Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಅಪ್ಪ ಮಗನ ಬಾಂಧವ್ಯದ ಹಾಡಿಗೆ ಅಪ್ಪು ಧ್ವನಿ

ಮಂಗಳವಾರ ರಜಾ ದಿನ ಚಿತ್ರದ ಸಾಂಗ್‌ ಮಂಗಳವಾರವೇ ರಿಲೀಸ್‌

ಸಾಂಗ್‌ ರಿಲೀಸ್‌ ಮಾಡಿದ ಅಭಿಷೇಕ್‌ ಅಂಬರೀಶ್‌ 

ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ, “ಮಂಗಳವಾರ ರಜಾದಿನ” ಸಿನಿಮಾ ಕೂಡ ಚಿತ್ರೀಕರಣಗೊಂಡು ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.‌

ಹೌದು, ಚಂದನ್‌ ಆಚಾರ್‌ ಅಭಿನಯದ “ಮಂಗಳವಾರ ರಜಾ ದಿನ” ಚಿತ್ರದ ಹಾಡು ಇದೀಗ ಹೊರಬಂದಿದೆ. ಈ ಚಿತ್ರದ ಹಾಡನ್ನು ನಟ ಅಭಿಷೇಕ್‌ ಅಂಬರೀಶ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಅಂದಹಾಗೆ, ಈ ಚಿತ್ರದ ಹಾಡನ್ನು ಗೌಸ್‌ಪೀರ್‌ ಬರೆದಿದ್ದು, ನಟ ಪುನೀತ್‌ರಾಜಕುಮಾರ್‌ ಹಾಡಿದ್ದಾರೆ. ಲಹರಿ ಮ್ಯೂಸಿಕ್‌ ಸಂಸ್ಥೆ ಮೂಲಕ ಈ ಹಾಡನ್ನು ಹೊರ ತರಲಾಗಿದೆ.


“ನೀನೇ ಗುರು, ನೀನೇ ಗುರಿ, ನೀನೆ ಗುರುತು…’ ಎಂದು ಸಾಗುವ ಹಾಡನ್ನು ಅಭಿಷೇಕ್ ಅಂಬರೀಶ್ ಗಣರಾಜ್ಯೋತ್ಸವದ ದಿನ ಬಿಡುಗಡೆ ಮಾಡಿ, ಹಾಡಿನ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ಹಾಡಿನ ಕುರಿತು ಮಾತನಾಡಿರುವ ಅಭಿಷೇಕ್‌ ಅಂಬರೀಷ್‌, “ತಂದೆ, ಮಗನ‌ ಭಾಂದವ್ಯದ ಹಾಡನ್ನು ಗೌಸ್‌ ಪೀರ್‌ ಚೆನ್ನಾಗಿ ಬರೆದಿದ್ದಾರೆ. ಹಾಗೆಯೇ ಪುನೀತ್‌ ರಾಜಕುಮಾರ್‌ ಕೂಡ ತುಂಬಾನೇ ಸೊಗಸಾಗಿ ಹಾಡಿದ್ದಾರೆ. ಇನ್ನು, ಈ ಹಾಡು ಕೇಳುವ ಪ್ರತಿಯೊಬ್ಬರಿಗೂ ತಮ್ಮ ತಂದೆ ನೆನಪಾಗುತ್ತಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ” ಎಂದು ಶುಭಹಾರೈಸಿದ್ದಾರೆ ಅಭಿಷೇಕ್‌ ಅಂಬರೀಶ್‌.

ತ್ರಿವರ್ಗ ಫಿಲಂಸ್ ‌ನಿರ್ಮಾಣದ ಈ ಚಿತ್ರವನ್ನು ಯುವಿನ್ ನಿರ್ದೇಶನ ಮಾಡಿದ್ದಾರೆ. ಫೆಬ್ರವರಿ 5 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದಹಾಗೆ, ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಋತ್ವಿಕ್ ಮುರಳಿಧರ್ ಸಂಗೀತ ನೀಡಿದ್ದಾರೆ.

 

Categories
ಸಿನಿ ಸುದ್ದಿ

ಚಕ್ರವರ್ತಿ ದಿ ಹೀರೋ – ಚಂದ್ರಚೂಡ್ ವಿಶೇಷ ಪಾತ್ರ

ಕೇಳು ಜನಮೇಜಯ

ಮತ್ತೊಂದು ಸಾಹಸದ ಚಿತ್ರ

ಸದಾ ಏನಾದರೊಂದು ಸುದ್ದಿಯಲ್ಲಿರುವ ಚಕ್ರವರ್ತಿ ಚಂದ್ರಚೂಡ ಈಗ ಮತ್ತೊಂದು ಸುದ್ದಿಯಲ್ಲಿದ್ದಾರೆ. ಪತ್ರಕರ್ತರಾಗಿ, ಒಳ್ಳೆಯ ಮಾತುಗಾರರಾಗಿ, ನಿರ್ದೇಶಕರಾಗಿ, ನಟರಾಗಿ ಸೈ ಎನಿಸಿಕೊಂಡಿರುವ ಅವರೀಗ, ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿರುವ ಚಂದ್ರಚೂಡ್, ಹೀಗೊಂದು ವಿಭಿನ್ನ ಶೀರ್ಷಿಕೆ ಇರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ಅಣಿಯಾಗಿದ್ದಾರೆ.
ಹೌದು, ಚಕ್ರವರ್ತಿ ಚಂದ್ರಚೂಡ್ ಈಗ “ಕೇಳು ಜನಮೇಜಯ” ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಜನವರಿ26ಕ್ಕೆ ಚಿತ್ರದ. ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಬೇರ್ ಬಾಡಿ ತೋರಿಸಿರುವ ಚಕ್ರವರ್ತಿ ಚಂದ್ರಚೂಡ್, ಇಲ್ಲಿ‌ ಖೈದಿಯೋ, ಅಮಾಯಕರೋ ಎಂಬ ಪ್ರಶ್ನೆಗೆ ಕಾರಣರಾಗಿದ್ದಾರೆ.
ಇನ್ನು ಈ ಚಿತ್ರವನ್ನು ಸಂತೋಷ್‌ ಕೊಡಂಕೇರಿ ನಿರ್ದೇಶನ ಮಾಡುತ್ತಿದ್ದಾರೆ. ರಘುನಾಥ್ ಎಚ್.ಎ. ಮತ್ತು ದೃಷ್ಟಿ ಮೀಡಿಯಾ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರ ತಯಾರಾಗುತ್ತಿದೆ. ಈ ಚಿತ್ರದ ಹಿಂದೆ ಶ್ರೀನಿ, ಧನ್ವಿಕ್ ಗೌಡ, ವಿನಾಯಕ್ ಗೌಡ, ರಘು, ಚಂದ್ರು, ಸಂತೋಷ್ ಆನಂದ್ ಮಧು ಸಾಸಿರ್ ಇದ್ದಾರೆ.


ಪೋಸ್ಟರ್ ನೋಡಿದರೆ ಇದೊಂದು ಅಪರಾಧದ ಹಿನ್ನೆಲೆಯಲ್ಲಿ ಸಾಗುವ ಚಿತ್ರ ಇರಬಹುದೇನೊ ಎಂದೆನಿಸಿದರೂ ಇಲ್ಲಿ ಹಲವು ಕುತೂಹಲಕಾರಿ ಅಂಶಗಳಿವೆ ಅನ್ನೋದು ಸತ್ಯ.
ಸದ್ಯಕ್ಕೆ ಪೋಸ್ಟರ್ ಬಿಡುಗಡೆಯಾಗಿದೆ. ಉಳಿದಂತೆ ಮತ್ತಷ್ಟು ಮಾಹಿತಿ ಜೊತೆ ಚಿತ್ರತಂಡ ಬರಲಿದೆ.

Categories
ಬ್ರೇಕಿಂಗ್‌ ನ್ಯೂಸ್

ಡಿಟೆಕ್ಟಿವ್‌ ದಿವಾಕರನ ಹೊಸ ಸಾಹಸ

ಇನ್ನೊಂದು ಕೇಸ್‌ ಮೂಲಕ ರಿಷಭ್‌ ಶೆಟ್ಟಿ ಎಂಟ್ರಿ

ಬೆಲ್‌ ಬಾಟಂ ಭಾಗ-2 ಸಜ್ಜು

ಬೆಲ್‌ ಬಾಟಂ…

ಕನ್ನಡ ಚಿತ್ರರಂಗದಲ್ಲಿ ಯಶಸ್ಸು ಪಡೆದ ಸಿನಿಮಾ. ಜಯತೀರ್ಥ ನಿರ್ದೇಶನದ ಈ ಚಿತ್ರದಲ್ಲಿ ರಿಷಭ್‌ ಶೆಟ್ಟಿ ಹೀರೋ ಆಗಿದ್ದರು. ಹರಿಪ್ರಿಯಾ ನಾಯಕಿಯಾಗಿದ್ದರು. ಈ ಚಿತ್ರ ಯಾವಾಗ, ದೊಡ್ಡ ಯಶಸ್ಸು ಪಡೆಯಿತೋ, ಆಗಲೇ ಮತ್ತೊಂದು ಸಿನಿಮಾ ಮಾಡುವ ಕುರಿತು ನಿರ್ದೇಶಕ ಜಯತೀರ್ಥ ಮತ್ತು ಕಥೆಗಾರ ದಯಾನಂದ್‌ ಯೋಚಿಸಿದ್ದರು.

ಅದರಂತೆ, “ಬೆಲ್‌ ಬಾಟಂ-2” ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಈಗ ಹೊಸ ಸಿನಿಮಾಗೆ ಎಲ್ಲಾ ತಯಾರಿಯೂ ನಡೆದಿದ್ದು, ಜನವರಿ 27ರಂದು ಚಿತ್ರದ ಶೀರ್ಷಿಕೆ ಅನಾವರಣಗೊಳ್ಳಲಿದೆ. ಅಧಿಕೃತವಾಗಿ ಬಿಡುಗಡೆಯಾಗುತ್ತಿರುವ ಚಿತ್ರದ ಶೀರ್ಷಿಕೆ ಏನೆಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಇಷ್ಟರಲ್ಲೇ ಟೈಟಲ್‌ ಹೊರಬರಲಿದ್ದು, ಚಿತ್ರದ ಇನ್ನಷ್ಟು ಮಾಹಿತಿಯನ್ನು ಹೊರಹಾಕಲಿದೆ ಚಿತ್ರತಂಡ.

