Categories
ಸಿನಿ ಸುದ್ದಿ

ಶಿವಣ್ಣ ಈಗ ಶಿವಪ್ಪ!

ಸೆಂಚುರಿ ಸ್ಟಾರ್‌ನ ೧೨೩ನೇ ಚಿತ್ರವಿದು

ಮಾಸ್‌ ಶಿವಪ್ಪನ ಖದರ್‌ ಶುರು…

ಈ ಹಿಂದೆ ಶಿವರಾಜಕುಮಾರ್‌ ಹಾಗೂ ಡಾಲಿ ಇಬ್ಬರೂ ಹೊಸದೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತೇ ಇದೆ. “ಟಗರು” ಮೂಲಕ ಜೋರು ಸುದ್ದಿಯಾಗಿದ್ದ “ಡಾಲಿ” ಧನಂಜಯ್‌ ಅವರು ಶಿವರಾಜಕುಮಾರ್‌ ಅವರೊಂದಿಗೆ ನಟಿಸುವ ಸಿನಿಮಾಗೆ ಆಗ ಶೀರ್ಷಿಕೆ ಪಕ್ಕಾ ಆಗಿರಲಿಲ್ಲ. ಇದೀಗ ಶಿವರಾಜಕುಮಾರ್‌ ಅಭಿನಯದ ಹೊಸ ಚಿತ್ರಕ್ಕೆ “ಶಿವಪ್ಪ” ಎಂಬ ಹೆಸರನ್ನಿಡಲಾಗಿದೆ. ಅಂದಹಾಗೆ, “ಶಿವಪ್ಪ” ಶಿವರಾಜಕುಮಾರ್‌ ಅಭಿನಯದ ೧೨೩ನೇ ಸಿನಿಮಾ ಎಂಬದು ವಿಶೇಷ. “ಶಿವಪ್ಪ” ಹೆಸರಲ್ಲೇ ಮಾಸ್‌ ಫೀಲ್‌ ಇದೆ. ಶಿವರಾಜಕುಮಾರ್‌ ಸಿನಿಮಾಗೆ “ಶಿವಪ್ಪʼ ಹೆಸರು ಒಂದು ರೀತಿ ಪಾಸಿಟಿವ್‌ ಆಗಿದ್ದು, ಇಡೀ ಸಿನಿಮಾದಲ್ಲಿ ಶಿವಣ್ಣ ಹೈಲೈಟ್‌ ಎನ್ನಲಾಗಿದೆ.

ಇನ್ನು, ಈ ಚಿತ್ರದಲ್ಲಿ ಶಿವರಾಜಕುಮಾರ್‌ ಹಾಗೂ ಡಾಲಿ ಧನಂಜಯ್‌ ಅವರೊಂದಿಗೆ ಯುವ ನಟ ಪೃಥ್ವಿ ಅಂಬರ್‌ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ತಾರಾಬಳಗದ ಆಯ್ಕೆ ನಡೆದಿದ್ದು, ನವೆಂಬರ್‌ ೨೩ರಿಂದಲೇ ಚಿತ್ರದ ಚಿತ್ರೀಕರಣ ಶುರುವಾಗಲಿದೆ. ಆರಂಭದ ಎರಡು ದಿನಗಳ ಕಾಲ ಶಿವರಾಜ್ ಕುಮಾರ್, ಪೃಥ್ವಿ ಅಂಬರ್ ಕಾಂಬಿನೇಷನ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ನವೆಂಬರ್‌ ೨೫ರ ಬಳಿಕ ಡಾಲಿ ಧನಂಜಯ್ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎಂಬುದು ಚಿತ್ರ ನಿರ್ದೇಶಕರ ಹೇಳಿಕೆ.


“ಶಿವಪ್ಪ” ಇದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಸಿನಿಮಾ. “ಶಿವಪ್ಪ” ಚಿತ್ರದಲ್ಲಿ ಶಿವರಾಜಕುಮಾರ್‌ ಅವರು ಮೂರು ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಂಬುದು ವಿಶೇಷ. ಸದ್ಯ ಉಳಿದ ಪಾತ್ರಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಚಿತ್ರದ ನಾಯಕಿ ಯಾರು ಅನ್ನುವುದಕ್ಕಿನ್ನೂ ಸಮಯವಿದೆ ಎನ್ನುವ ಚಿತ್ರತಂಡ, ಸದ್ಯ ನಟರ ಭಾಗದ ಚಿತ್ರೀಕರಣದತ್ತ ಗಮನಹರಿಸಿದ್ದಾರೆ.


ಈಗಾಗಲೇ ತಮಿಳಿನಲ್ಲಿ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿ, ಛಾಯಾಗ್ರಾಹಕರಾಗಿ ಸಾಕಷ್ಟು ಹೆಸರು ಮಾಡಿರುವ ವಿಜಯ್ ಮಿಲ್ಟನ್, ಕನ್ನಡದಲ್ಲಿ ಈಗಾಗಲೇ ಬಂದಿರುವ “ಅಟ್ಟಹಾಸ” ಹಾಗೂ ಬಿಡುಗಡೆಯಾಗಬೇಕಿರುವ ಧ್ರುವ ಸರ್ಜಾ ಅಭಿನಯದ “ಪೊಗರು” ಚಿತ್ರಕ್ಕೂ ಇವರೇ ಛಾಯಾಗ್ರಾಹಕರು. ಇನ್ನು, “ಶಿವಪ್ಪ” ವಿಜಯ್‌ ಮಿಲ್ಟನ್‌ ಅವರ ಕನ್ನಡದ ಮೊದಲ ನಿರ್ದೇಶನದ ಚಿತ್ರ ಎಂಬುದು ವಿಶೇಷ. ಸದ್ಯ ಶಿವರಾಜಕುಮಾರ್‌ ಸಾಕಷ್ಟು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲೂ ಶಿವಣ್ಣ ನಟಿಸುತ್ತಿದ್ದು, ಆ ಚಿತ್ರದಲ್ಲಿ ಪ್ರಭುದೇವ ಅವರೊಂದಿಗೆ ಶಿವಣ್ಣ ನಟಿಸುತ್ತಿದ್ದಾರೆ. “ಭಜರಂಗಿ 2” ಚಿತ್ರ ರೆಡಿಯಾಗಿದೆ.

ಇದರೊಂದಿಗೆ ತೆಲುಗಿನ ನಿರ್ದೇಶಕರೊಬ್ಬ ಸಿನಿಮಾದಲ್ಲೂ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಅದೇನೆ ಇರಲಿ, ಈಗ “ಶಿವಪ್ಪ” ಒಂದು ಕತೂಹಲವನ್ನಂತೂ ಕೆರಳಿಸಿದೆ. ಆ ಕುತೂಹಲಕ್ಕೆ ಕಾರಣ, ಶಿವರಾಜಕುಮಾರ್‌ ಹೈಲೈಟ್‌ ಆಗಿರೋದು, ಡಾಲಿ ಧನಂಜಯ್‌ ಜೊತೆಗಿರೋದು. ವಿಜಯ್ ಮಿಲ್ಟನ್‌ ‌ನಿರ್ದೇಶನ ಮಾಡುತ್ತಿರೋದು. ಎಲ್ಲದ್ದಕ್ಕೂ ಹೆಚ್ಚಾಗಿ, ಕೃಷ್ಣ ಸಾರ್ಥಕ್‌ ನಿರ್ಮಾಣ ಮಾಡುತ್ತಿರೋದು. ಸದ್ಯಕ್ಕೆ ಚಿತ್ರ ಒಂದು ಹೆಸರಿನ ಮೂಲಕವೇ ಸದ್ದು ಮಾಡಿದೆ. ಮುಂದಿನ ದಿನಗಳಲ್ಲಿ ಚಿತ್ರದ ಒಂದೊಂದೇ ಮಾಹಿತಿ ಹೊರಬೀಳಲಿದೆ.

