Categories
ಸಿನಿ ಸುದ್ದಿ

ಸುದೀಪ್ ಫ್ಯಾನ್ಸ್ ಕ್ರಿಕೆಟ್ ಪಂದ್ಯಾವಳಿಗೆ ದಿನಗಣನೆ-

ಡಿಸೆಂಬರ್ 25 ರಿಂದ ಮೂರು ದಿನಗಳ ಹಬ್ಬ

ಸಿನಿಮಾ ಮಂದಿಗೂ ಮತ್ತು ಈ ಕ್ರಿಕೆಟ್ ಗೂ ಅವಿನಾಭಾವ ಸಂಬಂಧ. ಈಗಾಗಾಲೇ ಸೆಲಿಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಕೂಡ ನಡೆದಿದೆ. ಈಗಲೂ ನಡೆಯುತ್ತಿದೆ. ಈಗ ಮತ್ತೆ ಸಿನಿಮಾ ಮಂದಿ ಸೇರಿ ಕ್ರಿಕೆಟ್‌ ಹಬ್ಬ ಮಾಡಲು ತಯಾರಿ ನಡೆಸಿದ್ದಾರೆ.


ಹೌದು 2020ರ ಡಿಸೆಂಬರ್ 25,26 ಮತ್ತು 27ರಂದು ಕೆ.ಎಸ್.ಪಿ.ಎಲ್. ಸೀಸನ್ 2 ಶುರುವಾಗಲಿದೆ.
ಈ ಕ್ರಿಕೆಟ್ ಪಂದ್ಯಾವಳಿ ಅಭಿಮಾನಿಗಳಿಂದ ಅಭಿಮಾನಿಗಳಿಗೋಸ್ಕರ ನಡೆಯಲಿದೆ ಅನ್ನೋದು ವಿಶೇಷ.
ಮೂರು ದಿನಗಳ ಕಾಲ ನಡೆಯಲಿರುವ ಈ ಟೆನ್ನಿಸ್ ಬಾಲ್ ಟೂರ್ನಮೆಂಟ್ ಭಾರತ ಸರ್ಕಾರದ ಕೊವೀಡ್-19 ನಿಯಮಗಳ ಅಡಿಯಲ್ಲಿ ಆಯೋಜನೆ ಮಾಡಲಾಗಿದೆ ಎಂಬುದು ಗಮನಕ್ಕಿರಲಿ. ಐಪಿಎಲ್ ರೀತಿಯೇ ಅದ್ದೂರಿಯಾಗಿ ಈ ಪಂದ್ಯಾವಳಿ ನಡೆಯಲಿದೆ.


ರಾಜ್ಯದ ಪ್ರತಿ ಜಿಲ್ಲೆಯಿಂದಲೂ ಒಂದೊಂದು ತಂಡ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ.
ಈ ಪಂದ್ಯಾವಳಿಯ ಇನ್ನೊಂದು ವಿಶೇಷ ಅಂದರೆ, ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಮಾತ್ರ ಭಾಗವಹಿಸಲಿದ್ದಾರೆ.


ಇದರಲ್ಲಿ ಆಕರ್ಷಕ ಟ್ರೋಫಿಗಳು, ನಗದು ಬಹುಮಾನ ಮತ್ತು ಪ್ರೊತ್ಸಾಹದ ಬಹುಮಾನಗಳಿವೆ.
ಇದೆಲ್ಲಕ್ಕಿಂತಲೂ ಮತ್ತೊಂದು
ವಿಶೇಷ ಅಂದರೆ ಈ ಸಲದ ಪಂದ್ಯಾವಳಿಗೆ ಮಹಿಳಾ ಅಭಿಮಾನಿಗಳ ಎರಡು ತಂಡದ‌ ಮೂಲಕ ಚಾಲನೆ ಸಿಗಲಿದೆ.ಅಂತ್ಯದ ಪಂದ್ಯಾವಳಿ
ಆಯೋಜಕರು ಮತ್ತು ಸಿನಿಮಾ ಪತ್ರಕರ್ತರ ನಡುವೆ ನಡೆಯಲಿದೆ.


ಕನ್ನಡ ಚಿತ್ರರಂಗದ ಕಲಾವಿದರು ಕರ್ನಾಟಕದ ಪ್ರಮುಖ ಕ್ರಿಕೆಟ್ ಆಟಗಾರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಪಂದ್ಯಾವಳಿ ಕಿಚ್ಚ ಸುದೀಪ ಅವರ ಅಭಿಮಾನಿ ಅಪಘಾತದಲ್ಲಿ ಮೃತಪಟ್ಟ ನಂದೀಶ್ ಅವರ ಎರಡನೇ ವರ್ಷದ ಸ್ಮರಣಾರ್ಥ ನಡೆಯಲಿದೆ ಎಂಬುದು ವಿಶೇಷ. ಇನ್ನು ಈ ಪಂದ್ಯಾವಳಿಯು( ಕೆ.ಎಸ್.ಸಿ.ಎ) ಬಾದ್ ಷಾ ಕಿಚ್ಚ ಸುದೀಪ ರವರ ಸಂಸ್ಥೆ “ಕಿಚ್ಚ ಸುದೀಪ ಕ್ರಿಕೆಟ್ ಅಸೋಸಿಯೇಷನ್” ಮೂಲಕ ನಡೆಯಲಿದ್ದು,
ನೆಲಮಂಗಲದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಮೈದಾನದಲ್ಲಿ ತಯಾರಿ ನಡೆಯಲಿದೆ.

Categories
ಸಿನಿ ಸುದ್ದಿ

ವಿಷ್ಣು ಸರ್ ಬಗ್ಗೆ ಅವಹೇಳನ ಮಾತು; ವಿಜಯ್ ರಂಗರಾಜು ಕ್ಷಮೆಗೆ ಶ್ರೀಮುರಳಿ ಒತ್ತಾಯ

ವಿಷ್ಣು ಸರ್ ಬಗ್ಗೆ ಮಾತಾಡಿದ್ದು ಬೇಸರ ತಂದಿದೆ

 

ಕನ್ನಡ ಚಿತ್ರರಂಗದ ಮೇರು ನಟ
ಡಾ.ವಿಷ್ಣುವರ್ಧನ್ ಅವರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಕನ್ನಡ ಚಿತ್ರರಂಗವೇ ಕಿಡಿಕಾರಿದೆ. ಜಗ್ಗೇಶ್, ಸುದೀಪ್, ಪುನೀತ್ ರಾಜ್ ಕುಮಾರ್, ಗಣೇಶ್ ಸೇರಿದಂತೆ ಹಲವರು ಟ್ವೀಟ್ ಮೂಲಕ ವಿಜಯ್ ರಂಗರಾಜು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಅಭಿಮಾನಿಗಳು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ನಟ ಶ್ರೀಮರಳಿ ಕೂಡ ಟ್ವೀಟ್ ಮೂಲಕ ‘ಆ ನಟ ಕ್ಷಮೆ ಕೇಳಬೇಕು’ ಎಂದಿದ್ದಾರೆ.


