ಫಸ್ಟ್ ಶೆಡ್ಯುಲ್ಡ್ ಮುಗಿಸಿದ ಹುಬ್ಬಳ್ಳಿ ಹಂಟರ್ಸ್…ಇದು ಬೆಲ್ ಬಾಟಮ್ ನಿರ್ಮಾಪಕ ಹೊಸ ಸಿನಿಮಾ
ಕನ್ನಡದ ಸೂಪರ್ ಹಿಟ್ ಸಿನಿಮಾ ಬೆಲ್ ಬಾಟಮ್ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಹೊಸ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ತಮ್ಮದೇ ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್ನಡಿ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ಎಡಗೈ ಅಪಘಾತಕ್ಕೆ ಕಾರಣ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ ಕಡ್ಕೋಲ್ ಹುಬ್ಬಳ್ಳಿ ಹಂಟರ್ಸ್ ನಿರ್ದೇಶಕರು.
ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರೆಸಿದ್ದ ಚಿತ್ರತಂಡ ಇದೀಗ ಮೊದಲ ಹಂತದ ಶೂಟಿಂಗ್ ಮುಗಿಸಿದೆ. ಹುಬ್ಬಳ್ಳಿ ನಗರದಲ್ಲಿ 14 ದಿನ ಶೂಟಿಂಗ್ ಚಿತ್ರೀಕರಣ ನಡೆಸಿದೆ. ಮಾರ್ಚ್ ತಿಂಗಳಲ್ಲಿ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಶುರು ಮಾಡಲು ಯೋಜನೆ ಹಾಕಿಕೊಂಡಿದೆ.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ,ಮಹಾನಟಿ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.
ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರ್ ಕಥೆ ಬರೆದು ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ.
ಇತ್ತೀಚೆಗೆ ಟೀಸರ್ ಹೊರತರಲಾಗಿದೆ. ಈ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ಶ್ವೇತಾ ಇತರರು ಸಿನಿಮಾ ಬಗ್ಗೆ ಮಾತಾಡಿದರು.
ಈ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರರಾದ ವಿಜಯಾನಂದ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸೂಪರ್ ಹಿಟ್ ಬಗ್ಗೆ ಮಾತಾಡಿದ ಅವರು, ಕಥೆ ಬರೆಯಲು ಶುರು ಮಾಡಿದಾಗಿನಿಂದ ಈ ವರೆಗೂ ಎಲ್ಲವೂ ಹೂವೆತ್ತಿಟ್ಟಷ್ಟೇ ಸಲೀಸಾಗಿ ನಡೆಯುತ್ತಾ ಬಂದಿದೆ ಎಂಬ ಧನ್ಯತಾ ಭಾವ ವ್ಯಕ್ತಪಡಿಸಿದರು.
ವಿಜಯಾನಂದ್, ಯಾವುದಕ್ಕೂ ಕೊರತೆಯಾಗದಂತೆ ಒಂದಿಡೀ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಜಿ ಉಮೇಶ್ ಅವರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ. ತನ್ನ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ಅದರ ಕಂಟೆಂಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸದರಿ ಚಿತ್ರ ಸೂಪರ್ ಹಿಟ್ಟಾಗೋದು ಗ್ಯಾರೆಂಟಿ ಎಂಬ ಭರವಸೆ ವ್ಯಕ್ತಪಡಿಸಿದರು. ನೂರು ದಿನಗಳ ಕಾಲ ಯಶಸ್ವೀ ಪ್ರದರ್ಶನ ನೀಡಲು ಅನುವು ಮಾಡಿಕೊಡುವಂತೆ ಪ್ರೇಕ್ಷಕ ಪ್ರಭುಗಳಲ್ಲಿ ವಿನಂತಿಸಿಕೊಂಡರು.
ಇದೇ ವೇದಿಕೆಯಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನೂ ವಿಜಯಾನಂದ್ ಹಂಚಿಕೊಂಡರು. ಸೂಪರ್ ಹಿಟ್ ಚಿತ್ರದ ಓಟಿಟಿ ಹಕ್ಕು ಗಳನ್ನು ಹೊಸಾ ಸಂಸ್ಥೆಯೊಂದು ದೊಡ್ದ ಮೊತ್ತಕ್ಕೆ ಖರೀದಿಸಿರುವುದಾಗಿ ಮಾಹಿತಿ ನೀಡಿದರು. ಈ ಸಿನಿಮಾವನ್ನು ಪ್ರೀತಿಯಿಂದ ನಿರ್ಮಾಣ ಮಾಡಿರುವ ಜಿ ಉಮೇಶ್ ಚುಟುಕಾದ ಮಾತುಗಳಲ್ಲಿಯೇ ತಮ್ಮ ಸಿನಿಮಾ ಪ್ರೇಮ, ಸೂಪರ್ ಹಿಟ್ ಬಗೆಗಿನ ಭರವಸೆ ವ್ಯಕ್ತಪಡಿಸುತ್ತಲೇ, ತಮ್ಮ ಮೊದಲ ಹೆಜ್ಜೆಯಂಥಾ ಈ ಚಿತ್ರವನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಸಾಧು ಕೋಕಿಲಾ, ಸೂಪರ್ ಹಿಟ್ ಸಿನಿಮಾ ತಂಡದ ಮೇಲೆ ದೇವರ ಆಶೀರ್ವಾದ ಇದೆ ಎಂಬ ವಿಚಾರವನ್ನು ಹೇಳುತ್ತಲೇ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಪ್ರಚಾರದ ಪಟ್ಟುಗಳು ಈ ದಿನಮಾನದಲ್ಲಿ ಎಷ್ಟು ಮುಖ್ಯ ಎಂಬುದರ ಬಗ್ಗೆ ಚಿತ್ರತಂಡಕ್ಕೆ ಮನವರಿಕೆ ಮಾಡಿ ಕೊಡುತ್ತಲೇ, ಜನಪ್ರಿಯತೆಯ ಭರಾಟೆಯಲ್ಲಿ ವಹಿಸಬೇಕಾದ ಎಚ್ಚರದ ಬಗ್ಗೆಯೂ ಗಿಲ್ಲಿಗೆ ಕಿವಿ ಮಾತು ಹೇಳಿದರು.
ಈ ಚಿತ್ರಕ್ಕೆ ಸಾಹಿತ್ಯ, ಸಂಗೀತದ ಜವಾಬ್ದಾರಿಯೊಂದಿಗೆ ಒಂದು ವಿಶೇಷವಾದ ಪಾತ್ರದಲ್ಲಿಯೂ ನಟಿಸಿರುವ ಕವಿರತ್ನ ಡಾ.ವಿ ನಾಗೇಂದ್ರ ಪ್ರಸಾದ್ ಸೂಪರ್ ಹಿಟ್ ಮೂಡಿ ಬಂದಿರೋ ರೀತಿಯ ಬಗ್ಗೆ ಮೆಚ್ಚುಗೆ ಸೂಚಿಸುತ್ತಲೇ, ಗಿಲ್ಲಿಯ ಯಶದ ಪ್ರಭೆ ಸದರಿ ಚಿತ್ರಕ್ಕೆ ವರವಾಗಿರುವ ಬಗ್ಗೆ ಪ್ರಸ್ತಾಪಿಸಿದ್ದಲ್ಲದೇ, ಈ ಹಿಂದೆ ಯಾವುದೇ ಸಿನಿಮಾದಲ್ಲಿ ನಟಿಸಿದ್ದರೂ ಕೂಡಾ, ಅಂಥಾ ಚಿತ್ರಗಳಿಗೆ ಪ್ರಚಾರ ನೀಡಬೇಕಿರುವ ಕರ್ತವ್ಯದ ಬಗ್ಗೆಯೂ ಗಿಲ್ಲಿ ನಟನಿಗೆ ಪ್ರೀತಿಯಿಂದ ಕಿವಿ ಮಾತು ಹೇಳಿದರು.
