Categories
ಸಿನಿ ಸುದ್ದಿ

ಸೆಪ್ಟೆಂಬರ್ ನಲ್ಲಿ ಥಿಯೇಟರ್ ಓಪನ್- ಸಿನಿ ಮಂದಿ ಮೊಗದಲ್ಲಿ ಮಂದಹಾಸ

ಕೇಂದ್ರ ಸರ್ಕಾರ ಸೆಪ್ಟೆಂಬರ್ ವೇಳೆಗೆ ಥಿಯೇಟರ್ ಶುರುವಿಗೆ ಸೂಚನೆ ಕೊಡುವ ಭರವಸೆ ಕೊಟ್ಟಿದೆ. ಹಾಗಾಗಿ ಸಿನಿಮಾ ರಂಗದಲ್ಲಿ ಮತ್ತೆ ಚೈತನ್ಯ ಮೂಡಿದೆ. ಈಗಾಗಲೇ ಕೆಲ ಸಿನಿಮಾಗಳ ಚಿತ್ರೀಕರಣ ಕೂಡ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ.

……….,…………………………

ಕೊರೊನಾ ಆವರಿಸಿದ್ದರಿಂದ ಇಡೀ ಚಿತ್ರರಂಗವೇ ಸ್ತಬ್ಧವಾಗಿತ್ತು. ಕಳೆದ ಆರು ತಿಂಗಳಿಂದಲೂ ಸಿನಿಮಾ ರಂಗ ರಂಗು‌ ಕಳೆದುಕೊಂಡಿತ್ತು. ಈಗ ಚಿತ್ರಮಂದಿರಗಳು ಶುರುವಾಗುವ ಸೂಚನೆ ಕೊಟ್ಟಿವೆ. ಹೌದು, ಸೆಪ್ಟೆಂಬರ್ 15 ರ ನಂತರ ಥಿಯೇಟರ್ ಓಪನ್ ಆಗಲಿವೆ ಎನ್ನಲಾಗುತ್ತಿದೆ. ಫಿಲ್ಮ್ ಚೇಂಬರ್ ಕೂಡ ಕೇಂದ್ರ ಸರ್ಕಾರ ಹೇಳಿಕೆಯಿಂದ ಉತ್ಸಾಹದಲ್ಲಿದೆ. ಕೇಂದ್ರ ಸರ್ಕಾರ ಸೆಪ್ಟೆಂಬರ್ ವೇಳೆಗೆ ಥಿಯೇಟರ್ ಶುರುವಿಗೆ ಸೂಚನೆ ಕೊಡುವ ಭರವಸೆ ಕೊಟ್ಟಿದೆ. ಹಾಗಾಗಿ ಸಿನಿಮಾ ರಂಗದಲ್ಲಿ ಮತ್ತೆ ಚೈತನ್ಯ ಮೂಡಿದೆ. ಈಗಾಗಲೇ ಕೆಲ ಸಿನಿಮಾಗಳ ಚಿತ್ರೀಕರಣ ಕೂಡ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಥಿಯೇಟರ್ ಆರಂಭಗೊಳ್ಳುತ್ತಿದ್ದಂತೆಯೇ ಪ್ರೇಕ್ಷಕರಿಗೆ ದರ್ಶನ ನೀಡಲಿವೆ. ಕಿರುತೆರೆ ಕೂಡ ಚಿತ್ರೀಕರಣ ಶುರು ಮಾಡಿ ತಮ್ಮ ಪ್ರೇಕ್ಷಕ ವಲಯವನ್ನು ಖುಷಿಪಡಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಚಿತ್ರರಂಗ ಕೂಡ ತನ್ನ ಕಾರ್ಯ ಶುರು ಮಾಡಲಿದೆ.


 

Categories
ಸಿನಿ ಸುದ್ದಿ

ಅಪ್ಪು ಗಡ್ಡದ ಕಥೆ – ಪವರ್ ದಾಡಿ ಬಿಟ್ಟಿದ್ದು ಯಾಕೆ ಗೊತ್ತಾ?

