Categories
ಸಿನಿ ಸುದ್ದಿ

ಶುಗರ್ ಲೆಸ್ ಗೆ ಚಾಲನೆ-ಶಶಿಧರ್ ಚೊಚ್ಚಲ ನಿರ್ದೇಶನ

‘ಡಾಟರ್‌ ಆಫ್ ಪಾರ್ವತಮ್ಮ’ ಮೂಲಕ ನಿರ್ಮಾಪಕರಾದ ಶಶಿಧರ್‌ ಕೆ.ಎಂ.ಅವರು ಹೊಸದೊಂದು ಕಥೆ ಬರೆದು, ನಿರ್ದೇಶನ ಮಾಡಲು ಹೊರಟ ಸುದ್ದಿ ಹೊಸದೇನಲ್ಲ. ಮೊದಲ ಸಲ ಅವರು ‘ಶುಗರ್‌ಲೆಸ್‌ ‘ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ.
ಗುರುವಾರ
ಅವರ ಚೊಚ್ಚಲ ಚಿತ್ರಕ್ಕೆ ಮುಹೂರ್ತ ನೆರವೇರಿದೆ.
ಗುರುವಾರ ರಾಯರ ಅನುಗ್ರಹದಲ್ಲಿ ಇಂದು ಪುಷ್ಕರ್ ಫಿಲ್ಮ್ಸ್ ಸಹಯೋಗದಲ್ಲಿ ‘ಶುಗರ್ ಲೆಸ್’ ಚಿತ್ರವನ್ನು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.
ಚಿತ್ರದ ಕಥೆ ತಕ್ಕಂತೆ ಶೀರ್ಷಿಕೆ ಇಟ್ಟಿರುವ ನಿರ್ದೇಶಕ ಶಶಿಧರ್, ಡಯಾಬಿಟಿಸ್‌ ಕುರಿತ ಕಥೆ ಹೇಳಲು ಹೊರಟಿದ್ದಾರೆ. ಈ ಕಥೆ ಜೊತೆ ಒಂದು ಬ್ಲಾಕ್‌ ಕಾಮಿಡಿಯಲ್ಲೇ ಗಂಭೀರ ವಿಷಯ ಹೇಳಲು ಹೊರಟಿದ್ದಾರೆ.
ಅವರು ಹೇಳುವಂತೆ, ಇಂದು ಡಯಾಬಿಟಿಕ್‌ ಅನ್ನೋದು, ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದೆ. ಆದರೆ, ಅದೇ ಸುಮಾರು 30 ವರ್ಷದ ಯುವಕನಿಗೆ ಡಯಾ ಬಿಟಿಸ್‌ ಬಂದಾಗ, ಅವರ ಬದುಕು ಹೇಗೆ ಇರುತ್ತೆ. ನಿತ್ಯ ಅವನ ಬದುಕಲ್ಲಿ ಏನೆಲ್ಲಾ ಸಮಸ್ಯೆ ಎದುರಾಗುತ್ತವೆ. ಸಮಾಜದಲ್ಲಿ ಆ ವಿಷಯವನ್ನು ಹೇಳಿಕೊಳ್ಳಲೂ ಆಗದ ವ್ಯಕ್ತಿಗಳು ಎಷ್ಟೆಲ್ಲಾ ಯಾತನೆ ಅನು ಭವಿಸುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ ಅವರು. ಯಾವ ಭಾಷೆಯಲ್ಲೂ ಈ ಕಂಟೆಂಟ್‌ ಇರದ ಕಾರಣ, ಅವರು ಇದನ್ನೇ ಇಟ್ಟು ಕೊಂಡು ಹೊದ ವ್ಯಾಖ್ಯಾನದೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾರೆ.
ತಮ್ಮ ದಿಶಾ ಎಂಟರ್‌ಟೈನರ್ಸ್‌ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದು, ಶಶಿಧರ್‌ ಗೆ ನಿರ್ಮಾಪಕ ಪುಷ್ಕರ್‌ ಕೈ ಜೋಡಿಸಿದ್ದಾರೆ.