ಗಿಲ್ಲಿ ಮಾತಾಡಿ, ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ಕೃತಜ್ನತೆ ಸಲ್ಲಿಸುತ್ತಲೇ ಒಟ್ಟಾರೆ ಚಿತ್ರೀಕರಣ ರಸಾನುಭವಗಳನ್ನು ಹಂಚಿಕೊಂಡರು. ಈ ಮಧ್ಯೆ ಇತ್ತೀಚೆಗೆ ಹೊತ್ತಿಕೊಂಡಿದ್ದ ವಿವಾದವೂ ಸೇರಿದಂತೆ ಒಂದಷ್ಟು ವಿಚಾರಗಳಿಗೆ ಸ್ಪಷ್ಟೀಕರಣ ಕೊಡುತ್ತಲೇ ಸೂಪರ್ ಹಿಟ್ ಚಿತ್ರವನ್ನು ನೋಡಿ ಹರಸುವಂತೆ ಕೇಳಿಕೊಂಡರು.
ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ.ಆ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ. ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಈ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ಇನ್ನೂರಕ್ಕು ಹೆಚ್ಚು ಚಿತ್ರಮಂದಿಗಳಲ್ಲಿ ಅದ್ದೂರಿಯಾಗಿ ತೆರೆಗಾಣಲಿದೆ.
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ.
ಇತ್ತೀಚೆಗೆ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಸಿನಿಮಾ ಬಗ್ಗೆ ಮಾತಾಡಿದರು.
ಫೆ. 27ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗಾಣಲಿದೆ. ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರರಾದ ವಿಜಯಾನಂದ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈ ವೇಳೆ ಮಾತಾಡಿದ ಅವರು, ಕಥೆ ಸಿದ್ಧವಾದ ಬಗೆಯಿಂದ ಮೊದಲ್ಗೊಂಡು ಈವರೆಗಿನ ಮಧುರ ಸ್ಮೃತಿಯನ್ನು ಮೆಲುಕು ಹಾಕಿದ್ದಾರೆ. ಕಥೆ ಬರೆಯಲು ಶುರು ಮಾಡಿದಾಗಿನಿಂದ ಈ ವರೆಗೂ ಎಲ್ಲವೂ ಹೂವೆತ್ತಿಟ್ಟಷ್ಟೇ ಸಲೀಸಾಗಿ ನಡೆಯುತ್ತಾ ಬಂದಿದೆ ಎಂದ ಅವರು, ಯಾವುದಕ್ಕೂ ಕೊರತೆಯಾಗದಂತೆ ಒಂದಿಡೀ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಜಿ ಉಮೇಶ್ ಅವರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ.
ತನ್ನ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ಅದರ ಕಂಟೆಂಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸದರಿ ಚಿತ್ರ ಸೂಪರ್ ಹಿಟ್ಟಾಗೋದು ಗ್ಯಾರೆಂಟಿ ಎಂಬ ಭರವಸೆ ವ್ಯಕ್ತಪಡಿಸಿದರು. ನೂರು ದಿನಗಳ ಕಾಲ ಯಶಸ್ವೀ ಪ್ರದರ್ಶನ ನೀಡಲು ಅನುವು ಮಾಡಿಕೊಡುವಂತೆ ವಿನಂತಿಸಿಕೊಂಡರು.
ಇದೇ ವೇದಿಕೆಯಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನೂ ವಿಜಯಾನಂದ್ ಹಂಚಿಕೊಂಡರು. ಸೂಪರ್ ಹಿಟ್ ಚಿತ್ರದ ಓಟಿಟಿ ಹಕ್ಕು ಗಳನ್ನು ಹೊಸಾ ಸಂಸ್ಥೆಯೊಂದು ದೊಡ್ದ ಮೊತ್ತಕ್ಕೆ ಖರೀದಿಸಿರುವುದಾಗಿ ಮಾಹಿತಿ ನೀಡಿದರು. ಈ ಸಿನಿಮಾವನ್ನು ಪ್ರೀತಿಯಿಂದ ನಿರ್ಮಾಣ ಮಾಡಿರುವ ಜಿ ಉಮೇಶ್ ಚುಟುಕಾದ ಮಾತುಗಳಲ್ಲಿಯೇ ತಮ್ಮ ಸಿನಿಮಾ ಪ್ರೇಮ, ಸೂಪರ್ ಹಿಟ್ ಬಗೆಗಿನ ಭರವಸೆ ವ್ಯಕ್ತಪಡಿಸುತ್ತಲೇ, ತಮ್ಮ ಮೊದಲ ಹೆಜ್ಜೆಯಂಥಾ ಈ ಚಿತ್ರವನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಸಾಧು ಕೋಕಿಲಾ, ಸೂಪರ್ ಹಿಟ್ ಸಿನಿಮಾ ತಂಡದ ಮೇಲೆ ದೇವರ ಆಶೀರ್ವಾದ ಇದೆ ಎಂಬ ವಿಚಾರವನ್ನು ಹೇಳುತ್ತಲೇ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಪ್ರಚಾರದ ಪಟ್ಟುಗಳು ಈ ದಿನಮಾನದಲ್ಲಿ ಎಷ್ಟು ಮುಖ್ಯ ಎಂಬುದರ ಬಗ್ಗೆ ಚಿತ್ರತಂಡಕ್ಕೆ ಮನವರಿಕೆ ಮಾಡಿ ಕೊಡುತ್ತಲೇ, ಜನಪ್ರಿಯತೆಯ ಭರಾಟೆಯಲ್ಲಿ ವಹಿಸಬೇಕಾದ ಎಚ್ಚರದ ಬಗ್ಗೆಯೂ ಗಿಲ್ಲಿಗೆ ಕಿವಿ ಮಾತು ಹೇಳಿದರು.
ಈ ಚಿತ್ರಕ್ಕೆ ಸಾಹಿತ್ಯ, ಸಂಗೀತದ ಜವಾಬ್ದಾರಿಯೊಂದಿಗೆ ಒಂದು ವಿಶೇಷವಾದ ಪಾತ್ರದಲ್ಲಿಯೂ ನಟಿಸಿರುವ ಕವಿರತ್ನ ಡಾ.ವಿ ನಾಗೇಂದ್ರ ಪ್ರಸಾದ್ ಸೂಪರ್ ಹಿಟ್ ಮೂಡಿ ಬಂದಿರೋ ರೀತಿಯ ಬಗ್ಗೆ ಮೆಚ್ಚುಗೆ ಸೂಚಿಸುತ್ತಲೇ, ಗಿಲ್ಲಿಯ ಯಶದ ಪ್ರಭೆ ಸದರಿ ಚಿತ್ರಕ್ಕೆ ವರವಾಗಿರುವ ಬಗ್ಗೆ ಪ್ರಸ್ತಾಪಿಸಿದ್ದಲ್ಲದೇ, ಈ ಹಿಂದೆ ಯಾವುದೇ ಸಿನಿಮಾದಲ್ಲಿ ನಟಿಸಿದ್ದರೂ ಕೂಡಾ, ಅಂಥಾ ಚಿತ್ರಗಳಿಗೆ ಪ್ರಚಾರ ನೀಡಬೇಕಿರುವ ಕರ್ತವ್ಯದ ಬಗ್ಗೆಯೂ ಗಿಲ್ಲಿ ನಟನಿಗೆ ಪ್ರೀತಿಯಿಂದ ಕಿವಿ ಮಾತು ಹೇಳಿದರು.