Categories
ಸಿನಿ ಸುದ್ದಿ

ನಮ್‌ ಸ್ಟಾರ್‌ ಗ್ರೇಟ್‌ ಅನ್ನೋರಿಗೆ ಒಂದೇ ಅಖಾಡ! ಶುರುವಾಯ್ತು ಫ್ಯಾನ್ಸ್‌ ಕ್ರಿಕೆಟ್‌ ಲೀಗ್‌

ಸ್ಟಾರ್ಸ್‌ ಅಭಿಮಾನಿಗಳಿಗೆ ಹೀಗೊಂದು ಪಂದ್ಯ

ಇದೊಂದು ಸೌಹಾರ್ದಯುತ ಕ್ರಿಕೆಟ್‌ ಪಂದ್ಯಾವಳಿ

ಕ್ರಿಕೆಟ್‌ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಹುಡುಗರಿಂದ ಹಿಡಿದು ವೃದ್ಧರವರೆಗೂ ಕ್ರಿಕೆಟ್‌ ಅಂದರೆ ಪಂಚಪ್ರಾಣ. ಹೌದು, ಈಗ ಇಲ್ಲೇಕೆ ಕ್ರಿಕೆಟ್‌ ವಿಷಯ ಅಂದುಕೊಂಡ್ರಾ? ವಿಷಯ ಇದೆ. ಈ ಕ್ರಿಕೆಟ್‌ ಎಲ್ಲೆಡೆ ವಿಸ್ತಾರಗೊಂಡಿರುವುದು ಗೊತ್ತೇ ಇದೆ. ಸಿನಿಮಾ ನಟರು ಕೂಡ ಕ್ರಿಕೆಟ್‌ ಕ್ರೀಡೆಗೆ ಮಾರುಹೋಗಿರುವುದುಂಟು. ದೇಶ ದೇಶಗಳ ನಡುವೆ ಕ್ರಿಕೆಟ್‌ ಆಯ್ತು, ರಾಜ್ಯ ರಾಜ್ಯಗಳ ನಡುವೆಯೂ ಕ್ರಿಕೆಟ್‌ ಆಟ ಶುರುವಾಯ್ತು. ಕೆಸಿಎಲ್‌ (ಕರ್ನಾಟಕ ಕ್ರಿಕೆಟ್‌ ಲೀಗ್), ಸಿಸಿಎಲ್‌ (ಸೆಲಬ್ರಿಟಿ ಕ್ರಿಕೆಟ್‌ ಲೀಗ್‌) ಕೂಡ ಪ್ರತಿ ವರ್ಷ ನಡೆಯುತ್ತಲೇ ಇದೆ. ಈಗ ಎಫ್‌ಸಿಎಲ್‌ ಕೂಡ ಅಖಾಡಕ್ಕಿಳಿಯಲಿದೆ.


ಎಫ್‌ಸಿಎಲ್‌ ಅಂದರೆ, ಫ್ಯಾನ್ಸ್‌ ಕ್ರಿಕೆಟ್‌ ಲೀಗ್.‌ ಇದುವರೆಗೆ ಸ್ಟಾರ್‌ ನಡುವೆ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿತ್ತು. ಅಭಿಮಾನಿಗಳು ನೋಡಿ ಚಪ್ಪಾಳೆ, ಶಿಳ್ಳೆ ತಟ್ಟುತ್ತಿದ್ದರು. ಈಗ ಅಂತಹ ಸ್ಟಾರ್‌ಗಳ ಅಭಿಮಾನಿಗಳಿಗಾಗಿಯೇ ಫ್ಯಾನ್ಸ್‌ ಕ್ರಿಕೆಟ್‌ ಲೀಗ್‌ ಶುರುವಾಗಿದೆ. ಈಗಾಗಲೇ ಐದು ಸೀಸನ್‌ ಮುಗಿಸಿರುವ ಫ್ಯಾನ್ಸ್‌ ಕ್ರಿಕೆಟ್‌ ಲೀಗ್‌ ಈಗ ಆರನೇ ಆವೃತ್ತಿಯತ್ತ ಸಾಗಿದೆ.
ಜನವರಿ ‌26 ರ ಗಣರಾಜ್ಯೋತ್ಸವ ದಿನದಂದೇ ಎಫ್‌ಸಿಎಲ್‌ಗೆ ಚಾಲನೆ ಸಿಗಲಿದ್ದು, ಗೊರಗುಂಟೆ ಪಾಳ್ಯದಲ್ಲಿರುವ ರಾಜಣ್ಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ಮುನಿರತ್ನ,‌ ನಾಗೇಂದ್ರ ಪ್ರಸಾದ್, ಕೆ.ಪಿ.ಶ್ರೀಕಾಂತ್‌,ರಘುಮುಖರ್ಜಿ, ಚೇತನ್‌ ಕುಮಾರ್‌, ಪವನ್‌ ಒಡೆಯರ್‌, ಸುನಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

 

ಇಷ್ಟಕ್ಕೂ ಈ ಫ್ಯಾನ್ಸ್‌ ಕ್ರಿಕೆಟ್‌ ಲೀಗ್‌ನಲ್ಲಿ ಯಾರೆಲ್ಲಾ ಸ್ಟಾರ್‌ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂಬ ಪ್ರಶ್ನೆ ಸಹಜ. ಅದಕ್ಕೆ ಉತ್ತರವಿದು. ಶಿವರಾಜಕುಮಾರ್‌ ಫ್ಯಾನ್ಸ್‌, ರಮ್ಯಾ ಫ್ಯಾನ್ಸ್‌, ಸುದೀಪ್‌ ಫ್ಯಾನ್ಸ್‌, ದರ್ಶನ್‌ ಫ್ಯಾನ್ಸ್‌, ಗಣೇಶ್‌ ಫ್ಯಾನ್ಸ್‌ ಮತ್ತು ಪ್ರಜ್ವಲ್‌ ದೇವರಾಜ್‌ ಈ ಆರು ಸ್ಟಾರ್ಸ್‌ ಅಭಿಮಾನಿಗಳು ಈ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಇನ್ನು, ನಮ್‌ ಟಾಕೀಸ್‌ ಈ ಪಂದ್ಯಾವಳಿಯನ್ನು ಆಯೋಜನೆ ಮಾಡಿದ್ದು, ಪ್ರತಿ ವರ್ಷ ಒಬ್ಬೊಬ ಸಿನಿಮಾ ಲೆಜೆಂಡರಿ ನೆನಪಿಗೆ ಫ್ಯಾನ್ಸ್‌ ಕ್ರಿಕೆಟ್‌ ಲೀಗ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿತ್ತು. ಆದರೆ, ಈಗ ನಟ ಜಗ್ಗೇಶ್‌ ಅವರ ಪ್ರೋತ್ಸಾಹದೊಂದಿಗೆ ನಡೆಸಲಾಗುತ್ತಿದೆ.

ಎಲ್ಲಾ ಸ್ಟಾರ್‌ ಫ್ಯಾನ್ಸ್‌ಗಳು ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ಜಗಳ ಶುರುಮಾಡುತ್ತಲೇ ಇರುತ್ತಾರೆ. ಸ್ಟಾರ್‌ಗಳು ಮಾತ್ರ ಚೆನ್ನಾಗಿಯೇ ಇರುತ್ತಾರೆ. ಆದರೆ, ಅಂತಹ ಸ್ಟಾರ್ಸ್ ಫ್ಯಾನ್ಸ್‌ಗಳನ್ನು‌ ಒಂದೆಡೆ ಕಲೆಹಾಕಿ, ಅವರಿಗೆ ಸೌಹಾರ್ದತೆಗಾಗಿ ಈ ಪಂದ್ಯಾವಳಿ ನಡೆಸುವ ಮೂಲಕ ಅವರಲ್ಲೂ ಗೆಳೆತನ ಮೂಡಿಸುವ ಒಂದು ಪ್ರಯತ್ನ ಇಲ್ಲಾಗುತ್ತಿದೆ ಎಂಬುದು ಆಯೋಜಕರ ಮಾತು.


ಈ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಎಲ್ಲಾ ಸ್ಟಾರ್ಸ್‌ ಅಭಿಮಾನಿಗಳು ಪ್ರೀತಿಯಿಂದಲೇ ಪಾಲ್ಗೊಳ್ಳುತ್ತಿರುವುದು ವಿಶೇಷ. ಇಲ್ಲಿ ಒಟ್ಟು ಆರು ತಂಡಗಳಿದ್ದು, ನಾಲ್ಕು ತಂಡಗಳು ಸೆಮಿಫೈನಲ್‌ ತಲುಪಲಿವೆ. ಅವುಗಳ ಪೈಕಿ ಎರಡು ತಂಡಗಳು ಅಂತಿಮ ಸೆಣೆಸಾಟ ನಡೆಸಲಿವೆ. ಅಂತಿಮವಾಗಿ ಆ ಎರಡಲ್ಲಿ ಒಂದು ತಂಡ ಜಯಶಾಲಿಯಾಗಿ ಹೊರಹೊಮ್ಮಲಿದೆ. ಗೆದ್ದ ತಂಡಕ್ಕೆ ಟ್ರೋಫಿ ವಿತರಣೆ ಮಾಡಲಾಗುತ್ತಿದೆ.

Categories
ಸಿನಿ ಸುದ್ದಿ

ಮದರಂಗಿ ಕೃಷ್ಣನ ಹೊಸ ಚಿತ್ರದಲ್ಲಿ ಪವರ್‌ಸ್ಟಾರ್‌!