Categories
ಸಿನಿ ಸುದ್ದಿ

ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಮಲ್ಲಾರಾಧ್ಯ ಇನ್ನಿಲ್ಲ

ಕನ್ನಡ ಚಿತ್ರರಂಗ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕ ಮಲ್ಲಾರಾಧ್ಯ (73 ವರ್ಷ) ನಿಧನರಾಗಿದ್ದಾರೆ. ಅವರು ಕೋವಿಡ್ ಸೋಂಕಿನಿಂದಾಗಿ ಕಳೆದ ನಾಲ್ಕು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್‌ ೧೯ರಂದು ಮೃತಪಟ್ಟಿದ್ದಾರೆ. ಮಲ್ಲಾರಾಧ್ಯ ಅವರು ಚಿತ್ರರಂಗದಲ್ಲಿ ಕಳೆದ ಐದು ದಶಕಗಳ ನಂಟು ಹೊಂದಿದ್ದರು. ಆರಂಭದ ದಿನಗಳಲ್ಲಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಮತ್ತು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಸೌಂಡ್‌ ಇಂಜಿನಿಯರ್ ಆಗಿ ಅವರು ತಮ್ಮ ಕಾರ್ಯನಿರ್ವಹಿಸಿದ್ದರು. ನಟ ಬಾಲಕೃಷ್ಣ ಅವರ ನಿಕಟವರ್ತಿಯಾಗಿದ್ದು, ನಂತರ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ತಮ್ಮ ನೆಲೆಯನ್ನು ಕಂಡುಕೊಂಡಿದ್ದರು. ಸುಮಾರು ಇನ್ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಅವರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ. ಪ್ರಸ್ತುತ ಮಲ್ಲಾರಾಧ್ಯ ಅವರು ಸ್ಥಿರಚಿತ್ರ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿದ್ದರು. ಹಿರಿಯ ಸಿನಿಮಾ ತಂತ್ರಜ್ಞ ಮಲ್ಲಾರಾಧ್ಯ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಲಾವಿದರು ಹಾಗು ಇತರೆ ತಾಂತ್ರಿಕ ವರ್ಗದವರು ಸಂತಾಪ ಸೂಚಿಸಿದ್ದಾರೆ.

Categories
ಆಡಿಯೋ ಕಾರ್ನರ್

ಹೊಸಬರ ರಿಚ್ಚಿ ಹಾಡು ಬಂತು

ಸನಿಹ ನೀ ಇರುವಾಗ ಸಲುಗೆಯ ಅನುರಾಗ…

ಈಗ ಸಿನಿಮಾಗಳದ್ದೇ ಸುದ್ದಿ. ಅದರಲ್ಲೂ ಹಾಡುಗಳ ಬಿಡುಗಡೆ ಪರ್ವ. ಆ ಸಾಲಿಗೆ ಈಗ “ರಿಚ್ಚಿ” ಸಿನಿಮಾ ಸೇರಿದೆ. ಇತ್ತೀಚೆಗೆ ಚಿತ್ರದ ಹಾಡೊಂದು ಹೊರಬಂದಿದೆ. ನಾಯಕ ರಿಚ್ಚಿ ಹಾಗೂ ನಿಷ್ಕಲ ಜೋಡಿಯಾಗಿ ಕಾಣಿಸಿಕೊಂಡಿರುವ “ರಿಚ್ಚಿ” ಚಿತ್ರಕ್ಕೆ ರಿಚ್ಚಿ ನಟನೆ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಮೊದಲ ಬಾರಿಗೆ ನಿರ್ದೇಶನ ಮಾಡಿರವ ರಿಚ್ಚಿ, ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಇನ್ನು, ಈ ಚಿತ್ರಕ್ಕೆ ಅಗಸ್ತ್ಯ ಸಂತೋಷ್‌ ಸಂಗೀತ ನೀಡಿದ್ದಾರೆ.

ಸೋನು ನಿಗಂ ಈ ಹಾಡಿಗೆ ಧ್ವನಿಯಾಗಿದ್ದಾರೆ. ಚಿನ್ನಿ ಪ್ರಕಾಶ್‌ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ಸನಿಹ ನೀ ಇರುವಾಗ ಸಲುಗೆಯ ಅನುರಾಗ…” ಹಾಡಲ್ಲಿ ನಾಯಕ ರಿಚ್ಚಿ ಮತ್ತು ನಿಷ್ಕಲ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ವಿನೋದ್ ಅವರ ಸಾಹಿತ್ಯವಿದೆ. ಬಹುತೇಕ ಕೊಡಗು ಸುತ್ತಮುತ್ತ ಈ ಹಾಡನ್ನು ಚಿತ್ರೀಕರಿಸಲಾಗಿದೆ. ವೀರೇಶ್ ಛಾಯಾಗ್ರಹಣವಿರು ಈ ಚಿತ್ರದಲ್ಲಿ ಸಸ್ಪೆನ್ಸ್‌ ಅಂಶಗಳೇ ಹೆಚ್ಚಾಗಿವೆ.


ಹೀರೋ ರಿಚ್ಚಿ ಚಿತ್ರದಲ್ಲಿ ಪತ್ರಕರ್ತನ ಪಾತ್ರ ನಿರ್ವಹಿಸಿದ್ದಾರೆ. ಇದೊಂದು ರೊಮ್ಯಾಂಟಿಕ್ ಕಥಾಹಂದರವಿದ್ದು, ನಾಯಕ ಇಲ್ಲಿ ಒಂದು ರಿಸ್ಕ್‌ನಲ್ಲಿ ಸಿಲುಕಿಕೊಂಡು ಆ ಬಳಿಕ ಹೇಗೆ ಹೊರಬರುತ್ತಾನೆ ಅನ್ನೋದೇ ಕಥೆ. ಈಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಶೇ.೭೦ ರಷ್ಟು ಬೆಂಗಳೂರು ಹಾಗೂ ಕೊಡಗಿನಲ್ಲಿ ಚಿತ್ರೀಕರಿಸಲಾಗಿದೆ.

ಚಿತ್ರಕ್ಕೆ ಮಂಜು ಸಹ ನಿರ್ದೇಶನವಿದೆ. ಅರ್ಜುನ್ ಕಿಟ್ಟು ಅವರ ಸಂಕಲನವಿದೆ. ಪುರುಷೋತ್ತಮ್‌ ಕಲಾ ನಿರ್ದೇಶನವಿದೆ. ವಿಕ್ರಮ್‌ ಅವರ ಸಾಹಸಿವೆ. ಪ್ರಕಾಶ್‌ರಾವ್‌ ಸಹ ನಿರ್ಮಾಣವಿದೆ. ಚಿತ್ರದಲ್ಲಿ ಮನೋಜ್ ಮಿಶ್ರ, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಇತರರು ನಟಿಸಿದ್ದಾರೆ.

Categories
ಸಿನಿ ಸುದ್ದಿ

ಅಂತೂ ಇಂತೂ ಅಸಿಸ್ಟೆಂಟ್ ಡೈರೆಕ್ಟರ್ ಗೆ ಪೇಮೆಂಟ್ ಸಿಕ್ತು..!

ಅಸಿಸ್ಟೆಂಟ್ ಡೈರೆಕ್ಟರ್ ಚಿತ್ರದ ಫಸ್ಟ್ ಲುಕ್ ರಿಲೀಸ್

ಅರೇ, ಹೀಗಂದಾಕ್ಷಣ ಕೊಂಚ ಅಚ್ಚರಿಯಾಗ ಬಹುದೇನೋ? ಸಾಮಾನ್ಯವಾಗಿ ಸಿನಿಮಾ ರಂಗದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಗಳಿಗೆ ಪೇಮೆಂಟ್ ಸಿಗೋದು ಸುಲಭವೇನಲ್ಲ. ಆದರೂ ಪೇಮೆಂಟ್ ಸಿಕ್ಕಿದೆ ಅಂದರೆ?ಹೌದು, ಪೇಮೆಂಟ್ ಸಿಕ್ಕಿರೋದು ನಿಜ. ಹಾಗಂತ ಕನ್ನಡ ಚಿತ್ರರಂಗದಲ್ಲಿರುವ ಅಸಿಸ್ಟೆಂಟ್ ಡೈರೆಕ್ಟರ್ ಗಳಿಗಲ್ಲ. ಕನ್ನಡದಲ್ಲಿ ‘ಅಸಿಸ್ಟೆಂಟ್ ಡೈರೆಕ್ಟರ್’ ಹೆಸರಿನ ಸಿನಿಮಾವೊಂದು ಶುರುವಾಗುತ್ತಿರೊದು ಗೊತ್ತೇ ಇದೆ. ಇದು ಕನ್ನಡ‌ ಮಾತ್ರವಲ್ಲದೆ ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಯಲ್ಲೂ ತಯಾರಾಗುತ್ತಿದೆ. ಚಿತ್ರದ ಶೀರ್ಷಿಕೆ ಹೇಳುವಂತೆ ಕನ್ನಡ ಸಿನಿಮಾರಂಗದಲ್ಲಿರುವ ಸಹ‌ ನಿರ್ದೇಶಕರ ಕಥಾಹಂದರ ಇರುವ ಸಿನಿಮಾನಾ? ಗೊತ್ತಿಲ್ಲ. ಆದರೆ, ಇದೊಂದು ಹೊಸಬರ ತಂಡ ಹುಟ್ಟು ಹಾಕುತ್ತಿರುವ ಸಿನಿಮಾ.

