ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.
ಅಪರ್ಣಾ ಅವರು 1984ರಲ್ಲಿ ತೆರೆಕಂಡ ‘ಮಸಣದ ಹೂವು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು.
80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ ಅವರು, ನಿರೂಪಕಿಯಾಗಿಯೂ ಗಮನಸೆಳೆದಿದ್ದರು.
ಅಪರ್ಣಾ ಅವರು ಚಿಕ್ಕಮಂಗಳೂರಿನ ಪಂಚನಹಳ್ಳಿಯಲ್ಲಿ ಜನಿಸಿದ್ದರು. ಆರಂಭದಲ್ಲಿ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕನ್ನಡಿಗರ ಮನ ಗೆದ್ದಿದ್ದರು.
ನಂತರದ ದಿನಗಳಲ್ಲಿ ಅವರು ಕಿರುತೆರೆಯಲ್ಲೂ ಮಿಂಚಿದ್ದರು. ಅಪ್ಪಟ ಕನ್ನಡತಿಯಾಗಿ ಸ್ಪಷ್ಟ ಕನ್ನಡದಲ್ಲೇ ಮಾತಿಗಿಳಿದು, ಮನೆಮಾತಾಗಿದ್ದರು. ಮೂಡಲಮನೆ, ಮುಕ್ತ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು.
ತಮ್ಮ ಅಮೋಘ ಅಭಿನಯ ಮೂಲಕ ಎಲ್ಲರನ್ನೂ ರಂಜಿಸಿದ್ದರು. ಆಕಾಶವಾಣಿಯಲ್ಲೂ ನಿರೂಪಕಿಯಾಗಿದ್ದರು. ಮಜಾ ಟಾಕೀಸ್ ರಿಯಾಲಿಟಿ ಶೋ ನಲ್ಲಿ ವರಲಕ್ಷ್ಮಿಯಾಗಿ ಜನಪ್ರಿಯಗೊಂಡಿದ್ದರು. 2013ರ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಅಪರ್ಣಾ ಇನ್ನು ನೆನಪು ಮಾತ್ರ….
ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ ಭೈರತಿ ರಣಗಲ್ ಸಿನಿಮಾ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಸಿನಿಮಾ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರೆದಿರಿಡಲು ಸಿದ್ಧತೆ ನಡೆಸಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.
ಗೀತಾ ಪಿಕ್ಚರ್ಸ್ ಅಡಿಯಲ್ಲಿ ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ವೇದ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದು.
ಅಂದಹಾಗೆ ಮಫ್ತಿ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ.
ಆನಂದ್ ಆಡಿಯೋಗೆ ಭೈರತಿ ಹಕ್ಕುಗಳು
ಆನಂದ್ ಆಡಿಯೋ ಸಂಸ್ಥೆ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.
ಕೆಲ ಮೂಲಗಳ ಪ್ರಕಾರ, ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.
ಈಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ’ ಅನೌನ್ಸ್ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗೆ ಸತ್ಯದೇವ್ ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ ಸ್ಯಾಂಡಲ್ವುಡ್ ಸ್ಟಾರ್ ಡಾಲಿ ಧನಂಜಯ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್ ಮಾಡಿದೆ.
ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್ಗಳ ಅಡಿಯಲ್ಲಿ ಎಸ್ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಜೀಬ್ರಾ ತಂಡ ಫಸ್ಟ್ ಲುಕ್ ಅನಾವರಣಗೊಳಿಸಿದೆ.
ಪೋಸ್ಟರ್ನಲ್ಲಿ ಸತ್ಯದೇವ್ ಅತ್ಯಂತ ಸ್ಟೈಲಿಶ್ ಅವತಾರ ತಾಳಿದ್ದಾರೆ. ಸೂಟ್ ಧರಿಸಿ ಅತ್ಯಂತ ಖಡಕ್ ಲುಕ್ನಲ್ಲಿ ಕಂಡಿದ್ದಾರೆ. ತುಂಬಾ ಗಂಭೀರವಾಗಿ ಕಂಡಿದ್ದಾರೆ ಸತ್ಯದೇವ್. ಭುಜದ ಮೇಲೆ ಚೀಲವನ್ನು ಹೊತ್ತುಕೊಂಡು ಬಹಳ ಗಭೀರದಿಂದ ನಡೆಯುತ್ತಿರುವ ಲುಕ್ನಲ್ಲಿ ಕಂಡಿದ್ದಾರೆ. ಇನ್ನೊಂದು ಕೈಯಲ್ಲಿ ಪೆನ್ನು ಇದೆ. ಪೋಸ್ಟರ್ ಬ್ಯಾಕ್ರೌಂಡ್ನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿವೆ. ʻಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.
