Categories
ಸಿನಿ ಸುದ್ದಿ

ಪ್ರಶಾಂತ್‌ ನೀಲ್‌ ಕಥೆಯಲ್ಲಿ ಶ್ರೀಮುರಳಿ ಬಘೀರ

ರೋರಿಂಗ್‌ ಸ್ಟಾರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಕೊಡುಗೆ

ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ಡಿಸೆಂಬರ್‌ ೧೭ರಂದು ಹೊಸ ಸಿನಿಮಾ ಅನೌನ್ಸ್‌ ಮಾಡುವುದಾಗಿ ತಮ್ಮ ಟ್ವೀಟ್‌ ಮೂಲಕ ಹೇಳಿಕೊಂಡಿತ್ತು. ಹೊಸ ಚಿತ್ರದ ಘೋಷಣೆ ಮಾಡುವ ಸುದ್ದಿ ಸಾಕಷ್ಟು ಕುತೂಹಲವೂ ಮೂಡಿಸಿತ್ತು. ಅವರ ಹೊಸ ಸಿನಿಮಾ ಅನೌನ್ಸ್‌ ಕುರಿತಂತೆ “ಸಿನಿಲಹರಿ” ಈ ಹಿಂದೆಯೇ ಒಂದು ಸುದ್ದಿಯನ್ನು ಪೋಸ್ಟ್‌ ಮಾಡಿತ್ತು. ಡಿಸೆಂಬರ್‌ 17ರಂದು ಅನೌನ್ಸ್‌ ಮಾಡಲು ಕಾರಣ, ಅಂದು ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರ ಹುಟ್ಟುಹಬ್ಬ. ಹಾಗಾಗಿ, ಅವರ ಹೊಸ ಚಿತ್ರವನ್ನು ಅನೌನ್ಸ್‌ ಮಾಡಬಹುದು ಎಂದು ಹೇಳಿತ್ತು. ಈಗ ಆ ಸುದ್ದಿ ನಿಜವಾಗಿದೆ. ಹೌದು, ಶ್ರೀಮುರಳಿ ಅವರಿಗೆ ಹೊಂಬಾಳೆ ಫಿಲ್ಮ್ಸ್‌ “ಬಘೀರ” ಎಂಬ ಸಿನಿಮಾವನ್ನು ಅನೌನ್ಸ್‌ ಮಾಡಿದೆ.

ಹೌದು, ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ತೆಲುಗು ಸ್ಟಾರ್‌ ನಟ ಪ್ರಭಾಸ್‌ ಅಭಿನಯದ “ಸಲಾರ್‌” ಸಿನಿಮಾ ನಿರ್ಮಿಸುವ ಕುರಿತು ಅನೌನ್ಸ್‌ ಮಾಡಿತ್ತು. ಆ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ನಿರ್ದೇಶಕ ಎಂಬುದನ್ನೂ ಹೇಳಿತ್ತು. ಅದರ ಬೆನ್ನೆಲ್ಲೇ ಹೊಂಬಾಳೆ ಫಿಲ್ಮ್ಸ್‌ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾ ಅನೌನ್ಸ್‌ ಮಾಡುವುದಾಗಿ ಹೇಳಿಕೊಂಡ ವಿಷಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆ ಕುತೂಹಲಕ್ಕೆ ಈಗ ತೆರೆಬಿದ್ದಿದೆ. ಹೊಂಬಾಳೆ ಫಿಲ್ಮ್ಸ್‌ ಶ್ರೀಮುರಳಿ ಅವರಿಗೆ “ಬಘೀರ” ಘೋಷಣೆ ಮಾಡಿದೆ.

ಈ ಚಿತ್ರವನ್ನು ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಪ್ರಶಾಂತ್‌ ನೀಲ್‌ ಅವರ ಕಥೆ ಇದಾಗಿದ್ದು, ವಿಜಯ್‌ ಕಿರಗಂದೂರು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ, “ಸಿನಿಲಹರಿ” ಕೂಡ ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ತ್ರಿಬಲ್‌ ಧಮಾಕ ಶೀರ್ಷಿಕೆಯಡಿ ಸುದ್ದಿಯೊಂದನ್ನು ಪೋಸ್ಟ್‌ ಮಾಡಿತ್ತು. ಆ ಸುದ್ದಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಈಗ ಹೊಂಬಾಳೆ ಫಿಲ್ಮ್ಸ್‌ ಹೊಸ ಚಿತ್ರ ಅನೌನ್ಸ್‌ ‌ ಮಾಡಿದೆ. ಅಲ್ಲದೆ, “ಜಂಗಲ್‌ ಬುಕ್”‌ನ ವಿಶೇಷ ಪಾತ್ರವಾಗಿದ್ದ ಬಘೀರ ಪಾತ್ರದ ಹೆಸರೇ ಈಗ ಶ್ರೀಮುರಳಿ ಅವರ ಚಿತ್ರಕ್ಕೂ ಇಡಲಾಗಿದೆ. ಇದೊಂದು ಭಾರೀ ನಿರೀಕ್ಷೆ ಹುಟ್ಟಿಸಿರುವ ಶೀರ್ಷಿಕೆಯಾಗಿದೆ. ಈಗ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದು, ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

Categories
ಸಿನಿ ಸುದ್ದಿ

ಮದಗಜನ ನಿರೀಕ್ಷೆ ಸುಳ್ಳಾಗಲೇ ಇಲ್ಲ…! ಸಖತ್ತಾಗಿದೆ ಅಫಿಷಿಯಲ್ ಟೀಸರ್‌

ಪಕ್ಕಾ ಮಾಸ್‌ ಟೀಸರ್‌ ಕೊಟ್ಟ ಮದಗಜ ಟೀಮ್‌‌

 

“ಈ ಪಾಪದ ಪ್ರಪಂಚದಲ್ಲಿ ನಮ್‌ ಪ್ರಯಾಣ… ಕೊಚ್ಚೆಯಲ್ಲಿ ಹವಾಯಿ ಚಪ್ಪಲಿ ಹಾಕ್ಕಂಡ್‌ ನಡೆದಂಗೆ. ನಾವ್‌ ಸರಿಯಾಗ್‌ ನಡೆದ್ರೂ, ಅದು ನಮ್ಮೇಲೆ ಹಾರದೇ ಇರಲ್ಲ…”

ಪಂದ್ಯ ಗೆಲ್ಲಬೇಕು ಅನ್ನೋನು ಪಾಯಿಂಟ್‌ಗೋಸ್ಕರ ಹೊಡಿತಾನೆ. ಪಕ್ಕಾ ಗೆಲ್ಲಬೇಕು ಅನ್ನೋನು ಪಾಯಿಂಟಲ್ಲೇ ಹೊಡಿತಾನೆ..” ಎಂಬ ಮಾಸ್‌ ಡೈಲಾಗ್‌ ಇನ್ನಷ್ಟು ಕುತೂಹಲ ಕೆರಳಿಸಿರುವುದಂತೂ ಸುಳ್ಳಲ್ಲ…

-ಇದು ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ “ಮದಗಜ” ಚಿತ್ರದೊಳಗಿರುವ ಪಂಚ್‌ ಡೈಲಾಗ್…‌ ಡೈಲಾಗ್‌ ಜೊತೆ ಆ ದೃಶ್ಯಗಳನ್ನೂ ನೋಡೋದೋ ಒಂದು ಮಜಾ… ಇದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಚಿತ್ರ. ಫ್ಯಾನ್ಸ್‌ಗೆ ಹೇಳಿಮಾಡಿಸಿದ ಡೈಲಾಗ್‌ ಸಾಕಷ್ಟು ಇದೆ ಅನ್ನುವುದಕ್ಕೆ ಇಷ್ಟು ಸಾಕು… ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ ಟೀಸರ್ ನೋಡಿ…

ಶ್ರೀಮರಳಿ ಅಭಿನಯದ ‘ಮದಗಜ’ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಗೆ ಕಾರಣವಾಗುತ್ತಲೇ ಇತ್ತು. ಆದು ಶೀರ್ಷಿಕೆಯಿಂದ ಹಿಡಿದು, ಪೋಸ್ಟರ್‌, ಫಸ್ಟ್‌ ಲುಕ್‌, ಹೀಗೆ ಹಲವು ಕಾರಣಗಳಿಗೆ ಒಂದಷ್ಟು ಕುತೂಹಲ ಮೂಡಿಸಿತ್ತು. ಸಿನಿಮಾದ ಕಥೆ ಇರಲಿ, ಕಲಾವಿದರ ಆಯ್ಕೆ ಇರಲಿ, ಲೊಕೇಷನ್‌ಗಳಿರಲಿ, ತಾಂತ್ರಿಕ ವರ್ಗವೇ ಇರಲಿ ಎಲ್ಲದ್ದರಲ್ಲೂ ಸೈ ಎನಿಸಿಕೊಂಡಿದ್ದ “ಮದಗಜ” ಫಸ್ಟ್‌ ಲುಕ್‌‌ ಅಫಿಷಿಯಲ್ ಟೀಸರ್‌ ಬಿಡುಗಡೆ ಮಾಡುವುದಾಗಿ ಅನೌನ್ಸ್‌ ಮಾಡಿದ್ದೇ ತಡ, ಸಾಕಷ್ಟು ಕುತೂಹಲವಿತ್ತು. ಆ ಕುತೂಹಲ ಎಳ್ಳಷ್ಟೂ ಸುಳ್ಳು ಮಾಡಿಲ್ಲ.
ಹೌದು, ಶ್ರೀಮುರಳಿ ಅವರ ಹುಟ್ಟುಹಬ್ಬ (ಡಿಸೆಂಬರ್‌ 17)ರ ಬೆಳಗ್ಗೆ 9.09ಕ್ಕೆ “ಮದಗಜ” ಚಿತ್ರದ ಫಸ್ಟ್‌ ಲುಕ್‌ ಟೀಸರ್‌ ಹೊರಬಂದಿದೆ. ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ಸಿನಿಮಾ ತಂಡ ಅವರಿಗೆ ಈ ಸಖತ್‌ ರಗಡ್‌ ಆಗಿರುವ, ಪಕ್ಕಾ ಮಾಸ್‌ ಎನಿಸಿರುವ ಚಿತ್ರದಲ್ಲೇನೋ ಇದೆ ಎನಿಸುವಂತಹ ಟೀಸರ್‌ ಅದಾಗಿದ್ದು, ಫ್ಯಾನ್ಸ್‌ಗಂತೂ ಸಖತ್‌ ಕುತೂಹಲ ಕೆರಳಿಸಿದೆ. ಟೀಸರ್‌ನೊಳಗಿರುವ ಡೈಲಾಗ್‌, ಆ ಮಾಸ್‌ ಎಂಟ್ರಿ, ಹಿನ್ನೆಲೆ ಸಂಗೀತ, ಲೊಕೇಷನ್‌ ಎಲ್ಲವೂ ಹೊಸದಾಗಿದೆ. ಈ ಬಾರಿ ಶ್ರೀಮುರಳಿ ಅವರು “ಮದಗಜ” ಮೂಲಕ ಇನ್ನೊಂದು ಘರ್ಜನೆ ಮಾಡಲಿದ್ದಾರೆ ಎಂಬುದಕ್ಕೆ ಈ ಟೀಸರ್‌ ಸಾಕ್ಷಿಯಂತಿದೆ.

