Categories
ಸಿನಿ ಸುದ್ದಿ

ತಾರಿಣಿ ಎಂಬ ಗರ್ಭಿಣಿಯ ಕಥೆ: ಮಮತಾ ರಾವತ್ ಹೈಲೆಟ್

ಇತ್ತೀಚಿಗೆ ಚಿತ್ರೀಕರಣ ಮುಗಿಸಿಕೊಂಡ ತಾರಿಣಿ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. “ಶ್ರೀ ಗಜನಿ ಪ್ರೊಡಕ್ಷನ್ಸ್‌” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ. ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಮಮತಾ ರಾವತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ ಮಾನಸಿಕ ಪೂರ್ವತಯಾರಿ ಮಾಡಿಕೊಂಡು ಉತ್ತಮವಾಗಿ ನಟಿಸಿದ್ದಾರೆ. ಇದೊಂದು “ಗರ್ಭಿಣಿ” ಹೆಂಗಸಿನ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಈ ಚಿತ್ರದಲ್ಲಿ “ಮಮತಾ ರಾಹುತ್” ರವರು ನಿಜ ಜೀವನದಲ್ಲು ಸ್ವತಃ ಗರ್ಭಿಣಿಯಾಗಿಯೇ ಮನೋಜ್ಞವಾಗಿ ನಟಿಸಿದ್ದಾರೆಂದು ಚಿತ್ರದ ನಿರ್ದೇಶಕರು ಹೇಳಿದ್ದಾರೆ. ಅವರದೇ ಮಗುವಿನ ದೃಶ್ಯವನ್ನು ಹುಟ್ಟಿದ ಕೂಡಲೇ ಸೆರೆಹಿಡಿಯಲಾಗಿದೆಯಂತೆ.

ಒಟ್ಟಾರೆ ನೈಜವಾಗಿ ಸಹಜವಾಗಿ ಎಲ್ಲಾ ಕಲಾವಿದರೂ ಕೂಡ ಅಭಿನಯಿಸಿದ್ದಾರೆ. ಉಳಿದಂತೆ ರೋಹಿತ್, ಭವಾನಿ ಪ್ರಕಾಶ್, ವಿಜಯ ಲಕ್ಷ್ಮಿ, ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು, ಸುಧಾ ಪ್ರಸನ್ನ, ಪ್ರಮಿಳಾ ಸುಬ್ರಹ್ಮಣ್ಯಂ, ಮಟಿಲ್ಡಾ ಡಿಸೋಜಾ, ದೀಪಿಕಾ ಗೌಡ, ತೇಜಸ್ವಿನಿ, ಶ್ವೇತಾ, ಮಂಜು, ಇನ್ನೂ ಮುಂತಾದ ನುರಿತ ಕಲಾವಿದರು ಅಭಿನಯಿಸಿದ್ದಾರೆ.

ನಾಗರತ್ನ ಕೆ.ಹೆಚ್ ವಸ್ತ್ರ ವಿನ್ಯಾಸ, ಅನಂತ್ ಆರ್ಯನ್ ಸಂಗೀತ, ದೀಪಕ್ ಸಿ ಎಸ್ ಸಂಕಲನ,
ರಾಜು ಹೆಮ್ಮಿಗೇಪುರ ಛಾಯಾಗ್ರಹಣ, ಬಸವರಾಜ್ ಆಚಾರ್ ಕೆ ಆರ್ ಕಲೆ, ಕಲರಿಂಗ್ ನಿಖಿಲ್ ಕಾರ್ಯಪ್ಪ, ಶ್ರೀ ರಾಮ್ ಶಬ್ದ ವಿನ್ಯಾಸ, ಪ್ರದೀಪ್ ಜಿ ಎಫೆಕ್ಟ್ಸ್, ಮುಂತಾದವರ ತಾಂತ್ರಿಕ ಬಳಗವಿದೆ.

Categories
ಸಿನಿ ಸುದ್ದಿ

ಮತ್ತೆ ಜೊತೆಯಾದ ಬಡವ ರಾಸ್ಕಲ್ ಟೀಮ್: ಡಾಲಿ ಬರ್ತ್ ಡೇಗೆ ಅಣ್ಣ From Mexico ಸಿನಿಮಾ ಅನೌನ್ಸ್

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು, ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, suite ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.