ದಿವಾಕರ ಡಿಂಡಿಮ, ನಿರ್ದೇಶಕ

ಈ ಚಿತ್ರದ ಮೂಲಕ ದಿವಾಕರ್ ಡಿಂಡಿಮ ನಿರ್ದೇಶಕರಾಗುತ್ತಿದ್ದಾರೆ. ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇವರ ಜೊತೆ ಒಂದೊಳ್ಳೆಯ ತಂಡವೂ ಜೊತೆ ಸೇರಿದೆ. ಸಿನಿಮಾ ಹಸಿವು ಇರುವ ಸಮಾನ ಮನಸ್ಸಿನ ಗೆಳೆಯರು ಕೈ ಜೋಡಿಸಿದ್ದಾರೆ.
ಸಂತೋಷ್ ಆಶ್ರಯ್ ಚಿತ್ರದ ಹೀರೋ. ಈ ಹಿಂದೆ ಹಲವು ಕಿರುಚಿತ್ರಗಳ ಮಾಡಿದ ಅನುಭವವಿದೆ. ಸಂತೋಷ್ ಆಶ್ರಯ್ ಅವರಿಗೆ ನಿಸರ್ಗ ಅಪ್ಪಣ್ಣ ನಾಯಕಿ. ವಿಹಾನ್ ಸಂಗೀತ ನೀಡಿದ್ದಾರೆ. ಪ್ರಸಾದ್ ಎಚ್.ಎಂ.ಛಾಯಾಗ್ರಹಣವಿದೆ.

ಸಿನಿಮಾ ನಿರ್ಮಾಪಕ, ನಟನ ಉದ್ಯಮವೇ?

ತಮ್ಮ ಚೊಚ್ಚಲ ಸಿನಿಮಾ ಕುರಿತು ನಿರ್ದೇಶಕ ದಿವಾಕರ್ ಡಿಂಡಿಮ ‘ಸಿನಿಲಹರಿ’ ಗೆಹೇಳುವುದಿಷ್ಟು.
‘ಸಮಾಜಕ್ಕೆ ಸಿನಿಮಾದವರ ಮೇಲಿನ ಒಂದಿಷ್ಟು ಅಭಿಪ್ರಾಯಗಳನ್ನೆಲ್ಲ ಕಲೆ ಹಾಕಿ ಅದನ್ನ ಒಂದು ಪ್ರಶ್ನೆಯಾಗಿಟ್ಟು ಅದಕ್ಕೆ ಉತ್ತರ ಕೊಡೋ ಸಣ್ಣದ್ದೊಂದು ಪ್ರಯತ್ನಕ್ಕೆ ಕೈ ಹಾಕಿದ್ದೇನೆ.
ಸಿನಿಮಾ ಅನ್ನೋದು ಕೇವಲ ನಿರ್ಮಾಪಕ ಮತ್ತು ನಟನಿಗೆ ಮಾತ್ರ ಒಂದು ಉದ್ಯಮವಾಗಿ ಬಳಕೆಯಾಗುತ್ತಿದೆ. ಒಬ್ಬ ಮೇರು ನಟನ ಚಿತ್ರ ಶುರುವಾಗುತ್ತಿದೆ. ಅಂದರೆ, ಉಳಿದ ಎಲ್ಲಾ ವಿಭಾಗಗಳಲ್ಲೂ ಉದ್ಯಮದ ವಾತಾವರಣ
ಬೆಳೆಯಬೇಕು. ಚಿತ್ರರಂಗಕ್ಕಾಗಿ ದುಡಿಯುವ ಪ್ರತಿಯೊಬ್ಬರಿಗೂ ಸರಿಯಾದ ಸ್ಥಾನಮಾನ, ಧನ ಸಿಗುವಂತಾಗಬೇಕು.


ಸಿನಿಮಾ ಮೇಲಿನ ಪ್ರೀತಿಯಿಂದ ಬಂದವರನ್ನು ಸುಖಾಸುಮ್ಮನೆ ದುರುಪಯೋಗಪಡಿಸಿಕೊಳ್ಳುವುದು ಮೊದಲು ನಿಲ್ಲಬೇಕು, ತನ್ನ ಕೆಲಸದ ಜೊತೆ ಜೊತೆಗೆ ಬೇರೆಲ್ಲಾ ವಿಭಾಗಗಳ ಕೆಲಸ ಮಾಡುವ ಏಕೈಕ ವ್ಯಕ್ತಿ ಅಂದರೆ ಅದು ಸಹಾಯಕ ನಿರ್ದೇಶಕ, ಆದರೆ ಚಿತ್ರರಂಗದ ಎಲ್ಲಾ ವಿಭಾಗಗಳಿಗಿಂತ ಅತೀ ಕಡಿಮೆ ಅಂದ್ರೆ ಸಂಭಾವನೆಯೇ ಇಲ್ಲದೇ ಬರೀ ತನ್ನ ಖರ್ಚಿಗಷ್ಟೇ ಹಣ ಪಡೆದು ಕೆಲಸ ಮಾಡುವಂತಾಗಿದೆ.


ಸಹಾಯಕ ನಿರ್ದೇಶಕರು ಏನೆಲ್ಲಾ ಮಾಡಬಲ್ಲರು ಎಂದು ತೋರಿಸುವುದೇ ನಮ್ಮ ಈ ‘ಅಸಿಸ್ಟೆಂಟ್ ಡೈರೆಕ್ಟರ್’ ಸಿನಿಮಾದ ಉದ್ದೇಶ. ಹಾಗಂತ ಇಲ್ಲಿ ಯಾರನ್ನೂ ತೆಗಳುವ ಉದ್ದೇಶವಿಲ್ಲ. ಸಿನಿಮಾ ಮೂಲಕ ಒಂದಷ್ಟು ಸತ್ಯವನ್ನು, ವಾಸ್ತವತೆಯನ್ನು ತೋರಿಸುವ ಪ್ರಯತ್ನಕ್ಕೆ ಹೊರಟಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ದಿವಾಕರ್ ಡಿಂಡಿಮ.

ಅದೇನೆ ಇರಲಿ, ಚಿತ್ರರಂಗದಲ್ಲಿರುವ ವ್ಯವಸ್ಥೆ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಗಳನ್ನು ನಡೆಸಿಕೊಳ್ಳುವ ರೀತಿ ಕುರಿತು ಒಂದಷ್ಟು ವಿಶೇಷತೆಗಳಿವೆ.
ನಿರ್ದೇಶಕನಾಗಬೇಕೆಂಬ
ಕನಸನ್ನ ಕಟ್ಟಿಕೊಂಡು ತಯಾರಿ ನಡೆಸುತ್ತಿರುವ ಸಹ ಹಾಗೂ ಸಹಾಯಕ ನಿರ್ದೇಶಕರ ನೋವು, ನಲಿವು ಬಗೆಗಿನ ಚಿತ್ರಣವನ್ನು‌ ಭಾವನಾತ್ಮಕವಾಗಿ ಕಟ್ಟಿಕೊಡುವ ಪ್ರಯತ್ನ ಈ ಹೊಸಬರದು.

Categories
ಸಿನಿ ಸುದ್ದಿ

ಕಬ್ಜ ಮೋಷನ್ ಪೋಸ್ಟರ್ ಹುಟ್ಟಿಸಿದ ಹವಾ

 

ಆರ್.ಚಂದ್ರು ಮೋಡಿಗೆ ಉಪ್ಪಿ ಫ್ಯಾನ್ಸ್ ಫಿದಾ

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಕಬ್ಜ’ ಈಗಾಗಲೇ ಸಾಕಷ್ಟು ಸುದ್ದಿ ಮಾಡಿದೆ. ಈಗ ದೀಪಾವಳಿ ಹಬ್ಬಕ್ಕೆ ಮತ್ತೊಂದು ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ.ಉಪೇಂದ್ರ ಅಭಿನಯದ ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶನ ಮಾಡಿದ್ದಾರೆ.


ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ‘ಕಬ್ಜ’ ಭಾರತಾದ್ಯಂತ ಕ್ರೇಜ್ ಹೆಚ್ಚಿಸಿದೆ. ಈ ಕ್ರೇಜ್ ಗೆ ಕಾರಣ, ಈಗಾಗಲೇ‌ ಆರ್.ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ ನಲ್ಲಿಬ’ಬ್ರಹ್ಮ’ ಮತ್ತು ‘ಐ ಲವ್ ಯು’ ಚಿತ್ರಗಳು ಹೊರಬಂದಿದ್ದು, ಅವುಗಳು ಕನ್ನಡ ಚಿತ್ರರಂಗ ಮಾತ್ರವಲ್ಲ, ಪರಭಾಷೆಯಲ್ಲೂ ಸದ್ದು ಮಾಡಿವೆ. ಈಗ ಅದೇ ಕಾಂಬಿನೇಷನ್ ನಲ್ಲಿ ‘ಕಬ್ಜ’ ತಯಾರಾಗುತ್ತಿದೆ. ಶುರುವಿನಿಂದಲೂ ‘ಕಬ್ಜ’ ಜೋರು ಸದ್ದು ಮಾಡಿದೆ. ಈಗ‌ ಹೊರಬಂದಿರುವ ಮೋಷನ್ ಪೋಸ್ಟರ್ ಗೂ ಸಖತ್ ಮೆಚ್ಚುಗೆ ಸಿಗುತ್ತಿದೆ. ಇನ್ನು ಚಿತ್ರಕ್ಕೆ ರವಿ ಬಸ್ರುರು ಅವರ ಸಂಗೀತವಿದೆ.


ಆರ್.ಚಂದ್ರು ಯಾವುದೇ ಚಿತ್ರ ಮಾಡಿದರೂ ಅಲ್ಲಿ ವಿಶೇಷತೆ ಇದ್ದೇ ಇರುತ್ತೆ. ಹಾಗೆಯೇ ‘ಕಬ್ಜ’ ಸಿನಿಮಾ‌ಕೂಡ ಆರಂಭದಲ್ಲೇ ಸುದ್ದಿ ಮಾಡುತ್ತಿದ್ದು, ಉಪೇಂದ್ರ ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚಿಸಿರುವುದಂತೂ ನಿಜ.

Categories
ಸಿನಿ ಸುದ್ದಿ

ಬಳೆಪೇಟೆಯಲ್ಲಿ ನಿಂತ ಅನಿತಾಭಟ್

 

ಡಿ ಗ್ಲಾಮ್ ಪಾತ್ರದಲ್ಲಿ ಭಟ್ಟರು

ಕನ್ನಡದ ಗ್ಲಾಮರಸ್ ನಟಿ ಅನಿತಾಭಟ್ ಈಗ ಬಳೆಪೇಟೆಯಲ್ಲಿದ್ದಾರೆ. ಹಾಗಂತ ಬಳೆ ಖರೀದಿಗೆ ಬಳೆಪೇಟೆಯಲ್ಲಿ ನಿಂತಿಲ್ಲ. ‘ಬಳೆಪೇಟೆ’ ಅನ್ನೋದು ಅವರ ಹೊಸ ಚಿತ್ರದ ಹೆಸರು.
ದೀಪಾವಳಿ ಹಬ್ಬಕ್ಕೆ ಅವರ ‘ಬಳೆಪೇಟೆ’ ಚಿತ್ರದ ಫಸ್ಟ್ ಲುಕ್ ಹೊರಬಂದಿದೆ.


ಈ ಚಿತ್ರದ ಫಸ್ಟ್ ಲುಕ್ ನೋಡಿದರೆ, ಅದೊಂದು ಗ್ಯಾಂಗ್ ಸ್ಟೋರಿ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತೆ. ಇಲ್ಲೊಂದು ಗ್ಯಾಂಗ್ ಸ್ಟೋರಿ ಇದ್ದರೂ, ಹೆಣ್ಣೊಬ್ಬಳ ಅಸಹಾಯಕತೆ, ನೋವು, ತಲ್ಲಣ ಇತ್ಯಾದಿ ವಿಷಗಳನ್ನು ಹೊಂದಿದೆ.
ಈ ಚಿತ್ರಕ್ಕೆ ರಿಷಿಕೇಶ್ ನಿರ್ದೇಶಕರು. ಇದು ಇವರ ಚೊಚ್ಚಲ ಚಿತ್ರ. ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನ ಮಾಡಿದ್ದು, ಜೊತೆಗೆ ಕ್ಯಾಮೆರಾ ಹಿಡಿದಿದ್ದಾರೆ. ಸಂಕಲನವನ್ನು ಮಾಡಿದ್ದಾರೆ.


ಅನಿತಾಭಟ್ ಈ ಚಿತ್ರದ ಮುಖ್ಯ ಆಕರ್ಷಣೆ. ಪ್ರಮೋದ್ ಬೋಪಣ್ಣ, ಉಮೇಶ್ ಬಣಕಾರ್, ಮಯೂರ್ ಪಟೇಲ್ ಇತರರು ನಟಿಸಿದ್ದಾರೆ.
ಶಿವರಾಮ್ ನಿರ್ಮಾಣವಿದೆ. ಇವರಿಗೂ ಇದು ಮೊದಲ ಪ್ರಯತ್ನ.


ಅನಿತಾಭಟ್ ಈ ಚಿತ್ರದಲ್ಲಿ ಮೇಕಪ್ ಮಾಡಿಲ್ಲ ಎಂಬುದು ವಿಶೇಷ.‌ ‘ಬಳೆಪೇಟೆ’ ಚಿತ್ರ ನೈಜವಾಗಿಯೇ ಮೂಡಿಬರಬೇಕು ಎಂಬ ಉದ್ದೇಶದಿಂದ ನಿರ್ದೇಶಕರು ಚಿತ್ರೀಕರಣ ಸ್ಥಳ ಸೇರಿದಂತೆ ಕಲಾವಿದರನ್ನೂ ಹಾಗೆಯೇ ಆಯ್ಕೆ ಮಾಡಿದ್ದಾರೆ.

ಒಟ್ಟಾರೆ ‘ಬಳೆಪೇಟೆ’ ಒಂದು ಸೂಕ್ಷ್ಮತೆಯ ಸಿನಿಮಾ ಎಂಬುದು ಚಿತ್ರತಂಡದ ಹೇಳಿಕೆ.
ಅನಿತಾಭಟ್ ಅಬಿನಯದ ‘ಬೆಂಗಳೂರು 69’, ‘ಕಲಿವೀರ’,’ಕನ್ನೇರಿ’, ‘ಡಿಎನ್ಎ’, ‘ಜೂಟಾಟ’ ಮತ್ತು ‘ಪ್ರಭುತ್ವ’ ಚಿತ್ರಗಳಿವೆ. ಸದ್ಯ ರಿಲೀಸ್ ಗೆ ರೆಡಿ ಇರುವ ಸಿನಿಮಾಗಳ ಜೊತೆ ಈಗ ‘ಬಳೆಪೇಟೆ’ಯೂ ಇದೆ.

Categories
ಸಿನಿ ಸುದ್ದಿ

ಹಲವು ತಿರುವುಗಳ ರೂಮ್ ಬಾಯ್!

 

ಪ್ರತಿಭಾವಂತ ಹುಡುಗರ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್

ಇದು ದೀಪಾವಳಿ ಧಮಾಕ…

ಕನ್ನಡ ಚಿತ್ರರಂಗ ಮತ್ತೆ ಉತ್ಸಾಹದೊಂದಿಗೆ ತನ್ನ ಕಾರ್ಯಚಟುವಟಿಕೆಯಲ್ಲಿ ತೊಡಗಿದೆ. ಅದೇ ಉತ್ಸಾಹ ಮತ್ತು ಹುರುಪಿನೊಂದಿಗೆ ಚಿತ್ರಗಳು ಕೂಡ ಶುರುವಾಗುತ್ತಿವೆ. ಆ ಸಾಲಿಗೆ ಈಗ ‘ರೂಮ್ ಬಾಯ್’ ಚಿತ್ರ ಸೆಟ್ಟೇರುತ್ತಿದೆ. ಹೌದು ‘ರೂಮ್ ಬಾಯ್’ ಹೆಸರಲ್ಲೇ ಒಂದು ರೀತಿ ಮಜವಿದೆ. ಅಂತಹ ಮನರಂಜನೆಯ ಸಿನಿಮಾ ನಮನ ಎಂಬ ಉದ್ದೇಶದಿಂದ ಇಲ್ಲೊಂದು ಪ್ರತಿಭಾವಂತರ ತಂಡ ‘ರೂಮ್ ಬಾಯ್’ ಸಿನಿಮಾ ಕೈಗೆತ್ತಿಕೊಡಿದೆ. ದೀಪಾವಳಿ ಹಬ್ಬದಂದು ಚಿತ್ರತಂಡ ತನ್ನ ಫಸ್ಟ್ ಲುಕ್ ರಿಲೀಸ್ ಮಾಡಿದೆ.