ಗಿಲ್ಲಿ ಮಾತನಾಡಿ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ಕೃತಜ್ನತೆ ಸಲ್ಲಿಸುತ್ತಲೇ ಒಟ್ಟಾರೆ ಚಿತ್ರೀಕರಣ ರಸಾನುಭವಗಳನ್ನು ಹಂಚಿಕೊಂಡರು. ಈ ಮಧ್ಯೆ ಇತ್ತೀಚೆಗೆ ಹೊತ್ತಿಕೊಂಡಿದ್ದ ವಿವಾದವೂ ಸೇರಿದಂತೆ ಒಂದಷ್ಟು ವಿಚಾರಗಳಿಗೆ ಸ್ಪಷ್ಟೀಕರಣ ಕೊಡುತ್ತಲೇ ಸೂಪರ್ ಹಿಟ್ ಚಿತ್ರವನ್ನು ನೋಡಿ ಹರಸುವಂತೆ ಕೇಳಿಕೊಂಡರು.
ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.
ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ.ಆ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ. ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಈ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ಇನ್ನೂರಕ್ಕು ಹೆಚ್ಚು ಚಿತ್ರಮಂದಿಗಳಲ್ಲಿ ಅದ್ದೂರಿಯಾಗಿ ತೆರೆಗಾಣಲಿದೆ.
ಯುವ ನಟ ವಿರಾಟ್ ಕರ್ಣ ನಾಯಕನಾಗಿ ನಟಿಸುತ್ತಿರುವ, ಅಭಿಷೇಕ್ ನಾಮ ನಿರ್ದೇಶನದ ಬಹುನಿರೀಕ್ಷಿತ ಪೌರಾಣಿಕ ಆ್ಯಕ್ಷನ್ ಡ್ರಾಮಾ ‘ನಾಗಬಂಧಂ’ ಚಿತ್ರತಂಡದಿಂದ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಈ ಚಿತ್ರದಲ್ಲಿ ಬಾಲಿವುಡ್ನ ‘ಫೈಟರ್’ ಚಿತ್ರದ ಮೂಲಕ ಗಮನಸೆಳೆದಿದ್ದ ನಟ ರಿಷಬ್ ಸಾಹ್ನಿ ಅವರು ಆಫ್ಘನ್ ಸುಲ್ತಾನ್ ‘ಅಬ್ದಾಲಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ.
ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ರಿಷಬ್ ಸಾಹ್ನಿ ಅವರು ರಕ್ತಸಿಕ್ತ ಕೊಡಲಿಯನ್ನು ಹಿಡಿದು, ಮಂಜುಗಡ್ಡೆಯ ಯುದ್ಧಭೂಮಿಯಲ್ಲಿ ಆಕ್ರಮಣಕಾರಿ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹಿಂದೆ ಬೃಹತ್ ಸೈನ್ಯ, ಯುದ್ಧದ ಆನೆಗಳು ಮತ್ತು ಕೆಂಡದಂತಹ ಕಣ್ಣುಗಳಿರುವ ತೋಳಗಳ ಹಿಂಡು ಇರುವುದು ಪಾತ್ರದ ಕ್ರೌರ್ಯ ಮತ್ತು ಶಕ್ತಿಯನ್ನು ಬಿಂಬಿಸುತ್ತಿದೆ.
ಕ್ರಿಸ್ತ ಶಕ 1750ರ ಕಾಲಘಟ್ಟದ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ, ಭಾರತದ ಮೇಲೆ ದಾಳಿ ಮಾಡಿ ದೇವಾಲಯಗಳನ್ನು ಲೂಟಿ ಮಾಡಿದ ಅಬ್ದಾಲಿಯ ಇತಿಹಾಸವನ್ನು ತೋರಿಸಲಾಗಿದೆ. ಹಿಮಾಲಯದಲ್ಲಿ ಅಡಗಿರುವ ರಹಸ್ಯ ‘ನಾಗಬಂಧಂ’ ಅನ್ನು ಭೇದಿಸಲು ಈತ ನಡೆಸುವ ಕ್ರೂರ ಹಾದಿ ಮತ್ತು ಆತನ ಮಹತ್ವಾಕಾಂಕ್ಷೆಯೇ ಈ ಪಾತ್ರದ ಜೀವಾಳ.
ನಿರ್ದೇಶಕ ಅಭಿಷೇಕ್ ನಾಮ ಮಾತನಾಡಿ, “ರಿಷಬ್ ಸಾಹ್ನಿ ಅವರು ಅಬ್ದಾಲಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ತೆರೆಯ ಮೇಲೆ ಅವರು ನಿಜವಾದ ಇತಿಹಾಸದ ವ್ಯಕ್ತಿಯಂತೆಯೇ ಕಾಣುತ್ತಾರೆ” ಎಂದಿದ್ದಾರೆ. ನಟ ರಿಷಬ್ ಸಾಹ್ನಿ ಕೂಡ ಇಂತಹ ಸವಾಲಿನ ಪಾತ್ರ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ತಾರಾಗಣದ ವಿಚಾರಕ್ಕೆ ಬಂದರೆ, ವಿರಾಟ್ ಕರ್ಣ, ನಭಾ ನಟೇಶ್, ಐಶ್ವರ್ಯ ಮೆನನ್, ಜಗಪತಿ ಬಾಬು, ಮುರಳಿ ಶರ್ಮ, ಬಿ.ಎಸ್. ಅವಿನಾಶ್ ಮುಂತಾದವರು ನಟಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಸೌಂದರ್ ರಾಜನ್ (ಛಾಯಾಗ್ರಹಣ), ಅಶೋಕ್ ಕುಮಾರ್ (ಕಲಾ ನಿರ್ದೇಶನ), ಅಭೆ ಮತ್ತು ಜುನೈದ್ ಕುಮಾರ್ (ಸಂಗೀತ) ಇದ್ದಾರೆ. ಕಿಶೋರ್ ಅನ್ನಪೂರೆಡ್ಡಿ ಮತ್ತು ನಿಶಿತಾ ನಾಗಿರೆಡ್ಡಿ ಈ ಸಿನಿಮಾದ ನಿರ್ಮಾಪಕರು. ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ, ಅಂದರೆ ಮಾರ್ಚ್ 15ರಂದು ಈ ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಲಿದೆ. ಈ ಚಿತ್ರವು ಈ ಬೇಸಿಗೆಯಲ್ಲಿ ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆಕಾಣಲು ಸಜ್ಜಾಗಿದೆ.
ಹೊಸ ಮುಖಗಳನ್ನು ಚಿತ್ರರಂಗಕ್ಕೆ ಪರಿಚಯಿಸುವಲ್ಲಿ ಪಂಟರ್ ಎನಿಸಿಕೊಂಡಿರುವ ನಿರ್ದೇಶಕ ಎಪಿ ಅರ್ಜುನ್, ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಕಾಂಬೋದಲ್ಲಿ ಲಕ್ಷ್ಮಿಪುತ್ರ ಸಿನಿಮಾ ತಯಾರಾಗ್ತಿದೆ. ಎಪಿ ಅರ್ಜುನ್ ಕಥೆ ಬರೆದು ತಮ್ಮದೇ ಎಪಿ ಅರ್ಜುನ್ ಫಿಲ್ಮ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಲಕ್ಷ್ಮಿಪುತ್ರ ಸಿನಿಮಾದ ಶೂಟಿಂಗ್ ಬಗ್ಗೆ ಕ್ರೇಜಿ ಅಪ್ ಡೇಟ್ ಸಿಕ್ಕಿದೆ.
ಲಕ್ಷ್ಮಿಪುತ್ರ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಕಾಶಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಮೂರು ದಿನಗಳ ಕಾಲ ನಡೆದ ಶೂಟಿಂಗ್ ನಲ್ಲಿ ನಾಯಕ ಚಿಕ್ಕಣ್ಣ, ತಾರಾ ಸೇರಿದಂತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದರು. ಕಾಶಿಯ ಮಣಿಕರ್ಣಿಕಾ ಘಾಟ್, ಗಂಗಾನದಿ ತೀರ, ಬನರಾಸ್, ಕಾಶಿ ಪ್ರಮುಖ ಬೀದಿಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಶೀಘ್ರದಲ್ಲೇ ಹಾಡುಗಳ ಶೂಟಿಂಗ್ ನ್ನು ಚಿತ್ರತಂಡ ಕೈಗೆತ್ತಿಕೊಳ್ಳಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ಲಕ್ಷ್ಮಿಪುತ್ರ ಸಿನಿಮಾವನ್ನು ಥಿಯೇಟರ್ ಅಂಗಳಕ್ಕೆ ಇಳಿಸಲು ಟೀಂ ಯೋಜನೆ ಹಾಕಿಕೊಂಡಿದೆ.
ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಚಿಕ್ಕಣ್ಣನಿಗೆ ಜೋಡಿಯಾಗಿ ನವ ನಟಿ ವಂದಿತಾ ಅಭಿನಯಿಸುತ್ತಿದ್ದಾರೆ. ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.
ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಕ್ಯಾಮೆರಾ ಹಿಡಿದಿದ್ದಾರೆ.
ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ.
ಅಯ್ಯನ ಮನೆ, ಮಾರಿಕಲ್ಲು ವೆಬ್ ಸರಣಿ ಸಕ್ಸಸ್ ಬಳಿಕ zee5 ಕನ್ನಡ ಇದೀಗ ಕನ್ನಡ ಒರಿಜಿನಲ್ ಸಿರೀಸ್ ಘೋಷಿಸಿದೆ. ಈ ಸರಣಿಗೆ ರಾಕ್ಷಸ ಎಂಬ ಟೈಟಲ್ ಇಡಲಾಗಿದೆ. ನಂಬಿಕೆ ಮತ್ತು ಕೊಲೆಯಲ್ಲಿ ಬೇರೂರಿರುವ ಕರಾಳ ಅಪರಾಧ ಕಥೆಯ ಸುತ್ತ ಈ ಸರಣಿ ಸಾಗಲಿದೆ. ಬಿಡುಗಡೆಯಾಗಿರುವ ರಾಕ್ಷಸ ಟ್ರೇಲರ್ ಕುತೂಹಲ ಹೆಚ್ಚಿಸಿದ್ದು, ಈ ಮೂಲಕ zee5 ಮತ್ತೊಂದು ವಿಶೇಷ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲಿದೆ.
ಸುಹಾನ್ ಪ್ರಸಾದ್ ಮತ್ತು ಅಪೂರ್ವ ಬರೆದು, ಸುಹಾನ್ ಪ್ರಸಾದ್ ನಿರ್ದೇಶಿಸಿರುವ ಈ ಸರಣಿಯನ್ನು ಖ್ಯಾತ ನಿರ್ದೇಶಕ ತರುಣ್ಸುಧೀರ್ ತಮ್ಮದೇ ತರುಣ್ ಸುಧೀರ್ ಪ್ರೊಡಕ್ಷನ್ಸ್ ನಿರ್ಮಿಸಿದ್ದಾರೆ. ಚಿನ್ನಾರಿ ಮುತ್ತ ಖ್ಯಾತಿಯ ವಿಜಯ್ ರಾಘವೇಂದ್ರ ರಾಕ್ಷಸ ಮೂಲಕ ಸಿರೀಸ್ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಯೂರಿ, ಅವಿನಾಶ್, ಮಾಳವಿಕ, ಅಪ್ಪಣ್ಣ ಮತ್ತು ಅಭಿಜಿತ್ ತಾರಾಬಳಗದಲ್ಲಿದ್ದಾರೆ.
ತಮ್ಮ ಚೊಚ್ಚಲ ಒಟಿಟಿ ಪ್ರವೇಶದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ್ ರಾಘವೇಂದ್ರ, “ರಾಕ್ಷಸ OTT ಜಾಗಕ್ಕೆ ನನ್ನ ಮೊದಲ ಹೆಜ್ಜೆಯಾಗಿದೆ. ಈ ಪ್ರಯಾಣವನ್ನು ಪ್ರಾರಂಭಿಸಲು ನಾನು ಇದಕ್ಕಿಂತ ಪ್ರಾಮಾಣಿಕ ಅಥವಾ ಸವಾಲಿನ ಕಥೆಯನ್ನು ಕೇಳಲು ಸಾಧ್ಯವಿಲ್ಲ. ನನ್ನನ್ನು ಆಕರ್ಷಿಸಿದ್ದು ಅಪರಾಧ ಅಥವಾ ಸಸ್ಪೆನ್ಸ್ ಮಾತ್ರವಲ್ಲ, ಕರ್ತವ್ಯ, ನಂಬಿಕೆ ಮತ್ತು ವೈಯಕ್ತಿಕ ಜವಾಬ್ದಾರಿಯ ನಡುವೆ ಹರಿದ ವ್ಯಕ್ತಿ ಪಾತ್ರದ ಭಾವನಾತ್ಮಕ ತೂಕ. ZEE5 ಬೇರೂರಿರುವ, ಶಕ್ತಿಯುತವಾದ ಕನ್ನಡ ಕಥೆಗಳಿಗೆ ಜಾಗವನ್ನು ಸೃಷ್ಟಿಸುತ್ತಿದೆ ಮತ್ತು OTT ರಾಕ್ಷಸದಂತಹ ನಿರೂಪಣೆಗಳು ಉಸಿರಾಡಲು ಮತ್ತು ಪ್ರೇಕ್ಷಕರೊಂದಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುತ್ತದೆ. ಅಂತಿಮ ಸಂಚಿಕೆಯ ನಂತರವೂ ಈ ಸರಣಿಯು ಶಾಶ್ವತವಾದ ಪ್ರಭಾವ ಬೀರುತ್ತದೆ ಎಂದು ನಾನು ನಂಬುತ್ತೇನೆ ” ಎಂದರು.
ಒಟಿಟಿಯಲ್ಲಿ ತಮ್ಮ ನಿರ್ಮಾಣದ ಚೊಚ್ಚಲ ಪ್ರವೇಶದ ಬಗ್ಗೆ ಮಾತನಾಡುತ್ತಾ, ತರುಣ್ ಕಿಶೋರ್ ಸುಧೀರ್, “ಒಬ್ಬ ನಿರ್ಮಾಪಕನಾಗಿ, ನಾನು ಬೇರೂರಿರುವ, ತೀವ್ರವಾದ ಮತ್ತು ಭಾವನಾತ್ಮಕವಾಗಿ ಪ್ರಾಮಾಣಿಕವಾದ ಕಥೆಯನ್ನು ಬೆಂಬಲಿಸಲು ಉತ್ಸುಕನಾಗಿದ್ದೆ. ರಾಕ್ಷಸ ತನ್ನ ಬಲವಾದ ಬರವಣಿಗೆ ಮತ್ತು ತನಿಖಾ ತಿರುಳಿನಿಂದಾಗಿ ಎದ್ದು ಕಾಣುತ್ತದೆ, ಮತ್ತು ಕಥೆಯು ಉತ್ತರ ಕರ್ನಾಟಕದಲ್ಲಿ ಸೆಟ್ ಆಗಿರುವುದರಿಂದ ನಾವು ವಿಶೇಷವಾಗಿ ಉತ್ಸುಕರಾಗಿದ್ದೇವೆ, ಇದು ವಿಶಿಷ್ಟ ಸಾಂಸ್ಕೃತಿಕ ಮತ್ತು ಭಾವನಾತ್ಮಕ ಭೂದೃಶ್ಯವನ್ನು ಹೊಂದಿರುವ ಪ್ರದೇಶವಾಗಿದೆ. ಈ ಯೋಜನೆಯೊಂದಿಗೆ ಒಟಿಟಿ ಕ್ಷೇತ್ರಕ್ಕೆ ಕಾಲಿಡುವುದು ಒಂದು ರೋಮಾಂಚಕಾರಿ ಕಲಿಕೆಯ ಅನುಭವವಾಗಿದೆ, ಮತ್ತು ZEE5 ಈ ಕಥೆಗೆ ಸರಿಯಾದ ನೆಲೆಯಾಗಿದೆ ಎಂದು ಭಾವಿಸಿದೆ, ಏಕೆಂದರೆ ಅದು ಬಲವಾದ, ಸ್ಥಳೀಯವಾಗಿ ಬೇರೂರಿರುವ ನಿರೂಪಣೆಗಳನ್ನು ಆಳವಾಗಿ ಹೇಳುವತ್ತ ಗಮನಹರಿಸಿದೆ.” ಎಂದು ಅಭಿಪ್ರಾಯ ಹಂಚಿಕೊಂಡರು.
