ಕಾಂತಾರ ಸಿನಿಮಾದಲ್ಲಿ ಕಮಲಕ್ಕ ಪಾತ್ರ ಮಾಡಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ಮಾನಸಿ ಸುಧೀರ್ ಜುಗಲ್ ಬಂದಿ” ಸಿನಿಮಾ ಮೂಲಕ ಸಿನಿ ಪ್ರಿಯರನ್ನು ರಂಜಿಸಲು ಸಜ್ಜಾಗಿದ್ದಾರೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 1ರಂದು ಹಲವು ಕಥೆಗಳ ‘ಜುಗಲ್ ಬಂದಿ’ ತೆರೆಗೆ ಬರುತ್ತಿದೆ.
ನಾಲ್ಕು ಡಿಫರೆಂಟ್ ಪ್ಲಾಟ್ ಒಳಗೊಂಡ ಸಿನಿಮಾ ‘ಜುಗಲ್ ಬಂದಿ’.ಭಗವದ್ಗೀತೆ, ಕುರಾನ್, ಬೈಬಲ್ನಲ್ಲೂ ಬರ್ದಿಲ್ಲ ದುಡ್ಮಾಡದೆಂಗತ! ಟ್ಯಾಗ್ ಲೈನ್ ಮೂಲಕ ಕುತೂಹಲ ಕ್ರಿಯೇಟ್ ಮಾಡಿರುವ ಈ ಚಿತ್ರಕ್ಕೆ ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿದ್ದಾರೆ. ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನದ ಜೊತೆಗೆ ತಮ್ಮ ಮೊದಲ ಸಿನಿಮಾಗೆ ತಾವೇ ಬಂಡವಾಳ ಕೂಡಾ ಹೂಡಿರುವುದು ವಿಶೇಷ.
ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್ ಒಳಗೊಂಡ ತಾರಾಬಳಗವಿದೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಿಕಾ ಫಿಲ್ಮ್ಸ್ ರಾಜ್ಯಾದ್ಯಂತ ಸಿನಿಮಾ ವಿತರಣೆ ಜವಾಬ್ದಾರಿ ಹೊತ್ತಿದ್ದು, ಅವರದ್ದೇ ಪ್ರೆಸೆಂಟ್ಸ್ ಮೂಲಕ ತೆರೆಗೆ ಬರಲಿದೆ.
ಕಾಂತರ – ಕಾಟೇರ ಚಿತ್ರಗಳ ಮೊದಲೇ ಚಿತ್ರೀಕರಣ ಮುಗಿಸಿದ್ದ ಧೈರ್ಯಂ ಸರ್ವತ್ರ ಸಾಧನಂ. ಕಾಂತಾರ ಚಿತ್ರದಲ್ಲಿ ಬಂದೂಕು ಹಂದಿ ಬೇಟೆ , ಬುಡಕಟ್ಟು ಜನಾಂಗ ಅಸ್ಪೃಶ್ಯತೆ ಎಂಬ ಕೆಲವೊಂದು ಅಂಶಗಳು ಗಮನ ಸೆಳೆದಿತ್ತು. ಕಾಟೇರ ಕೂಡ ಇದೇ ಸಾಲಿನಲ್ಲಿ ಸಾಗಿದ ಚಿತ್ರ.
ಈಗ ಧೈರ್ಯಂ ಸರ್ವತ್ರ ಸಾಧನಂ ಚಿತ್ರದಲ್ಲೂ ಸಮಾಜದಲ್ಲಿ ನೊಂದವರ, ಬೆಂದವರ ಕಥೆ ಇದೆ. ಇಲ್ಲೂ ಬಂದೂಕು, ಹಂದಿ ಬೇಟೆ ಎಂಬ ಅಂಶಗಳಿವೆ. ನಿರ್ದೇಶಕ ಎ. ಆರ್. ಸಾಯಿರಾಮ್ ಸಿನಿಮಾ ಬಗ್ಗೆ ಹೇಳುವುದಿಷ್ಟು.
2021 ಡಿಸೆಂಬರ್ 6 ರಂದು ಚಿತ್ರೀಕರಣ ಶುರು ಆಗಿ, ಜನವರಿ 14ರಂದು ಚಿತ್ರೀಕರಣ ಮುಗಿಯಿತು. ಒಂದೇ ಹಂತದಲ್ಲಿ ಚಿತ್ರೀಕರಣ ಮುಗಿಸಲಾಗಿತ್ತು. ಇದೊಂದು ನೆಲದ ಕಥೆ. ನೊಂದವರ ಬದುಕು ಇಲ್ಲಿದೆ. ಆ ಕಾಲಘಟ್ಟದಲ್ಲಿನ ಅಂಶಗಳು ಇಲ್ಲಿವೆ ಎಂದರು.
ನಿರ್ಮಾಪಕರ ಆನಂದ್ ಬಾಬು ಮಾತನಾಡಿ, ಇದೊಂದು ಕಾಡುವ ಹಾಗು ನೋಡುವ ಚಿತ್ರ. ಇಲ್ಲಿ ಗ್ರಾಫಿಕ್ಸ್ ಹೆಚ್ಚಾಗಿದೆ. 4 ರೀತಿಯ ಹಂದಿ 2 ಮೊಲ ಹಾಗೂ ಖಳನಾಯಕನ ಮನೆಯನ್ನು ಸಿಜಿ ಮೂಲಕ ಮಾಡಿರುವುದು ವಿಶೇಷ. ತುಂಬಾ ನೈಜವಾಗಿ ಕಾಣುವಂತೆ ನಿರ್ದೇಶಕರು ಸಿಜಿ ಕೆಲಸ ಮಾಡಿಸಿದ್ದಾರೆ. ಪ್ರತಿಯೊಂದು ವಿಭಾಗದಲ್ಲಿ ನಿರ್ದೇಶಕರು ಸೂಕ್ಷ್ಮವಾಗಿ ಕೆಲಸ ಮಾಡಿದ್ದಾರೆ. ಗುಣಮಟ್ಟಕ್ಕಾಗಿ ಸಮಯವಾಗಿದೆ. ಫೆಬ್ರವರಿ 23ಕ್ಕೆ ಚಿತ್ರ ರಿಲೀಸ್ ಆಗುತ್ತಿದೆ.
ಜನರಿಗೆ ತುಂಬಾ ಇಷ್ಟ ಆಗುವ ಸಿನಿಮಾ ಧೈರ್ಯಂ ಸರ್ವತ್ರ ಸಾಧನಂ, ಪ್ರತಿಯೊಬ್ಬರ ಮನೆಯಲ್ಲೂ ಈ ರೀತಿಯ ಕಥೆಗಳು ಇರುತ್ತವೆ ಪ್ರೇಕ್ಷಕರ ನಾಡಿ ಮಿಡಿತಕ್ಕೆ ನಿರ್ದೇಶಕರು ಸಿನಿಮಾ ಮಾಡಿದ್ದಾರೆ ಎಂಬುದು ನಿರ್ಮಾಪಕ ಆನಂದ್ ಬಾಬು ಮಾತು.