ಪುನೀತ್ ರಾಜಕುಮಾರ್ ಅಂದಾಕ್ಷಣ ಎಲ್ಲರ ಕಣ್ಣ ಮುಂದೆ ಹಾದು ಹೋಗೋದು‌ ಸದಾ‌ ಹಸನ್ಮುಖಿ, ಪಾಸಿಟಿವ್ ವ್ತಕ್ತಿತ್ವ , ಯಾವಾಗಲೂ ನೀಟ್ ಶೇವ್ ಮಾಡಿದ ನಗು ಮುಖ. ಅಷ್ಟೇ ಅಲ್ಲ ಪ್ರೀತಿಯ ಮಾತುಕತೆ ಜೊತೆಗೆ ಅಪ್ಪುಗೆ. ಸದ್ಯ ಪುನೀತ್ ಗೆಟಪ್ ಬದಲಾಗಿದೆ. ಅವರೀಗ ಗಡ್ಡ ಬಿಟ್ಟಿದ್ದಾರೆ. ಈಗಾಗಲೇ ಕೆಲವು ಸಿನಿಮಾ ಪಾತ್ರಕ್ಕಾಗಿ ಅವರು ದಾಡಿ ಬಿಟ್ಟಿದ್ದುಂಟು. ಆದರೆ, ಈಗ ಯಾವ ಚಿತ್ರದ ಚಿತ್ರೀಕರಣ ಯಾವುದೂ ಇಲ್ಲ. ಆದರೂ ಅಪ್ಪು ಹೀಗೆ ದಾಡಿ ಬಿಡೋಕೆ ಕಾರಣ ಬೇರೆ ಇದೆ. ಯುವರತ್ನ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ನಡುವೆ ಅವರು ಹೊಸ ಚಿತ್ರಗಳತ್ತವೂ ಗಮನ ಹರಿಸಿದ್ದಾರೆ. ಶಶಾಂಕ್ ಹಾಗೂ ಪವನ್ ಒಡೆಯರ್ ಜೊತೆಯಲ್ಲಿ ಸಿನಿಮಾ ಮಾಡಲಿದ್ದಾರೆ. ಅದಲ್ಲದೆ ಇನ್ನೂ ಕೈ ತುಂಬಾ ಚಿತ್ರಗಳಿವೆ. ಆ ಚಿತ್ರಗಳ ಪಾತ್ರಕ್ಕಾಗಿ ಅಪ್ಪು ಗಡ್ಡ ಬಿಟ್ಟಿರಬಹುದು. ಅದೇನೆ ಇರಲಿ, ಅಪ್ಪು ಫುಲ್ ಶೇವ್ ಮಾಡ್ಕೊಂಡು ಸದಾ ನಗುಮೊಗದಲ್ಲಿ ನೋಡೋದೆ ಚಂದ‌. ಅಪ್ಪು ಫ್ಯಾನ್ಸ್ ಮಾತ್ರ ಪವರ್ ಹೇಗಿದ್ರೂ ಸರಿ ಅವರ ಸಿನಿಮಾ ಮೂಲಕ ರಂಜಿಸುತ್ತಿರಬೇಕಷ್ಟೇ ಅಂತ ಯುವರತ್ನನ‌ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಗಡ್ಡ ಬಿಟ್ಟಿರೋದಕ್ಕೆ ಕಾರಣ ಇಷ್ಟರಲ್ಲೇ ಗೊತ್ತಾಗಲಿದೆ. ಆ‌ ಮೂಲಕ ಅವರು ಬಿಗ್ ಬ್ರೇಕಿಂಗ್ ನ್ಯೂಸ್ ಕೊಡಲಿದ್ದಾರೆ. ಅಲ್ಲಿಯವರೆಗೆ ಕಾಯಬೇಕು

Categories
ಸಿನಿ ಸುದ್ದಿ

ಮಳೆಯ ಹಾಡಲ್ಲಿ ಮಿಂದೆದ್ದ ಸಲಗ

ದುನಿಯಾ ವಿಜಯ್ ಇದೇ ಮೊದಲ ಸಲ ನಿರ್ದೇಶನ ಮಾಡಿರುವ ಸಲಗ ಚಿತ್ರ ಇನ್ನೇನು ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ನಾಲ್ಕು ಕ್ವಾರ್ಟರ್ ಕುಡಿದ್ರು ಸ್ಟಡಿಯಾಗಿ ನಿಲ್ತಿದ್ದೆ ಸೂರಿಯಣ್ಣ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈಗ ಮತ್ತೊದು ಮಳೆಯ ಹಾಡು ಹೊರ ಬಂದಿದೆ. ಮಳೆಯೇ ಮಳೆಯೇ ಲೊರಿಕಲ್ ಸಾಂಗ್ ರಿಲೀಸ್ ಆಗಿದ್ದು, ಒಳ್ಳೆಯ ಮೆಚ್ಚುಗೆ ಪಡೆಯುತ್ತಿದೆ.

