಕ್‌ನಲ್ಲಿ ಲೋನ್ ಪಡೆದು ಮಂಗಳೂರಿನಲ್ಲಿ ಮನೆ ಕಟ್ಟಿದ್ದೇನೆ. ಕಷ್ಟಪಟ್ಟು ಕೆಲಸ ಮಾಡಿ ದುಡಿದು ಬದುಕುತ್ತಿದ್ದೇನೆ. ಯಾವ ಪ್ರಭಾವಿಗಳ ಸಹಾಯವೂ ನನಗಿಲ್ಲ. ಯಾರ ಸಹಾಯವೂ ನನಗೆ ಬೇಕಾಗಿಲ್ಲ. ಏನೇ ಬಂದರೂ ಒಬ್ಬಳೇ ಎದುರಿಸುತ್ತೇನೆ. ಬೆಂಗಳೂರಿಗೆ ಒಬ್ಬಳೇ ಬಂದಿದ್ದೇನೆ, ಬದುಕು ಕಟ್ಟಿಕೊಂಡಿದ್ದೇನೆ. ಹಾಗೆಯೇ ಒಬ್ಬಳೇ ಮುಂದೆ ಸಾಗುತ್ತೇನೆ ಎಂದು ಹೆಮ್ಮೆಯಿಂದ ಮಾತನಾಡಿದ್ದಾರೆ ಆಂಕರ್ ಕಮ್ ನಟಿ ಅನುಶ್ರೀಯವರು

Categories
ಸಿನಿ ಸುದ್ದಿ

ಬೈಟು ಲವ್ ಟೀಸರ್ ಸದ್ದು! ಧನ್ವೀರ್ ಬರ್ತ್ ಡೇಗೆ ಟೀಮ್ ಸ್ಪೆಷಲ್ ಗಿಫ್ಟ್

ಹರಿ ಸಂತೋಷ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಬೈ ಟು ಲವ್‌’ ಸಿನಿಮಾ ತಂಡ, ನಟ ಧನ್ವೀರ್ ಬರ್ತ್ ಡೇ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ್ದ ಟೀಸರ್ ಗೆ ಎಲ್ಲೆಡೆಯಿಂದ, ಮೆಚ್ಚುಗೆ ಸಿಕ್ಕಿದೆ.ಪೋಸ್ಟರ್ ನೋಡಿದವರಿಗೆ ಫ್ಯಾಮಿಲಿ ಇದೊಂದು ಪಕ್ಕಾ ಸಿನಿಮಾ ಅನ್ನಿಸಿದೇ ಇರದು. ಇನ್ನು ರಿಲೀಸ್ ಆಗಿರುವ ಟೀಸರ್ ನೋಡಿದರೆ ಮಾಸ್ ಫೀಲ್ ಸಿನಿಮಾ ಅನ್ನುತ್ತಿದ್ದಾರೆ.

‘ಬಜಾರ್‌’ ಬಳಿಕ ಧನ್ವೀರ್‌ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಫಸ್ಟ್ ಲುಕ್‌ ಮೂಲಕ ಸಾಕಷ್ಟು ಕುತೂಹಲ ಮೂಡಿಸಿತ್ತು ಚಿತ್ರತಂಡ. ಧನ್ವೀರ್‌-ಶ್ರೀಲೀಲಾ ಹಾಗೂ ಪುಟ್ಟ ಮಗುವೊಂದು ಹಸೆಮಣೆ ಮೇಲೆ ಕುಳಿತಿರುವ ಫೋಟೋ ಎಲ್ಲೆಡೆ ವೈರಲ್‌ ಆಗಿತ್ತು.ಸೆಪ್ಟೆಂಬರ್‌ 8ರಂದು ಚಿತ್ರದ ನಾಯಕ ಧನ್ವೀರ್‌ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಖುಷಿಗೆ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಮೊದಲ ಚಿತ್ರದಲ್ಲಿ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ಧನ್ವೀರ್‌ಗಿಲ್ಲಿ ಲವರ್‌ ಬಾಯ್‌ ಪಾತ್ರ ಆಗಿದ್ದಾರೆ.

ಸುಮಾರು 70 ದಿನಗಳಿಗೂ ಹೆಚ್ಚು ಕಾಲ ಚಿತ್ರೀಕರಣ ನಡೆಸಸಲಾಗಿದೆ. ಧನ್ವೀರ್‌ ಹಾಗೂ ಶ್ರೀಲೀಲಾ ಜೋಡಿ ತೆರೆಯ ಮೇಲೆ ಮೋಡಿ ಮಾಡಲಿದೆ ಎಂಬುದು ನಿರ್ದೇಶಕರ ಮಾತು. ಗಣೇಶ್‌ ನಟನೆಯ ಸಖತ್‌, ನಿಖಿಲ್‌ ಕುಮಾರ್‌ಸ್ವಾಮಿ ನಟನೆಯ ಹೊಸ ಸಿನಿಮಾ ಹಾಗೂ ಜೋಗಿ ಪ್ರೇಮ್‌-ಧ್ರುವ ಸರ್ಜಾ ಕಾಂಬಿನೇಷನ್‌ ಸಿನಿಮಾಗಳನ್ನು ನಿರ್ಮಿಸುತ್ತಿರುವ ಕೆವಿಎನ್‌ ಪ್ರೊಡಕ್ಷನ್ಸ್ ‘ಬೈ ಟು ಲವ್‌’ಗೆ ಹಣ ಹಾಕಿದೆ.ಚಿತ್ರದ ಕಥೆ ಮೆಚ್ಚಿಕೊಂಡು ಈ ಸಿನಿಮಾ ನಿರ್ಮಾಣ ಮಾಡಲು ಮುಂದಾದ ಕೆವಿಎನ್‌ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾದ ಎರಡನೇ ಸಿನಿಮಾವಿದು. ಮಹೇಂದ್ರ ಸಿಂಹ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ ಹಾಗೂ ಯೋಗಾನಂದ್‌ ಸಂಭಾಷಣೆ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಅನಿತಾಭಟ್‌ ಈಗ ನಿರ್ಮಾಪಕಿ; ಅನದರ್‌ ಸ್ಟೋರಿ ಹೇಳೋಕೆ ಹೊರಟ್ರು ಭಟ್ರು!