ಎ.ಪಿ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದಲ್ಲಿ ಚಿತ್ರ ತಯಾರಾಗಿದೆ. ಈಗಾಗಲೇ ಹೆಂಡವೇ ನಮ್ಮ ಮನೆಯ ದೇವರು ಹಾಡು ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಹೃದಯ ಶಿವ ಅವರ ಸಾಹಿತ್ಯವಿದು. ಸಮಾಜದಲ್ಲಿ ನಮ್ಮ ಸುತ್ತ ಮುತ್ತಲೇ ನಮಗೆ ಅರಿವಿಗೆ ಬಾರದ ರೀತಿ ನಮ್ಮ ಮುತ್ತಲು ಬೆಂಕಿ ಹಾಕೋ ಕ್ರೂರ ಮನಸ್ಥಿತಿಗಳ ಅನಾವರಣ ಮಾಡುವ ಹಾಡಿದು.
ಸದ್ಯ ಬೇಡಿಕೆ ಹೆಚ್ಚಾಗುತ್ತಿದೆ. ಅಂದಹಾಗೆ ಇದು ಎ.ಆರ್. ಸಾಯಿರಾಮ್ ಅವರ ಮೊದಲ ನಿರ್ದೇಶನದ ಚಿತ್ರ. ಎ.ಪಿ ಪ್ರೊಡಕ್ಷನ್ಸ್ ಸಂಸ್ಥೆಯ ಆನಂದ್ ಬಾಬು ನಿರ್ಮಾಣದ ನಾಲ್ಕನೆ ಚಿತ್ರ (ಕಮರೊಟ್ಟು ಚೆಕ್ ಪೋಸ್ಟ್. ಗುಬ್ಬಿಮರಿ.) ರವಿಕುಮಾರ್ ಸನಾ ಛಾಯಾಗ್ರಹಣವಿದೆ. ಜ್ಯೂಡ ಸ್ಯಾಂಡಿ ಸಂಗೀತ ಮಾಡಿದರೆ, ಶ್ರೀಕಾಂತ್ ಅವರ ಸಂಕಲನವಿದೆ.
ಟಾಲಿವುಡ್ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ‘ಗೂಢಚಾರಿ’ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮವಾಗಿ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿರುವುದು ಕೂಡ ಗೊತ್ತಿದೆ. ‘ಗೂಢಚಾರಿ 2’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ರಿಲೀಸ್ ಆಗಿ ಸಖತ್ ಸದ್ದು ಮಾಡಿದೆ. ಇದೀಗ ಗೂಢಚಾರಿ ಸೀಕ್ವೆಲ್ ಗೆ ಬಾಲಿವುಡ್ ಸ್ಟಾರ್ ಎಂಟ್ರಿಯಾಗಿದ್ದಾರೆ.
ಗೂಢಚಾರಿ 2 ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಮೂಲಕ ಪ್ರೇಕ್ಷಕರಿಂದ ಚಪ್ಪಾಳೆ ಪಡೆದಿರುವ ಅವರೀಗ ಟಾಲಿವುಡ್ ನತ್ತ ಹೆಜ್ಜೆ ಇಟ್ಟಿದ್ದಾರೆ. ಗೂಢಚಾರಿ ಬಳಗ ಇಮ್ರಾನ್ ಫಸ್ಟ್ ಲುಕ್ ರಿಲೀಸ್ ಮಾಡಿ ಅವರನ್ನು ಸ್ವಾಗತಿಸಿದೆ. ಆದ್ರೆ ಯಾವ ಪಾತ್ರದಲ್ಲಿ ಇಮ್ರಾನ್ ನಟಿಸುತ್ತಿದ್ದಾರೆ ಎಂಬ ಕುತೂಹಲವನ್ನು ಹಾಗೇ ಉಳಿಸಿಕೊಂಡಿದೆ. ಇಮ್ರಾನ್ ಹಶ್ಮಿ ಎಂಟ್ರಿಗೆ ಇಡೀ ಚಿತ್ರತಂಡ ಖುಷಿಯಾಗಿದೆ. ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.
‘ಗೂಢಚಾರಿ 2’ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ‘ಕಾರ್ತೀಕೇಯ 2’, ‘ಮೇಜರ್’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’, ‘
ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಹಾಗೂ ‘ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್’ ಬ್ಯಾನರ್ ಮೂಲಕ ಟಿ.ಜಿ. ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ‘ಗೂಢಚಾರಿ 2’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಬನಿತಾ ಸಂಧು ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.
ಸಿನಿಮಾ ಪ್ರೇಮಿಗಳ ತಂಡವೊಂದು ಅತ್ಯಂತ ಶ್ರಧ್ದೆಯಿಂದ, ಪ್ರೀತಿಯಿಂದ ನಿರ್ಮಾಣ ಮಾಡಿದ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಆ ಸಿನಿಮಾದ ಹೆಸರೇ ಭಾವತೀರಯಾನ. ಇಂದಿನ ಯುವಕ, ಯುವತಿಯರ ಭಾವನೆ, ಪ್ರೀತಿಯ ಹಾಡು ಪಾಡು, ನೋವು ನಲಿವು, ಸುಖ ದುಖಗಳನ್ನು ತೆರೆದಿಡುವ ಪ್ರಯತ್ನವಾಗಿ ಈ ಸಿನಿಮಾ ಮೂಡಿಬಂದಿದೆ.
ಆರೋಹಾ ಫಿಲಂಸ್ ಮೂಲಕ ಮಯೂರ ಅಂಬೇಕಲ್ಲು ಹಾಗೂ ತೇಜಸ್ ಕಿರಣ್ ವರ್ಷದ ಹಿಂದೆ ಫಸ್ಟ್ ಲವ್ ಎಂಬ ಕಿರುಚಿತ್ರವನ್ನು ನಿರ್ಮಿಸಿದ್ದರು, ಮಯೂರ ಅಂಬೆಕಲ್ಲು ನಿರ್ದೇಶನದ ಆ ಕಿರುಚಿತ್ರ ಮಿಲಿಯನ್ಗೂ ಹೆಚ್ಚು ವೀಕ್ಷಣೆಯಾಗಿ ನೋಡುಗರೆಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರ ಎರಡನೇಅಬಾಗವನ್ನೂಮಾಡಿದಾಗ ಇದನ್ನು ಸಿನಿಮಾ ಮಾಡಿ ಎಂದು ಹಿರಿಯರೆಲ್ಲರೂ ನೀಡಿದ ಸಲಹೆಯಿಂದ ಪ್ರೇರಿತರಾದ ಈ ತಂಡ ಇದೀಗ ಎರಡು ಭಾಗದ ಈ ಶಾರ್ಟ್ ಫಿಲಂ ಅನ್ನು ಸಿನಿಮಾ ರೂಪಕ್ಕೆ ತಂದಿದೆ,
ಆ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಒಬ್ಬ ಹುಡುಗನ ಪ್ರೀತಿಯ ಪಯಣ ಈ ಚಿತ್ರದಲ್ಲಿದ್ದು, ತೇಜಸ್ ಕಿರಣ್ ಹಾಗೂ ಆರೋಹಿ ನೈನಾ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಇವರ ಸಂಧ್ಯಾಕಾಲದ ಪಾತ್ರಗಳನ್ನು ಹಿರಿಯ ಕಲಾವಿದರಾದ ರಮೇಶ್ ಭಟ್ ಹಾಗೂ ವಿದ್ಯಾಮೂರ್ತಿ ನಿರ್ವಹಿಸಿದ್ದಾರೆ. ಅಂಕಣಕಾರ ಎ.ಆರ್. ಮಣಿಕಾಂತ್ ಅವರ ಜನಪ್ರಿಯ ಲೇಖನಗಳ ಗುಚ್ಚ ಭಾವತೀರಯಾನ, ಅದನ್ನೇ ತಮ್ಮ ಚಿತ್ರದ ಶೀರ್ಷಿಕೆಯಾಗಿ ಮಯೂರ ಆಯ್ಕೆ ಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕ ಭಾಮ.ಹರೀಶ್, ನಿತ್ಯಾನಂದ ಪ್ರಭು, ಕರಿಸುಬ್ಬು, ಶಿಲ್ಪಾ ಶ್ರೀನಿವಾಸ್, ಲಯನ್ ವೆಂಕಟೇಶ್ ಅಲ್ಲದೆ ಪತ್ರಕರ್ತ ಎ.ಆರ್. ಮಣಿಕಾಂತ್ ಕೂಡ ಹಾಜರಿದ್ದು ಟೈಟಲ್ ಲಾಂಚ್ ಮಾಡಿದರು.