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್‌ ನಿರ್ದೇಶನ

“ಮದರಂಗಿ” ಕೃಷ್ಣ ಯಾವಾಗ “ಲವ್‌ ಮಾಕ್ಟೇಲ್‌” ಸಿನಿಮಾ ಮೂಲಕ ಸುದ್ದಿಯಾಗಿಬಿಟ್ಟರೋ, ಅಲ್ಲಿಂದ ಅವರ ಅದೃಷ್ಟದ ಬಾಗಿಲು ತೆರೆದಿದ್ದು ನಿಜ. ಸಾಲು ಸಾಲು ಸಿನಿಮಾಗಳಲ್ಲಿ ಮದರಂಗಿ ಕೃಷ್ಣ ನಟಿಸುತ್ತಿರೋದು ನಿಜ. ಈಗ ಹೊಸ ಸುದ್ದಿ ಅಂದರೆ, ನೃತ್ಯ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಅವರಿಗೊಂದು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಮದರಂಗಿ ಕೃಷ್ಣ ಹೀರೋ. ಇನ್ನು, ನಾಗೇಂದ್ರ ಪ್ರಸಾದ್‌ ಅವರು ಮಾಡುತ್ತಿರುವ ಹೊಸ ಚಿತ್ರದ ಮತ್ತೊಂದು ವಿಶೇಷ ಅಂದರೆ, ಚಿತ್ರದಲ್ಲಿ ಪುನೀತ್‌ ರಾಜ್‌ಕುಮಾರ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, ಸದ್ಯಕ್ಕೆ ಈ ಸುದ್ದಿ ಜೋರಾಗಿದೆ. ಅಂದಹಾಗೆ, ಕೃಷ್ಣ ನಟಿಸಿದರೋದು ಸ್ವಮೇಕ್‌ ಸಿನಿಮಾದಲ್ಲಲ್ಲ. ಬದಲಾಗಿ ತಮಿಳು ಸಿನಿಮಾದ ರಿಮೇಕ್‌ ಚಿತ್ರ. ಅದು “ಓ ಮೈ ಕಡವುಲೆ’ ಸಿನಿಮಾ. ಈ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲು ತಯಾರಿ ನಡೆಸಲಾಗಿದೆ. ಈ ಚಿತ್ರ ರಿಮೇಕ್‌ ಆಗಿದ್ದರೂ, ಕನ್ನಡಕ್ಕೆ ಒಂದಷ್ಟು ಬದಲಾವಣೆ ಮಾಡಿಕೊಂಡು. ಕನ್ನಡದಲ್ಲಿ ತಯಾರಾಗುತ್ತಿದೆ. ಇನ್ನು, ಈ ಮೂಲ ಚಿತ್ರದಲ್ಲಿ ಅಶೋಕ್ ಸೆಲ್ವನ್ ನಾಯಕರಾಗಿದ್ದರು. ರಿತಿಕಾ ಸಿಂಗ್ ನಾಯಕಿಯಾಗಿದ್ದರು. ಅತಿಥಿ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ನಟಿಸಿದ್ದರು.

ಈಗ ಕನ್ನಡದಲ್ಲಿ ತಯಾರಾಗಲಿರುವ ಈ ಚಿತ್ರದಲ್ಲಿ ವಿಜಯ್‌ ಸೇತುಪತಿ ನಟಿಸಿದ್ದ ಪಾತ್ರದಲ್ಲಿ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರು ನಟಿಲು ಒಪ್ಪಿದ್ದಾರೆ ಎನ್ನಲಾಗಿದೆ. ಈಗಾಗಲೇ ಪುನೀತ್ ಅವರ ಜೊತೆ  ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಅವರು ನಟಿಸುವ ಬಗ್ಗೆ ಯೋಚಿಸಿದ್ದಾರೆ ಎನ್ನಲಾಗಿದೆ. ಅದೇನೆ ಇದ್ದರೂ, ಇಲ್ಲೀಗ ಸಿನಿಮಾತಂಡ ಕೂಡ ಆ ಕುರಿತಂತೆ ವಿಷಯ ಹೊರಹಾಕಬೇಕಿದೆ.  ನಾಗೇಂದ್ರ ಪ್ರಸಾದ್‌ ಅಂದಾಕ್ಷಣ, ಬಹಳಷ್ಟು ಮಂದಿಗೆ ಗೊತ್ತಿಲ್ಲ. ಅದೇ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ ಸಹೋದರ ಅಂದರೆ ಗೊತ್ತಾಗುತ್ತೆ. ಮೂಗುರು ಸುಂದರಂ ಅವರ ಮೂರನೇ ಪುತ್ರ ನಾಗೇಂದ್ರ ಪ್ರಸಾದ್‌ ಈಗಾಗಲೇ ತಮಿಳು ಸಿನಿಮಾಗಳಲ್ಲಿ ಕೆಲಸ ಮಾಡಿದ್ದು, ಅಲ್ಲೂ ಜೋರು ಸುದ್ದಿಯಾಗಿದ್ದಾರೆ. ಕನ್ನಡದಲ್ಲಿ ನಾಗೇಂದ್ರ ಪ್ರಸಾದ್ ಅವರು “೧೨೩”, “ಮನಸೆಲ್ಲಾ ನೀನೆ” ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ವರ್ಷಗಳ ಬಳಿಕ ಕನ್ನಡಕ್ಕೆ ಎಂಟ್ರಿ ಕೊಡುತ್ತಿರುವ ನಾಗೇಂದ್ರ ಪ್ರಸಾದ್ ಈಗ ಇಲ್ಲಿ ನಿರ್ದೇಶಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Categories
ಸಿನಿ ಸುದ್ದಿ

ತೆರೆ ಮೇಲೂ ಸೈ ಅಂತಾರೆ ಮಾಲೂರು ಶ್ರೀನಿವಾಸ್

 

ಇದೇ‌ ಮೊದಲ ಸಲ 5ಡಿ ಚಿತ್ರದಲ್ಲಿ ಖಡಕ್ ಕಾಪ್

ನೃತ್ಯ ನಿರ್ದೇಶಕನಾಗಿ ಇದ್ದವನು ನಾನು.‌ ಸದಾ ತೆರೆ ಹಿಂದೆ ಇರುವಂಥವನಿಗೆ ಒಳ್ಳೆಯ ಅವಕಾಶವಿದು.
ನಾನು ಈ ಹಿಂದೆ ಈಟಿವಿ, ಕಸ್ತೂರಿ, ಉದಯ, ಸುವರ್ಣ, ಜೀ ಕನ್ನಡ ಸೇರಿದಂತೆ ಡ್ಯಾನ್ಸ್ ರಿಯಾಲಿಟಿ ಶೋ ಮಾಡಿದ ಹೆಗ್ಗಳಿಕೆ ಇದೆ…

ಮಾಲೂರು ಶ್ರೀನಿವಾಸ್. ಕನ್ನಡ‌ ಚಿತ್ರರಂಗ ಕಂಡ ಯಶ್ವಿ ನೃತ್ಯ ನಿರ್ದೇಶಕ. ಈ ಬಣ್ಣದ ಲೋಕ ಸ್ಪರ್ಶಿಸಿ ಎರಡು ದಶಕ ಕಳೆದಿರುವ ಮಾಲೂರು ಶ್ರೀನಿವಾಸ್, ಸುಮಾರು 400ಕ್ಕೂ ಹೆಚ್ಚು ಚಿತ್ರಗಳಿಗೆ ನೃತ್ಯ ನಿರ್ದೇಶಕರಾಗಿ‌ ಕೆಲಸ‌ ಮಾಡಿದ್ದಾರೆ. ಕನ್ನಡದ ಬಹುತೇಕ ಸ್ಟಾರ್ ಸೇರಿದಂತೆ ಹೊಸಬರಿಗೂ ಸ್ಟೆಪ್ ಹೇಳಿಕೊಟ್ಟ ಕೀರ್ತಿ ಇವರದು.


ಇಷ್ಟಕ್ಕೂ ಈ ಡ್ಯಾನ್ಸ್ ಮಾಸ್ಟರ್ ಮಾಲೂರು ಶ್ರೀನಿವಾಸ್ ಕುರಿತು ಇಷ್ಟೊಂದು ಪೀಠಿಕೆ‌ಯಾಕೆ ಗೊತ್ತಾ? ಮಾಲೂರು ತೆರೆ ಹಿಂದಷ್ಟೇ ಅಲ್ಲ, ತೆರೆ ಮೇಲೂ ಕಾಣಿಸಿಕೊಂಡಿದ್ದಾರೆ. ಹಾಗಂತ, ಅವರಿಗೆ ಇದು ಹೊಸದಲ್ಲ. ಹಲವು ಸಿನಿಮಾಗಳಲ್ಲಿ ಸ್ಟಾರ್ ಜೊತೆ ಹೆಜ್ಜೆ ಹಾಕಿದ್ದಾರೆ.

ಸಣ್ಣಪುಟ್ಟ ಪಾತ್ರಕ್ಕೂ ಜೈ ಎಂದಿದ್ದಾರೆ. ಆದರೆ, ಈಗ ಮೊದಲ ಸಲ‌ ಖಡಕ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.
ಹೌದು, ಮಾಲೂರು ಶ್ರೀನಿವಾಸ್, ಎಅ್.ನಾರಾಯಣ್ ನಿರ್ದೇಶನದ “5ಡಿ” ಚಿತ್ರದಲ್ಲಿ ಒಂದೊಳ್ಳೆಯ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿ ಗನ್ ಹಿಡಿದಿದ್ದಾರೆ.


ಆ ಕುರಿತು ಹೇಳುವ ಮಾಲೂರು ಶ್ರೀನಿವಾಸ್, ” ಇದು ಮೊದಲ ಕಾಪ್ ಪಾತ್ರ. ನಾನು ಹಿಂದೆ ಒಂದಷ್ಟು ಸಿನಿಮಾದಲ್ಲಿ‌ ನಟಿಸಿದ್ದರೂ, ಈ ರೀತಿಯ ಪಾತ್ರ ಮಾಡಿರಲಿಲ್ಲ. ಈಗ ನಾರಾಯಣ್ ಸರ್ ನನ್ನ ಗುರುಗಳು. ಅವರ ಎಲ್ಲಾ ಸಿನಿಮಾಗಳಿಗೂ ನಾನೇ ಕೋರಿಯೋಗ್ರಾಫರ್. ಹಾಗಾಗಿ ಇಲ್ಲೂ ಹಾಡುಗಳಿಗೆ ಕೋರಿಯೋಗ್ರಾಫ್ ಮಾಡಿದ್ದೇನೆ. ನಾರಾಯಣ್ ಸರ್ ಇಲ್ಲಿ ಕಾಪ್ ಪಾತ್ರ ಮಾಡಿಸಿದ್ದಾರೆ. ಈಗಾಗಲೇ ಆ ಸೀನ್ ಚಿತ್ರೀಕರಣಗೊಂಡಿದೆ.


