ಆ ದಿನಗಳು ಖ್ಯಾತಿಯ ಚೇತನ್ ಅಭಿನಯದ ಹೊಸ ಚಿತ್ರ ಮಾರ್ಗ ಇತ್ತೀಚೆಗೆ ಮುಹೂರ್ತ ಕಂಡಿದೆ. ಚಿತ್ರತಂಡಕ್ಕೆ ಪುನೀತ್ ರಾಜಕುಮಾರ್ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಚೇತನ್ ಜೊತೆ ಅಪ್ಪು ಮಾತುಕತೆ ಜೋರಾಗಿಯೇ ನಡೆದಿದೆ. ಒಂದಷ್ಟು ಹೊಸ ಮಾರ್ಗದರ್ಶನ ಕೊಟ್ಟ ಪುನೀತ್, ಚೇತನ್ ಹಾಗೂ ಇತರೆ ಕನ್ನಡ ನಟರ ಜೊತೆ ಅಪ್ತ ಮಾತುಕತೆ ನಡೆಸಿದರು. ಅಂದಿನ ಫೋಟೋ ಮಾತುಕತೆ…

Author: ವಿಜಯ್ ಭರಮಸಾಗರ
ಖುಷ್ ಮೂಡಿನಲ್ಲಿ ಖುಷಿ…





ದಿಲ್ ದಿಯಾ…
ಶುಭನುಡಿ…
ಮ್ಯಾರೇಜ್ ಮೂಡ್ ನಲ್ಲಿ ಕರಾವಳಿ ಬೆಡಗಿ…


ಕೇಂದ್ರ ಸರ್ಕಾರ ಸೆಪ್ಟೆಂಬರ್ ವೇಳೆಗೆ ಥಿಯೇಟರ್ ಶುರುವಿಗೆ ಸೂಚನೆ ಕೊಡುವ ಭರವಸೆ ಕೊಟ್ಟಿದೆ. ಹಾಗಾಗಿ ಸಿನಿಮಾ ರಂಗದಲ್ಲಿ ಮತ್ತೆ ಚೈತನ್ಯ ಮೂಡಿದೆ. ಈಗಾಗಲೇ ಕೆಲ ಸಿನಿಮಾಗಳ ಚಿತ್ರೀಕರಣ ಕೂಡ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ.
……….,…………………………