Categories
ಸಿನಿ ಸುದ್ದಿ

ಗುಬ್ಬಿ ಮರಿ ಹಾರಲು ರೆಡಿ

ಈ ಹಿಂದೆ ಎ.ಪಿ.ಪ್ರೊಡಕ್ಷನ್ಸ್ ಬ್ಯಾನರ್ ತನ್ನ ಸ್ನೇಹಿತರ ಜೊತೆಗೂಡಿ “ಕಮರೊಟ್ಟು ಚೆಕ್ ಪೋಸ್ಟ್” ಎಂಬ ಹಾರರ್ ಚಿತ್ರವನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿದ್ದ ಆನಂದ ಬಾಬು ಈಗ ಇನ್ನೊಂದು ಸಿನಿಮಾಗೆ ಕೈ ಹಾಕಿದ್ದಾರೆ.
ಆನಂದ ಬಾಬು ಅವರು ಡಾ|| ನಿಶ್ಚಿತ ಬಿ. ಅವರ ಜೊತೆ ಸೇರಿ “ಗುಬ್ಬಿ ಮರಿ” ಎನ್ನುವ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಮಧು ಡಕಣಾಚಾರ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎ.ಟಿ.ರವೀಶ್ ಸಂಗೀತವಿದೆ. ಸಿದ್ದು ಕೆ.ಗೌಡಗೆರೆ ಛಾಯಾಗ್ರಹಣ ಮಾಡಿದ್ದಾರೆ. ಎನ್.ಆದಿತ್ಯ ಕುಣಿಗಲ್ ಸಂಕಲನವಿದೆ. ಗೆಳೆಯ ಆನಂದ ಬಾಬು ಅವರಿಗೆ ಸಾಥ್ ನೀಡಿದ್ದಾರೆ. ಇಷ್ಟರಲ್ಲೇ ಅವರ ಕನಸಿನ ಕೂಸು “ಗುಬ್ಬಿಮರಿ” ಹಾರಲಿದೆ.

Categories
ಗ್ಲಾಮರ್‌ ಕಾರ್ನರ್

ರಾವತ್‌ ಎಂಬ ಗ್ಲಾಮರ್‌ ನಟಿ

ಕುಣಿಯೋಕು ಸೈ,ಹಾಡೋಕು ಸೈ!

ನೇರ ಮಾತಿನ ಹುಡುಗಿ ಕನ್ನಡ ಮಟ್ಟಿಗೆ ಒಂದಷ್ಟು ಗುರುತಿಸಿಕೊಂಡಿದ್ದು, ಈಗ ತೆಲುಗು ಚಿತ್ರರಂಗದಲ್ಲೂ ತಮ್ಮದ್ದೊಂದು ಛಾಪು ಮೂಡಿಸಿದ್ದಾರೆ.

……………..

 

 

ಕನ್ನಡದಲ್ಲಿ ನಂಬರ್‌ ಡ್ಯಾನ್ಸ್‌ , ಐಟಂ ಡ್ಯಾನ್ಸ್‌ ಅಂದಾಕ್ಷಣ ಥಟ್ಟನೆ ನೆನಪಾಗೋದು ಒಂದಷ್ಟು ನಟಿಮಣಿಯರು. ಆ ಸಾಲಿಗೆ ಮಮತಾ ರಾವತ್‌ ಎಂಬ ಬೆಡಗಿಯೂ ಸೇರಿದ್ದಾರೆ. ಹೌದು, ಮಮತಾರಾವತ್‌ ಹಲವು ವರ್ಷಗಳಿಂದಲೂ ಕನ್ನಡ ಇಂಡಸ್ಟ್ರಿಯಲ್ಲಿದ್ದಾರೆ‌.ಅವರು ಕನ್ನಡ ಮಾತ್ರವಲ್ಲ, ತೆಲುಗು,ತಮಿಳು ಚಿತ್ರರಂಗದಲ್ಲೂ ಮಿಂಚಿದವರು. ನಾಯಕಿ ಪ್ರಧಾನ ಪಾತ್ರಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ನೇರ ಮಾತಿನ ಹುಡುಗಿ ಕನ್ನಡ ಮಟ್ಟಿಗೆ ಒಂದಷ್ಟು ಗುರುತಿಸಿಕೊಂಡಿದ್ದು, ಈಗ ತೆಲುಗು ಚಿತ್ರರಂಗದಲ್ಲೂ ತಮ್ಮದ್ದೊಂದು ಛಾಪು ಮೂಡಿಸಿದ್ದಾರೆ. ಸದ್ಯಕ್ಕೆ ತೆಲುಗಿನಲ್ಲೊಂದು ನಾಯಕಿ ಪ್ರಧಾನ ಸಿನಿಮಾ ಮಾತುಕತೆ ಅಗಿದ್ದು, ಕೊರೊನಾ ಸಮಸ್ಯೆ ಮುಗಿದ ಬಳಿಕ ಆ ಚಿತ್ರ ಸೆಟ್ಟೇರಲಿದೆ.