ತಮ್ಮ ಟ್ವೀಟ್ ಖಾತೆಯಲ್ಲಿ ಶ್ರೀಮುರಳಿ ‘ಯಾವುದೇ ಭಾಷೆಯ ಕಲಾವಿದ ಇರಲಿ. ಅವರು ಕಲಾವಿದರೇ. ಕಲೆಗೆ ಭಾಷೆಯ ಬೇಧ ಭಾವ ಇಲ್ಲ. ಎಲ್ಲರೂ ಕಲೆಯನ್ನು ಪ್ರೀತಿಸುವ ಮನಸ್ಸುಳ್ಳವೆರೆ. ನಮ್ಮ ಕನ್ನಡ ಚಿತ್ರರಂಗದ ಮೇರು ನಟ ಡಾ.ವಿಷ್ಣು ಸರ್ ಬಗ್ಗೆ ಆ ಭಾಷೆಯ ಕಲಾವಿದ ಹಾಗೆಲ್ಲ ಮಾತನಾಡಿದ್ದು ಬೇಸರ ತಂದಿದೆ. ಅವಹೇಳನವಾಗಿ ಮಾತನಾಡಿರುವ ಆ ಕಲಾವಿದ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು ‘ಎಂದು ಹೇಳಿದ್ದಾರೆ.
ಹಲವು ವರ್ಷಗಳ ಹಿಂದೆ ಪ್ರಭಾಕರ್ ಅಭಿನಯದ ‘ ‘ಮುತ್ತೈದೆ ಭಾಗ್ಯ’ ಚಿತ್ರದಲ್ಲಿ ಡಾ.ವಿಷ್ಣುವರ್ಧನ್ ಅವರು ಅತಿಥಿಯಾಗಿ ನಟಿಸಿದ್ದರು. ಆ ಚಿತ್ರದಲ್ಲಿ ತೆಲುಗು ನಟ ವಿಜಯ್ ರಂಗರಾಜು ಕೂಡ ನಟಿಸಿದ್ದರು. ಚಿತ್ರೀಕರಣ ವೇಳೆ, ನಡೆದ ಒಂದು ಘಟನೆ ಬಗ್ಗೆ, ಇತ್ತೀಚೆಗೆ ಮಾತಾಡಿದ್ದರು. ವಿಷ್ಣುವರ್ಧನ್ ಅವರ ಕುರಿತು ಅವಹೇಳನವಾಗಿ ಮಾತಾಡಿದ್ದ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಕ್ರಮಕ್ಕೂ ಒತ್ತಾಯಿಸಲಾಗಿದೆ.

 

Categories
ಸಿನಿ ಸುದ್ದಿ

ತೆಲುಗು ನಟ ವಿಜಯ್‌ ರಂಗರಾಜು ವಿರುದ್ದ ಕಿಡಿ ಕಾರಿದ ಕಿಚ್ಚ

ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಇರಲಿ- ಸುದೀಪ್‌ ಖಡಕ್ ವಾರ್ನಿಂಗ್

-‌ವಿಷ್ಣುವರ್ಧನ್‌ ಬಗ್ಗೆ ಮಾತಾಡಿದ್ದಕ್ಕೆ ಕನ್ನಡಿಗರ ಆಕ್ರೋಶ

ವಾಣಿಜ್ಯ ಮಂಡಳಿಗೆ ಅಭಿಮಾನಿಗಳ ದೂರು

ತೆಲುಗು ನಟ ವಿಜಯರಂಗರಾಜು ಡಾ.ವಿಷ್ಣುವರ್ಧನ್‌ ಅವರ ಕುರಿತಂತೆ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಒಳಗಾಗಿದ್ದು, ಕನ್ನಡ ಚಿತ್ರರಂಗವನ್ನು ಕೆರಳಿಸಿದೆ. ಅಷ್ಟೇ ಅಲ್ಲ, ಕನ್ನಡ ಚಿತ್ರಂಗದ ಕಲಾವಿದರು, ತಾಂತ್ರಿಕವರ್ಗದವರು, ಅಪಾರ ಅಭಿಮಾನಿಗಳು ನಟ ವಿಜಯರಂಗರಾಜು ವಿರುದ್ಧ ಗುಡುಗಿದ್ದಾರೆ. ನಟರಾದ ಜಗ್ಗೇಶ್‌, ಪುನೀತ್‌ ರಾಜಕುಮಾರ್‌, ಸುದೀಪ್‌ ಸೇರಿದಂತೆ ಹಲವರು ಟ್ವೀಟ್‌ ಮಾಡಿ, ವಿಜಯ ರಂಗರಾಜು ಅವರ ವಿರುದ್ಧ ಕಿಡಿಕಾರಿದ್ದಾರೆ. ಹಲವರು ವಿಜಯರಂಗರಾಜು ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ನಡೆದದ್ದೇನು?
ಹಲವು ವರ್ಷಗಳ ಹಿಂದೆ “ಮುತ್ತೈದೆ ಭಾಗ್ಯ” ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಆ ಚಿತ್ರದಲ್ಲಿ ಪ್ರಭಾಕರ್‌ ಪ್ರಮುಖ ಅಕರ್ಷಣೆಯಾಗಿದ್ದರು. ವಿಷ್ಣುವರ್ಧನ್‌ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಆ ಸಮಯದಲ್ಲಿ ಒಂದು ಘಟನೆ ನಡೆದಿತ್ತು. ವಿಷ್ಣುವರ್ಧನ್‌ ಅವರು ನಟ ವಿಜಯರಂಗರಾಜು ಅವರನ್ನು ಹೊರಗೆ ಕಳುಹಿಸಿ ಎಂದಿದ್ದರು. ಯಾಕೆ ಹಾಗೆ ಹೇಳಿದ್ದರು ಎಂಬುದಕ್ಕೂ ಕಾರಣವಿತ್ತು. ಆಗಿನ ಘಟನೆ ಬಗ್ಗೆ ನಟ ವಿಜಯರಂಗರಾಜು ಅವರು, ಇತ್ತೀಚೆಗೆ ವಿಷ್ಣುವರ್ಧನ್‌ ಬಗ್ಗೆ ತುಂಬಾ ಕೆಟ್ಟದ್ದಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿದೆ. ಆ ವಿರುದ್ಧ ಕನ್ನಡಿಗರು ಧ್ವನಿ ಎತ್ತಿದ್ದು, ಎಲ್ಲೆಡೆ, ಆಕ್ರೋಶ ವ್ಯಕ್ತವಾಗುತ್ತಿದೆ. ಡಾ.ವಿಷ್ಣುವರ್ಧನ್‌ ಅವರು ಆದರ್ಶ ವ್ಯಕ್ತಿ. ಅವರ ಬಗ್ಗೆ ಈವರೆಗೆ ಯಾರೂ ಮಾತಾಡಿಲ್ಲ. ಆದರೆ, ತೆಲುಗು ನಟ ಹಾಗೆಲ್ಲಾ ಮಾತಾಡಿದ್ದಾರೆ. ಇದು ಸಹಜವಾಗಿಯೇ ಕನ್ನಡ ಸ್ಟಾರ್‌ ನಟರಿಗೂ ನೋವಾಗಿದೆ. ಹಾಗಾಗಿ ಒಂದಷ್ಟು ಮಂದಿ ಟ್ವೀಟ್‌ ಮಾಡಿದರೆ, ಒಂದಷ್ಟು ಜನರು ವಿಡಿಯೋ ಮಾಡಿದ್ದಾರೆ. ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವಿಜಯರಂಗರಾಜು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದಾರೆ.


ಅತ್ತ, ಸುದೀಪ್‌ ವಿಡಿಯೋ ಮೂಲಕ ವಿಜಯ್‌ ರಂಗರಾಜುಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಪುನೀತ್‌ ಕೂಡ ಟ್ವೀಟ್‌ ಮಾಡಿದ್ದು, “ಒಬ್ಬ ಕಲಾವಿದನಾಗಬೇಕಾದರೆ, ಅವನಿಗರಬೇಕಾದ ಮೊದಲ ಅರ್ಹತೆ ತನ್ನ ಸಹೋದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿ ತೋರುವುದು. ಯಾವುದೇ ಭಾಷೆ ನಟರಾದರೂ, ಗೌರವ ಮೊದಲು. ನಮ್ಮ ನಾಡಿನ ಮೇರು ನಟರಾದ ವಿಷ್ಣು ಸರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವ ಕಲಾವಿದ ಕ್ಷಮೆ ಕೇಳಿ ತಮ್ಮ ಮಾತನ್ನು ಹಿಂಪಡೆಯಬೇಕು. ಭಾರತೀಯ ಚಿತ್ರಂರಂಗ ನಮ್ಮ ಮನೆ. ಎಲ್ಲಾ ಕಲಾವಿದರು ಒಂದು ಕುಟುಂಬ ಕಲೆಗೆ, ಕಲಾವಿದರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ. ಮೊದಲು ಮಾನವನಾಗು” ಎಂದು ಟ್ವೀಟ್‌ ಮಾಡಿದ್ದಾರೆ.