ನಾನೊಬ್ಬ ಕಡಕ್ ಪೊಲೀಸ್ ಅಧಿಕಾರಿ. ನನ್ ಕಂಟ್ರೋಲ್ ಇರುವ ಒಂದು ಪೊಲೀಸ್ ಸ್ಟೇಷನ್ ಅಧಿಕಾರಿ‌ ನಾನು. ಚೆನ್ನಾಗಿದೆ. ಮೂರು‌ ದಿನಗಳ ಕಾಲ‌ ನನ್ನ ಎಪಿಸೋಡ್ ಮಾಡಲಾಗಿದೆ. ಆದಿತ್ಯ ಅವರ ಜೊತೆಗಿನ ಕಾಂಬಿನೇಷನ್ ಇಲ್ಲ.


ಒಂದು ತನಿಖೆ ಅಧಿಕಾರಿ. ಒಳ್ಳೆಯ ಪಾತ್ರವದು. ನಿರ್ದೇಶಕರು ತುಂಬಾ ಚೆನ್ನಾಗಿ ತೋರಿಸಿದ್ದಾರೆ. ನಂಬರ್ ಆಫ್ ಶಾಟ್ಸ್, ಬಿಲ್ಡಪ್ಸ್ ಇವೆ. ಒಂದು ದಿನ ಫುಲ್ ಇಂಟ್ರಡಕ್ಷನ್ ಸೀನ್ ಮಾಡಿದ್ದಾರೆ. ಎಲ್ಲರಿಗೂ ಮಾಲೂರು ಸ್ಕ್ರೀನ್ ಮೇಲೆ ಬೇರೆ ರೀತಿ ಕಾಣುತ್ತಾರೆ. ಈ ಚಿತ್ರದಲ್ಲಿ ನಾನು ತೆರೆಯ ಹಿಂದೆ, ಮುಂದೆ ಎರಡು ರೀತಿ ಕೆಲಸ ಮಾಡಿದ್ದೇನೆ.

ಸಾಂಗ್ ಗೂ ಕೋರಿಯೊಗ್ರಾಫ್ ಮಾಡಿದ್ದೇನೆ. ಕಾಪ್ ಆಗಿಯೂ ನಟಿಸಿದ್ದೇನೆ. ಇದೊಂದು ಅಪರೂಪದ ಪಾತ್ರ. ನಾರಾಯಣ್ ಸರ್ ಕರೆದು ಈ ಪಾತ್ರ ಮಾಡಿ‌ ಅಂದಾಗ, ಇಲ್ಲ ಅನ್ನೋಕೆ ಆಗಲಿಲ್ಲ. ಮಾಡಿದೆ.
ನೃತ್ಯ ನಿರ್ದೇಶಕನಾಗಿ ಇದ್ದವನು ನಾನು.‌ ಸದಾ ತೆರೆ ಹಿಂದೆ ಇರುವಂಥವನಿಗೆ ಇದೊಂದು ಒಳ್ಳೆಯ ಅವಕಾಶ.
ನಾನು ಈ ಹಿಂದೆ ಈಟಿವಿ, ಕಸ್ತೂರಿ, ಉದಯ, ಸುವರ್ಣ, ಜೀ ಕನ್ನಡ ಸೇರಿದಂತೆ ಡ್ಯಾನ್ಸ್ ರಿಯಾಲಿಟಿ ಶೋ ಮಾಡಿದ ಹೆಗ್ಗಳಿಕೆ ಇದೆ.

ಬಹುತೇಕ ವಾಹಿನಿಗಳಿಗೆ ರಿಯಾಲಿಟಿ ಶೋಗಳಿಗೆ ಮೊದಲು ಎಂಟ್ರಿಕೊಟ್ಟವನು ಎಂಬ ಹೆಮ್ಮೆ‌ಯೂ ಇದೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಡ್ಯಾನ್ಸ್ ರಿಯಾಲಿಟಿ ಶೋ ಮಾಡಿದವನು. ಅಲ್ಲಿಂದ ಒಂದು ಡ್ಯಾನ್ಸ್ ಶೋ ಸಂಗ್ರಾಮ ಮಾಡಿದ ಖುಷಿ ಇದೆ. “ಕುಣಿಯೋಣು ಬಾರಾ” ಎಂಬ ಜನಪ್ರಿಯ ಶೋ ಮೂಲಕ ಹೊಸ ಡ್ಯಾನ್ಸ್ ಕ್ರಾಂತಿಯೇ ಆಗೋಯ್ತು. ಆಗಲೇ 9 ಸೀಸನ್ ಮಾಡಿದ್ದೆ. ಆ ದಿನಗಳಲ್ಲೇ‌ ನನಗೆ ಹೀರೋ ಆಗಿ ನಟಿಸುವ ಅವಕಾಶ ಬಂದಿದ್ದವು.

ಆದರೆ, ನಾನು ಆಗ ಬಿಝಿ ಇದ್ದಂತಹ ಕಾಲಘಟ್ಟ, ಒಂದು ಕಡೆ ರಿಯಾಲಿಟಿ ಶೋ, ಇನ್ನೊಂದು ಕಡೆ‌‌ ಸಾಲು‌ ಸಾಲು ಸಿನಿಮಾಗಳಿದ್ದವು. ಹಾಗಾಗಿ ಮಾಡಲು ಸಾಧ್ಯವಾಗಿರಲಿಲ್ಲ. ಈಗ ನಟನೆಯತ್ತ ವಾಲಿದ್ದೇನೆ. ನನಗೆ ಸೂಕ್ತ ಎನಿಸುವ ಪಾತ್ರ ಇದ್ದರೆ ಖಂಡಿತ ಮಾಡ್ತೀನಿ. ಸದ್ಯ ಒಂದಷ್ಟು ಸಿನಿಮಾಗಳ ಮಾತುಕತೆ ನಡೆಯುತ್ತಿದೆ” ಎನ್ನುತ್ತಾರೆ ಮಾಲೂರು ಶ್ರೀನಿವಾಸ್.


ಅದೇನೆ ಇರಲಿ‌‌ ದಶಕಗಳ‌ ಕಾಲ ನೃತ್ಯ ನಿರ್ದೇಶಕರಾಗಿರುವ ಮಾಲೂರು ಶ್ರೀನಿವಾಸ್, ಈಗ ನಟನೆ ಕಡೆ ಗಮನ ಹರಿಸಿದ್ದಾರೆ. ಒಬ್ಬ ಯಶಸ್ವಿ ಡ್ಯಾನ್ಸ್ ಮಾಸ್ಟರ್ ಆಗಿರುವ ಅವರು, ಒಳ್ಳೆಯ ಕಲಾವಿದರಾಗಿಯೂ ಹೊರ ಹೊಮ್ಮಲಿ ಎಂಬುದು “ಸಿನಿಲಹರಿ” ಹಾರೈಕೆ.

Categories
ಸಿನಿ ಸುದ್ದಿ

ಬಿಗ್‌ ಬಜೆಟ್‌ ನಿರ್ಮಾಪಕರಿಗೆ ಕೊರೊನಾ ಕಲಿಸಿದ ಹೊಸ ಪಾಠ!

ಅರಿವಾದ ಬಳಿಕ ನಾವೆಲ್ಲಾ ಒಂದೇ ಎಂಬ ಘೋಷಣೆ

ಈ ಹಿಂದೆ ಚಿತ್ರಮಂದಿರಕ್ಕೆ ಯಾರು  ಬರಲಿ, ಬಿಡಲಿ ಅದರ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಹೊಸಬರಂತೂ ಸ್ಟಾರ್‌ ಚಿತ್ರಗಳ ಮಧ್ಯೆಯೂ ನುಸುಳಿ ಬಂದು ಜನರನ್ನ ಆಕರ್ಷಿಸಲು ಹೆಣಗಾಡುತಿದ್ದ ಪಾಡು ಹೇಳತೀರದು. ಆಗ, ನಿರ್ಮಾಪಕರ ನಡುವೆ ಅಷ್ಟಾಗಿ ಹೊಂದಾಣಿಕೆ ಇಲ್ಲದ ಕಾರಣವೋ ಏನೋ, ಒಂದಷ್ಟು ಚಿತ್ರಗಳು ಒಮ್ಮೆಲೆ ಚಿತ್ರಮಂದಿರಗಳಿಗೆ ಅಪ್ಪಳಿಸುವ ಮೂಲಕ ಗೊಂದಲ ಸೃಷ್ಟಿಸಿಬಿಡುತ್ತಿದ್ದವು. ಚಿತ್ರಮಂದಿರಕ್ಕೆ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗುತ್ತಿದ್ದರಿಂದ ಯಾವ ಸಿನಿಮಾ ನೋಡಬೇಕು, ಬಿಡಬೇಕು ಎಂಬ ಗೊಂದಲದಲ್ಲಿ ಪ್ರೇಕ್ಷಕ ಇರುತ್ತಿದ್ದದ್ದು ಕಾಮನ್.‌ ಕೊರೊನಾ ಮುನ್ನ ಇದೆಲ್ಲಾ ಸಹಜವಾಗಿಯೇ ಇತ್ತು. ಆದರೆ ಈಗ…

ಕನ್ನಡ ಚಿತ್ರರಂಗದಲ್ಲೀಗ ಸಿನಿಮಾಗಳ ಬಿಡುಗಡೆ ಪರ್ವ ಜೋರಾಗಿದೆ. ಕೊರೊನಾ ಹಾವಳಿ ಕಡಿಮೆಯಾದ ನಂತರದ ದಿನಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈಗ ಕನ್ನಡ ಸಿನಿಮಾರಂಗದಲ್ಲಿ ಎಲ್ಲವೂ ಸರಿಯಾಗಿದೆ. ಹೌದು, ಕೊರೊನಾ ಮುಂಚಿನ ದಿನಗಳಲ್ಲಿ ಚಿತ್ರರಂಗ ಸಿಕ್ಕಾಪಟ್ಟೆ ಶೈನ್‌ ಆಗಿತ್ತು. ಹಾಗಂತ, ಈಗ ಇಲ್ಲವೆಂದಲ್ಲ. ಎಂದಿಗಿಂತಲೂ ಈಗ ಚಿತ್ರರಂಗ ಬಲವಾಗಿದೆ. ಜೋಶ್‌ ಆಗಿಯೂ ಇದೆ. ಈ ಮಾತು ನಿಜ. ಮೊದಲೆಲ್ಲಾ ವಾರಕ್ಕೆ ಎಂಟು, ಹತ್ತು ಸಿನಿಮಾಗಳು ತೆರೆಕಂಡಿದ್ದನ್ನು ಗಮನಿಸಬಹುದು.