ಇನ್ನು, ಶಿವನಾಗಿನಿ ಸಿನಿಮಾ ಅಂತಿಮ ಫೈಟ್‌ ಬಾಕಿ ಇದೆ. ಇನ್ನೊಂದು ಹೊಸ ತೆಲುಗು ಸಿನಿಮಾ ಕೂಡ ಆಫರ್‌ ಬಂದಿದೆ. ಇದರೊಂದಿಗೆ ಕನ್ನಡದಲ್ಲಿ ಡಿಡಿ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಅದೇನೆ ಇರಲಿ, ಒಳ್ಳೆಯ ಪಾತ್ರ ಎದುರು ನೋಡುತ್ತಿರುವ ಮಮತಾ ರಾವತ್‌, ಅತ್ತ ಒಳ್ಳೆಯ ಹಾಡುಗಳಿಗೂ ಹೆಜ್ಜೆ ಹಾಕುತ್ತ, ಇತ್ತ ಒಳ್ಳೆಯ ಪಾತ್ರಗಳಲ್ಲೂ ಕಾಣಿಸಿಕೊಳ್ಳುತ್ತ ಗಟ್ಟಿ ನೆಲೆ ಕಂಡುಕೊಂಡಿದ್ದಾರೆ.

 

Categories
ಸಿನಿ ಸುದ್ದಿ

ಒಳ್ಳೇ ಹುಡುಗನ ಕುರಿ, ಹಸು ಮೇಯಿಸೋ ಕೆಲಸ

ಹಸು ಹಾಲು ಹಿಂಡುತ್ತಿರುವ ಪ್ರಥಮ್

ನಟ ಭಯಂಕರ ಅಲಿಯಾಸ್ ಒಳ್ಳೇ ಹುಡುಗ ಅಂದುಕೊಳ್ಳುವ ಪ್ರಥಮ್ ಬಗ್ಗೆ ಎಲ್ಲರಿಗೂ ಗೊತ್ತು. ಮಾತಲ್ಲೇ ಮೋಡಿ‌ ಮಾಡುವ ಪ್ರಥಮ್, ಸದ್ಯ ತನ್ನೂರಲ್ಲಿದ್ದಾರೆ. ಅಲ್ಲಿ ಕೃಷಿಯತ್ತ ಗಮನಹರಿಸಿದ್ದಾರೆ. ಅಷ್ಟೇ ಅಲ್ಲ, ಅವರು ತಮ್ಮ ಹಸು , ಕುರಿ ಮರಿಗಳನ್ನು ಮೇಯಿಸುವುದರ ಜೊತೆ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆ ಅವರು ಹಸುವಿನ‌ ಹಾಲು ಕರೆದು ತಾನೊಬ್ಬ ಪಕ್ಕಾ ರೈತ ಎನ್ನುವುದನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ತಾವು ಮಾಡುತ್ತಿರುವ ಕೆಲಸಗಳ ಫೋಟೋ ತೆಗೆದು ತಮ್ಮ ಮುಖಪುಟದಲ್ಲಿ ಹಾಕಿಕೊಂಡಿದ್ದಾರೆ.
‘ಈಗಷ್ಟೇ ನಾನು ಕುರಿ ಮೇಯಿಸುವಾಗ ನಮ್ ಚಿಕ್ಕಪ್ಪನ ಕುರಿ,ಮರಿ ಹಾಕ್ತು!ಗಂಡುಮರಿ ಆದ್ರಿಂದ ಮುಂದಿನ ತಿಂಗಳು ಸ್ವಲ್ಪ ಬಲಿತ ಮೇಲೆ ಮಾರಿಬಿಡ್ತಾರೆ!
ಹೆಣ್ಣು ಮರಿ ಆಗಿದ್ರೆ ಸಾಕೋದು ವಾಡಿಕೆ. ಹಾಗಾಗಿ ನಾನೇ
ಅದನ್ನು ಖರೀದಿಸಿದ್ದೇನೆ.
ಖುಷಿ ಅಂದ್ರೆ ಶೀಘ್ರದಲ್ಲೇ ನನ್ನ ಕುರಿಗಳ ಸಂಖ್ಯೆ ಜಾಸ್ತಿಆಗ್ತಿದೆ! ಎಂದು ಬರೆದುಕೊಂಡು ಖುಷಿ ಹಂಚಿಕೊಂಡಿದ್ದಾರೆ.
ಇನ್ನೊಂದು ಸ್ಟೇಟಸ್ ನಲ್ಲಿ
ಪ್ರತಿದಿನ ಕುರಿ ಮೇಯಿಸೋದು, ಹಾಲು ಕರೆಯೋದನ್ನು ಕಲೀತಾ ಇದೀನಿ ಎಂಬ ಸಾಲು ಬರೆದುಕೊಂಡಿದ್ದಾರೆ.
ಸದ್ಯ ನಟಭಯಂಕರ ಸಿನಿಮಾದ ಕೆಲಸ‌ ಪೆಂಡಿಂಗ್ ಇರುವುದರಿಂದ ಊರಲ್ಲೇ ಕುರಿ, ಹಸು‌ ಮೇಯಿಸಿಕೊಂಡು ಹಾಲು ಕರೆಯುವುದನ್ನು ಕಲೀತಾ ಇದಾರೆ.
ಸಿನಿಮಾ ಚಟುವಟಿಕೆಗಳು ಶುರುವಾದರೆ ಪ್ರಥಮ್ ಮತ್ತೆ ಗಾಂಧಿನಗರದಲ್ಲಿ ಸದ್ದು ಮಾಡುವ ಉತ್ಸಾಹದಲ್ಲಿದ್ದಾರೆ.

