Categories
ಸಿನಿ ಸುದ್ದಿ

ಸಾಯಿರ ಬಾನು, ಮೋಹನ್ ಕುಮಾರ್ ಬದುಕು ಬವಣೆ ! 13 ಎಂಬ ಹಿಂದೂ ಮುಸ್ಲಿಂ ಸತಿ ಪತಿಯ ಭಾವೈಕ್ಯತೆ ಚಿತ್ರ

ಭಾವೈಕ್ಯತೆಯ ಕಥೆಯ ಜೊತೆಗೆ 13 ಕೋಟಿ ಹಣದ ಸುತ್ತ ನಡೆಯುವ ಕುತೂಹಲಕರ ಕಥೆಯನ್ನು ಹೇಳುವ ಚಿತ್ರ 13 ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಹಿರಿಯನಟ ರಾಘವೇದ್ರ ರಾಜ್‌ಕುಮಾರ್ ಅವರು ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಪಾತ್ರದಲ್ಲಿ ಹಾಗೂ ಹಿರಿಯ ಕಲಾವಿದೆ ಶೃತಿ ಅವರು ಸಾಯಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮೋದ್ ಶೆಟ್ಟಿ ಇಲ್ಲಿ ‌ಪೋಲೀಸ್ ಪಾತ್ರ ನಿರ್ವಹಿಸಿದ್ದಾರೆ.

ಪಲ್ಲಕ್ಕಿ ಖ್ಯಾತಿಯ ನರೇಂದ್ರಬಾಬು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಾನು ಹಿಂದೂ ನೀನು ಮುಸ್ಲಿಂ ಎನ್ನುವ ಭೇದ ಭಾವ ಇಲ್ಲದೆ ನಾಯಕ, ನಾಯಕಿ ಇಬ್ಬರೂ ಸತಿ ಪತಿಗಳಾಗಿ ಅನ್ಯೋನ್ಯ ಜೀವನ ನಡೆಸುತ್ತಿರುವಾಗ ನಡೆಯುವ ಒಂದು ಘಟನೆ ಇವರಿಬ್ಬರ ಜೀವನದಲ್ಲಿ ಹಲವಾರು ತಿರುವುಗಳಿಗೆ ಕಾರಣವಾಗುತ್ತದೆ.

ಅದು ಕೊನೆಗೆ ಅವರನ್ನು ಯಾವ ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳುವುದೇ ಚಿತ್ರದ ಕಥೆ. ಹಾಡುಗಳು, ಟ್ರೈಲರ್ ಈಗಾಗಲೇ ವೈರಲ್ ಅಗಿದ್ದು ನೋಡಿದವರೆಲ್ಲ ಇಷ್ಟಪಟ್ಟಿದ್ದಾರೆ.

ಐಟಂ ಸಾಂಗ್, ಡ್ರಿಂಕ್ಸ್ ಸೀನ್ ಇರೋದ್ರಿಂದ ಯಾವುದೇ ಕಟ್ ಇಲ್ಲದೆ ಚಿತ್ರಕ್ಕೆ ಯು/ಎ ಸಿಕ್ಕಿದೆ.
ಸಂಗೀತ ನಿರ್ದೇಶಕ ಶೋಗನ್‌ ಬಾಬು ಅವರು ಮೂರು ಸುಂದರವಾದ ಹಾಡುಗಳನ್ನು ಮಾಡಿ ಕೊಟ್ಟಿದ್ದಾರೆ. ಅಜಯ್ ಮಂಜು ಅವರ ಕ್ಯಾಮೆರಾ ವರ್ಕ್, ಗಿರೀಶ್ ಕುಮಾರ್ ಅವರ ಸಂಕಲನ, ಮದನ್ ಹರಿಣಿ, ಸಶಿಕುಮಾರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ಜಯಸಿಂಹ ಸಂಭಾಷಣೆ ಇದೆ.

ಅನಿಲ್ ಕುಮಾರ್ ಅರ್ಪಿಸುವ ಈ ಚಿತ್ರವನ್ನು, ಯುವಿ ಪ್ರೊಡಕ್ಷನ್ಸ್ ಮೂಲಕ ಕೆ.ಸಂಪತ್ ಕುಮಾರ್, ಮಂಜುನಾಥ್ ಗೌಡ, ಹೆಚ್.ಎಸ್. ಮಂಜುನಾಥ್ ಹಾಗೂ ಸಿ.ಕೇಶವಮೂರ್ತಿ ಸೇರಿ ನಿರ್ಮಾಣ ಮಾಡಿದ್ದಾರೆ.

ಕಾಮಿಡಿ ಕಿಲಾಡಿಗಳು ಲೋಕೇಶ್, ದಿಲೀಪ್ ಪೈ, ವಿನಯ ಸೂರ್ಯ ಮುಂತಾದವರು ಚಿತ್ರದ ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಅವರ ಶಾಲಿನಿ ಎಂಟರ್ ಪ್ರೈಸಸ್ ಚಿತ್ರದ ವಿತರಣೆಯ ಜವಾಬ್ದಾರಿ ಹೊತ್ತಿದೆ.

Categories
ಸಿನಿ ಸುದ್ದಿ

ರೀಲ್ ಅಲ್ಲ, ರಿಯಲ್ ನಲ್ಲೂ ಹೀರೋನೇ! ರಕ್ತಾಕ್ಷ ನಾಯಕನ ಜನಸೇವೆ ಇದು

ರೀಲ್ ಅಲ್ಲ, ರಿಯಲ್ ನಲ್ಲೂ ಇವರು ಹೀರೋನೇ. ಹೌದು, ರಕ್ತಾಕ್ಷ ಸಿನಿಮಾ ನಾಯಕ ರೋಹಿತ್ ಅವರು, ಉತ್ತರ ಕರ್ನಾಟಕ ಭಾಗದ ಅನಾಥಶ್ರಮಗಳಿಗೆ ಹಾಗೂ ಸಮಾಜದ ವಿವಿಧ ವರ್ಗಗಳಿಗೆ ಸಹಾಯ ಹಸ್ತ ಚಾಚಿದ್ದಾರೆ.

ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಹಾಗೂ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿರುವ ರೋಹಿತ್ ಸಾಮಾಜಿಕ ಕೆಲಸಕ್ಕಿಳಿದ್ದಾರೆ. ಆಗಸ್ಟ್ 15ರಂದು ರೋಹಿತ್ ತಮ್ಮ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದವರೇ ಆದ ರೋಹಿತ್ ಮಸ್ಕಿ, ಲಿಂಗಸಗೂರು, ಸಿಂಧನೂರು ಜನತೆಯೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದರ ಜೊತೆಗೆ ಅಲ್ಲಿನ ವಿವಿಧ ವರ್ಗದ ಜನರಿಗೆ ಕೈಲಾದ ಸಹಾಯ ಮಾಡುವುದರ ಜೊತೆಗೆ ಅದೇ ಭಾಗದ ಅನಾಥಶ್ರಮಗಳಿಗೆ ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಿದ್ದಾರೆ.

ಅಂದಹಾಗೆ, ರೋಹಿತ್ ಇದೇ‌ ಮೊದಲ ಬಾರಿಗೆ ಸಾಮಾಜಿಕ ಸೇವೆಗಿಳಿದಿಲ್ಲ. ಹೀರೋ ಆಗಿ ಹೊಸ ಪಯಣ ಆರಂಭಿಸುವುದಕ್ಕೂ ಮುನ್ನ ಅಂದರೆ 2014ರಿಂದಲೂ ಜನೋಪಕಾರಿ ಕೆಲಸ ಮಾಡುತ್ತಿದ್ದು ಅಕ್ಷಯಪಾತ್ರಾ, ಅದಮ್ಯಚೇತನ, ಯೂನಿಸೆಫ್ ಗೆ ಡೋನರ್ ಕೂಡ. ಹೀರೋ ಆದ ಮೇಲೆಯೂ ಜನೋಪಕಾರಿ ಕೆಲಸಗಳನ್ನು ಮುಂದುರೆಸಿಕೊಂಡು ಬರುತ್ತಿದ್ದಾರೆ.

ಉತ್ತರ ಕರ್ನಾಟಕದ ಮಸ್ಕಿ ಊರಿನಲ್ಲಿರುವ ಅನಾಥಶ್ರಮಕ್ಕೆ ಅಪ್ಪು ಅವರ ಹೆಸರಿನಲ್ಲಿ ಕಳೆದ ಒಂದು ವರ್ಷದಿಂದ ಪ್ರತಿ ತಿಂಗಳು ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದೀಗ ತಮ್ಮದೇ ಸಾಯಿ ಪ್ರೊಡಕ್ಷನ್ ನಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮಾಜಿಕ ಕೆಲಸ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ರೋಹಿತ್‌ ಮಾಡೆಲ್‌ ಆಗಿ ಗುರುತಿಸಿಕೊಂಡವರು. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಪುಟ್ಟ ಹಳ್ಳಿಯ ರೋಹಿತ್, ಸುಮಾರು 6 ವರ್ಷಗಳ ಕಾಲ ಮಾಡೆಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರು ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಒಂದಷ್ಟು ಪ್ರತಿಷ್ಠಿತ ಬ್ರ್ಯಾಂಡ್ ಪ್ರತಿನಿಧಿಸಿರುವ ರೋಹಿತ್‌ಗೆ, ರಿಲೀಸ್ ಗೆ ರೆಡಿ ಇರುವ ಇನ್ನೊಂದು ದ್ವಿಭಾಷಿಯ ಸಿನಿಮಾದಲ್ಲಿ ಖಳ ನಾಯಕನಾಗಿ ಅಭಿನಯಿಸಿದ ಅನುಭವಿದೆ. ನಾಯಕನಾಗಿ ಬೆಳ್ಳಿ ಪರದೆಯಲ್ಲಿ ರಾರಾಜಿಸಬೇಕೆಂಬ ಹೊಸ ಉತ್ಸಹ ಹಾಗೂ ಹುಮ್ಮಸ್ಸಿನೊಂದಿಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ಅಡಿ ರಕ್ತಾಕ್ಷ ಚಿತ್ರ ನಿರ್ಮಾಣ ಮಾಡಿ ನಟಿಸುತ್ತಿದ್ದಾರೆ.

ವಾಸುದೇವ್ ಎಸ್ ಎನ್ ರಕ್ತಾಕ್ಷ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರೋಹಿತ್ ಜೊತೆ ಒಂದಷ್ಟು ಉತ್ಸಾಹಿ ಪ್ರತಿಭೆಗಳು ಸೇರಿ ‘ರಕ್ತಾಕ್ಷ’ ಸಿನಿಮಾಗೆ ದುಡಿದಿದ್ದಾರೆ. ಆದರ್ಶ್ ಶಿರಾಸ್, ಆರ್ ಜೆ ಛಾಯಾಗ್ರಹಣ ಮಾಡಿದ್ದು , ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದ್ರ ಡಾಸ್ ಸಂಗೀತ ನೀಡಿದ್ದಾರೆ.

ರೂಪ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ಪ್ರಭು, ವಿಶ್ವ, ನಾರಾಯಣ, ಭದ್ರಿ, ಶಿವಮೊಗ್ಗ ರಾಮಣ್ಣ, ವಿಲಾಸ್, ಗುರುದೇವ ನಾಗರಾಜ, ಬಸವರಾಜ ಆದಾಪುರ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದಶೆಟ್ಟಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಜಲಪಾತದಿಂದ ಇಳಿದು ಬಂದ ಹಾಡಿದು! ಮಲೆನಾಡ ಉತ್ಸವದಲ್ಲಿ ಜಯಮಾಲ ರಿಲೀಸ್ ಮಾಡಿದ್ರು ಸಾಂಗ್

ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರದ 2 ನೇ ಹಾಡು ಇದೀಗ ಎ – 2 ಮ್ಯೂಸಿಕ್ ವಾಹಿನಿ ಮೂಲಕ ಬಿಡುಗಡೆಯಾಗಿದೆ. ಇತ್ತೀಚೆಗೆ ಚಿತ್ರ ತಂಡ ಆಯೋಜಿಸಿದ್ದ ‘ಜಲಪಾತ ಮಲೆನಾಡು ಉತ್ಸವ’ ಎಂಬ ಸಾಂಸ್ಕೃತಿಕ ಮೇಳದಲ್ಲಿ ನಟಿ ಜಯಮಾಲ ಅವರು ” ಎಲ್ಲಿ ಹೋದನೇ ಸಖಿ ” ಎಂಬ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭ ಮಾತಾಡಿದ ಜಯಮಾಲ, ತನ್ನ ಮಲೆನಾಡು ಮೂಲಕ ಚಿಕ್ಕಮಗಳೂರನ್ನು ನೆನಪಿಸಿಕೊಂಡು ಚಿತ್ರದ ನಾಯಕನಟಿ ನಾಗಶ್ರೀಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಇಡೀ ಸಿನಿಮಾದ ಆಶಯವೇ ವಿನಾಶದಂಚಿಗೆ ಸರಿದಿರುವ ಪರಿಸರದ ಕುರಿತು ಕಾಳಜಿ ಮೂಡಿಸುವಂಥದ್ದು. ವ್ಯಾವಹಾರಿಕ ಉದ್ದೇಶಗಳಿಲ್ಲದೇ ನಿಜವಾದ ಪ್ರಕೃತಿ ಪ್ರೀತಿಯಿಂದ ನಿರ್ಮಿಸಿದ ಈ ಚಿತ್ರ ಖಂಡಿತಾ ಜನರಮನಸ್ಸು ಗೆಲ್ಲಲಿದೆ ಎಂದರು ಜಯಮಾಲ.

ನಿರ್ಮಾಪಕ ಟಿ ಸಿ ರವೀಂದ್ರ ತುಂಬರಮನೆ ಮಾತನಾಡಿ, ನಾವು ಸಿನಿಮಾದಲ್ಲಿ ಹೆಚ್ಚು ಗ್ರಾಮೀಣ ಪ್ರತಿಭೆಗಳನ್ನೇ ಬಳಸಿಕೊಂಡು ಅವರಿಗೊಂದು ವೇದಿಕೆ ಒದಗಿಸಿದ್ದೇವೆ. ಬಹಳ ಅರ್ಥಪೂರ್ಣವಾದ ಈ ಲವ್ ಸಾಂಗ್ ಅನ್ನು ವನಿತಾ ವೆಂಕಟೇಶ್ ಎಂಬ ಗೃಹಿಣಿ ಬರೆದಿದ್ದಾರೆ ಎಂದರು ನಿರ್ದೇಶಕ ರಮೇಶ್ ಬೇಗಾರ್. ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ ಕೂಡ ಹಾಡುಗಳ ಬಗ್ಗೆ ಮಾತನಾಡಿದರು.

ಎಲ್ಲಿ ಹೋದನೇ ಸಖೀ ಹಾಡನ್ನು ವನಿತಾ ವೆಂಕಟೇಶ್ ಬರೆದಿದ್ದಾರೆ. ಶ್ರೀನಿಧಿ ಶಾಸ್ತ್ರೀ ಇವರೊಂದಿಗೆ ಡ್ಯುಯೆಟ್ ಹಾಡಿದ್ದಾರೆ. ಚಿತ್ರ ಸೆಪ್ಟೆಂಬರ್ 29 ಕ್ಕೆ ತೆರೆ ಕಾಣಲಿದೆ.

Categories
ಸಿನಿ ಸುದ್ದಿ

ಫಿಲ್ಮ್ ಚೇಂಬರ್ ಚುನಾವಣೆಗೆ ಅಖಾಡ ರೆಡಿ: ಗಣೇಶ್, ಪ್ರಮೀಳಾ ಜೋಷಾಯ್ ಜೊತೆ ಜಂಭದ ಹುಡುಗಿ ಸ್ಪರ್ಧೆ

“ಜಂಭದ ಹುಡುಗಿ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಪ್ರಿಯಾ ಹಾಸನ್, ನಂತರದ ದಿನಗಳಲ್ಲಿ ನಿರ್ಮಾಪಕಿ ಹಾಗೂ ನಿರ್ದೇಶಕಿ ಸಹ ಆದರು. ಈಗ ಪ್ರಿಯಾ ಹಾಸನ್ ಹೊಸ ಹೆಜ್ಜೆ ಇಟ್ಟಿದ್ದಾರೆ ಅನ್ನೋದು ವಿಶೇಷ. ಅಂದರೆ ಅವರಿಲ್ಲಿ ಹೊಸ ಸಿನಿಮಾ ಮಾಡುತ್ತಿಲ್ಲ. ಬದಲಾಗಿ ಚುನಾವಣಾ ಕಣಕ್ಕೆ ಜಿಗಿದಿದ್ದಾರೆ.

ಹೌದು, ಸದ್ಯದಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಲಿದ್ದು, ನಿರ್ಮಾಪಕಕರ ವಲಯ ಸಮಿತಿಗೆ ಪ್ರಿಯಾ ಹಾಸನ್ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರಿಯಾ ಹಾಸನ್ ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣೆಗೂ ಮುನ್ನ ಪ್ರಿಯಾ ಹಾಸನ್, ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಮುಂತಾದ ಗಣ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೆ, ನಿರ್ಮಾಪಕರ ವಲಯದಿಂದ ಅಧ್ಯಕ್ಷ ಸ್ಥಾನಕ್ಕಾಗಿ ಎ.ಗಣೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಮೀಳಾ ಜೋಷಾಯ್ ಹಾಗೂ ನಿರ್ಮಾಪಕರ ವಲಯ ಸಮಿತಿಗೆ ಪ್ರಿಯಾ ಹಾಸನ್ ಸ್ಪರ್ಧಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ರಾವುತಗೆ ಪ್ರಶಸ್ತಿ: ನಿರ್ದೇಶಕ ಸಿದ್ದು ವಜ್ರಪ್ಪಗೆ ಗೌರವ

ಚಿತ್ರ ನಿರ್ದೇಶಕರಾದ ಸಿದ್ದು ವಜ್ರಪ್ಪರಿಗೆ ಉತ್ತಮ ಕಥೆ ಬರಹಗಾರ ಮತ್ತು ಉತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ‌. ಇತ್ತೀಚೆಗೆ ಹಿರಿಯ ನಟ ಡಾ. ಚಿಕ್ಕಹೆಜ್ಜಾಜಿ ಮಹದೇವ್ ನೀಡಿ ಗೌರವಿಸಿದ್ದಾರೆ.