ಹಿರಿಯ ನಟ ರಮೇಶ್ ಭಟ್ ಮಾತನಾಡಿ, ನನ್ನ 50 ವರ್ಷಗಳ ಜರ್ನಿಯಲ್ಲಿ ಮನೆಗೆ ಸ್ವೀಟ್ಸ್, ಬೊಕ್ಕೆ ತಂದು ಪಾತ್ರ ಕೊಟ್ಟವರು ತುಂಬಾ ವಿರಳ. ಈ ಹುಡುಗರು ನನಗೆ ಅಷ್ಟು ಗೌರವ ಕೊಟ್ಟರು. ಈ ಇಬ್ಬರು ಹುಡುಗರು ತುಂಬಾ ಕಾನ್ಫಿಡೆಂಟಾಗಿ ಸಿನಿಮಾ ಮಾಡಿದ್ದಾರೆ, ಇಡೀ ತಂಡ ಪ್ರೀತಿಯಿಂದ ಹಾನೆಸ್ಟಾಗಿ ಕೆಲಸ ಮಾಡಿದೆ. ಮನುಷ್ಯನಿಗೆ ಪ್ರಬುದ್ದತೆ ಬಂದಮೇಲೆ ತಾನು ಮಾಡಿದ ಸರಿ ತಪ್ಪುಗಳನ್ನು ಅವಲೋಕಿಸುವ ಸಮಯ ಬಂದಿರುತ್ತದೆ, ಮನದ ತೊಳಲಾಟಗಳನ್ನು ವ್ಯಕ್ತಪಡಿಸುವ ನನ್ನ ಈ ಪಾತ್ರ ಪ್ರತಿಯೊಬ್ಬರಿಗೂ ಕನೆಕ್ಟ್ ಆಗುತ್ತೆ ಎಂದು ಹೇಳಿದರು.
ನಂತರ ಮಾತನಾಡಿದ ವಿದ್ಯಾಮೂರ್ತಿ ಇದು ಭಾವನೆಗಳೇ ತುಂಬಿದ ಯಾನ ಎನ್ನಬಹದು. ರಮೇಶ್ ಭಟ್ ಅವರ ಜೊತೆ ಅಭಿನಯಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದರು.
ನಾಯಕನಟ ತೇಜಸ್ ಮಾತನಾಡುತ್ತ, ಒಬ್ಬ ಯುವಕನ ಲೈಫ್ ಜರ್ನಿ ಈ ಚಿತ್ರದಲ್ಲಿದೆ. ವಿದ್ಯಾಮೂರ್ತಿ ಅವರ ಪ್ರಿ ಕ್ಲೈಮ್ಯಾಕ್ಸ್ ಸೀನ್ ಎಲ್ಲರಿಗೂ ತುಂಬಾ ಇಷ್ಟವಾಗುತ್ತೆ, ವಿಶಾಖ ನಾಗಲಾಪುರ ತುಂಬಾ ಚೆನ್ನಾಗಿ ಡೈಲಾಗ್ ಬರೆದಿದ್ದಾರೆ. ಎರಡೂ ಭಾಗದ ಶಾರ್ಟ್ ಫಿಲಂ ೪೦ ನಿಮಿಷ ಇತ್ತು, ನಂತರ ಒಂದಷ್ಟು ಪಾತ್ರಗಳನ್ನು ಸೇರಿಸಿದಾಗ ಒಂದು ಗಂಟೆಯ ಕಥೆ ಹೆಚ್ಚಾಯಿತು. ನಮ್ಮ ಸಿನಿಮಾ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದರು.
ನಿರ್ದೇಶನದ ಜೊತೆ ಸಂಗೀತ ಸಂಯೋಜನೆಯನ್ನೂ ಮಾಡಿರುವ ಮಯೂರ ಮಾತನಾಡುತ್ತ ಈ ಕಾನ್ಸೆಪ್ಟ್ ಶುರುವಾಗಲು ಕಾರಣ ಕೃಷ್ಣ, ಅವರು ಕೊಟ್ಟ ಸಣ್ಣ ಲೈನ್ ಈಗ ಸಿನಿಮಾವಾಗಿದೆ. ನಮ್ಮ ತಂದೆ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿಕೆ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಎಂದರು. ನಂತರ ನಾಯಕಿ ಆರೋಹಿ ನೈನಾ ಮಾತನಾಡಿ ನಮ್ಮ ಪುಟ್ಟ ಹೆಜ್ಜೆಗೆ ನಿಮ್ಮ ಸಹಕಾರ ಬೇಕು. ಆರಂಭದಲ್ಲಿ ವೆಬ್ ಸೀರೀಸ್ ಮಾಡಬೇಕು ಎಂದುಕೊಂಡಿದ್ದೆವು, ನಂತರ ಶಾರ್ಟ್ ಫಿಲಂ ಈಗ ಚಲನಚಿತ್ರವಾಗಿದೆ ಎಂದರು.
ಸ್ಯಾಂಡಲ್ವುಡ್ನ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ನಿಂದ 5ನೇ ಸಿನಿಮಾ ಸೆಟ್ಟೇರಿಸಿದೆ. ಸೂಪರ್ ಸಕ್ಸಸ್ ನೀಡಿರುವ ಡಾಲಿ ಪಿಕ್ಚರ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ.
ಈ ಬಾರಿ ಡಾಲಿ ಪಿಕ್ಚರ್ಸ್ ನಿಂದ ‘ನಡುವೆ ಅಂತರವಿರಲಿ’ ಖ್ಯಾತಿಯ ನಟ ಪ್ರಖ್ಯಾತ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಸಿನಿಮಾಗೆ ‘ಜೆಸಿ ಎಂದು ಟೈಟಲ್ ಇಡಲಾಗಿದೆ. ಜೆಸಿ ಎಂದರೆ ಜುಡಿಸಿಯಲ್ ಕಸ್ಟಡಿ. ಜೈಲಿಂದ ಹೊರ ಬಂದ ಯುವಕನ ಕಥೆ ಇದಾಗಿದೆ.
