Categories
ಸಿನಿ ಸುದ್ದಿ

ಇದು ಕನ್ನಡಿಗರ ಜಯಭೇರಿ! ಕನ್ನಡಕ್ಕೆ ಜೈ ಎಂದ ಯಶಸ್ ಸೂರ್ಯ-ನಿಶ್ವಿಕಾ ನಾಯ್ಡು- ಕಿರಣ್ ರಾಜ್: ವೈದ್ಯರ ಹಾಡಿಗೆ ಸಿಎಂ ಶುಭಾಶಯ

ವೃತ್ತಿಯಲ್ಲಿ ಅವರಿಬ್ಬರೂ ವೈದ್ಯರು. ಒಬ್ಬರು ಡಾ.ಶೈಲೇಶ್ ಕುಮಾರ್. ಇನ್ನೊಬ್ಬರು ಡಾ.ಶಶಿಕಲಾ ಪುಟ್ಟಸ್ವಾಮಿ. ಡಾ.ಶೈಲೇಶ್ ಅವರಿಗೆ ಕನ್ನಡ ಮೇಲೆ ಅತೀವ ಪ್ರೀತಿ. ಡಾ.ಶಶಿಕಲಾ ಅವರಿಗೆ ಕನ್ನಡ ಬರಹದ ಮೇಲೆ ಅತೀವ ಪ್ರೀತಿ. ಶಶಿಕಲಾ ಅವರು ಬರೆದ ಕನ್ನಡ ಗೀತೆಯೊಂದನ್ನು ವಿಡಿಯೋ ಸಾಂಗ್ ಮಾಡಲು ಮುಂದಾಗಿದ್ದು ಡಾ. ಶೈಲೇಶ್. ಹಾಗಾಗಿ ಅದಕ್ಕೆ ಜಯಭೇರಿ ಕನ್ನಡ ಎಂದು ಹೆಸರಿಟ್ಟು ಸೊಗಸಾದ ಕನ್ನಡ ವಿಡಿಯೋ ಗೀತೆ ಮಾಡಿದ್ದಾರೆ.

ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ “ಜಯಭೇರಿ ಕನ್ನಡ” ಎಂಬ ಹಾಡು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಡಾ.ಶೈಲೇಶ್ ಮಾತನಾಡಿ, ನಾನು ವೃತ್ತಿಯಲ್ಲಿ ವೈದ್ಯ. ಸಿನಿಮಾ ರಂಗದಲ್ಲಿ ನನಗೆ ಡಾ.ರಾಜಕುಮಾರ್ ಅವರು ಪ್ರೇರಣೆ. ನಮ್ಮ ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಲಾಂಛನದಲ್ಲಿ ಸಂಚಾರಿ ವಿಜಯ್ ಅಭಿನಯಿಸಿದ್ದ “6 ನೇ ಮೈಲಿ” ಚಿತ್ರ ನಿರ್ಮಾಣ ಮಾಡಿದ್ದೆ. ಈಗ “ತಲ್ವಾರ್ ಪೇಟೆ” ಚಿತ್ರವನ್ನು ತೆರೆಗೆ ತರುವ ತಯಾರಿ ನಡೆಯುತ್ತಿದೆ. ನನಗೆ ಈ ಸಮಾಜ ಸಾಕಷ್ಟು ಕೊಟ್ಟಿದೆ. ನಾನು ಸಮಾಜಕ್ಕೆ ಏನಾದರೂ ಮಾಡಬೇಕೆಂದು ಹಾಗೂ ಕನ್ನಡದ ಮೇಲಿನ ಭಾಷಾಭಿಮಾನದಿಂದ “ಜಯಭೇರಿ ಕನ್ನಡ” ಎಂಬ ಕನ್ನಡದ ಹಿರಿಮೆ ಸಾರುವ ಹಾಡೊಂದನ್ನು ನಿರ್ಮಾಣ ಮಾಡಿದ್ದೇನೆ. ಡಾ. ಶಶಿಕಲಾ ಪುಟ್ಟಸ್ವಾಮಿ ಈ ಹಾಡನ್ನು ಬರೆದು ನಿರ್ದೇಶನ ಮಾಡಿದ್ದಾರೆ.