ಚೈತನ್ಯ ಫೌಂಡೇಶನ್ ಕರ್ನಾಟಕ, ಕನಕಪೀಠ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ ನಡೆದ ಧಾರವಾಡ ನುಡಿ ಸಡಗರ ಚಲನಚಿತ್ರೋತ್ಸವ ಪ್ರಶಸ್ತಿ -2023 ಕಾರ್ಯಕ್ರಮದಲ್ಲಿ ರಾವುತ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ರಾವುತ ಚಿತ್ರಕಥೆ ಗೆ ದೊರಕಿದ ಈ ಪ್ರಶಸ್ತಿಯು ಏಳು ಜನ ಪರಿಶೀಲಕರಿಂದ ದೊರಕಿದ ಪ್ರಶಸ್ತಿ ಆಗಿದೆ. ತಮ್ಮಣ್ಣ ಬಡಿಗೇರ್, ಚಂದ್ರಶೇಖರ ಹನುಮಗೌಡ ಕನಕ ಪೀಠ ಮುಂತಾದವರು ಪ್ರಶಸ್ತಿ ಪರಿಶೀಲನಾ ಸಮಿತಿಯಲ್ಲಿ ಇದ್ದರು.

ಚಿತ್ರದ ಕತೆಯು ಗುರುಶಿಷ್ಯರ ಸಂಗಮದಲ್ಲಿ, ಮರಣದ ನಂತರದ ಆದಿಯನ್ನು ತೋರುವ ಕಥೆ ಇದೆ. ಅಲ್ಲದೆ ಎರಡು ಉಪಕಥೆಗಳು ಈ ಸಿನಿಮಾದಲ್ಲಿ ಇವೆ. ಆ ಕತೆಗಳು ಆಯೋಜಕರಿಗೆ ತುಂಬಾ ಹಿಡಿಸಿವೆ. ಜೀವನದ ಮೂಲ ಅಂಶಗಳನ್ನು ಪ್ರತಿ ದೃಶ್ಯದಲ್ಲೂ ತೋರಿಸಿದ್ದು ಪರಿಶೀಲಕರಿಗೆ ಖುಷಿ ತಂದಿದೆ. ಕಥೆಯ ಬಿಗಿಯಾಗಿದ್ದು ಈ ಚಿತ್ರಕ್ಕೆ ಜೀವ ಎಂದು ನಿರ್ದೇಶಕರನ್ನು ಪರಿಶೀಲನಾ ಸಮಿತಿ ಬೆನ್ನು ತಟ್ಟಿದೆ.

ಶ್ರೀ ವಿಶ್ವಕರ್ಮ ಸಿನಿಮಾಸ್ ಅಡಿಯಲ್ಲಿ ಈರಣ್ಣ ಸುಭಾಸ್ ಬಡಿಗೇರ್ ನಿರ್ಮಾಣ ಮಾಡಿದ್ದಾರೆ. ನಾಯಕ ರಾಜ ಪ್ರವೀಣ್, ನಾಯಕಿ ಭವಾನಿ ಇನ್ನೂಳಿದ ಕಲಾವಿದರು, ರಾಘವ್ ಗೌಡಪ್ಪ ಮಾರೇಶ್ ಕನಕಗಿರಿ ನರಸಿಂಹಮೂರ್ತಿ ಇವರ ನಟನೆ ಚೆನ್ನಾಗಿ ಮೂಡಿ ಬಂದಿದೆ. ಸಂಗೀತ ಸುಚಿನ್ ಶರ್ಮ, ಸಂಕಲನ, ಅರವಿಂದ್, ಕಲೆ ಲಷ್ಮಿಕಾಂತಜೋಶಿ ಅವರದ್ದು ಆಗಿದೆ.

ಚಿತ್ರದ ಹಾಡುಗಳು ಪೂರ್ಣವಾಗಿದ್ದು ಪ್ರಖ್ಯಾತ ಆಡಿಯೋ ಕಂಪನಿಯಲ್ಲಿ ಬಿಡುಗಡೆಗೊಳ್ಳಲ್ಲಿವೆ, ಚಿತ್ರವು ನವಂಬರ್ ಅಂತ್ಯದಲ್ಲಿ ಬಿಡುಗಡೆ ಆಗಲಿದೆ ಚಿತ್ರ ನಿರ್ದೇಶಕರು ಸಿದ್ದುವಜ್ರಪ್ಪ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಕಿರುತೆರೆಯಿಂದ ಸಿನಿಮಾ ಅಂಗಳಕ್ಕೆ ಬಂದ ರಾಧಾ ಭಗವತಿ

ಜನಪ್ರಿಯ “ರಾಮಾಚಾರಿ” ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು, ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಚಿತ್ರದ ಹೆಸರೇ ನನಗೆ ಆಪ್ತವೆನಿಸಿತು. ಇನ್ನು ಕಥೆ ಕೇಳಿದಾಗಲಂತೂ ಮೂರ್ನಾಲ್ಕು ದಿನಗಳ ಕಾಲ ಆ ಗುಂಗಿನಲ್ಲೇ ಇದ್ದೆ. ಖಂಡಿತ ಚಿತ್ರ ನೋಡಿದವರಿಗೆಲ್ಲ ತಮ್ಮ ಕಾಲೇಜು ದಿನಗಳ ನೆನಪು ಮರುಕಳಿಸದೇ ಇರದು.