ಪ್ರಶಾಂತ್ ನೀಲ್

 

ಇನ್ನು, ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ದೇಶಕ ಎಂದೇ ಹೆಸರಾಗಿರುವ ‘ಉಗ್ರಂ’, ‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಮದಗಜ’ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡುವ ಮೂಲಕ ಶುಭ ಹಾರೈಸಿರುವುದು ವಿಶೇಷ.

ನಿರ್ದೇಶಕ ಮಹೇಶ್ ಕುಮಾರ್

ಸದ್ಯಕ್ಕೆ ಬಿಡುಗಡೆಗೊಂಡ ಕೆಲವೇ ಕ್ಷಣಗಳಲ್ಲಿ “ಮದಗಜ” ಚಿತ್ರದ ಟೀಸರ್‌ ಲಕ್ಷಾಂತರ ವೀಕ್ಷಣೆಗೊಂಡು, ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರಕ್ಕೆ ಮಹೇಶ್ ಕುಮಾರ್ ನಿರ್ದೇಶನವಿದೆ. ಉಮಾಪತಿ ಅವರು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದ್ದಾರೆ.

ನಿರ್ಮಾಪಕ ಉಮಾಪತಿ

ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ದೊಡ್ಡ ಸರ್ಪ್ರೈಸ್‌ ಕೂಡ ಇದೆ. ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ನಲ್ಲಿ ಶ್ರೀಮುರಳಿ ಅವರ ಹೊಸ ಚಿತ್ರ ಕೂಡ ಅನೌನ್ಸ್‌ ಆಗಿದೆ. “ಜಂಗಲ್‌ಬುಕ್”‌ ಒಳಗಿರುವ ಒಂದಷ್ಟು ಪಾತ್ರಗಳು ಸದಾ ಎಲ್ಲರನ್ನೂಕಾಡುತ್ತವೆ. ಅಂಥದೊಂದು ಕಾಡುವ ಪಾತ್ರವನ್ನೇ ಇಟ್ಟುಕೊಂಡು ಹೊಸದ್ದೊಂದು ಕಥೆ ಹೆಣೆದು ಶ್ರೀಮುರಳಿ ಅವರಿಗೊಂದು ಚಿತ್ರ ಮಾಡಲಾಗುತ್ತಿದೆ ಎನ್ನಲಾಗಿದೆ. ಆದರೆ, ಶ್ರೀಮುರಳಿ ಯಾವ ಕಥೆ ಹಿಂದೆ ಹೊರಟಿದ್ದಾರೆ, ಯಾರು ನಿರ್ದೇಶಕ ಇತ್ಯಾದಿ ವಿಷಯವನ್ನು ಹೊಂಬಾಳೆ ಫಿಲ್ಮ್ಸ್‌ ಅನೌನ್ಸ್‌ ಮಾಡಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಅಬ್ಬರಿಸಲು ಸಜ್ಜಾದ ಪ್ರಜ್ವಲ್‌ ಅಬ್ಬರ! ರಾಮ್‌ನಾರಾಯಣ್‌ ನಿರ್ದೇಶನದಲ್ಲಿ ಡೈನಾಮಿಕ್‌ ಪ್ರಿನ್ಸ್‌ ತ್ರೀ ಶೇಡ್‌

ಮೂರು ಅವತಾರದಲ್ಲಿ ಎದುರಾಳಿ ಸಂಹಾರ

ಪ್ರಜ್ವಲ್‌ ದೇವರಾಜ್‌ ಅಭಿನಯದ ಹೊಸ ಚಿತ್ರ “ವೀರಂ” ಇತ್ತೀಚೆಗಷ್ಟೇ ಶುರುವಾಗಿದೆ. ಅದಕ್ಕೂ ಮುನ್ನ ಶುರುವಾಗಿದ್ದ ಅವರ ಹೊಸ ಚಿತ್ರ “ಅಬ್ಬರ” ಈಗ ಅಬ್ಬರಿಸಲು ಸಜ್ಜಾಗಿದೆ. ಈಗಾಗಲೇ ಶೇ.೭೦ರಷ್ಟು ಚಿತ್ರೀಕರಣ ಮುಗಿಸಿರುವ “ಅಬ್ಬರ” ಇನ್ನುಳಿದ ಚಿತ್ರೀಕರಣ ಪೂರೈಸಿದರೆ ಪ್ರೇಕ್ಷಕರ ಮುಂದೆ ಬರಲು ರೆಡಿ. ಇತ್ತೀಚೆಗೆ ಚಿತ್ರತಂಡದ ಜೊತೆ ಆಗಮಿಸಿದ್ದ ನಿರ್ದೇಶಕ ರಾಮ್‌ನಾರಾಯಣ್‌, ತಮ್ಮ “ಅಬ್ಬರ” ಕುರಿತು ಒಂದಷ್ಟು ಮಾಹಿತಿ ಹಂಚಿಕೊಂಡಿದ್ದು ಹೀಗೆ.
“ನಾನು ಈಗಾಗಾಲೇ ದೇವರಾಜ್‌ ಸರ್‌ ಜೊತೆ, ಪ್ರಣವ್‌ ಅವರ ಜೊತೆ ಕೆಲಸ ಮಾಡಿದ್ದೇನೆ. ಆದರೆ, ಪ್ರಜ್ವಲ್‌ ದೇವರಾಜ್‌ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಅದು “ಅಬ್ಬರ” ಮೂಲಕ ಸಿಕ್ಕಿದೆ. ಈ ಸಿನಿಮಾದ ಕಥೆ ಹೇಳಬೇಕು ಅಂತ ಫೋನ್‌ ಮಾಡಿದಾಗ, ಪ್ರಜ್ವಲ್‌ ಅವರು, ಒಪ್ಪಿ, ಕಥೆ ಹೇಳೋಕೆ ಕರೆದರು. ಹೋಗಿ ಕಥೆ ಹೇಳಿದೆ. ನಾನು ಇಷ್ಟು ವರ್ಷಗಳ ಅನುಭವದಲ್ಲಿ ಸಾಕಷ್ಟು ಹೀರೋಗಳಿಗೆ ಕಥೆ ಹೇಳಿದ್ದೇನೆ. ಆದರೆ, ಪ್ರಜ್ವಲ್‌ ಅವರಿಗೆ ಹೇಳಿದ ಅನುಭವ ಮರೆಯಲಾರೆ. ಯಾಕೆಂದರೆ, ಅವರು ತುಂಬಾ ಆಸಕ್ತಿಯಿಂದ, ಶ್ರದ್ಧೆಯಿಂದ ಕಥೆ ಕೇಳಿದ್ದಲ್ಲದೆ, ಒಮ್ಮೆಲೇ ಈ ಸಿನಿಮಾ ಮಾಡೋಣ ಎಂದು ಗ್ರೀನ್‌ಸಿಗ್ನಲ್‌ ಕೊಟ್ಟರು. ಹಾಗಾಗಿ ಈ “ಅಬ್ಬರ” ಶುರುವಾಯ್ತು.

ಅಪ್ಪ ಮಗನ ಬಾಂಧವ್ಯ ಹೈಲೆಟ್
ಇಲ್ಲಿ ಮೂವರು ನಾಯಕಿಯರು ಇದ್ದಾರೆ. ಕಥೆಯಲ್ಲಿ ಸಸ್ಪೆನ್ಸ್‌ ಇದೆ. ರಾಜ್‌ಶ್ರೀ ಪೊನ್ನಪ್ಪ, ಲೇಖಾಚಂದ್ರ, ನಿಮಿಕಾ ರತ್ನಾಕರ್‌ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್‌ ದೇವರಾಜ್‌ ಅವರಿಗಿಲ್ಲಿ ಮೂರು ವಿಭಿನ್ನ ಶೇಡ್‌ ಇರುವ ಪಾತ್ರವಿದೆ. ಶೂಟಿಂಗ್‌ ವೇಳೆ ಒಂದೇ ದಿನ ಮೂರು ಶೇಡ್‌ ಇರುವ ಪಾತ್ರ ಮಾಡಿದ್ದು ವಿಶೇಷ. ಒಂದು ಶಾಟ್‌ ಆದ ಕೂಡಲೇ, ಇನ್ನೊಂದು ಶೇಡ್‌ ಪಾತ್ರಕ್ಕೆ ರೆಡಿಯಾಗಿ ಬರುತ್ತಿದ್ದರು. ಎಲ್ಲೂ ಸಮಯ ತೆಗೆದುಕೊಳ್ಳದೆ, ತುಂಬಾ ಸ್ಪೀಡ್‌ ಆಗಿಯೇ ರೆಡಿಯಾಗಿ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದರು. ಅವರ ಶ್ರದ್ಧೆ ನನಗೆ ಇಷ್ಟವಾಯಿತು. ಚೆನ್ನೈ ಮೂಲದ ಜಿ.ಕೆ.ಗಣೇಶ್‌ ಕ್ಯಾಮೆರಾ ಹಿಡಿದಿದ್ದಾರೆ. ‌‌