ಸಾಯಿಕಿರಣ್ ಸಂಗೀತ ನೀಡಿದ್ದಾರೆ. ಹೇಮಂತ್ ಕುಮಾರ್, ಅನಿರುದ್ದ್ ಶಾಸ್ತ್ರಿ , ಅನುರಾಧ ಭಟ್ ಹಾಡಿದ್ದಾರೆ. ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್, ವೀಣಾ ಪೊನ್ನಪ್ಪ ಹಾಗೂ ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇವೆ. ಈ ಹಾಡನ್ನು ನಿರ್ಮಾಣ ಮಾಡಿ ಮಾನ್ಯ ಸಚಿವರಾದ ಶಿವರಾಜ್ ತಂಗಡಗಿ ಅವರ ಬಳಿ ಹೇಳಿದಾಗ, ಅವರು ಈ ಹಾಡನ್ನು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಕರ್ನಾಟಕ ಸರ್ಕಾರಕ್ಕೆ ಹಾಗೂ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಡಾ.ಶೈಲೇಶ್ ಕುಮಾರ್.

ಡಾ. ಶೈಲೇಶ್ ಕುಮಾರ್ ಅವರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಾಡೊಂದನ್ನು ನಿರ್ಮಾಣ ಮಾಡುತ್ತಿದ್ದೇನೆ. ನೀವೇ ಬರೆದು ನಿರ್ದೇಶನ ಮಾಡಬೇಕೆಂದರು. ತುಂಬಾ ಸಂತೋಷವಾಯಿತು. ಜೊತೆಗೆ ಕನ್ನಡದ ಕುರಿತು ಹಾಡನ್ನು ಬರೆಯುವಾಗ ಸ್ವಲ್ಪ ಭಾವುಕಳಾದೆ. ಇಡೀ ತಂಡದ ಸಹಕಾರದಿಂದ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದರು ನಿರ್ದೇಶಕಿ ಶಶಿಕಲಾ ಪುಟ್ಟಸ್ವಾಮಿ.

ನನಗೆ ಶೈಲೇಶ್ ಕುಮಾರ್ ಅವರು ಈ ರೀತಿ ಕನ್ನಡದ ಹಾಡೊಂದರಲ್ಲಿ ಅಭಿನಯಿಸಬೇಕೆಂದು ಕೇಳಿದರು. ಕನ್ನಡದ ಮೇಲಿನ ಅಭಿಮಾನದಿಂದ ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ಹಾಡು ಚೆನ್ನಾಗಿದೆ ಎಂದು ನಿಶ್ವಿಕಾ ನಾಯ್ಡು ತಿಳಿಸಿದರು.

ಕನ್ನಡ ನನ್ನ ಉಸಿರು. ಅಂತಹ ಕನ್ನಡದ ಸುಂದರ ಗೀತೆಯೊಂದರಲ್ಲಿ ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಅಭಿನಯಿಸಿದ್ದು ತುಂಬಾ ಖುಷಿಯಾಗಿದೆ ಎನ್ನುತ್ತಾರೆ ನಟ ಯಶಸ್ ಸೂರ್ಯ.

ಸಂಗೀತ ನಿರ್ದೇಶಕ ಸಾಯಿಕಿರಣ್ ಸಹ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಧನು ಮಾಸ್ಟರ್ ಈ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

Categories
ಸಿನಿ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ಇದು ಸಿನಿಮಾ ಹೆಸರು! ಐಟಿ ಮಂದಿಯ ವರ್ಕ್ ಲೈಫ್ ಸ್ಟೋರಿ

ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ.

ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ.

ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ.

ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತದೆ? ಎಂಬ ಪ್ರಮುಖ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ.

“ಎಲೆಕ್ಟ್ರಾನಿಕ್ ಸಿಟಿ” ಈಗಾಗಲೇ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನವೆಂಬರ್ 24 ಚಿತ್ರ ಬಿಡುಗಡೆಯಾಗುತ್ತಿದೆ.