ನಟನೆಗೆ ಹೆಚ್ಚು ಅವಕಾಶ ಇರುವಂತ ಪಾತ್ರ ಸಿಕ್ಕಿದ್ದಕ್ಕೆ ಖುಷಿಯಿದೆ. ಸಿನಿಪ್ರಿಯರ ಪ್ರತಿಕ್ರಿಯೆಗೆ ಕಾತರದಿಂದ ಎದುರು ನೋಡುತ್ತಿದ್ದೇನೆ’ ಎನ್ನುತ್ತಾರೆ ರಾಧಾ ಭಗವತಿ .

Categories
ಸಿನಿ ಸುದ್ದಿ

ಕಾಟೇರ ಚಿತ್ರೀಕರಣ ಮುಕ್ತಾಯ: ಇದು ದರ್ಶನ್ ಚಿತ್ರ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ “ಕಾಟೇರ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.

ನಮ್ಮ ಸಂಸ್ಥೆಯ ನಿರ್ಮಾಣದ “ಕಾಟೇರ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ. ತರುಣ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು.


ದರ್ಶನ್ ಅವರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯಾಗಿ ಮೊದಲ ಬಾರಿಗೆ ಮಾಲಾಶ್ರೀ ಅವರ ಮಗಳು ಆರಾಧನಾ ಅಭಿನಯಿಸುತ್ತಿದ್ದಾರೆ. ಜನಪ್ರಿಯ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.

“ಗುರು ಶಿಷ್ಯರು” ಚಿತ್ರದ ನಂತರ ನಾನು ಹಾಗೂ ಜಡೇಶ್ ಅವರು ಸೇರಿ ಈ ಚಿತ್ರದ ಕಥೆ ಬರೆದ್ದೆವು. ದರ್ಶನ್ ಅವರಿಗಾಗಿಯೇ ಬರೆದ ಕಥೆಯಿದು ಎಂದು ಮಾತು ಆರಂಭಿಸಿದ ನಿರ್ದೇಶಕ ತರುಣ್ ಸುಧೀರ್, ಆನಂತರ ದರ್ಶನ್ ಅವರು ರಾಕ್ ಲೈನ್ ವೆಂಕಟೇಶ್ ಅವರಿಗೆ ಈ ಕಥೆ ಹೇಳಿ ಎಂದರು. ರಾಕ್ ಲೈನ್ ಸರ್ ಕಥೆ ಮೆಚ್ಚಿಕೊಂಡು ಚಿತ್ರವನ್ನು ಪ್ರಾರಂಭಿಸಿದರು. ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಈ ಚಿತ್ರದ ನಾಯಕಿ ಎಂದು ನಿರ್ಮಾಪಕರು, ದರ್ಶನ್ ಅವರು ಹಾಗೂ ನಾನು ಸೇರಿ ಆಯ್ಕೆ ಮಾಡಿದ್ದೆವು. ಆರಾಧನಾ ಅದ್ಭುತ ನಟಿ. ಬಹುತೇಕ ಎಲ್ಲಾ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಮುಗಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು , ಕನಕಪುರ ರಸ್ತೆಯಲ್ಲಿ ಅದ್ದೂರಿ ಹಳ್ಳಿ ಸೆಟ್ ಹಾಕಲಾಗಿದೆ‌. ನೂರು ದಿನಗಳ ಚಿತ್ರೀಕರಣ ಪೂರ್ಣವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದರು.

ನೂರು ದಿನಗಳ ಚಿತ್ರೀಕರಣದಲ್ಲಿ ನಾನು, ಎಪ್ಪತ್ತೊಂದು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿಯಾಗಿ ನಟಿಸಿದ್ದಾರೆ. ಎಂತಹ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಅಭಿನಯಿಸುವ ಕಲಾವಿದೆ ಅವರು.


ಹಿರಿಯ ನಟರಾದ ಅವಿನಾಶ್, ಜಗಪತಿ ಬಾಬು, ವಿನೋದ್ ಆಳ್ವ, ಕುಮಾರ್ ಗೋವಿಂದ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಸುಧಾಕರ್ ಅವರ ಛಾಯಾಗ್ರಹಣ ಅದ್ಭುತವಾಗಿದ್ದು, ಈ ಚಿತ್ರದ ಛಾಯಾಗ್ರಹಣಕ್ಕಾಗಿ ಅವರಿಗೆ ಪ್ರಶಸ್ತಿ ಬರಬಹುದು ಎಂಬುದು ನನ್ನ ಅನಿಸಿಕೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿಳಿಸಿದರು‌.

ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಹಾಗೂ ದರ್ಶನ್ ಅವರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಾಯಕಿ ಆರಾಧನಾ.

ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ, ಛಾಯಾಗ್ರಾಹಕ ಸುಧಾಕರ್, ತರುಣ್ ಸುಧೀರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ಜಡೇಶ್, ಸಂಭಾಷಣೆ ಬರೆದಿರುವ ಮಾಸ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಹಿರಿಯ ನಟಿ ಮಾಲಾಶ್ರೀ ಚಿತ್ರತಂಡಕ್ಕೆ ಶುಭ ಕೋರಿದರು.

Categories
ಸಿನಿ ಸುದ್ದಿ

ಪುಷ್ಪ-2 ರಿಲೀಸ್ ಡೇಟ್ ಫಿಕ್ಸ್: ಮುಂದಿನ ಸ್ವಾತಂತ್ರ್ಯ ದಿನಕ್ಕೆ ಅಲ್ಲು ಅರ್ಜುನ್ ಸಿನಿಮಾ ಬಿಡುಗಡೆ

ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಹಾಗೂ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಮಗದೊಮ್ಮೆ ಬೆಳ್ಳಿಭೂಮಿಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ-2 ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್ ಚಿತ್ರತಂಡ ಧಿಡೀರ್ ಸರ್ ಪ್ರೈಸ್ ಕೊಟ್ಟಿದೆ.