ಅಗೆಲ್ಲಾ ಚಿತ್ರಮಂದಿರಕ್ಕೆ ಯಾರು  ಬರಲಿ, ಬಿಡಲಿ ಅದರ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಹೊಸಬರಂತೂ ಸ್ಟಾರ್‌ ಚಿತ್ರಗಳ ಮಧ್ಯೆಯೂ ನುಸುಳಿ ಬಂದು ಜನರನ್ನ ಆಕರ್ಷಿಸಲು ಹೆಣಗಾಡುತಿದ್ದ ಪಾಡು ಹೇಳತೀರದು. ಹಾಗೆಲ್ಲಾ, ನಿರ್ಮಾಪಕರ ನಡುವೆ ಅಷ್ಟಾಗಿ ಹೊಂದಾಣಿಕೆ ಇಲ್ಲದ ಕಾರಣವೋ ಏನೋ, ಒಂದಷ್ಟು ಚಿತ್ರಗಳು ಒಮ್ಮೆಲೆ ಚಿತ್ರಮಂದಿರಗಳಿಗೆ ಅಪ್ಪಳಿಸುವ ಮೂಲಕ ಗೊಂದಲ ಸೃಷ್ಟಿಸಿಬಿಡುತ್ತಿದ್ದವು. ಚಿತ್ರಮಂದಿರಕ್ಕೆ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗುತ್ತಿದ್ದರಿಂದ ಯಾವ ಸಿನಿಮಾ ನೋಡಬೇಕು, ಬಿಡಬೇಕು ಎಂಬ ಗೊಂದಲದಲ್ಲಿ ಪ್ರೇಕ್ಷಕ ಇರುತ್ತಿದ್ದದ್ದು ಕಾಮನ್.‌ ಕೊರೊನಾ ಮುನ್ನ ಇದೆಲ್ಲಾ ಸಹಜವಾಗಿಯೇ ಇತ್ತು. ಆದರೆ ಈಗ…


ಈಗ ಕಾಲ ಬದಲಾಗಿದೆ. ಕೊರೊನಾ ಒಳ್ಳೆಯ ಪಾಠವನ್ನೂ ಕಲಿಸಿದೆ. ಅದರಲ್ಲೂ ಸಿನಿಮಾ ಮಂದಿಗೆ ಸಾಕಷ್ಟು ಪಾಠ ಕಲಿಸಿದೆ ಅಂದರೆ ತಪ್ಪಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಕಾರ್ಯಚಟುವಟಿಕೆಗಳು ಶುರುವಾಗಿದ್ದರೂ, ಚಿತ್ರರಂಗ ಮಾತ್ರ ಶುರುವಾಗಿರಲಿಲ್ಲ. ಸರ್ಕಾರ ಶೇ.೫೦ರಷ್ಟು ಮಾತ್ರ ಅನುಮತಿ ನೀಡಿದೆ. ಈ ಅನುಮತಿಯ ಆಧಾರದ ಮೇಲೆ ಎಲ್ಲವೂ ನಡೆಯುತ್ತಿದೆ. ಒಂದಷ್ಟು ಚಿತ್ರಗಳು ತೆರೆಕಂಡಿವೆ. ಈಗ ಬಿಗ್‌ ಬಜೆಟ್‌ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಕೊರೊನಾ ಸಾಕಷ್ಟು ಸಮಸ್ಯೆ ತಂದೊಡ್ಡಿದ್ದಲ್ಲದೆ, ಎಲ್ಲರಿಗೂ ಒಂದು ತಕ್ಕ ಪಾಠ ಕಲಿಸಿದ್ದರಿಂದಲೇ ಈಗ ಬಿಗ್‌ ಬಜೆಟ್‌ ಚಿತ್ರಗಳ ನಿರ್ಮಾಪಕರು ಒಂದಾಗಿದ್ದಾರೆ.

ತಮ್ಮ ತಮ್ಮಲ್ಲೇ ಬಿಡುಗಡೆಯ ಪೈಪೋಟಿ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲ, ಚಿತ್ರಮಂದಿರಗಳಲ್ಲಿ ಶೇಕಡವಾರು ಬದಲಾಗಿ, ಮೊದಲಿನಂತೆ ಬಾಡಿಗೆ ವ್ಯವಸ್ಥೆಯೇ ಇರಬೇಕು ಎಂದು ಒಕ್ಕೊರಲ ಮನವಿ ಮಾಡಿದ್ದಾರೆ. ಇಷ್ಟಕ್ಕೂ ಬಿಗ್‌ ಬಜೆಟ್‌ ನಿರ್ಮಾಪಕರು ಸೇರಿ ಹೀಗೆಲ್ಲಾ ಒಗ್ಗಟ್ಟಿನ ಮಂತ್ರ ಜಪಿಸೋಕೆ ಕಾರಣ, “ಪೊಗರು” ರಿಲೀಸ್.‌ ಹೌದು, ಇತ್ತೀಚೆಗೆ ಚಿತ್ರದ ಬಿಡುಗಡೆ ಕುರಿತು ಚಿತ್ರತಂಡ ಘೋಷಣೆ ಮಾಡಿತು. ಫೆಬ್ರವರಿ ೧೧ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಅಂದು ಆ ಚಿತ್ರದ ಬಿಡುಗಡೆ ಘೋಷಣೆ ಸಂದರ್ಭದಲ್ಲಿ ಎಲ್ಲರೂ ವೇದಿಕೆ ಮೇಲೆ ಒಗ್ಗಟ್ಟಿನ ಮಂತ್ರ ಜಪಿಸಿದ್ದು ದಿಟ. ಅಷ್ಟಕ್ಕೂ ಅವರು ಒಗ್ಗಟ್ಟು ಮಂತ್ರ ಹೇಳಿದ್ದಿಷ್ಟು. ಸಿನಿಮಾ ರಿಲೀಸ್‌ಗೆ ಸಾಲು ಸಾಲು ಬಿಗ್‌ ಬಜೆಟ್‌ ಚಿತ್ರಗಳು ಸಜ್ಜಾಗಿವೆ.

“ಪೊಗರುʼ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ, ಚಿತ್ರರಂಗದ ಬಹುತೇಕ ಬಿಗ್‌ ಬಜೆಟ್‌ ಸಿನಿಮಾ ನಿರ್ಮಾಪಕರು ವೇದಿಕೆಯಲ್ಲಿದ್ದು, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅಂದು ನಿರ್ಮಾಪಕ ಸೂರಪ್ಪ ಬಾಬು, ಪ್ರದರ್ಶಕರ ಸಂಘದ ಮುಖ್ಯಸ್ಥ ಓದು ಗೌಡರಿಗೆ ವಿನಂತಿ ಮಾಡಿದ್ದಿಷ್ಟು, “ನಾವೆಲ್ಲ ಇಷ್ಟು ಜನ ಒಟ್ಟಾಗಿ ಬಂದಿದ್ದೇವೆ. ಇಂತಹ ಕಷ್ಟಕಾಲದಲ್ಲೂ ಸಿನಿಮಾ ಬಿಡುಗಡೆ ಮಾಡಲು ಬಂದಿದ್ದೇವೆ. ಅದರಲ್ಲೂ “ಪೊಗರು” ಚಿತ್ರ ಮೊದಲು ಬಿಡುಗಡೆಯಾಗುತ್ತಿದೆ. ಅವರಿಗೆ ನಾವೆಲ್ಲಾ ಕೈ ಜೋಡಿಸಿ, ಬೆಂಬಲಕ್ಕೆ ನಿಂತಿದ್ದೇವೆ.

ಕಳೆದ ಒಂಭತ್ತು ತಿಂಗಳಿನಿಂದಲೂ ಭಾರೀ ಬಜೆಟ್ ನ ಚಿತ್ರ ನಿರ್ಮಾಪಕರು ತುಂಬಾ ಕಷ್ಟ ಪಟ್ಟಿದ್ದಾರೆ. ಉತ್ತರ ಕರ್ನಾಟಕ ಕಡೆಯಿಂದ ಸಿಕ್ಕಾಪಟ್ಟೆ ಸಮಸ್ಯೆ ಆಗುತ್ತಿದೆ. ವಿನಂತಿ ಮಾಡುತ್ತಿದ್ದೇವೆ. ಹಿಂದೆ ಹೇಗೆ ನಡೆದುಕೊಂಡು ಬಂದಿತ್ತೋ, ಅದನ್ನೇ ಮುಂದುವರೆಸಿಕೊಂಡು ಬನ್ನಿ. ನೀವು ಯೋಚನೆ ಮಾಡಿ, ನಾವೆಲ್ಲಾ ನಿಮ್ಮೊಂದಿಗೆ ಇದ್ದೇವೆ. ಶಿವಣ್ಣ ಅವರ ಜೊತೆಗೂ ಚರ್ಚೆ ಮಾಡಿದ್ದೇವೆ. ಬಾಡಿಗೆ ವ್ಯವಸ್ಥೆಯನ್ನೇ ಮುಂದುವರೆಸಿಕೊಂಡು ಹೋಗಬೇಕು. ಯಾವುದೇ ಕಾರಣಕ್ಕೂ ಶೇರ್ ಬೇಡ. ಅದನ್ನು ಕೊಡೋದಿಕ್ಕೆ ಶುರು ಮಾಡಿದರೆ ಬಿಗ್ ಬಜೆಟ್ ಸಿನಿಮಾ ಮಾಡೋದಿಕ್ಕೆ ಆಗೋದಿಲ್ಲ. ಬಾಡಿಗೆ ವ್ಯವಸ್ಥೆ ಮುಂದುವರೆಯಬೇಕು” ಎಂಬ ಮನವಿ ಇಟ್ಟರು.