ಕೊರೊನಾ ಆವರಿಸಿದ್ದರಿಂದ ಇಡೀ ಚಿತ್ರರಂಗವೇ ಸ್ತಬ್ಧವಾಗಿತ್ತು. ಕಳೆದ ಆರು ತಿಂಗಳಿಂದಲೂ ಸಿನಿಮಾ ರಂಗ ರಂಗು ಕಳೆದುಕೊಂಡಿತ್ತು. ಈಗ ಚಿತ್ರಮಂದಿರಗಳು ಶುರುವಾಗುವ ಸೂಚನೆ ಕೊಟ್ಟಿವೆ. ಹೌದು, ಸೆಪ್ಟೆಂಬರ್ 15 ರ ನಂತರ ಥಿಯೇಟರ್ ಓಪನ್ ಆಗಲಿವೆ ಎನ್ನಲಾಗುತ್ತಿದೆ. ಫಿಲ್ಮ್ ಚೇಂಬರ್ ಕೂಡ ಕೇಂದ್ರ ಸರ್ಕಾರ ಹೇಳಿಕೆಯಿಂದ ಉತ್ಸಾಹದಲ್ಲಿದೆ. ಕೇಂದ್ರ ಸರ್ಕಾರ ಸೆಪ್ಟೆಂಬರ್ ವೇಳೆಗೆ ಥಿಯೇಟರ್ ಶುರುವಿಗೆ ಸೂಚನೆ ಕೊಡುವ ಭರವಸೆ ಕೊಟ್ಟಿದೆ. ಹಾಗಾಗಿ ಸಿನಿಮಾ ರಂಗದಲ್ಲಿ ಮತ್ತೆ ಚೈತನ್ಯ ಮೂಡಿದೆ. ಈಗಾಗಲೇ ಕೆಲ ಸಿನಿಮಾಗಳ ಚಿತ್ರೀಕರಣ ಕೂಡ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಥಿಯೇಟರ್ ಆರಂಭಗೊಳ್ಳುತ್ತಿದ್ದಂತೆಯೇ ಪ್ರೇಕ್ಷಕರಿಗೆ ದರ್ಶನ ನೀಡಲಿವೆ. ಕಿರುತೆರೆ ಕೂಡ ಚಿತ್ರೀಕರಣ ಶುರು ಮಾಡಿ ತಮ್ಮ ಪ್ರೇಕ್ಷಕ ವಲಯವನ್ನು ಖುಷಿಪಡಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಚಿತ್ರರಂಗ ಕೂಡ ತನ್ನ ಕಾರ್ಯ ಶುರು ಮಾಡಲಿದೆ.
ಪುನೀತ್ ರಾಜಕುಮಾರ್ ಅಂದಾಕ್ಷಣ ಎಲ್ಲರ ಕಣ್ಣ ಮುಂದೆ ಹಾದು ಹೋಗೋದು ಸದಾ ಹಸನ್ಮುಖಿ, ಪಾಸಿಟಿವ್ ವ್ತಕ್ತಿತ್ವ , ಯಾವಾಗಲೂ ನೀಟ್ ಶೇವ್ ಮಾಡಿದ ನಗು ಮುಖ. ಅಷ್ಟೇ ಅಲ್ಲ ಪ್ರೀತಿಯ ಮಾತುಕತೆ ಜೊತೆಗೆ ಅಪ್ಪುಗೆ. ಸದ್ಯ ಪುನೀತ್ ಗೆಟಪ್ ಬದಲಾಗಿದೆ. ಅವರೀಗ ಗಡ್ಡ ಬಿಟ್ಟಿದ್ದಾರೆ. ಈಗಾಗಲೇ ಕೆಲವು ಸಿನಿಮಾ ಪಾತ್ರಕ್ಕಾಗಿ ಅವರು ದಾಡಿ ಬಿಟ್ಟಿದ್ದುಂಟು. ಆದರೆ, ಈಗ ಯಾವ ಚಿತ್ರದ ಚಿತ್ರೀಕರಣ ಯಾವುದೂ ಇಲ್ಲ. ಆದರೂ ಅಪ್ಪು ಹೀಗೆ ದಾಡಿ ಬಿಡೋಕೆ ಕಾರಣ ಬೇರೆ ಇದೆ. ಯುವರತ್ನ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ನಡುವೆ ಅವರು ಹೊಸ ಚಿತ್ರಗಳತ್ತವೂ ಗಮನ ಹರಿಸಿದ್ದಾರೆ. ಶಶಾಂಕ್ ಹಾಗೂ ಪವನ್ ಒಡೆಯರ್ ಜೊತೆಯಲ್ಲಿ ಸಿನಿಮಾ ಮಾಡಲಿದ್ದಾರೆ. ಅದಲ್ಲದೆ ಇನ್ನೂ ಕೈ ತುಂಬಾ ಚಿತ್ರಗಳಿವೆ. ಆ ಚಿತ್ರಗಳ ಪಾತ್ರಕ್ಕಾಗಿ ಅಪ್ಪು ಗಡ್ಡ ಬಿಟ್ಟಿರಬಹುದು. ಅದೇನೆ ಇರಲಿ, ಅಪ್ಪು ಫುಲ್ ಶೇವ್ ಮಾಡ್ಕೊಂಡು ಸದಾ ನಗುಮೊಗದಲ್ಲಿ ನೋಡೋದೆ ಚಂದ. ಅಪ್ಪು ಫ್ಯಾನ್ಸ್ ಮಾತ್ರ ಪವರ್ ಹೇಗಿದ್ರೂ ಸರಿ ಅವರ ಸಿನಿಮಾ ಮೂಲಕ ರಂಜಿಸುತ್ತಿರಬೇಕಷ್ಟೇ ಅಂತ ಯುವರತ್ನನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಗಡ್ಡ ಬಿಟ್ಟಿರೋದಕ್ಕೆ ಕಾರಣ ಇಷ್ಟರಲ್ಲೇ ಗೊತ್ತಾಗಲಿದೆ. ಆ ಮೂಲಕ ಅವರು ಬಿಗ್ ಬ್ರೇಕಿಂಗ್ ನ್ಯೂಸ್ ಕೊಡಲಿದ್ದಾರೆ. ಅಲ್ಲಿಯವರೆಗೆ ಕಾಯಬೇಕು