ಅನಿತಾಭಟ್ ನಿರ್ಮಾಣದ ಸಿನಿಮಾ ಶೀರ್ಷಿಕೆಯನ್ನು ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರು ಬಿಡುಗಡೆ ಮಾಡುತ್ತಿರುವುದು ವಿಶೇಷ.
ಸದ್ಯ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರು ಅನಿತಾಭಟ್‌ ನಿರ್ಮಾಣದ ಸಿನಿಮಾ ಟೈಟಲ್‌ ರಿಲೀಸ್‌ ಮಾಡಲಿದ್ದಾರೆ ಎಂಬ ವಿಷಯ ಹೊತ್ತ ಪೋಸ್ಟರ್‌ ಗಮನಸೆಳೆಯುತ್ತಿದೆ. ಅಲೆಗಳಿರುವ ಒಂದು ಸಮುದ್ರದ ಭಾವಚಿತ್ರದಲ್ಲಿ “ಪ್ರತಿ ಕ್ಷಣ ಈ ಸಮುದ್ರ ಒಂದೊಂದು ಕಥೆ ಹೇಳ್ತಾ ಇರುತ್ತೆ ಎಂಬ ಬರಹವಿದೆ. ಜೊತೆಗೆ “ಅನದರ್‌ ಸ್ಟೋರಿ” ಎಂಬ ಹೈಲೈಟ್ರು ಬರಹವೂ ಇದೆ. ಚಿತ್ರದ ಶೀರ್ಷಿಕೆಯನ್ನು ಶ್ರೀಮುರಳಿ ಸೆಪ್ಟೆಂಬರ್‌ 10ರಂದು ಬಿಡುಗಡೆ ಮಾಡುತ್ತಿದ್ದಾರೆ.

ಕನ್ನಡದ ಮೋಸ್ಟ್ ಅಟ್ರ್ಯಾಕ್ಷನ್ ನಟಿ ಅಂತಾನೇ ಕರೆಸಿಕೊಂಡಿರುವ ಅನಿತಾಭಟ್, ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹೀಗಂದಾಕ್ಷಣ, ಅಚ್ಚರಿಯಾಗಬಹುದು. ನಿಜ, ಅನಿತಾಭಟ್‌, ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿ ಈಗ ಹದಿಮೂರು ವರ್ಷಗಳು ಕಳೆದಿವೆ. ಇಂದಿಗೂ ತನ್ನ ಛಾಪು ಮೂಡಿಸುತ್ತಲೇ ಬಂದಿರುವ ಅನಿತಾಭಟ್‌, ಎಲ್ಲಾ ಜಾನರ್‌ ಸಿನಿಮಾಗಳಲ್ಲೂ ಕಾಣಿಸಿಕೊಂಡು ಸೈ ಎನಿಸಿಕೊಂಡವರು. ಸಿನಿಮಾನೇ ಪ್ರಾಣ ಅಂದುಕೊಂಡಿರುವ ಅನಿತಾಭಟ್‌, ಸದಾ ಹೊಸತೇನನ್ನೋ ಮಾಡಬೇಕು ಅಂದುಕೊಂಡವರು. ಆ ಹೊಸತನ್ನು ಹುಡುಕಿ ಹೊರಟ ಅವರನ್ನು ಸಿನಿಮಾ ನಿರ್ಮಾಪಕಿಯನ್ನಾಗಿಸಿದೆ. ಹೌದು, ಅನಿತಾಭಟ್‌ ನಿರ್ಮಾಪಕಿಯಾಗಿದ್ದಾರೆ.

. ಈ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಮತ್ತೊಂದು ಹೆಜ್ಜೆ ಇಡುತ್ತಿದ್ದಾರೆ. ಅಂದಹಾಗೆ, ಅನಿತಾಭಟ್‌ ಈಗಾಗಲೇ “ಅನಿತಾಭಟ್‌ ಕ್ರಿಯೇಷನ್ಸ್‌ ಮೂಲಕ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರೊಂದಿಗೆ ರಾಜಲಕ್ಷ್ಮಿ ಅನ್ನುವವರು ಕೂಡ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ. ವಿಶೇಷವೆಂದರೆ, ಅನಿತಾಭಟ್‌ ಇಲ್ಲಿ ವಿಶೇಷ ಕಥೆಯೊಂದನ್ನು ಹಿಡಿದು ಪ್ರೇಕ್ಷಕರ ಮುಂದೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ ಶೀರ್ಷಿಕೆಯ ಗುಟ್ಟು ರಟ್ಟು ಮಾಡದ ಅನಿತಾಭಟ್‌, ಅದನ್ನು ಸೆಪ್ಟೆಂಬರ್‌ 10ರ ಗಣೇಶ ಹಬ್ಬದಂದು ಅನಾವರಣಗೊಳಿಸುತ್ತಿದ್ದಾರೆ.