ಇದಷ್ಟೇ ಅಲ್ಲ, ಯಾವುದೇ ನಿರ್ಮಾಪಕ ಇರಲಿ, ಇನ್ನು ಮುಂದೆ ರಿಲೀಸ್‌ಗೆ ಫೈಟಿಂಗ್‌ ಮಾಡೋದು ಬೇಡ. ಯಾರದ್ದೋ ಒತ್ತಡದ ಆಸೆಗೆ ಸಿನಿಮಾ ರಿಲೀಸ್‌ ಮಾಡಬೇಡಿ. ಇದು ಎಲ್ಲರಿಗೂ ಒಳಿತು ಎಂಬ ಮಾತು ಕೂಡ ಇದೇ ವೇಳೆ ಎಲ್ಲಾ ನಿರ್ಮಾಪಕರಿಂದಲೂ ಕೇಳಿಬಂತು. ಅಂದಹಾಗೆ, ಮಾರ್ಚ್‌ ‌11ಕ್ಕೆ “ರಾಬರ್ಟ್” ಬಂದರೆ, ನಂತರದ ದಿನಗಳಲ್ಲಿ, ಏಪ್ರಿಲ್‌ 1 ರಂದು “ಯುವರತ್ನ”, ಏಪ್ರಿಲ್‌ 15 ಕ್ಕೆ “ಸಲಗ”, ಏಪ್ರಿಲ್‌ 25 ಕ್ಕೆ “ಕೋಟಿಗೊಬ್ಬ” , ಮೇ 15ಕ್ಕೆ “ಭಜರಂಗಿ ೨” ಹೀಗೆ ಬಿಡುಗಡೆಯಾಗಲಿವೆ. ಜೂನ್‌ನಲ್ಲಿ “ವಿಕ್ರಾಂತ್‌ ರೋಣ”, “ಕೆಜಿಎಫ್-‌೨” , ಆಗಸ್ಟ್‌ ನಲ್ಲಿ “ಚಾರ್ಲಿ” ಇತ್ಯಾದಿ ಚಿತ್ರಗಳು ಬರಲಿವೆ. ಹೀಗಾಗಿ ಮೊದಲಿನಂತೆ ಮನಸ್ಸಿಗೆ ಬಂದಂತೆ ರಿಲೀಸ್‌ ಮಾಡೋದು ಬೇಡ. ಮೊದಲೇ ಒಂದು ದಿನಾಂಕ ನಿಗಧಿಪಡಿಸಿ, ರಿಲೀಸ್‌ ಮಾಡಬೇಕು ಎಂಬ ಮಾತು ಜೋರಾಗಿ ಕೇಳಿಬಂತು.

ಅದೇನೆ ಇರಲಿ, ಕೊರೊನಾ ಬಳಿಕ ಎಲ್ಲರೂ ಪಾಠ ಕಲಿತಿರೋದು ನಿಜ. ಈಗ ಮಾತಾಡಿಕೊಂಡೇ ಸಿನಿಮಾ ರಿಲೀಸ್‌ ಮಾಡೋಣ ಅನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಅಂತೂ ಈಗಾದರೂ, ಸಿನಿಮಾ ಮಂದಿರಗಳಿಗೆ ಒಬ್ಬೊಬ್ಬರೇ ಬಂದು ಪ್ರೇಕ್ಷಕರನ್ನು ರಂಜಿಸಲು ಸಜ್ಜಾದರೆ ಸಾಕು. ಇದು ಕೊರೊನಾ ಹಿನ್ನೆಲೆಯಲ್ಲಿ ಮಾತ್ರವಲ್ಲ, ಕೊರೊನಾ ಹೋದ ಬಳಿಕವೂ, ಮುಂದಿನ ದಿನಗಳಲ್ಲೂ ಇದೇ ವ್ಯವಸ್ಥೆ ಮುಂದುವರೆದರೆ ಚಿತ್ರರಂಗ ಇನ್ನಷ್ಟು ಶೈನ್‌ ಆಗುವುದರಲ್ಲಿ ಎರಡು ಮಾತಿಲ್ಲ.

Categories
ಸಿನಿ ಸುದ್ದಿ

ಮರ್ಧನಿ ಎಂಬ ಥ್ರಿಲ್ಲರ್ – ಹೊಸ ಹುಡುಗನ ರಗಡ್ ಲುಕ್

ಪ್ರತಿಭಾವಂತರ ಸಸ್ಪೆನ್ಸ್ ಸ್ಟೋರಿ!

ಕನ್ನಡದಲ್ಲಿ ದಿನ‌ ಕಳೆದಂತೆ ಹೊಸಬರ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಈಗಾಗಲೇ ಕೆಲವು ಚಿತ್ರಗಳು ಸದ್ದಿಲ್ಲದೆ ಸೆಟ್ಟೇರಿವೆ. ಆ ಸಾಲಿಗೆ “ಮರ್ಧನಿ” ಚಿತ್ರವೂ ಸೇರಿದೆ.ಅಂದಹಾಗೆ, ಕಿಚ್ಷ‌ ಸುದೀಪ್‌ ಅವರ ಸಹಕಾರದೊಂದಿಗೆ ಅಂಕಿತ ಫಿಲಂಸ್ ಬ್ಯಾನರಲ್ಲಿ ಭಾರತಿ ಜಗ್ಗಿ ನಿರ್ಮಿಸುತ್ತಿರುವ “ಮರ್ಧನಿ” ಚಿತ್ರಕ್ಕೆ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ ಹತ್ತು ದಿನಗಳ ಚಿತ್ರೀಕರಣ ಮಾಡಲಾಗಿದೆ.
ಇನ್ನೂ ಇಪ್ಪತ್ತೈದು ದಿನಗಳ ಚಿತ್ರೀಕರಣ ಬಾಕಿಯಿದ್ದು, ಮಾರ್ಚ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರು ನಡೆಸಿದೆ.


ಈ ಹಿಂದೆ “ದೇವರಂಥ ಮನುಷ್ಯ” ಸಿನಿಮಾ ನಿರ್ದೇಶಿಸಿದ್ದ, ಕಿರಣ್‌ ಕುಮಾರ್ ವಿ‌. ಈ ಚಿತ್ರವನ್ನು ನಿರ್ದೇಶಿದ್ದಾರೆ.
ಇನ್ನು , ಈ ಚಿತ್ರಕ್ಕೆ ಅಕ್ಷಯ್ ಹೀರೋ. ಇವರು ಹೋಟೆಲ್ ಮ್ಯಾನೆಜ್‌ಮೆಂಟ್‌ ನಲ್ಲಿ ಗೋಲ್ಡ್ ಮೆಡಲ್, ಕರಾಟೆಯಲ್ಲಿ‌ ಬ್ಲ್ಯಾಕ್ ‌ಬೆಲ್ಟ್ ಹಾಗೂ ಗೋಲ್ಡ್ ಮೆಡಲ್ ಪಡೆದಿದ್ದಾರೆ. ರಾಜಕುಮಾರ್ ಸಂತೋಷಿ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಅಕ್ಷಯ್ , ಈ ಚಿತ್ರದ ಮೂಲಕ ‌ನಾಯಕನಟರಾಗಿ‌ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಕ್ಷಯ್ ಅವರೇ ಇದಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.

ಹಿತನ್ ಗೌಡ, ಮನೋಹರ್, ಭಾಗ್ಯಲಕ್ಷ್ಮೀ ಗೌಡ, ಮೈಸೂರು ಮಾಲತಿ, ಮಧು, ಸಂತೋಷ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಚಿತ್ರದಲ್ಲಿ ಮೂರು ಹಾಡುಗಳಿದ್ದು, ಹಿತನ್ ಹಾಸನ್ ಸಂಗೀತ ನೀಡಲಿದ್ದಾರೆ.

ಶಿವಸಾಗರ್ ಛಾಯಾಗ್ರಹಣ ಮಾಡಿದರೆ, ಎಂ.ಎನ್.ವಿಶ್ವ ಸಂಕಲನವಿದೆ. ಪ್ರೇಂ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಗಜೇಂದ್ರ ಸಂಭಾಷಣೆ ಬರೆದಿದ್ದಾರೆ.
ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವುದು ವಿಶೇಷ.

Categories
ಸಿನಿ ಸುದ್ದಿ

ಫೆ.5ಕ್ಕೆ ವಿನೋದ್‌ ಪ್ರಭಾಕರ್ ಅವರ‌ ಶ್ಯಾಡೊ ರಿಲೀಸ್

 

ಕೊರೊನಾ ಬಳಿಕ ರಿಲೀಸ್ ಆಗಲಿರುವ ಮೊದಲ ಸ್ಟಾರ್‌ ಚಿತ್ರ

ಕೊರೊನಾ ಹಾವಳಿ ನಂತರ ಅತ್ತ, ಚಿತ್ರರಂಗದ ಚಟುವಟಿಕೆಗಳು ಜೋರಾಗಿವೆ. ಈಗಾಗಲೇ ಸಿನಿಮಾಗಳ ಬಿಡುಗಡೆ ಪರ್ವ ಶುರುವಾಗಿದೆ. ಫೆಬ್ರವರಿ 5ಕ್ಕೆ ವಿನೋದ್ ಪ್ರಭಾಕರ್ ಅಭಿನಯದ “ಶ್ಯಾಡೊ” ಚಿತ್ರ ತೆರೆ ಕಾಣುತ್ತಿದೆ ಎಂಬುದು ವಿಶೇಷ. ಕೊರೊನಾ ಬಳಿಕ ರಿಲೀಸ್ ಆಗುತ್ತಿರುವ ಸ್ಟಾರ್ ನಟನ‌ ಮೊದಲ‌ ಸಿನಿಮಾ ಇದು ಎಂಬುದು ಸುದ್ದಿ.