ಹೈವೋಲ್ಟೇಜ್‌ ಸ್ಟಂಟ್ಸ್

ಚಾಲೆಂಜಿಂಗ್‌ ಸೀನ್‌ಗಳನ್ನು ತುಂಬಾನೇ ಚೆನ್ನಾಗಿ ಸೆರೆ ಹಿಡಿದಿದ್ದಾರೆ. ಎಂದಿನಂತೆ ನನ್ನ ಜೊತೆ ವೆಂಕಟೇಶ್‌ ಯುಡಿವಿ ಸಂಕಲನ ಮಾಡಿದ್ದಾರೆ. ರವಿಬಸ್ರೂರು ಅವರ ಅದ್ಭುತ ಸಂಗೀತವಿದೆ. ಯೋಗರಾಜ್‌ಭಟ್‌, ವಿಜಯ್‌ ಭರಮಸಾಗರ ಸಾಹಿತ್ಯವಿದೆ. ನಾನೂ ಒಂದು ಹಾಡು ಬರೆದಿದ್ದೇನೆ. ಚಿತ್ರದಲ್ಲಿ ಸ್ಟಂಟ್ಸ್‌ ಕೂಡ ಹೈಲೈಟ್.‌ ವಿನೋದ್‌, ಪಳನಿರಾಜ್, ಡಿಫರೆಂಟ್‌ ಡ್ಯಾನಿ ಮತ್ತು ಮಾಸ್‌ಮಾದ ಒಂದೊಂದು ಫೈಟ್‌ ಸಂಯೋಜಿಸಿದ್ದಾರೆ. ಸದ್ಯಕ್ಕೆ ಹಿನ್ನೆಲೆ ಸಂಗೀತ ಬಾಕಿ ಇದೆ. ಇಷ್ಟೊತ್ತಿಗಾಗಲೇ ಚಿತ್ರೀಕರಣ ಮುಗಿಯಬೇಕಿತ್ತು. ಕೊರೊನಾ ಸಮಸ್ಯೆಯಿಂದ ತಡವಾಗಿದೆ” ಎಂದು ವಿವರ ಕೊಟ್ಟ ರಾಮ್‌ನಾರಾಯಣ್‌, ಕಥೆ ಬಗ್ಗೆ ಹೇಳುವುದಾದರೆ, ಒಬ್ಬ ದುಷ್ಟನ ಸಂಹಾರ ಮಾಡಲು ಭಗವಂತ ಹೇಗೆ ಹಲವು ಅವತಾರ ಎತ್ತುತ್ತಾನೋ, ಹಾಗೆ ನಮ್ಮ ಚಿತ್ರದ ಹೀರೋ ಹಲವು ಅವತಾರಗಳನ್ನು ತಾಳಿ ಎದುರಾಳಿಯನ್ನು ಸಂಹರಿಸುತ್ತಾನೆ. ತಂದೆ ಮೇಲೆ ಮಗನಿಗಿರುವ ಗೌರವ, ಪ್ರೀತಿಸಿದ ಹುಡುಗಿಯನ್ನೇ ತನ್ನ ಪ್ರತೀಕಾರಕ್ಕೆ ಬಳಸಿಕೊಳ್ಳುವಂತಹ ಸಂದರ್ಭ ಬಂದಾಗ ಮಾಡುವ ಕೆಲಸ, ತನ್ನ ಕುಟುಂಬವನ್ನು ಕಾಪಾಡಿಕೊಳ್ಳಲು ಮಾಡುವಂತಹ ತ್ಯಾಗ, ಕಾನೂನಿನ ಚೌಕಟ್ಟಿನಲ್ಲಿ ಎಲ್ಲವನ್ನೂ ನಿಭಾಹಿಸುವ ಕರ್ತವ್ಯದಲ್ಲಿ ಹೀರೋ ಹೇಗೆಲ್ಲಾ ವರ್ತಿಸುತ್ತಾನೆ ಅನ್ನೋದು ಕಥೆ ಎನ್ನುತ್ತಾರೆ ಅವರು.

ಕಥೆಯಲ್ಲೊಂದು ವಿಶೇಷತೆ ಇದೆ
ಪ್ರಜ್ವಲ್ ದೇವರಾಜ್‌ ಅವರಿಗೆ ಈ ಚಿತ್ರ ಮಾಡಬೇಕೆನಿಸಿದ್ದು, ಕಥೆ ಮತ್ತು ಪಾತ್ರವಂತೆ. ಅದರ ಜೊತೆಗೆ ನಿರ್ದೇಶಕ ರಾಮ್‌ನಾರಾಯಣ್‌ ಅವರು ಕಮರ್ಷಿಯಲ್‌ ನಿರ್ದೇಶಕರು ಎಂಬ ಕಾರಣವೂ ಕೂಡ. “ಕಥೆ ಕೇಳಿದಾಗ, ಅದರಲ್ಲೊಂದು ವಿಶೇಷತೆ ಇತ್ತು. ಮೂರು ಶೇಡ್‌ ಪಾತ್ರ ಇದ್ದುದರಿಂದ ನನಗೂ ಚಾಲೆಂಜ್‌ ಎನಿಸಿತ್ತು. ರಾಮ್‌ನಾರಾಯನ್‌ ಹೆಣೆದ ಕಥೆಯೊಳಗೆ ಗಟ್ಟಿತನವಿತ್ತು. ಹಾಗಾಗಿ ಅವರೊಂದಿಗೆ ಕೆಲಸ ಮಾಡಲೇಬೇಕು ಎನಿಸಿ ಈ ಚಿತ್ರ ಒಪ್ಪಿದೆ. ನಾನು ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿಯೇ ಸಿನಿಮಾ ಮಾಡಿದ್ದಾರೆ. ರಾಮ್‌ನಾರಾಯಣ್‌ ಒಮ್ಮ ಕಮರ್ಷಿಯಲ್ ನಿರ್ದೇಶಕರ ಜೊತೆಗೆ ಒಳ್ಳೆಯ ಮನುಷ್ಯ. ಹಾಗಾಗಿಯೇ ಈ ಚಿತ್ರ ತುಂಬಾನೇ ಚೆನ್ನಾಗಿ ಮೂಡಿಬಂದಿದೆ. ನಾನು ಮೂರು ವಿಭಿನ್ನ ಶೇಡ್‌ ಇರುವ ಪಾತ್ರಕ್ಕೆ ಎಷ್ಟರಮಟ್ಟಿಗೆ ನ್ಯಾಯ ಸಲ್ಲಿಸಿದ್ದೇನೋ ಗೊತ್ತಿಲ್ಲ. ಆದರೂ ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಕೆಲಸ ಮಾಡಿದ್ದೇನೆ. ಇನ್ನು, ನಿರ್ಮಾಪಕ ಬಸವರಾಜ್‌ ಅವರು ಸಾಕಷ್ಟು ಖರ್ಚು ಮಾಡಿದ್ದಾರೆ. “ಅಬ್ಬರ” ಅಂದಾಕ್ಷಣ, ಎಲ್ಲವೂ ಅಬ್ಬರವಾಗಿರಬೇಕು. ಅದು ತೆರೆಯ ಮೇಲೆ ನೋಡಿದರೆ, ಅಷ್ಟೊಂದು ಅಬ್ಬರ ಅಂತ ಗೊತ್ತಾಗುತ್ತೆ. ಸಿನಿಮಾಗೆ ಏನೆಲ್ಲಾ ಬೇಕೋ ಅದನ್ನು ಕೊಟ್ಟಿದ್ದಾರೆ. ಸಿನಿಮಾ ಅಬ್ಬರವಾಗಿದೆʼ ಎನ್ನುತ್ತಾರೆ ಪ್ರಜ್ವಲ್‌ ದೇವರಾಜ್.‌

ಮೂವರ ಬೆಡಗಿಯರ ಜೊತೆ ಡಿಂಗು ಡಾಂಗು
ನಾಯಕಿ ನಿಮಿಕಾ ರತ್ನಾಕರ್‌ ಅವರಿಗೆ ಇಲ್ಲಿ ಒಂದು ರೀತಿಯ ಬಜಾರಿ ಪಾತ್ರವಂತೆ. ಪ್ರಜ್ವಲ್‌ ಅವರ ಜೊತೆ ಕೆಲಸ ಮಾಡಿದ್ದು ಅವರಿಗೆ ಮರೆಯಲಾರದ ಅನುಭವವಂತೆ. ತುಂಬಾನೇ ಕಂಫರ್ಟಬಲ್ ಟೀಮ್‌ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ” ಎಂಬುದು ನಿಮಿಕಾ ಮಾತು. ಇನ್ನು, ರಾಜ್‌ಶ್ರೀ ಪೊನ್ನಪ್ಪ ಅವರು ಇಷ್ಟು ದಿನ ಮುಂಬೈನ ರಂಗಭೂಮಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಹಾಗಾಗಿ, ಕನ್ನಡದಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ ಎನ್ನುವ ಅವರು, “ಅಬ್ಬರ” ಮೂಲಕ ಎಂಟ್ರಿಯಾಗಿದ್ದೇನೆ. ನಾನಿಲ್ಲಿ ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಮೊದಲ ಸಲ ಪ್ರಜ್ವಲ್‌ ಸರ್‌ ಜೊತೆ ಕೆಲಸ ಮಾಡಿದ್ದೇನೆ. ಪಾತ್ರದ ಬಗ್ಗೆ ಹೇಳುವುದಾದರೆ, ಅದೊಂದು ಸಿಂಪಲ್‌ ಹುಡುಗಿಯ ಪಾತ್ರ. ತುಂಬಾನೇ ಮುಗ್ಧತೆ ಇರುವಂಥದ್ದು. ನಿರ್ದೇಶಕ ರಾಮ್‌ ನಾರಾಯಣ್‌ ಸರ್‌, ನನ್ನ ನಂಬಿ ಅವಕಾಶ ಕೊಟ್ಟಿದ್ದಾರೆ. ಅದಕ್ಕೆ ನ್ಯಾಯ ಸಲ್ಲಿಸಿದ್ದೇನೆ ಎಂಬ ನಂಬಿಕೆಯೂ ಇದೆ. ಇನ್ನು, ನಿರ್ಮಾಪಕ ಬಸವರಾಜ್‌ ಅವರು, ಯಾವುದಕ್ಕೂ ಕಡಿಮೆ ಮಾಡದೆ, ಅದ್ಧೂರಿಯಾಗಿಯೇ ಸಿನಿಮಾ ಮಾಡಿದ್ದಾರೆ ಎಂದರು ರಾಜ್‌ಶ್ರೀ ಪೊನ್ನಪ್ಪ.  ಲೇಖಾಚಂದ್ರ ಅವರಿಲ್ಲಿ ಡಾಕ್ಟರ್‌ ಪಾತ್ರ ಮಾಡಿದ್ದು, ಅವರಿಗೇ ಇಲ್ಲೊಂದು ಖಾಯಿಲೆ ಇರುವ ಪಾತ್ರ ಕೊಟ್ಟಿದ್ದಾರಂತೆ. ಅದು ಏನೆಂಬುದನ್ನು ಸಿನಿಮಾದಲ್ಲೇ ನೋಡಬೇಕು ಎನ್ನುವ ಲೇಖಾಚಂದ್ರ, ಪ್ರಜ್ವಲ್‌ ಜೊತೆ ರವಿಶಂಕರ್‌ ಕಾಂಬಿನೇಷನ್‌ನಲ್ಲಿ ಕಾಣಿಸಿಕೊಂಡಿದ್ದು ಹೆಮ್ಮೆ ಎನಿಸಿದೆ ಎನ್ನುತ್ತಾರೆ ಅವರು.