’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ. ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ವಸಂತ ಕಾಲಕ್ಕೆ ಹೊರಟ ಸಚಿನ್ ಶೆಟ್ಟಿ: ಟೀನೇಜ್ ಲವ್ ಸ್ಟೋರಿ ಹಿಂದೆ ಶಿಕಾರಿ ನಿರ್ದೇಶಕ

ಈ ಹಿಂದೆ ಒಂದು ಶಿಕಾರಿಯ ಕಥೆ ನಿರ್ದೇಶಿಸಿದ್ದ ಸಚಿನ್ ಶೆಟ್ಟಿ, ಈಗ ಹೊಸ ಚಿತ್ರ ಅನೌನ್ಸ್ ಮಾಡಿದ್ದಾರೆ. ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ, ಈ ಬಾರಿ ಟೀನೇಜ್ ಲವ್ ಸ್ಟೋರಿಯೊಂದನ್ನು ಕ್ಲಾಸ್ ಸ್ಟೈಲ್ ನಲ್ಲಿ ನಿರೂಪಿಸಲು ಹೊರಟಿದ್ದಾರೆ.

ಚಿತ್ರದ ನಾಯಕ ಸಚಿನ್ ರಾಠೋಡ್, ನಾಯಕಿ ರಾಧಾ ಭಗವತಿ ಮತ್ತು ನಿರ್ಮಾಪಕರೆಲ್ಲರೂ ಬಿಜಾಪುರದವರಾಗಿದ್ದು, ಅದೇ ಜಿಲ್ಲೆಯ ಕನಮಡಿ ಎಂಬ ಗ್ರಾಮದಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆಸಲಾಗಿದೆ.

ಕನ್ನಡ ಚಿತ್ರರಂಗದಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳು, ಆ ಭಾಗದ ಕಥೆಗಳು ಮುನ್ನೆಲೆಗೆ ಬರಬೇಕು ಎಂಬ ಈಗಿನ ಕೂಗಿಗೆ ಈ ಚಿತ್ರ ಒಂದು ಸಣ್ಣ ಉತ್ತರವಾಗಬಹುದು. ಕರಾವಳಿಯ ನಿರ್ದೇಶಕರು ತಮ್ಮ ಕಥೆಯನ್ನು ಉತ್ತರ ಕರ್ನಾಟಕದ ಪರಿಸರದ ಹಿನ್ನೆಲೆಯ ಜೊತೆ ಹೇಳಲು ಹೊರಟಿರುವುದು ವಿಶೇಷವಾಗಿದೆ. ಇನ್ನು ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಮುಂದೆ ಚಿತ್ರದ ಒಂದೊಂದೇ ವಿವರಗಳನ್ನು ಬಿಡುಗಡೆ ಮಾಡಲಿದೆ.

ವಸಂತ ಕಾಲದ ಹೂಗಳು ಚಿತ್ರದಲ್ಲಿ ಗುರುರಾಜ್ ಶೆಟ್ಟಿ, ಪವನ್, ನಂದೀಶ್ ಇತರರು ನಟಿಸಲಿದ್ದಾರೆ. ಅಶೋಕ್ ರಾಠೋಡ್, ಸಿದ್ದು ರಾಸುರೆ ನಿರ್ಮಾಣವಿದೆ. ಶಿವಶಂಕರ ನೂರಂಬಡ ಕ್ಯಾಮೆರಾ ಹಿಡಿದರೆ, ಬಿ.ಎಸ್.ಕೆಂಪರಾಜ್ ಅಂಕಲನವಿದೆ. ಭರತ್ ಜನಾರ್ಧನ್ ಸಂಗೀತವಿದೆ.

Categories
ಸಿನಿ ಸುದ್ದಿ

ಚಿರಂಜೀವಿ ಹುಟ್ದಬ್ಬಕ್ಕೆ 157ನೇ ಚಿತ್ರ ಅನೌನ್ಸ್: ಯುವ ನಿರ್ದೇಶಕನ ಜೊತೆ ಮೆಗಾಸ್ಟಾರ್

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್‌ಗ್ರೀನ್ ಕ್ಲಾಸಿಕ್‌ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್‌ಟೈನರ್‌ನಲ್ಲಿ ಚಿರು ನಟಿಸುತ್ತಿದ್ದಾರೆ.

ಬಿಂಬಿಸಾರ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ವಸಿಷ್ಠ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಯುವಿ ಕ್ರಿಯೇಷನ್ಸ್‌ನ ಯಶಸ್ವಿ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಲಿರುವ #Mega157 ಚಿತ್ರ ಚಿರಂಜೀವಿ ಅವರ ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಚಿತ್ರ ಎನ್ನಲಾಗಿದೆ.