ಬುಧವಾರ ಜೆಸಿ ಸಿನಿಮಾದ ಮುಹೂರ್ತ ನೆರವೇರಿತು. ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ಜೆಸಿ ಚಿತ್ರಕ್ಕೆ ಚಾಲನೆ ನೀಡಲಾಯಿತು.
ಮುಹೂರ್ತದ ಸಮಯದಲ್ಲಿ ಇಡೀ ಸಿನಿಮಾತಂಡ ಹಾಜರಿತ್ತು. ಡಾಲಿ ಧನಂಜಯ ತಮ್ಮದೇ ನಿರ್ಮಾಣದ 5ನೇ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿ ತಂಡಕ್ಕೆ ಶುಭಹಾರೈಸಿದರು.
ಜೆಸಿ ಫಸ್ಟ್ ಲುಕ್ ನಲ್ಲಿ ಬೆಂಗಳೂರು ಕಾರಾಗೃಹ, ಜೈಲು ಕಂಬಿಗಳನ್ನು ನೋಡಬಹುದು. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಸಿನಿಮಾತಂಡ ಸದ್ಯದಲ್ಲೇ ಹೆಚ್ಚಿನ ಮಾಹಿತಿ ಬಿಟ್ಟುಕೊಡಲಿದ್ದಾರೆ.
ಇನ್ನು 2018ರಲ್ಲಿ ರಿಲೀಸ್ ಆಗಿದ್ದ ನಡುವೆ ಅಂತವಿರಲಿ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಪ್ರಖ್ಯಾತ್ ನಟನೆಯ 2ನೇ ಸಿನಿಮಾ ಇದಾಗಿದೆ. ಸುಮಾರು 5 ವರ್ಷಗಳ ಬಳಿಕ ಪ್ರಖ್ಯಾತ್ ಹೀರೋ ಆಗಿ ಮತ್ತೆ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.
ಅಂದಹಾಗೆ ‘ಜೆಸಿ’ ಸಿನಿಮಾಗೆ ಚೇತನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ಚೇತನ್ ಜೈರಾಮ್ ಅವರಿಗೂ ಇದು ಮೊದಲ ಸಿನಿಮಾ. ಪಕ್ಕಾ ಮಾಸ್ ಸಿನಿಮಾ ಇದಾಗಿದ್ದು ಚಿತ್ರಕ್ಕೆ ಮಾಸ್ತಿ ಅವರ ಖಡಕ್ ಡೈಲಾಗ್ ಇರಲಿದೆ. ಕಾರ್ತಿಕ್ ಅವರ ಛಾಯಾಗ್ರಾಹಣ, ರೋಹಿತ್ ಸೋವರ್ ಅವರ ಸಂಗೀತ ಜೆಸಿ ಸಿನಿಮಾಗೆ ಇರಲಿದೆ. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ.
ಟೆಲಿವಿಷನ್ ಲೋಕದಲ್ಲಿ ತನ್ನದೆ ಸಾಮರ್ಥ್ಯವನ್ನು ಕಾಪಾಡಿಕೊಂಡು ಬರುತ್ತಿರುವ ’ಉದಯ ವಾಹಿನಿ’ಯು ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಲವಾರು ಉತ್ತಮ ಧಾರವಾಹಿಗಳನ್ನು ವೀಕ್ಷಕರಿಗೆ ನೀಡುತ್ತಾ ಬಂದಿದೆ. ಆ ಸಾಲಿಗೆ ಈಗ ’ಮೈನಾ’ ಎಂಬ ಹೊಸ ಧಾರಾವಾಹಿ ಸೇರ್ಪಡೆಯಾಗಿದೆ.
ಈ ಧಾರಾವಾಹಿ ಬಗ್ಗೆ ಹೇಳುವುದಾದರೆ, ಮೈಲಾರಕೋಟೆ ಮೈನಾ ಆ ಮನೆಗೆ ಕಿರಿಮಗಳು. ಊರಲ್ಲಿ ಅಲೆಮಾರಿ. ಪರರಿಗೆ ಉಪಕಾರಿ. ಚಿಕ್ಕ ಪೆಟ್ಟಿಗೆ ಅಂಗಡಿ ನಡೆಸುತ್ತಿರುವ ನೀತಿವಂತ ಅಪ್ಪ ಮುತ್ತಣ್ಣ. ಅವರಿವರ ಹೊಲದಲ್ಲಿ ಕೂಲಿ ಮಾಡಿ ಸಂಸಾರದ ನೊಗಕ್ಕೆ ಹೆಗಲು ಕೊಟ್ಟಿರುವ ಅಮ್ಮ.
ಸೀತೆಯಂಥ ಅಕ್ಕ ರಾಧೆ. ಕಾಲೇಜಿಗೆ ಹೋಗುತ್ತಿರುವ ಅಣ್ಣ. ಈಕೆಯ ಪುಟ್ಟಗೂಡಲ್ಲಿ ದುಡ್ಡಿಗೆ ಕೊರತೆ. ಪ್ರೀತಿ ವಾತ್ಸಲ್ಯಕ್ಕಲ್ಲ. ಅಕ್ಕನಿಗೆ ವಯಸ್ಸು ಮೀರುತ್ತಿದ್ದು, ಮದ್ವೆ ಸಂಬಂಧ ಕೂಡಿ ಬರುತ್ತಿಲ್ಲ.
ಒಂದೊಂದು ಸಲವು ನಾನಾ ಕಾರಣಗಳಿಂದ ಮದುವೆ ಮುರಿದು ಹೋಗುತ್ತಿರುತ್ತದೆ. ಕೆಲವೊಂದು ಸಂಬಂಧ ಮುರಿಯಲು ಮೈನಾ ನೆಪವಾಗುತ್ತಾಳೆ. ಮುಂದೆ ಅಣ್ಣ ಕೈ ಕೊಟ್ಟಾಗ, ತಂಗಿಯು ಅಕ್ಕನಿಗೆ ಮದುವೆ ಮಾಡಿಸಲು ಜವಬ್ದಾರಿ ಹೊತ್ತುಕೊಂಡು ಪಟ್ಟಣಕ್ಕೆ ಬರುತ್ತಾಳೆ. ಅಲ್ಲಿಂದ ಆಕೆಯ ಬದುಕು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತದೆ. ಅದೇ ಧಾರಾವಾಹಿಯ ವಿಶೇಷ.
ಮೈನಾ ಪಾತ್ರದಲ್ಲಿ ವಿಜಯಲಕ್ಷೀ ನಟಿಸುತ್ತಿದ್ದಾರೆ. ತಾರಾಗಣದಲ್ಲಿ ನಾಗಾಭರಣ, ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್, ಸಿದ್ದಾರ್ಥ್, ಪ್ರಭಂಜನ, ಸಾಗರ್, ಹರ್ಷಾರ್ಜುನ್, ಯಶಸ್ವಿನಿ, ಆಶಾ, ಅನುಷಾ, ಕುಮಾರಿ ತಿಶ್ಯ, ಮಾಸ್ಟರ್ ರಣವೀರ್ ಮುಂತಾದವರ ಅಭಿನಯವಿದೆ. ಅಪರೂಪದ ವಿಶಿಷ್ಟ ಪಾತ್ರಕ್ಕೆ ಹಿರಿಯ ನಟಿ ಭವ್ಯ ಕಾಣಿಸಿಕೊಳ್ಳುತ್ತಿದ್ದಾರೆ.