ಕ್ರೈಮ್ ಸೈಕಾಲಜಿಕಲ್ ಕಥಾಹಂದರ ಹೊಂದಿರುವ ರಾಕ್ಷಸ ಸರಣಿ ಏಳು ಭಾಗಗಳಲ್ಲಿ ಪ್ರಸಾರವಾಗಲಿದೆ. ಫೆಬ್ರವರಿ 20ರಿಂದ zee5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಸಿಸಿಎಲ್ ಟೂರ್ನಮೆಂಟ್ ಅಲ್ಲ ಅದೊಂದು ಭಾವನೆ ಎಂದ ಕಿಚ್ಚ…ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಲು ಫ್ಯಾನ್ಸ್ ಗೆ ಅವಕಾಶ
ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2026ರ ಮಹಾ ಸಮರದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವು ಬರೋಬ್ಬರಿ 12 ವರ್ಷಗಳ ನಂತರ, ಮೂರನೇ ಬಾರಿಗೆ ಐತಿಹಾಸಿಕ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಚಾಂಪಿಯನ್ಸ್ ಟ್ರೋಫಿಯನ್ನು ತಾಯ್ನಾಡಿಗೆ ಹೊತ್ತು ತಂದಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಂಡದ ನಾಯಕ ಕಿಚ್ಚ ಸುದೀಪ್, “ನಾನು ಯಾವಾಗಲೂ ಹೇಳುವಂತೆ, ನಮಗೆ ಇದು ಕೇವಲ ಒಂದು ಟೂರ್ನಮೆಂಟ್ ಅಲ್ಲ, ಇದೊಂದು ಭಾವನೆ. ಅದ್ಭುತ ಆಟಗಾರರ ಈ ತಂಡವನ್ನು ಮುನ್ನಡೆಸಿ, ದಶಕದ ನಂತರ ಕಪ್ ಅನ್ನು ಮನೆಗೆ ತರುತ್ತಿರುವುದು ಪದಗಳಲ್ಲಿ ವಿವರಿಸಲಾಗದ ಅನುಭವ. ಒತ್ತಡದ ನಡುವೆಯೂ ತಂಡವು ನಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದ ರೀತಿ ಅದ್ಭುತವಾಗಿತ್ತು. ಈ ಗೆಲುವು ಕಷ್ಟದ ದಿನಗಳಲ್ಲೂ ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಅರ್ಪಣೆ. ಈ ಸಲ ಕಪ್ ನಮ್ದೆ ಎಂಬ ಘೋಷಣೆ ಈಗ ಕೇವಲ ಮಾತಲ್ಲಅದು ವಾಸ್ತವ” ಎಂದು ಖುಷಿಪಟ್ಟರು
ಅಭಿಮಾನಿಗಳಿಗೂ ಸಿಸಿಎಲ್ ತಂಡ ಸೇರುವ ಅವಕಾಶ
“ಸಿಸಿಎಲ್ ಎಂದರೆ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲ. ಚೆನ್ನಾಗಿ ಕ್ರಿಕೆಟ್ ಆಡುವ ಅಭಿಮಾನಿಗಳಿಗೂ ನಮ್ಮ ತಂಡದಲ್ಲಿ ಅವಕಾಶವಿದೆ. ಯಾರಲ್ಲಿ ನಿಜವಾದ ಪ್ರತಿಭೆ ಇದೆಯೋ ಅವರು ಬಂದು ಸೇರಿಕೊಳ್ಳಬಹುದು” ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಕ್ರಿಕೆಟ್ ಆಡುವ ಅವಕಾಶದ ಬಗ್ಗೆ ಮಾಹಿತಿ ನೀಡಿದರು.
ಕಳೆದ ಭಾನುವಾರ(ಫೆಬ್ರವರಿ 1) ಕೊಯಂಬತ್ತೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆದ್ದು ಕಿಚ್ಚನ ಪಡೆ ಟ್ರೋಫಿ ಎತ್ತಿ ಹಿಡಿದಿತ್ತು 6 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಬುಲ್ಡೋಜರ್ಸ್ ಇತಿಹಾಸ ನಿರ್ಮಿಸಿತು.
ಸುದೀಪ್ ನೇತೃತ್ವದ ಪ್ರದೀಪ್, ಜೆಕೆ, ಕೃಷ್ಣ, ಚಂದನ್, ರಾಜೀವ್, ನಿರೂಪ್, ಪ್ರತಾಪ್, ಅರ್ಜುನ್, ಸಚಿನ್, ಕರಣ್, ಮಂಜುನಾಥ್ ಮತ್ತು ಬಚ್ಚನ್ ಅವರನ್ನೊಳಗೊಂಡ ತಂಡವು ಅಮೋಘ ಪ್ರದರ್ಶನ ನೀಡಿತು. 130 ರನ್ಗಳ ಗುರಿಯನ್ನು ಬೆನ್ನಟ್ಟಿದ ಬುಲ್ಡೋಜರ್ಸ್ ಪರ ಸ್ಟಾರ್ ಬ್ಯಾಟ್ಸ್ಮನ್ ರಾಜೀವ್ ಹನು ಕೇವಲ 35 ಎಸೆತಗಳಲ್ಲಿ 69 ರನ್ ಸಿಡಿಸಿ ‘ಪಂದ್ಯ ಪುರುಷ’ ಪ್ರಶಸ್ತಿ ಪಡೆದರು. ಬೌಲಿಂಗ್ನಲ್ಲಿ ಎದುರಾಳಿಗಳನ್ನು ಕಟ್ಟಿಹಾಕಿದ ಪ್ರತಾಪ್ ‘ಅತ್ಯುತ್ತಮ ಬೌಲರ್’ ಗೌರವಕ್ಕೆ ಪಾತ್ರರಾದರು.
ಚಿತ್ರ: ನೆನಪುಗಳ ಮಾತು ಮಧುರ ನಿರ್ದೇಶಕ: ಅಫ್ಜಲ್ ಸೂಪರ್ ಸ್ಟಾರ್ ನಿರ್ಮಾಪಕ: ಸೆವೆನ್ ರಾಜ್ ತಾರಾಗಣ: ಸೆವೆನ್ ರಾಜ್, ವಸಿಷ್ಠ ರಾಜಪ್ರಭು, ರಣವೀರ್, ವಿನಯ್ ಕುಮಾರ್, ನಾಗೇಂದ್ರ ಅರಸ್, ಶುಭಾ, ರನ್ವಿತಾ ರಾಣಿ, ರೇಖಾ, ಅಂಜಲಿ ಇತರರು.