ಗೆಳೆಯನಿಗೆ ಮಾಡಿದ ಚಿತ್ರ
ನಿರ್ಮಾಪಕ ಬಸವರಾಜ್‌ ಮಂಚಯ್ಯ (ಹಿತ್ತಲಪುರ) ಅವರು ಈ ಹಿಂದೆ “ಬಿ೩” ಸಿನಿಮಾ ಮಾಡಿದ್ದರು. ನಿರ್ದೇಶಕ ರಾಮ್‌ನಾರಾಯಣ್‌ ಮತ್ತು ನಿರ್ಮಾಪಕ ಬಸವರಾಜ್‌ ಕಳೆದ ಹತ್ತು ವರ್ಷಗಳ ಗೆಳೆಯರಂತೆ. ಹತ್ತು ವರ್ಷದ ಹಿಂದೆ ಒಂದು ಸಿನಿಮಾ ಮಾಡೋಣ ಅಂತ ನಿರ್ಮಾಪಕರು ಹೇಳಿದ್ದರಂತೆ. ಆದರೆ, ಕಾಲ ಕೂಡಿ ಬಂದಿರಲಿಲ್ಲವಂತೆ. ಈಗ “ಅಬ್ಬರ” ಮೂಲಕ ಅದು ಸಾಧ್ಯವಾಗಿದೆ. ಒಂದೊಳ್ಳೆಯ ಚಿತ್ರ ಮಾಡಿರುವ ಖುಷಿ ನನಗಿದೆ” ಎನ್ನುತ್ತಾರೆ ಬಸವರಾಜ್‌ ಮಂಚಯ್ಯ.

Categories
ಆಡಿಯೋ ಕಾರ್ನರ್

ಪೃಥ್ವಿ ಅಂಬರ್‌ ಈಗ ಗಾಯಕ – ಸಾಂಗ್‌ ಈಸ್‌ ಬ್ಯೂಟಿಫುಲ್!

ಮೊದಲ ಬಾರಿಗೆ ಹಾಡಿದ ಹೀರೋ

ಈ ಚಿತ್ರರಂಗವೇ ಹಾಗೆ. ಇಲ್ಲಿ ಯಾರು ಏನ್‌ ಬೇಕಾದರೂ ಆಗಬಹುದು. ನಿರ್ಮಾಪಕ ನಿರ್ದೇಶಕರಾಗಿದ್ದಾರೆ, ನಿರ್ದೇಶಕ ಹೀರೋ ಆಗಿದ್ದಾರೆ, ಹೀರೋ, ನಿರ್ದೇಶಕರಾಗಿದ್ದಾರೆ, ಒಮ್ಮೊಮ್ಮೆ ಒಬ್ಬರೇ ಎಲ್ಲವೂ ಆಗಿ ಹೋಗಿದ್ದಾರೆ. ಈಗಾಗಲೇ ಅನೇಕ ನಾಯಕರು ಗಾಯಕರೂ ಆಗಿದ್ದಾರೆ. ಆ ಸಾಲಿಗೆ ಈಗ ಯುವ ನಟ ಪೃಥ್ವಿ ಅಂಬರ್‌ ಕೂಡ ಗಾಯಕರಾಗಿದ್ದಾರೆ.


ಹೌದು, “ಲೈಫ್‌ ಈಸ್‌ ಬ್ಯೂಟೀಫುಲ್‌” ಸಿನಿಮಾಗೆ ಪೃಥ್ವಿ ಅಂಬರ್‌ ಹಾಡಿದ್ದಾರೆ. ಈ ಚಿತ್ರಕ್ಕೆ ಮೊದಲ ಬಾರಿಗೆ ಹಾಡುವ ಮೂಲಕ ಗಾಯಕ ಎನಿಸಿಕೊಂಡಿದ್ದಾರೆ. “ಖುಷಿಗಾಗಿ ಈವರೆಗೂ ಗುನುಗುತ್ತಿದ್ದವರು, ಮೊದಲ ಬಾರಿಗೆ ಚಿತ್ರವೊಂದಕ್ಕೆ ಹಾಡಿರುವುದೇ ಈ ಹೊತ್ತಿನ ವಿಶೇಷ. ತಮ್ಮ ಮೊದಲ ಹಾಡಿನ ಕುರಿತು ಹೇಳುವ ಪೃಥ್ವಿ, “ನಾನು ಸಂಗೀತ ಕಲಿತಿಲ್ಲ. ಆದರೆ, ಆಗಾಗ ಅವಕಾಶ ಸಿಕ್ಕಾಗ ಆರ್ಕೆಸ್ಟ್ರಾದಲ್ಲಿ ಖುಷಿಗಾಗಿ ಹಾಡುತ್ತಿದ್ದೆ ಅಷ್ಟೇ. ಮೈಕಲ್ ಜಾಕ್ಸನ್ ನನಗೆ ಅಚ್ಚುಮೆಚ್ಚು. ಅವರಂತೆ ಡಾನ್ಸ್ ಮಾಡುವುದು ಮತ್ತು ಹಾಡುವುದನ್ನು ಪ್ರಾಕ್ಟಿಸ್ ಮಾಡುತ್ತಿದ್ದೆ. ಅವರ ಮೇಲಿ ಆ ಪ್ರೀತಿಯೇ ಇಂದು ನನ್ನದೇ ಚಿತ್ರಕ್ಕೆ ಹಾಡಲು ಅವಕಾಶ ಸಿಕ್ಕಿದೆ” ಎಂಬುದು ಪೃಥ್ವಿ ಅಂಬರ್‌ ಮಾತು.


ನೊಬಿನ್ ಪೌಲ್ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಟ್ಯೂನ್‌ ಕೇಳಿದ ಕೂಡಲೇ ಪೃಥ್ವಿ ಅಂಬರ್, ಸ್ವತಃ ತಾವೇ ಒಂದು ಸಾಹಿತ್ಯ ಬರೆದು ಹಾಡಿದ್ದಾರೆ. ಇವರ ಹಾಡು ಕೇಳಿದ ಚಿತ್ರತಂಡಕ್ಕೂ ಖುಷಿಯಾಗಿದೆ. ಸಂಗೀತ ನಿರ್ದೇಶಕರಿಗೂ ಇವರ ಹಾಡಿನ ಮೇಲೆ ಪ್ರೀತಿ ಮೂಡಿದ್ದರಿಂದ ಅವರಿಂದಲೇ ಹಾಡಿಸಿದ್ದಾರೆ. ಹೀಗಾಗಿ ಬಯಸದೇ ಬಂದ ಅವಕಾಶ ಆಗಿದ್ದರಿಂದ ನನ್ನ ಲೈಫ್‌ನಲ್ಲಿ ಮೊದಲ ಹಾಡು ಹಾಡಿರುವ ಖುಷಿ ಎನ್ನುತ್ತಾರೆ ಪೃಥ್ವಿ. ಮದನ್ ಬೆಳ್ಳಿಸಾಲು ಈ ಹಾಡಿಗೆ ಸಾಹಿತ್ಯವಿದೆ. ಅರುಣ್ ಕುಮಾರ್ ಎಂ. ಮತ್ತು ಸಾಬು ಅಲೋಶಿಯಸ್ ಜಂಟಿಯಾಗಿ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಕಿಶೋರ್ ನರಸಿಂಹಯ್ಯ ನಿರ್ಮಾಪಕರು.
ಫ್ರೈಡೆ ಫಿಲ್ಮ್ಸ್ ಮತ್ತು ಸಿಲ್ವರ್ ಟ್ರೈನ್ ಇಂಟರ್ ನ್ಯಾಷಿನಲ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

 

Categories
ಸಿನಿ ಸುದ್ದಿ

“ರಾ” ಗಿಣಿ ಪರಾರಿ! ದೂರದ ದುಬೈನಲ್ಲಿ ಅವರಿಗೇನು ಕೆಲಸ?

ಅವರೇಕೆ ಹೀಗೆ ಮಾಡಿದರು?

ಆ ರಾಗಿಣಿ ಬೇರೆ… ಈ “ರಾ” ಗಿಣಿ ಬೇರೆ…

“ರಾ”… ಗಿಣಿ ಈಗ ಪರಾರಿ…!
ಅರೇ, ಇದೇನಪ್ಪಾ, ಡ್ರಗ್ಸ್‌ ಕೇಸ್‌ನಲ್ಲಿ ರಾಗಿಣಿ ಜೈಲುವಾಸ ಅನುಭವಿಸುತ್ತಿದ್ದಾರೆ. ಅವರು ಯಾವಾಗ ಜೈಲಿಂದ ಪರಾರಿಯಾದರು ಎಂಬ ಪ್ರಶ್ನೆ ಮತ್ತು ಅಚ್ಚರಿ ಎರಡೂ ಆಗಬಹುದು. ವಿಷಯವಿಷ್ಟೇ, ಇಲ್ಲಿ ಹೇಳುತ್ತಿರುವ ವಿಷಯ ನಟಿ ರಾಗಿಣಿ ವಿಷಯವಲ್ಲ. “ರಾ” ಎಂಬ ಹೊಸಬರ ಚಿತ್ರದ ನಾಯಕಿಯೊಬ್ಬರ ವಿಷಯ.