ಸಂತೋಷ್ಗೌಡ ಹಾಸನ ನಿರ್ದೇಶನ ಮಾಡುತ್ತಿದ್ದು, ಆನಂದ್ ಆಡಿಯೋ ಕಂಪನಿಯ ಸಹಸಂಸ್ಥೆ ’ಕೋಮಲ್ ಎಂಟರ್ ಪ್ರೈಸಸ್’ ಬ್ಯಾನರ್ ಅಡಿ ಧಾರವಾಹಿಯು ನಿರ್ಮಾಣವಾಗುತ್ತಿದೆ. ಕೆ.ಕಲ್ಯಾಣ್ ಸಾಹಿತ್ಯದ ಗೀತೆಗೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದಾರೆ.
ಛಾಯಾಗ್ರಹಣ ಜಗದೀಶ್ವಾಲಿ ಹಾಗೂ ದಯಾಕರ್, ಸಂಕಲನ ಪ್ರಕಾಶ್ಕಾರಿಂಜ ಅವರದಾಗಿದೆ. ಫೆಬ್ರವರಿ 19, ಸೋಮವಾರದಿಂದ ಭಾನುವಾರದವರೆಗೆ ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ’ಮೈನಾ’ ಪ್ರಸಾರವಾಗಲಿದೆ.
”ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿ ನಟ ಪೃಥ್ವಿ ಅಂಬಾರ್ ಮಾತನಾಡಿ, ಫಾರ್ ರಿಜಿಸ್ಟ್ರೇಷನ್ ಎರಡು ಸಹಪಾಠಿಗಳ ಪ್ರಯತ್ನ ಇದು. ಇಬ್ಬರು ನವೀನ್ ಅವರ ಕನಸಿನ ಕೂಸು ಇದು. ತುಂಬಾ ಹಾರ್ಡ್ ವರ್ಕ್ ಆಗಿದೆ. ಈ ಚಿತ್ರಕ್ಕಾಗಿ. ಫಾರ್ ರಿಜಿಸ್ಟ್ರೇಷನ್ ಬಗ್ಗೆ ಗೊತ್ತಿರಬಹುದು. ಜಾಗ, ಗಾಡಿ ಅದು ಇದು ಅಂತಾ. ಮನಸ್ಸಿನಲ್ಲಿ ಸಂಬಂಧಗಳು ರಿಜಿಸ್ಟ್ರೇಷನ್ ಆಗಬೇಕು. ಅನ್ನೋದು ನಮ್ಮ ಆಸೆ. ಟ್ರೇಲರ್ ನೋಡಿದ್ದೀರಾ? ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಸಿನಿಮಾ ಎಲ್ಲರಿಗೂ ಹತ್ತಿರವಾಗುತ್ತದೆ. ಎಲ್ಲಾ ಪಾತ್ರ ವರ್ಗವದವರು ಅದ್ಭುತವಾಗಿ ನಟಿಸಿದ್ದಾರೆ ಎಂದು ತಿಳಿಸಿದರು.
ನಟಿ ಮಿಲನಾ ನಾಗರಾಜ್ ಮಾತನಾಡಿ, ನವೀನ್ ಸರ್ ಮನೆಗೆ ಬಂದು ಕಥೆ ವಿವರಿಸಿದರು. ತುಂಬಾ ತಯಾರಿಯಿಂದ ಬಂದಿದ್ದರು. ಫಸ್ಟ್ ಆಫ್ ಕಥೆ ಹೇಳಿ ನಿಲ್ಲಿಸಿಬಿಟ್ಟರು. ಕಂಟಿನ್ಯೂ ಮಾಡಿ ಎಂದಾಗ ನೀವು ಸಿನಿಮಾ ಒಪ್ಪಿಕೊಂಡರೇ ಕಥೆ ಹೇಳುವುದು ಎಂದರು. ಸರಿ ಸರ್ ಯೋಚನೆ ಮಾಡಿ ಹೇಳುತ್ತೇನೆ ಎಂದೆ. ಆಮೇಲೆ ಸಿನಿಮಾ ಮಾಡುತ್ತೇನೆ ಬಂದು ಕಥೆ ಹೇಳಿ ಅಂದಾಗ ಕಥೆ ಹೇಳಿದರು. ಒಂದು ರೀತಿ ಬ್ಲಾಕ್ ಮೇಲೆ ಮಾಡಿ ಹೋಗಿದ್ದರು. ನಿರ್ಮಾಪಕರಾದ ನವೀನ್ ಸರ್ ಬಹಳ ಫ್ಯಾಷನೆಟೇಡ್ ನಿರ್ಮಾಪಕರು. ಬಹಳಷ್ಟು ಇಂಟರ್ ವ್ಯೂಗಳಲ್ಲಿಯೂ ಹೇಳಿದ್ದೇನೆ. ಟೈಟಲ್ ಕೊಡುವುದರಿಂದ ಹಿಡಿದು ಕಥೆಯಲ್ಲಿ ಸಂಪೂರ್ಣವಾಗಿ ಕುತಿದ್ದಾರೆ. ಪ್ರತಿ ಶಾರ್ಟ್, ಸೀನ್ಸ್ ತೊಡಗಿಸಿಕೊಳ್ಳುತ್ತಿದ್ದಾರೆ. ನನಗೆ ಮನಸ್ಸು ಪೂರ್ತಿಯಾಗಿ ಸಿನಿಮಾ ಗೆಲ್ಲಬೇಕು. ಇಂತಹ ನಿರ್ದೇಶಕರು, ನಿರ್ಮಾಪಕರು ಗೆಲ್ಲಬೇಕು ಎಂದರು.