ಆಗಾಗ ಕರ್ಮ ರಿಟರ್ನ್ಸ್ ಅನ್ನುವ ಮಾತು ಕೇಳುತ್ತಲೇ ಇರುತ್ತೇವೆ. ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿಗೆ ಕಾರಣ, ಅವರು ಮಾಡಿದ ಕೆಲಸಗಳೇ ಅವರಿಗೆ ಮುಳುವಾಗುತ್ತವೆ. ಇದು ಅಕ್ಷರಶಃ ನಿಜ. ಈ ಸಿನಿಮಾದ ಥಾಟ್ ಕೂಡ ಅಂಥದ್ದೇ. ಹೌದು, ಸಿನಿಮಾದಲ್ಲಿ ಮಾಡಬಾರದ್ದು ಕೆಲಸ ಮಾಡಿದ ವ್ಯಕ್ತಿಯೊಬ್ಬ ಕೊನೆಗೆ ನೋವು ಅನುಭವಿಸುತ್ತಾನೆ. ಆತ ಮಾಡಿದ ಕೆಲಸಗಳೇನು? ಯಾರಿಗೆ ತೊಂದರೆ ಕೊಡ್ತಾನೆ ಅನ್ನುವ ಕುತೂಹಲವೇನಾದರೂ ಇದ್ದರೆ ಒಂದೊಮ್ಮೆ ಸಿನಿಮಾ ನೋಡಬಹುದು. ಹಾಗಂತ, ಸಿನಿಮಾ ನಿಮಗೆ ಇಷ್ಟವಾಗುತ್ತೆ ಅನ್ನುವ ಗ್ಯಾರಂಟಿ ಕೊಡುವುದು ಕಷ್ಟಸಾಧ್ಯ. ಇದು ಅದ್ಭುತ ಕಥೆ ಇರುವ ಸಿನಿಮಾವಲ್ಲ. ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡು ಸಿನಿಮಾಗೆ ಹೋಗುವುದು ಬೇಡ. ಮೇಕಿಂಗ್, ಹಾಡು, ಸಂಭಾಷಣೆ ಇತ್ಯಾದಿ ಬಗ್ಗೆಯೂ ನಿರೀಕ್ಷೆಗಳು ಸಲ್ಲದು.
ಹಾಗಂತ ಸಿನಿಮಾದ ಆಶಯ ಸರಿ ಇಲ್ಲವೆಂದಲ್ಲ. ಇನ್ನೂ ಅದ್ಭುತವಾಗಿ ಇರುವ ಕಥೆಯನ್ನು ಚೆನ್ನಾಗಿ ಕಟ್ಟಿಕೊಡುವ ಸಾಧ್ಯತೆ ಇತ್ತು. ತಾಂತ್ರಿಕವಾಗಿ ಸಿನಿಮಾ ಇನ್ನಷ್ಟು ಬಿಗಿಯಾಗಿರಬೇಕಿತ್ತು. ನಿರ್ದೇಶಕರ ಒನ್ ಲೈನ್ ಸ್ಟೋರಿ ಚೆನ್ನಾಗಿಯೇ ಇದೆ. ಆದರೆ, ನಿರೂಪಣೆ ಹಾಗು ಚಿತ್ರಕಥೆಯಲ್ಲಿ ಬಿಗಿ ಹಿಡಿತ ಸಾಧಿಸಬೇಕಿತ್ತು. ಅವರೇ ಇಲ್ಲಿ ನಟನೆಯನ್ನೂ ಮಾಡಿರುವುದರಿಂದ ಬಹುಶಃ ಎಲ್ಲವನ್ನೂ ಸರಿಯಾಗಿ ತೂಗಿಸುವಲ್ಲಿ ಹಿಂದೆ ಉಳಿದಿದ್ದಾರೆ ಅಂತ ಕಾಣುತ್ತೆ. ಆದರೆ ಮೊದಲ ಪ್ರಯತ್ನ ಅನ್ನುವ ಕಾರಣಕ್ಕೆ ಕೆಲವು ತಪ್ಪುಗಳನ್ನು ಪಕ್ಕಕ್ಕೆ ಇಟ್ಟು ಸಿನಿಮಾ ನೋಡಬಹುದು.
ಮೊದಲೇ ಹೇಳಿದಂತೆ ಕಥೆ ಸರಳವಾಗಿದೆ. ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತೋರಿಸುವ ಪ್ರಯತ್ನ ಮಾಡಬಹುದಿತ್ತು. ಕೆಲವು ದೃಶ್ಯಗಳ ಕಥೆಗಳು ವಾಸ್ತವಕ್ಕೆ ಹತ್ತಿರ ಎನಿಸುತ್ತವೆ. ಉಳಿದಂತೆ ಸಿನಿಮಾದ ಮೊದಲರ್ಧಕ್ಕಿಂತ ದ್ವಿತಿಯಾರ್ಧ ತಕ್ಕಮಟ್ಟಿಗೆ ಕಥೆಯ ಆಶಯ ಸರಿ ಎನಿಸುತ್ತೆ. ಕಥೆ ಬಗ್ಗೆ ಹೇಳುವುದಾದರೆ, ಹಲವು ವರ್ಷಗಳಿಂದ ದೂರ ದೂರ ಇದ್ದಂತಹ ನಾಲ್ಕು ಜನ ಗೆಳೆಯರು ಒಂದೆಡೆ ಸೇರಿ ಪಾರ್ಟಿ ಮಾಡಬೇಕು ಅಂತ ನಿರ್ಧರಿಸುತ್ತಾರೆ. ಅದರಂತೆ ಒಟ್ಟಿಗೆ ಸೇರುತ್ತಾರೆ. ಪಾರ್ಟಿ ಮಧ್ಯೆ ಒಬ್ಬೊಬ್ಬರ ಕಥೆ ಬಿಚ್ಚಿಕೊಳ್ಳುತ್ತಾ ಹೋಗುತ್ತೆ. ಅವರೆಲ್ಲರೂ ಮಿಡ್ಲ್ ಕ್ಲಾಸ್ ಕುಟುಂಬದವರು. ಒಬ್ಬನ ಅಮ್ಮ ತನ್ನ ಮಗ ಮದ್ವೆಯಾಗಿ ಬದುಕಲ್ಲಿ ಸೆಟ್ಲ್ ಆಗಬೇಕು ಅನ್ನೋ ಆಸೆ. ಮದ್ವೆ ಆಗೋಕೆ ಅವನ ಬಳಿ ಹಣವಿಲ್ಲ. ಶ್ರೀಮಂತ ವ್ಯಕ್ತಿಯೊಬ್ಬನ ಬಳಿ ಅವನ ಗೆಳೆಯ ಮದ್ವೆಗೆ ಎರಡು ಲಕ್ಷ ಸಾಲ ಕೊಡಿಸುತ್ತಾನೆ. ಆದರೆ, ಮದ್ವೆ ಆಗುವ ಹುಡುಗಿ ಬೇರೊಬ್ಬನ ಜೊತೆ ಓಡಿ ಹೋಗ್ತಾಳೆ. ಸಾಲ ತಂದು ಮದ್ವೆಗೆ ಖರ್ಚು ಮಾಡಿದ್ದ ಹಣವನ್ನು ಹೇಗೆ ತೀರಿಸ್ತಾನೆ ಅನ್ನೋ ಎಪಿಸೋಡ್ ಇಂಟ್ರೆಸ್ಟ್ ಅನಿಸುತ್ತೆ.
ಮತ್ತೊಬ್ಬ ಬದುಕಿಗಾಗಿ ಜೊಮೆಟೊ ಬಾಯ್ ಆಗಿ ಕೆಲಸ. ಮಳೆ ಸುರಿಯೋ ವೇಳೆ ಮನೆಯೊಂದಕ್ಕೆ ಹೋಗಿ ಫುಡ್ ಡಿಲವರಿ ಮಾಡುವ ಅವನಿಗೆ ಅಲ್ಲೊಬ್ಬ ಆಂಟಿ ಜೊತೆ ಆಕರ್ಷಣೆ ಆಗುತ್ತೆ. ಅಲ್ಲೊಂದು ಊಹಿಸದಿರುವ ಘಟನೆ ನಡೆದುಹೋಗುತ್ತೆ. ಆ ಘಟನೆ ಎಂಥದ್ದು ಅನ್ನೋದೇ ಸಸ್ಪೆನ್ಸ್. ಮತ್ತೊಬ್ಬನದು ಭಯಾನಕ ಕಥೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ಇನ್ನೊಬ್ಬಾತನದು ಈಗಿನ ಟ್ರೆಂಡ್ ಸ್ಟೋರಿ. ಒಟ್ಟಾರೆ ಒಬ್ಬೊಬ್ಬನದು ಒಂದೊಂದು ಸ್ಟೋರಿ ಹೇಳುವ ಹೊತ್ತಿಗೆ ಸೆಕೆಂಡ್ ಹಾಫ್ ಮುಗಿದು ಹೋಗುತ್ತೆ. ಒಂದಷ್ಟು ಟ್ವಿಸ್ಟ್ ಬರುತ್ತೆ. ಅದು ನೋಡುಗರ ಟೆಸ್ಟ್ ಮಾಡುತ್ತೆ. ದ್ವಿತಿಯಾರ್ಧದಲ್ಲಿ ಫಸ್ಟ್ ಹಾಫ್ನಲ್ಲಿ ಏನೆಲ್ಲ ಆಯ್ತು ಅದಕ್ಕೆ ಕ್ಲಾರಿಟಿ ಕೊಡುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ.