Categories
ಸಿನಿ ಸುದ್ದಿ

ಹೊಸಬರ ಕನಸಿಗೆ ಜೋಗಿ ಪ್ರೇಮ್ ಸಾಥ್-

ಯುವ ನಿರ್ದೇಶಕ ಸ್ಮಿತೇಶ್ ಎಸ್ ಬಾರ್ಯ ನಿರ್ದೇಶನದ ‘ಕನಸು ಮಾರಾಟಕ್ಕಿದೆ’ ಚಿತ್ರ ಈಗಾಗಲೇ ಜೋರು ಸುದ್ದಿಯಾಗುತ್ತಿದ್ದು, ಸಿನೆಮಾದ ಮೊದಲ ಟೀಸರ್ ರಿಲೀಸ್ ಗೆ ನಿರ್ದೇಶಕ ಜೋಗಿ ಪ್ರೇಮ್ ಬುಧವಾರ ಸಂಜೆ 5 ಕ್ಕೆ ಚಾಲನೆ‌ ನೀಡುತ್ತಿದ್ದಾರೆ. ಶಿವಕುಮಾರ್ ನಿರ್ಮಾಣದ ಈ ಚಿತ್ರಕ್ಕೆ‌ ಶರತ್ ಕುಮಾರ್ , ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು, ಸೆಲ್ವ ರಾಜ್ ಸಹ ನಿರ್ಮಾಣವಿದೆ. ಕೊಡಲಿದ್ದಾರೆ. ನವೀನ್ ಪೂಜಾರಿ ಕಥೆ ಬರೆದರೆ, ಅನೀಶ್ ಪೂಜಾರಿ ಚಿತ್ರಕಥೆ, ಸಂಭಾಷಣೆ ಇದೆ. ಮಾನಸ‌ ಹೊಳ್ಳ ಸಂಗೀತವಿದೆ. ಸಂತೋಷ ಆಚಾರ್ಯ ಛಾಯಾಗ್ರಹಣವಿದೆ. ಗಣೇಶ್ ನೀರ್ಜಾಲ್ ಸಂಕಲನವಿದೆ.

Categories
ಸಿನಿ ಸುದ್ದಿ

ಲಗ್ನ ಪತ್ರಿಕೆ ಹಂಚಲು ರೆಡಿಯಾದ ಅರವಿಂದ್ ಕೌಶಿಕ್- ಕಲರ್ಸ್ ನಲ್ಲಿ ಕಲರ್ ಫುಲ್ ಸ್ಟೋರಿ

 

 

 

 

ನಿರ್ದೇಶಕ ಅರವಿಂದ್ ಕೌಶಿಕ್ ಇದೀಗ ಲಗ್ನ ಪತ್ರಿಕೆ ಹಂಚೋಕೆ ರೆಡಿಯಾಗಿದ್ದಾರೆ!