‘ಪುಷ್ಪ-2’ ಬಿಡುಗಡೆ ದಿನಾಂಕ ನಿಗದಿಯಾಗಿದೆ.. ಸ್ವಾತಂತ್ರ್ಯ ದಿನಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿದ್ದು, ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದಾರೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊರಬಿದ್ದಿದ್ದ ಪುಷ್ಪ-2 ಟೀಸರ್ ಝಲಕ್ ಹಲ್ ಚಲ್ ಎಬ್ಬಿಸಿತ್ತು. ಪುಷ್ಪ 2 ಟೀಸರ್ ಜೊತೆ ಹೊರಬಿದ್ದಿದ್ದ ಪುಷ್ಪರಾಜನ ಹೊಸ ಫೋಟೋವಂತೂ ಟಾಕ್ ಆಫ್ ದಿ ಟಾಲಿವುಡ್ ಆಗಿತ್ತು. ಸೀರೆ ಉಂಟು ಬಳೆ ತೊಟ್ಟು ಮೂಗುತಿ ಧರಿಸಿ ಕೈಯಲ್ಲಿ ಪಿಸ್ತೂಲ್ ಹಿಡಿದು ದರ್ಶನ ಕೊಟ್ಟಿದ್ದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಅವತಾರಕ್ಕೆ ಫ್ಯಾನ್ಸ್ ಉಘೇ ಉಘೇ ಎಂದಿದ್ದರು. ಶೂಟಿಂಗ್ ಹಂತದಲ್ಲಿರುವ ಪುಷ್ಪ ಸೀಕ್ವೆಲ್ ಕ್ರೇಜ್ ಗೆ ಬಾಲಿವುಡ್ ಮಂದಿ ಥಂಡಾ ಹೊಡೆದಿದ್ದಾರೆ.

ಪುಷ್ಪ 2 ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು. ಬಾಲಿವುಡ್ ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗೀಗಾ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.

Categories
ಸಿನಿ ಸುದ್ದಿ

ಟೇಕ್ವಾಂಡೋ ಗರ್ಲ್ ಎಂಬ ಪೋರಿಯ ಕಥೆ: ಪರದೆ ಮೇಲೆ ಬ್ಲಾಕ್ ಬೆಲ್ಟ್ ಹುಡುಗಿಯ ಸಾಹಸ

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನೈಜ ಘಟನೆ ಇರುವ ಸಿನಿಮಾಗಳು ಬಂದಿವೆ. ಬರುತ್ತಲೂ ಇವೆ. ಅಂತಹ ಸಿನಮಾಗಳ ಸಾಲಿಗೆ ಹೀಗೊಂದು ಚಿತ್ರ ಸೇರ್ಪಡೆಯಾಗಿದೆ. ಹೆಸರು ಟೇಕ್ವಾoಡೋ ಗರ್ಲ್ . ಈ ಚಿತ್ರದ ಹೈಲೆಟ್ ಹತ್ತು ವರ್ಷದ ಪೋರಿ. ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ರಿಲೀಸ್ ಗೆ ರೆಡಿಯಾಗಿದೆ. ಅಂದಹಾಗೆ ಇದೊಂದು ಟೇಕ್ವಾoಡೋ ಸಮರ ಕಲೆಯ ಸುತ್ತ ನಡೆವ ಕಥೆ.

ನಾಲ್ಕು ಬಾರಿ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಭಾಗವಹಿಸಿ ಬ್ಲಾಕ್ ಬೆಲ್ಟ್ ಪಡೆದ ಹುಡುಗಿ ಈ ಚಿತ್ರದ ಆಕರ್ಷಣೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಮೇಲೆ ನಿತ್ಯ ಕೃತ್ಯಗಳು ನಡೆಯುತ್ತಲೇ ಇವೆ. ಹೆಣ್ಣು ತನ್ನನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ “ಟೇಕ್ವಾಂಡೋ ಗರ್ಲ್” ತಯಾರಾಗಿದೆ.

ಋತು ವರ್ಷ ಚಿತ್ರದ ಪ್ರಮುಖ ಆಕರ್ಷಣೆ. ಒಂದು ಬಡ ಕುಟುಂಬದ ಹೆಣ್ಣು ಮಗಳು ಶಿಕ್ಷಣಕ್ಕಾಗಿ ಎಷ್ಟು ಕಷ್ಟ ಪಡುತ್ತಾಳೆ, ಓದುವುದೇ ಕಷ್ಟ ಇರುವಂತಹ ಸಮಯದ ನಡುವೆ ಟೇಕ್ವಾಂಡೋ ಸಮರ ಕಲೆ ಹೇಗೆ ಕಲಿಯುತ್ತಾಳೆ, ಈ ವಿದ್ಯೆ ಮೂಲಕ ಸಮಾಜಕ್ಕೆ ಹೇಗೆ ಮಾದರಿ ಆಗುತ್ತಾಳೆ ಎನ್ನುವುದೇ ಕಥೆಯ ಎಳೆ.

ಇನ್ನು ಐದನೇ ತರಗತಿಯಲ್ಲಿ ಓದುತ್ತಿರುವ ಋತು ವರ್ಷ 3ನೇ ವಯಸ್ಸಿನಿಂದ ಈ ಕಲೆಯನ್ನು ಕರಗತ ಮಾಡಿಕೊಂಡಿದ್ದಾಳೆ. ಒಟ್ಟು ಎಂಟು ಪರೀಕ್ಷೆಗಳನ್ನು ಎದುರಿಸಿ ಈಗ ಬ್ಲಾಕ್ ಬೆಲ್ಟ್ ಪಡೆದು 4 ಅಂತರಾಷ್ಟ್ರೀಯ ಚ್ಯಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಹೆಮ್ಮೆಯ ಟೇಕ್ವಾಂಡೋ ಪಟು ಆಗಿದ್ದಾಳೆ.