Categories
ಸಿನಿ ಸುದ್ದಿ

ಅಭಿಮಾನಿಗಳ ಬಯಕೆ ಇದು- ದಚ್ಚು-ಕಿಚ್ಚನ ಜೋಡಿ ಅಚ್ಚು-ಮೆಚ್ಚು

ಈ ಸ್ಟಾರ್ಸ್‌ ಒಂದಾಗಬೇಕೆಂಬ ಹಂಬಲ

ಅಭಿಮಾನಿಗಳ ಅಭಿಮಾನವೇ ಅಂಥದ್ದು. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ದರ್ಶನ್‌ ಹಾಗೂ ಸುದೀಪ್‌ ಅಭಿಮಾನಿಗಳಿಗೆ ತಮ್ಮ ಹೀರೋಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಇಬ್ಬರೂ ಒಳ್ಳೆಯ ಗೆಳೆಯರಾಗಿದ್ದರು. ಆ ಬಳಿಕ ಇಬ್ಬರ ನಡುವೆ ಮುನಿಸು ಶುರುವಾಯಿತು. ಅದಾದ ಮೇಲೆ ಅವರವರ ಅಭಿಮಾನಿಗಳ ಮಧ್ಯೆಯೂ ಬಿರುಕು ಉಂಟಾಯಿತು. ಇದನ್ನು ಬಳಸಿಕೊಂಡ ಅನೇಕರು ವಿವಾದ ಹುಟ್ಟುಹಾಕುವ ಪ್ರಯತ್ನವನ್ನೂ ಮಾಡಿದರು. ಆ ನಂತರ ಅಭಿಮಾನಿಗಳ ಮಧ್ಯೆ ಆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಈ ಇಬ್ಬರು ನಟರು ಮುನಿಸು ಬಿಟ್ಟು, ಒಂದಾಗಬೇಕು ಅನ್ನೋದು ಹಲವರ ಬಯಕೆ. ಅದು ಚಿತ್ರರಂಗದ್ದೂ ಹೌದು, ಅಭಿಮಾನಿಗಳದ್ದೂ ಹೌದು. ಆದರೆ, ಅದೇನೋ ಗೊತ್ತಿಲ್ಲ. ಈ ಇಬ್ಬರು ನಟರು ಮೊದಲಿನಂತೆ ಇರಬೇಕೆಂಬ ಆಸೆ ಒಂದಷ್ಟು ಜನರಿಗಂತೂ ಇದೆ.

ಈ ನಿಟ್ಟಿನಲ್ಲಿ ಕಲಾವಿದ ಕರಣ್‌ ಆಚಾರ್ಯ ಅವರು ರಾಮ ಲಕ್ಷ್ಮಣರಂತೆ ಹೋಲುವ ಕಲಾಕೃತಿ ರಚಿಸಿದ್ದಾರೆ. ಅದೀಗ “ಚಾಲೆಂಜಿಂಗ್‌ ಸ್ಟಾರ್‌ ದರ್ಶನ್-ಅಭಿನಯ ಚಕ್ರವರ್ತಿ ಕಿಚ್ಚ” ಫ್ಯಾನ್ಸ್‌ ಗ್ರೂಪ್‌ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಕರಣ್‌ ಆಚಾರ್ಯ ಅವರ ಕಲಾಕೃತಿಯನ್ನು ಶೇರ್‌ ಮಾಡಿದ್ದಾರೆ. “ಈ ಅದ್ಭುತ ಕಲೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಕರಣ್‌ ಆಚಾರ್ಯ ಬ್ರದರ್‌, ನಮ್ಮ ದಚ್ಚು ಬಾಸ್, ಕಿಚ್ಚ ಬಾಸ್ ಇಬ್ಬರೂ ರಾಮ ಲಕ್ಷ್ಮಣ, ಸೂರ್ಯ, ಚಂದ್ರ ಇದ್ದ ಹಾಗೆ. ನಮ್ಮಂತಹ ಅಭಿಮಾನಿಗಳಿಗೆ ದೇವರುಗಳು” ಎಂದು ಬರೆದುಕೊಳ್ಳುವ ಮೂಲಕ ಅಭಿಮಾನದ ಪ್ರೀತಿ ತೋರಿದ್ದಾರೆ.


ಅದೇನೆ ಇರಲಿ, ಅಭಿಮಾನಿಗಳಿಗೆ ತಮ್ಮ ಸ್ಟಾರ್‌ಗಳು ಜೊತೆಯಾಗಬೇಕೆಂಬ ಬಯಕೆ ಇದೆ. ಇನ್ನೇನಿದ್ದರೂ ಈ ಸ್ಟಾರ್‌ಗಳು ಒಂದಾಗುವ ಮೂಲಕ ಮತ್ತೆ ಕನ್ನಡ ಚಿತ್ರರಂಗದಲ್ಲಿ ಉತ್ಸಾಹ ಮೂಡಿಸಬೇಕಿದೆ. ಕೊರೊನೊ ಸಮಸ್ಯೆ ಬಳಿಕ ಚಿತ್ರರಂಗ ಈಗ ಮೆಲ್ಲನೆ ಚೇತರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸ್ಟಾರ್‌ಗಳು ಕೂಡ ಒಂದಾಗುವ ಮೂಲಕ ತಮ್ಮ ಸಿನಿಮಾಗಳನ್ನು ಬೇಗನೇ ಬಿಡುಗಡೆ ಮಾಡಿಸುವ ಮೂಲಕವಾದರೂ, ಚೈತನ್ಯ ತುಂಬುವ ಕೆಲಸ ಮಾಡಬೇಕಿದೆ.

Categories
ಸಿನಿ ಸುದ್ದಿ

ಸಲಗ ಶಾಸನ ಬರೆದ ದುನಿಯಾ ಅಭಿಮಾನಿ! ರಿಲೀಸ್ ಮೊದಲೇ ಇತಿಹಾಸದ ಬರಹ

ಸಲಗ ತಂಡಕ್ಕೆ‌ಹೆಚ್ಚಿದ ಸಂಭ್ರಮ…

ಅಭಿಮಾನ ಅನ್ನೋದೇ ಹಾಗೆ. ಒಂದೊಂದ್ ಸಲ ತುಂಬಾನೇ ಮೆಚ್ಚಿಸುತ್ತೆ, ಅತಿಯಾಗಿ ಪ್ರೀತಿಸುವಂತೆ ಮಾಡುತ್ತೆ.
ಇಲ್ಲೀಗ ಹೇಳ ಹೊರಟಿರುವ ವಿಷಯ, ‘ದುನಿಯಾ’ ವಿಜಯ್ ಅವರ ಅಪ್ಪಟ ಅಭಿಮಾನಿಯೊಬ್ಬರ ಕುರಿತು. ಈಗಾಗಲೇ ಅನೇಕ ಸ್ಟಾರ್ ನಟರ ಬೆರಳೆಣಿಕೆಯಷ್ಟು ಅಭಿಮಾನಿಗಳು ಒಂದಲ್ಲ ಒಂದು ಸುದ್ದಿಯಲ್ಲಿದ್ದಾರೆ. ಆ ಸಾಲಿಗೆ ಈಗ ‘ದುನಿಯಾ’ ವಿಜಯ್ ಅಭಿಮಾನಿಯೂ ಸೇರಿದ್ದಾರೆ.