ಆರ್ಯನ್ ಹರ್ಷ “ಎಲೆಕ್ಟ್ರಾನಿಕ್ ಸಿಟಿ ಚಿತ್ರದ ನಾಯಕನಾಗಿದ್ದು, ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ. ರಶ್ಮಿ ಶೆಟ್ಟಿ, ಭವ್ಯ ರುತ್ವಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಚಂದ್ರಶೇಖರ್ ಶ್ರೀವಾಸ್ತವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ರಾಜ ಶಿವಶಂಕರ್ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಅವರ ಕಲಾ ನಿರ್ದೇಶನ “ಎಲೆಕ್ಟ್ರಾನಿಕ್ ಸಿಟಿ” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮಿಸ್ಟರ್ ನಟ್ವರ್ ಲಾಲ್ ಹಾಡು ಬಂತು: ಹಾಡಿಗೆ ಎಲ್ಲೆಡೆ ಮೆಚ್ಚುಗೆ

ತನುಷ್ ಸಿನಿಮಾಸ್ ಬ್ಯಾನರ್ ನಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಹಾಡು ಎಲ್ಲೆಡೆ ಮೆಚ್ಚುಗೆ ಪಡೆದಿದೆ.

ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿ ವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ.ಲವ ನಿರ್ದೇಶಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ “Mr ನಟ್ವರ್ ಲಾಲ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

Categories
ಸಿನಿ ಸುದ್ದಿ

ಮಾಸ್ಟರ್ ಆನಂದ್ ನಟನೆಯ ನಾ ಕೋಳಿಕ್ಕೆ ರಂಗ ನವೆಂಬರ್ 10ಕ್ಕೆ ಬಿಡುಗಡೆ

ಕನ್ನಡದಲ್ಲಿ ಪ್ರಾಣಿ ಪ್ರೀತಿಯ ಕಥೆಗಳು ಹೊಸದೇನಲ್ಲ. ಆ ಸಾಲಿಗೆ ಈಗ ಕೋಳಿ ಪ್ರೀತಿಯ ಕಥೆ ಕೂಡ ವಿಶೇಷವಾಗಿದೆ. ಅದು ನಾ ಕೋಳಿಕ್ಕೆ ರಂಗ ಸಿನಿಮಾ ಮೂಲಕ ಅನಾವರಣವಾಗುತ್ತಿದೆ.

ಹೌದು ಮಾಸ್ಟರ್ ಆನಂದ್ ಬಹಳ ದಿನಗಳ ಬಳಿಕ ಹೀರೋ ಆಗಿ ಕಾಣಿಸಿಕೊಂಡಿರುವ ಸಿನಿಮಾ ಇದು. ಅಂದಹಾಗೆ,
ಎಸ್.ಟಿ.ಸೋಮಶೇಖರ್ ನಿರ್ಮಿಸಿರುವ ಈ ಸಿನಿಮಾಗೆ
ಗೊರವಾಲೆ ಮಹೇಶ್ ನಿರ್ದೇಶನವಿದೆ.
ಇದೊದು ಗ್ರಾಮೀಣ ಭಾಗದ ಸೊಗಡಿನ ಕಥೆ ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಮಾಸ್ಟರ್ ಆನಂದ್ ಹಾಗು ರಾಜೇಶ್ವರಿ ಈ ಸಿನಿಮಾದ ನಾಯಕ, ನಾಯಕಿ. ಇಲ್ಲಿ ಹಾಸ್ಯದ ಜೊತೆಗೆ ಸಂಬಂಧಗಳ ಮೌಲ್ಯವನ್ನು ಸಾರಲಾಗಿದೆ.

ಇದು ಕೊರೊನಾ ಸಂಕಷ್ಟಗಳನ್ನು ಎದುರಿಸಿ ನಿಂತಿರುವ ಚಿತ್ರ. ಹಾಗಾಗಿ ಬಿಡುಗಡೆ ಕಾಣುವುದು ತಡವಾಗಿದೆ. ಆದರೂ ಚಿತ್ರ ಗೆಲುವು ಕಾಣುವ ಬಗ್ಗೆ ನಮಗೆ ಯಾವುದೇ ಸಂಶಯವಿಲ್ಲ. ಏಕೆಂದರೆ ಚಿತ್ರ ಎಲ್ಲಿಯೂ ಕೂಡ ಬೋರ್ ಎನಿಸುವುದಿಲ್ಲ ಎಂಬುದು ನಿರ್ಮಾಪಕ ಎಸ್.ಟಿ.ಸೋಮಶೇಖರ್ ಮಾತು.

ನನಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಅತೀವವಾದ ಗೌರವವಿತ್ತು. ಹಾಗಾಗಿ ಅವರ ಬಗ್ಗೆ ಹಠ ತೊಟ್ಟು ಹಾಡು ಮಾಡಿದೆವು. ಕೈಲಾಶ್ ಖೇರ್ ಹಾಡಿರುವ ಆ ಹಾಡು ಅತ್ಯುತ್ತಮ ವಾಗಿ ಮೂಡಿ ಬಂದಿದೆ ಮಾತ್ರವಲ್ಲ; ಈಗಾಗಲೇ ಜನಮನ ಗೆದ್ದಿದೆ ಎಂದರು.

ಇನ್ನು ವರನಟ ಡಾ.ರಾಜ್ ಕುಮಾರ್ ಅವರ ಮೇಲೆ ಅಭಿಮಾನ ಹಾಗಾಗಿ ಪುನೀತ್ ಸರ್ ಅವರಿಂದ ಒಂದು ಹಾಡು ಹಾಡಿಸಬೇಕೆಂದು ಮಾಡಿದ ಪ್ರಯತ್ನ ಕೂಡ ಯಶಸ್ಸು ಕಂಡಿತು. ದೇವರ ಮಗ ಅವರು ಮಾಸ್ಟರ್ ಆನಂದ್ ಅವರಿಗೆ ನೀವು ಹಾಡಬೇಕು ಎಂದ ತಕ್ಷಣವೇ ಒಪ್ಪಿ ಹಾಡಿದರು. ಅದು ನನ್ನ ಪುಣ್ಯ ಎಂದರು ನಿರ್ಮಾಪಕ ಸೋಮಶೇಖರ್.

ಚಿತ್ರವನ್ನು ಕಷ್ಟಪಟ್ಟು ಮಾಡಿದ್ದೇವೆ. ಈಗ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಬರಬೇಕಾಗಿದೆ. ಈಗ ಅದನ್ನು ಎದುರು ನೋಡುತ್ತಿದ್ದೇವೆ ಎಂದರು ನಿರ್ದೇಶಕ ಗೊರವಾಲೆ ಮಹೇಶ್.

ಮಾಸ್ಟರ್ ಆನಂದ್, ಇದು ತಮಗೆ ದಕ್ಕಿದ ಅಪೂರ್ವ ಅವಕಾಶವಾಗಿದೆ ಎಂದರು.

ಈ ಚಿತ್ರ ಮಾಡಿದ್ದು ಆಕಸ್ಮಿಕ. ಕೊರೊನಾ ಸಮಯದಲ್ಲಿ ಆರಂಭವಾದ ಸಿನಿಮಾ ಈಗ ಬಿಡುಗಡೆ ಕಾಣುತ್ತಿದೆ. ನಿರ್ಮಾಪಕರು ಸೇರಿದಂತೆ ತಂಡದ ಎಲ್ಲರೂ ಶ್ರಮಪಟ್ಟಿದ್ದಾರೆ. ನನ್ನ ಜೊತೆ ಕಾಮಿಡಿ ಕಿಲಾಡಿ ತಂಡವು ಪರಿಶ್ರಮ ಪಟ್ಟಿದೆ. ಹಾಗಾಗಿ ನಾನು ಎಲ್ಲರಿಗೂ ಕೃತಜ್ಞತೆ ಹೇಳುವೆ ಎಂದರು ಆನಂದ್.