ಅರೇ, ಹೀಗಂದಾಕ್ಷಣ ಮತ್ತೊಂದು ಮದ್ವೆಗೆ ಏನಾದರೂ ಅವರು ತಯಾರಿ ನಡೆಸಿದ್ದಾರಾ ಅನ್ನೋ ಪ್ರಶ್ನೆ ಸಹಜ. ಆದರೆ, ಅವರು ಹೊಸ ಮದ್ವೆ ಆಗ್ತಾ ಇಲ್ಲ, ಬದಲಾಗಿ ಮದ್ವೆಗೆ ಸಂಬಂಧಿಸಿದ ಹೊಸ ಬಗೆಯ ಕಥೆ ಹೆಣೆದು ಪ್ರೇಕ್ಷಕರ ಮುಂದೆ ಬರೋಕೆ ಸಜ್ಜಾಗಿದ್ದಾರೆ.
ಹೌದು, ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಅರವಿಂದ್ ಕೌಶಿಕ್ ಈಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಲರ್ ಫುಲ್ ಸ್ಟೋರಿ ಮೂಲಕ ರಂಜಿಸಲು ತಮ್ಮ ತಂಡದೊಂದಿಗೆ ತಯಾರಾಗಿದ್ದಾರೆ.
ಬರೀ ರಿಮೇಕ್ ಹಾವಳಿ ಇರುವ ಈ ದಿನಮಾನದಲ್ಲೂ ಅವರು ದೇಸಿ ಸೊಗಡಿನ‌ ಪಕ್ಕಾ ನಮ್ಮತನ ಇರುವ ಸ್ವಂಥದ್ದೊಂದು ಕಥೆ ಹೆಣೆದು ಧಾರಾವಾಹಿ ಮೂಲಕ ಮನೆ ಮಂದಿಯ‌ ಮನ ತಣಿಸಲು ಹೊರಟಿದ್ದಾರೆ.
ಈ ಧಾರಾವಾಹಿ ಮೂಲಕ ಅಪ್ಪಟ ಕನ್ನಡದ ಪ್ರತಿಭಾವಂತರನ್ನ ಹಾಗೂ ಕ್ರಿಯಾಶೀಲ ಬರಹಗಾರರಿರುವ ತಂಡ ಕಟ್ಟಿಕೊಂಡು ಹೊಸ ಸವಿರುಚಿ ಉಣಬಡಿಸುವ ಉತ್ಸಾಹದಲ್ಲಿದ್ದಾರೆ.
ಅವರ ನಿರ್ದೇಶನದ ‘ಲಗ್ನಪತ್ರಿಕೆ’ ಧಾರಾವಾಹಿಯಲ್ಲಿ
ಸುಂದರ್ ಮತ್ತು ನವೀನ್ ಸಾಗರ್ ಕೈ ಜೋಡಿಸಿದ್ದಾರೆ. ಅವರ ಜೊತೆ ಅರವಿಂದ್ ಕೂಡ ಕಥೆ, ಚಿತ್ರಕಥೆಯಲ್ಲಿ ನಿರತರಾಗಿದ್ದಾರೆ.
ಕ್ರಿಯಾಶೀಲ ಬರಹಗಾರ ನವೀನ್ ಸಾಗರ್ ಲಗ್ನ ಪತ್ರಿಕೆಗೆ ಮಾತುಗಳನ್ನು ಪೋಣಿಸುತ್ತಿರುವುದು ವಿಶೇಷ.
ಅರವಿಂದ್ ಕೌಶಿಕ್ ಅವರ ಲಗ್ನ ಪತ್ರಿಕೆ ಸಂಭ್ರಮಕ್ಕೆ ಕಲಾವಿದರಾದ ಸುಂದರ್,ರವಿ ಭಟ್, ರೇಣುಕ,ಮರೀನಾ ತಾರಾ ,ಜ್ಯೋತಿ ,ಕುಲ್ದೀಪ್ ,ಸುಪ್ರಿಯಾ,ದರ್ಶನ್ ಸೂರ್ಯ , ಸಂಜನಾ ಬುರ್ಲಿ , ಸೂರಜ್ ಹೂಗಾರ್ ಸಾಕ್ಷಿಯಾಗಲಿದ್ದಾರೆ.
ಮನೋಹರ್ ಯಾಪ್ಲರ್, ಕ್ಯಾಮೆರಾ ಹಿಡಿದರೆ, ಗಣಪತಿ ಭಟ್ ಸಂಕಲನವಿದೆ. ಸಂಗೀತ ಅರ್ಜುನ್ ರಾಮು ಸಂಗೀತವಿದೆ. ಗಣೇಶ್ ಕಾರಂತ್ , ಸ್ಪರ್ಶಾ ಹಾಡಿದ್ದಾರೆ. ಸಹ ನಿರ್ದೇಶಕ ಸುರೇಶ್ ಕುಣಿಗಲ್ ಸಾಥ್ ನೀಡಿದ್ದಾರೆ. ಕುಲ್ದೀಪ್ ಹಾಗು ಚೇತನ್ ನಿರ್ಮಾಣ ಕೆಲಸದ ಉಸ್ತುವಾರಿ ಹೊತ್ತಿದ್ದಾರೆ.
ಅಂತೂ ಲಾಕ್ ಡೌನ್ ಆಗಿ ಬೇಸತ್ತಿದ್ದ ಮನೆ ಮಂದಿ ಒಂದೊಳ್ಳೆಯ ಮದುವೆ ಊಟದಷ್ಟು ರುಚಿ ಈ ಧಾರಾವಾಹಿಯಿಂದ ನಿರೀಕ್ಷಿಸಬಹುದು.