ಹೌದು, ನವ ನಿರ್ದೇಶಕ ರಾಜೇಶ್‌ಗೌಡ ಅವರು ಇದೇ ಮೊದಲ ಬಾರಿಗೆ ನಿರ್ದೇಶಿಸಿರುವ “ರಾʼ ಚಿತ್ರದ ನಾಯಕಿ ಸನಾನೈಕ್‌ ಎಂಬುವವರು ಚಿತ್ರದ ಪ್ರಚಾರಕ್ಕೆ ಬಾರದೆ, ಎಲ್ಲೂ ಕಾಣಿಸುತ್ತಿಲ್ಲ. ಸರಿಯಾಗಿ ಚಿತ್ರತಂಡಕ್ಕೆ ಸ್ಪಂದಿಸುತ್ತಿಲ್ಲ ಎಂದು ಚಿತ್ರತಂಡ ಆರೋಪಿಸಿದೆ. ಅಷ್ಟೇ ಅಲ್ಲ, ಸ್ವತಃ ನಿರ್ದೇಶಕ ರಾಜೇಶ್‌ಗೌಡ ಅವರೇ, ನಾಯಕಿ ಸನಾನೈಕ್‌ ಫೋನ್‌ಗೂ ಸಿಗುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸನಾ‌ ನೈಕ್

ವಿಷಯವೇನು…?
ಕನ್ನಡದಲ್ಲಿ “ರಾ” ಹೆಸರಿನ ಸಿನಿಮಾವೊಂದು ರೆಡಿಯಾಗಿರುವುದು ಗೊತ್ತೇ ಇದೆ. ಚಿತ್ರಕ್ಕೆ ಸೆನ್ಸಾರ್‌ ಕೂಡ ಆಗಿದೆ. ಈಗ ಪ್ರೇಕ್ಷಕರ ಎದುರು ಬರಲು ಚಿತ್ರ ರೆಡಿಯಾಗಿದೆ. ವಾಹಿನಿಯಲ್ಲಿ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ್ದ ರಾಜೇಶ್‌ಗೌಡ, ಸುಮಾರು ವರ್ಷಗಳ ಅನುಭವದ ಮೇಲೆ “ರಾ” ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯೂ ಇವರದೇ. ಈ ಸಿನಿಮಾಗೆ, ಸನಾ ನೈಕ್‌ ನಾಯಕಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿಸಿ, ಬಿಡುಗಡೆಗೆ ಸಜ್ಜಾಗಿರುವ ರಾಜೇಶ್‌ಗೌಡ, ಈಗ ಪ್ರಚಾರಕ್ಕೆ ನಾಯಕಿಯನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಆದರೆ, ನಾಯಕಿ ಮಾತ್ರ, ಇವರ ಫೋನ್‌ ಕಾಲ್‌ಗೆ ಸರಿಯಾಗಿ ಸ್ಪಂದಿಸುತ್ತಿಲ್ಲವಂತೆ. ಸಿನಿಮಾ ಕೆಲಸಗಳು ಕೊರೊನಾ ಮುನ್ನವೇ ಮುಗಿದಿದ್ದವು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಿನಿಮಾ ಚಟುವಟಿಕೆ ಸ್ಥಗಿತಗೊಂಡಿತ್ತು. ಈಗ ಎಲ್ಲವೂ ಮೆಲ್ಲನೆ ಓಪನ್‌ ಆಗಿರುವುದರಿಂದ “ರಾ” ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದ್ದಾರೆ.

ಇದಕ್ಕೂ ಮುನ್ನ, ರಾಜೇಶ್‌ಗೌಡ ಅವರು, ೨೦೧೯ರಲ್ಲಿ ದುಬೈನಲ್ಲಿ ಚಿತ್ರದ ಆಡಿಯೋ ಬಿಡುಗಡೆ ಮಾಡಿದ್ದರು. ಆಗ ನಾಯಕಿ ಸನಾನೈಕ್‌ ಅವರು ದುಬೈನಲ್ಲೇ ಇದ್ದರೂ, ಅವರ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಬರಲಿಲ್ಲ. ಉಡುಪಿಯಲ್ಲೂ ಒಂದು ದೊಡ್ಡ ಈವೆಂಟ್‌ನಲ್ಲೂ ಭಾಗವಹಿಸಲಿಲ್ಲ. ಎಂಬ ಬೇಸರದ ಮಾತುಗಳನ್ನು ನಿರ್ದೇಶಕ ರಾಜೇಶ್‌ಗೌಡ ಹೊರಹಾಕುತ್ತಾರೆ. ಸದ್ಯಕ್ಕೆ ದುಬೈನಲ್ಲೇ ಬೀಡುಬಿಟ್ಟಿರುವ ನಾಯಕಿ ಸನಾನೈಕ್‌, ಚಿತ್ರದ ಪ್ರಚಾರ ಸಲುವಾಗಿ ಚಿತ್ರತಂಡ ಫೋನ್‌ ಮಾಡಿದರೂ ಯಾವುದೇ ರೀತಿಯಲ್ಲೂ ಉತ್ತರ ಕೊಡುತ್ತಿಲ್ಲ. ಆದರೆ, ಫೆಬ್ರವರಿಯಲ್ಲಿ ಬರ್ತೀನಿ ಅಂತಿದ್ದಾರೆ ವಿನಃ, ಬೇರೇನೂ ಹೇಳುತ್ತಿಲ್ಲ ಎನ್ನುತ್ತಿದ್ದಾರೆ ಎಂಬುದು ನಿರ್ದೇಶಕರ ಹೇಳಿಕೆ.


ಕಳೆದ ಮೂರ್ನಾಲ್ಕು ತಿಂಗಳಿನಿಂದಲೂ ನಾಯಕಿ ಸನಾನೈಕ್‌ ನಿರ್ದೇಶಕರಿಗೆ ಕಾಣುತ್ತಿಲ್ಲ, ಮಾತಿಗೂ ಸಿಗುತ್ತಿಲ್ಲ. ಉಡುಪಿಯೊಲ್ಲೊಂದು ಈವೆಂಟ್‌ ಮಾಡಿದ್ದರೂ ಬಂದಿಲ್ಲ. ಹೊಸಬರು ಎಂಬ ಕಾರಣಕ್ಕೆ ಅವರಿಗೆ ನಾವು ಅವಕಾಶ ಕೊಟ್ಟೆವು. ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಈಗ ನೋಡಿದರೆ, ಪ್ರಚಾರಕ್ಕೆ ಬಾರದೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾನು ದುಬೈನಲ್ಲಿದ್ದೇನೆ ಅಂತಾರೆ. ಆದರೆ, ಅಲ್ಲೇನ್‌ ಮಾಡ್ತಾ ಇದ್ದಾರೋ ಗೊತ್ತಿಲ್ಲ. ಸಿನಿಮಾದಲ್ಲಿ ಅವಕಾಶ ಸಿಗುವುದೇ ಕಷ್ಟ. ಆದರೆ, ಅವಕಾಶ ಸಿಕ್ಕರೂ ಈ ನಾಯಕಿ ಚಿತ್ರತಂಡಕ್ಕೆ ಹೀಗೆಲ್ಲಾ ಬೇಜಾರು ಮಾಡುತ್ತಿದ್ದಾರೆ. ಒಂದು ಸಿನಮಾ ಮಾಡಿ ಮುಗಿಸುವುದು ಸುಲಭದ ಕೆಲಸವಲ್ಲ. ನಿರ್ಮಾಪಕರು ನಂಬಿ ಹಣ ಹಾಕಿರುತ್ತಾರೆ. ಅವರಿಗೆ ಹಣ ಹಿಂದಿರುಗಬೇಕಾದರೆ, ಸಿನಿಮಾ ರಿಲೀಸ್‌ ಆಗಬೇಕು, ರಿಲೀಸ್‌ ಮಾಡಬೇಕಾದರೆ, ಅದಕ್ಕೂ ಮೊದಲು ಜನರಿಗೆ ಸಿನಿಮಾ ಬಗ್ಗೆ ಗೊತ್ತಾಗಬೇಕು, ಗೊತ್ತಾಗಬೇಕಾದರೆ, ಸರಿಯಾಗಿಯೇ ಸಿನಿಮಾ ಪ್ರಚಾರ ಮಾಡಬೇಕು. ಆದರೆ, ಪ್ರಚಾರ ಮಾಡಲು ಹೊರಟರೆ, ನಾಯಕಿಯೇ ಸಿಗುತ್ತಿಲ್ಲ. ಏನು ಮಾಡಬೇಕು ಎಂಬುದು ನಿರ್ದೇಶಕರ ಅಳಲು.

ನಿರ್ದೇಶಕ ರಾಜೇಶ್‌ಗೌಡ

ಅದೇನೆ ಇರಲಿ, ಒಂದು ಕನ್ನಡ ಸಿನಿಮಾದ ಕನ್ನಡದ ನಾಯಕಿಯಾಗಿರುವ ಸನಾನೈಕ್‌, ತಮ್ಮ ಸಿನಿಮಾದ ಪ್ರಚಾರಕ್ಕೆ ಬಾರದೆ ದೂರದ ದುಬೈನಲ್ಲಿ ಕುಳಿತರೆ, ಇಲ್ಲಿ ಸಿನಮಾಗೆ ಹಣ ಹಾಕಿರುವ ನಿರ್ಮಾಪಕರ ಗತಿ ಏನು? ಹತ್ತಾರು ಕನಸು ಕಟ್ಟಿಕೊಂಡಿರುವ ನಿರ್ದೇಶಕರ ಪಾಡೇನು? ಈಗಲಾದರೂ ನಾಯಕಿ ಸನಾನೈಕ್‌ ಇಂಡಿಯಾಗೆ ಬಂದು, ತಮ್ಮ “ರಾ” ಸಿನಿಮಾದ ಪ್ರಚಾರಕ್ಕೆ ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Categories
ಸಿನಿ ಸುದ್ದಿ

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ನಲ್ಲಿ ಶ್ರೀಮುರಳಿ ಚಿತ್ರ- ಡಿ.17ರ ರೋರಿಂಗ್‌ ಸ್ಟಾರ್‌ ಬರ್ತ್‌ಡೇಗೆ ಹೊಸ ಚಿತ್ರ ಘೋಷಣೆ