ಹಿರಿಯ ನಟಿ ಭವ್ಯ ತಾಯಿಯಾಗಿ ಪಾತ್ರವನ್ನು ಕಾಣಿಸಿಕೊಂಡಿದ್ದಾರೆ. ಅವರು ಚಿತ್ರತಂಡದ ಜೊತೆಗಿನ ಅನುಭವಗಳನ್ನು ಹೇಳಿಕೊಂಡರು.

ಈ ಚಿತ್ರ ನನ್ನ ವೃತ್ತಿ ಬದುಕಿನ ಮೊದಲ ಚಿತ್ರವಾಗಿರುವುದು ನನ್ನ ಪುಣ್ಯ ಎಂದರು ಸಂಗೀತ ನಿರ್ದೇಶಕ ರಾಜು ಎಮ್ಮಿಗನೂರು.

ನಿರ್ಮಾಪಕ ಸೋಮಶೇಖರ್ ಅವರ ಪುತ್ರಿ ರಾಜೇಶ್ವರಿ ಸಿನಿಮಾ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ದಿಲ್ ಖುಷ್ ಟೀಸರ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ: ಟೀಮ್ ಫುಲ್ ಖುಷ್

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವಿರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ “ದಿಲ್ ಖುಷ್” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ದಿಲ್ ಖುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌

“ದಿಲ್ ಖುಷ್” ಎಂದರೆ ನಾಯಕ – ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ.

ಯುವಪ್ರತಿಭೆ ರಂಜಿತ್ “ದಿಲ್ ಖುಷ್” ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದೆ.

ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಒಂದು ಸರಳ ಪ್ರೇಮಕಥೆ ಶೂಟಿಂಗ್ ಮುಕ್ತಾಯ ಸಿಂಪಲ್ ಸುನಿ – ವಿನಯ್ ರಾಜ್ ಕುಮಾರ್ ಕಾಂಬೋ ಸಿನಿಮಾದಲ್ಲಿ ರಾಘಣ್ಣ

ಸುನಿ-ವಿನಯ್ ’ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ರಾಘಣ್ಣ…ಶೂಟಿಂಗ್ ಮುಗಿಸಿದ ಚಿತ್ರತಂಡ ಹೇಳಿದ್ದೇನು?

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಾಧ್ಯಮದವರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಸುನಿ ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ..ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ..ಒಟ್ಟು ಸಿನಿಮಾದಲ್ಲಿ 11 ಸಾಂಗ್ ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.

ರಾಘಣ್ಣ ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ್ಮೇಲಿನಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಹೊಡೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಚೆನ್ನಾಗಿ ಆಗಲಿ. ಸಿನಿಮಾ ನಿಮ್ಮ ಮುಂದೆ ಬರಲಿ. ನಿಮ್ಮ ಬೆಂಬಲ ಇರಲಿದೆ ಎಂದರು.

ನಟ ವಿನಯ್ ರಾಜ್ ಕುಮಾರ್ ಮಾತನಾಡಿ, ಒಂದು ಸರಳ ಪ್ರೇಮಕಥೆ..ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್ ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಕೊಡ್ತು. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬ ಕಂಪರ್ಟ್ ಫೀಲ್ ಕೊಡ್ತಾರೆ. ಆಕ್ಟಿಂಗ್ ಮಾಡಲು ಟ್ರೈ ಮಾಡುವುದು ಬೇಡ. ಅದು ತಾನಾಗಿಯೇ ಬರುತ್ತದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಅದ್ಭುತವಾಗಿ ನಟಿಸಿದ್ದಾರೆ ಎಂದರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, ನನ್ನ ಸಿನಿಮಾ ಕರಿಯರ್ ನ ಅತ್ಯಂತ ಉತ್ಕೃಷ್ಟ ಮ್ಯೂಸಿಕ್ ಸಂಗೀತ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಈ ಸಿನಿಮಾ ಆ ಎರಡು ಸಿನಿಮಾಗಳನ್ನು ಈ ಚಿತ್ರ ಮೀರಿಸುತ್ತದೆ ಅನಿಸುತ್ತಿದೆ. ಯಾಕಂದರೆ ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ ಎಂದರು.

ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು.

ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ವಿನಯ್ ರಾಜ್ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ.