ನಿರ್ಮಾಪಕರಾದ ನವೀನ್ ರಾವ್ ಮಾತನಾಡಿ, ಬಹಳ ಪ್ರೀತಿಯಿಂದ ಮಾಡಿರುವ ಸಿನಿಮಾವಿದು. ಎರಡು ತಿಂಗಳು ಚರ್ಚೆ ಬಳಿಕ ಕಥೆ ರೆಡಿ ಮಾಡಿಕೊಂಡೆವು. ಕಥೆ ಡಿಮ್ಯಾಂಡ್ ಮಾಡಿದಾಗ ನಾವು ಮೊದಲ ಭೇಟಿಯಾಗಿದ್ದು ಮಿಲನಾ ಮೇಡಂ ಅವರನ್ನು. ಅವರಿಗೆ ಕಥೆ ಹೇಳಿದೆವು. ಆ ನಂತರ ಪೃಥ್ವಿ ಸರ್ ಭೇಟಿ ಮಾಡಿ ಕಥೆ ಹೇಳಿದೆವು. ಎಲ್ಲಾ ಕಲಾವಿದರು ಸಹಕಾರದಿಂದ ಈ ಚಿತ್ರವಾಗಿದೆ. ಎಲ್ಲರೂ ಶ್ರಮಪಟ್ಟು ಸಿನಿಮಾ ಮಾಡಿದ್ದೇವೆ. ನನ್ನ ಕುಟುಂಬಸ್ಥರು ಸಪೋರ್ಟ್ ಆಗಿವೆ ನಿಂತಿದ್ದಾರೆ. ಕೃಷ್ಣ ಸರ್ ಮೇಡಂ..ಸಿನಿಮಾಗೆ ಸ್ಟ್ರೇಂಥ್ ಆಗಿದ್ದರು. ಇದೇ 23ಕ್ಕೆ ಸಿನಿಮಾ ರಿಲೀಸ್ ಮಾಡಿದ್ದೇವೆ. ನೀವು ಎಲ್ಲರೂ ಸಹಕಾರ ಕೊಡಬೇಕು. ಈ ಚಿತ್ರದ ಬಳಿಕ ಮತ್ತೊಂದು ಚಿತ್ರಕ್ಕೆ ರೆಡಿಯಾಗುತ್ತಿದ್ದೇವೆ ಎಂದರು.
ನಿರ್ದೇಶಕ ನವೀನ್ ದ್ವಾರಕಾನಾಥ್ ಮಾತನಾಡಿ, ಹೊಸ ಪ್ರಯತ್ನ ಮಾಡಿದ್ದೇವೆ. ಬೆನ್ನು ತಟ್ಟಿ ಹಾರೈಸಿ. ತಪ್ಪಾಗಿದ್ದರೆ ಇನ್ನೊಮ್ಮೆ ಬೆನ್ನು ತಟ್ಟಿ ಹೇಳಿ ಚೆನ್ನಾಗಿ ಮಾಡಿ ಅಂತಾ ಹೇಳಿ ಮಾಡೋಣಾ. ನಾನು ಈ ಚಿತ್ರವನ್ನು ನನ್ನ ಗುರುಗಳಾದ ಸಿ ಆರ್ ಸಿಂಹ ಅವರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದರು.
ಸಂಬಂಧ ಮಹತ್ವ ಸಾರುವ ಫಾರ್ ರಿಜಿಸ್ಟ್ರೇಷನ್ ಟ್ರೇಲರ್ ಸಿನಿಮಾ ಮೇಲೆ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ.ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ ಮಹದೇವ್, ಕುಶಾಲ್, ಭಾ.ಮ.ಗಿರೀಶ್, ವಿತರಕರ ವಲಯದ ಅಧ್ಯಕ್ಷರಾದ ವೆಂಕಟೇಶ್, ನಿರ್ದೇಶಕ ಹಾಗೂ ಗೀತರಚನೆಕಾರ ಬಹದ್ದೂರ್ ಚೇತನ್ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.
ಇದೊಂದು ಕ್ರೈಂ ಥ್ರಿಲ್ಲರ್, ಆಕ್ಷನ್ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವಿ.ಲವ, ಬೆಂಗಳೂರಿನಲ್ಲಿ ನಡೆದ ನೈಜಘಟನೆ ಈ ಚಿತ್ರಕ್ಕೆ ಸ್ಪೂರ್ತಿ. ತನುಷ್ ಶಿವಣ್ಣ ಈ ಚಿತ್ರದ ನಾಯಕ. ಸೋನಾಲ್ ಮೊಂತೆರೊ ನಾಯಕಿ. ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ, ಸುಜಯ್ ಶಾಸ್ತ್ರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಟ್ರೇಲರ್ ನಲ್ಲಿ ಈ ಚಿತ್ರದ ಎರಡನೇ ಭಾಗ ಬರುವ ಸುಳಿವು ಕೂಡ ನೀಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
“Mr ನಟ್ವರ್ ಲಾಲ್”, ನಾನು ನಾಯಕನಾಗಿ ನಟಿಸಿರುವ ನಾಲ್ಕನೇ ಚಿತ್ರ. ನಾನು ಎಂಟು ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ. ನಿರ್ಮಾಣ ಕೂಡ ನನ್ನದೆ. ಒಂದು ಹಂತದಲ್ಲಿ ಹಣದ ಸಮಸ್ಯೆಯಿಂದಾಗಿ ಸಿನಿಮಾ ನಿಲಿಸಿ ಬಿಡೋಣ ಅಂದುಕೊಂಡೆ. ಆದರೆ ನಾನು ನಂಬಿರುವ ಅಮ್ಮನವರ ದಯೆಯಿಂದ ಅನೇಕ ಸ್ನೇಹಿತರು ನನ್ನ ಸಹಾಯಕ್ಕೆ ಬಂದರು. ಅವರೆಲ್ಲರ ಸಹಾಯ ಹಾಗೂ ನನ್ನ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇದೇ 23 ಬಿಡುಗಡೆಯಾಗುತ್ತಿದೆ ಎಂದರು ನಾಯಕ ಹಾಗೂ ನಿರ್ಮಾಪಕ ತನುಷ್ ಶಿವಣ್ಣ.
ನಂದಿನಿ ಎಂಬುದು ನನ್ನ ಪಾತ್ರದ ಹೆಸರು ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಹರಣಿ ಶ್ರೀಕಾಂತ್, ರಘು ರಮಣಕೊಪ್ಪ, ಕಾಕ್ರೋಜ್ ಸುಧೀ, ವಿಜಯ್ ಚೆಂಡೂರ್ ಹಾಗೂ ಛಾಯಾಗ್ರಾಹಕ ವಿಲಿಯಂ ಡೇವಿಡ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಈಗಾಗಲೇ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಟ್ರೇಲರ್ ಕೂಡ ಸಖತಾಗಿದೆ. ನಾನು ಎರಡು ಹಾಡುಗಳನ್ನು ಬರೆದಿದ್ದೇನೆ ಎಂದರು ಬಹದ್ದೂರ್ ಚೇತನ್.
ಈ ಹಿಂದೆ ಜೆ.ಜೆ. ಮೂವೀಸ್ ಬ್ಯಾನರ್ ಮೂಲಕ ನಾನೊಂಥರಾ ಎಂಬ ಆಕ್ಷನ್ ಚಿತ್ರವನ್ನು ನಿರ್ಮಿಸಿದ್ದ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಅವರು ಇದೀಗ ತಮ್ಮ ಪುತ್ರನನ್ನು ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಸದ್ಯ ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಜಾಯ್ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಯುವ ನಿರ್ದೇಶಕ ಆರ್ಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಯಲೇ ಇರಲೇ ಎಂಬ ರೊಮ್ಯಾಂಟಿಕ್ ವೀಡಿಯೋ ಸಾಂಗ್ ರಿಲೀಸ್ ಮಾಡುವ ಮೂಲಕ ಜಾಯ್ ನಟನೆಯ ನೂತನ ಚಿತ್ರದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.