ನಿರ್ದೇಶಕ ವಸಿಷ್ಠ ಈ ಸಿನಿಮಾ ಮೂಲಕ ಮೆಗಾ ಮಾಸ್ ಯೂನಿವರ್ಸ್ ನ್ನು ಸಿನಿರಸಿಕರಿಗೆ ಪರಿಚಯಿಸಲಿದ್ದಾರೆ. ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶದಂತಹ ಪಂಚಭೂತಗಳು (ಪ್ರಕೃತಿಯ ಐದು ಅಂಶಗಳು) ತ್ರಿಶೂಲದೊಂದಿಗೆ ನಕ್ಷತ್ರಾಕಾರದ ಅಂಶವನ್ನು ಹೊಂದಿರುವ ಪೋಸ್ಟರ್ ಅನಾವರಣ ಮಾಡಲಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

ಚಿರು ಹುಟ್ಟುಹಬ್ಬದ ಅಂಗವಾಗಿ ಹೊಸ ಪೋಸ್ಟರ್ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗವನ್ನು ಪರಿಚಯಿಸಲಿದೆ.

Categories
ಸಿನಿ ಸುದ್ದಿ

ಚಿರಂಜೀವಿ ಹುಟ್ದಬ್ಬಕ್ಕೆ 157ನೇ ಸಿನಿಮಾ ಅನೌನ್ಸ್: ಯುವ ನಿರ್ದೇಶಕನ ಜೊತೆ ಮೆಗಾಸ್ಟಾರ್

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ. ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್‌ಗ್ರೀನ್ ಕ್ಲಾಸಿಕ್‌ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್‌ಟೈನರ್‌ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ವಸಿಷ್ಠ, ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಯುವಿ ಕ್ರಿಯೇಷನ್ಸ್‌ನ ಯಶಸ್ವಿ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಲಿರುವ #Mega157 ಚಿತ್ರ ಚಿರಂಜೀವಿ ಅವರ ವೃತ್ತಿ ಜೀವನದಲ್ಲಿ ಅತ್ಯಂತ ದುಬಾರಿ ಚಿತ್ರ ಎನ್ನಲಾಗಿದೆ. ನಿರ್ದೇಶಕ ವಸಿಷ್ಠ ಈ ಸಿನಿಮಾ ಮೂಲಕ ಮೆಗಾ ಮಾಸ್ ಯೂನಿವರ್ಸ್ ನ್ನು ಸಿನಿರಸಿಕರಿಗೆ ಪರಿಚಯಿಸಲಿದ್ದಾರೆ.

ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶದಂತಹ ಪಂಚಭೂತಗಳು (ಪ್ರಕೃತಿಯ ಐದು ಅಂಶಗಳು) ತ್ರಿಶೂಲದೊಂದಿಗೆ ನಕ್ಷತ್ರಾಕಾರದ ಅಂಶವನ್ನು ಹೊಂದಿರುವ ಪೋಸ್ಟರ್ ಅನಾವರಣ ಮಾಡಲಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ. ಚಿರು ಹುಟ್ಟುಹಬ್ಬದ ಅಂಗವಾಗಿ ಹೊಸ ಪೋಸ್ಟರ್ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗವನ್ನು ಪರಿಚಯಿಸಲಿದೆ.