ಅರವಿಂದ್ ಕೌಶಿಕ್

Categories
ಸಿನಿ ಸುದ್ದಿ

ಅಪ್ಪು ʼಮಾರ್ಗʼದರ್ಶನ

ಆ ದಿನಗಳು ಖ್ಯಾತಿಯ ಚೇತನ್‌ ಅಭಿನಯದ ಹೊಸ ಚಿತ್ರ ಮಾರ್ಗ ಇತ್ತೀಚೆಗೆ ಮುಹೂರ್ತ ಕಂಡಿದೆ. ಚಿತ್ರತಂಡಕ್ಕೆ ಪುನೀತ್‌ ರಾಜಕುಮಾರ್‌ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಚೇತನ್‌ ಜೊತೆ ಅಪ್ಪು ಮಾತುಕತೆ ಜೋರಾಗಿಯೇ ನಡೆದಿದೆ. ಒಂದಷ್ಟು ಹೊಸ ಮಾರ್ಗದರ್ಶನ ಕೊಟ್ಟ ಪುನೀತ್,‌ ಚೇತನ್‌ ಹಾಗೂ ಇತರೆ ಕನ್ನಡ ನಟರ ಜೊತೆ ಅಪ್ತ ಮಾತುಕತೆ ನಡೆಸಿದರು. ಅಂದಿನ ಫೋಟೋ ಮಾತುಕತೆ…

Categories
ಗ್ಲಾಮರ್‌ ಕಾರ್ನರ್

ಖುಷ್‌ ಮೂಡಿನಲ್ಲಿ ಖುಷಿ…

 

ದಿಲ್‌ ದಿಯಾ…

Categories
ಗ್ಲಾಮರ್‌ ಕಾರ್ನರ್

ಶುಭನುಡಿ…

ಮ್ಯಾರೇಜ್‌ ಮೂಡ್ ನಲ್ಲಿ ಕರಾವಳಿ ಬೆಡಗಿ…

 

 

Categories
ಸಿನಿ ಸುದ್ದಿ

ಲಾಕ್‌ ಡೌನ್‌ ಟೈಮಲ್ಲಿ ‌ಅಜೇಯ್‌ ರಾವ್ ಮಾಡಿದ್ದೇನು ಗೊತ್ತಾ? ಒಂದೊಳ್ಳೆ ಕಥೆಯಾಯ್ತು, ನಿರ್ದೇಶನಕ್ಕೂ ಮನಸ್ಸಾಯ್ತು