ಅದ್ಧೂರಿ ಬಜೆಟ್‌ ಚಿತ್ರಕ್ಕೆ ನಿರ್ದೇಶಕ ಯಾರೆಂಬುದು ಗೌಪ್ಯ

ಕನ್ನಡದಲ್ಲೀಗ ಹೊಸ ಸಿನಿಮಾ ಅನೌನ್ಸ್‌ಮೆಂಟ್‌ಗಳ ಸುರಿಮಳೆ. ಹೌದು, ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ತೆಲುಗು ಸ್ಟಾರ್‌ ನಟ ಪ್ರಭಾಸ್‌ ಅಭಿನಯದ “ಸಲಾರ್‌” ಸಿನಿಮಾ ನಿರ್ಮಿಸುವ ಕುರಿತು ಅನೌನ್ಸ್‌ ಮಾಡಿತ್ತು. ಆ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ನಿರ್ದೇಶಕ ಎಂಬುದನ್ನೂ ಹೇಳಿತ್ತು. ಅದರ ಬೆನ್ನೆಲ್ಲೇ ಹೊಂಬಾಳೆ ಫಿಲ್ಮ್ಸ್‌ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾ ಅನೌನ್ಸ್‌ ಮಾಡುವುದಾಗಿ ಹೇಳಿಕೊಂಡಿದೆ. ಹೌದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌, ಡಿಸೆಂಬರ್‌ ೧೭ರಂದು ೧೧.೫೯ಕ್ಕೆ ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿಕೊಂಡಿದೆ. ಎಲ್ಲವೂ ಸರಿ, ಹೊಂಬಾಳೆ ಫಿಲ್ಮ್ಸ್‌ ಯಾಕೆ ಡಿಸೆಂಬರ್‌ ೧೭ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಲಿದೆ, ಅದಕ್ಕೆ ಕಾರಣ ಏನು? ಈ ಪ್ರಶ್ನೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಹೊಂಬಾಳೆ ಫಿಲ್ಮ್ಸ್‌ ಮೂಲಕ ಇದುವರೆಗೆ ಆರು ಚಿತ್ರಗಳು ತಯಾರಾಗಿದ್ದು, ಇತ್ತೀಚೆಗೆ ಏಳನೇ ಸಿನಿಮಾ “ಸಲಾರ್‌” ಚಿತ್ರವನ್ನು ಘೋಷಣೆ ಮಾಡಿತ್ತು. ಈಗ ಎಂಟನೇ ಸಿನಿಮಾ ಘೋಷಣೆಗೆ ಡಿಸೆಂಬರ್‌ ೧೭ರಂದು ನಿಗದಿ ಮಾಡಲಾಗಿದೆ. ಎಲ್ಲವೂ ಸರಿ, ಈ ಸಿನಿಮಾಗೆ ನಾಯಕ ಯಾರು? ಯಾಕೆ ಡಿಸೆಂಬರ್‌ ೧೭ರಂದೇ ಹೊಸ ಚಿತ್ರ ಅನೌನ್ಸ್‌ ಮಾಡಲಿದ್ದಾರೆ? ಈ ಪ್ರಶ್ನೆಗೆ ಸರಿಯಾದ ಉತ್ತರವಿಲ್ಲ. ಕೆಲವು ಕಡೆ ಪುನೀತ್‌ ರಾಜಕುಮಾರ್‌ ಅವರ ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅವರ ಸಿನಿಮಾ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ ಬಿಡಿ.


ಆದರೆ, ಡಿಸೆಂಬರ್‌ ೧೭ರಂದು ಬೆಳಗ್ಗೆ ೧೧.೫೯ಕ್ಕೆ ಹೊಂಬಾಳೆ ಫಿಲ್ಮ್ಸ್‌ ಅನೌನ್ಸ್‌ ಮಾಡಲಿರುವ ಹೊಸ ಸಿನಿಮಾಗೆ ಮೂಲಗಳ ಪ್ರಕಾರ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರು ಹೀರೋ ಎನ್ನಲಾಗುತ್ತಿದೆ. ಯಾಕೆಂದರೆ, ಡಿಸೆಂಬರ್‌ ೧೭ರಂದು ಶ್ರೀಮುರಳಿ ಅವರ ಹುಟ್ಟುಹಬ್ಬ. ಅಂದೇ ಹೊಂಬಾಳೆ ಫಿಲ್ಸ್ಮ್‌ ಶ್ರೀಮುರಳಿ ಅವರ ಹೊಸ ಸಿನಿಮಾವವನ್ನು ಅನೌನ್ಸ್‌ ಮಾಡಲಿದ್ದಾರೆ ಎಂಬ ಜೋರು ಸುದ್ದಿಯೂ ಇದೆ.
ಎರಡು ದಿನಗಳ ಹಿಂದಷ್ಟೇ,  “ಸಿನಿಲಹರಿ” ಕೂಡ ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ತ್ರಿಬಲ್‌ ಧಮಾಕ ಶೀರ್ಷಿಕೆಯಡಿ ಸುದ್ದಿಯೊಂದನ್ನು ಪೋಸ್ಟ್‌ ಮಾಡಿತ್ತು. ಆ ಸುದ್ದಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಈಗ ಹೊಂಬಾಳೆ ಫಿಲ್ಮ್ಸ್‌ ಹೊಸ ಚಿತ್ರ ಅನೌನ್ಸ್‌ ‌ ಮಾಡುತ್ತಿರುವುದು ಕೂಡ ಡಿ.೧೭ಕ್ಕೆ. ಹಾಗಾಗಿ ಶ್ರೀಮುರಳಿ ಅವರ ಹುಟ್ಟಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್‌ ಹೊಸ ಚಿತ್ರ ಅನೌನ್ಸ್‌ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಸದ್ಯಕ್ಕೆ ನಿರ್ದೇಶಕ ಯಾರೆಂಬುದು ಗೌಪ್ಯವಾಗಿದೆ.

Categories
ಸಿನಿ ಸುದ್ದಿ

ಶ್ರೀಮುರಳಿ ಹುಟ್ಟು ಹಬ್ಬಕ್ಕೆ ತ್ರಿಬಲ್ ಧಮಾಕ! ಮದಗಜ ಟೀಸರ್ ಜೊತೆ ಎರಡು ಬಿಗ್ ಪ್ರಾಜೆಕ್ಟ್ ಅನೌನ್ಸ್

 ಫ್ಯಾನ್ಸ್ ಗೆ  ಸರ್ಪ್ರೈಸ್  ಕೊಡ್ತಾರೆ ರೋರಿಂಗ್ ಸ್ಟಾರ್

ಸಿನಿ ಲಹರಿ ಎಕ್ಸ್ ಕ್ಲ್ಯೂಸ್

ಶ್ರೀಮುರಳಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ‘ಉಗ್ರಂ’ ಮೂಲಕ ತಮ್ಮ ಇಮೇಜ್ ಬದಲಿಸಿಕೊಂಡವರು. ಅಲ್ಲಿಂದ ಇಲ್ಲಿಯವರೆಗೂ ಅದೇ ಇಮೇಜ್ ಉಳಿಸಿಕೊಂಡು ಬಂದಿದ್ದಾರೆ. ಅವರೀಗ ಮತ್ತಷ್ಟು ಹೊಸ ಪ್ರಾಜೆಕ್ಟ್‌ ಗಳಲ್ಲಿ ಬಿಝಿಯಾಗಲಿದ್ದಾರೆ ಅನ್ನೋದೇ ಈ ಹೊತ್ತಿನ ವಿಶೇಷ.

ಶ್ರೀಮುರಳಿ ಹುಟ್ಟು ಹಬ್ಬದ ಖುಷಿಯಲ್ಲಿದ್ದಾರೆ. ಡಿಸೆಂಬರ್ 17ರಂದು ಅವರ ಹುಟ್ಟು ಹಬ್ಬ. ಅದರ ಹಿನ್ನೆಲೆಯಲ್ಲಿ ಶ್ರೀಮುರಳಿ ಅವರ ಮೂರು ವಿಶೇಷತೆಗಳಿವೆ. ಅದು ಬೇರೇನೂ ಅಲ್ಲ. ಶ್ರೀಮುರಳಿ ಅವರ ಎರಡು ಹೊಸ ಪ್ರಾಜೆಕ್ಟ್ ಗಳು ಅನೌನ್ಸ್ ಆಗಲಿವೆ. ‘ಉಗ್ರಂ’, ‘ಮಫ್ತಿ’, ‘ಭರಾಟೆ’, ಎಂಬ ಅದ್ಧೂರಿ ಮತ್ತು ಯಶಸ್ವಿ ಸಿನಿಮಾಗಳನ್ನು ಕೊಟ್ಟಿರುವ ಶ್ರೀಮುರಳಿ ಅವರು, ಈಗ ‘ಮದಗಜ’ ಎಂಬ ಬಹು ನಿರೀಕ್ಷೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಅದರ ಬೆನ್ನಲ್ಲೇ ಎರಡು ದೊಡ್ಡ ಬ್ಯಾನರ್ ಗಳಲ್ಲಿ ತಯಾರಾಗುತ್ತಿರುವ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಈ ಕುರಿತು ಅವರ ಹುಟ್ಟು ಹಬ್ಬದ ದಿನದಂದು ಅನೌನ್ಸ್ ಆಗಲಿವೆ. ಆ ಎರಡು ಸಿನಿಮಾಗಳು ಬಿಗ್ ಬ್ಯಾನರ್ ಮೂಲಕ ತಯಾರಾಗಲಿವೆ ಎಂಬುದು ವಿಶೇಷ. ಅವರ ಹುಟ್ಟು ಹಬ್ಬದ ಮುನ್ನವೇ ಹೊಸ ಪ್ರಾಜೆಕ್ಟ್ ಗಳು  ಘೋಷಣೆಯಾಗುತ್ತಿವೆ. ಆದರೆ, ಯಾವ ಬ್ಯಾನರ್, ಯಾವ ನಿರ್ದೇಶಕರ ಸಿನಿಮಾಗಳು ಅನ್ನೋದು ಗೌಪ್ಯ. ಇನ್ನು  ಶ್ರೀಮುರಳಿ ಅವರ  ‘ಮದಗಜ’ ಚಿತ್ರದ ಟೀಸರ್ ಕೂಡ ಅವರ ಹುಟ್ಟುಹಬ್ಬದಂದು ರಿಲೀಸ್ ಆಗಲಿದೆ. ‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೀಸರ್ ರಿಲೀಸ್ ಮಾಡಲಿದ್ದಾರೆ.