ಅವರ ಮೊದಲ ನಿರ್ಮಾಣದ ಸಿನಿಮಾದ ಶೀರ್ಷಿಕೆಯನ್ನು ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರು ಬಿಡುಗಡೆ ಮಾಡುತ್ತಿರುವುದು ವಿಶೇಷ.
ಸದ್ಯ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರು ಅನಿತಾಭಟ್‌ ನಿರ್ಮಾಣದ ಸಿನಿಮಾ ಟೈಟಲ್‌ ರಿಲೀಸ್‌ ಮಾಡಲಿದ್ದಾರೆ ಎಂಬ ವಿಷಯ ಹೊತ್ತ ಪೋಸ್ಟರ್‌ ಗಮನಸೆಳೆಯುತ್ತಿದೆ. ಅಲೆಗಳಿರುವ ಒಂದು ಸಮುದ್ರದ ಭಾವಚಿತ್ರದಲ್ಲಿ “ಪ್ರತಿ ಕ್ಷಣ ಈ ಸಮುದ್ರ ಒಂದೊಂದು ಕಥೆ ಹೇಳ್ತಾ ಇರುತ್ತೆ” ಎಂಬ ಬರಹವಿದೆ. “ಅನದರ್‌ ಸ್ಟೋರಿ” ಇರುವ ಚಿತ್ರದ ಶೀರ್ಷಿಕೆಯನ್ನು ಶ್ರೀಮುರಳಿ ಅವರು ಸೆಪ್ಟೆಂಬರ್‌ 10ರಂದು ಬಿಡುಗಡೆ ಮಾಡುತ್ತಿದ್ದಾರೆ.

ಆ ಸಿನಿಮಾದ ಟೈಟಲ್‌ ಏನು ಅನ್ನೋದು ಅಂದೇ ಗೊತ್ತಾಗಲಿದೆ. ಬಹುಶಃ ಅನಿತಾಭಟ್‌ ಅವರ ಟೀಮ್‌ ಈಗ ಪೋಸ್ಟ್‌ ಮಾಡಿರುವ ಪೋಸ್ಟರ್‌ ಗಮನಿಸಿದರೆ, ಅದೊಂದು ಸಮುದ್ರದ ಕಥೆನೇ ಇರಬಹುದೇನೋ ಅಂತೆನಿಸುತ್ತದೆ. ಸಮುದ್ರದ ಕಥೆ ಆಗಿದ್ದರಿಂದ ಸಿನಿಮಾದ ಟೈಟಲ್‌ ಕೂಡ ಅದಕ್ಕೆ ಸಂಬಂಧಿಸಿದಂತೆಯೇ ಇರಬಹುದೇನೋ? ಗೊತ್ತಿಲ್ಲ ಅದು ಏನಿರಬಹುದು‌ ಎಂಬ ಕುತೂಹಲಕ್ಕೆ ಗಣೇಶನ ಹಬ್ಬದವರೆಗೆ ಕಾಯಬೇಕಿದೆ.

ಇನ್ನು “ಸಿನಿಲಹರಿ” ಜೊತೆ ಮಾತಾಡಿದ ಅನಿತಾಭಟ್‌, “ನಾನು ಮೊದಲಿನಿಂದಲೂ ಒಳ್ಳೆಯ ಕಥೆಗಾಗಿ ಹುಡುಕಾಟ ನಡೆಸುತ್ತಲೇ ಇದ್ದೆ. ಒಳ್ಳೆ ಕಥೆ ಸಿಕ್ಕರೆ ನಾನೇ ನಿರ್ಮಾಣ ಮಾಡಬೇಕು ಅಂತ. ಅದು ಸಿಕ್ಕಿದ್ದರಿಂದಲೇ ನಾನು ನಿರ್ಮಾಪಕಿಯಾಗಿದ್ದೇನೆ. ವಿಶೇಷವೆಂದರೆ, ನಾನು ಒಂದಲ್ಲ ಎರಡು ಸಿನಿಮಾಗಳನ್ನು ನಿರ್ಮಿಸಿದ್ದೇನೆ. ಆ ಪೈಕಿ ಈಗ ಒಂದು ಸಿನಿಮಾ ಸೆನ್ಸಾರ್‌ಗೆ ಹೋಗಿದ್ದು, ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ.