ಈಗಾಗಲೇ ಇಂತಹ ಕಥೆಯ ಎಳೆ ಇರುವ ಅನೇಕ ಸಿನಿಮಾಗಳು ಬಂದು ಹೋಗಿವೆ. ಆದರೆ, ಇಲ್ಲಿ ಈಗಿನ ಯೂಥ್ಸ್ ಯಾವೆಲ್ಲಾ ಸಮಸ್ಯೆಗೆ ಸಿಲುಕುತ್ತೆ. ಯಾವೆಲ್ಲ ಹಾದಿ ತುಳಿಯುತ್ತಾರೆ ಎಂಬ ಅಂಶವನ್ನು ನಿರ್ದೇಶಕರು ಹೈಲೆಟ್ ಮಾಡಿದ್ದಾರೆ. ಆರಂಭದಲ್ಲಿ ಸಿನಿಮಾ ಮಂದಗತಿಯಲ್ಲೇ ಸಾಗುತ್ತೆ. ಸಿನಿಮಾದ ನಿಧಾನಕ್ಕೆ ಹಿನ್ನೆಲೆ ಸಂಗೀತವೂ ಕಾರಣ. ಕೆಲವು ದೃಶ್ಯಗಳು ಅನಗತ್ಯವಾಗಿವೆ. ಇನ್ನಷ್ಟು ಚುರುಕುತದನ ನಿರೂಪಣೆ ಬೇಕಿತ್ತು. ಯೂಥ್ಸ್ ಮಿಸ್ಟೇಕ್ಸ್ ಹಾಗು ಹಣವಂತನ ತಪ್ಪುಗಳು ಹೇಗೆಲ್ಲ ಇರುತ್ತವೆ ಅನ್ನುವುದಕ್ಕೆ ಸಿನಿಮಾ ನೋಡಬಹುದು.
ಸಿನಿಮಾದಲ್ಲಿ ನಿರ್ದೇಶಕ ಅಫ್ಜಲ್ ಸೂಪರ್ ಸ್ಟಾರ್ ಅವರು ಕಾಣಿಸಿಕೊಂಡಿದ್ದರೂ ಪಾತ್ರದಲ್ಲಿ ಇನ್ನಷ್ಟು ತಲ್ಲೀನರಾಗಬೇಕಿತ್ತು. ನಿರ್ಮಾಪಕ ಸೆವೆನ್ ರಾಜ್ ಇಲ್ಲಿ ನೆಗೆಟಿವ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಇನ್ನಷ್ಟು ಗಟ್ಟಿತನ ಕೊಡಬಹುದಿತ್ತು. ಉಳಿದಂತೆ ಕಾಣಿಸಿಕೊಂಡಿರುವ ವಸಿಷ್ಠ ರಾಜಪ್ರಭು, ರಣವೀರ್, ವಿನಯ್ ಕುಮಾರ್, ನಾಗೇಂದ್ರ ಅರಸ್, ಶುಭಾ, ರನ್ವಿತಾ ರಾಣಿ, ರೇಖಾ, ಅಂಜಲಿ ಇತರರು ನಿರ್ದೇಶಕರು ಹೇಳಿದಂತೆ ಪಾತ್ರವನ್ನು ಕಟ್ಟಿಕೊಟ್ಟಿದ್ದಾರೆ. ಸ್ವಾಮಿ ಅವರ ಕ್ಯಾಮೆರಾ ಕೈಚಳಕ ಪರವಾಗಿಲ್ಲ. ರಾಜು ಎಮ್ಮಿಗನೂರು ಅವರ ಹಾಡು ಸನ್ನಿವೇಶಕ್ಕೆ ತಕ್ಕಂತೆ ಇದೆ. ದೇವರಾಜ್ ಕುಷ್ಟಗಿ ಅವರ ಹಿನ್ನೆಲೆ ಸಂಗೀತವೇ ಇಲ್ಲಿ ಮೈನಸ್. ಕಾರ್ತಿಕ್ ಈಶ್ವರಾಚಾರಿ ಅವರ ಸಂಕಲನ ಕೆಲವು ಕಡೆ ಅಚ್ಚುಕಟ್ಟಾಗಿದೆ.
ಫೆಬ್ರವರಿ 6, ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕೊನೆಯ ದಿನ. ಲುಲು ಮಾಲ್ ನಲ್ಲಿ ನೋಡಬಹುದಾದ ಅತ್ಯುತ್ತಮ 10 ಚಲನಚಿತ್ರಗಳ ಪಟ್ಟಿ ಇಲ್ಲಿದೆ.
ನೌವೆಲ್ ವಾಗ್ ಸಮಯ ಮತ್ತು ಸ್ಕ್ರೀನ್: ರಾತ್ರಿ 8:20 (ಸ್ಕ್ರೀನ್ 3), ರಾತ್ರಿ 7:30 (ಸ್ಕ್ರೀನ್ 6), ಅಥವಾ ಸಂಜೆ 7:20 (ಸ್ಕ್ರೀನ್ 8) ವಿವರಣೆ: ಪ್ರಖ್ಯಾತ ನಿರ್ದೇಶಕ ರಿಚರ್ಡ್ ಲಿಂಕ್ಲೇಟರ್ ನಿರ್ದೇಶನದ ಈ 2025ರ ಚಿತ್ರವು ಫ್ರೆಂಚ್ ಸಿನಿಮಾ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ.
ಶಂಕರ್ ಗುರು ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 2:00 (ಸ್ಕ್ರೀನ್ 6) ವಿವರಣೆ: ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್ಕುಮಾರ್ ಅವರ ಅಭಿನಯದ ಈ 1978ರ ಮೈಲಿಗಲ್ಲು ಚಿತ್ರವನ್ನು ‘ಜನಪ್ರಿಯ ಮನರಂಜನಾ ಚಿತ್ರಗಳ’ ವಿಭಾಗದಲ್ಲಿ ಪ್ರದರ್ಶಿಸಲಾಗುತ್ತಿದೆ.
ಅಂಕಲ್ ಬೂನ್ಮಿ ಹೂ ಕ್ಯಾನ್ ರಿಕಾಲ್ ಹಿಸ್ ಪಾಸ್ಟ್ ಲೈವ್ಸ್ ಸಮಯ ಮತ್ತು ಸ್ಕ್ರೀನ್: ಸಂಜೆ 4:10 (ವಿಐಪಿ ಸ್ಕ್ರೀನ್ 1) ವಿವರಣೆ: ಅಪಿಚತ್ಪಾಂಗ್ ವೀರಸೇತಕುಲ್ ನಿರ್ದೇಶನದ ಈ ಥಾಯ್ ಚಿತ್ರವು ಆಧ್ಯಾತ್ಮಿಕ ಮತ್ತು ಪುನರ್ಜನ್ಮದ ಕುರಿತಾದ ಜಾಗತಿಕ ಮಟ್ಟದ ಶ್ರೇಷ್ಠ ಕಲಾಕೃತಿಯಾಗಿದೆ.