ಇಷ್ಟಕ್ಕೂ ಆ ಅಭಿಮಾನಿ ಬೇರಾರೂ ಅಲ್ಲ, ವೀರೇಶ್ ಆಚಾರ್. ಇವರ ಬಗ್ಗೆ ಇಷ್ಟೊಂದು ಪೀಠಿಕೆ ಯಾಕೆಂದರೆ, ಯಾರು ಮಾಡದೇ ಇರುವ ಒಂದು ಕೆಲಸವನ್ನ ಈ ವೀರೇಶ್ ಆಚಾರ್ ಮಾಡಿದ್ದಾರೆ. ಇವರು ‘ದುನಿಯಾ’ ವಿಜಯ್ ಅವರ ಅಪ್ಪಟ ಅಭಿಮಾನಿ. ಅಷ್ಟಕ್ಕೂ ವೀರೇಶ್ ಆಚಾರ್ ಮಾಡಿದ್ದೇನ್ ಗೊತ್ತಾ?

ಎಲ್ಲರಿಗೂ ಗಿತ್ತಿರುವಂತೆ ‘ದುನಿಯಾ’ ವಿಜಯ್ ಇದೇ ಮೊದಲ ಸಲ ನಿರ್ದೇಶನ ಮಾಡಿದ್ದಾರೆ. ಅವರ ಮೊದಲ ಚಿತ್ರ ‘ಸಲಗ’ ರಿಲೀಸ್ ಗೂ ಮೊದಲೇ ಸೆನ್ಸೇಷನ್ ಸೃಷ್ಟಿಸಿದೆ. ಈ ಚಿತ್ರದ ಫಸ್ಟ್ ಲುಕ್, ಮೋಷನ್ ಪೋಸ್ಟರ್, ಸಾಂಗ್ ಗೆ ಈಗಾಗಲೇ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಶಾಸನ ರಚನೆ ಮಾಡಲಾಗಿದೆ ಅನ್ನೋದೇ ಈ ಹೊತ್ತಿನ ವಿಶೇಷ.
ಹೌದು, ಪುರಾತನ ಶಿಲಾ ಶಾಸನದ ಮಾದರಿಯಲ್ಲಿ ‘ಸಲಗ’ ಶಾಸನ ರಚನೆ ಮಾಡುವ ಮೂಲಕ ಅಭಿಮಾನಿ ವೀರೇಶ್ ಆಚಾರ್ ಈಗ ಎಲ್ಲರ ಮನ ಗೆದ್ದಿದ್ದಾನೆ.

‘ಸಲಗ’ ಚಿತ್ರದ ಶಾಸನ ಬರೆದು ಸ್ಥಬ್ಧ ಚಿತ್ರವನ್ನ ವಿನ್ಯಾಸ ಗೊಳಿಸುವ ಮೂಲಕ ಇಡೀ ಚಿತ್ರತಂಡಕ್ಕೆ ಖುಷಿ ತಂದಿದ್ದಾನೆ.
ಸಿನಿಮಾ ರಿಲೀಸ್ ಮುನ್ನವೇ ಮೊದಲೇ ಶತದಿನದ ಸಂಭ್ರಮದ ಶಾಸನ ಬರೆದು ಚಿತ್ರತಂಡಕ್ಕೆ ಸರ್ಪೈಸ್ ಗಿಫ್ಟ್ ಕೊಡುವ ಮೂಲಕ ಅಭಿಮಾನ ತೋರಿದ್ದಾನೆ.
ಅಂದಹಾಗೆ, ಜನವರಿಗೆ ‘ಸಲಗ’ ಪ್ರೆಕ್ಷಕರ ಮುಂದೆ ಬರುವ ತಯಾರಿ ನಡೆಸಿದೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟೀಸರ್ ಮತ್ತು ಹಾಡುಗಳಿಂದ ಗಮನ ಸೆಳೆದಿರೋ ಸಲಗ ಪ್ರೇಕ್ಷಕರಲ್ಲಿ ಸಿಕ್ಕಾಪಟ್ಟೆ ಕುತೂಹಲ ಹುಟ್ಟಿಸಿದೆ. ಕೆ.ಪಿ.ಶ್ರೀಕಾಂತ್ ಚಿತ್ರದ ನಿರ್ಮಾಪಕರು.

Categories
ಸಿನಿ ಸುದ್ದಿ

ರೋರಿಂಗ್‌ ಸ್ಟಾರ್‌ ಬರ್ತ್‌ಡೇಗೆ ಸ್ಪೆಷಲ್‌ ಗಿಫ್ಟ್‌ – ಡಿಸೆಂಬರ್‌ 17ಕ್ಕೆ ಮದಗಜ ಫಸ್ಟ್‌ ಲುಕ್‌ ಟೀಸರ್‌

ಅನೌನ್ಸ್‌ಮೆಂಟ್‌ ವಿಡಿಯೋದಲ್ಲಿ ಕೆರಳಿದ ಕುತೂಹಲ!

ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅಭಿನಯದ “ಮದಗಜ” ಚಿತ್ರದ ಫಸ್ಟ್‌ ಲುಕ್‌ ಟೀಸರ್‌ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಹೌದು, “ಮದಗಜ” ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾ. ಚಿತ್ರದ ಶೀರ್ಷಿಕೆಯಲ್ಲೇ ಒಂದು ಫೋರ್ಸ್‌ ಇದೆ. ಮೊದಲ ಪೋಸ್ಟರ್‌ ಕೂಡ ಅಷ್ಟೇ ಮಜವಾಗಿತ್ತು. ಒಂದು ಪಕ್ಕಾ ಕಮರ್ಷಿಯಲ್‌ ಸಿನಿಮಾ ಆಗಿರುವ ಈ ಚಿತ್ರದ ಫಸ್ಟ್‌ ಲುಕ್‌ ಟೀಸರ್‌ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದೆ. ಡಿಸೆಂಬರ್‌ 17 ರಂದು ಶ್ರೀಮುರಳಿ ಅವರ ಹುಟ್ಟುಹಬ್ಬ. ಅವರ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್‌ ಲುಕ್‌ ಟೀಸರ್‌ ಬಿಡುಗಡೆಯಾಗಲಿದೆ.

ಈಗಾಗಲೇ ಫಸ್ಟ್‌ ಲುಕ್‌ ಟೀಸರ್‌ ಅನೌನ್ಸ್‌ಮೆಂಟ್‌ ವಿಡಿಯೋ ಆನಂದ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಒಂದೇ ದಿನಕ್ಕೆ ಒಂದು ಲಕ್ಷ ವೀಕ್ಷಣೆ ಪಡೆದಿದೆ. ಹೌದು, ಕೇವಲ ೨೧ ಸೆಕೆಂಡ್‌ನಷ್ಟಿರುವ ಆ ವಿಡಿಯೋ ನೋಡಿದರೆ, ಸಾಕಷ್ಟು ಕುತೂಹಲ ಮೂಡಿಸುವಂತಿದೆ. ಯಾವುದೇ ದೃಶ್ಯಗಳಿಲ್ಲದೆ, ಕೇವಲ ಹಿನ್ನೆಲೆ ಸಂಗೀತ ಇಟ್ಟುಕೊಂಡು ಹರಿದಾಡುವ ಸ್ಮೋಕ್‌ನಲ್ಲೇ ಹೊಸದ್ದೊಂದು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು.