ಎರಡು ಸಿನಿಮಾಗಳ ಕಥೆ ಚೆನ್ನಾಗಿವೆ. ಕಥೆಗೆ ಏನೆಲ್ಲಾ ಬೇಕೋ ಅದನ್ನು ಪೂರೈಸಿ, ಒಂದೊಳ್ಳೆಯ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗಿದೆ. ನನ್ನೊಂದಿಗೆ ರಾಜಲಕ್ಷ್ಮಿ ಅವರು ಕೈ ಜೋಡಿಸಿದ್ದಾರೆ. ಒಳ್ಳೆಯ ತಂಡ ನನ್ನೊಂದಿಗಿದೆ. ರಿಷಿ ಮತ್ತು ಧನುಷ್‌ ಇವರೊಂದಿಗೆ ತೃಪ್ತಿ ಎನಿಸುವ ಸಿನಿಮಾ ಮಾಡಿದ ಖುಷಿ ಇದೆ. ನಿಜ ಹೇಳ್ತೀನಿ. ಎರಡು ಸಿನಿಮಾ ನಿರ್ಮಾಣ ಮಾಡಿದ್ದರೂ, ಆ ಎರಡು ಸಿನಿಮಾಗಳು ಕಮರ್ಷಿಯಲ್‌ ಆಗಿವೆ. ಕಂಟೆಂಟ್‌ ಕೂಡ ಅಷ್ಟೇ ಚೆನ್ನಾಗಿದೆ” ಎನ್ನುತ್ತಾರೆ ಅನಿತಾಭಟ್.‌

ಒಂದು ಸಿನಿಮಾದಲ್ಲಿ ನಾನು ಮತ್ತು ಶಿವಧ್ವಜ್‌ ನಟಿಸಿದ್ದೇವೆ. ಇನ್ನೊಂದು ಸಿನಿಮಾದಲ್ಲಿ ನಾನು, ನೀತು, ಷಫಿ, ಟಿವಿ ಸುದ್ದಿ ವಾಚಕ ರೆಹಮಾನ್‌, ಚಕ್ರವರ್ತಿ ಚಂದ್ರಚೂಡ್‌ ಕಾಣಿಸಿಕೊಂಡಿದ್ದೇವೆ. ಇವರೆಲ್ಲರೂ ಕೂಡ ನನ್ನ ಸಿನಿಮಾಗೆ ಸಾಥ್‌ ನೀಡಿದ್ದಾರೆ. ಸಹಕಾರ ನೀಡಿ, ಪ್ರೋತ್ಸಾಹಿಸಿದ್ದರಿಂದಲೇ ಇಂದು ನಾನು ನಿರ್ಮಾಣ ಮಾಡೋಕೆ ಸಾಧ್ಯವಾಗಿದೆ. ಮುಂದೆ ಇನ್ನೂ ಒಳ್ಳೆಯ ಸಿನಿಮಾ ಮಾಡುವ ಆಸೆ ಇದೆ. ಅದರಲ್ಲೂ ನಾನು ಶಿವರಾಜಕುಮಾರ್‌ ಫ್ಯಾನ್.‌ ಅವರಿಗೆ ಒಂದೊಳ್ಳೆಯ ಸಿನಿಮಾ ನಿರ್ಮಿಸುವ ಆಸೆಯೂ ನನಗಿದೆ. ನೋಡೋಣ. ಎಲ್ಲದ್ದಕ್ಕೂ ಒಳ್ಳೆಯ ಸಮಯ ಬರಬೇಕು ಎನ್ನುವ ಅನಿತಾಭಟ್‌, ಸದ್ಯ ನಿರ್ಮಿಸಿರುವ ಸಿನಿಮಾಗಳನ್ನು ಬಿಡುಗಡೆ ಮಾಡಿ, ಜನಮನ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಕನ್ನಡದಲ್ಲಿ ನಟಿಯಾಗಿ ಬಂದು, ಈಗ ನಿರ್ಮಾಪಕಿಯಾಗಿರುವ ಅನಿತಾಭಟ್‌, ಇನ್ನೂ ಒಳ್ಳೆಯ ಸಿನಿಮಾಗಳನ್ನು ಕನ್ನಡಕ್ಕೆ ಕೊಡಲಿ ಎಂಬುದು “ಸಿನಿಲಹರಿ” ಹಾರೈಕೆ.

Categories
ಸಿನಿ ಸುದ್ದಿ

ಆ್ಯಂಕರ್ ಅನುಶ್ರೀಗೆ ಡ್ರಗ್ಸ್ ಕಂಟಕ; ನಶೆಯ ಸುಳಿಯಲ್ಲಿ ಸಿಲುಕ್ತಾರಾ ನಟಿ ಅನುಶ್ರೀ ?

ಕನ್ನಡದ ಖ್ಯಾತ ನಿರೂಪಕಿ ಕಮ್ ನಟಿ ಅನುಶ್ರೀಗೆ ಮತ್ತೆ ಕಂಟಕ ಎದುರಾಗಿದೆ. ಕಳೆದೊಂದು ವರ್ಷದ ಹಿಂದೆ ಡ್ರಗ್ಸ್ ಕೇಸ್ ಸಂಬಂಧ ಮಂಗಳೂರು ಪೊಲೀಸರ ಮುಂದೆ ಹಾಜರಾಗಿ ಸಿಸಿಬಿ ತನಿಖೆಯನ್ನ ಎದುರಿಸಿದ್ದರು. ಅದೇ ಡ್ರಗ್ಸ್ ಕೇಸ್ ಪ್ರಕರಣ ಇದೀಗ ಆಂಕರ್ ಕಮ್ ನಟಿ ಅನುಶ್ರೀಗೆ ಮುಳುವಾದಂತೆ ಕಾಣ್ತಿದೆ. ಪ್ರಕರಣದ ಎ2 ಆರೋಪಿಯಾಗಿರುವ ಡ್ಯಾನ್ಸರ್ ಕಿಶೋರ್ ಅಮನ್‌ಶೆಟ್ಟಿ ಅನುಶ್ರೀ ವಿರುದ್ದ ಹೇಳಿಕೆ ನೀಡಿದ್ದು, ಮಂಗಳೂರು ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಅಷ್ಟಕ್ಕೂ, ಕಿಶೋರ್ ಪೊಲೀಸರ ಮುಂದೆ ನೀಡಿರುವ ಹೇಳಿಕೆಗಳೇನು? ಚಾರ್ಜ್‌ ಶೀಟ್‌ ಯಾವೆಲ್ಲಾ ಅಂಶಗಳು ಉಲ್ಲೇಖಗೊಂಡಿವೆ ಎಂಬುದರ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ.