Categories
ಸಿನಿ ಸುದ್ದಿ

ಸೃಜನ್ ಲೋಕೇಶ್ ಈಗ ನಿರ್ದೇಶಕ: ಜಿಎಸ್ ಟಿ ಕಟ್ಟೋಕೆ ರೆಡಿಯಾದ ನಿರ್ಮಾಪಕ‌ ಸಂದೇಶ್

ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು.
ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ಭಂಡಾರಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಚಿತ್ರದಲ್ಲಿ ಮೂರು ವಿಶೇಷಗಳಿವೆ ಎಂದು ಮಾತು ಆರಂಭಿಸಿದ ಸೃಜನ್ ಲೋಕೇಶ್, ನನ್ನ ಲಕ್ಕಿ ನಂಬರ್ 7. ಮೊದಲು‌ ಇದು 2023 ಇದನ್ನು ಕೂಡಿಸಿದಾಗ ಏಳು ಬರುತ್ತದೆ. ನನ್ನ ನಟನೆಯ 25 ನೇ ಚಿತ್ರ. 2+5 =7.
ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ 34ನೇ ಚಿತ್ರ. 3 + 4 ಕೂಡಿದಾಗ ಏಳಾಗುತ್ತದೆ. ಇನ್ನೊಂದು ವಿಶೇಷ, ನಮ್ಮ ತಾತನ ಚಿತ್ರದಲ್ಲಿ ನಮ್ಮ ಅಪ್ಪ ಬಾಲ ಕಲಾವಿದನಾಗಿ, ನಮ್ಮಪ್ಪನ ಚಿತ್ರದಲ್ಲಿ ನಾನು ಬಾಲ ಕಲಾವಿದನಾಗಿ ಅಭಿನಯಿಸಿದ್ದರು.‌ ಈಗ ನನ್ನ ಚಿತ್ರದಲ್ಲಿ ನನ್ನ ಮಗ ಮಾಸ್ಟರ್ ಸುಕೃತ್ ಬಾಲ ಕಲಾವಿದನಾಗಿ ನಟಿಸುತ್ತಿದ್ದಾನೆ. ನಾಲ್ಕನೇ ಜನರೇಶನ್ ಈ ರೀತಿ ನಟಿಸುತ್ತಿರುವುದು ಇದೇ ಮೊದಲು ಎನ್ನಬಹುದು. ಮತ್ತೊಂದು ವಿಶೇಷವೆಂದರೆ ನನ್ನ ಮೊದಲ ನಿರ್ದೇಶನದ ಚಿತ್ರದಲ್ಲೇ ನನ್ನ ತಾಯಿಗೆ ಆಕ್ಷನ್ ಕಟ್ ಹೇಳುತ್ತಿರುವುದು. ಈ ಎಲ್ಲಾ‌ ಕಾರಣಗಳಿಂದ ಈ ಚಿತ್ರ ನನಗೆ ವಿಶೇಷ.

ಇನ್ನು “G S T” ಬಗ್ಗೆ ಹೇಳಬೇಕೆಂದರೆ, ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ. ಈ ವಾಕ್ಯ ಹೇಳುವಂತೆ “ದೆವ್ವಗಳಿಗೂ‌ ಸಮಸ್ಯೆಯಿದೆ” ಎಂಬುದು. ಆ‌ ಸಮಸ್ಯೆ ಏನು ಎಂಬುದನ್ನು ಚಿತ್ರದಲ್ಲೇ ನೋಡಬೇಕು.‌ ಈ ಚಿತ್ರದಲ್ಲಿ ಮನರಂಜನೆಯ ಮಹಾಪೂರ ಹರಿಯುವುದು ಗ್ಯಾರಂಟಿ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.

ಸೃಜನ್ , ನನ್ನ ಆತ್ಮೀಯ ಗೆಳೆಯ. ಗೆಳೆಯನಿಗಾಗಿ ಮಾಡುತ್ತಿರುವ ಸಿನಿಮಾವಿದು ಎಂದು ನಿರ್ಮಾಪಕ ಸಂದೇಶ್ ಎನ್ ತಿಳಿಸಿದರು. ಸಂದೇಶ್ ಪ್ರೊಡಕ್ಷನ್ಸ್ ನ ಸಂದೇಶ್ ನಾಗರಾಜ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದಲ್ಲಿ ನಟಿಸುತ್ತಿರುವ ರಜನಿ ಭಾರದ್ವಾಜ್, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ನಿವೇದಿತಾ, ತಬಲ ನಾಣಿ, ಅರವಿಂದ್ ರಾವ್, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮುಂತಾದವರು, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಗೀತಸಾಹಿತಿ ಕವಿರಾಜ್, ಸಂಭಾಷಣೆಕಾರ ರಾಜಶೇಖರ್ ಮತ್ತು ತೇಜಸ್ವಿ ನಾಗ್ “G S T” ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ನಿಖಿಲ್ ಸಿನಿಮಾ ಮಾಡಲು ಲೈಕಾ ಪ್ರೊಡಕ್ಷನ್ಸ್ ನಾಲ್ಕು ವರ್ಷ ಕಾದಿದ್ದು ನಿಜಾನ?

ಒಂದಲ್ಲ ಎರಡಲ್ಲ ಮೂರಲ್ಲ ಬರೋಬ್ಬರಿ ನಾಲ್ಕು ವರ್ಷ ಕಾದು ಈಗ ಆ ಹೀರೋ ಸಿನಿಮಾ ಮಾಡುತ್ತಿದೆ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್. ಇಷ್ಟಕ್ಕೂ ಆ ಹೀರೋಗಾಗಿ ಲೈಕಾ ಸಂಸ್ಥೆ ಕಾದಿದ್ದು ಯಾಕೆ ಗೊತ್ತಾ? ಆ ಹೀರೋನ ಸಿನಿಮಾ ನೋಡಿದ ನಂತರವೇ ಅವರಿಗೊಂದು ಸಿನಿಮಾ‌ ಮಾಡಲು‌ಲೈಕಾ ನಿರ್ಧರಿಸಿತ್ತು. ಅದೀಗ ನೆರವೇರುತ್ತಿದೆ.