ಲಿಖಿತ್ ಸೂರ್ಯ, ನಾಯಕ

ಸಿನಿಮಾದ ಶೀರ್ಷಿಕೆ ನೋಡಿದರೆ, ಇದು ಪಕ್ಕಾ ಪಡ್ಡೆ ಹುಡುಗರಿಗೆಂದೇ ಮಾಡುತ್ತಿರುವ ಸಿನಿಮಾ ಎನಿಸಿದರೂ, ಚಿತ್ರದಲ್ಲೊಂದು ವಿಶೇಷತೆ ಇದೆ. ಫೋರ್ಸ್ ಕೂಡ ಇದೆ.
ಅಂದಹಾಗೆ, ‘ರೂಮ್ ಬಾಯ್’ ಐ ಕ್ಯಾನ್ ಪ್ರೊಡಕ್ಷನ್ ಮೂಲಕ ಈ ಚಿತ್ರ ತಯಾರಾಗುತ್ತಿದೆ.
‘ರೂಮ್ ಬಾಯ್’ ಫಸ್ಟ್ ಲುಕ್ ನೋಡಿದವರಿಗೆ ಇದೊಂದು ಹೋಟೆಲ್ ವೊಂದರ ‘ರೂಮ್ ಬಾಯ್’ ಕಥೆ ಅನಿಸುತ್ತೆ. ಈ ಕಲರ್ ಫುಲ್ ಫಸ್ಟ್ ಲುಕ್ ಅನ್ನು ಸೂಕ್ಷ್ಮವಾಗಿ ಗಮನಿಸಿದವರಿಗೆ ಎಡಗೈಯಲ್ಲೊಂದು ವೈನ್ ತುಂಬಿದ ಗ್ಲಾಸ್ , ಬಲಗೈಯಲ್ಲೊಂದು ಕಬ್ಬಿಣದ ರಾಡು ಹಿಡಿದು ನಿಂತಿರುವ ಹೀರೋ ಕಾಣುತ್ತಾನೆ. ಆ ಕಬ್ಬಿಣದ ರಾಡನ್ನು ಇನ್ನೂ ಸೂಕ್ಷ್ಮವಾಗಿ ಗಮನಿಸಿದರೆ, ಜಿನುಗುತ್ತಿರುವ ರಕ್ತದ ಹನಿಗಳು ಕಾಣುತ್ತವೆ. ಅಲ್ಲಿಗೆ ಅಲ್ಲೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂಬುದನ್ನು‌ ಅರಿಯಬಹುದು. ಕನ್ನಡದಲ್ಲಿ ಈಗಾಗಲೇ ಸಸ್ಪೆನ್ಸ್ ಥ್ರಿಲ್ಲರ್ ಕಥೆಗಳಿಗೇನೂ ಬರವಿಲ್ಲ. ಅದೇ ಹಾದಿಯಲ್ಲಿ ಸಾಗಲಿರುವ ಈ ಚಿತ್ರದಲ್ಲಿ ಹಲವಾರು ವಿಶೇಷತೆಗಳಿವೆ ಎಂಬುದು ಚಿತ್ರತಂಡದ ಹೇಳಿಕೆ.


ಈ ಚಿತ್ರಕ್ಕೆ ಲಿಖಿತ್ ಸೂರ್ಯ ಹೀರೋ. ಈ ಚಿತ್ರಕ್ಕೆ ರವಿ‌ ನಾಗಡದಿನ್ನಿ ನಿರ್ದೇಶಕರು.
ಲಿಖಿತ್ ಸೂರ್ಯ ಇಲ್ಲಿ ನಟನೆ ಜೊತೆಗೆ ಇದೇ ಮೊದಲ‌ ಸಲ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ತಮ್ಮ ಆಪ್ತ ಕೆಲ ಗೆಳೆಯರೂ ಕೂಡ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಲಿಖಿತ್ ಸೂರ್ಯ ಅವರಿಗೆ ಸಿನಿಮಾ ಹೊಸದಲ್ಲ. ಈ ಹಿಂದೆ ‘ಲೈಫು ಸೂಪರ್’ ಮತ್ತು ‘ಆಪರೇಷನ್ ನಕ್ಷತ್ರ’ ಚಿತ್ರ ಮಾಡಿದ್ದಾರೆ. ಇದರೊಂದಿಗೆ ತೆಲುಗಿಗೂ ಎಂಟ್ರಿಯಾಗಿರುವ ಲಿಖಿತ್ ಸೂರ್ಯ, ‘ರಾಮಾಪುರಂ’ ಹೆಸರಿನ ಚಿತ್ರದಲ್ಲೂ ಹೀರೋ ಆಗಿ ನಟಿಸಿದ್ದಾರೆ. ಸದ್ಯ ಎರಡನೇ ಹಂತದ ಚಿತ್ರೀಕರಣ ಮುಗಿದರೆ, ‘ರಾಮಾಪುರಂ’ ಪೂರ್ಣಗೊಳ್ಳಲಿದೆ. ಈಗ ಐ ಕ್ಯಾನ್ ಪ್ರೊಡಕ್ಷನ್ ಮೂಲಕ ‘ರೂಮ್‌ ಬಾಯ್’ ಮಾಡುತ್ತಿದ್ದಾರೆ.

ರವಿ ನಾಗಡದಿನ್ನಿ, ನಿರ್ದೇಶಕ

ಇನ್ನು ನಿರ್ದೇಶಕ ರವಿ ನಾಗಡದಿನ್ನಿ ಅವರಿಗೂ ಈ ‘ರೂಮ್ ಬಾಯ್’ ಮೊದಲ ಪ್ರಯತ್ನ. ಹಾಗಂತ ಇವರಿಗೆ ಸಿನಿಮಾ ರಂಗ ಹೊಸದಲ್ಲ. ನಿರ್ದೇಶಕನ ಕನಸು ಕಟ್ಟಿಕೊಂಡಿದ್ದ ರವಿ ನಾಗಡದಿನ್ನಿ ಸಾಫ್ಟ್ ವೇರ್ ಕೆಲಸವನ್ನೇ ಬಿಟ್ಟು ಈ ಕಲರ್ ಫುಲ್ ಲೋಕಕ್ಕೆ ಎಂಟ್ರಿಯಾದವರು.
ಹೌದು, ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದ ರವಿ, ಸಿನಿಮಾ ರಂಗದಲ್ಲಿ ಸಾಧಿಸಕೆಂಬ ಆಸೆ ಹುಟ್ಟಿದ್ದೇ ತಡ, ಕೆಲಸ ಬಿಟ್ಟು 2011 ರಲ್ಲಿ ಗಾಂಧಿನಗರ ಕಡೆ ಮುಖ ಮಾಡಿದವರು.
ಬಿಸಿಲೂರು ಎಂದೇ ಕರೆಸಿಕೊಳ್ಳುವ ರಾಯಚೂರು ಜಿಲ್ಲೆಯ ನಾಗಡದಿನ್ನಿ ಎಂಬ ಸಣ್ಣ ಹಳ್ಳಿಯಲ್ಲಿದ್ದ ರವಿ
ಸಿನಿಮಾ ಪ್ರೀತಿ ಬೆಳೆಸಿಕೊಂಡು ಇತ್ತ ಮುಖ ಮಾಡಿದ್ದಾರೆ.
ಈ ಸಿನಿಮಾಗೂ ಮುನ್ನ ರವಿ ನಾಗಡದಿನ್ನಿ ಒಂದಿಷ್ಟು ಕಿರು ಚಿತ್ರಗಳನ್ನ ನಿರ್ದೇಶನ ಮಾಡಿದ್ದಾರೆ. ನಂತರದ‌ ದಿನಗಳಲ್ಲಿ ಸಂಭಾಷಣೆಗಾರ ಪ್ರಶಾಂತ ರಾಜಪ್ಪನವರ ಪರಿಚಯವಾಗಿ ಸಿನಿಮಾದಲ್ಲಿ ಕೆಲಸ ಮಾಡಲು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಅಲ್ಲಿಂದ ‘ತಿರುಪತಿ ಎಕ್ಸಪ್ರೆಸ್ಸ್ ‘, ‘ಲೈಫು ಸೂಪರ್’ ಸಿನಿಮಾಗಳಿಗೆ ಇವರು‌ ಮಾತುಗಳನ್ನು ಪೋಣಿಸಿದ್ದಾರೆ.
‘ವೀಲ್ ಚೇರ್ ರೋಮಿಯೋ’, ‘ಮೃಗಶಿರ’ ಸೇರಿದಂತೆ ಕೆಲವು ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದಾರೆ.
ಅವರ ಕೆಲಸ‌ ನೋಡಿದ ಅನೇಕ ಸಿನಿಮಾ ಗೆಳೆಯರು ಬೆನ್ನೆಲಬಾಗಿ ನಿಂತಿದ್ದಾರೆ. ಎಲ್ಲಕ್ಕಿಂತಲೂ ಹೆಚ್ಚಾಗಿ ಅವರು ಸಾಫ್ಟ್ ವೇರ್ ಕೆಲಸ‌ ಬಿಟ್ಟು ಸಿನಿಮಾ ಕಡೆ ವಾಲಿದಾಗ ಮನೆಯಲ್ಲಿ ಬೆಂಬಲಕ್ಕೆ ನಿಂತವರು ಸಹೋದರಿ ಅನ್ನಪೂರ್ಣ ಹಾಗು ಬಾವ ಬಲಬೀಮಾ. ಇವರೊಂದಿಗೆ ಗೆಳೆಯರಾದ ಸಂತೋಷ ಹೆಬ್ಬಾಳ ,ಬಂದೆ ನವಾಜ್ ಸಾಥ್‌ ಕೊಟ್ಟಿದ್ದನ್ನು ಸ್ಮರಿಸುತ್ತಾರೆ ನಿರ್ದೇಶಕ ರವಿ‌ ನಾಗಡದಿನ್ನಿ.