1 ಅನುಶ್ರೀ ಡ್ರಗ್ಸ್ ತಗೋತ್ತಾರೆ, ಅವರೊಟ್ಟಿಗೆ ನಾವು ಡ್ರಗ್ಸ್ ತಗೊಂಡಿದ್ದೇವೆ

2 ಡ್ರಗ್ಸ್ ಸೇವನೆ ಜೊತೆಗೆ ಸಾಗಾಟ ಕೂಡ ಮಾಡ್ತಾರೆ ಅನುಶ್ರೀ

3 ನಮ್ಮ ರೂಂಗೆ ಅನುಶ್ರೀ ಎಕ್ಸ್ಟೆಸಿ ಪಿಲ್ಸ್ ತರುತ್ತಿದ್ದರು

4 ಅನುಶ್ರೀ-ತರುಣ್ ಮತ್ತೆ ನಾನು ಮೂವರು ಸೇರಿ ಡ್ರಗ್ ಪಾರ್ಟಿ ಮಾಡ್ತಿದ್ದೆವು

5 ನನ್ನ ಸ್ನೇಹಿತ ತರುಣ್ ಕಡೆಯಿಂದ ಅನುಶ್ರೀ ಪರಿಚಯವಾಗಿತ್ತು

6 ಕುಣಿಯೋಣ ಬಾರ' ಡ್ಯಾನ್ಸ್ ಶೋನಲ್ಲಿ ತರುಣ್ ಮತ್ತು ನಾನು ಅನುಶ್ರೀಗೆ ಕೊರಿಯಾಗ್ರಫಿ ಮಾಡಿದ್ವಿ.

7 ತರುಣ್ ಬಾಡಿಗೆ ಮನೆಯಲ್ಲಿ ತಡರಾತ್ರಿವರೆಗೂ ಡ್ಯಾನ್ಸ್ ರಿಹರ್ಸಲ್ ನಡೆಯುತ್ತಿತ್ತು

8 ಡ್ಯಾನ್ಸ್ ರಿಹರ್ಸಲ್ ಮುಗಿಸಿದ್ಮೇಲೆ ಊಟಕ್ಕೂ ಮೊದಲು ಎಕ್ಸ್ಟೆಸಿ ಪಿಲ್ಸ್ ತೆಗೆದುಕೊಳ್ಳುತ್ತಿದ್ದೆವು

9 ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದರೆ ಅದರ ಕಿಕ್ಕೇ ಬೇರೆ ಎನ್ನುತ್ತಿದ್ದರು ಅನುಶ್ರೀ

10 ಕುಣಿಯೋಣ ಬಾರ’ ಶೋನಲ್ಲಿ ವಿನ್ ಆದ್ಮೇಲೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದರು


11 ಮಾದಕ ವಸ್ತು ಸೇವನೆ ಮಾಡಿ ಡ್ರಿಂಕ್ಸ್ ಪಾರ್ಟಿ ಮಾಡಿದ್ವಿ.

12 ಡ್ರಗ್ಸ್ ಎಲ್ಲಿಂದ ತರಿಸಿಕೊಳ್ಳುತ್ತಿದ್ದರು ಎಂಬ ಬಗ್ಗೆ ನನಗೇನು ಗೊತ್ತಿಲ್ಲ

13 ಬಹಳ ಸುಲಭವಾಗಿ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದರು, ಬಹುಷಃ ಅವರಿಗೆ ಡ್ರಗ್ಸ್ ಪೆಡ್ಲರ್‌ಗಳ ಪರಿಚಯ ಇರುತ್ತೆ

ಇದಿಷ್ಟು ಎ2 ಆರೋಪಿ ಕಿಶೋರ್ ಅಮನ್ ಶೆಟ್ಟಿ ಪೊಲೀಸರ ಮುಂದೆ ಕೊಟ್ಟಿರುವಂತಹ ಹೇಳಿಕೆಗಳು. ಈ ಎಲ್ಲಾ ಹೇಳಿಕೆಗಳನ್ನ ಆಧಾರವಾಗಿಟ್ಟುಕೊಂಡು ಮಂಗಳೂರು ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಆರೋಪಿ ಕಿಶೋರ್ ಶೆಟ್ಟಿ ಕೊಟ್ಟಿರುವ ಸ್ಟೇಟ್‌ಮೆಂಟ್ ಆಂಕರ್ ಕಮ್ ನಟಿ ಅನುಶ್ರೀಗೆ ಮುಳುವಾಗ್ಬೋದು ಎನ್ನುವ ಚರ್ಚೆ ಜೋರಾಗಿದೆ. ಕೋರ್ಟ್ ತನಿಖೆಗೆ ಆಗ್ರಹಿಸಿದರೆ ಕೇಸ್ ರೀ ಓಪನ್ ಆಗಲಿದೆ. ಕಿಶೋರ್ ಸ್ಟೇಟ್‌ಮೆಂಟ್‌ನಲ್ಲಿ ಒಂದ್ವೇಳೆ ಹುರುಳಿದ್ದರೆ ಅನುಶ್ರೀಗೆ ಡ್ರಗ್ಸ್ ಕಂಟಕ ಉರುಳಾಗಬಹುದು ಎನ್ನುವುದೇ ಕೂತೂಹಲ ಚರ್ಚಾ ಸಂಗತಿ.