ಹೌದು, ನಿಖಿಲ್ ಕುಮಾರ ಸ್ವಾಮಿ ಅವರಿಗಾಗಿ ಲೈಕಾ ಸಂಸ್ಥೆ ನಾಲ್ಕು ವರ್ಷ ಕಾದಿದೆ ಎಂಬುದು ಸುದ್ದಿ. ಯುವರಾಜನ ಮಾಸ್ ಲುಕ್ ಹಾಗೂ ಸ್ಟಂಟ್ಸ್ ಗೆ ಮನಸೋತ ಬಿಗ್ ಪ್ರೊಡಕ್ಷನ್ ಹೌಸ್ ಅವರ ಡೇಟ್ ಗಾಗಿ ಕಾದು ಇದೀಗ ನಿರ್ಮಾಣ‌ ಮಾಡಲು ಮುಂದಾಗಿದೆ.

ಇನ್ನು, ಎರಡು ವರ್ಷದ ನಂತರ ನಿಖಿಲ್ ಕುಮಾರ ಸ್ವಾಮಿ ಅವರು ಸಿನಿಮಾ ಕಡೆ ಮುಖ‌ ಮಾಡಿದ್ದಾರೆ.
ರೈಡರ್ ಚಿತ್ರದ ನಂತರ ಅವರು ಚುನಾವಣೆಯತ್ತ ಗಮನ ಹರಿಸಿದ್ದರು. ಅವರು ಸಂಪೂರ್ಣ ರಾಜಕೀಯ ಕಡೆ ವಾಲುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರಡ, ಒಂದೊಳ್ಳೆಯ ಕಥೆಗಾಗಿ ಎದುರು ನೋಡುತ್ತಿದ್ದರು. ಈಗ ನಿಖಿಲ್ ಲೈಕಾ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿರುವ ನಿಖಿಲ್ ಗಾಗಿ ಕಾಲಿವುಡ್ ನ ಪ್ರಖ್ಯಾತ ನಿರ್ಮಾಣ ಸಂಸ್ಥೆ ಕನ್ನಡಕ್ಕೆ ಎಂಟ್ರಿ ನೀಡಿರುವುದು ವಿಶೇಷ.
ನಿಖಿಲ್ ಜೊತೆ ಸಿನಿಮಾ ಮಾಡಲು ನಾಲ್ಕು ವರ್ಷ ಕಾದ ಲೈಕಾ ಸಂಸ್ಥೆ , ನಿಖಿಲ್ ಅವರ ಸೀತಾ ರಾಮ ಕಲ್ಯಾಣ ಸಿನಿಮಾ ನೋಡಿ ಇಂಪ್ರೆಸ್ ಆಗಿದ್ದ ಲೈಕಾ ಸಂಸ್ಥೆ ಮಾಲೀಕ ಸುಭಾಷ್ ಕರಣ್ , ಇದೀಗ ಲೈಕಾ ಸಂಸ್ಥೆ ಮೂಲಕ ನಿಖಿಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಆಗಸ್ಟ್ 23 ರಂದು ಬೆಂಗಳೂರಿನಲ್ಲಿ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾಗೆ ಮಹೂರ್ತ ನಡೆಯಲಿದೆ.
ಇದೇ ಮೊದಲ ಬಾರಿಗೆ ಭಾರತದ ದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ಕನ್ನಡ ನಾಯಕ ನಟನ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹಾಕುತ್ತಿದೆ.
ಇದು ನಿಖಿಲ್ ಕೆರಿಯರ್ ನಲ್ಲೇ ಬಿಗ್ ಬಜೆಟ್ ಸಿನಿಮಾ ಎನ್ನಲಾಗಿದೆ.

Categories
ಸಿನಿ ಸುದ್ದಿ

ನಿಖಿಲ್ ಮತ್ತೆ ಬಂದ್ರು! ಕನ್ನಡಕ್ಕೆ ಬಂದ ಲೈಕಾ ಪ್ರೊಡಕ್ಷನ್ ಸಂಸ್ಥೆ ಜೊತೆ ಸಿನಿಮಾ ಮಾಡ್ತಾರೆ ಯುವರಾಜಕುಮಾರ

ನಿಖಿಲ್ ಕುಮಾರ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಪ್ರಶ್ನೆ ಇತ್ತು. ಈಗ ಸ್ಪಷ್ಟತೆ ಸಿಕ್ಕಿದೆ. ಅವರು ಸಿನಿಮಾ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಬಾರಿ ಅವರು ಲೈಕಾ ಸಂಸ್ಥೆ ಮೂಲಕ ಭರ್ಜರಿ ಎಂಟ್ರಿ ಕೊಡುತ್ತಿದ್ದಾರೆ.