Categories
ಸಿನಿ ಸುದ್ದಿ

ಬ್ಯಾಟೆಮರ ಪುಸ್ತಕ ಬಿಡುಗಡೆ ಮಾಡಿದ ಕೋಟಿಗಾನಹಳ್ಳಿ ರಾಮಯ್ಯ ಮತ್ತು ನಟ ರಾಜ್ ಬಿ ಶೆಟ್ಟಿ

ಬರಹಗಾರನಾಗಿ ಗುರುತಿಸಿಕೊಂಡಿರುವ ಎ ಎಸ್ ಜಿ ಮೊದಲ ಕಥಾಸಂಕಲನವನ್ನು ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕಲಾಗ್ರಾಮದ ಸಂಭಾಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟರಾಜ್ ಬುದಾಳ್, ಜಯತೀರ್ಥ ಹಾಗೂ ದಯಾ ಗಂಗನಘಟ್ಟ ವಿಶೇಷ ಅತಿಥಿಗಳಾಗಿ ಆಗಮಿಸಿ ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದರು.

ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಆಲದಹಳ್ಳಿಯವರಾದ ಎ ಎಸ್ ಜಿ ತನ್ನ ಸುತ್ತಮುತ್ತಲಿನ ಕತೆಗಳನ್ನು ಅಕ್ಷರ ರೂಪಕ್ಕಿಳಿಸಿ ತಯಾರಿಸಿರುವ ಗ್ರಾಮೀಣ ಸೊಗಡಿನ ಕಥೆಗಳ ಗುಚ್ಛವೇ ಬ್ಯಾಟೆಮರ. ಎ ಎಸ್ ಜಿ ಅವರ ಈ ಪುಸ್ತಕ ಪ್ರೀತಿಗೆ ಕಾರಣ ಸಿನಿಮಾರಂಗ.

ಸಿನಿಮಾವನ್ನೇ ಉಸಿರಾಗಿಸಿಕೊಂಡು ಸಿನಿಮಾಕ್ಕಾಗಿ ತುಡಿಯುತ್ತಿರುವ ಎ ಎಸ್ ಜಿ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುವ ಹುಮ್ಮಸ್ಸಿನಲ್ಲಿದ್ದಾರೆ. ಅದಕ್ಕಾಗಿ ತಮ್ಮಲ್ಲಿನ ಪುಸ್ತಕ ಪ್ರೀತಿಯನ್ನು ತೆರೆದಿಟ್ಟಿದ್ದಾರೆ. ನನ್ನ ಪ್ರಕಾರ, ಸಾಹೇಬ, ತೂತುಮಡಿಕೆ, ಒಂದ್ ಕಥೆ ಹೇಳ್ಲಾ ಸಿನಿಮಾಗಳಿಗೆ ಬರಹಗಾರರಾಗಿ ಕೆಲಸ ಮಾಡಿರುವ ಎ ಎಸ್ ಜಿ ಡೈರೆಕ್ಟರ್ ಕ್ಯಾಪ್ ತೊಡ್ತಿದ್ದಾರೆ.

ಈಗಾಗಲೇ ಕಥೆ ಸಿದ್ಧ ಮಾಡಿಕೊಂಡು ನಿರ್ಮಾಪಕರ ಹುಡುಕಾಟದಲ್ಲಿ ತೊಡಗಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬರಹಗಾರನಾಗಿ ಅನುಭವವಿರುವ ಎ ಎಸ್ ಜಿ ತಮ್ಮ ಇಷ್ಟು ವರ್ಷದ ಪರಿಶ್ರಮವೆಲ್ಲವನ್ನೂ ಹಾಕಿ ಸಿನಿಮಾ ನಿರ್ದೇಶನಕ್ಕಿಳಿಯುತ್ತಿದ್ದಾರೆ.

Categories
ಸಿನಿ ಸುದ್ದಿ

ಕಿಂಗ್ ಖಾನ್ ಡಂಕಿ ಟೀಸರ್ ಗೆ ಮಿಲಿಯನ್ಸ್ ವೀವ್ಸ್: ಈ ವರ್ಷ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್

ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್‌ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್‌ ಖಾನ್‌ ಸಿದ್ಧರಾಗಿದ್ದಾರೆ.

ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ ಅಬ್ಬರಿಸ್ತಿದ್ದ ಶಾರುಖ್ ಡಂಕಿ ಮೂಲಕ ಕ್ಲಾಸ್ ಅವತಾರದಲ್ಲಿ ದರ್ಶನ‌ ಕೊಟ್ಟಿದ್ದು, ಟೀಸರ್ 4 ಕೋಟಿ‌ ಮಿಲಿಯನ್ ವೀವ್ಸ್ ಕಂಡಿದೆ. ಈ ವರ್ಷದಲ್ಲಿ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಇದಾಗಿದೆ.

ನಿನ್ನೆ ಮುಂಬೈನಲ್ಲಿ ನಡೆದ ಡಂಕಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾರುಖ್ ಖಾನ್, ಪಠಾಣ್ ಹಾಗೂ ಜವಾನ್ ಸಿನಿಮಾಗಿಂತ ಡಂಕಿ ಸಿನಿಮಾ ಅತಿ ಹೆಚ್ಚು ಮನರಂಜನೆ ನೀಡಲಿದೆ. ರಾಜ್ ಕುಮಾರ್ ಹಿರಾನಿ ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವಾಗಿದೆ. ಹಿರಾನಿ ಚಿತ್ರಗಳಲ್ಲಿ ಯಾವುದೇ ‌ನಿರ್ದಿಷ್ಟ ನಟನಿಗಿಂತ ಕಥೆಯೇ ನಾಯಕತ್ವ ವಹಿಸುತ್ತದೆ. ಶೀಘ್ರದಲ್ಲೇ ಡ್ರಾಪ್ 2 ಮತ್ತು ಡ್ರಾಪ್ 3 ವಿಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದರು.

ರಾಜ್ಕುಮಾರ್ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಭಾವನೆಗಳಿಗೆ, ಹಾಸ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇರುತ್ತದೆ. ಎಂತಹುದೇ ಮಾಸ್ ಹೀರೋ ಆದರೂ ಅವರಿಗೆ ಬೇರೆಯದೇ ಗೆಟಪ್ ನೀಡುತ್ತಾರೆ. ‘ಡಂಕಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಶಾರುಖ್ ಖಾನ್ ಅವರು ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಶಾರುಖ್ ಖಾನ್ ಜೊತೆ ಈ ಚಿತ್ರದಲ್ಲಿ ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

Categories
ಸಿನಿ ಸುದ್ದಿ

ಇಂಡಿಯನ್ ಈಸ್ ಬ್ಯಾಕ್ : ಸೇನಾಪತಿ ಕಮಲ್ ಹಾಸನ್ ಗೆ ಕಿಚ್ಚ ಬೆಂಬಲ: ಹೇಗಿದೆ ಗೊತ್ತಾ ಇಂಡಿಯನ್-2 ಫಸ್ಟ್ ಗ್ಲಿಂಪ್ಸ್

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಶುಕ್ರವಾರ ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರ ಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Categories
ಸಿನಿ ಸುದ್ದಿ

ಶುಗರ್ ಫ್ಯಾಕ್ಟರಿ ಸೇರಿದ ಅರ್ಮಾನ್ ಮಲಿಕ್: ಹಣೆಬರಹ ಅಂದ್ರು ಬಾಲಿವುಡ್ ಸಿಂಗರ್

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ.

ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಕೂಡ ಎಲ್ಲರ ಮನ ಗೆದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಬರುತ್ತಿದೆ.

ಡಾರ್ಲಿಂಗ್ ಕೃಷ್ಣ ಈವರೆಗೂ ಅಭಿನಯಿಸಿರುವ ಎಲ್ಲಾ ಚಿತ್ರಗಳಿಗಿಂತ “ಶುಗರ್ ಫ್ಯಾಕ್ಟರಿ” ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರ ಎನ್ನಲಾಗುತ್ತಿದೆ. ಅಭಿಮಾನಿಗಳು ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ‌.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

error: Content is protected !!