ಕಿಶೋರ್ ಶೆಟ್ಟಿ ಹಾಗೂ ತರುಣ್ ಇಬ್ಬರು ಕೂಡ ಡ್ಯಾನ್ಸ್ ಕೊರಿಯಾಗ್ರಫರ್‌ಗಳು. ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸ್ಯಾಂಡಲ್‌ವುಡ್ ಡ್ರಗ್ ಕೇಸ್‌ಗೆ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಸುಮಾರು 20ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆಗೆ ಒಳಪಡಿಸಿದ್ದರು.

ಅದರಲ್ಲಿ ಎ.15 ಆರೋಪಿ ಪ್ರತೀಕ್ ಶೆಟ್ಟಿ ಕೊಟ್ಟಂತಹ ಸುಳಿವಿನಿಂದ ಕಿಶೋರ್ ಶೆಟ್ಟಿ ಹಾಗೂ ತರುಣ್ ಬಗ್ಗೆ ಮಾಹಿತಿ ಸಿಕ್ಕಿತ್ತು. ತಕ್ಷಣವೇ ಬೆಂಗಳೂರು ಸಿಸಿಬಿ ಪೊಲೀಸರು, ಮಂಗಳೂರು ಸಿಸಿಬಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಕಿಶೋರ್ ಶೆಟ್ಟಿ ಹಾಗೂ ತರುಣ್‌ರನ್ನ ಬಂಧಿಸಿ ತನಿಖೆಗೆ ಒಳಪಡಿಸಿದ್ದರು. ಆಗ ಅವರುಗಳ ಕೊಟ್ಟ ಮಾಹಿತಿಯ ಮೇರೆಗೆ ಅನುಶ್ರೀಯವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು.

2020 ಸೆಪ್ಟೆಂಬರ್ 26 ರಂದು ಮಾಧ್ಯಮಗಳ ಮುಂದೆ ಹಾಜರಾಗಿದ್ದ ಅನುಶ್ರೀ, ಕಿಶೋರ್ ಶೆಟ್ಟಿ ಹಾಗೂ ತರುಣ್ ಇಬ್ಬರು ಕೂಡ `ಕುಣಿಯೋಣ ಬಾರ’ ಡ್ಯಾನ್ಸ್ ರಿಯಾಲಿಟಿ ಶೋಗೆ ಕೊರಿಯಾಗ್ರಫಿ ಮಾಡಿದ್ದರು. ಆದರೆ, ಸದ್ಯಕ್ಕೆ ಅವರೊಟ್ಟಿಗೆ ನನಗೆ ಒಡನಾಟ ಇಲ್ಲ. ಕಳೆದ ಹನ್ನೆರಡು ವರ್ಷಗಳ ಹಿಂದೆ ಕೊರಿಯಾಗ್ರಫಿ ಮಾಡಿದ್ದರು ಅನ್ನೋದು ಬಿಟ್ಟರೆ ಅವರೊಟ್ಟಿಗೆ ವೈಯಕ್ತಿಕವಾಗಿ ನಾನು ಸಂಪರ್ಕ ಇಟ್ಟುಕೊಂಡಿಲ್ಲ. ಕಿಶೋರ್ ಅವರ ಒಡೆತನದ ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಮಾಡಿಕೊಟ್ಟಿದ್ದೇನೆ ಬಿಟ್ಟರೆ ಮತ್ಯಾವ ನಂಟು ಕೂಡ ಅವರೊಂದಿಗಿಲ್ಲ ಎಂದು ಹೇಳಿಕೊಂಡಿದ್ದರು. ಇದನ್ನ ಕಿಶೋರ್ ಕೂಡ ಸಿಸಿಬಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಆದರೆ, ಡ್ರಗ್ಸ್ ತೆಗೆದುಕೊಳ್ಳುತ್ತಿದ್ದದ್ದು ಮಾತ್ರ ಸತ್ಯ ಎನ್ನುವ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಇದೊಂದೇ ಹೇಳಿಕೆ ಅನುಶ್ರೀಗೆ ಸಂಕಷ್ಟ ತಂದೊಡಿದೆ. ಮುಂದೇನಾಗಲಿದೆ ಈ ಕೇಸ್ ಕೂತೂಹಲದಿಂದ ಕಾಯಬೇಕು ಅಷ್ಟೇ.