ಅದೇನೆ ಇರಲಿ, ‘ಮದಗಜ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಬಾರಿಯ ಡಿಸೆಂಬರ್17ರ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರ ಹುಟ್ಟುಹಬ್ಬಕ್ಕೆ ತ್ರಿಬಲ್‌ ಧಮಾಕ. ಈಗಾಗಲೇ ಫಸ್ಟ್ ಲುಕ್ ಟೀಸರ್ ನ ವಿಡಿಯೊ ತುಣುಕು ರಿಲೀಸ್ ಆಗಿದ್ದು, ಎಲ್ಲೆಡೆ, ನಿರೀಕ್ಷೆ ಹುಟ್ಟಿಸಿದೆ.ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ನಿರ್ಮಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ದಿಗಂತ್‌ ಮಾರಿಗೋಲ್ಡ್‌ ಪೂರ್ಣ – ಮಾಸ್‌ ಕ್ರೇಜ್‌ ಸೃಷ್ಟಿಸಿರುವ ಚಿತ್ರ

ಹಾಡಿನ ಮೂಲಕ ಸಿನಿಮಾಗೆ ಕುಂಬಳಕಾಯಿ

ಗುಳಿಕೆನ್ನೆ ಹುಡುಗ ದಿಗಂತ್‌ ಅಭಿನಯದ “ಮಾರಿಗೋಲ್ಡ್” ಚಿತ್ರ ಪೂರ್ಣಗೊಂಡಿದೆ. ಇತ್ತೀಚೆಗೆ ಹಾಡೊಂದನ್ನು ಚಿತ್ರೀಕರಿಸುವ ಮೂಲಕ ಚಿತ್ರತಂಡ ಕುಂಬಳಕಾಯಿ ಒಡೆಯುವ ಮೂಲಕ ಶೂಟಿಂಗ್‌ ಮುಗಿಸಿದೆ. ಈಗಾಗಲೇ ಫಸ್ಟ್‌ಲುಕ್‌ ಪೋಸ್ಟರ್‌ ಕೂಡ ಬಿಡುಗಡೆಯಾಗಿ, ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು, ಚಿತ್ರತಂಡ “ಮಾರಿಗೋಲ್ಡ್‌” ಚಿತ್ರದ ಡಬ್ಬಿಂಗ್‌ ಕಾರ್ಯವನ್ನೂ ಬಹುತೇಕ ಮುಗಿಸಿದ್ದು, ನಾಯಕ ದಿಗಂತ್‌ ಭಾಗವಷ್ಟೇ ಬಾಕಿ ಉಳಿದಿದೆ. “ಮಾರಿಗೋಲ್ಡ್‌” ಕುತೂಹಲ ಹುಟ್ಟಿಸಿರುವುದಕ್ಕೆ ಕಾರಣ, ಶೀರ್ಷಿಕೆ ಮತ್ತು ಚಿತ್ರತಂಡ ಬಿಡುಗಡೆ ಮಾಡಿರುವ ಶೀರ್ಷಿಕೆ ಫಸ್ಟ್‌ಲುಕ್‌. ಶೀರ್ಷಿಕೆ ಕೇಳಿದವರಿಗೆ ಅದೊಂದು ಅಂಡರ್‌ವರ್ಲ್ಡ್‌ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಅದು ಅಂಡರ್‌ವರ್ಲ್ಡ್‌ ಸಿನಿಮಾನಾ ಅಥವಾ ರೌಡಿಸಂ ಕುರಿತಾದ ಕಥೆಯೇ ಎಂಬುದಕ್ಕೆ ಸಿನಿಮಾ ಬರುವ ತನಕ ಕಾಯಬೇಕು.


ಇನ್ನು, ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ನಿರ್ದೇಶನ ಮಾಡಿದ್ದಾರೆ. ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಹಾಗಂತ, ಅವರಿಗೆ ಅನುಭವ ಇಲ್ಲವೆಂದಲ್ಲ, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಕೆಲಸ ಮಾಡಿದ ಅನುಭವದ ಮೇಲೆ ಈಗ “ಮಾರಿಗೋಲ್ಡ್‌” ಹಿಂದೆ ನಿಂತಿದ್ದಾರೆ. ಇನ್ನು, ಚಿತ್ರವನ್ನು ರಘುವರ್ಧನ್‌ನಿರ್ಮಾಣ ಮಾಡಿದ್ದಾರೆ. ಇನ್ನು, ರಘುವರ್ಧನ್‌ಅವರು ಮೂಲತಃ ನಿರ್ದೇಶಕರಾಗಿದ್ದರೂ, ಅವರು ಹೊಸ ಪ್ರತಿಭಾವಂತ ಯುವ ನಿರ್ದೇಶಕ ರಾಘವೇಂದ್ರ ಎಂ.ನಾಯಕ್‌ಅವರಿಗೆ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅದಕ್ಕೆ ಕಾರಣ, ರಾಘವೇಂದ್ರ ಎಂ.ನಾಯಕ್‌ಅವರು ಮಾಡಿಕೊಂಡಿದ್ದ ಕಥೆ. ಕಥೆ ಚೆನ್ನಾಗಿದ್ದರಿಂದ, ಆ ಕಥೆಯನ್ನು ರಾಘವೇಂದ್ರ ನಾಯಕ್‌ಅವರೇ ನಿರ್ದೇಶಿಸಲಿ ಎಂಬ ಮನೋಭಾವದಿಂದಾಗಿ ರಘುವರ್ಧನ್‌, ಚಿತ್ರವನ್ನು ಅದ್ಧೂರಿಯಾಗಿಯೇ ನಿರ್ಮಿಸಿ, ಈಗ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ.


ಸದ್ಯಕ್ಕೆ “ಮಾರಿಗೋಲ್ಡ್‌” ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಅದಕ್ಕೆ ಕಾರಣ, ಎಲ್ಲೆಡೆ “ಮಾರಿಗೋಲ್ಡ್‌” ಕುರಿತು ಸಿಗುತ್ತಿರುವ ಮೆಚ್ಚುಗೆ. ಈ ಚಿತ್ರದ ಹೀರೋ ದಿಗಂತ್‌ ಅವರಿಗೆ ಇದೊಂದು ಹೊಸಬಗೆಯ ಚಿತ್ರವಂತೆ. ಅದರಲ್ಲೂ ದಿಗಂತ್‌ಮೊದಲ ಬಾರಿಗೆ ಈ ರೀತಿಯ ಪಾತ್ರ ನಿರ್ವಹಿಸಿದ್ದಾರೆ .ಇನ್ನು, ಬೆಂಗಳೂರು, ಸಕಲೇಶಪುರ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಇದೊಂದು ಪಕ್ಕಾ ಕ್ರೈಮ್‌ ಥ್ರಿಲ್ಲರ್‌ ಸಿನಿಮಾ ಆಗಿದ್ದು, ಸಂಗೀತಾ ಶೃಂಗೇರಿ ಚಿತ್ರದ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಸಂಪತ್‌ಕುಮಾರ್‌, ಕಾಕ್ರೋಚ್‌ ಸುಧಿ, ಯಶ್‌ಶೆಟ್ಟಿ, ರಾಜ್‌ ಬಲವಾಡಿ, ಗಣೇಶ್‌ರಾವ್‌ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕೆ.ಎಸ್.‌ಚಂದ್ರಶೇಖರ್‌ ಕ್ಯಾಮೆರಾ ಹಿಡಿದರೆ, ವೀರ್‌ ಸಮರ್ಥ್‌ಅವರ ಸಂಗೀತವಿದೆ. ಕೆ.ಎಂ.ಪ್ರಕಾಶ್‌ ಅವರ ಸಂಕಲನವಿದೆ. ರಘು ನಿಡುವಳ್ಳಿ ಅವರ ಸಂಭಾಷಣೆ ಬರೆದಿದಾರೆ. ಯೋಗರಾಜ್‌ಭಟ್‌, ವಿಜಯ್‌ ಭರಮಸಾಗರ ಸಾಹಿತ್ಯವಿದೆ.‌ ಸದ್ಯಕ್ಕೆ ಬಿಡುಗಡೆ ತಯಾರಿಯಲ್ಲಿ ಚಿತ್ರವಿದೆ. “ಮಾರಿಗೋಲ್ಡ್”‌ ಒಂದು ರೀತಿಯ ಮಾಸ್‌ ಕ್ರೇಜ್‌ ಹುಟ್ಟುಹಾಕಲು ಕಾರಣ, ಈ ಚಿತ್ರದ ಶೀರ್ಷಿಕೆ ಪೋಸ್ಟರ್.‌ ಇನ್ನು, ಈ ಶೀರ್ಷಿಕೆಯಡಿ ದಿಗಂತ್‌ ನಡೆಸುತ್ತಿರುವುದರಿಂದ ಅವರನ್ನಿಲ್ಲಿ ಬೇರೆ ರೀತಿಯಲ್ಲೇ ತೋರಿಸುವ ಪ್ರಯತ್ನ ಮಾಡಲಾಗಿದೆ ಎಂಬುದು ನಿರ್ದೇಶಕರ ಮಾತು. ಒಟ್ಟಾರೆ, “ಮಾರಿಗೋಲ್ಡ್‌” ಪಕ್ಕಾ ಸಿನಿಪ್ರೇಮಿಗಳಿಗಂತೂ ಒಂದೊಳ್ಳೆಯ ಮನರಂಜನಾತ್ಮಕ ಸಿನಿಮಾ ಆಗಿ ಹೊರಬರಲಿದೆ ಎಂಬ ಗ್ಯಾರಂಟಿ ಕೊಡುತ್ತಾರೆ ನಿರ್ಮಾಪಕ ರಘುವರ್ಧನ್.

Categories
ಸಿನಿ ಸುದ್ದಿ

ಹುಡುಗಿಯ ಅಪಹರಣದ ಹಿಂದೆ ರೋಚಕತೆ! ಹಾಫ್‌ ಮೊದಲ ಹಂತದ ಚಿತ್ರೀಕರಣ ಪೂರ್ಣ

ಹೊಸ ಕಥಾಹಂದರದ ಮೇಲೆ ಭವ್ಯ ಭರವಸೆ

 

ಕೆಲವು ಸಿನಿಮಾಗಳೇ ಹಾಗೆ. ಒಮ್ಮೆ ಶುರುವಾದರೆ, ಯಾವುದೇ ಅಡೆತಡೆಗಳಿಲ್ಲದೆ ಸರಾಗವಾಗಿ ಚಿತ್ರೀಕರಣಗೊಳ್ಳುತ್ತವೆ. ಆ ಸಾಲಿಗೆ “ಹಾಫ್”‌ ಚಿತ್ರವೂ ಸೇರಿದೆ. ಹೌದು, ಈ ಹಿಂದೆ “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು” ಸಿನಿಮಾ ಮೂಲಕ ಸುದ್ದಿಯಾಗಿದ್ದ ನಿರ್ದೇಶಕ ಕಮ್‌ ಹೀರೋ ಲೋಕೇಂದ್ರ ಸೂರ್ಯ ಈಗ “ಹಾಫ್‌” ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿದ್ದಾರೆ.