ʻಲಕ್ ಫೇವರ್ಸ್ ದಿ ಬ್ರೇವ್ʼ ಎಂದು ಅಡಿಬರಹ ಕೂಡ ಇದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ.
ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಕ್ರೈಮ್ ಆಕ್ಷನ್ ಎಂಟರ್ಟೈನರ್ನಲ್ಲಿ ಪ್ರಿಯಾ ಭವಾನಿ ಶಂಕರ್ ಮತ್ತು ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಸತ್ಯ ಅಕಾಲ ಮತ್ತು ಸುನಿಲ್ ಇತರ ಪ್ರಮುಖ ಪಾತ್ರಧಾರಿಗಳು. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ. ಚಿತ್ರ ಸತ್ಯದೇವ್, ಡಾಲಿ ಧನಂಜಯ, ಸತ್ಯರಾಜ್, ಪ್ರಿಯಾ ಭವಾನಿ ಶಂಕರ್, ಜೆನ್ನಿಫರ್ ಪಿಕ್ಕಿನಾಟೊ, ಸತ್ಯ ಅಕಾಲ, ಸುನಿಲ್ ಹೀಗೆ ಬಹು ತಾರಾಗಣ ಹೊಂದಿದೆ.
‘ಕರಾವಳಿ’ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ ಫಸ್ಟ್ ಲುಕ್ ಮತ್ತು ಪೋಸ್ಟರ್ ಮೂಲಕ ಬಾರಿ ಕುತೂಹಲ ಮೂಡಿಸಿದೆ. ಮತ್ತೊಂದು ಭರ್ಜರಿ ಪೋಸ್ಟ್ ಅನಾವರಣವಾಗಿದೆ.
ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಈ ಪೋಸ್ಟರ್ ಕರಾವಳಿ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾದಿಂದ ಈಗಾಗಲೇ ರಿಲೀಸ್ ಆಗಿರುವ ಪ್ರಜ್ವಲ್ ಅವರ ಎರಡು ಲುಕ್ ವೈರಲ್ ಆಗಿದೆ. ಇದೀಗ ಜನ್ಮದಿನದ ಪ್ರಯುಕ್ತ ಬಿಡುಗಡೆಯಾಗಿರುವ ಮತ್ತೊಂದು ಲುಕ್ ಗಮನ ಸೆಳೆಯುತ್ತದೆ.
ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಯಕ್ಷಗಾನ ಕಂಬಳ, ಮಹಿಷಾಸುರ ಹೀಗೆ ವೆರೈಟಿ ಗೆಟಪ್ ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಪ್ರಜ್ವಲ್ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಕೊಡಿಸುವವನಾ? ಡೈನಮಿಕ್ ಪ್ರಿನ್ಸ್ ಪಾತ್ರ ಯಾವುದು ಎನ್ನುವ ಕುತೂಹಲ ಹೆಚ್ಚಾಗಿದೆ. ಪ್ರಜ್ವಲ್ ಅವರ ವೆರೈಟಿ ಗೆಟಪ್ ನ ಪೋಸ್ಟರ್ ಗಳನ್ನು ನೋಡುತ್ತಿದ್ದರೆ ತ್ರಿ ಪಾತ್ರದಲ್ಲಿ ನಟಿಸುತ್ತಿದ್ದಾರಾ ಎನ್ನುವ ಅನುಮಾನ ಕೂಡ ಮೂಡಿಸುವಂತಿದೆ.