ಕನ್ನಡ ಸಿನಿಮಾರಂಗಕ್ಕೆ ಈಗಾಗಲೇ ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪೆನಿಗಳು ಆಗಮಿಸುತ್ತಿವೆ. ಆ ಸಾಲಿಗೆ ಈಗ ಮತ್ತೊಂದು ದೊಡ್ಡ ಪ್ರೊಡಕ್ಷನ್ ಹೌಸ್ ಲಗ್ಗೆ ಇಡುತ್ತಿದೆ.

ಹೌದು, ನಿಖಿಲ್ ಕುಮಾರ್ ಸಿನಿಮಾವೊಂದು ಸೆಟ್ಟೇರುತ್ತಿದ್ದು, ಅದರ ಮಹೂರ್ತ ಕೂಡ ಫಿಕ್ಸ್ ಆಗಿದೆ. ಅದೊಂದು ಬಿಗ್ ಬಜೆಟ್ ಸಿನಿಮಾ ಆಗಲಿದೆ. ಅಂದಹಾಗೆ, ನಿಖಿಲ್ ಕುಮಾರ್ ಅವರ ಸಿನಿಮಾಗೆ ತಮಿಳಿನ ಪ್ರಖ್ಯಾತ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹಾಕಲಿದೆ.

ಕನ್ನಡಕ್ಕೆ ಆಗಮಿಸುತಗತಿರುವ ಲೈಕಾ ಪ್ರೊಡಕ್ಷನ್ಸ್ ತಮಿಳಿನಲ್ಲೂ ಈ ಚಿತ್ರವನ್ನು ನಿರ್ಮಾಣ ಮಾಡಲಿದೆ.
ಕಾಲಿವುಡ್ ನಲ್ಲಿ ಬಿಗ್ ಬಜೆಟ್ ಸಿನಿಮಾಗಳಿಗೆ ಖ್ಯಾತಿ ಪಡೆದಿರೋ ಲೈಕಾ ಸಿನಿಮಾ ಈಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಮಾಡಲು ನಿರ್ಧರಿಸಿದೆ.

ಈಗಾಗಲೇ ಲೈಕಾ ಪ್ರೊಡಕ್ಷನ್ಸ್, ಕತ್ತಿ, 2.0, ವಡಾ ಚೆನೈ , ದರ್ಬಾರ್ , PS1, PS2, ಡಾನ್ ನಂತಹ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ಮಾಣ ಮಾಡಿದೆ.
ಸದ್ಯ ಇಂಡಿಯನ್ 2, ಲಾಲ್ ಸಲಾಂ, ಚಂದ್ರಮುಖಿ2, ಚಿತ್ರಗಳನ್ನ ನಿರ್ಮಾಣ ಮಾಡಿರುವ ಲೈಕಾ ಸಂಸ್ಥೆ,
ಇದೀಗ ನಿಖಿಲ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದೆ ಎಂಬುದು ವಿಶೇಷ.

ಮೊದಲ ಬಾರಿಗೆ ಕನ್ನಡದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವ ಲೈಕಾ ಸಂಸ್ಥೆ, ಕಮಲ್ ಹಾಸನ್ , ವಿಕ್ರಂ, ಅಜಿತ್, ರಜನಿಕಾಂತ್ , ವಿಜಯ್ ರಂತಹ ಸೂಪರ್ ಸ್ಟಾರ್ ಚಿತ್ರಗಳಿಗೆ ಬಂಡವಾಳ ಹಾಕಿ ಗೆಲುವು ಕಂಡಿದೆ.

ಇನ್ನು, ನಿಖಿಲ್ ಕುಮಾರ್ ಅವರ ಸಿನಿಮಾಗೆ, ನಿರ್ದೇಶಕ ಯಾರು ಎಂಬುದು ಗೌಪ್ಯ. ಅಂದಹಾಗೆ,
ಆಗಸ್ಟ್ 23ರಂದು ಸೆಟ್ಟೇರಲಿದೆ ಎಂಬುದು ವಿಶೇಷ.