ದಿ ಪ್ರೆಸಿಡೆಂಟ್ಸ್ ಕೇಕ್ ಸಮಯ ಮತ್ತು ಸ್ಕ್ರೀನ್: ಸಂಜೆ 5:40 (ಸ್ಕ್ರೀನ್ 4) ವಿವರಣೆ: ಹಸನ್ ಹಾದಿ ನಿರ್ದೇಶನದ ಈ 2025ರ ಅರೇಬಿಕ್ ಚಿತ್ರವು ಇರಾಕ್ನ ಸಮಕಾಲೀನ ಸಾಮಾಜಿಕ ಚಿತ್ರಣವನ್ನು ಕಟ್ಟಿಕೊಡುತ್ತದೆ.
ಮ್ಯಾನ್ ಆಫ್ ಮಾರ್ಬಲ್ ಸಮಯ ಮತ್ತು ಸ್ಕ್ರೀನ್: ಸಂಜೆ 6:50 (ವಿಐಪಿ ಸ್ಕ್ರೀನ್ 1) ವಿವರಣೆ: ಪೋಲಿಷ್ ನಿರ್ದೇಶಕ ಅಂದ್ರೆಜ್ ವಾಜ್ದಾ ಅವರ ಈ 1977ರ ಚಿತ್ರವು ವಿಶ್ವ ಸಿನಿಮಾದ ಐತಿಹಾಸಿಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.
ಡಿವೈನ್ ಕಾಮಿಡಿ ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 12:30 (ಸ್ಕ್ರೀನ್ 5) ವಿವರಣೆ: ಅಲಿ ಅಸ್ಗರಿ ನಿರ್ದೇಶನದ ಈ 2025ರ ಪರ್ಷಿಯನ್ ಚಿತ್ರವು ಏಷ್ಯನ್ ಸಿನಿಮಾ ಸ್ಪರ್ಧಾ ವಿಭಾಗದ ಅಡಿಯಲ್ಲಿ ಪ್ರದರ್ಶನಗೊಳ್ಳುತ್ತಿದೆ.
ದಿ ಮಾಸ್ಟರ್ ಮೈಂಡ್ ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 2:30 (ಸ್ಕ್ರೀನ್ 5) ವಿವರಣೆ: ಕೆಲ್ಲಿ ರೀಚಾರ್ಡ್ ನಿರ್ದೇಶನದ ಈ ಇಂಗ್ಲಿಷ್ ಚಿತ್ರವು ತನ್ನ ವಿಶಿಷ್ಟ ಕಥಾಹಂದರದಿಂದಾಗಿ ‘ಸಮಕಾಲೀನ ವಿಶ್ವ ಸಿನಿಮಾ’ ವಿಭಾಗದಲ್ಲಿ ಗಮನಸೆಳೆಯುತ್ತಿದೆ.
ಡ್ರಾಗನ್ಫ್ಲೈ ಸಮಯ ಮತ್ತು ಸ್ಕ್ರೀನ್: ಬೆಳಗ್ಗೆ 11:30 (ಸ್ಕ್ರೀನ್ 3) ವಿವರಣೆ: ಪಾಲ್ ಆಂಡ್ರ್ಯೂ ವಿಲಿಯಮ್ಸ್ ನಿರ್ದೇಶನದ ಈ 2025ರ ಇಂಗ್ಲಿಷ್ ಚಿತ್ರವು ಗಂಭೀರ ಕಥಾಹಂದರ ಹೊಂದಿರುವ ಪ್ರಮುಖ ಚಿತ್ರವಾಗಿದೆ.
ಗಣರಾಜ್ ಸಮಯ ಮತ್ತು ಸ್ಕ್ರೀನ್: ಮಧ್ಯಾಹ್ನ 3:00 (ವಿಐಪಿ ಸ್ಕ್ರೀನ್ 2) ವಿವರಣೆ: ಭಾರತದ ಈಶಾನ್ಯ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ಈ 2025ರ ಅಸ್ಸಾಮಿ ಚಿತ್ರವನ್ನು ದಿಪ್ ಭುಯಾನ್ ನಿರ್ದೇಶಿಸಿದ್ದಾರೆ.
ಕ್ಯಾಟನೇ ಸಮಯ ಮತ್ತು ಸ್ಕ್ರೀನ್: ಸಂಜೆ 4:50 (ಸ್ಕ್ರೀನ್ 1) ವಿವರಣೆ: ಅಯೋನಾ ಮಿಸ್ಚೀ ನಿರ್ದೇಶನದ ಈ 2025ರ ರೋಮೇನಿಯನ್ ಚಿತ್ರವು ಯುರೋಪಿಯನ್ ಸಿನಿಮಾದ ಆಧುನಿಕ ಶೈಲಿಯನ್ನು ಪ್ರತಿನಿಧಿಸುತ್ತದೆ.
ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ, ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿʼ ಚಿತ್ರವು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಪ್ರದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ಮೊದಲು ಮಾತನಾಡಿದ ನಿರ್ಮಾಪಕರಾದ ಪ್ರಭು, ʼವೃತ್ತಿಯಲ್ಲಿ ವಕೀಲನಾಗಿರುವ ನಾನು ಬೆಳಗಾವಿಯವನು. ನನಗೆ ನನ್ನ ಸ್ನೇಹಿತನ ಮೂಲಕ ಬರಗೂರು ರಾಮಚಂದ್ರಪ್ಪ ಅವರ ಪರಿಚಯವಾಯಿತು. ಅವರು ನನಗೆ ʼಮಹಾಕವಿʼ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಕೆಲವೇ ದಿನಗಳಲ್ಲಿ ಚಿತ್ರೀಕರಣ ಪ್ರಾರಂಭವಾಯಿತು. ಈಗ ಚಿತ್ರ ಸಿದ್ದವಾಗಿದ್ದು, ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ನಮ್ಮ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಬಹಳ ಖುಷಿಯಾಗಿದೆ. ಈ ಚಿತ್ರವನ್ನು ಏಪ್ರಿಲ್ ತಿಂಗಳಲ್ಲಿ ಕನ್ನಡವಲ್ಲದೆ, ಬೇರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಯೋಚನೆ ಇದೆʼ ಎಂದರು.
ಗುರುಗಳಾದ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ 25ನೇ ಚಿತ್ರದ ನಾಯಕಿಯಾಗಿ ನಟಿಸಿದ್ದು ಹಾಗೂ ನಮ್ಮ ಚಿತ್ರ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದ್ದು ಎರಡು ಬಹಳ ಸಂತೋಷ ತಂದಿದೆ ಎಂದು ನಾಯಕಿ ಅನುಷಾ ರೈ ಹೇಳಿದರು.
ʼಮಹಾಕವಿʼ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಬರಗೂರು ರಾಮಚಂದ್ರಪ್ಪನವರು ಚಿತ್ರಕಥೆ , ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕಿಶೋರ್ ಅವರು ಪಂಪನ ಪಾತ್ರದಲ್ಲಿ ಅಭಿನಯಿಸಿದ್ದಾರೆ ಎಂದು ಚಿತ್ರದಲ್ಲಿ ನಟಿಸಿರುವ ರಾಜಪ್ಪ ದಳವಾಯಿ ತಿಳಿಸಿದರು.
ಛಾಯಾಗ್ರಾಹಕ ನಾಗರಾಜ ಆದವಾನಿ ಮಾತನಾಡಿ, ʼಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ 25 ಚಿತ್ರಗಳಲ್ಲಿ ಈ ಚಿತ್ರವೂ ಸೇರಿದಂತೆ 18 ಚಿತ್ರಗಳಿಗೆ ನಾನೇ ಛಾಯಾಗ್ರಾಹಕನಾಗಿ ಕಾರ್ಯ ನಿರ್ವಹಿಸಿದ್ದೇನೆʼ ಎಂದರು.