Categories
ಸಿನಿ ಸುದ್ದಿ

ಕ್ರೇಜಿ ಪುತ್ರನ ಕಲರ್ ಫುಲ್ ಪೋಸ್ಟರ್ ರಿಲೀಸ್- ಮುಗಿಲ್ ಪೇಟೆಯಲ್ಲೊಂದು ಸುತ್ತು

#mugilpete

ಕ್ರೇಜಿ ಪುತ್ರನ ಚಿತ್ರದ ಕಲರ್ ಫುಲ್ ಪೋಸ್ಟರ್ ರಿಲೀಸ್

ಮನುರಂಜನ್ ಅಭಿನಯದ ಮುಗಿಲ್ ಪೇಟೆ ಚಿತ್ರತಂಡ
“ಗೌರಿ -ಗಣೇಶ” ಹಬ್ಬದಲ್ಲಿನಮ್ಮ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ.
ಭರತ್ ನಾವುಂದ ನಿರ್ದೇಶನದ ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ.
ರಕ್ಷಾ ವಿಜಯಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಂಗಾಯಣ ರಘು, ತಾರಾ, ಸಾಧುಕೋಕಿಲ ಇತರರು ಇದ್ದಾರೆ.

Categories
ಸಿನಿ ಸುದ್ದಿ

ಮಳೆ‌ ಮಳೆ ಹಾಡಿಗೆ ಮೈ ಮನವೆಲ್ಲಾ ತಂಪು

ಯುವ ನಟ ಸೂರಜ್ ಗೌಡ ಅಭಿನಯದ ನಿನ್ನ ಸನಿಹಕೆ ಸಿನಿಮಾ ಈಗ ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ಇದೇ ಮೊದಲ‌ ಸಲ ನಿರ್ದೇಶನ ಮಾಡಿರುವ ಸೂರಜ್ ಅವರ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ಮಳೆ ಮಳೆ ಎಂಬ ಬ್ಯೂಟಿಫುಲ್ ಹಾಡಿಗೆ ರಘುದೀಕ್ಷಿತ್ ಸಂಗೀತವಿದೆ. ಜೊತೆಗೆ ಆ ಹಾಡಿಗೆ ಧ್ವನಿಯನ್ನೂ ನೀಡಿದ್ದಾರೆ. ಇನ್ನು ವಾಸುಕಿ ವೈಭವ್ ಅವರ ಸಾಹಿತ್ಯವಿದೆ.
ಈ ಚಿತ್ರದಲ್ಲಿ ಡಾ.ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಾಯಕಿ.

Categories
ಸಿನಿ ಸುದ್ದಿ

ನಟ ರವಿಶಂಕರ್ ಗೌಡ ಪುತ್ರ ಈಗ ನಿರ್ದೇಶಕ

ನಟ ರವಿಶಂಕರ್ ಗೌಡ ಪುತ್ರ ಸೂರ್ಯ ತೇಜಸ್ವಿ ಈಗ ಸಿನಿಮಾರಂಗಕ್ಕೆ ಎಂಟ್ರಿಯಾಗಿದ್ದಾನೆ. ಹೌದು ಇದೇ ಮೊದಲ‌ಸಲ ಸೂರ್ಯ ತೇಜಸ್ವಿ ವೈ… ಫೈ? ಎಂಬ ಪುಟಾಣಿ ಹಾಸ್ಯ ಕಿರುಚಿತ್ರ ನಿರ್ದೇಶನ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾನೆ. ಸದ್ಯಕ್ಕೆ ಯೂಟ್ಯೂಬ್ ಚಾನೆಲ್ ನಲ್ಲಿ  ಕಿರುಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಗುತ್ತಿದೆ.ಈ ಕಿರುಚಿತ್ರದಲ್ಲಿ ಸೂರ್ಯ ಜೊತೆ ನಿಖಿಲ್ ನರೇಶ್ ನಟಿಸಿದ್ದಾರೆ. ಅಜಯ್ ಜಮದಗ್ನಿ ಸಂಕಲನವಿದೆ.

Categories
ಸಿನಿ ಸುದ್ದಿ

ವಾಸಂತಿ ನಲಿದಾಗ ಚಿತ್ರಕ್ಕೆ ಚಾಲನೆ

#ವಾಸಂತಿ_ನಲಿದಾಗ ಇದು ಹೊಸಬರ ಚಿತ್ರ. ಸೋಮವಾರ ಅದ್ದೂರಿಯಾಗಿ ಮುಹೂರ್ತ ನೆರವೇರಿದೆ.
ರವೀಂದ್ರ ವಂಶಿ ನಿರ್ದೇಶಕರು. ಜೇನುಗೂಡು ಕೆ.ಎನ್ ಶ್ರೀಧರ್ ಚಿತ್ರದ ನಿರ್ಮಾಪಕರು. ಶ್ರೀದೇವಿ ಮಂಜುನಾಥ ಸಂಭಾಷಣೆ ಇದೆ. ಶ್ರೀ ಗುರು ಸಂಗೀತವಿದೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಪೀರ್ ಸಾಹಿತ್ಯವಿದೆ.