ಮೊದಲ ಪ್ರಯತ್ನ
ರವಿ ನಾಗಡದಿನ್ನಿ ಈಗ ತಮ್ಮ ನಿರ್ದೇಶನದ ಮೊದಲ ಸಿನಿಮಾ ‘ರೂಮ್ ಬಾಯ್’ ನಿರ್ದೇಶನಕ್ಕೆ ಅಣಿಯಾಗಿದ್ದಾರೆ.
ಇನ್ನು ಅವರ ಈ ಪ್ರಯತ್ನಕ್ಕೆ ನಾಯಕ ಲಿಖಿತ್ ಸೂರ್ಯ ಸಾಥ್ ನೀಡಿದ್ದಾರೆ. ಚಿತ್ರಕ್ಕೆ ನಾಯಕನ ಆಯ್ಕೆ ಮಾತ್ರ ಆಗಿದ್ದು, ಇಷ್ಟರಲ್ಲೇ ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯಲಿದೆ.
ಕಥೆ ಲಿಖಿತ್ ಸೂರ್ಯ ಬರೆದರೆ, ಸಂಭಾಷಣೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ರವಿ ನಾಗಡದಿನ್ನಿ ಹೊತ್ತಿದ್ದಾರೆ. ಚಿತ್ರಕಥೆಗೆ ಇವರಿಬ್ಬರ ಶ್ರಮವೂ ಇದು.

ಇದು ಸೈಕಲಾಜಿಕಲ್ ಥ್ರಿಲ್ಲರ್

ಕಥೆ‌ ಬಗ್ಗೆ ಹೇಳುವ ನಿರ್ದೇಶಕರು, ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾ ಹಂದರ ಹೊಂದಿದೆ. ಈಗಿನ ಟ್ರೆಂಡ್ ಜೊತೆಗೆ ವಿಭಿನ್ನ ಸಿನಿಮಾ ಕಟ್ಟಿ ಕೊಡುವ ಪ್ರಯತ್ನದಲ್ಲಿದ್ದಾರಂತೆ ನಿರ್ದೇಶಕರು.
ಅಂದಹಾಗೆ, ದೀಪಾವಳಿ ಹಬ್ಬದ ದಿನದಂದು‌ ಗೋಧೂಳಿ ಸಮಯದಂದು ಫಸ್ಟ್ ಲುಕ್ ರಿಲೀಸ್ ಮಾಡಿದ್ದು, ಡಿಸೆಂಬರ್ ತಿಂಗಳಿಂದ ಚಿತ್ರದ ಶೂಟಿಂಗ್ ಶರುವಾಗಲಿದೆ . ಸುಮಾರು 30 ದಿನಗಳ ಕಾಲ ಬೆಂಗಳೂರಲ್ಲಿ ಚಿತ್ರೀಕರಣ ನಡೆಯಲಿದೆ .


ಈ ಚಿತ್ರಕ್ಕೆ ರೋಣದ ಬಕ್ಕೇಶ್ ಸಂಗೀತ ನೀಡಿದರೆ, ಅರುಣ್ ಎಎನ್ ಆರ್ ಅವರ ಛಾಯಾಗ್ರಹಣವಿದೆ. ಕಿರಣ್ ಕುಮಾರ್ ಅವರ ಸಂಕಲನವಿದೆ. ಸದ್ಯ ‘ರೂಮ್ ಬಾಯ್ ‘ ಫಸ್ಟ್ ಲುಕ್ ಗೆ ಮೆಚ್ಚುಗೆ ಸಿಗುತ್ತಿದೆ.

Categories
ಸಿನಿ ಸುದ್ದಿ

ಸಂಚಾರಿಯ ಹೊಸ ಸಂಚಾರ… ಇದು ಅವಸ್ಥಾಂತರ ವಿಷಯ

ಹೊಸ ಚಿತ್ರ ಒಪ್ಪಿದ ಸಂಚಾರಿ ವಿಜಯ್ 

 

ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಈಗ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಸಂಚಾರಿ ವಿಜಯ್ ಒಂದೊಳ್ಳೆಯ ಕಥೆ ಮತ್ತು ಪಾತ್ರ ಮೆಚ್ಚಿಕೊಂಡು ಚಿತ್ರಕ್ಕೆ ಸಹಿ ಹಾಕಿದ್ದಾರೆ ಎಂಬುದು ಈ ಹೊತ್ತಿನ ಸುದ್ದಿ.

ಆ ಚಿತ್ರಕ್ಕೆ ‘ಅವಸ್ಥಾಂತರ’ ಎಂದು ನಾಮಕರಣ ಮಾಡಲಾಗಿದೆ. ಇನ್ನು ‘ ಮುಂದೆ ಬಂದರೆ ಹಾಯಬೇಡಿ, ಹಿಂದೆ ಬಂದರೆ ಒದೆಯಬೇಡಿ’ ಎಂಬ ಅಡಿಬರಹವೂ ಇದೆ. ಸದ್ಯಕ್ಕೆ ದೀಪಾವಳಿ ದಿನದಂದು ಚಿತ್ರದ ಫಸ್ಟ್ ಲುಕ್ ಹೊರಬಂದಿದೆ.

ದೀಪಕ್ , ನಿರ್ದೇಶಕ, ‌ನಿರ್ಮಾಪಕ

ಚಿತ್ರಕ್ಕೆ ಜಿ.ದೀಪಕ್ ಕುಮಾರ್ ನಿರ್ದೇಶಕರು. ಈ ಹಿಂದೆ ಇವರು ‘ಮಠ’ ಖ್ಯಾತಿಯ ಗುರುಪ್ರಸಾದ್ ಅವರ ಗರಡಿಯಲ್ಲಿ ಪಳಗಿದವರು. ಇದರೊಂದಿಗೆ ಮಲಯಾಳಂ ನ ಪ್ರಸಿದ್ಧ ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟಿ ಅವರ ಕೆಲ ಚಿತ್ರಗಳಿಗೆ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದರೊಂದಿಗೆ ಸಾಕಷ್ಟು ಡಾಕ್ಯುಮೆಂಟರಿ ಮತ್ತು ಜಾಹಿರಾತು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಅವಸ್ಥಾಂತರ’ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ.

ಹದಿಹರೆಯದ ಯುವಕನೊಬ್ಬ ತನಗೆ ಅರಿವಿಲ್ಲದೆ ಹುಟ್ಟುವ ಬಯಕೆಗಳು, ಕಾಮನೆಗಳು ಹೇಗೆ ಆ ಹುಡಗನನ್ನು ಅತಂತ್ರ ಸ್ಥಿತಿಗೆ ತಳ್ಳುತ್ತದೆ ಮತ್ತು ಅದರಿಂದ ಏನೆಲ್ಲಾ ಪಜೀತಿ, ಅವಸ್ಥೆ, ಅನಾಹುತಗಳು ನಡೆಯುತ್ತವೆ ಎಂಬ ತಿಳಿ ಹಾಸ್ಯದ ಮೂಲಕ ಒಂದು ಸಂದೇಶ ಕಟ್ಟಿ ಕೊಡುವ ಪ್ರಯತ್ನ ಈ ಚಿತ್ರದ ಮೂಲಕ ಮಾಡಲಿದ್ದಾರೆ ನಿರ್ದೇಶಕರು. ಡಿಸೆಂಬರ್ ಕೊನೆಯ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.
ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳಲಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಮಮ್ಮಿ ಪ್ಲೀಸ್‌ ಮಮ್ಮಿ ಸಾಂಗ್ ಭರ್ಜರಿ ಸೌಂಡು!