ಹೌದು, ಈಗಾಗಲೇ ಅದ್ಧೂರಿ ಫೋಟೋ ಶೂಟ್ ನಂತರ ಶೂಟಿಂಗ್ ನಡೆಸಿದ್ದ “ಹಾಫ್” ತಂಡ, ಈಗ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಈ ಹಂತದ ಚಿತ್ರೀಕರಣದಲ್ಲಿ ಥ್ರಿಲ್ಲರ್ ಮಂಜು ಅವರ ಸಾಹಸ ಸಂಯೋಜನೆಯಲ್ಲಿ ಒಂದು ಫೈಟ್ ಕೂಡಾ ಚಿತ್ರೀಕರಣಗೊಂಡಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆದ ಹದಿನೈದು ದಿನಗಳ ಚಿತ್ರೀಕರಣದಲ್ಲಿ ಹಲವಾರು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಶೂಟಿಂಗ್‌ ವೇಳೆ ಹೀರೋ ಜೊತೆಗಿದ್ದ ಬೇಗಂ ಎಂಬ ಹುಡುಗಿಯನ್ನು ಅಪಹರಿಸಿದಾಗ, ನಂತರ ನಡೆಯುವ ಚೇಸಿಂಗ್‌ ದೃಶ್ಯವನ್ನು ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರು, ಚಿತ್ರೀಕರಿಸಿದ್ದಾರೆ. ಅಂದಹಾಗೆ, ಈ ದೃಶ್ಯದಲ್ಲಿ ಸುಮಾರು ನೂರೈವತ್ತಕ್ಕೂ ಹೆಚ್ಚು ಕಲಾವಿದರು ಪಾಲ್ಗೊಂಡಿದ್ದರು.


ಆ ಸಾಹಸ ದೃಶ್ಯ ಕುರಿತು ಮಾತನಾಡುವ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು, “ಇದುವರೆಗೆ ಹೊಸಬರ ನೂರಾರು ಸಿನಿಮಾಗಳಿಗೆ ಸಾಹಸ ಸಂಯೋಜನೆ ಮಾಡಿದ್ದೇನೆ. ಆದರೆ ಲೋಕೇಂದ್ರ ಅವರ ತಂಡವನ್ನು ನೋಡಿದರೆ ನಿಜಕ್ಕೂ ಇವರೆಲ್ಲಾ ಹೊಸಬರಾ ಎನ್ನುವ ಅನುಮಾನ ಮೂಡುತ್ತದೆ. ಸಾಹಸದ ದೃಶ್ಯಗಳನ್ನು ಚಿತ್ರೀಕರಿಸುವುದು ಕಷ್ಟದ ಕೆಲಸ. ಅನುಭವಿಗಳಿದ್ದರೆ ಮಾತ್ರ ಸರಾಗವಾಗಿ ಮತ್ತು ಅಂದುಕೊಂಡಂತೆ ಶಾಟ್ಸ್ ಕಂಪೋಸ್ ಮಾಡಲು ಸಾಧ್ಯ. ಹೊಸಬರು ಅಂದ ಕೂಡಲೇ ಅವರಿಗೆ ಎಲ್ಲವನ್ನೂ ಹೇಳಿಕೊಟ್ಟು, ಸಮಯ ತೆಗೆದುಕೊಂಡು ಕೆಲಸ ಮಾಡಬೇಕಾಗುತ್ತದೆ. ಲೋಕೇಂದ್ರ ಮತ್ತವರ ತಂಡದ ಕಾರ್ಯ ವೈಖರಿ ಕಂಡು ಇವರೆಲ್ಲ ಹತ್ತಾರು ಸಿನಿಮಾಗಳಲ್ಲಿ ಕೆಲಸ ಮಾಡಿ ಬಂದಿದ್ದಾರೇನೋ ಅನ್ನಿಸಿಬಿಟ್ಟಿತು. ಒಂದು ದಿನಕ್ಕೆ ಐವತ್ತೆರಡು ಓಕೆ ಟೇಕ್‌ ಶೂಟ್ ಮಾಡಿದ್ದೇನೆ. ಹೊಸದಾಗಿ ಚಿತ್ರರಂಗಕ್ಕೆ ಬಂದಿರುವವರಿಂದ ಈ ಮಟ್ಟಿಗಿನ ಕೆಲಸ ತೆಗೆಸಿಕೊಳ್ಳುವುದು ನಿಜಕ್ಕೂ ದಾಖಲೆʼ ಎಂಬುದು ಥ್ರಿಲ್ಲರ್ ಮಂಜು ಮಾತು.


ವರ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ʻರೆಡ್ ಅಂಡ್ ವೈಟ್ ಮ್ಯಾನ್ʼ ಎಂದು ದಾಖಲೆ ನಿರ್ಮಿಸಿರುವ ರೆಡ್ ಅಂಡ್ ವೈಟ್ ಸವೆನ್ ರಾಜ್ ಮತ್ತು ರಾಜು ಕಲ್ಕುಣಿ ಖಳನಟರಾಗಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆರ್.ಡಿ. ಎಂಟರ್ ಪ್ರೈಸಸ್, ರಾಜು ಕಲ್ಕುಣಿ ಅವರ ಬ್ಯಾನರ್ ಮೂಲಕ ಡಾ. ಪವಿತ್ರ ಆರ್. ಪ್ರಭಾಕರ್ ರೆಡ್ಡಿ ನಿರ್ಮಿಸುತ್ತಿರುವ ʻಹಾಫ್ʼ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಟನಾಗಿ ನಟಿಸುತ್ತಿದ್ದಾರೆ. ಮಲ್ಲಿಕಾರ್ಜುನ್ ಬಿ.ಆರ್. ಕ್ಯಾಮೆರಾ ಹಿಡಿದರೆ, ಯುಡಿವಿ ವೆಂಕಿ ಸಂಕಲನವಿದೆ. ರಾಕಿ ಸೋನು ಸಂಗೀತ, ಹಿನ್ನೆಲೆ ಸಂಗೀತ, ಡಾ. ಥ್ರಿಲ್ಲರ್ ಮಂಜು ಸಾಹಸ, ಋತು ಚೈತ್ರ ಅವರ ವಸ್ತ್ರಾಲಂಕಾರ ಹಾಫ್ ಚಿತ್ರಕ್ಕಿದೆ. ಆಸಿಯಾ, ಅಥಿರಾ, ರಾಜು ಕಲ್ಕುಣಿ, ಡಾ. ಪವಿತ್ರಾ ಆರ್. ಪ್ರಭಾಕರ್ ರೆಡ್ಡಿ, ರಕ್ಷಾ, ರೆಡ್ ಅಂಡ್ ವೈಟ್ ಸವೆನ್ ರಾಜ್, ಸಿವಿಜಿ ಚಂದ್ರು, ರೋಹಿಣಿ ಕೆ. ರಾಜ್, ಮೋಹನ್ ನೆನಪಿರಲಿ ಇತರರು ನಟಿಸಿದ್ದಾರೆ. ಕೃಷ್ಣ ಸಹ ನಿರ್ದೇಶನ, ಶ್ರೀವತ್ಸ, ಭರತ್, ಧೃವಿನ್, ಶಂಕರ್, ನವೀನ್ ಚಲ, ಮನೋಜ್ ಆರ್, ಪುನೀತ್ ಎಲ್, ವಿಜಯ್ ಚಂದ್ರ ಸಹಾಯಕ ನಿರ್ದೇಶನವಿದೆ. ಶಿವಕಾಂತ್ ಕಲಾ ನಿರ್ದೇಶನವಿದೆ. ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರು ಇತರ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Categories
ಸಿನಿ ಸುದ್ದಿ

ಮದಗಜನ ಸದ್ದು ಜೋರು – ಫಸ್ಟ್ ಲುಕ್ ರಿಲೀಸ್ ಮಾಡ್ತಾರೆ ಪ್ರಶಾಂತ್ ನೀಲ್

ಬರ್ತ್ ಡೇಗೆ ಸ್ಪೆಷಲ್ ಗಿಫ್ಟ್!

 

ಶ್ರೀಮರಳಿ ಅಭಿನಯದ ‘ಮದಗಜ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಡಿಸೆಂಬರ್17ರಂದು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರ ಹುಟ್ಟುಹಬ್ಬ. ಅಂದು ‘ಮದಗಜ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಲಿದೆ. ಆದರೆ ಫಸ್ಟ್ ಲುಕ್ ಟೀಸರ್ ರಿಲೀಸ್ ಯಾರು ಮಾಡಲಿದ್ದಾರೆ ಎಂಬುದು ಗೌಪ್ಯವಾಗಿತ್ತು. ಈಗ ಅದಕ್ಕೆ ಉತ್ತರ ಸಿಕ್ಕಿದೆ.

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ದೇಶಕ ಎಂದೇ ಹೆಸರಾಗಿರುವ ‘ಉಗ್ರಂ’, ‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಮದಗಜ’ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡುವ ಮೂಲಕ ಶುಭ ಹಾರೈಸಲಿದ್ದಾರೆ.
ಈ ವಿಷಯವನ್ನು ಚಿತ್ರತಂಡ ಈಗಾಗಲೇ ಹಂಚಿಕೊಂಡಿದೆ. ಈ ವಿಷಯವನ್ನು ಸ್ವತಃ ನಟ ಶ್ರೀ ಮುರಳಿ ಅವರೇ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


‘ನನ್ನ ಗಾಡ್ ಫಾದರ್ ಪ್ರಶಾಂತ್ ನೀಲ್ ಅವರು ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಟೀಸರ್ ಬಿಡುಗಡೆಗೆ ಬೆರೆಳೆಣಿಕೆ ದಿನಗಳು ಬಾಕಿ’ ಎಂದು ಬರೆದುಕೊಂಡಿದ್ದಾರೆ.
ಈಗಾಗಲೇ ಫಸ್ಟ್ ಲುಕ್ ಟೀಸರ್ ನ ವಿಡಿಯೊ ತುಣುಕು ರಿಲೀಸ್ ಆಗಿದ್ದು, ಎಲ್ಲೆಡೆ, ನಿರೀಕ್ಷೆ ಹುಟ್ಟಿಸಿದೆ.
ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ನಿರ್ಮಿಸುತ್ತಿದ್ದಾರೆ.

error: Content is protected !!