ಬರ್ತಡೇ ಪ್ರಯುಕ್ತ ರಿಲೀಸ್ ಆಗಿರುವ ಪೋಸ್ಟರ್ನಲ್ಲಿ ಪ್ರಜ್ವಲ್ ಕೋಣಗಳ ಮಧ್ಯೆ ಒಬ್ಬಂಟಿಯಾಗಿ ಕೊಟ್ಟಿಗೆಯಲ್ಲಿ ಕುಳಿತಿದ್ದಾರೆ. ಗಂಭೀರ ನೋಟ ಬೀರುತ್ತಾ ಕುಳಿತಿರುವ ಪ್ರಜ್ವಲ್ ಅವರ ಸಿಂಪಲ್ ವ್ಯಕ್ತಿತ್ವದ ಲುಕ್ ಆಕರ್ಷಕವಾಗಿದೆ.
ಕರಾವಳಿ ಈಗಾಗಲೇ 60ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ನಟಿ ಸಂಪದಾ ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾಣವಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.
ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ, ‘ದೇವರು ರುಜು ಮಾಡಿದನು’ ಎಂಬುದು ಕುವೆಂಪುರವರ ಕವಿತೆ ಸಾಲಾಗಿದ್ದು ಅದನ್ನೇ ಚಿತ್ರದ ಟೈಟಲ್ ಆಗಿ ಇಟ್ಟಿದ್ದಾರೆ.
ಇನ್ನೂ ಚಿತ್ರದ ನಾಯಕ. ವಿರಾಜ್ ರಂಗಭೂಮಿ ಪ್ರತಿಭೆಯಾಗಿದ್ದು ಚಿತ್ರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ, ವಿರಾಜ್ ತಂದೆ ಗೋವಿಂದ್ ರಾಜ್ ರವರ ಗ್ರೀನ್ ಹೌಸ್, ಪ್ರೆಸ್ ಮೀಟ್ ಮತ್ತು ಇವೆಂಟ್ ಗಳಿಗೆ ಹೆಸರಾಗಿದ್ದು ಈಗ ಅವರದೇ ಗ್ರೀನ್ ಹೌಸ್ ಮೂವೀಸ್ ಬ್ಯಾನರ್ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ,
ಚಿತ್ರದ ತಂಡ ನಾಯಕಿ ಮತ್ತು ಇನ್ನಿತರ ಕಲಾವಿದರ ಹುಡುಕಾಟದಲಿದ್ದು, ಶೂಟಿಂಗ್ ಅನ್ನು ಸೆಪ್ಟೆಂಬರ್ ನಲ್ಲಿ ಶುರು ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ, ಮುಂದಿನ ಅಪ್ಡೇಟ್ ಗಳನ್ನು ಚಿತ್ರತಂಡ ಕೆಲವೇ ದಿನಗಳಲ್ಲಿ ಹಂಚಿಕೊಳ್ಳಲಿದ್ದಾರೆ.
ಹೇಮಂತ್ ಎಂ ರಾವ್ ಮತ್ತು ಶಿವ ರಾಜ್ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ಭೈರವನ ಕೊನೆ ಪಾಠ ಎಂದು ಹೆಸರಿಡಲಾಗಿದೆ. ಭೈರವನ ಕೊನೆ ಪಾಠ’ ತಲೆಮಾರುಗಳವರೆಗೆ ನೆನಪುಳಿಯುವಂಥ ಚಲನಚಿತ್ರವಾಗಲಿದೆ – ವೈಶಾಖ್ ಜೆ ಗೌಡ
ಡಾ.ವೈಶಾಖ್ ಜೆ ಗೌಡ ಅವರ ವಿಜೆಎಫ್ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭೈರವನ ಕೊನೆ ಪಾಠ ಚಿತ್ರಕ್ಕೆ ಹೇಮಂತ್ ಎಂ ರಾವ್ ಆಕ್ಷನ್ – ಕಟ್ ಹೇಳಲಿದ್ದು, ಡಾ.ಶಿವ ರಾಜ್ಕುಮಾರ್ ನಾಯಕ ನಟರಾಗಿ ಬಣ್ಣ ಹಚ್ಚಲಿದ್ದಾರೆ.
ಹೇಮಂತ್ ಎಂ ರಾವ್ ಅವರ ಸಿನೆಮಾಗಳ ಶೀರ್ಷಿಕೆಗಳು ಯಾವಾಗಲೂ ವಿಶಿಷ್ಟವಾಗಿರುತ್ತವೆ. ಇದರ ಬಗ್ಗೆ ಪ್ರಶ್ನಿಸಿದಾಗ ಅವರು, “ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನೆಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಸಿನೆಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡಾ ಆ ಸಾಲಿಗೆ ಸೇರಲಿದೆ. ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನೆಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ. ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ನಮ್ಮ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಇದರ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆ” ಎಂದು ವಿವರಿಸಿದರು.