ಉಮಾಪತಿ, ನಿರ್ಮಾಪಕ

ಅದನ್ನು ನೋಡಿದವರಿಗೆ ಇನ್ನಷ್ಟು ಹೊತ್ತು ಇರಬೇಕಿತ್ತು ಎನಿಸದೇ ಇರದು. ಆದರೆ, ಅದು ಕೇವಲ ಅನೌನ್ಸ್‌ಮೆಂಟ್‌ ವಿಡಿಯೋ ಆಗಿರುವುದರಿಂದ ಡಿಸೆಂಬರ್‌ ೧೭ಕ್ಕೆ ಪೂರ್ಣಪ್ರಮಾಣದ ಟೀಸರ್‌ ಹೊರಬರಲಿದೆ. ಅಂದು ರೋರಿಂಗ್‌ ಸ್ಟಾರ್‌ ಬರ್ತ್‌ಡೇ. ಹಾಗಾಗಿ ಶ್ರೀಮುರಳಿ ಅವರ ಅಭಿಮಾನಿಗಳಿಗೊಂದು ಸ್ಪೆಷಲ್‌ ಗಿಫ್ಟ್‌ ಕೊಡಲು ವಿಶೇಷ ತಯಾರಿ ಮಾಡಿಕೊಂಡಿದೆ ಚಿತ್ರತಂಡ.


ಅಂದಹಾಗೆ, ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್‌ ಗೌಡ ನಿರ್ಮಾಪಕರು. ಎಸ್.‌ ಮಹೇಶ್‌ ಕುಮಾರ್‌ ನಿರ್ದೇಶನವಿದ್ದು, ಭರ್ಜರಿಯಾಗಿಯೇ ಸಿನಿಮಾವನ್ನು ನಿರ್ದೇಶಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಎರಡು ಹಂತದ ಚಿತ್ರೀಕರಣ ಮುಗಿದಿದ್ದು, ಮೂರನೇ ಹಂತದ ಚಿತ್ರೀಕರಣ ಬಿನ್ನಿಮಿಲ್‌ನಲ್ಲಿ ಸಖತ್‌ ಸೆಟ್‌ನಲ್ಲಿ ನಡೆಯುತ್ತಿದೆ. ಡಿಸೆಂಬರ್‌ ೧೭ರಂದು ಬೆಳಗ್ಗೆ ೯. ೯ ಕ್ಕೆ ಬಿಡುಗಡೆಯಾಗಲಿದೆ.

ಮಹೇಶ್‌ ಕುಮಾರ್‌, ನಿರ್ದೇಶಕ
Categories
ಸಿನಿ ಸುದ್ದಿ

ಸಿರಿ ಕನ್ನಡಕ್ಕೆ ಎರಡರ ಸಂಭ್ರಮ!

ಅಪ್ಪಟ ಕನ್ನಡಿಗರ ಪ್ರೀತಿಯ ವಾಹಿನಿ ಈಗ ಮೂರನೇ ಹೆಜ್ಜೆ

ಕನ್ನಡಿಗರ ಹೆಮ್ಮೆಯ ವಾಹಿನಿ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ “ಸಿರಿ ಕನ್ನಡ”  ವಾಹಿನಿಯು ಇದೀಗ ಮೂರನೇ ವರ್ಷಕ್ಕೆ ಹೆಜ್ಜೆ ಇಡುತ್ತಿದೆ.  ಸಿನಿಮಾ ಮತ್ತು ಮನರಂಜನೆ ವಾಹಿನಿಯಾಗಿ ಇಲ್ಲಿನ ನೆಲದಲ್ಲಿ ಚಿಗುರೊಡೆದು ಹಂತ ಹಂತವಾಗಿ ವೀಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹೊಸದಾಗಿ ಆರಂಭವಾದರೂ ಎವರ್‌ಗ್ರೀನ್ ಕ್ಲಾಸಿಕ್ ಸಿನಿಮಾಗಳು ಮತ್ತು ಸಿನಿಮಾ ಆಧಾರಿತ ಸ್ಪೆಷಲ್ ಕಾರ್ಯಕ್ರಮಗಳೊಂದಿಗೆ ಜನರ ಮನಸ್ಸಲ್ಲಿ ಅಚ್ಚಳಿಯದೆ ಉಳಿದಿದೆ. ಹಾಗಾಗಿ ಪ್ರಸ್ತುತ  ಸಂಪೂರ್ಣ ಮನರಂಜನಾ ವಾಹಿನಿಯಾಗಿ ತಲೆ ಎತ್ತಿ ನಿಂತಿದೆ.

ಕೋವಿಡ್ ಸಂದರ್ಭದಲ್ಲೂ ನೂತನ ಧಾರವಾಹಿಗಳು, ವಿಭಿನ್ನ ರಿಯಾಲಿಟಿ ಶೋಗಳು, ಹಬ್ಬದ ವಿಶೇಷ ಕಾರ್ಯಕ್ರಮಗಳು, ಹೊಸ ರೂಪದ ಭಕ್ತಿ ಪ್ರಧಾನ ಶೋಗಳನ್ನು ಕೊಡುತ್ತಾ ಮನ ಮನೆಗಳಿಗೆ ತಲುಪಿದೆ. ಈ ಹಂತದಲ್ಲಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತಿರಿಸಿಕೊಳ್ಳುತ್ತಾ ಇದೆ. ವೀಕ್ಷಕರು ಇಷ್ಟಪಟ್ಟಿರುವ ಮೆಗಾ ಧಾರವಾಹಿಗಳೊಂದಿಗೆ ಜನಪ್ರಿಯ ಶೋಗಳು ಹೊಸ ರೂಪದಲ್ಲಿ ನಿಮ್ಮನ್ನು ರಂಜಿಸಲಿವೆ. ಅಪಾರ ಜನಪ್ರಿಯತೆ ಪಡೆದ “ಕ್ಯಾಶ್ ಬಾಕ್ಸ್” ’ಸ್ಟಾರ್ ಆಫ್ ದಿ ವೀಕ್’ ದಲ್ಲಿ ವಿಜೇತರಿಗೆ ಇಪ್ಪತ್ತೈದು ಸಾವಿರ ಬಹುಮಾನ, ’ನಾರಿಗೊಂದು ಸೀರೆ’ ಕಾರ್ಯಕ್ರಮವು 120  ಕ್ಕೂ ಹೆಚ್ಚು ಸಂಚಿಕೆಗನ್ನು ಪೂರೈಸಿ, 500 ಕ್ಕೂ ಹೆಚ್ಚು ಸೀರೆಗಳನ್ನು ಮಹಿಳಾಮಣಿಗಳ ಬಳಿ ತರುತ್ತಿದೆ. ನಟಿ ಸುಜಾತ ನಿರೂಪಣೆಯ “ಸಿನಿ ಪಾಕ”ದಲ್ಲಿ ವೀಕ್ಷಕರಿಗೂ ಭಾಗವಹಿಸುವ ಅವಕಾಶ ಸಿಗಲಿದೆ. ರೀಲ್ ಹಿಂದಿನ ರಿಯಲ್ ಕಥೆ “ಟೂರಿಂಗ್ ಟಾಕೀಸ್” ಮತ್ತಷ್ಟು ವಿಭಿನ್ನವಾಗಿ ಮೂಡಿಬರುತ್ತದೆ ಎಂbuದು ವಾಹಿನಿಯ ಮುಖ್ಯಸ್ಥ ಸಂಜಯ್‌ ಶಿಂಧೆಯವರು ಸಂತಸ ಹಂಚಿಕೊಂಡಿದ್ದಾರೆ.
ಕನ್ನಡಿಗರಿಗಾಗಿಯೇ ರೂಪುಗೊಂಡ “ಸಿರಿ ಕನ್ನಡ” ನಾಡು ನುಡಿ ಸಂಸ್ಕೃತಿ ಬಿಂಬಿಸೋ, ಸ್ವಂತಿಕೆಯ ಸಂಭ್ರಮದ ಹೆಜ್ಜೆ ಇಡುತ್ತಿದೆ. ಮುಂದೆಯೂ ಕರುನಾಡಲ್ಲಿ “ನುಡಿ ಕನ್ನಡ, ನಡೆ ಕನ್ನಡ, ನೋಡ್ತಾ ಇರಿ ಸಿರಿ ಕನ್ನಡ” ಎನ್ನುವಂತಾಗಬೇಕು ಎಂಬುದೇ ವಾಹಿನಿಯ ಆಶಯವಾಗಿದೆ.