ತ್ರಿವಿಕ್ರಮ ಲಿರಿಕಲ್‌ ವಿಡಿಯೋ ಸಾಂಗ್‌ ಹೊರಬಂತು

ಮಕ್ಕಳ ದಿನಾಚರಣೆಗೊಂದು ಸ್ಪೆಷಲ್‌ ಗಾನ

ಕನ್ನಡದಲ್ಲಿ ಸದ್ಯಕ್ಕೆ “ತ್ರಿವಿಕ್ರಮ” ಸಿನಿಮಾ ಜೋರು ಸುದ್ದಿ ಮಾಡುತ್ತಲೇ ಇದೆ. ಆರಂಭದಿಂದಲೂ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿರುವುದು ಗೊತ್ತೇ ಇದೆ. ಈಗಾಗಲೇ ಕ್ರೇಜಿಸ್ಟಾರ್‌ ಎರಡನೇ ಪುತ್ರ ವಿಕ್ರಮ್‌ ರವಿಚಂದ್ರನ್‌ “ತ್ರಿವಿಕ್ರಮ” ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ನಿರೀಕ್ಷೆ ಮೂಡಿಸಿರುವುದಂತೂ ನಿಜ. ಆ ನಿರೀಕ್ಷೆಗೆ ತಕ್ಕಂತೆಯೇ ಈಗಾಗಲೇ ಚಿತ್ರದ ಫಸ್ಟ್‌ ಲುಕ್‌ ಟೀಸರ್ , ಮೋಷನ್‌ ಪೋಸ್ಟರ್‌ ಎಲ್ಲವೂ ಮಾತಾಡುತ್ತಿದೆ. ಅಷ್ಟೇ ಯಾಕೆ, ಕಳೆದ ಮಹಲಾಕ್ಷ್ಮಿ ಹಬ್ಬದಂದೇ ವಿಕ್ರಮ್‌ ಅಭಿನಯದ ಈ “ತ್ರಿವಿಕ್ರಮ” ಚಿತ್ರದ ಆಡಿಯೋ ಹಕ್ಕು ದಾಖಲೆ ಮಟ್ಟಕ್ಕೆ ಮಾರಾಟ ಆಗಿದ್ದು ಎಲ್ಲರಿಗೂ ಗೊತ್ತಿದೆ. ಚಿತ್ರತಂಡ ಈಗ ಅದೇ ಖುಷಿಯಲ್ಲಿ ನವೆಂಬರ್‌ ೧೪ರಂದು ಮಕ್ಕಳ ದಿನಾಚರಣೆ ಅಂಗವಾಗಿ, ಸಖತ್‌ ಆಗಿರುವ ಹಾಡೊಂದನ್ನು ಬಿಡುಗಡೆ ಮಾಡಿದೆ.


ಹೌದು, ಮಕ್ಕಳ ದಿನಾಚರಣೆಯ ದಿನದಂದು ವಿಶೇಷವಾಗಿ ಮಕ್ಕಳಿಗೆ ಇಷ್ಟವಾಗುವ, ತಾಯಂದಿರಿಗೂ ಇಷ್ಟವಾಗುವ ಹಾಡು ಹೊರಬಂದಿದೆ. ಅರ್ಜುನ್‌ ಜನ್ಯಾ ಸಂಗೀತವಿರುವ ಈ ಹಾಡಿಗೆ ಗೀತ ಸಾಹಿತಿ ನಾಗೇಂದ್ರ ಪ್ರಸಾದ್‌ ಅವರ ಸಾಹಿತ್ಯವಿದೆ. “ಮಮ್ಮಿ ಪ್ಲೀಸ್‌ ಮಮ್ಮಿ” ಎಂಬ ಹಾಡು ಈಗ ಹೊರಬಂದಿದೆ. ಈ ಹಾಡಿಗೆ ಗಾಯಕ ವಿಜಯಪ್ರಕಾಶ್‌ ಧ್ವನಿಯಾಗಿದ್ದಾರೆ.

ಅಮ್ಮನನ್ನು ಕಾಡುವ, ಬೇಡವ ಚಿನಕುರಳಿಯಂತಿರುವ ಹಾಡು ಕೇಳುವುದಕ್ಕೆ ಒಂದು ರೀತಿ ಮಜಾ ಇದೆ. ಈಗಾಗಲೇ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ, ಚಿತ್ರದ ಹಾಡಿಗೆ ಭರಪೂರ ಮೆಚ್ಚುಗೆ ಸಿಕ್ಕಿದ್ದು, ಬಹುತೇಕ ಹುಡುಗರು ಹಾಡನ್ನು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಾಕಿಕೊಂಡು ಎಂಜಾಯ್‌ ಮಾಡುತ್ತಿದ್ದಾರೆ.

ಇನ್ನು, ವಿಕ್ರಮ್‌ ಅವರನ್ನ ಹೀರೋ ಮಾಡಿದ್ದು ನಿರ್ದೇಶಕ ಸಹನಾ ಮೂರ್ತಿ. ಈ “ತ್ರಿವಿಕ್ರಮ” ಎಂಬ ಅದ್ಧೂರಿ ಬಜೆಟ್‌ ಚಿತ್ರವನ್ನು ಗೌರಿ ಎಂಟರ್‌ಟೈನರ್ಸ್‌ ಬ್ಯಾನರ್‌ನಲ್ಲಿ ನಿರ್ಮಿಸಿರೋದು ಸೋಮಣ್ಣ. ವಿಕ್ರಮ್‌ ಅವರ ಲುಕ್‌ ಮತ್ತು ಮ್ಯಾನರಿಸಂಗೆ ತಕ್ಕ ಕಥೆ ಹೆಣೆದು ಸಿನಿಮಾ ಮಾಡಿದ್ದಾರೆ.

ಆರಂಭದಿಂದಲೂ ತುಂಬಾನೇ ಸ್ಪೆಷಲ್‌ ಆಗಿಯೇ ಸಿನಿಮಾವನ್ನು ರೆಡಿ ಮಾಡಿರುವ ನಿರ್ದೇಶಕ ಸಹನಾ ಮೂರ್ತಿ, ನಿರ್ಮಾಪಕ ಸೋಮಣ್ಣ ಅವರ ಪ್ರೋತ್ಸಾಹದಿಂದ ಈಗ ಸಿನಿಮಾವನ್ನು ಇನ್ನೊಂದು ಲೆವೆಲ್‌ಗೆ ತೆಗೆದುಕೊಂಡು ಹೋಗಿದ್ದಾರೆ. ಈಗಾಗಲೇ ಹೊರಬಂದಿರುವ “ತ್ರಿವಿಕ್ರಮ” ಚಿತ್ರದ ಫಸ್ಟ್ ಲುಕ್ ಟೀಸರ್ ಸಾಕ್ಷಿಯಾಗಿದೆ.

ಸೋಮಣ್ಣ, ನಿರ್ಮಾಪಕ

ನಿರ್ಮಾಪಕ, ನಿರ್ದೇಶಕರ ಕಾಳಜಿಯ ವಿಕ್ರಮ!
ಸಿನಿಮಾ ಅಂದಮೇಲೆ ಪ್ರೀತಿ ಇರಬೇಕು. ಆ ಪ್ರೀತಿ ಇದ್ದಾಗ ಮಾತ್ರ ಒಳ್ಳೆಯ ಸಿನಿಮಾಗಳು ಹೊರಬರುತ್ತವೆ. ಆ ಸಾಲಿಗೆ “ತ್ರಿವಿಕ್ರಮ” ಸಿನಿಮಾ ಕೂಡ ಸೇರುವುದರಲ್ಲಿ ಎರಡು ಮಾತಿಲ್ಲ. ಕನಸುಗಾರನ ಮಗನನ್ನು ಸಖತ್‌ ಆಗಿಯೇ ತೋರಿಸುವ ಕನಸು ಕಂಡಿದ್ದ ನಿರ್ದೇಶಕ ಸಹನಾ ಮೂರ್ತಿ ಹಾಗೂ ನಿರ್ಮಾಪಕ ಸೋಮಣ್ಣ ಎಷ್ಟೇ ರಿಸ್ಕ್‌ ಇದ್ದರೂ ಸರಿ, ಅದ್ಭುತವಾಗಿಯೇ ಸಿನಿಮಾವನ್ನು ತೋರಿಸಬೇಕು ಎಂಬ ಉದ್ದೇಶದಿಂದ ಕೋಟಿಗಟ್ಟಲೆ ಹಣ ಹಾಕಿದ್ದಾರೆ. “ತ್ರಿವಿಕ್ರಮʼ ಸಿನಿಮಾ ಮೇಲೆ ಇವರಿಬ್ಬರಿಗೂ ತೃಪ್ತಭಾವವಿದೆ. ಈಗಾಗಲೇ ಈ ಅದ್ಧೂರಿಗೆ ಸಾಕ್ಷಿಯೆಂಬಂತೆ ಚಿತ್ರದ ಚಿತ್ರೀಕರಣ ಅದ್ಧೂರಿಯಾಗಿ ಮೂಡಿಬಂದಿರೋದು.