Categories
ಸಿನಿ ಸುದ್ದಿ

ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್ ಗೆ ಶ್ರೀಯಾ ಶರಣ್ ಸಾಕ್ಷಿ

ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‍ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೀಯಾ ಶರಣ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಉದ್ಯಮ ಜಗತ್ತೆಂಬುದು ಸಾಗರವಿದ್ದಂತೆ. ಅದರಲ್ಲಿನ ನಾನಾ ವಿಭಾಗಗಳಲ್ಲಿ ಗೇಮ್ ಚೇಂಜರ್ ಅನ್ನಿಸಿಕೊಂಡು, ಹೊಸತನಗಳ ಮೂಲಕ ಸಾಧನೆ ತೋರಿದ ತೊರೆಗಳೆಲ್ಲ ಯಶವಂತಪುರ ತಾಜ್ ಪ್ರಾಂಗಣದಲ್ಲಿ ಸಂಗಮಿಸಿದಂತಿತ್ತು. ಈ ಸ್ಫೂರ್ತಿದಾಯಕ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದ ಶ್ರೀಯಾ ಶರಣ್, ಇದೊಂದು ಅದ್ಭುತ ಕಾರ್ಯಕ್ರಮ ಎಂಬಂಥಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.


ಎಲ್ಲ ಸವಾಲುಗಳನ್ನು ಮೀರಿಕೊಂಡು ಉದ್ಯಮ ರಂಗದಲ್ಲಿ ಸಾಧನೆಗೈದವರನ್ನು ಸನ್ಮಾನಿಸುವ ಕಾರ್ಯಕ್ರಮವದು. ಇದರಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಕಬ್ಜಾ ಖ್ಯಾತಿಯ ಶ್ರೀಯಾ ಶರಣ್ ಪ್ರಶಸ್ತಿಗಳನ್ನು ಸಾಧಕರಿಗೆ ಕೊಟ್ಟು ಸಂತಸಪಟ್ಟಿದ್ದಾರೆ. ಇಂಡಿಯಾ ಪ್ರೈಡ್ ಅವಾರ್ಡ್ ಇವೆಂಟ್ ಬೆಂಗಳೂರಿನಲ್ಲಿ ನಡೆಯುತ್ತಿರೋದೇ ಖುಷಿ ಎಂಬುದಾಗಿ ಮಾತು ಶುರು ಮಾಡಿದ ಶ್ರೀಯಾ, ಈ ಪ್ರಶಸ್ತಿಗಳನ್ನು ತಾನೇ ಕೊಟ್ಟಿದ್ದನ್ನು ಕಂಡು ತಮ್ಮ ಪೋಶಕರೂ ಹೆಮ್ಮೆ ಪಡುತ್ತಾರೆಂದಿದ್ದಾರೆ. ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಈ ಕಾರ್ಯಕ್ರಮ ಅರ್ಥವತ್ತಾಗಿದೆ. ಸಣ್ಣದು ದೊಡ್ಡದೆಂಬುದರಾಚೆಗೆ ಇಂಥಾ ಪ್ರಶಸ್ತಿಗಳು ಘನತೆಯ ಕಾರಣದಿಂದ ಮುಖ್ಯವಾಗುತ್ತವೆ. ಮುಂದೊಂದು ದಿನ ಪ್ರೈಡ್ ಇಂಡಿಯಾ ಅವಾರ್ಡ್ ಕಾರ್ಯಕ್ರಮ ಗ್ರೇಟ್ ಶೋ ಅನ್ನಿಸಿಕೊಳ್ಳಲಿದೆ ಅಂತ ಭವಿಷ್ಯ ನುಡಿದಿದ್ದಾರೆ.

ಪ್ರೈಡ್ ಇಂಡಿಯಾ ಅವಾರ್ಡ್ ಎಂಬ ಪರಿಕಲ್ಪನೆ ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಕನಸಿನ ಕೂಸು. ಉದ್ಯಮ ವಲಯದಲ್ಲಿ ಹೊಸಾ ಸಾಹಸಗಳನ್ನು ಮಾಡಿ ಗೆದ್ದವರು, ನಾನಾ ವಿಭಾಗದಲ್ಲಿದ್ದಾರೆ. ಅಂಥವರನ್ನೆಲ್ಲ ಗುರುತಿಸಿ, ಪ್ರೋತ್ಸಾಹಿಸುತ್ತಾ, ಭಾರತೀಯ ಉದ್ಯಮ ರಂಗ ಹೊಸಾ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಇವೆಂಟಿನ ಅಸಲಿ ಆಶಯ. ಇದೀಗ ಬೆಂಗಳೂರಿನಲ್ಲಿ ಜರುಗಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಭಾರತದ ಆರ್ಥಿಕ ಪಥವನ್ನು ಪ್ರಜ್ವಲಿಸುವಂತೆ ಮಾಡುವಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿರುವ ಅನೇಕರನ್ನು ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ. ಆ ಆಯ್ಕೆ ಪ್ರಕ್ರಿಯೆ ಕೂಡಾ ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತದೆ.