ಚಿತ್ರವನ್ನು ರವಿಗೌಡ್ರು ನಿರ್ದೇಶನ ಮಾಡಿದರೆ, ಚಕ್ರಿ ಅವರು ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ಧೀರಜ್ ಎಂಟರ್ ಪ್ರೈಸಸ್ ಮೂಲಕ ಮೋಹನ್‌ದಾಸ್‌ ಪೈ ಅವರು ರಾಜ್ಯಾದ್ಯಂತ ವಿತರಣೆ ಮಾಡುತ್ತಿದ್ದಾರೆ.‌
ಸಿನಿಮಾ ರಿಲೀಸ್ ಬಗ್ಗೆ ಮಾತನಾಡುವ ಮೋಹನ್ ದಾಸ್ ಪೈ, “ಈ ಚಿತ್ರದ ಮೇಲೆ ನಿರೀಕ್ಷೆ ಇದೆ. ಎಲ್ಲೆಡೆಯಿಂದಲೂ
ಒಳ್ಳೆಯ ಮೆಚ್ಚುಗೆ ಬರುತ್ತಿದೆ. ಹೀಗಾಗಿ ಈ ಚಿತ್ರ ಬಿಡುಗಡೆ ಬಗ್ಗೆ ಸಡನ್‌ ತೀರ್ಮಾನ ಮಾಡಿಕೊಂಡು ರಿಲೀಸ್ ಮಾಡುತ್ತಿದ್ದೇವೆ. ಲೀಡಿಂಗ್‌ ಸ್ಟಾರ್ ಸಿನಿಮಾ ಇದು. ಹಾಗಾಗಿ ರಿಲೀಸ್ ವಿಚಾರದಲ್ಲೂ ಲೀಡಿಂಗ್ ನಲ್ಲೇ ಇರಬೇಕು.ಬೆಂಬ ಕಾರಣಕ್ಕೆ ಸುಮಾರು 250ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ರಿಲೀಸ್ ಮಾಡಲಾಗುತ್ತಿದೆ.


ಎಬಿಸಿಡಿ ಕೆಟಗರಿಯ ಚಿತ್ರಮಂದಿರಗಳಲ್ಲಿ ಚಿತ್ರ ರಿಲೀಸ್‌ ಆಗಲಿದೆ. ನಿರ್ಮಾಪಕರಿಗೆ ಸಾಕಷ್ಟು ಸಮಸ್ಯೆ ಇದೆ. ಹಾಗಾಗಿ ಈಗ ಚಿತ್ರವನ್ನು ಸಡನ್ ಬಿಡುಗಡೆ ಮಾಡುತ್ತಿದ್ದೇವೆ. ಚಿತ್ರ ಶೇ.100ರಷ್ಟು ಗೆಲುವು ಪಡೆಯಲಿದೆ ಎಂಬ ನಂಬಿಕೆ ಇದೆ.
ಸಣ್ಣ ಸೆಂಟರ್‌ಗಳಲ್ಲೂ ಚಿತ್ರ ರಿಲೀಸ್ ಆಗಲಿದೆ.
ಈಗಾಗಲೇ ಚಿತ್ರಮಂದಿರಗಳ ಮಾಲೀಕರ ಜೊತೆ ಮಾತಾಡಿದ್ದೇನೆ. ನಮ್ಮ ನಡುವೆ ಒಳ್ಳೆಯ ಗೆಳೆತನವಿದೆ. ಹಾಗಾಗಿ ಚಿತ್ರ ಬಿಡುಗಡೆ ಮಾಡಲಾಗುತ್ತಿದೆ.

ಜನರಿಗೆ ಕೋವಿಡ್‌ನಿಂದ ತಲೆ ಕೆಟ್ಟೋಗಿದೆ. ಅವರಿಗೆ ಮನರಂಜನೆ‌ ಬೇಕು. ಶೇ.50ರಷ್ಟು ಅನುಮತಿ ಇದ್ದರೂ, ಜನರು ಬರುತ್ತಾರೆ ಎಂಬ ವಿಶ್ವಾಸ ಇದೆ. ಈ ಚಿತ್ರವನ್ನು
ಕೋಲಾರ, ಮುಳುಬಾಗಿಲು, ಹೊಸೂರು ಕಡೆಯಲ್ಲೂ ಹಾಕ್ತೀನಿ” ಎಂದು ವಿವರ ಕೊಟ್ಟರು ಮೋಹನ ದಾಸ್ ಪೈ.
ನಟ ವಿನೋದ್‌ ಪ್ರಭಾಕರ್ ಅವರಿಗೆ “ಶ್ಯಾಡೊ” ಬಿಡುಗಡೆ ಆಗುತ್ತಿರುವುದು ಖುಷಿ ಕೊಟ್ಟಿದೆ. ಆ ಬಗ್ಗೆ ಹೇಳುವ ಅವರು, ರಿಲೀಸ್ ಓಕೆ ಆದರೆ ಎಲ್ಲವೂ ಹರಿಬಿರಿಯಲ್ಲಿದೆ. ಇಂಡಸ್ಟ್ರಿ ಈಗಷ್ಟೇ ಸ್ಟಡಿಯಾಗುತ್ತಿದೆ. ಇಂತಹ ಸಮಯದಲ್ಲಿ ಪ್ರಚಾರವೂ ಅಗತ್ಯ. ಆದರೆ ಬಿಡುಗಡೆ ಸ್ವಲ್ಪ ಬೇಗ ಆಗುತ್ತಿದೆ. ಸ್ವಲ್ಪ ಅವಧಿಯಲ್ಲೇ ಪ್ರಚಾರ ಮಾಡಬೇಕಿದೆ. ಮಾಧ್ಯಮದ ಸಹಕಾರ ಜಾಸ್ತಿ ಬೇಕು ಎಂದು ಮನವಿ ಇಟ್ಟರು.


ಸಿನಿಮಾ ಬಗ್ಗೆ ಮಾತನಾಡಿದ ವಿನೋದ್, “ಮೊದಲ ಸಲ ಕ್ಲಾಸ್‌ನಲ್ಲಿ ಮಾಸ್‌ ಸಿನಿಮಾ ಮಾಡಿದ್ದೇನೆ. ನಿರ್ದೇಶಕ ರವಿಗೌಡ್ರು ಚೆನ್ನಾಗಿ ಮಾಡಿದ್ದಾರೆ. ಶರತ್‌ ಲೋಹಿತಾಶ್ವ ಅವರು ಸಿನಿಮಾದ ಉದ್ದಕ್ಕೂ ಪೋಲಿಸ್‌ ಪಾತ್ರದಲ್ಲಿ ಸಾಥ್ ನೀಡಿದ್ದಾರೆ. ನನ್ನ ಜೊತೆ ಶೋಬಿತಾ ರಾಣಾ ನಾಯಕಿಯಾಗಿದ್ದಾರೆ.
ಚೋಟಾ ಪ್ರಸಾದ್‌ ಎಡಿಟಿಂಗ್‌ ಮಾಡಿದ್ದಾರೆ. ಇಲ್ಲಿ‌ ವಿನೋದ್ ಮಾಸ್ಟರ್ ಅದ್ಭುತ ಸಾಹಸ‌ ಮಾಡಿಸಿದ್ದಾರೆ. ನನಗೆ ರೆಗ್ಯುಲರ್‌ ಆಕ್ಷನ್‌ ಅನಿಸಲಿಲ್ಲ. ಇಡೀ ಸಿನಿಮಾ ಹೈದರಾಬಾದ್‌ನಲ್ಲಿ ಮಾಡಲಾಗಿದೆ.
ಫೈಟ್ ಸೀನ್ ಗೆ ನಿರ್ದೇಶಕರು ಒಂದೇ ಕ್ಯಾಮೆರಾ ತಂದರು. ಕೇಳಿದ್ದಕ್ಕೆ, “ಇದು ಫೈಟ್‌ ಅಂತ ಮಾಡ್ತಾ ಇಲ್ಲ. ಸೀನ್‌ ರೀತಿ ಮಾಡ್ತಾ ಇದೀವಿ” ಅಂದ್ರು ಅವರ ಪ್ಲಾನಿಂಗ್ ಚೆನ್ನಾಗಿತ್ತು.


ಚಿತ್ರದಲ್ಲಿ ಎರಡು ಸಾಂಗ್‌ ಇದೆ. ಜೊತೆಗೆ ಆಕ್ಷನ್‌ ಪ್ಯಾಕ್‌, ಮನರಂಜನೆ ಹೆಚ್ಚು ಇದೆ. ಫೆ.5ಕ್ಕೆ ರಿಲೀಸ್ ಅಂದಾಗ, ಆಡಿಯನ್ಸ್‌ ಬರ್ತಾರಾ? ಎಂಬ ಅನುಮಾನ ಬಂತು. ಆದರೂ ಅಭಿಮಾನಿಗಳು ಸಿನಿಮಾ ನೋಡಿ ಬೆಂಬಲಿಸುತ್ತಾರೆ ಎಂಬ ನಂಬಿಕೆ ಇದೆ.
ಈ ಚಿತ್ರ ನೋಡುಗರಿಗೆ ಬೇರೆ ಫೀಲ್ ಸಿಗುತ್ತೆ. ನೋಡೋಕೆ ಬಂದವರು ಶೇ.100 ರಷ್ಟು ಖುಷಿ ಪಡುತ್ತಾರೆ. ಈ ಸಿನಿಮಾಗೆ ಮಾಲ್‌ ಆಡಿಯನ್ಸ್‌ ಜಾಸ್ತಿ ಆಗ್ತಾರೆ, ಯಾಕೆಂದರೆ ಕ್ಲಾಸ್‌ನಲ್ಲಿ ಮಾಸ್‌ ಸಿನಿಮಾ ಇದು. ಹಾಗಾಗಿ ಯಾರಿಗೂ ನಿರಾಶೆ ಆಗೋದಿಲ್ಲ ಎನ್ನುತ್ತಾರೆ ವಿನೋದ್.
ಚಿತ್ರದಲ್ಲಿ ಕಾಮಿಡಿ ನಟ ಲೋಕೇಶ್ ಕೂಡ‌ ನಟಿಸಿದ್ದು ಸಿನಿಮಾ ರಿಲೀಸ್ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಇನ್ಮುಂದೆ ಬೇರ್‌ ಬಾಡಿ ತೋರಿಸಲ್ಲ ಅಂದ್ರು ವಿನೋದ್‌ ಪ್ರಭಾಕರ್