 ಈ ಲಾಕ್ ಡೌನ್‌ ಸಮಯವನ್ನಂತೂ ಪ್ರತಿಯೊಬ್ಬರೂ ಚೆನ್ನಾಗಿಯೇ ಬಳಸಿಕೊಂಡಿದ್ದಾರೆ. ಅದರಲ್ಲೂ ಕನ್ನಡದ ನಟರ ಪೈಕಿ ಕೆಲವರು ಹಾಡು ಬರೆದರೆ, ಕೆಲವರು ಹಾಡು ಹಾಡಿದರು. ಇನ್ನೂ ಕೆಲವರು ಮನೆಯವರ ಜೊತೆ ಸಂತಸದಿಂದ ಕಾಲ ಕಳೆದರು. ಈಗ ನಟ ಅಜೇಯ್ ರಾವ್‌ ಅವರು ಈ ಸಮಯವನ್ನು ವ್ಯರ್ಥ ಮಾಡದೆ ಅವರೊಂದು ಕಥೆ ಹೆಣೆದಿದ್ದಾರೆ ಎಂಬುದು ವಿಶೇಷ.
ಹೌದು, ಅವರು ಲಾಕ್‌ ಡೌನ್‌ ಸಮಯದಲ್ಲಿ ಮನೆಯಲ್ಲಿದ್ದರು. ಅಮ್ಮ, ಪತ್ನಿ ಮತ್ತು ಮಗಳ ಜೊತೆ ಸಮಯ ಕಳೆಯುತ್ತಲೇ ಜೊತೆಯಲ್ಲೊಂದು ಒಳ್ಳೆಯ ಕಥೆ ರೆಡಿಮಾಡಿದ್ದಾರೆ. ಈಗಾಗಲೇ ಸಂಪೂರ್ಣ ಸ್ಕ್ರಿಪ್ಟ ಮುಗಿದಿದ್ದು, ಸಂಭಾಷಣೆ ಮಾತ್ರ ಬಾಕಿ ಉಳಿದಿದೆ. ಅಂತೂ ಅಜೇಯ್‌ ರಾವ್‌ ಒಂದು ಕಥೆ ಬರೆದಿದ್ದಾರೆ. ಅದೊಂದು ಹೊಸ ಬಗೆಯ ಕಥೆ. ಕಥೆಯೇ ಹೈಲೈಟ್.‌ ಮಾಸ್‌,ಕ್ಲಾಸ್‌,ಲವ್‌, ಎಮೋಷನಲ್‌, ಥ್ರಿಲ್ಲರ್‌ ಜೊತೆಯಲ್ಲಿ ಬೇರೆ ಹೊಸ ವಿಷಯವೂ ಇದೆ. ಯುನಿಕ್‌ ಅಗಿರುವಂತಹ ಕುತೂಹಲ ಕೆರಳಿಸುವಂತಹ ಕಥೆ ಇದಾಗಿದೆ. ಎಲ್ಲಾ ವರ್ಗಕ್ಕೂ ಇಷ್ಟವಾಗುವ ಕಥೆ ಮಾಡಿಕೊಂಡಿದ್ದಾರೆ. ಎಲ್ಲಾ ಸರಿ, ಅಜೇಯ್‌ ರಾವ್‌ ಮುಂದೆ ನಿರ್ದೇಶನ ಮಾಡಬಹುದಾ? ಗೊತ್ತಿಲ್ಲ. ಅದರೆ, ಅಜೇಯ್ ರಾವ್‌ ಕಥೆ ಆಗಿರುವುದರಿಂದ ನಿರ್ದೇಶನ ಮಾಡಿದರೂ ಅಚ್ಚರಿಯೇನಿಲ್ಲ. ಸದ್ಯಕ್ಕೆ ಅಜೇಯ್‌ ರಾವ್‌ ಕಥೆ ರೆಡಿಯಾಗಿದೆ. ಅವರ ಅಭಿನಯದ ಕೃಷ್ಣ ಟಾಕೀಸ್‌ ಮತ್ತು ಶೋಕಿವಾಲ ಮುಗಿದಿದೆ. ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸ ಮುಗಿಸಿಕೊಂಡು ಇನ್ನೇನು ಸೆನ್ಸಾರ್‌ ಬಳಿಕ ಪ್ರೇಕ್ಷಕರ ಮುಂದೆ ಬರಬೇಕಿದೆ. ಅದು ಬಿಟ್ಟರೆ, ಗುರುದೇಶಪಾಂಡೆ ಅವರ ಜೊತೆಗೆ ಒಂದು ಸಿನಿಮಾ ಮಾಡಬೇಕಿದೆ. ಇನ್ನು ಕ್ರಿಸ್ಟಲ್‌ ಪಾರ್ಕ್‌ ಬ್ಯಾನರ್‌ನಲ್ಲಿ ಇನ್ನೊಂದು ಸಿನಿಮಾ ಬಾಕಿ ಇದೆ.

error: Content is protected !!