ಯಶವಂತಪುರ ತಾಜ್ ನಲ್ಲಿ ನಡೆದಿರುವ ಪ್ರೈಡ್ ಇಂಡಿಯಾ ಅವಾರ್ಡ್ ವಿಶೇಷ ಆವೃತ್ತಿಯಲ್ಲಿ ಡಾ. ಸಿದ್ದೇಶ್ವರ್ ಮನೋಜ್, ಡಾ. ಮೀರ್ ಅನ್ವರ್, ಮೊಹಿಯುದ್ದೀನ್, ಸುಧಾಂಶು ಶ್ರೀವಾತ್ಸವ್, ಡಾ. ಭಾಸ್ಕರನ್ ರಾಜು ಅವರಂಥಾ ತೀರ್ಪುಗಾರರ ವಿಶೇಷ ಸಮಿತಿಯನ್ನು ಒಳಗೊಂಡಿತ್ತು. ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ, ಗಹನವಾದ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿ ಪ್ರೈಡ್ ಇಂಡಿಯಾ ಅವಾರ್ಡ್ ಗೆ ಅರ್ಹರನ್ನು ಆಯ್ಕೆ ಮಾಡಿದೆ.
ಇದೇ ಸಂದರ್ಭದಲ್ಲಿ ಈ ಅವಾರ್ಡ್ ಈವೆಂಟಿನ ಸ್ಥಾಪಕರಾದ ವಿನಯ್ ಕುಮಾರ್ ನಾರಾಯಣಸ್ವಾಮಿ ಮನದುಂಬಿ ಮಾತಾಡಿದ್ದಾರೆ.

ಭಾರತೀಯ ಉದ್ಯಮ ರಂಗದಲ್ಲಿ ನಡೆಯುತ್ತಿರುವ ನಾವೀನ್ಯತೆ ಬೆರೆತ ಪ್ರಯತ್ನಗಳಾಗುತ್ತಿರುವುದು ಖುಷಿ ಕೊಡುತ್ತಿದೆ. ಪ್ರೈಡ್ ಇಂಡಿಯಾ ಅವಾರ್ಡ್ ಸಂಸ್ಥೆ ಸದಾ ಕಾಲವೂ ಉದ್ಯಮ ರಂಗದಲ್ಲಿನ ವೈಶಿಷ್ಟ್ಯ ಮತ್ತು ಅಮೋಘ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಈ ಕಾರ್ಯಕ್ರಮದಿಂದ ಅದಕ್ಕೆ ಮತ್ತಷ್ಟು ಅರ್ಥ ಸಿಕ್ಕಂತಾಗಿದೆ ಎಂದಿದ್ದಾರೆ. ಈ ಇವೆಂಟ್ ಉದ್ಯಮ ರಂಗದ ಎಲ್ಲ ಸಾಧಕರಿಗೂ ಸ್ಫೂರ್ತಿಯಾಗಿ, ಅದಾಗಲೇ ಮಹತ್ವದ್ದನ್ನು ಸಾಧಿಸಿದವರ ಸಮಾಗಮವಾಗಿ ಮುಖ್ಯವೆನಿಸುತ್ತದೆ. ಈ ಬಾರಿಯ ಸದರಿ ಅವಾರ್ಡ್ ಇವೆಂಟಿನಲ್ಲಿ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ತಾರೆ ಶ್ರೀಯಾ ಶರಣ್ ಪ್ರಧಾನ ಆಕರ್ಷಣೆಯಾಗಿದ್ದರು. ಅವರ ಇರುವಿಕೆಯಿಂದ ಈ ಈವೆಂಟ್ ಕಳೆಗಟ್ಟಿಕೊಂಡು ನೆರವೇರಿದೆ.

Categories
ಸಿನಿ ಸುದ್ದಿ

ವರಮಹಾಲಕ್ಷ್ಮೀ ಹಬ್ಬಕ್ಕೆ ಯಥಾಭವ ಟೀಸರ್ ರಿಲೀಸ್

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ

ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನವಿದೆ.

ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

error: Content is protected !!