Categories
ಸಿನಿ ಸುದ್ದಿ

ತಮಿಳು ನಾಡಿನಲ್ಲೂ ಸಲಗನ ಹವಾ

ಕನ್ನಡದಲ್ಲೀಗ ಸಿನಿಮಾ ಬಿಡುಗಡೆಗೆ ಸಾಲು ಸಾಲು ಚಿತ್ರಗಳು ರೆಡಿಯಾಗಿವೆ.‌ಆ‌ ಸಾಲಿಗೆ ದುನಿಯಾ ವಿಜಯ್ ಅಭಿನಯದ ಸಲಗ ಕೂಡ ರೆಡಿಯಾಗಿದೆ.

ಸಲಗ ಆರಂಭದಿಂದಲೂ ಜೋರು ಸದ್ದು ಮಾಡುತ್ತಲೇ ಬಂದಿದೆ. ಈಗ ಹೊಸ ಸುದ್ದಿ ಅಂದರೆ ತಮಿಳುನಾಡಲ್ಲೂ ಸಲಗ ಸದ್ದು ಮಾಡುತ್ತಿದೆ.


ಹೌದು, ದುನಿಯಾ ವಿಜಯ್ ಅವರ ತಮಿಳು ಅಭಿಮಾನಿಗಳಿಂದ ವಿಜಯ್ ಅವರಿಗೆ ಜೈಕಾರ ಸಿಕ್ಕಿದೆ. ಇತ್ತೀಚೆಗೆ ತಮಿಳು ನಾಡಿಗೆ ದುನಿಯಾ ವಿಜಯ್ ಅವರು ಭೇಟಿ‌ ಕೊಟ್ಟ ಸಂದರ್ಭದಲ್ಲಿ ಅಲ್ಲಿನ ಅಭಿಮಾನಿಗಳು ಸಲಗ ಚಿತ್ರದ ಮೇಲಿಟ್ಟಿರೋ ಕ್ರೇಜ್ ಹಾಗೂ ವಿಜಯ್ ಅವರ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ರೀತಿ ಇದು.

Categories
ಸಿನಿ ಸುದ್ದಿ

ಸರಿಗಮಪ ಸಂಗೀತ ಮಹಾಯುದ್ಧ ; ಕಂಠದ ಜೊತೆ ಗೆದ್ದವರ ಕಾದಾಟ ! ವಿನ್ನರ್ಸ್ ಜೊತೆ ರನ್ನರ್ಸ್ ಇರ್ತಾರಾ?

ಜೀ‌ ಅಖಾಡದಲ್ಲಿ ಸರಿಗಮಪ ಮಹಾಯುದ್ಧಕ್ಕೆ ಕೌಂಟ್ ಡೌನ್ ಶುರುವಾಗಿದೆ. ದಿವ್ಯಮುಹೂರ್ತದಲ್ಲಿ ಸಂಗೀತ ಸಮರ ಏರ್ಪಡಿಸುವುದಕ್ಕೆ ಸಕಲ ಸಿದ್ದತೆ ನಡೆದಿದೆ. ಸರಿಗಮಪ ಸಿಂಗಿಂಗ್ ಶೋಗೆ ಹೊಸ ರೂಪ ಸಿಕ್ಕಿದ್ದು, ಸರಿಗಮಪ ಚಾಂಪಿಯನ್ ಶಿಪ್ ಅದ್ಧೂರಿಯಾಗಿ ಆರಂಭವಾಗ್ತಿದೆ.

ಸರಿಗಮಪ ಮನರಂಜನಾ ಲೋಕದ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ. ಜೀ ಕನ್ನಡದ ಹೆಮ್ಮೆಯ ಸಂಗೀತ ಕಾರ್ಯಕ್ರಮ. ಇಲ್ಲಿವರೆಗೂ ಭರ್ತಿ ಹದಿನೇಳು ಸೀಸನ್ ಗಳನ್ನ ಯಶಸ್ವಿಯಾಗಿ ಕಂಪ್ಲೀಟ್ ಮಾಡಿರುವ ಸರಿಗಮಪ
ಕಾರ್ಯಕ್ರಮಕ್ಕೆ ಹೊಸ ರೂಪ ಸಿಕ್ಕಿದೆ. ಸರಿಗಮಪ‌ ಚಾಂಪಿಯನ್ ‌ಶಿಪ್ ಅದ್ಧೂರಿ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ರಿಲೀಸ್ ಆಗಿರುವ ಪ್ರೋಮೋ ಕೂತೂಹಲ ಮೂಡಿಸಿದೆ.