ಹೀಗೆ ಹೇಳಲು ಕಾರಣ ಇಲ್ಲಿದೆ…

ಕನ್ನಡದಲ್ಲಿ ಸದ್ಯದ ಮಟ್ಟಿಗೆ ಬೇರ್‌ಬಾಡಿ ಹೀರೋ ಅಂದಾಕ್ಷಣ, ನೆನಪಾಗೋದೇ ವಿನೋದ್‌ ಪ್ರಭಾಕರ್.‌ ಏಯ್ಟ್‌ ಪ್ಯಾಕ್‌ ಹೀರೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿನೋದ್‌ ಪ್ರಭಾಕರ್‌, ತಮ್ಮ ಸಿನಿಮಾಗಳಲ್ಲಿ ಬೇರ್‌ಬಾಡಿ ಮೂಲಕವೇ ಸುದ್ದಿಯಾದವರು. ವಾವ್‌ ಎ ಬಾಡಿ ಎಂಬ ಉದ್ಘಾರಕ್ಕೂ ಕಾರಣರಾದವರು. ಇದೀಗ ಸುದ್ದಿಯೊಂದನ್ನು ಹೊರ ಬಿಟ್ಟಿದ್ದಾರೆ.

ಅದು ಬೇರೇನೂ ಅಲ್ಲ, ವಿನೋದ್‌ ಪ್ರಭಾಕರ್‌ ಇನ್ಮುಂದೆ ಬೇರ್‌ ಬಾಡಿ ಮಾಡೋದಿಲ್ಲ. ಇದೇ ಈ ಹೊತ್ತಿನ ಸುದ್ದಿ. ಹೌದು, ಈ ವಿಷಯವನ್ನು ಸ್ವತಃ ವಿನೋದ್‌ ಪ್ರಭಾಕರ್‌ ಅವರೇ ಹೇಳಿಕೊಂಡಿದ್ದಾರೆ. ಹೀಗೆ ಹೇಳಿದ್ದು “ಶ್ಯಾಡೊ” ಪತ್ರಿಕಾಗೋಷ್ಠಿಯಲ್ಲಿ. ಹಾಗಾದರೆ ವಿನೋದ್‌ ಪ್ರಭಾಕರ್‌ ಹೇಳಿದ್ದೇನು ಗೊತ್ತಾ?
ಅವರು “ರಗಡ್‌” ಚಿತ್ರಕ್ಕಾಗಿ ಏಯ್ಟ್‌ ಪ್ಯಾಕ್‌ ಮಾಡಿದ್ದರು. ತಮ್ಮ ಬೇರ್‌ ಬಾಡಿ ಮೂಲಕ ಜೋರು ಸುದ್ದಿಯಾಗಿದ್ದರು ಬಹುತೇಕ ಅವರ ಸಿನಿಮಾ ನಿರ್ದೇಶಕರು ವಿನೋದ್‌ ಪ್ರಭಾಕರ್ ಅವರ ಬೇರ್‌ ಬಾಡಿಯನ್ನೇ ತೋರಿಸಲು ಮುಂದಾದರು.

“ರಗಡ್‌” ಚಿತ್ರಕ್ಕೆ ಬೇರ್‌ ಬಾಡಿ ಮಾಡಿದ್ದ ವಿನೋದ್‌ ಪ್ರಭಾಕರ್‌, ಅವರಿಗೆ ನಮ್ಮ ಚಿತ್ರದಲ್ಲೂ ಮಾಡಿ ಅಂತ ಕೆಲ ನಿರ್ದೇಶಕರು ಹೇಳುತ್ತಿದ್ದಾರೆ. ಹಾಗೆ ಹೇಳಿದವರಲ್ಲಿ “ಶ್ಯಾಡೊʼ ಸಿನಿಮಾ ನಿರ್ದೇಶಕ ರವಿಗೌಡ್ರು ಕೂಡ. ಅವರ ಮಾತಿಗೆ ಓಕೆ ಅಂದ ವಿನೋದ್‌ ಪ್ರಭಾಕರ್‌ ಅವರು, ಅಲ್ಲೊಂದು ಸೀನ್‌ ಮಾಡಿದ್ದಾರೆ. ಆದರೆ, ಅದು ಬೇರ್‌ ಬಾಡಿ ಅಲ್ಲ, ಲೆನಿನ್‌ ಷರ್ಟ್‌ ಮೇಲೆಯೇ ತೋರಿಸುವ ಸೀನ್‌ ಅದು. ಈ ಕುರಿತು ಹೇಳುವ ವಿನೋದ್‌ ಪ್ರಭಾಕರ್‌, “ವರ್ಷಗಟ್ಟಲೆ ಅನ್ನ ನೀರು ಬಿಟ್ಟು, ವಾಟರ್‌ ಕಟ್‌ ಮಾಡಿ ದೇಹ ರೆಡಿಮಾಡಿಕೊಂಡಿದ್ದೇನೆ. ಉಪ್ಪು, ಖಾರ ಇಲ್ಲದೆ ನೀರಲ್ಲೇ ಜೀವಿಸಿದ್ದೇನೆ.

ಇದರಿಂದ ಬೋನ್ಸ್‌ಗೂ ಸಮಸ್ಯೆಯಾಗಿದ್ದುಂಟು. ನೋವು ಪಟ್ಟಿದ್ದುಂಟು. ವೈದ್ಯರು ಕೊನೆಗೆ ಚೆಕ್‌ ಮಾಡಿ, ಉಪ್ಪು-ಖಾರ ತಿನ್ನಿ ಅಂತ ಹೇಳಿದ್ರು. ನಮ್ಮದೂ ಹೊಟ್ಟೆ ಪಾಡಲ್ಲವೇ? ಕಷ್ಟ ಪಟ್ಟು ಹಾಗೆಲ್ಲಾ ಮಾಡಿಕೊಂಡಿದ್ದೇನೆ. ತುಂಬಾ ನೋವು ಅನುಭವಿಸಿದ್ದೂ ಇದೆ. “ವರದ” ಚಿತ್ರೀಕರಣ ಸಮಯದಲ್ಲಿ ಜಂಪ್‌ ಮಾಡುವಾಗ ಬಿದ್ದು ಪೆಟ್ಟು ಮಾಡಿಕೊಂಡಿದ್ದೇನೆ. ಹೀಗಾಗಿ ನಾನು ಇನ್ನು ಮುಂದೆ ಬೇರ್‌ ಬಾಡಿ ಮಾಡೋದಿಲ್ಲ ಎಂದು ತೀರ್ಮಾನಿಸಿದ್ದೇನೆ. ಬಾಡಿ ಫಿಟ್‌ ಆಗಿಟ್ಟುಕೊಂಡೇ ಕೆಲಸ ಮಾಡ್ತೀನಿ” ಎನ್ನುತ್ತಾರೆ ವಿನೋದ್‌ ಪ್ರಭಾಕರ್.‌


ಅವರ “ಶ್ಯಾಡೊ” ಚಿತ್ರ ಫೆಬ್ರವರಿ 5ರಂದು ರಿಲೀಸ್‌ ಆಗುತ್ತಿದೆ. ಈ ಕುರಿತು ಸಂತಸ ಪಡುವ ವಿನೋದ್‌ ಪ್ರಭಾಕರ್‌, ಹಾಗೆಯೇ ಬೇಸರವನ್ನೂ ಹೊರಹಾಕುತ್ತಾರೆ. “ಶ್ಯಾಡೊ” ಚಿತ್ರ 2018ರಲ್ಲಿ ಶುರುವಾಗಿದ್ದು, ರಿಲೀಸ್‌ ಈಗ ಆಗುತ್ತಿದೆ. ಸಿನಿಮಾ ಆಗೋಕೆ ಇಷ್ಟು ವರ್ಷ ಕಾದಿದ್ದೇವೆ. ಆದರೆ, ರಿಲೀಸ್‌ಗೆ ಕಾಯುತ್ತಿಲ್ಲ. ಸಡನ್‌ ಆಗಿ ಹದಿನೈದು ದಿನಗಳಲ್ಲೇ ರಿಲೀಸ್‌ ಮಾಡಿಬಿಟ್ಟರೆ ಹೇಗೆ? ಚಿತ್ರವನ್ನು ಪ್ರಚಾರ ಮಾಡಬಾರದೆ? ಈ ಪ್ರಶ್ನೆ ಅವರದು.


ಇನ್ನು ನನ್ನ ಈ ಸಿನಿಮಾ ಜರ್ನಿಯಲ್ಲಿ ಇದೇ ಮೊದಲ ಸಲ ನರ್ತಕಿ ಥಿಯೇಟರ್ ನಲ್ಲಿ ನನ್ನ “ಶ್ಯಾಡೊ” ಚಿತ್ರ ರಿಲೀಸ್ ಆಗುತ್ತಿದೆ. ಇದು ನನ್ನ 19 ವರ್ಷಗಳ ಸಾಧನೆ ಅನ್ನಬಹುದು. ನಾನು ಪ್ರತಿ ಸಿನಿಮಾ ರಿಲೀಸ್ ವೇಳೆಯೂ ಥಿಯೇಟರ್ ಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾ ಬಂದಿದ್ದೇನೆ. ಈ ಚಿತ್ರದ ಬಿಡುಗಡೆ ಸಂದರ್ಭದಲ್ಲೂ ಥಿಯೇಟರ್ ವಿಸಿಟ್ ಕೊಡ್ತೀನಿ” ಎಂಬುದು ಅವರ ಮಾತು.

error: Content is protected !!