ಸಹನಾ ಮೂರ್ತಿ, ನಿರ್ದೇಶಕ

ಈಗಾಗಲೇ, 50 ಲಕ್ಷ ಮೊತ್ತಕ್ಕೆ ಎ೨ ಮ್ಯೂಸಿಕ್‌ ಸಂಸ್ಥೆ ಆಡಿಯೋ ಹಕ್ಕು ಕೂಡ ಮಾರಾಟವಾಗಿರುವುದು ಸಿನಿಮಾದ ಮೊದಲ ಗೆಲುವು ಎನ್ನಬಹುದು. ಹೀಗಾಗಿ ತ್ರಿವಿಕ್ರಮನಿಗೆ ಡಿಮ್ಯಾಂಡ್‌ ಇರೋದಂತು ನಿಜ. ಅಂದಹಾಗೆ, ತ್ರಿವಿಕ್ರಮ‌ ಸಿನಿಮಾದಲ್ಲಿ ಒಟ್ಟು 6 ಹಾಡುಗಳಿದ್ದು, ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್, ಹಾಗು ಯೋಗರಾಜ್ ಭಟ್ ಅವರ ಸಾಹಿತ್ಯವಿದೆ. ಅರ್ಜುನ್ ಜನ್ಯ ಸಂಗೀತದ ಹಾಡೊಂದು ಈಗ ಹೊರಬಂದಿದ್ದು ಭರ್ಜರಿ‌ ಸೌಂಡು ಮಾಡುತ್ತಿದೆ.

ಆಕಾಂಕ್ಷ, ನಟಿ

ಪಕ್ಕಾ ಮಾಸ್‌ ಮತ್ತುಕ್ಲಾಸ್‌ ಸಿನ್ಮಾ
ಈ ಹಿಂದೆ “ರೋಜ್‌” ಹಾಗೂ “ಲೀಡರ್‌” ಸಿನಿಮಾವನ್ನು ಕಟ್ಟಿ ಕೊಟ್ಟ ನಿರ್ದೇಶಕ ಸಹನಾಮೂರ್ತಿ ಅವರು ನಿರ್ಮಾಪಕ ಸೋಮಣ್ಣ ಅವರ ಪ್ರೋತ್ಸಾಹದಿಂದಾಗಿ ಮಾಸ್‌ ಮತ್ತು ಕ್ಲಾಸ್‌ ಸಿನಿಮಾ ಮಾಡಿದ್ದಾರೆ. ಹಾಗೆಯೇ ಹಾಡುಗಳನ್ನೂ ಅದ್ಭುತವಾಗಿ ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ಅರ್ಜುನ್‌ ಜನ್ಯಾ ಬಳಿ ಸಂಗೀತ ಮಾಡಿಸಿದ್ದು, ಹಿರಿಯ ಗೀತ ಸಾಹಿತಿಗಳ ಬಳಿ ಹಾಡನ್ನು ಬರೆಸಿ, ಹಾಡಿಸಿದ್ದಾರೆ. ವಿಜಯಪ್ರಕಾಶ್‌ ಈಗ ” ಮಮ್ಮಿ ಪ್ಲೀಸ್‌ ಮಮ್ಮಿ” ಹಾಡು ಹೊಸ ಕ್ರೇಜ್‌ ಹುಟ್ಟಿಸಿದೆ. ಸಹಜವಾಗಿಯೇ ಚಿತ್ರತಂಡಕ್ಕೂ ಖುಷಿಯಾಗಿದೆ.

Categories
ಸಿನಿ ಸುದ್ದಿ

ವಿಂಡೋಸೀಟ್ ಟೀಸರ್ ಗೆ ಸುದೀಪ್‌ ಮೆಚ್ಚುಗೆ

ವಿಂಡೋಸೀಟ್‌ ಚಿತ್ರದ ಟೀಸರ್‌ ಬಂತು

ನಟ ಸುದೀಪ್‌ ಅವರು ಹೊಸ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹಿಸುತ್ತಲೇ ಇರುತ್ತಾರೆ. ಈಗ ನಟಿ, ನಿರ್ದೇಶಕಿ ಶೀತಲ್‌ ಶೆಟ್ಟಿ ಅವರ ಹೊಸ ಸಿನಿಮಾಗೂ ಸಹ ಮೆಚ್ಚುಗೆ ಸೂಚಿ, ಶುಭ ಹಾರೈಸಿದ್ದಾರೆ.
ಹೌದು, ಶೀತಲ್ ಶೆಟ್ಟಿ ಇದೇ ಮೊದಲ ಸಲ ನಿರ್ದೇಶನ ಮಾಡಿರುವ ‘ವಿಂಡೋಸೀಟ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸುದೀಪ್‌ ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡುವ ಮೂಲಕ ಶುಭಹಾರೈಸಿದ್ದಾರೆ. ತಮ್ಮ ಖಾತೆಯಲ್ಲಿ, ”ವಿಂಡೋ ಸೀಟ್‌’ನ ಟೀಸರ್ ಬಹಳ ಭರವಸೆಯಿಂದ ಕಾಣುತ್ತಿದೆ. ಪ್ರತಿ ಫ್ರೇಮ್ ಸಹ ಅಚ್ಚುಕಟ್ಟಾಗಿ ಹೆಣೆದಂತೆ ಕಾಣುತ್ತದೆ. ಖಂಡಿತವಾಗಿಯೂ ಚಿತ್ರತಂಡ ಶ್ರಮಿಸಿದೆ. ಎಲ್ಲರಿಗೂ ಒಳ್ಳೆಯದಾಗಲಿ. ಈ ಚಿತ್ರವನ್ನು ನೋಡಲು ಎದುರು ನೋಡುತ್ತಿದ್ದೇನೆ” ಎಂದು ಸುದೀಪ್ ಟ್ವೀಟ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ವಿಂಡೋಸೀಟ್’ ಟೀಸರ್‌ ನೋಡಿದವರಿಗೆ ಅದೊಂದು ರೊಮ್ಯಾಂಟಿಕ್ ಅನುಭವದ ಕಥಾಹಂದರ ಎಂಬ ಫೀಲ್‌ ಕೊಡಲಿದೆ. ಅದೊಂದು ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾ ಎಂಬುದಕ್ಕೆ ಟೀಸರ್‌ನಲ್ಲಿ ಹಲವು ಅಂಶಗಳು ಕಾಣಸಿಗುತ್ತವೆ. ಇನ್ನು, “ವಿಂಡೋ ಸೀಟ್‌”ನಲ್ಲಿ ಒಂದೊಳ್ಳೆಯ ಪ್ರೇಮಕಥೆ ಹೈಲೈಟ್‌ ಆಗಿದೆ. ಸಾಕಷ್ಟು ಕುತೂಹಲ ಕೆರಳಿಸುವ ಅಂಶಗಳಿವೆ. ಈಗಾಗಲೇ ಟೀಸರ್‌ ನೋಡಿದವರಿಂದ ಸಾಕಷ್ಟು ಒಳ್ಳೆಯ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಚಿತ್ರದಲ್ಲಿ’ರಂಗಿತರಂಗ’ ಖ್ಯಾತಿಯ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿರುವದ್ದಾರೆ. ಈ ಹಿಂದೆ ಚಿತ್ರದ ಫಸ್ಟ್ ಲುಕ್ ಸಾಕಷ್ಟು ಸುದ್ದಿ ಮಾಡಿತ್ತು. ಈಗ ಟೀಸರ್‌ಗೂ ಅಂತಹ ಪ್ರತಿಕ್ರಿಯೆ ಸಿಗುತ್ತಿದೆಲ ಸದ್ಯಕ್ಕೆ’ವಿಂಡೋಸೀಟ್’ ನೋಡುಗರಿಗೆ ಮಜ ಕೊಡುವ ಸಿನಿಮಾ ಎಂಬ ಬಲವಾದ ನಂಬಿಕೆ ಚಿತ್ರತಂಡದ್ದು. ಈ ಚಿತ್ರದಲ್ಲಿ ನಿರೂಪ್‌ಗೆ ನಾಯಕಿಯಾಗಿ ಅಮೃತಾ ಅಯ್ಯಂಗರ್ ಮತ್ತು ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ.

error: Content is protected !!