ಈ ಶೋ ಗಾಗಿ ಇಡೀ ಕರುನಾಡು ಕೂತೂಹಲದಿಂದ
ಕಾಯುತ್ತೆ. ಯಾಕಂದ್ರೆ, ಕರುನಾಡ ಮೂಲೆಮೂಲೆಯಲ್ಲಿ ಎಲೆಮರೆಕಾಯಿಯಂತಿದ್ದ ಪ್ರತಿಭೆಗಳನ್ನ ಕರೆತಂದು, ಕಂಠದೊಳಗಿದ್ದ ಕಸುವನ್ನ ಕನ್ನಡಿಗರ ಮುಂದೆ ಅನಾವರಣ ಮಾಡಿ ಕರುನಾಡ ಮಡಿಲಿಗೆ ಗಾನಕೋಗಿಲೆಗಳನ್ನ ಅರ್ಪಣೆ ಮಾಡ್ತಾರೆ. ಆದರೆ, ಈ‌ ಭಾರಿ ಸ್ವರಾನ್ವೇಷಣೆಗೆ ಬ್ರೇಕ್ ಹಾಕಿದ್ದಾರೆ. ಬದಲಾಗಿ, ಈಗಾಗಲೇ ಸರಿಗಮಪ ಸ್ವರಸಾಮ್ರಾಜ್ಯದಲ್ಲಿ ಕಂಠಕುಣಿಸಿ ಸೈ‌ ಎನಿಸಿಕೊಂಡು ಕಿರೀಟ ಮುಡಿಗೇರಿಸಿಕೊಂಡವರನ್ನು ಮತ್ತೆ ವೇದಿಕೆಗೆ ಕರೆತರುತ್ತಿದ್ದಾರೆ. ಸರಿಗಮಪ ಚಾಂಪಿಯನ್ ಶಿಪ್ ಅಂಗಳದಲ್ಲಿ ಬರೀ ವಿನ್ನರ್ಸ್ ಇರುತ್ತಾರಾ? ಅಥವಾ ರನ್ನರ್ ಅಪ್ಸ್ ಗಳಿಗೂ ಅವಕಾಶ ಕೊಡ್ತಾರಾ ಎನ್ನುವುದು ಸದ್ಯಕ್ಕಿರುವ ಕೂತೂಹಲ.

ಸರಿಗಮಪ ಕೇವಲ ಸಿಂಗಿಂಗ್ ಶೋ‌ ಅಲ್ಲ. ಕಲೆಯಿದ್ದು ಕತ್ತಲೆ ತುಂಬಿದ ಎಷ್ಟೋ ಜನರ ಬಾಳಿಗೆ ಬೆಳಕಾದ ದಿವ್ಯಕಾರ್ಯಕ್ರಮ. ಹೀಗಾಗಿಯೇ, ಕಣ್ಣಿಲ್ಲದ ಸಹೋದರಿಯರಾದ ರತ್ನಮ್ಮ- ಮಂಜಮ್ಮ ಸೇರಿದಂತೆ ಮೋನಮ್ಮ, ಸಂಗೀತವ್ವ, ರುಬೀನಾ, ಹಳ್ಳಿಹೈದ ಹನುಮಂತ, ಸುನೀಲ್, ಮೆಹಬೂಬ್ ಸಾಬ್, ಇವರಷ್ಟೇ ಅಲ್ಲ‌ ಬಹುತೇಕ ಗ್ರಾಮೀಣ ಪ್ರತಿಭೆಗಳ ಪರಿಚಯವಾಯ್ತು. ತಮ್ಮೊಳಗಿನ ಪ್ರತಿಭೆ ಅರವಿಟ್ಟ ಇವರೆಲ್ಲರೂ ಕೂಡ ಕರುನಾಡ ಅಂಗಳದಲ್ಲಿ ಮೆರವಣಿಗೆ ಹೋಗಿಬಂದರು. ಇವರಲ್ಲಿ ಗೆಲುವಿನ‌ ಗದ್ದುಗೆ ಏರಿದವರಿಗೆ ಮತ್ತೊಮ್ಮೆ ಅವಕಾಶ ಸಿಗುತ್ತಾ ಕಾದು ನೋಡಬೇಕು.

ಅಂದ್ಹಾಗೇ, ಸರಿಗಮಪ ಚಾಂಪಿಯನ್ ಶಿಪ್ ಗೆದ್ದವರು ಮತ್ತೊಮ್ಮೆ ಗೆಲುವಿದ ಗದ್ದುಗೆಗಾಗಿ ಕಂಠದ ಜೊತೆ ಕಾದಾಡುವಂತಹ ಶೋ. ಸರಿಗಮಪ ಕಿರೀಟ ಮುಡಿಗೇರಿಸಿಕೊಂಡು ವಿಜೃಂಭಿಸಿದವರಿಗೆ ಮತ್ತೊಮ್ಮೆ ಸ್ವರಸಾಮ್ರಾಜ್ಯಕ್ಕೆ ಲಗ್ಗೆ ಇಡುವ ಅವಕಾಶ ಸಿಗುತ್ತಿದೆ. ಮಹಾಗುರುಗಳಾದ
ನಾದಬ್ರಹ್ಮ ಹಂಸಲೇಖ ಅವರೊಟ್ಟಿಗೆ ವಿಜಯ್ ಪ್ರಕಾಶ್, ಅರ್ಜುನ್ ಜನ್ಯಾ ಸಾರಥ್ಯದಲ್ಲಿ ಹಲವು ಸಂಗೀತ ದಿಗ್ಗಜರ ಸಮ್ಮುಖದಲ್ಲಿ ಚಾಂಪಿಯನ್ ಶಿಪ್ ಅದ್ದೂರಿ ಓಪನ್ನಿಂಗ್ ಪಡೆದುಕೊಳ್ಳಲಿದೆ. ಹೇಗಿರಲಿದೆ ಗೆದ್ದವರ ಸ್ವರಸಮರ ? ಕಣ್ಣರಳಿಸಿ ಕಾಯ್ತಾಯಿರಿ. ಶೀಘ್ರದಲ್ಲೇ ನಿಮ್ಮ ಮುಂದೆ ಬರಲಿದೆ.

ಎಂಟರ್‌ ಟೈನ್ಮೆಂಟ್ ಬ್ಯೂರೋ ಸಿನಿಲಹರಿ

error: Content is protected !!