ನಿರ್ದೇಶಕ ಆರ್ಯನ್ ಮಾತನಾಡಿ, ಪ್ರೊಡಕ್ಷನ್ ನಂ.2 ಚಿತ್ರದ ಮೂಲಕ. ಜಾಯ್ ಅವರನ್ನು ನಾಯಕನಾಗಿ ಪರಿಚಯಿಸುತ್ತಿದ್ದೇವೆ. ಅವರು ಆಕ್ಷನ್, ಡ್ಯಾನ್ಸ್, ಆಕ್ಟಿಂಗ್ ಎಲ್ಲಾ ಕಲಿತು ಫಿಟ್ ನೆಸ್ ಮೇಂಟೇನ್ ಮಾಡಿಕೊಂಡು ಬಂದಿದ್ದಾರೆ. ಇದೊಂದು ರೊಮ್ಯಾಂಟಿಕ್ ಯೂತ್ಫುಲ್ ಡ್ರಾಮಾ ಸಬ್ಜೆಕ್ಟ್ ಆಗಿದ್ದು, ವ್ಯಾಲೆಂಟೆನ್ಸ್ ಡೇ ಪ್ರಯುಕ್ತ ಈ ರೊಮ್ಯಾಂಟಿಕ್ ಸಾಂಗನ್ನು ರಿಲೀಸ್ ಮಾಡುತ್ತಿದ್ದೇವೆ. ಗೌಸ್ ಪೀರ್ ಅವರು ಸಾಹಿತ್ಯ ಬರೆದಿರುವ ಈ ಹಾಡನ್ನು ರೋಣದ ಬಕ್ಕೇಶ್ ಅವರು ಅದ್ಭುತವಾಗಿ ಕಂಪೋಸ್ ಮಾಡಿಕೊಟ್ಟಿದ್ದಾರೆ. ಅಷ್ಟೇ ಚೆನ್ನಾಗಿ ಛಾಯಾಗ್ರಾಹಕ ಅಲನ್ ಭರತ್ ಅವರು ಹಾಡನ್ನು ಸೆರೆ ಹಿಡಿದುಕೊಟ್ಟಿದ್ದಾರೆ. ಹರಿಚರಣ್ ಅವರು ಚೆನ್ನೈನಿಂದ ಬಂದು ಹಾಡಿದ್ದಾರೆ. ನಾನು ಈ ಹಿಂದೆ ಕಿಲ್ಲಿಂಗ್ ವೀರಪ್ಪನ್ ಸೇರಿದಂತೆ ಒಂದಷ್ಟು ಚಿತ್ರಗಳಿಗೆ ಅಸೋಸೊಯೇಟ್ ಆಗಿ ಕೆಲಸ ಮಾಡಿದ್ದೇನೆ. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮಾರ್ಚ್ ಎಂಡ್ ನಿಂದ ಚಿತ್ರದ ಟಾಕಿ ಪೋರ್ಷನ್ ಶುರು ಮಾಡಿ ಗೋವಾ ಸಿರ್ಸಿ, ಹೊನ್ನಾವರ, ಗೋಕರ್ಣ ಸುತ್ತಮುತ್ತ ಚಿತ್ರೀಕರಣ ನಡೆಸಲಿದ್ದೇವೆ. ಡಿಸೆಂಬರ್ ವೇಳೆಗೆ ಚಿತ್ರವನ್ನು ರಿಲೀಸ್ ಮಾಡೋ ಯೋಜನೆಯಿದೆ. ಚಿತ್ರದಲ್ಲಿ ಲವ್ ಸ್ಟೋರಿ ಜೊತೆಗೆ ಮದರ್ ಸೆಂಟಿಮೆಂಟ್, ಸಿಸ್ಟರ್ ಸೆಂಟಿಮೆಂಟ್, ಎಮೋಷನ್ ಸೇರಿದಂತೆ ಎಲ್ಲಾ ರೀತಿಯ ಕಮರ್ಷಿಯಲ್ ಅಂಶಗಳೂ ಇರುತ್ತವೆ. ಚಿತ್ರದಲ್ಲಿ ನಾಯಕಿಯಾಗಿ ಸ್ನಿಗ್ಧಾ ಶೆಟ್ಟಿ ಅವರು ಅಭಿನಯಿಸುತ್ತಿದ್ದಾರೆ, ಅವರಿಗೂ ಇದು ಮೊದಲ ಚಿತ್ರ ಎಂದರು.
ನಂತರ ನಿರ್ಮಾಪಕಿ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಮಾತನಾಡುತ್ತ ನಮ್ಮ ಮೊದಲ ಚಿತ್ರಕ್ಕೆ ನೀವೆಲ್ಲ ತುಂಬಾ ಸಪೋರ್ಟ್ ಮಾಡಿದ್ದೀರಿ. ಬೇರೆಯವರ ಮೇಲೆ ಬಂಡವಾಳ ಹಾಕುವ ಬದಲು ನಮ್ಮ ಮಗನ ಪ್ರತಿಭೆಯನ್ನು ಬೆಳಕಿಗೆ ತರಬೇಕೆಂದು ಈ ಸಿನಿಮಾ ಮಾಡುತ್ತಿದ್ದೇನೆ. ಈಗಿನ ಕಾಲದ ಯೂತ್ ಬೇಸ್ ಮಾಡಿಕೊಂಡು ನಿರ್ದೇಶಕರು ಉತ್ತಮವಾದ ಕಥೆಯನ್ನು ರಡಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ನಾಯಕ ನಟ ಜಾಯ್ ಮಾತನಾಡಿ ಈ ಹಿಂದೆ ಸಪೋರ್ಟಿವ್ ಕ್ಯಾರೆಕ್ಟರ್ ಮಾಡಿದ್ದೆ. ನಂತರ ಮಾಡೆಲಿಂಗ್ ಕಡೆ ಗಮನ ಹರಿಸಿದೆ. ಈಗ ಸಿನಿಮಾಗೆ ಬೇಕಾದ ಎಲ್ಲಾ ರೀತಿಯ ಟ್ರೈನಿಂಗ್ ಮಾಡಿಕೊಂಡು ಮತ್ತೆ ತೆರೆಮೇಲೆ ಬರುತ್ತಿದ್ದೇನೆ. ಸಪೋರ್ಟ್ ಮಾಡಿ ಎಂದರು.
ಸಾಹಿತಿ ಗೌಸ್ ಪೀರ್ ಮಾತನಾಡಿ ನಾವೆಲ್ಲ ಡಿಸ್ಕಸ್ ಮಾಡಿ ಒಂದೊಳ್ಳೆ ಸಬ್ಜೆಕ್ಟ್ ರೆಡಿ ಮಾಡಿಕೊಂಡಿದ್ದೇವೆ. ಟೀನೇಜರ್ ಕಥೆ. ಕಾಲೇಜಿನಲ್ಲಿ ಹುಡುಗ ಹುಡುಗಿ ಮಧ್ಯೆ ನಡೆಯೋ ಪ್ರೀತಿ, ಪ್ರೇಮದ ಕಥೆ. ಚಿತ್ರದಲ್ಲಿ ಎಲ್ಲಾ ಬಾಂಡಿಂಗ್ ಬಗ್ಗೆ ಹೇಳಲಾಗಿದೆ. ರೋಣದ ಬಕ್ಕೇಶ್ ಅವರು 5 ಹಾಡುಗಳನ್ನು ಮಾಡುತ್ತಿದ್ದಾರೆ. ಈ ಹಾಡು ಇಷ್ಟು ಚೆನ್ನಾಗಿ ಮೂಡಿಬರಲು ಗಾಯಕ ಹರಿಚರಣ್ ಅವರೇ ಕಾರಣ. ಈ ಸಾಂಗ್ ನಮ್ಮ ಸಿನಿಮಾಗೆ ಇನ್ ವಿಟೇಶನ್ ಇದ್ದಹಾಗೆ. ಅದನ್ನು ನೀವೆಲ್ಲ ಜನರಿಗೆ ತಲುಪಿಸಿ ಎಂದು ಮಾಧ್ಯಮದವರಲ್ಲಿ ಕೇಳಿಕೊಂಡರು.