Categories
ಸಿನಿ ಸುದ್ದಿ

ಪ್ರಶಾಂತ್ ಸಂಬರಗಿ ಅಂದ್ರೆ ಆಯಿಲ್ ಕುಮಾರ್ ಅಂತೆ! ರವಿ ಶ್ರೀವತ್ಸ ನಿರ್ದೇಶನ್ ಎಂಆರ್ ನಲ್ಲಿ ಸಂಬರಗಿಗೆ ಬಣ್ಣ

ಜನವರಿಯಲ್ಲಿ ಶೂಟಿಂಗ್‌ ಶುರು…

ವಿವಾದಾತ್ಮಕ ಹೇಳಿಕೆಗಳ ಮೂಲಕ ಸಾಕಷ್ಡು ಸುದ್ದಿಯಲ್ಲಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕೊನೆಗೂ ನಟನೆಯತ್ತ ಮುಖ ಮಾಡಿದ್ದಾರೆ.ರವಿ ಶ್ರೀವತ್ಸ್ ನಿರ್ದೇಶನದ ‘ಎಂ ಆರ್’ ಚಿತ್ರದಲ್ಲಿ ರೌಡಿ ಆಯಿಲ್ ಕುಮಾರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ನಟನಾಗುವುದಕ್ಕಾಗಿಯೇ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬಂದಿದ್ದು ಅಂತ ಹೇಳಿದ್ದ ಪ್ರಶಾಂತ್ ಸಂಬರಗಿ, ಈಗ ರೌಡಿ ಆಗಿ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ. ಶುಕ್ರವಾರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮುಹೂರ್ತ ಮುಗಿಸಿರುವ ಚಿತ್ರ ತಂಡ ಅನೇಕ ಕುತೂಹಲಕಾರಿ ಮಾಹಿತಿ ಹೊರ ಹಾಕಿದೆ.

ಎಂ ಆರ್ ಅಂದ್ರೆ ಮುತ್ತಪ್ಪ ರೈ ಚಿತ್ರವೇ ಎನ್ನುವುದನ್ನು ರಹಸ್ಯವಾಗಿಟ್ಟುಕೊಂಡಿರುವ ಚಿತ್ರದ ನಿರ್ದೇಶಕ ರವಿ ಶ್ರೀವತ್ಸ,ಈಗ ಪ್ರಶಾಂತ್ ಸಂಬರಗಿ ಈಗ ರೌಡಿ ಆಗಿರುವುದನ್ನು ರಿವೀಲ್ ಮಾಡಿದ್ದಾರೆ.’ ರವಿ ಶ್ರೀ ವತ್ಸ ಅವರೊಂದಿಗೆ ನನ್ನದು ೨೫ ವರ್ಷಗಳ ಒಡನಾಟ. ಅವರೀಗ ಭೂಗತ ಲೋಕದ ಒಂದು ಕತೆ ಇಟ್ಟುಕೊಂಡು ಸಿನಿಮಾ‌ಮಾಡಲು ಹೊರಟಿರುವುದುನನಗೂ ಕುತೂಹಲ ಹುಟ್ಟಿಸಿದೆ. ಈ ಚಿತ್ರದಲ್ಲಿ ಒಂದು ಪಾತ್ರ ಇದೆ ಮಾಡ್ಬೇಕು ಅಂದಾಗ ನಂಗೂ ಅಚ್ಚರಿ. ಯಾವ ಪಾತ್ರ ಅಂತ ನಾನೇನು ಕೇಳಲಿಲ್ಲ. ಕೊನೆಗೆ ಮಿಟ್ ಮಾಡಿ, ಪಾತ್ರದ ಬಗ್ಗೆ ಕೇಳಿದಾಗ ನೀವೇ ಆಯಿಲ್ ಕುಮಾರ್ ಅಂದ್ರು.‌‌ ಏನ್ ಸರ್ , ನಾನೀಗ ರೌಡಿನಾ ಅಂತ ತಮಾಷೆ ಮಾಡಿದೆ. ಕೊನೆಗೆ ಒಪ್ಪಿಕೊಂಡು ಅಭಿನಯಿಸುತ್ತಿದ್ದೇನೆ ಎನ್ನುತ್ತಾರೆ ಪ್ರಶಾಂತ್ ಸಂಬರಗಿ.

Categories
ಸಿನಿ ಸುದ್ದಿ

ಶಕೀಲಾ ಬರ್ತಾರೆ ದಾರಿ ಬಿಡಿ! ಫೇವರೇಟ್ ನಟಿಯ ಜೀವನಗಾಥೆ

ಕ್ರಿಸ್ಮಸ್ ಹಬ್ಬಕ್ಕೆ ಶಕೀಲಾ ಸಂಭ್ರಮ!

ಈಗಂತೂ ಬಯೋಪಿಕ್ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆ ಸಾಲಿಗೆ ದಕ್ಷಿಣ ಭಾರತ ಚಿತ್ರರಂಗದ ಮಾದಕ ನಟಿ ಎಂದೇ ಖ್ಯಾತಿ ಪಡೆದಿರುವ ‘ಶಕೀಲಾ’ಅವರ ಜೀವನಗಾಥೆ ಈಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಇದೇ ಕ್ರಿಸ್ಮಸ್ ದಿನ ಚಿತ್ರ ಬಿಡುಗಡೆಯಾಗುತ್ತಿದೆ.
ಅಂದಹಾಗೆ, ದಕ್ಷಿಣ ಭಾರತ ಚಿತ್ರರಂಗದ ನಟಿಯೊಬ್ಬರ ಬಯೋಪಿಕ್ ಚಿತ್ರವೊಂದು ಹಿಂದಿ, ಕನ್ನಡ ತಮಿಳು ಸೇರಿದಂತೆ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು ಎಂಬುದು ವಿಶೇಷ.


‘ಶಕೀಲಾ’ ಅವರ ಬಯೋಪಿಕ್ ಆಗಿರುವುದರಿಂದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸಿನಿಮಾಗೂ ‘ಶಕೀಲಾ’ ಎಂದೇ ನಾಮಕರಣ ಮಾಡಿದ್ದಾರೆ.
ಈಗಾಗಲೇ ಚಿತ್ರದ ಫಸ್ಟ್ ಲುಕ್ ಹಾಗೂ ಟ್ರೇಲರ್ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ಮೆಚ್ಚುಗೆ ಪಡೆಯುವುದರ ಜೊತೆಗೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಆರಂಭದಲ್ಲಿ ಬಾಲಿವುಡ್ ಗೆ ಮಾತ್ರ ಸೀಮೀತವಾಗಿರಲಿ ಅಂದುಕೊಂಡು ಶುರುವಾದ ಈ ಚಿತ್ರ, ಈಗ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ರಿಲೀಸಾಗುತ್ತಿರುವುದು ವಿಶೇಷ. ಬಹಳಷ್ಟು ಗ್ಲಾಮರಸ್ ಪಾತ್ರಗಳಲ್ಲೇ ಕಾಣಿಸಿಕೊಡು, ಯುವಕರ ಹಾಟ್ ಫೇವರೇಟ್ ಎನಿಸಿಕೊಂಡಿರುವ ಮಲಯಾಳಂನ ಮಾದಕ ನಟಿ ಶಕೀಲಾ ಅವರ ಬಯೋಪಿಕ್ ಇದು.