ಇದು ನಿರ್ಮಾಪಕ ವೈಶಾಖ್ ಜೆ ಗೌಡ ನಿರ್ಮಾಣದ ಚೊಚ್ಚಲ ಚಿತ್ರವಾಗಿದ್ದು, ಶೀರ್ಷಿಕೆ ಬಗ್ಗೆ ಈಗಾಗಲೇ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ಸಂತೋಷದಿಂದ ಹೇಳಿಕೊಂಡರು. “ಈ ಶೀರ್ಷಿಕೆಯನ್ನು ಮೊದಲ ಬಾರಿ ಕೇಳಿದಾಗ ನಾನೆಷ್ಟು ಉತ್ಸಾಹಗೊಂಡಿದ್ದೆನೋ ಅದೇ ಉತ್ಸಾಹ ಜನರಲ್ಲೂ ಕಂಡುಬರುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದೊಂದು ವಿಭಿನ್ನ ಹಾಗೂ ವಿಶಿಷ್ಟ ಚಿತ್ರವಾಗಿ ಮೂಡಿಬರಲಿದ್ದು, ಮುಂದಿನ ತಲೆಮಾರುಗಳವರೆಗೆ ತನ್ನ ಜನಪ್ರಿಯತೆ ಉಳಿಸಿಕೊಳ್ಳಲಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಸಿನೆಮಾದಲ್ಲಿ ಬಳಸಲಾಗಿರುವ ಬಾಣದ ಗುರುತಿನ ಬಗ್ಗೆ ತೂರಿಬಂದ ಪ್ರಶ್ನೆಗಳಿಗೆ “ಸದ್ಯದಲ್ಲೇ ಬಿಡುಗಡೆಯಾಗಲಿರುವ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಅದಕ್ಕೆ ಉತ್ತರ ಸಿಗಲಿದೆ” ಎಂಬ ಒಕ್ಕೊರಲಿನ ಪ್ರತಿಕ್ರಿಯೆ ಕೇಳಿಬಂತು.
ಈ ವರ್ಷ ಡಾ.ಶಿವ ರಾಜ್ಕುಮಾರ್ ಅವರ ಹುಟ್ಟುಹಬ್ಬಕ್ಕೆ ಮೊದಲು ಭೈರವನ ಕೊನೆ ಪಾಠ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.
ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ…ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ ದಾಖಲೆ ಬರೆಯಲು ಸಿದ್ದರಾಗಿದ್ದಾರೆ..ಹೌದು ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿಮಾದಲ್ಲಿ ಹಾರಾರ್ ಟೈಂಲೂಪ್ ವರ್ಷನ್ ಟ್ರೈ ಮಾಡಿದ್ದಾರೆ ನಿರ್ದೇಶಕ ಲೋಹಿತ್… ಇನ್ನು ಶಾನ್ವಿ ಎಂಟರ್ಪ್ರೈಸಸ್ ಅಡಿಯಲ್ಲಿ ಪ್ರದೀಪ್ ಮಹೀಶಿ ಪ್ರಸೆಂಟ್ಸ್ ನಲ್ಲಿ ದೀಪು ಬಿ ಎಸ್ ಮತ್ತು ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ರಾಕ್ಷಸ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ನೋಬಿನ್ ಪೌಲ್ ಸಂಗೀತ ನಿರ್ದೇಶನ ಜೇಬಿನ್ ಪಿ ಜೋಕಬ್ ಕ್ಯಾಮೆರಾ ವರ್ಕ್ ಸಿನಿಮಾಗಿದೆ…ಸುಮಾರು 55 ದಿನಗಳ ಕಾಲ ರಾಕ್ಷಸ ಸಿನಿಮಾ ಚಿತ್ರೀಕರಣ ಮಾಡಲಾಗಿದ್ದು ಸಂಪೂರ್ಣ ಸಿನಿಮಾ ಚಿತ್ರೀಕರಣ ರಾಮೋಜಿ ರಾವ್ ಫಿಲ್ಮಂ ಸಿಟಿಯಲ್ಲಿ ಮಾಡಿರೋದು ವಿಶೇಷ.
ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್,ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಇನ್ನು ಅನೇಕರು ಅಭಿನಯಿಸಿದ್ದಾರೆ…ಸದ್ಯ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ದವಾಗಿರೋ ರಾಕ್ಷಸ ಸಿನಿಮಾ.ಪ್ರಜ್ವಲ್ ಹುಟ್ಟುಹಬ್ಬದ ವಿಶೇಷವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸಿನಿಮಾತಂಡ ಚಿತ್ರದ ಪ್ರಚಾರದ ಕೆಲಸ ಶುರು ಮಾಡಿದೆ..ಇಷ್ಟು ದಿನಗಳ ಕಾಲ ಕಮರ್ಷಿಯಲ್ ಚಿತ್ರಗಲ್ಲಿ ಕಾಣಿಸಿಕೊಳ್ತಿದ್ದ ಪ್ರಜ್ವಲ್ ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಹಾರಾರ್ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ
ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ ೧” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.
ಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.
ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ ರಂಗಭೂಮಿ ಹಿನ್ನೆಲೆಯಿಂದ ಬಂದವರು. ಯಾವುದೇ ಸಿನಿಮಾ ಮಾಡಿದರೂ ಧರ್ಮಣ್ಣ ಪಾತ್ರಕ್ಕೆ ಜೀವ ತುಂಬುವ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಇದೀಗ ಧರ್ಮಣ್ಣ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.
ಅಂದಹಾಗೆ, ಧರ್ಮಣ್ಣ ಒಪ್ಪಿಕೊಂಡ ಸಿನಿಮಾಗೆ ಹಂಪಿ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆಯನ್ನು ನಿರ್ದೇಶಕ ಯೋಗರಾಜ ಭಟ್ ಅವರು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಸಿನಿಮಾಗೆ ಮುಹೂರ್ತ ಕೂಡ ನೆರವೇರಿದೆ. ಇನ್ನು ಈ ಚಿತ್ರವನ್ನು ಪಾಟೀಲ್ ಲಿಂಗನಗೌಡ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಕಥೆ ಚಿತ್ರಕಥೆಯೂ ಅವರದೆ. ಹಂಪಿ ಟಾಕೀಸ್ ಬಳಗ ಬ್ಯಾನರ್ ಮೂಲಕ ಸಿನಿಮಾ ತಯಾರಾಗುತ್ತಿದ. ಮನ್ ಪ್ರಸಾದ್ ಅವರು ಕ್ಯಾಮೆರಾ ಹಿಡಿಯುತ್ತಿದ್ದಾರೆ.
ಧರ್ಮಣ್ಣ ಕಡೂರು ಅವರ ಜೊತೆ ಪದ್ಮಶ್ರಿ ಪುರಸ್ಕೃತರಾದ ಮಂಜಮ್ಮ ಜೋಗತಿ, ಮಹಾಂತೇಶ್ ಹಿರೇಮಠ್, ರಂಜಿತಾ ಪುಟ್ಟಸ್ವಾಮಿ, ರಾಮ್ ನಾಡಗೌಡ, ಇತರರು ನಟಿಸುತ್ತಿದ್ದಾರೆ. ಚಂದನ್ ಮೂರ್ತಿ ಅವರ ಕಲಾನಿರ್ದೇಶನವಿದೆ. ಯರ್ರಿ ಸ್ವಾಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಪ್ರಸನ್ನ ಕುಮಾರ್, ಸಂತೋಷ್ ಕುಮಾರ್, ಪ್ರವೀಣ್ ಶೆಟ್ಟಿ, ಕಾರ್ತಿಕ್ ಹರಪನಹಳ್ಳಿ ಇವರು ಸಹ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು “ಕಬ್ಜ” ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ “ಕಬ್ಜ” ಚಿತ್ರ ಸೇರಿದೆ.
ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ ಸಮಾರಂಭದಲ್ಲಿ ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನ್ನಿಮೇಷನ್ ಚಿತ್ರ ಪ್ರಶಸ್ತಿಗೆ “ಕಬ್ಜ” ಚಿತ್ರ ಭಾಜನವಾಗಿದೆ.
ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಅದ್ದೂರಿಯಾಗಿ ನಡೆಯುತ್ತಿದೆ.