ಪ್ರೀತಿ ಪ್ರೇಮ ನಡುವೆ ದ್ವೇಷ…. ಇದಿಷ್ಟು ಹೇಳಿದರೆ ಗೊತ್ತಾಗುತ್ತೆ ಸಿನಿಮಾದ ತಾತ್ಪರ್ಯ. ಹೌದು ಪ್ರಣಯಂ ಒಂದು ಹೊಸ ಬಗೆಯ ಲವ್ ಸ್ಟೋರಿ. ಹಾಗೆ ಹೇಳುವುದಾದರೆ, ನಾಯಕ, ನಾಯಕಿಯರ ಮಧ್ಯೆ ಪ್ರೇಮಾಂಕುರವಾಗುತ್ತೆ. ಇನ್ನೇನು ಬದುಕು ಕಟ್ಟಿಕೊಳ್ಳಬೇಕೆಂಬ ಉತ್ಸಾಹದಲ್ಲಿರೋ ಜೋಡಿ ನಡುವೆ ದುಷ್ಟನೊಬ್ಬನ ಆಗಮನವಾಗುತ್ತೆ. ಮುಂದಾ…? ಏನಾಗುತ್ತೆ ಅನ್ನೋದೇ ಪ್ರಣಯಂ ಕಥಾಹಂದರ.
ಹಾಗಾದರೆ, ಅವರಿಬ್ಬರು ಒಂದಾಗುವುದುಲ್ಲವೇ? ಇಬ್ಬರೂ ಒಂದಾದರೂ ಅಲ್ಲೊಂದು ಟ್ವಿಸ್ಟ್ ಎದುರಾಗುತ್ತೆ. ಅಲ್ಲೊಂದು ಸಣ್ಣ ಸಂಘರ್ಷಕ್ಕೆ ಕಾರಣವಾಗುತ್ತೆ. ಈ ಸನ್ನಿವೇಷವಷ್ಟೇ ಅಲ್ಲ, ಸಿನಿಮಾದ ಹಲವು ಸನ್ನಿವೇಷಗಳು ಮನಸ್ಸಿಗೆ ಮುದಕೊಡುತ್ತವೆ. ಹೇಗೆ ಅನ್ನೋದನ್ನು ಒಮ್ಮೆ ಪ್ರಣಯಂ ನೋಡಲೇಬೇಕು.
ಗೌತಮನ ಅತ್ತೆಯ ಮಗಳು ಅಮೃತಾ ಇವರಿಬ್ಬರಿಗೂ ಮದುವೆ ಗೊತ್ತಾಗುತ್ತೆ. ನಂತರ ಅವರಿಬ್ಬರ ಓಡಾಟ ಮತ್ತು ಒಡನಾಟದ ಸನ್ನಿವೇಶಗಳೇ ಬೇರೆ. ಹೀಗಿರುವಾಗಲೇ ಅವನ ಪ್ರೇಯಸಿಯ ಮೇಲೆ ಒಬ್ಬನ ಕಣ್ಣು ಬೀಳುತ್ತೆ. ಅಲ್ಲೊಂದಷ್ಟು ನೋವು ಅನುಭವಿಸಬೇಕಾಗುತ್ತೆ. ಕ್ಲೈಮ್ಯಾಕ್ಸ್ ವೇಳೆಗೆ ಹೊಸದೊಂದು ಟ್ವಿಸ್ಟ್ ಸಿಗುತ್ತೆ. ಅಲ್ಲೊಂದು ಲವ್ ಸ್ಟೋರಿ ತೆರೆದುಕೊಳ್ಳುತ್ತೆ. ಆಮೇಲೇನಾಗುತ್ತೆ ಅನ್ನೋದಕ್ಕೆ ಸಿನಿಮಾ ನೋಡಬೇಕು.
ಸಿನಿಮಾದ ಹೈಲೆಟ್ ಅಂದರೆ ಸಂಗೀತ ಮತ್ತು ಛಾಯಾಗ್ರಹಣ. ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮತ್ತು ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಲ್ಲಿ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಎಲ್ಲೋ ಒಂದು ಕಡೆ ಕಥೆ ಬೇರೆಡೆ ಸಾಗುತ್ತಿದೆಯಾ ಅನ್ನುತ್ತಿದ್ದಂತೆ, ಅಲ್ಲಿ ಸಂಗೀತ ಮತ್ತದೇ ಟ್ರಾಕ್ ಗೆ ತಂದು ಬಿಡುತ್ತದೆ.
ಇನ್ನು, ರಾಜವರ್ಧನ್ ಅವರಿಲ್ಲಿ ಆಕರ್ಷಣೀಯ. ಅವರ ಅಭಿನಯ ಮತ್ತು ಸ್ಟಂಟ್ ಗಳಿಂದ ಗಮನ ಸೆಳೆಯುತ್ತಾರೆ. ಎಂದಿಗಿಂತಲೂ ಇಲ್ಲಿ ಇಷ್ಟವಾಗುತ್ತಾರೆ. ನೈನಾ ಗಂಗೂಲಿ ಕೂಡ ಸಿಕ್ಕ ಪಾತ್ರಕ್ಕೆ ಮೋಸ ಮಾಡಿಲ್ಲ. ತೆರೆ ಮೇಲೆ ಕಾಣಿಸಿಕೊಳ್ಳುವ ಪಾತ್ರಗಳೆಲ್ಲವೂ ಪಾತ್ರಕ್ಕೆ ನ್ಯಾಯ ಸಲ್ಲಿಸಿವೆ. ಹಾಸ್ಯ ಕಲಾವಿದ ಗೋವಿಂದೇಗೌಡ, ಖಳನಟ ರಾಘವ ನಾಯಕ್ , ಪವನ್ ಸೂರ್ಯ ಇಷ್ಟವಾಗುತ್ತಾರೆ.
ಕೊನೆಯಲ್ಲಿ ಒಂದು ಮಾತು ಹೇಳೋದಾದರೆ, ಒಂದೊಳ್ಳೆಯ ಮನರಂಜನಾತ್ಮಕ ಕಥೆವಿಲ್ಲಿದೆ. ಎಲ್ಲಾ ವರ್ಗ ಕುಳಿತು ನೋಡಲು ಮೋಸವಿಲ್ಲ. ಕಥೆಗೆ ಪೂರಕವಾಗಿಯೇ ಹಾಡುಗಳು ಗುನುಗುವಂತಿವೆ.