ಈಕೆಯ ಸಾಧನೆಗೆ ಮೂಲ ಪ್ರೇರಣೆ ತಾಯಿ ಡಾ. ಸುಮೀತಾ ಪ್ರವೀಣ್. ಸ್ವಯಂ ರಕ್ಷಣೆ ಮುಖ್ಯ ಎನ್ನುವುದನ್ನು ತಿಳಿ ಹೇಳಿ ಆಕೆಯನ್ನು 3ನೇ ವಯಸ್ಸಿನಿಂದ ತಯಾರಿ ಮಾಡಿದ್ದಾರೆ.
ಇದು ಮಗಳಿಗಷ್ಟೇ ಸೀಮಿತ ವಾಗಬಾರದು ಎಂದು ಅದನ್ನೇ ಒಂದು ಸಿನಿಮಾ ಮುಖಾಂತರ ಸಮಾಜಕ್ಕೆ ಹೇಳಲು
ಟೇಕ್ವಾಂಡೋ ಗರ್ಲ್‌‌ ಸಿನಿಮಾ ನಿರ್ಮಾಪಕರಾಗಿದ್ದಾರೆ.


ಈ ಚಿತ್ರಕ್ಕೆ ಅವರ ಪತಿ ಪ್ರವೀಣ್ ಭಾನು ಕೂಡ ಸಾಥ್ ನೀಡಿ ಮಗಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದಾರೆ.
ಮಗಳ ಹುಟ್ಟು ಹಬ್ಬದಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನನ್ನ ಮಗಳಷ್ಟೇ ಅಲ್ಲ ಎಲ್ಲಾ ಹೆಣ್ಣು ಮಕ್ಕಳು ಟೇಕ್ವಾಂಡೋ ಕಲೆ ಕಲಿಯ ಬೇಕು ಎಂಬುದು ಸುಮೀತಾ ಮಾತು.

ಈ ಚಿತ್ರಕ್ಕೆ ರವೀಂದ್ರ ವಂಶಿ ನಿರ್ದೇಶಕರು. ಈ ಹಿಂದೆ ಪುಟಾಣಿ ಸಫಾರಿ ಚಿತ್ರ ನಿರ್ದೇಶನ ಮಾಡಿದ್ದ ಇವರು, ಟೇಕ್ವಾಂಡೋ ಗರ್ಲ್ ಚಿತ್ರ ನಿರ್ದೇಶನಕ್ಕೆ 25 ದಿನ ತರಬೇತಿ ಪಡೆದು ಅದರ ಬಗ್ಗೆ ತಿಳಿದುಕೊಂಡು ನಂತರ ಚಿತ್ರವನ್ನು ನಿರ್ದೇಶನ ಮಾಡಿದ್ದಾರಂತೆ.

ಇದು ಮಕ್ಕಳ ಚಿತ್ರ ನಿಜ ಆದರೆ ಮಕ್ಕಳಿಂದ ದೊಡ್ಡವರಿಗಾಗಿ ನಿರ್ಮಿಸಿರುವ ಚಿತ್ರ ಇದಾಗಿದ್ದು ಈ ಚಿತ್ರವನ್ನು ಸ್ಕೂಲ್ ಮಕ್ಕಳಿಗೆ ತೋರಿಸಲು ನಿರ್ದರಿಸಿದ್ದೇವೆ ಎಂದು ಹೇಳಿದರು.

ಚಿತ್ರದಲ್ಲಿ ಸುಮಾರು ಇನ್ನೂರು ಟೇಕ್ವಾಂಡೋ ವಿಧ್ಯಾರ್ಥಿಗಳು ಅಭಿನಯಿಸಿದ್ದಾರೆ. ಚಿತ್ರಕ್ಕೆ ಸುಮಾರು ನೂರೈವತ್ತು ಚಿತ್ರಗಳಿಗೆ ರಾಗ ಸಂಯೋಜನೆ ಮಾಡಿರುವ ಸಂಗೀತ ನಿರ್ದೇಶಕ M.S. ತ್ಯಾಗರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಚೆಕ್ ದೇ ಇಂಡಿಯಾ, ದಂಗಲ್ ನಂತಹ ಚಿತ್ರ ಇದಾಗಿದ್ದು ಎಲ್ಲರೂ ಇಂತಹ ಚಿತ್ರವನ್ನು ನೋಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ನಟ ಗಣೇಶ್ ರಾವ್ ಚಿತ್ರದ  ಹಾಡುಗಳನ್ನು ಬಿಡುಗಡೆ ಮಾಡಿದರು. ಸೆಪ್ಟೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ತೆರೆ ಮೇಲೆ ಭೀಮಾ ಕೋರೆಗಾಂವ: ಇದು ಸತ್ಯ ಘಟನೆ ಆಧಾರಿತ ಚಿತ್ರ: ಅಬ್ಬರಿಸಲಿದ್ದಾರೆ ಸುಪರ್ ಸ್ಟಾರ್!

ಇತ್ತೀಚೆಗಷ್ಟೇ ಸಂಜು ವೆಡ್ಸ್ ಗೀತಾ-2 ಚಿತ್ರಕ್ಕೆ ಚಾಲನೆ ನೀಡಿದ್ದ ನಿರ್ದೇಶಕ ನಾಗಶೇಖರ್, ಅದರ ಬೆನ್ನಲ್ಲೇ ಮತ್ತೊಂದು ಬಿಗ್ ಪ್ರಾಜೆಕ್ಟ್ ಗೆ ಕೈ ಹಾಕಿದ್ದಾರೆ. ರೆವಲ್ಯೂಷನರಿ ಸಬ್ಜೆಕ್ಟ್ ಇಟ್ಟುಕೊಂಡು ನೈಜ ಘಟನೆಯನ್ನು ತೆರೆಯ ಮೇಲೆ ಹೇಳಹೊರಟಿದ್ದಾರೆ. ಅದಕ್ಕೆ ಕೊಟ್ಟಿರುವ ಹೆಸರು ಭೀಮಾ ಕೋರೇಗಾಂವ

ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಹು ಸೂಕ್ಷ್ಮ ವಿಚಾರ ಇಟ್ಟುಕೊಂಡು ಮಾಡುತ್ತಿರುವ ಚಲನಚಿತ್ರ ಇದಾಗಿದ್ದು, ಚಿತ್ರದ ಶೀರ್ಷಿಕೆಯನ್ನು ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ.

ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡಿ, ಸಂಜು ವೆಡ್ಸ್ ಗೀತಾ ಚಿತ್ರದ ಬಗ್ಗೆ ಚರ್ಚೆ ನಡೆಸುವಾಗ ಈ ವಿಷಯ ಪ್ರಸ್ತಾಪಕ್ಕೆ ಬಂತು. ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಈ ಘಟನೆಯನ್ನು ನಮ್ಮ ಜನರಿಗೆ ತಿಳಿಸಬೇಕು ಎಂದು ನಿರ್ಧರಿಸಿ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದರು.

ನಿರ್ದೇಶಕ ನಾಗಶೇಖರ್ ಮಾತನಾಡಿ, 1818 ರ ಜ.1 ರಂದು ನಡೆದ ರೆವಲ್ಯೂಷನರಿ ಸಬ್ಜೆಕ್ಟ್. ಶೋಷಿತರ ಬದುಕಿಗೆ ಬೆಳಕು ಹಚ್ಚುವ ಕೆಲಸಕ್ಕೆ ದೀಪ ಹಚ್ಚುವ ಮೂಲಕ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ಇದು ಬಹಳ ದೊಡ್ಡ ವಿಚಾರವಾಗಿದೆ ಎಂದರು.

ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಪೂನಾ ನದಿಯ ದಡದಲ್ಲಿ ಡಿ.31ರಿಂದ ಜ.1ರವರೆಗೆ ಸ್ವಾಭಿಮಾನಿ ಬದುಕಿಗೋಸ್ಕರ. ನಡೆದ ಘನಘೋರ ಯುದ್ಧ. 2ನೇ ಬಾಜೀರಾಯನ ಘೋರ ಕೃತ್ಯಗಳನ್ನು ವಿರೋಧಿಸಿ ನಡೆಸಿದ ಯುದ್ದ, ಭಾರತದ ನೆಲದಲ್ಲಿ ಬಾಜೀರಾಯ ಅಸ್ಪೃಶ್ಯರನ್ನು ಹೇಗೆ ನಡೆಸಿಕೊಂಡಿದ್ದ, ಯಾವ ರೀತಿ ನೋಡಿಕೊಂಡಿದ್ದ ಯಾವ ಉದ್ದೇಶಕ್ಕೆ ಈ ಯುದ್ದ ನಡೆಯಿತು ಅನ್ನೋದನ್ನು ಈ ಸಿನಿಮಾದಲ್ಲಿ ದಾಖಲು ಮಾಡಲಾಗುತ್ತೆ ಎಂದರು.

ಚಿಂತಕ ಗೋಪಾಲ್ ಮಾತನಾಡಿ, ಅಸಮಾನತೆ ವಿರುದ್ದ ನಡೆದ ಹೋರಾಟವಿದು. 500 ಜನ ಸೈನಿಕರು 30 ಸಾವಿರ ಪೇಶ್ವೆ ಬಾಜೀರಾಯನ ಸೈನಿಕರನ್ನು 12 ಗಂಟೆಗಳಲ್ಲಿ ಧ್ವಂಸ ಮಾಡಿದ ಘಟನೆ. ಬಾಜೀರಾಯ ಅಸ್ಪೃಶ್ಯರ ವಿರುದ್ದ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದ. ಇದನ್ನು ವಿರೋಧಿಸಿ ನಡೆದ ಯುದ್ದವಿದು. ಹಾಲಿವುಡ್ ಶೈಲಿಯ ಸಿನಿಮಾ ಆಗಲಿದೆ‌ ಎಂದರು. ಉಳಿದಂತೆ ನೆಹರು ಓಲೇಕಾರ್, ಚಕ್ರವರ್ತಿ ಚಂದ್ರಚೂಡ್, ಆ ಘಟನೆ ಬಗ್ಗೆ ಒಂದಷ್ಟು ಮಾಹಿತಿ‌ ನೀಡಿದರು.

ನಾಗಶೇಖರ್, ಈ ಸಿನಿಮಾ ಮಾಡುವಂತೆ ನನಗೆ ಪ್ರೇರೇಪಿಸಿದ್ದು ಚಂದ್ರಚೂಡ್, ಜಾಸ್ತಿ ಬಂಡವಾಳ ಕೇಳುತ್ತೆ. ಚಿತ್ರದ ಬಜೆಟ್ 120 ಕೋಟಿ ಆಗಬಹುದು. ನಿರ್ಮಾಪಕ ಕುಮಾರ್ ಎಷ್ಟೇ ಆದರೂ ಖರ್ಚು ಮಾಡಲು ರೆಡಿ ಇದ್ದಾರೆ. ಕನ್ನಡದ ಸೂಪರ್ ಸ್ಟಾರ್ ಒಬ್ಬರು ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದಾರೆ. ನಟಿ ದೀಪಿಕಾ ಪಡುಕೋಣೆ ಅವರನ್ನು ನಾಯಕಿ ಪಾತ್ರಕ್ಕೆ ಕರೆತರುವ ಉದ್ದೇಶವಿದೆ.

54 ಕೋಟಿ ಶೋಷಿತರಿಗೆ ಬೆಳಕಾಗುವ ಕಥಾನಕವಿದು. ಚಂದ್ರಚೂಡ್ ನೇತೃತ್ವದಲ್ಲಿ ಬರಹಗಾರರ ತಂಡ ಕಟ್ಟಿ ಭಾಗ-1, ಭಾಗ-2 ಮಾಡುವ ಯೋಚನೆಯಿದೆ. ಪ್ರೀ ಪ್ರೊಡಕ್ಷನ್ ಗೆ 365 ದಿನ ತೆಗೆದುಕೊಂಡಿದ್ದೇನೆ. ಈ ಕಥೆಯನ್ನು ಕಣ್ಣಿಗೆ ಕಟ್ಟುವ ಹಾಗೆ ಮನಕ್ಕೆ ಮುಟ್ಟುವ ಹಾಗೆ ಕಟ್ಟಿಕೊಡುವ ಜವಾಬ್ದಾರಿ ನನ್ನ ಮೇಲಿದೆ ಎಂದರು.

error: Content is protected !!