Categories
ಸಿನಿ ಸುದ್ದಿ

ಡಾಲಿ ಧನಂಜಯ ಹುಟ್ಟುಹಬ್ಬದ ಸಂಭ್ರಮ

Categories
ಬ್ರೇಕಿಂಗ್‌ ನ್ಯೂಸ್

ಕಿರಿಕ್‌ ಶಂಕರನ ಹಾಡಿಗೆ ಭರ್ಜರಿ ಮೆಚ್ಚಗೆ- ಇದು ಲೂಸ್ ಮಾದ ಯೋಗಿಯ ಚಿತ್ರ

ಲೂಸ್ ಮಾದ ಯೋಗಿ ಅಭಿನಯದ ಕಿರಕ್ ಶಂಕರ್ ಸಿನಿಮಾ ಬಗ್ಗೆ ಈಗಾಗಲೇ ಎಲ್ಲರಿಗೂ ಗೊತ್ತೇ ಇದೆ.
ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಗಣೇಶ ಹಬ್ಬದಂದು ಲಿರಿಕಲ್ ವಿಡಿಯೊ ಬಿಡುಗಡೆ ಮಾಡಿದೆ.


ಎಂ.ಎನ್. ಕುಮಾರ್ ನಿರ್ಮಾಣದ ಈ ಚಿತ್ರವನ್ನು ಅನಂತ್ ರಾಜು ನಿರ್ದೇಶನ ಮಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ಇರುವ ‘ದರ್ಬಾರ್ ದರ್ಬಾರ್ ನಮ್ದೇ ದರ್ಬಾರ್ ದರ್ಬಾರ್…’ ಎಂಬ ಹಾಡನ್ನು ರಾಮ್ ನಾರಾಯಣ್ ಬರೆದಿದ್ದಾರೆ. ಪಕ್ಕಾ ಮಾಸ್ ಫೀಲ್ ಇರುವ ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಿಕ್ಕಾಪಟ್ಟೆ ಮೆಚ್ಚುಗೆ ಪಡೆದುಕೊಂಡಿದೆ.

Categories
ಬ್ರೇಕಿಂಗ್‌ ನ್ಯೂಸ್

ದೇವಕಿ ನಿರ್ದೇಶಕನ ಮೊದಲ ನಿರ್ಮಾಣದ‌ ಚಿತ್ರ-ಅಗಸ್ಟ್ 24ಕ್ಕೆ ಡಾಲಿ ಟೈಟಲ್ ಲಾಂಚ್

ಯುವ ನಿರ್ದೇಶಕ ಮಮ್ಮಿ ಹಾಗೂ ದೇವಕಿ ಖ್ಯಾತಿಯ ಲೋಹಿತ್ ತಮ್ಮ ಫ್ರೈಡೇ ಫಿಲ್ಮ್ಸ್ ಮೂಲಕ ತಯಾರಿಸುತ್ತಿರುವ ಹೊಸ ಚಿತ್ರಕ್ಕೆ ಚಾಲನೆ ಸಿಗುತ್ತಿದ್ದು,
ಗಣೇಶ ಚತುರ್ಥಿಯ ಈ ಶುಭ ದಿನದಂದು ಮೊದಲ ನಿರ್ಮಾಣದ‌ಚಿತ್ರ ಘೋಷಿಸಲು ತಂಡ‌ ಉತ್ಸುಕತೆ ತೋರಿದೆ. ಅಗಸ್ಟ್ 24 ರಂದು ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳ್ಳಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಡಾಲಿ ಲ ಧನಂಜಯ ಅವರು ಚಿತ್ರದ ಟೈಟಲ್ ಲಾಂಚ್ ಮಾಡಲಿದ್ದಾರೆ.
ಅಂದಹಾಗೆ, ಲೋಹಿತ್ ಅವರ ಮೊದಲ ನಿರ್ಮಾಣದ ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಕಾಣಿಸಿಕೊಳ್ಳುತ್ತಿದ್ದಾರೆ.

error: Content is protected !!