ಮಳೆಯ ಹಾಡಲ್ಲಿ ಮಿಂದೆದ್ದ ಸಲಗ
ದುನಿಯಾ ವಿಜಯ್ ಇದೇ ಮೊದಲ ಸಲ ನಿರ್ದೇಶನ ಮಾಡಿರುವ ಸಲಗ ಚಿತ್ರ ಇನ್ನೇನು ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ನಾಲ್ಕು ಕ್ವಾರ್ಟರ್ ಕುಡಿದ್ರು ಸ್ಟಡಿಯಾಗಿ ನಿಲ್ತಿದ್ದೆ ಸೂರಿಯಣ್ಣ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈಗ ಮತ್ತೊದು ಮಳೆಯ ಹಾಡು ಹೊರ ಬಂದಿದೆ. ಮಳೆಯೇ ಮಳೆಯೇ ಲೊರಿಕಲ್ ಸಾಂಗ್ ರಿಲೀಸ್ ಆಗಿದ್ದು, ಒಳ್ಳೆಯ ಮೆಚ್ಚುಗೆ ಪಡೆಯುತ್ತಿದೆ.

#mugilpete
ಕ್ರೇಜಿ ಪುತ್ರನ ಚಿತ್ರದ ಕಲರ್ ಫುಲ್ ಪೋಸ್ಟರ್ ರಿಲೀಸ್
ಮನುರಂಜನ್ ಅಭಿನಯದ ಮುಗಿಲ್ ಪೇಟೆ ಚಿತ್ರತಂಡ
“ಗೌರಿ -ಗಣೇಶ” ಹಬ್ಬದಲ್ಲಿನಮ್ಮ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ.
ಭರತ್ ನಾವುಂದ ನಿರ್ದೇಶನದ ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ.
ರಕ್ಷಾ ವಿಜಯಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಂಗಾಯಣ ರಘು, ತಾರಾ, ಸಾಧುಕೋಕಿಲ ಇತರರು ಇದ್ದಾರೆ.
ಮಳೆ ಮಳೆ ಹಾಡಿಗೆ ಮೈ ಮನವೆಲ್ಲಾ ತಂಪು

ಯುವ ನಟ ಸೂರಜ್ ಗೌಡ ಅಭಿನಯದ ನಿನ್ನ ಸನಿಹಕೆ ಸಿನಿಮಾ ಈಗ ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ಇದೇ ಮೊದಲ ಸಲ ನಿರ್ದೇಶನ ಮಾಡಿರುವ ಸೂರಜ್ ಅವರ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ಮಳೆ ಮಳೆ ಎಂಬ ಬ್ಯೂಟಿಫುಲ್ ಹಾಡಿಗೆ ರಘುದೀಕ್ಷಿತ್ ಸಂಗೀತವಿದೆ. ಜೊತೆಗೆ ಆ ಹಾಡಿಗೆ ಧ್ವನಿಯನ್ನೂ ನೀಡಿದ್ದಾರೆ. ಇನ್ನು ವಾಸುಕಿ ವೈಭವ್ ಅವರ ಸಾಹಿತ್ಯವಿದೆ.
ಈ ಚಿತ್ರದಲ್ಲಿ ಡಾ.ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಾಯಕಿ.
ನಟ ರವಿಶಂಕರ್ ಗೌಡ ಪುತ್ರ ಈಗ ನಿರ್ದೇಶಕ
ನಟ ರವಿಶಂಕರ್ ಗೌಡ ಪುತ್ರ ಸೂರ್ಯ ತೇಜಸ್ವಿ ಈಗ ಸಿನಿಮಾರಂಗಕ್ಕೆ ಎಂಟ್ರಿಯಾಗಿದ್ದಾನೆ. ಹೌದು ಇದೇ ಮೊದಲಸಲ ಸೂರ್ಯ ತೇಜಸ್ವಿ ವೈ… ಫೈ? ಎಂಬ ಪುಟಾಣಿ ಹಾಸ್ಯ ಕಿರುಚಿತ್ರ ನಿರ್ದೇಶನ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾನೆ. ಸದ್ಯಕ್ಕೆ ಯೂಟ್ಯೂಬ್ ಚಾನೆಲ್ ನಲ್ಲಿ ಕಿರುಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಗುತ್ತಿದೆ.ಈ ಕಿರುಚಿತ್ರದಲ್ಲಿ ಸೂರ್ಯ ಜೊತೆ ನಿಖಿಲ್ ನರೇಶ್ ನಟಿಸಿದ್ದಾರೆ. ಅಜಯ್ ಜಮದಗ್ನಿ ಸಂಕಲನವಿದೆ.