1990 ಹಾಗೂ 2000ರ ದಶಕದಲ್ಲಿ ಸಕ್ಸಸ್ ಫುಲ್ ಆಗಿದ್ದ ಅವರು, ಒಂದೇ ವರ್ಷದಲ್ಲಿ ಅವರ ನಟನೆಯ ಹತ್ತಾರು ಸಿನಿಮಾಗಳು ಬಿಡುಗಡೆಯಾಗುತ್ತಿದ್ದವು ಎಂಬುದು ವಿಶೇಷ.
ಆರಂಭದಲ್ಲಿ ಶಕೀಲಾ ಅವರ ಬದುಕು ಅಂದುಕೊಂಡಂತೆ ಸುಲಭವಾಗಿರಲಿಲ್ಲ. ತಮ್ಮ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಆಗಿನ ಗೆಲುವು-ಸೋಲು, ನೋವು-ನಲಿವು ಅವರಿಗಷ್ಟೇ ಗೊತ್ತು. ಈಗ ಶಕೀಲಾ ಅವರ ಸಿನಿಪಯಣದಲ್ಲಾದ ಅಪರೂಪದ ಸಂಗತಿಗಳನ್ನು ಸಿನಿಮಾ‌ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ಇಂದ್ರಜಿತ್ ಲಂಕೇಶ್.
ಇನ್ನು, ಶಕೀಲಾ ಅವರ ಪಾತ್ರವನ್ನು ಬಾಲಿವುಡ್ ನಟಿ ರಿಚಾ ಛಡ್ಡಾ ನಿರ್ವಹಿಸಿದ್ದಾರೆ.

ತಮ್ಮ ಬಯೋಪಿಕ್ ಚಿತ್ರದ ಬಗ್ಗೆ ಮಾತಾಡುವ ಶಕೀಲಾ, ‘ನಾನು ಬದುಕಿನಲ್ಲಿ ಎದುರಿಸಿದ ಕಷ್ಟ, ಸುಖದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸುತ್ತಿದ್ದಾರೆ. ಆರಂಭದಲ್ಲಿ ನಿರ್ದೇಶಕರು ನನ್ನ ಬಳಿ ಚರ್ಚಿಸಿ ಒಂದಷ್ಟು ಬದಲಾವಣೆ ಕೂಡ ಮಾಡಿಕೊಂಡಿದ್ದಾರೆ. ಸಿನಿಮಾದಲ್ಲಿ ಎಷ್ಟು ಕಾಲ್ಪನಿಕ, ಎಷ್ಟು ವಾಸ್ತವ ಇದೆ ಎಂಬುದನ್ನು ಸಿನಿಮಾದಲ್ಲಿ ನೋಡಬೇಕು.
ಇಂತಹ ಸಂದರ್ಭದಲ್ಲಿ ನನ್ನ ಫ್ಯಾಮಿಲಿಯೇ ನನ್ನ ಜೊತೆಗಿಲ್ಲ. ನಾನು ಎಲ್ಲಿದ್ದೇನೆ, ಏನು ಮಾಡುತ್ತಿದ್ದೇನೆ ಎಂಬುದೆಲ್ಲವೂ ಅವರಿಗೆ ಗೊತ್ತಿದೆ. ಆದರೆ ನನ್ನ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ನಾನು ನನ್ನ ಫ್ಯಾಮಿಲಿಗಾಗಿಯೇ ಇಷ್ಟೆಲ್ಲ ಮಾಡಿದೆ. ಆದರೆ ನನ್ನವರೇ ನನಗೆ ದ್ರೋಹ ಮಾಡಿದರು. ನೀಲಿ ಚಿತ್ರಗಳನ್ನು ಮಾಡಿದ ಬಗ್ಗೆ ನನಗೆ ವಿಷಾದವಿಲ್ಲ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ದೇವರ ಮಗಳು. ಇಂದು ನನ್ನ ಬಗ್ಗೆ ಸಿನಿಮಾ ಆಗುತ್ತಿದೆ ಎಂದರೆ ಅದಕ್ಕೆ ಆ ಚಿತ್ರಗಳೇ ಕಾರಣ. ನಾನೊಬ್ಬ ಪೋಷಕ ನಟಿ ಮಾತ್ರ ಆಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಆದರೆ ಇಂಥ ಕುಟುಂಬಕ್ಕಾಗಿ ಮಾಡಿದೆನಲ್ಲ ಎಂಬ ಬೇಸರವಿದೆ ಎಂದು ಶಕೀಲಾ ತನ್ನ ಕುಟುಂಬದ ಬಗ್ಗೆ ಬೇಸರ ಹೊರ ಹಾಕುತ್ತಾರೆ.


ಇಂದ್ರಜಿತ್ ಅವರ ಜೊತೆ ನಾನು ‘ಲವ್‍ ಯೂ ಆಲಿಯಾ’ ಸಿನಿಮಾ ಮಾಡುವಾಗ ನಿರ್ದೇಶಕಿಯೊಬ್ಬರು ನನ್ನನ್ನು ಭೇಟಿಮಾಡಿ ನನ್ನ ಆತ್ಮಚರಿತ್ರೆಯನ್ನು ಸಿನಿಮಾ ಮಾಡಬೇಕೆಂದಿದ್ದೇನೆ ಎಂದರು. ಆ ವಿಷಯ ಇಂದ್ರಜಿತ್‍ರಿಗೂ ತಿಳಿಯಿತು. ಎರಡು ದಿನ ಸಮಯ ತೆಗೆದುಕೊಂಡು ಇಂದ್ರಜಿತ್ ಕೂಡ ನನ್ನ ಆತ್ಮಚರಿತ್ರೆಯನ್ನು ಓದಿದರು. ತಾವೇ ಈ ಚಿತ್ರ ಮಾಡುವುದಾಗಿ ತಿಳಿಸಿದರು. ನನಗೂ ಖುಷಿ ಆಯಿತು. ನನ್ನ ಕಥೆಯನ್ನು ಅವರು ಚೆನ್ನಾಗಿ ತೆರೆಮೇಲೆ ತರುತ್ತಾರೆ ಎಂಬ ನಂಬಿಕೆಯಿತ್ತು. ನಾನು ಈ ಬಯೋಪಿಕ್ ಪುಸ್ತಕ ಬರೆದು 10 ವರ್ಷಗಳಾಗಿವೆ. ಆನಂತರ ಏನೆಲ್ಲ ನಡೆಯಿತು ಎಂಬುದನ್ನು ಈ ಸಿನಿಮಾದಲ್ಲಿ ವಿವರಿಸಿದ್ದಾರೆ. ನನ್ನ ಹುಟ್ಟಿನಿಂದ ಹಿಡಿದು 42ನೇ ವಯಸ್ಸಿನವರೆಗೆ ಅನೇಕ ವಿಷಯಗಳ ಬಗ್ಗೆ ಈ ಚಿತ್ರ ಮಾತನಾಡುತ್ತದೆ ಎಂಬುದು ಶಕೀಲಾ ಮಾತು.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಈ ಚಿತ್ರ ಮಾಡಿದ್ದು ಖುಷಿ ಕೊಟ್ಟಿದೆಯಂತೆ. ‘ಒಂದರ್ಥದಲ್ಲಿ ನಿಜವಾದ ಪ್ಯಾನ್ ಇಂಡಿಯಾ ಸಿನಿಮಾವಿದು, ಕನ್ನಡದ ಸುಚೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ವೀರಸಮರ್ಥ್ ಸೇರಿದಂತೆ ಎಲ್ಲಾ ಭಾಷೆಯ ತಂತ್ರಜ್ಞರು ಈ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಐದೂ ಭಾಷೆ ಸೇರಿ ಎರಡರಿಂದ ಎರಡೂವರೆ ಸಾವಿರ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ ಎಂದು ವಿವರ ಕೊಟ್ಟರು ಇಂದ್ರಜಿತ್.
ಈ ಚಿತ್ರವನ್ನು ಸಾಮಿ ನಾನ್ವಾನಿ ಹಾಗೂ ಶರವಣ ಪ್ರಸಾದ್ ನಿರ್ಮಿಸಿದ್ದಾರೆ.
ನಿರ್ದೇಶಕ ಸಂದೀಪ್ ಮಲಾನಿ ಸಹ ನಿರ್ಮಾಪಕರು. ಸಂತೋಷ್ ರೈ ಪಾತಾಜೆ ಕ್ಯಾಮೆರಾ ಹಿಡಿದಿದ್ದಾರೆ. ರೀಚಾ ಛಡ್ಡಾ ಜೊತೆಗೆ ಪಂಕಜ್‍ ತ್ರಿಪಾಠಿ, ರಾಜೀವ್ ಪಿಳ್ಳೈ, ಸಮರ್ಜಿತ್ ಲಂಕೇಶ್, ಸಂದೀಪ್ ಮಲಾನಿ ಹಾಗೂ ಎಸ್ಟರ್ ನರೋನಾ ಕಾಣಿಸಿಕೊಂಡಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಹೊಸ ವರ್ಷಕ್ಕೆ ಚಂದನ್‌ ಶೆಟ್ಟಿ ಹೊಸ ಕಿಕ್‌ – ಪಾರ್ಟಿ ಫ್ರೀಕ್ ಹಾಡಲ್ಲಿ ನಿಶ್ವಿಕಾ ನಾಯ್ಡು ಸ್ಟೆಪ್‌

ಡಿಸೆಂಬರ್‌ 26ರಂದು ಯುನೈಟ್ ಆಡಿಯೋ ಮೂಲಕ ಬಿಡುಗಡೆ

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ವಿಡಿಯೋ ಅಲ್ಬಂ ಸಾಂಗ್‌ ಬಂದಿವೆ. ಈಗಲೂ ಬರುತ್ತಿವೆ. ಆ ಸಾಲಿಗೆ ಈಗ ಮತ್ತೊಂದು ಹೊಸ ವಿಡಿಯೊ ಆಲ್ಬಂ ಸಾಂಗ್‌ ಬರಲು ಸಜ್ಜಾಗುತ್ತಿದೆ. ಅಂದಹಾಗೆ, ಅದೊಂದು ಪಾರ್ಟಿ ಫ್ರೀಕ್‌ ಹಾಡು. ಈ ಹಾಡಿನ ಮೂಲಕ ಹೊಸ ವರ್ಷದಲ್ಲಿ ಪಡ್ಡೆ ಹುಡುಗರಿಗೆ ಕಿಕ್‌ ಏರಿಸುವ ಪ್ರಯತ್ನ ನಡೆಯುತ್ತಿದೆ. ಇಂಥದ್ದೊಂದು ಪ್ರಯತ್ನಕ್ಕೆ ಕೈ ಹಾಕಿರೋದು, ಗಾಯಕ ಕಮ್‌ ಸಂಗೀತ ನಿರ್ದೇಶಕ ಚಂದನ್‌ ಶೆಟ್ಟಿ.

ಚಂದನ್‌ ಶೆಟ್ಟಿ

ಈ ಹಿಂದೆ ಚಂದನ್‌ ಶೆಟ್ಟಿ “ಮೂರೇ ಮೂರು ಪೆಗ್ಗಿಗೆ…” ., “ಟಕೀಲಾ…” ಎಂಬ ಪಾರ್ಟಿ ಸಾಂಗ್‌ ಮಾಡುವ ಮೂಲಕ ಸುದ್ದಿಯಾಗಿದ್ದರು. ಆ ಬಳಿಕ ಅವರು ಬೇರೆ ಜಾನರ್‌ ಹಾಡುಗಳನ್ನು ಮಾಡಿ, ಬಿಡುಗಡೆ ಮಾಡಿದ್ದರು. ಆದರೆ, ಚಂದನ್‌ ಶೆಟ್ಟಿ ಅವರು, ಪಾರ್ಟಿ ಸಾಂಗ್‌ ಯಾವಾಗ ಮಾಡುತ್ತಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಬಾರಿ ಅವರು ಹಲವು ವಿಶೇಷಗಳೊಂದಿಗೆ ಬರುತ್ತಿದ್ದಾರೆ. ಈ ಹಾಡಿನ ವಿಶೇಷವೆಂದರೆ, ಕನ್ನಡದ ಜೊತೆಗೆ ತೆಲುಗಿನಲ್ಲಿಯೂ ಈ ಹಾಡು ಮೂಡಿ ಬರಲಿದ್ದು, ಅದ್ಧೂರಿ ವೆಚ್ಚದಲ್ಲಿ, ಕಲಲರ್‌ ಫುಲ್‌ ಆಗಿ ಎರಡು ದಿನಗಳ ಕಾಲ ಹಾಡಿನ ಚಿತ್ರೀಕರಣ ನಡೆಸಲು ತಯಾರಿ ನಡೆದಿದೆ. ಶೂಟಿಂಗ್ ನಡೆಯಲಿದೆ. ಸ್ಟಾರ್‌ ಹೋಟೆಲ್ ಮತ್ತು ಪಬ್‌ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ.

ನಿವೇದಿತಾ ಗೌಡ

ಈ ಹೊಸ ವಿಡಿಯೋ ಆಲ್ಬಂ ಸಾಂಗ್‌ಗೆ “ಪಾರ್ಟಿ ಫ್ರೀಕ್” ಎಂಬ ಹೆಸರಿಟ್ಟಿದ್ದಾರೆ. ಇನ್ನು, ಚೈತನ್ಯ ಲಕಂಸಾನಿ ಅವರು ಈ ವಿಡಿಯೋ ಸಾಂಗ್‌ ನಿರ್ಮಾಣ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನೀಡಿ, ಸಾಹಿತ್ಯ ಬರೆದು ಹಾಡಿದ್ದಾರೆ ಕೂಡ. ಅಷ್ಟೇ ಅಲ್ಲ, ಆ ಹಾಡಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಈ ಹಾಡಲ್ಲಿ ಸ್ಟೆಪ್‌ ಹಾಕುತ್ತಿರುವುದು ಮತ್ತೊಂದು ವಿಶೇಷ. ಇನ್ನೊಂದು ವಿಶೇಷವೆಂದರೆ, ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಅವರು ಕೂಡ ಈ ಹಾಡಲ್ಲಿ ಹೆಜ್ಜೆ ಹಾಕಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಧರ್ಮ ಅವರೂ ಇಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಾಡಿಗೆ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಮಾಡಿದರೆ, ಅಜಿತ್ ಶ್ರೀರವಿ ವಸ್ತ್ರ ವಿನ್ಯಾಸ ಮಾಡಲಿದ್ದಾರೆ. ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಈ ಹಾಡನ್ನು ಡಿಸೆಂಬರ್‌ 26 ರಂದು ಯುನೈಟ್ ಆಡಿಯೋದಲ್ಲಿ ಬಿಡುಗಡೆಯಾಗಲಿದೆ.

ನಿಶ್ವಿಕಾ ನಾಯ್ಡು
error: Content is protected !!